ಕಾರು ಮಾರಾಟ ಮಾಡಿ ಕೇವಲ 24 ಗಂಟೆಯೊಳಗೆ ಅದೇ ಕಾರು ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ – Kannada News | Facebook Marketplace Car Theft: Kansas Man Caught Reselling Stolen Vehicles

ಕಾನ್ಸಾಸ್, ಜನವರಿ 23: ವ್ಯಕ್ತಿಯೊಬ್ಬ ಫೇಸ್​ಬುಕ್​ನಲ್ಲಿ ಕಾರು(Car) ಮಾರಾಟ ಮಾಡಿ ಅದೇ ದಿನ ಆ ಕಾರನ್ನು ಕದಿಯುತ್ತಿದ್ದ ಕಳ್ಳನನ್ನು ಕಾನ್ಸಾಸ್ ನಗರದ ಸೆರೆಹಿಡಿಯಲಾಗಿದೆ. ಆ ವ್ಯಕ್ತಿ ಇಲ್ಲಿಯವರೆಗೆ ಒಂದೇ ಕಾರನ್ನು 8 ಬಾರಿ ಮಾರಾಟ ಮಾಡಿದ್ದಾನೆ. ಈ ಹಗರಣದಲ್ಲಿ ವಾಹನಗಳನ್ನು ಬಹು ಖರೀದಿದಾರರಿಗೆ ಮಾರಾಟ ಮಾಡಿ ಒಂದು ದಿನದೊಳಗೆ ಕದಿಯಲಾಗುತ್ತಿತ್ತು. ಒಪ್ಪಂದಗಳನ್ನು ಕಾನೂನುಬದ್ಧವಾಗಿ ಕಾಣುವಂತೆ ಮಾಡಲು ನಕಲಿ ದಾಖಲೆಗಳನ್ನು ಬಳಸಿದ್ದ. ಮಮಡೌ ಡಿಯಲ್ಲೋ ಎಂಬಾತನೇ ಹೀಗೆ ಕಾರುಗಳನ್ನು ಮಾರಾಟ ಮಾಡಿ ಕದಿಯುತ್ತಿದ್ದ ವ್ಯಕ್ತಿ.

ಕಾರನ್ನು ಕೊಡುವ ಮೊದಲು ಸಾವಿರಾರು ಡಾಲರ್​ಗಳನ್ನು ತನ್ನ ಅಕೌಂಟ್​ಗೆ ಹಾಕಿಸಿಕೊಳ್ಳುತ್ತಿದ್ದ, ಬಳಿಕ ಮಾರಾಟ ಮಾಡಿ, 24 ಗಂಟೆಯೊಳಗೆ ಅದನ್ನು ಕದಿಯುತ್ತಿದ್ದ. ಕೆಲವಂತೂ 24 ಗಂಟೆಯಲ್ಲಿ 7-8 ಗಂಟೆಗಳಲ್ಲಿ ಕದಿಯುತ್ತಿದ್ದ. ಆರೋಪಿ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಮತ್ತು ವಹಿವಾಟುಗಳನ್ನು ಪೂರ್ಣಗೊಳಿಸಲು ಖರೀದಿದಾರರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದ.

ಮಾರಾಟದ ಬಿಲ್‌ಗಳನ್ನು ಒಳಗೊಂಡಿರುವ ದಾಖಲೆಗಳನ್ನು ನೀಡಿದ ನಂತರ ಖರೀದಿದಾರರು ಕಾನೂನುಬದ್ಧವಾಗಿ ಒಡೆತನದ ವಾಹನಗಳನ್ನು ಖರೀದಿಸುತ್ತಿದ್ದೇವೆ ಎಂದು ನಂಬಿಕೊಂಡಿದ್ದರು. ಖರೀದಿಸಿ ಒಂದು ದಿನದೊಳಗೆ ಮಾರಾಟ ಮಾಡುವುದರಿಂದ ಹೊಸ ಮಾಲೀಕರಿಗೆ ಇತ್ತ ಹಣವೂ ಇಲ್ಲ ಅತ್ತ ಕಾರೂ ಇಲ್ಲದಂತಾಗಿತ್ತು. ಎಲ್ಲಾ ಆರೋಪಗಳಲ್ಲೂ ಶಿಕ್ಷೆ ವಿಧಿಸಿದರೆ, ಅವನಿಗೆ 98 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು.

ಮತ್ತಷ್ಟು ಓದಿ: ವೇಗವಾಗಿ ಬಂದು ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ

ಒಂದೇ ರೀತಿ ಒಂದೇ ಕಾರನ್ನು 8 ಬಾರಿ ಮಾರಾಟ ಮಾಡಿದ ಈತನ ಬುದ್ಧಿವಂತಿಕೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಅನೇಕರು ಆತ ಒಂದೇ ಕಾರನ್ನು ಇಷ್ಟು ಸುಲಭವಾಗಿ ಮಾರಾಟ ಮಾಡಲು ಹೇಗೆ ಸಾಧ್ಯವಾಗಿದೆ ಎನ್ನುವ ಪ್ರಶ್ನೆ ಕೇಳುತ್ತಿದ್ದಾರೆ.

ಖರೀದಿದಾರರಿಗೆ 2013 ರ ಬೂದು ಬಣ್ಣದ ಹೋಂಡಾ ಸಿವಿಕ್ ಅಥವಾ 2013 ರ ಕಂದು ಬಣ್ಣದ ಬ್ಯೂಕ್ ವೆರಾನೊವನ್ನು ಖರೀದಿಸುತ್ತಿದ್ದರು. ಆದರೆ ಅದೇ ವಾಹನವು ಶೀಘ್ರದಲ್ಲೇ ಮತ್ತೊಂದು ಮಾರಾಟ ಸೈಟ್‌ನಲ್ಲಿ ಕಾಣಿಸಿಕೊಳ್ಳುತ್ತಿತ್ತು. ವರದಿಯಾದ ಒಂದು ಪ್ರಕರಣದಲ್ಲಿ ಈ ವಂಚಕ ಕೇವಲ ಮಾರಾಟ ಮಾಡಿದ 7 ಗಂಟೆಯ ಒಳಗೆ ಕಾರನ್ನು ವಾಪಸ್ ಕದಿದ್ದ. ಮನೆಯ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆ ಆಗಿತ್ತು. ಹೀಗಾಗಿ ಡಿಯಲ್ಲೋ ವಿರುದ್ಧ ಈಗ 14 ಪ್ರಕರಣಗಳು ದಾಖಲಾಗಿವೆ. ಮೋಟಾರು ವಾಹನ ಕಾಯ್ದೆಯ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.

ಈ ಎಲ್ಲಾ ಪ್ರಕರಣಗಳು 2025ರ ಮೇ ಹಾಗೂ ಜೂನ್ ತಿಂಗಳ ಸಮಯದಲ್ಲಿ ನಡೆದಿದೆ. ಕಾನ್ಸಾಸ್ ಸಿಟಿ ಪೊಲೀಸರು ಫೇಸ್‌ಬುಕ್ ಮಾರುಕಟ್ಟೆ ಖರೀದಿಗಳಿಗೆ ಸಂಬಂಧಿಸಿದಂತೆ ಹಲವಾರು ಕದ್ದ ವಾಹನ ವರದಿಗಳನ್ನು ಸ್ವೀಕರಿಸಿದ ನಂತರ ಈ ವಿಚಾರ ಬೆಳಕಿಗೆ ಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ! – Kannada News | Mangaluru Kasaragod Bus Travel Costlier: KSRTC Increases Fares Due to Kumbla Toll

ಮಂಗಳೂರು, ಜ.23: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಎಸ್​​ಆರ್​ಟಿಸಿ ಬಿಗ್ ಶಾಕ್​ ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈ ಮಾರ್ಗದಲ್ಲಿ ಸಂಚಾರಿಸುವ ಬಸ್​​​ಗಳ ಟಿಕೆಟ್​​​​​ ದರವನ್ನು ಹೆಚ್ಚು ಮಾಡಿದ್ದಾರೆ. ಇದೀಗ ಮಂಗಳೂರು ಹಾಗೂ ಕಾಸರಗೋಡು ಜನರಿಗೆ ಇದು ಹೊರೆಯಾಗಲಿದೆ. ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳದಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಪ್ರಾರಂಭವಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜ. 20ರಿಂದ ಅಂದರೆ ಮಂಗಳವಾರದಿಂದ ಈ ಟೋಲ್ ಮೊತ್ತವನ್ನು ಸೇರಿಸುವ ಮೂಲಕ ಪರಿಷ್ಕೃತ ದರವನ್ನು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಗ್ರಹ ಮಾಡಲು ಶುರು ಮಾಡಿದೆ. ಇದರ ಜತೆಗೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೂಡ ಟಿಕೆಟ್​​ ದರದಲ್ಲಿ ಬದಲಾವಣೆಗಳನ್ನು ತಂದಿದೆ. ಕುಂಬಳದಿಂದ ಮಂಗಳೂರಿಗೆ ಈ ಹಿಂದೆ 67 ರೂ. ಇದ್ದ ಪ್ರಯಾಣ ದರವನ್ನು ಈಗ 75 ರೂ.ಗೆ ಹೆಚ್ಚಿಸಿದೆ.

ರಾಜಹಂಸ ಬಸ್​​ಗಳ ದರವನ್ನು ಕೂಡ 10 ರೂ. ವರೆಗೆ ಹೆಚ್ಚಿಸಿದೆ. 80 ರೂ.ನಿಂದ 90 ರೂ.ಗೆ ಏರಿಕೆಯಾಗಿದೆ. ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳು ಟಿಕೆಟ್ ದರವನ್ನು 7 ರೂ. ಹೆಚ್ಚಿಸಿದ್ದು ಈಗಾಗಲೇ ಈ ದರ ಜಾರಿಯಲ್ಲಿದೆ. ಇನ್ನು ಟೋಲ್ ಪಾವತಿಯಿಂದ ವಿನಾಯಿತಿ ನೀಡುವಂತೆ ಕೋರಿ ಕರ್ನಾಟಕ ಸಾರಿಗೆ ಇಲಾಖೆಯ ಮಂಗಳೂರು ವಿಭಾಗದ ಅಧಿಕಾರಿಗಳು ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಕಾಸರಗೋಡು-ಮಂಗಳೂರು ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಸಾರಿಗೆ ಬಸ್‌ಗಳು ಸಂಪೂರ್ಣವಾಗಿ ಸರ್ವಿಸ್ ರಸ್ತೆಗಳಲ್ಲಿ ಸಂಚರಿಸುತ್ತವೆ. ಕುಂಬಳ ಟೋಲ್ ಗೇಟ್ ಬಿಟ್ಟು ಬೇರೆ ಯಾವುದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಬಸ್ಸುಗಳು ಹೋಗುವುದಿಲ್ಲ. ಹಾಗಾಗಿ ಟೋಲ್ ವಿನಾಯಿತಿ ನೀಡಬೇಕು ಎಂದು ಹೇಳಿದ್ದಾರೆ. ಒಂದು ವೇಳೆ ಈ ಬದಲಾವಣೆಯನ್ನು ಮಾಡದಿದ್ದರೆ, ಹೆಚ್ಚಿನ ಟಿಕೆಟ್ ದರಗಳ ಮೂಲಕ ಪ್ರಯಾಣಿಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆಯನ್ನು ಹಾಕಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

ಕಾಸರಗೋಡು ಮಾರ್ಗದಲ್ಲಿ ಪ್ರತಿದಿನ ಸುಮಾರು 35 ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚಾರಿಸುತ್ತದೆ. ಟೋಲ್ ಪಾವತಿಗಾಗಿ ದಿನಕ್ಕೆ ಸುಮಾರು 48,000 ರೂ. ವ್ಯಯ ಮಾಡುತ್ತಿದೆ. ಹೆದ್ದಾರಿಯನ್ನು ಬಳಸದಿದ್ದರೂ ಟೋಲ್ ಶುಲ್ಕವನ್ನು ಪಾವತಿಸಬೇಕಾಗಿರುವುದರಿಂದ ದರ ಏರಿಕೆ ಮಾಡುವ ಅನಿರ್ವಾಯವಾಗಿದೆ. ಕೇರಳದ ಕೆಎಸ್‌ಆರ್‌ಟಿಸಿ ಬಸ್‌ಗಳು ಸಹ ಇದೇ ಮಾರ್ಗದಲ್ಲಿ ಸಂಚಾರ ಮಾಡುತ್ತದೆ. ಅದಕ್ಕೂ ಕೂಡ ಟೋಲ್​ ದರ ಇದೆ. ಅವರು ಯಾವುದೇ ಟಿಕೆಟ್​​​ ದರ ಹೆಚ್ಚು ಮಾಡಿಲ್ಲ. ಟಿಕೆಟ್ ದರಗಳನ್ನು ಪರಿಷ್ಕರಿಸಬೇಕಾದರೆ, ಸಾರಿಗೆ ಸಚಿವರು ಇಲಾಖಾ ಸಭೆ ನಡೆಸಿ, ನಿರ್ಧಾರ ತೆಗೆದುಕೊಂಡು ಅದಕ್ಕೆ ಅನುಗುಣವಾಗಿ ಅಧಿಕೃತ ಆದೇಶಗಳನ್ನು ಹೊರಡಿಸಬೇಕು ಎಂದು ಕಾಸರಗೋಡು ವಿಭಾಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಈ ಕಾರಣ – Kannada News | Netaji Subhash Chandra Bose Jayanti 2026: Know the history and significance and how it is celebrated

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನImage Credit source: Pinterest

ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತರಾಗುವಲ್ಲಿ ಬಂಗಾಳದ ಶೌರ್ಯದ ಮಗ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೊಡುಗೆ ಅಪಾರವಾಗಿದೆ. ಜನವರಿ 23 ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನ (Netaji Subhash Chandra Bose Jayanti). ಅವರ ಹೋರಾಟದ ಹಾದಿಯನ್ನು ನೆನಪಿಸಿಕೊಳ್ಳುತ್ತಾ ಈ ಬಾರಿ ಅವರ 129 ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಅದಲ್ಲದೇ ಈ ದಿನದಂದೇ ಪರಾಕ್ರಮ ದಿನವನ್ನು(Parakram Diwas) ಆಚರಿಸಲಾಗುತ್ತದೆ. ಈ ದಿನವನ್ನು ಯಾಕಾಗಿ ಆಚರಿಸಲಾಗುತ್ತದೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಯುವಕರಲ್ಲಿ ಕಿಚ್ಚು ಹಚ್ಚಿಸಿದ್ದ ಸುಭಾಷ್ ಚಂದ್ರ ಬೋಸ್

‘ನನಗೆ ನಿಮ್ಮ ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ’ ಎನ್ನುವ ಘೋಷವಾಕ್ಯದಿಂದಲೇ ಯುವಕರಲ್ಲಿ ಹೋರಾಟದ ಕಿಚ್ಚನ್ನು ಹಚ್ಚಿದವರು ನೇತಾಜಿ ಸುಭಾಷ್ ಚಂದ್ರ ಬೋಸ್. ಭಾರತೀಯರ ಮೇಲೆ ದಬ್ಬಾಳಿಕೆ ಮಾಡುವ ಬ್ರಿಟಿಷರನ್ನು ಓಡಿಸಲು ಮಿಲಿಟರಿ ಕಾರ್ಯಾಚರಣೆಯೇ ಪರಿಣಾಮಕಾರಿ ಅಸ್ತ್ರ ಎಂದು ನಂಬಿದ್ದರು. ಹೀಗಾಗಿ ಈ ಅಸ್ತ್ರದಿಂದ ಮಾತ್ರ ಎಲ್ಲವೂ ಸಾಧ್ಯ ಎಂದುಕೊಂಡಿದ್ದರು. ಈ ಕಾರಣಕ್ಕಾಗಿ ತಮ್ಮ ಹೋರಾಟದ ಹಾದಿಯಲ್ಲಿ ಬದಲಾವಣೆ ತಂದುಕೊಂಡು ಬ್ರಿಟಿಷರ ವಿರುದ್ಧ ಹೋರಾಡಿದರು. ಸುಭಾಸ್ ಚಂದ್ರ ಬೋಸ್ ಹೋರಾಟ ಹಾದಿಯ ಕಡೆಗೆ ಕಣ್ಣಾಯಿಸಿದಾಗೆಲೆಲ್ಲಾ ಮೈಯೆಲ್ಲಾ ರೋಮಾಂಚನವಾಗುತ್ತದೆ.

ಇದನ್ನೂ ಓದಿ:Penguin Awareness Day 2026: ಬದಲಾಗುತ್ತಿರುವ ಹವಾಮಾನದಿಂದಾಗಿ ಪೆಂಗ್ವಿನ್‌ಗಳ ಅಸ್ತಿತ್ವಕ್ಕೆ ಎದುರಾಗಿದೆ ಅಪಾಯ

ಪರಾಕ್ರಮ ದಿನವನ್ನು ಆಚರಿಸುವುದು ಏಕೆ?

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಬೋಸ್ ನೀಡಿದ ಕೊಡುಗೆಗಳನ್ನು ಗೌರವಿಸಲು 2021 ರಲ್ಲಿ ಅವರ ಹುಟ್ಟುಹಬ್ಬದ ದಿನವೇ ಪರಾಕ್ರಮ ದಿನ ಆಚರಿಸಲು ನಿರ್ಧರಿಸಲಾಯಿತು. ಈ ದಿನದ ಆಚರಣೆಯ ಮೂಲ ಉದ್ದೇಶವು ಸ್ವಾತಂತ್ರ ಹೋರಾಟಕ್ಕಾಗಿ ಮಾಡಿದ ತ್ಯಾಗವನ್ನು ಮುಂದಿನ ಪೀಳಿಗೆಯವರಿಗೆ ರವಾನಿಸುವುದಾಗಿದೆ. ಹೀಗಾಗಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮ ದಿನದಂದೇ ಪರಾಕ್ರಮ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇನ್ನಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:48 am, Fri, 23 January 26

Source link

ಬೆಂಗಳೂರಿನ ಅನೇಕ ಪೊಲೀಸ್ ಠಾಣೆಗಳಲ್ಲಿ ಇನ್ಸ್​ಪೆಕ್ಟರ್​ಗಳೇ ಇಲ್ಲ! ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲು – Kannada News | No Inspectors in Several Bengaluru Police Stations: Law and Order Under Severe Strain

ಬೆಂಗಳೂರು, ಜನವರಿ 22: ರಾಜಧಾನಿ ಬೆಂಗಳೂರಿನ (Bangalore) ಹಲವಾರು ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳ ಕೊರತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಗರದಲ್ಲೇ 15ಕ್ಕೂ ಹೆಚ್ಚು ಠಾಣೆಗಳಲ್ಲಿ ಇನ್ಸ್‌ಪೆಕ್ಟರ್ ಹುದ್ದೆಗಳು ಹಲವು ದಿನಗಳು ಹಾಗೂ ತಿಂಗಳಿನಿಂದ ಖಾಲಿಯಾಗಿವೆ. ಅಮಾನತು, ಕಡ್ಡಾಯ ರಜೆ, ನಿವೃತ್ತಿ ಹಾಗೂ ಭಡ್ತಿ ಪ್ರಕ್ರಿಯೆಗಳ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಯಾವೆಲ್ಲ ಠಾಣೆಗಳಲ್ಲಿ ಇನ್ಸ್​ಪೆಕ್ಟರ್ ಹುದ್ದೆ ಖಾಲಿ?

ಶಿವಾಜಿನಗರ, ಸಂಪಿಗೇಹಳ್ಳಿ, ಯಶವಂತಪುರ, ಮಲ್ಲೇಶ್ವರ, ಜ್ಞಾನಭಾರತಿ, ಬಾಗಲೂರು, ವಿವೇಕನಗರ, ಬಂಡೆಪಾಳ್ಯ, ಸದಾಶಿವನಗರ (OOD), ಡಿಜೆ ಹಳ್ಳಿ (OOD), ಕೊತ್ತನೂರು (OOD), ಜಾಲಹಳ್ಳಿ (OOD) ಸೇರಿದಂತೆ ಹಲವು ಠಾಣೆಗಳಲ್ಲಿ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯೇ ಉಳಿದಿವೆ.

ಇದಷ್ಟೇ ಅಲ್ಲದೆ, ಮಾಗಡಿ ರೋಡ್ ಟ್ರಾಫಿಕ್, ಮಡಿವಾಳ ಟ್ರಾಫಿಕ್ ಠಾಣೆಗಳು ಹಾಗೂ ಶೇಷಾದ್ರಿಪುರಂ ಎಸಿಪಿ, ಮಲ್ಲೇಶ್ವರ ಎಸಿಪಿ, ಕೆಜಿ ಹಳ್ಳಿ ಎಸಿಪಿ ವ್ಯಾಪ್ತಿಗಳಲ್ಲೂ ಇನ್ಸ್‌ಪೆಕ್ಟರ್ ಮತ್ತು ಎಸಿಪಿ ಹುದ್ದೆಗಳು ಖಾಲಿಯಾಗಿವೆ. ಸರ್ಕಾರವು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬದಲು, ಬೇರೆ ಠಾಣೆಗಳ ಇನ್ಸ್‌ಪೆಕ್ಟರ್‌ಗಳಿಗೆ ಹೆಚ್ಚುವರಿ ಹೊಣೆ ನೀಡುವುದು ಅಥವಾ OOD ಮೂಲಕ ವ್ಯವಸ್ಥೆ ಮಾಡುತ್ತಿರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವುದೇ ಕಷ್ಟ

ಒಬ್ಬೊಬ್ಬ ಇನ್ಸ್‌ಪೆಕ್ಟರ್‌ಗಳು ಎರಡು ಠಾಣೆಗಳ ಉಸ್ತುವಾರಿ ವಹಿಸಿಕೊಂಡು ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ಕಷ್ಟಕರವಾಗಿದೆ. ಹೆಚ್ಚುವರಿ ಹೊಣೆಗಾರಿಕೆಯ ಒತ್ತಡದಿಂದ ಅನೇಕ ಇನ್ಸ್‌ಪೆಕ್ಟರ್‌ಗಳು ಹೈರಾಣಾಗಿದ್ದಾರೆ ಎನ್ನಲಾಗಿದೆ.

ಸಾಮಾನ್ಯ ವರ್ಗಾವಣೆಯ ಪ್ರಕ್ರಿಯೆಯೂ ಸ್ಥಗಿತ

ಇನ್ಸ್‌ಪೆಕ್ಟರ್ ಮತ್ತು ಎಸಿಪಿಗಳ ಸಾಮಾನ್ಯ ವರ್ಗಾವಣೆಯ ಪ್ರಕ್ರಿಯೆಯೂ ಸ್ಥಗಿತಗೊಂಡಿರುವುದು ಇಲಾಖೆಯೊಳಗಿನ ಅಸಮಾಧಾನಕ್ಕೆ ಕಾರಣವಾಗಿದೆ. ಮೊದಲಿಗೆ ಒಂದು ವರ್ಷಕ್ಕೊಮ್ಮೆ ನಡೆಯುತ್ತಿದ್ದ ವರ್ಗಾವಣೆ ನಿಯಮವನ್ನು ಎರಡು ವರ್ಷಗಳಿಗೆ ಬದಲಾಯಿಸಲಾಗಿತ್ತು. ಆದರೆ ಇದೀಗ 2.4 ವರ್ಷ ಕಳೆದರೂ ಬೆಂಗಳೂರನ್ನು ಸೇರಿಸಿ ಹಲವು ಜಿಲ್ಲೆಗಳ ಇನ್ಸ್‌ಪೆಕ್ಟರ್ ಹಾಗೂ ಎಸಿಪಿಗಳ ಸಾಮಾನ್ಯ ವರ್ಗಾವಣೆ ಇನ್ನೂ ಜಾರಿಯಾಗಿಲ್ಲ.

ಇದನ್ನೂ ಓದಿ: 1997ರ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್: 29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ

ಪೊಲೀಸರ ಸಾಮಾನ್ಯ ವರ್ಗಾವಣೆ ಪಟ್ಟಿ ರಿಲೀಸ್‌ಗೆ ಪದೇಪದೇ ಅಡೆತಡೆ ಉಂಟಾಗುತ್ತಿದ್ದು, ಕೆಲ ರಾಜಕೀಯ ನಾಯಕರ ಮುಸುಕಿನ ಗುದ್ದಾಟ ಹಾಗೂ ತಮ್ಮ ತಮ್ಮ ‘ನೆಚ್ಚಿನ’ ಅಧಿಕಾರಿಗಳ ವರ್ಗಾವಣೆಯನ್ನು ತಡೆಯುವ ಪ್ರಯತ್ನಗಳಿಂದಾಗಿ ಪ್ರಕ್ರಿಯೆ ಮುಂದೂಡಲ್ಪಡುತ್ತಿದೆ ಎನ್ನಲಾಗಿದೆ. ಇದರಿಂದಾಗಿ ನಿಗದಿತ ಅವಧಿ ಕಳೆದರೂ ವರ್ಗಾವಣೆ ಆಗದೆ, ಪೊಲೀಸ್ ಇಲಾಖೆಯೊಳಗೆ ಅಸಮಾಧಾನದ ಹೊಗೆ ಕಾಡುತ್ತಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ! – Kannada News | Bengaluru Ranks 2nd Among World’s Most Traffic Congested Cities: TomTom Traffic Index 2025

ಬೆಂಗಳೂರು, ಜನವರಿ 23: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bangalore Traffic) ಎರಡನೇ ಸ್ಥಾನ ಪಡೆದಿದೆ. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಚಾರ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ.

ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ 72.7 ಆಗಿದ್ದು, ಒಂದೇ ವರ್ಷದಲ್ಲಿ ಶೇ 1.7ರಷ್ಟು ದಟ್ಟಣೆ ಹೆಚ್ಚಾಗಿದೆ.

ಬೆಂಗಳೂರು ಟ್ರಾಫಿಕ್ ಸಮಸ್ಯೆ ಹೆಚ್ಚಳಕ್ಕೆ ಕಾರಣವೇನು?

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ, ರಸ್ತೆ ಮೂಲಸೌಕರ್ಯದ ಒತ್ತಡ ಹಾಗೂ ನಿರಂತರ ಕಾಮಗಾರಿಗಳು ಸಂಚಾರ ಸಮಸ್ಯೆ ಮತ್ತಷ್ಟು ತೀವ್ರಗೊಳಿಸುತ್ತಿವೆ ಎನ್ನಲಾಗಿದೆ.

ವಾಹನ ಸಂಚಾರದ ಸರಾಸರಿ ವೇಗದಲ್ಲೂ ಸ್ವಲ್ಪ ಬದಲಾವಣೆ ಕಂಡುಬಂದಿದೆ. 2024ರಲ್ಲಿ ಗಂಟೆಗೆ 16.6 ಕಿಲೋಮೀಟರ್ ಇದ್ದ ಸರಾಸರಿ ವೇಗ, 2025ರಲ್ಲಿ 17.6 ಕಿಲೋಮೀಟರ್‌ಗೆ ಏರಿಕೆಯಾಗಿದೆ. ಆದರೂ ಸಂಚಾರದ ಒತ್ತಡ ಕಡಿಮೆಯಾಗಿಲ್ಲ. 2025ರಲ್ಲಿ 15 ನಿಮಿಷಗಳಲ್ಲಿ ಸರಾಸರಿ 4.4 ಕಿಲೋಮೀಟರ್ ಸಂಚರಿಸಬಹುದಾಗಿದ್ದು, 2024ರಲ್ಲಿ ಇದು 4.2 ಕಿಲೋಮೀಟರ್ ಆಗಿತ್ತು.

10 ಕಿಲೋಮೀಟರ್ ಪ್ರಯಾಣಕ್ಕೆ 36 ನಿಮಿಷ!

ಬೆಂಗಳೂರು ನಗರದಲ್ಲಿ 10 ಕಿಲೋಮೀಟರ್ ದೂರ ಕ್ರಮಿಸಲು ಸರಾಸರಿ 36 ನಿಮಿಷ 9 ಸೆಕೆಂಡ್ ಸಮಯ ಬೇಕಾಗುತ್ತಿದೆ ಎಂದು ವರದಿ ತಿಳಿಸಿದೆ. ಇದು ದಿನನಿತ್ಯದ ಪ್ರಯಾಣಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಸಂಚಾರ ದಟ್ಟಣೆ ಪಟ್ಟಿಯಲ್ಲಿ ದುಬೈ ಮೂರನೇ ಸ್ಥಾನದಲ್ಲಿದ್ದು, ಪೊಲ್ಯಾಂಡ್‌ನ ಲೊಡ್ಜ್ ನಗರ ನಾಲ್ಕನೇ ಸ್ಥಾನ ಪಡೆದಿದೆ. ಭಾರತದ ಪುಣೆ ನಗರ ಐದನೇ ಸ್ಥಾನದಲ್ಲಿದ್ದರೆ, ಮುಂಬೈ 18ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಮ್ಯಾಪಲ್ಸ್ ಆ್ಯಪ್​ನಲ್ಲಿ ಸಿಗುತ್ತೆ ಬೆಂಗಳೂರು ಟ್ರಾಫಿಕ್ ಸಿಗ್ನಲ್ ಟೈಮಿಂಗ್ಸ್ ಲೈವ್ ಮಾಹಿತಿ! ದೇಶದಲ್ಲೇ ಮೊದಲು

ಬೆಂಗಳೂರು ವಿಶ್ವದ ಪ್ರಮುಖ ಐಟಿ ನಗರವಾಗಿರುವುದರ ಜೊತೆಗೆ, ಸಂಚಾರ ದಟ್ಟಣೆಯಲ್ಲೂ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ನಗರಾಭಿವೃದ್ಧಿ ಹಾಗೂ ಸಂಚಾರ ನಿರ್ವಹಣೆಯ ಕುರಿತು ಹೊಸ ಪ್ರಶ್ನೆಗಳನ್ನು ಎತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತಿಯ ಉಸಿರುಗಟ್ಟಿಸಿ ಕೊಂದು ಶವದ ಬಳಿ ಪ್ರಿಯಕರನೊಂದಿಗೆ ಮಾಡಬಾರದ್ದನ್ನು ಮಾಡಿದ ಮಹಿಳೆ – Kannada News | Andhra Pradesh: Wife, Lover Suffocates Husband, Gruesome Post Murder Acts Emerge

ಗುಂಟೂರು, ಜನವರಿ 23: ಮಹಿಳೆಯೊಬ್ಬರು ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆ(Murder)ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಮಹಿಳೆಗೆ ಬೇರೊಬ್ಬ ಪುರುಷನ ಜತೆ ಅಕ್ರಮ ಸಂಬಂಧವಿತ್ತು, ತಮ್ಮ ಸಂಬಂಧಕ್ಕೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಇಬ್ಬರೂ ಸೇರಿ ಸಂಚು ಹೂಡಿದ್ದರು.
ಪತಿಗಾಗಿ ಬಿರಿಯಾನಿ ಸಿದ್ಧಪಡಿಸಿದ್ದಳು, ಅದರೊಳಗೆ ನಿದ್ರೆ ಮಾತ್ರೆಯ ಪುಡಿಯನ್ನು ಬೆರೆಸಿದ್ದಳು, ಪತಿ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರನನ್ನು ಮನೆಗೆ ಕರೆದಿದ್ದಾಳೆ.

ನಂತರ ಇಬ್ಬರೂ ಸೇರ ಮಲಗಿದ್ದ ವ್ಯಕ್ತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಗುಂಟೂರಿನ ಚಿಲುವೂರು ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ ಸಹಜ ಸಾವು ಎಂದು ಬಿಂಬಿಸಿದ್ದರು, ವಿಧಿವಿಜ್ಞಾನ ಪರೀಕ್ಷೆಯ ನಂತರ ಆ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿತ್ತು. ಇಬ್ಬರನ್ನು ಬಂಧಿಸಲಾಗಿದೆ.

ಮೃತ ವ್ಯಕ್ತಿ ಹೆಸರು ಲೋಕಂ ಶಿವನಾಗರಾಜು, ಪತ್ನಿ ಲಕ್ಷ್ಮಿ ಮಾಧುರಿ ಮತ್ತಾಕೆಯ ಪ್ರಿಯಕರ ಗೋಪಿ ಇಬ್ಬರೂ ಸೇರಿ ಕೊಲೆ ಮಾಡಿದ್ದಾರೆ. ಅಪರಾಧ ನಡೆಯುವ ಮೊದಲು ಮಾಧುರಿ ಗೋಪಿ ಜೊತೆ ವಿವಾಹೇತರ ಸಂಬಂಧ ಹೊಂಂದಿದ್ದಳು. ಶಿವನಾಗರಾಜು ಊಟ ಮಾಡಿ ಗಾಢ ನಿದ್ರೆಗೆ ಜಾರಿದ ನಂತರ ಲಕ್ಷ್ಮಿ ಗೋಪಿಯನ್ನು ಮನೆಗೆ ಕರೆಸಿದ್ದಳು.

ಮತ್ತಷ್ಟು ಓದಿ: ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಹಿಂಸೆ: ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ

ಇಬ್ಬರೂ ಶಿವನಾಗರಾಜು ಅವರ ಮುಖದ ಮೇಲೆ ದಿಂಬನ್ನು ಇಟ್ಟು ಸಾಯುವವರೆಗೂ ಉಸಿರುಗಟ್ಟಿಸಿದ್ದರು. ಮಾಧುರಿ ತನ್ನ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದರು. ಬೆಳಗಿನ ಜಾವ ಅಕ್ಕಪಕ್ಕದ ಮನೆಯವರ ಬಳಿ ಹೋಗಿ ಪತಿ ಸಾವಿನ ಕುರಿತು ಮಾಹಿತಿ ನೀಡಿದ್ದಳು.

ಶಿವನಾಗರಾಜು ಅವರ ತಂದೆ ಮತ್ತು ಸ್ನೇಹಿತರು ಶವವನ್ನು ಪರೀಕ್ಷಿಸಿದಾಗ ರಕ್ತದ ಕಲೆಗಳ ಜೊತೆಗೆ ಗಾಯಗಳನ್ನು ಗಮನಿಸಿದಾಗ ಅನುಮಾನ ಹುಟ್ಟಿಕೊಂಡಿತ್ತು. ಸ್ಥಳೀಯ ಪೊಲೀಸರಿಗೆ ದೂರು ಸಲ್ಲಿಸಿದರು, ಅಧಿಕೃತ ತನಿಖೆಗೆ ಮುಂದಾದರು. ಮರಣೋತ್ತರ ಪರೀಕ್ಷೆಯ ವೇಳೆ ಎದೆಯಲ್ಲೂ ಗಾಯವಾಗಿದ್ದನ್ನು ಕಂಡರು. ಸಹಜ ಸಾವಲ್ಲ ಎನ್ನುವ ನಿರ್ಧಾರಕ್ಕೆ ಬರಲಾಯಿತು.

ನಂತರ ಮಾಧುರಿ ಮತ್ತು ಗೋಪಿಯನ್ನು ಬಂಧಿಸಲಾಯಿತು. ಮಾಧುರಿಯ ಮೊಬೈಲ್ ಫೋನ್‌ನ ವಿಧಿವಿಜ್ಞಾನ ಪರಿಶೀಲನೆಯ ಸಮಯದಲ್ಲಿ ತನಿಖೆಯಿಂದ ಪ್ರಮುಖ ಮಾಹಿತಿ ಬಹಿರಂಗವಾಯಿತು. ಮಾಧುರಿ ತನ್ನ ಪತಿಯ ದೇಹದ ಬಳಿ ಕುಳಿತುಕೊಂಡು ಇಡೀ ರಾತ್ರಿ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುತ್ತಿದ್ದಳು, ಪ್ರಿಯಕರನ ಜತೆ ಮಾಡಬಾರದ್ದನ್ನು ಮಾಡಿದ್ದಳು ಎಂಬುದು ತಿಳಿದುಬಂದಿದೆ. ವಿಚಾರಣೆಯ ಸಮಯದಲ್ಲಿ, ಮಾಧುರಿ ಸಂಪೂರ್ಣ ತಪ್ಪೊಪ್ಪಿಗೆಯನ್ನು ನೀಡಿದ್ದು, ಗೋಪಿಯೊಂದಿಗೆ ಸೇರಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:14 am, Fri, 23 January 26

Source link

‘ಯಾರೇ ಗೆದ್ರು ಖುಷೀನೆ’; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ

ಗಿಲ್ಲಿ ನಟ ಅವರು ಅಶ್ವಿನಿ ಗೌಡ ಬಗ್ಗೆ ಮಾತನಾಡಿದ್ದಾರೆ. ‘ಗಿಲ್ಲಿ ಗೆಲುವಿಗೆ ಅರ್ಹನಲ್ಲ. ಬಡವ ಕಾರ್ಡ್ ಬಳಸಿದ್ದಾನೆ’ ಎಂದು ಅಶ್ವಿನಿ ಹೇಳಿದ್ದರು. ಅಶ್ವಿನಿ ಗೌಡ ಅವರ ಹೇಳಿಕೆ ಬಗ್ಗೆ ಗಿಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಬಿಗ್ ಬಾಸ್​ ಫಿನಾಲೆ ವೇಳೆ ನಾನು, ರಕ್ಷಿತಾ ಹಾಗೂ ಅಶ್ವಿನಿ ಇದ್ದೆವು.ಯಾರೇ ಗೆದ್ದರೂ ಖುಷಿನೇ ಎಂದು ಅಶ್ವಿನಿ ಹೇಳಿದ್ದರು. ಈಗ ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ’ ಎಂದಿದ್ದಾರೆ ಗಿಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! – Kannada News | Bengaluru Airport Arrest: Man Sent Friend to UK on Own Passport

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್!

ದೇವನಹಳ್ಳಿ, ಜನವರಿ 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ.

ಪಾಸ್​ಪೋರ್ಟ್​ ಕಾಣೆಯಾಗಿದೆ ಎಂದು ಆರೋಪಿ ಹೈಡ್ರಾಮಾ

ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್‌ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ ಪ್ಯಾಸೆಂಜರ್ ಎಕ್ಸ್‌ಚೇಂಜ್ ಪ್ರದೇಶದಲ್ಲಿ ಫ್ಲೈಟ್‌ಗಾಗಿ ಕಾಯುತ್ತಿದ್ದ ವೇಳೆ, ತನ್ನ ಪಾಸ್‌ಪೋರ್ಟ್ ಹಾಗೂ ವೀಸಾ ಕಳೆದುಹೋಗಿದೆ ಎಂದು ಆರೋಪಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ಬದಲಿ ದಾಖಲಾತಿ ಪಡೆಯಲು ಯತ್ನಿಸಿದ್ದ.ಆದರೆ ಪೊಲೀಸ್ ವಿಚಾರಣೆ ವೇಳೆ ಆರೋಪಿಯ ಸಂಚು ಬಹಿರಂಗವಾಗಿದೆ. ಆರೋಪಿಯ ಸ್ನೇಹಿತ ಶಾರುಷನ್ ಕುನಸೇಕರನ್ ಎಂಬಾತ ಈಗಾಗಲೇ ರಾಜಗೋಪಾಲ್‌ನ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಬಳಸಿ ಯುಕೆ ಪ್ರಯಾಣಿಸಿರುವುದು ತಿಳಿದುಬಂದಿದೆ.

ಈ ಅಕ್ರಮ ನಡೆದಿದ್ದು ಹೇಗೆ?

ಆರೋಪಿ ಮೊದಲೇ ತನ್ನ ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು, ತನ್ನ ಮೂಲ ದಾಖಲಾತಿಗಳನ್ನು ನೀಡಿದ್ದಾನೆ. ನಂತರ ದಾಖಲೆಗಳು ಕಳೆದುಹೋಗಿವೆ ಎಂದು ನಾಟಕವಾಡಿ ಅಧಿಕಾರಿಗಳನ್ನು ದಾರಿ ತಪ್ಪಿಸಲು ಯತ್ನಿಸಿದ್ದಾನೆ. ಯುಕೆಯಲ್ಲಿ ಶರಣಾರ್ಥಿ (refugee) ಸ್ಥಾನ ಪಡೆಯುವ ಉದ್ದೇಶದಿಂದ ಈ ಕೃತ್ಯ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮತ್ತೊಬ್ಬ ಆರೋಪಿ ಹೇಗೆ ಕಣ್ತಪ್ಪಿಸಿ ಪ್ರಯಾಣಿಸಿದ್ದಾನೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ತುಂಬಾ ಗೊಂದಲ್ಲಿದ್ದೇನೆ’; ಮುಂದಿನ ಪ್ಲ್ಯಾನ್ ಬಗ್ಗೆ ಕನ್​​ಫ್ಯೂಸ್ ಆದ ಗಿಲ್ಲಿ ನಟ – Kannada News | Gilli Nata Wins Bigg Boss: Overwhelmed by Fame, Seeks Future Direction

ಗಿಲ್ಲಿ ನಟ ಅವರಿಗೆ ಬಿಗ್ ಬಾಸ್ (Bigg Boss) ಅಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. 45 ಕೋಟಿಗೂ ಅಧಿಕ ಮತಗಳನ್ನು ಪಡೆದು ಗೆಲುವು ಕಂಡಿದ್ದಾರೆ. ಎರಡನೇ ಸ್ಥಾನಕ್ಕೂ ಇವರಿಗೂ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ. ಈಗ ಅವರು ಮುಂದಿನ ಪ್ಲ್ಯಾನ್ ಬಗ್ಗೆ ಮಾತನಾಡಿದ್ದಾರೆ. ಅವರು ಸಖತ್ ಗೊಂದಲ್ಲಿದ್ದಾರಂತೆ. ಆ ಬಗ್ಗೆ ವಿವರಿಸಿದ್ದಾರೆ.

ಗಿಲ್ಲಿ ನಟ ಅವರು ಗೊಂದಲದಲ್ಲೇ ಬಿಗ್ ಬಾಸ್​​ಗೆ ಬಂದರು. ಇರೋ ಅಭಿಮಾನಿಗಳನ್ನು ಕಾಪಾಡಿಕೊಂಡು ಹೋದರೆ ಸಾಕು ಎಂಬುದು ಅವರ ಆಲೋಚನೆ ಆಗಿತ್ತು. ಅವರು ಬಿಗ್ ಬಾಸ್​​ಗೆ ಹೋಗುವಾಗ ಇನ್​​ಸ್ಟಾಗ್ರಾಮ್​ ಅಲ್ಲಿ ಅವರಿಗೆ ಇದ್ದಿದ್ದು ಕೇವಲ ಒಂದು ಲಕ್ಷದಷ್ಟು ಹಿಂಬಾಲಕರು. ಆದರೆ, ಈ ಸಂಖ್ಯೆ ಈಗ 2 ಮಿಲಿಯನ್ ಅಂದರೆ 20 ಲಕ್ಷಕ್ಕೆ ಏರಿದೆ. ಇದೆಲ್ಲವೂ ಗಿಲ್ಲಿಗೆ ಶಾಕ್​ ತಂದಿದೆ.

ಗಿಲ್ಲಿ ನಟ ಅವರಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದೇ ತಿಳಿಯುತ್ತಿಲ್ಲ. ಕೆಲವರು ಗಿಲ್ಲಿಯ ಹಚ್ಚೆ ಹಾಕಿಸಿಕೊಂಡಿದ್ದಾರೆ. ರೋಡ್​​ಶೋನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದಾರೆ. ಇದೆಲ್ಲ ಗಿಲ್ಲಿಗೆ ಅಚ್ಚರಿ ತಂದಿದೆ. ಮುಂದೆ ಯಾವ ರೀತಿಯ ಹೆಜ್ಜೆ ಇಡಬೇಕು ಎಂಬ ಗೊಂದಲ ಅವರನ್ನು ಬಹುವಾಗಿ ಕಾಡುತ್ತಿದೆ.

‘ತುಂಬಾ ಗೊಂದಲ್ಲಿ ಇದ್ದೇನೆ. ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಸಾಮಾನ್ಯ ಊಟವನ್ನಾದರೆ ಮಾಡಬಹುದು. ಆದರೆ, ಮೃಷ್ಟಾನ್ನನ ಇಟ್ಟಿದ್ದಾರೆ. ಅದನ್ನು ತಿಂದು ಹೇಗೆ ಅರಗಿಸಿಕೊಳ್ಳಬೇಕು ಎಂಬುದೇ ಕನ್​ಫ್ಯೂಷನ್. ನನಗೆ ಅಷ್ಟು ಅನುಭವ ಇಲ್ಲ. ವಯಸ್ಸು ಕೂಡ ಸಣ್ಣದು. ಇದನ್ನು ಹೇಗೆ ಹ್ಯಾಂಡಲ್ ಮಾಡಬೇಕು ಗೊತ್ತಾಗುತ್ತಾ ಇಲ್ಲ’ ಎಂದಿದ್ದಾರೆ ಗಿಲ್ಲಿ ನಟ.

ಇದನ್ನೂ ಓದಿ: ‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ

ಗಿಲ್ಲಿ ನಟ ಅವರಿಗೆ ನೋಡಿ ಹೆಜ್ಜೆ ಇಡುವಂತೆ ಸುದೀಪ್ ಅವರು ಸೂಚಿಸಿದ್ದಾರೆ. ಇದನ್ನು ಪಾಲಿಸೋದಾಗಿ ಅವರು ಹೇಳಿದ್ದಾರೆ. ‘ನಾನು ಇನ್ನೂ ಶಾಕ್​​ನಿಂದ ಹೊರ ಬಂದಿಲ್ಲ’ ಎನ್ನುತ್ತಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಲವು ಯುವತಿಯರಿಗೆ ವಂಚನೆ, ಮಾಜಿ ಸಂಸದನ ಆಪ್ತನೆಂದುಕೊಂಡು ಉಂಡೆ ನಾಮ! ಬಯಲಾಯ್ತು ಮ್ಯಾಟ್ರಿಮೋನಿ ವಂಚಕನ ಕರ್ಮಕಾಂಡ – Kannada News | Matrimony Fraud Exposed: Man Cheating Women by Posing as Ex MPs Aide Arrested

ಬೆಂಗಳೂರು, ಜನವರಿ 23: ಮ್ಯಾಟ್ರಿಮೋನಿಯಲ್ಲಿ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬರು ನೀಡಿದ ದೂರಿನ ಅನ್ವಯ ಕೆಲವು ದಿನಗಳ ಹಿಂದೆ ಬೆಂಗಳೂರಿನ (Bangalore) ಕಾಡುಗೋಡಿ ಠಾಣೆಯಲ್ಲಿ ವಿಜಯ್ ರಾಜ್ ಗೌಡ ಎಂಬಾತ ಸೇರಿ ಆತನ ಇಡೀ ಕುಟುಂಬದ ವಿರುದ್ಧ ಕೇಸ್ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಆಸಾಮಿ ಮ್ಯಾಟ್ರಿಮೋನಿಯಲ್ಲಿ ಮೋಸ ಮಾಡಿರುವುದು ಇದೇ ಮೊದಲಲ್ಲ ಎಂಬುದು ಗೊತ್ತಾಗಿದೆ. ಕಳೆದ ಏಳೆಂಟು ವರ್ಷಗಳಿಂದ 2019 ರಿಂದಲೂ 2026 ರ ವರೆಗೆ ಹಲವಾರು ಯುವತಿಯರಿಗೆ ಮೋಸ ಮಾಡಿದ್ದು, ಕಂಡು ಬಂದಿದೆ.

2019 ರಲ್ಲಿ ಕುಣಿಗಲ್​ನಲ್ಲಿ, 2022 ರಲ್ಲಿ ಅತ್ತಿಬೆಲೆಯಲ್ಲಿ 2023 ರಲ್ಲಿ ಶಿವಮೊಗ್ಗ, 2025 ರಲ್ಲಿ ಬೆಂಗಳೂರು, 2026 ರಲ್ಲಿ ಕಾಡುಗೋಡಿ ಠಾಣೆಯಲ್ಲಿ ಕೇಸ್ ದಾಖಲಾಗಿವೆ. ಮ್ಯಾಟ್ರಿಮೋನಿಯಲ್ಲಿ ಪರಿಚಯ ಆದ ನಂತರ, ‘ನಾನು ದೊಡ್ಡ ಉದ್ಯಮಿ, ಇಡಿಯಲ್ಲಿ ಕೇಸ್ ಒಂದರ ಸಂಬಂದ ಹಣ ಪ್ರೀಜ್ ಆಗಿದೆ. ಅದನ್ನು ರಿಲೀಸ್ ಮಾಡಿಸಲು ಹಣ ಬೇಕು’ ಎಂದು ಹೇಳುತ್ತಿದ್ದ. ಅಲ್ಲದೆ, ಲಕ್ಷ ಲಕ್ಷ ಹಣ ಬ್ಯಾಂಕ್​ನಲ್ಲಿ ಪ್ರೀಜ್ ಆಗಿರುವುದಕ್ಕೆ ಬೇಕಾದ ನಕಲಿ ದಾಖಲೆಗಳನ್ನು, ಕೋರ್ಟ್ ಪ್ರತಿಗಳನ್ನು ತೋರಿಸಿ ಹಣ ಪಡೆದುಕೊಂಡು ನಂತರ ಪೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗುತ್ತಿದ್ದ.

ಹೀಗೆ ಒಬ್ಬೊಬರಿಂದ 10 ಲಕ್ಷ, 30 ಲಕ್ಷ, 13 ಲಕ್ಷ ಪಡೆದಿದ್ದಾನೆ. ಕೆಂಗೇರಿಯಲ್ಲಿ 1.53 ಕೋಟಿ ರೂ. ಹಣ ಪಡೆದುಕೊಂಡು ಹೆಂಡತಿಯನ್ನು ಅಕ್ಕ ಎಂದು ಪರಿಚಯ ಮಾಡಿಕೊಟ್ಟಿದ್ದ.

ಮಾಜಿ ಸಂಸದ ಡಿಕೆ ಸುರೇಶ್ ಹೆಸರು ದುರ್ಬಳಕೆ

ಈ ಆರೋಪಿ ಟೆಂಡರ್ ಕೊಡಿಸುವ ಡೀಲ್​​ನಲ್ಲಿ ಕುಣಿಗಲ್​​ನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪವೂ ಇದೆ. ಡಿಕೆ ಸುರೇಶ್ ನನಗೆ ಆಪ್ತರು ಎಂದು ಹೇಳಿಕೊಂಡು ಟೆಂಡರ್ ಕೊಡಿಸುವುದಾಗಿ ನಂಬಿಸಿದ್ದ. ಟಾಟಾ ಪವರ್ ಡಿಡಿಎಲ್ ಕಂಪನಿಗೆ ವಾಹನದ ಗುತ್ತಿಗೆ ಕೊಡಿಸುವುದಾಗಿ ಕೂಡ ಹೇಳಿದ್ದ. 2019 ರಲ್ಲಿ ಕುಣಿಗಲ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಾಜೆಕ್ಟ್ ಕೊಡಿಸುವುದಕ್ಕೆ ನಕಲಿ ಸಹಿ ಸೀಲ್ ರೆಡಿ ಉಪಯೋಗಿಸಿಕೊಂಡು ವಂಚನೆ ಮಾಡಿದ್ದ.

ಆನೇಕಲ್​​ನಲ್ಲಿ ಸಿಮೆಂಟ್ ಫ್ಯಾಕ್ಟರಿಯನ್ನು ಮಾರಾಟ ಮಾಡಿ ಹಣ ಪಾವಸ್ ಕೊಡುತ್ತೇನೆ ಎಂದು ನಂಬಿಸಿ ಯುವತಿಗೆ ಮೋಸ ಮಾಡಿದ್ದ. ಆರೋಪಿ ವಿರುದ್ಧ ಶಿವಮೊಗ್ಗ, ಆನೇಕಲ್, ಅತ್ತಿಬೆಲೆ, ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೀಗೆ ಕಳೆದ ಕೆಲವು ವರ್ಷಗಳಿಂದ ಮೋಸ, ವಂಚನೆ ಮಾಡಿಕೊಂಡು ಜೀವನ ನಡೆಸುತ್ತಿರುವ ಆರೋಪಿ ಈಗ ಲಾಕ್ ಆಗಿದ್ದಾನೆ.

ಇದನ್ನೂ ಓದಿ: ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ! ಬರೋಬ್ಬರಿ 1.53 ಕೋಟಿ ರೂ. ವಂಚನೆ

ಒಟ್ಟಿನಲ್ಲಿ ತಂದೆಯನ್ನು ನಿವೃತ್ತ ತಹಶೀಲ್ದಾರ್, ಹೆಂಡತಿಯನ್ನು ಅಕ್ಕ, ತಾಯಿಯನ್ನು ಪ್ರೊಫೆಸರ್ ಎಂದು ಹೇಳಿಕೊಂಡಿದ್ದ ವಂಚಕನ ಕುಟುಂಬ ಇವನಿಗೆ ಸಾಥ್ ಕೊಟ್ಟಿರುವುದು ಮಾತ್ರ ದುರಂತ. ಆರೋಪಿ ವಿರುದ್ದ ಮತ್ತಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆಗಳಿದ್ದು, ವಂಚನೆಗೊಳಾಗದವರು ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version