ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! – Kannada News | Bengaluru Airport Arrest: Man Sent Friend to UK on Own Passport

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್!

ದೇವನಹಳ್ಳಿ, ಜನವರಿ 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ.

ಪಾಸ್​ಪೋರ್ಟ್​ ಕಾಣೆಯಾಗಿದೆ ಎಂದು ಆರೋಪಿ ಹೈಡ್ರಾಮಾ

ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್‌ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ ಪ್ಯಾಸೆಂಜರ್ ಎಕ್ಸ್‌ಚೇಂಜ್ ಪ್ರದೇಶದಲ್ಲಿ ಫ್ಲೈಟ್‌ಗಾಗಿ ಕಾಯುತ್ತಿದ್ದ ವೇಳೆ, ತನ್ನ ಪಾಸ್‌ಪೋರ್ಟ್ ಹಾಗೂ ವೀಸಾ ಕಳೆದುಹೋಗಿದೆ ಎಂದು ಆರೋಪಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ಬದಲಿ ದಾಖಲಾತಿ ಪಡೆಯಲು ಯತ್ನಿಸಿದ್ದ.ಆದರೆ ಪೊಲೀಸ್ ವಿಚಾರಣೆ ವೇಳೆ ಆರೋಪಿಯ ಸಂಚು ಬಹಿರಂಗವಾಗಿದೆ. ಆರೋಪಿಯ ಸ್ನೇಹಿತ ಶಾರುಷನ್ ಕುನಸೇಕರನ್ ಎಂಬಾತ ಈಗಾಗಲೇ ರಾಜಗೋಪಾಲ್‌ನ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಬಳಸಿ ಯುಕೆ ಪ್ರಯಾಣಿಸಿರುವುದು ತಿಳಿದುಬಂದಿದೆ.

ಈ ಅಕ್ರಮ ನಡೆದಿದ್ದು ಹೇಗೆ?

ಆರೋಪಿ ಮೊದಲೇ ತನ್ನ ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು, ತನ್ನ ಮೂಲ ದಾಖಲಾತಿಗಳನ್ನು ನೀಡಿದ್ದಾನೆ. ನಂತರ ದಾಖಲೆಗಳು ಕಳೆದುಹೋಗಿವೆ ಎಂದು ನಾಟಕವಾಡಿ ಅಧಿಕಾರಿಗಳನ್ನು ದಾರಿ ತಪ್ಪಿಸಲು ಯತ್ನಿಸಿದ್ದಾನೆ. ಯುಕೆಯಲ್ಲಿ ಶರಣಾರ್ಥಿ (refugee) ಸ್ಥಾನ ಪಡೆಯುವ ಉದ್ದೇಶದಿಂದ ಈ ಕೃತ್ಯ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮತ್ತೊಬ್ಬ ಆರೋಪಿ ಹೇಗೆ ಕಣ್ತಪ್ಪಿಸಿ ಪ್ರಯಾಣಿಸಿದ್ದಾನೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ತುಂಬಾ ಗೊಂದಲ್ಲಿದ್ದೇನೆ’; ಮುಂದಿನ ಪ್ಲ್ಯಾನ್ ಬಗ್ಗೆ ಕನ್​​ಫ್ಯೂಸ್ ಆದ ಗಿಲ್ಲಿ ನಟ – Kannada News | Gilli Nata Wins Bigg Boss: Overwhelmed by Fame, Seeks Future Direction

ಗಿಲ್ಲಿ ನಟ ಅವರಿಗೆ ಬಿಗ್ ಬಾಸ್ (Bigg Boss) ಅಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. 45 ಕೋಟಿಗೂ ಅಧಿಕ ಮತಗಳನ್ನು ಪಡೆದು ಗೆಲುವು ಕಂಡಿದ್ದಾರೆ. ಎರಡನೇ ಸ್ಥಾನಕ್ಕೂ ಇವರಿಗೂ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ. ಈಗ ಅವರು ಮುಂದಿನ ಪ್ಲ್ಯಾನ್ ಬಗ್ಗೆ ಮಾತನಾಡಿದ್ದಾರೆ. ಅವರು ಸಖತ್ ಗೊಂದಲ್ಲಿದ್ದಾರಂತೆ. ಆ ಬಗ್ಗೆ ವಿವರಿಸಿದ್ದಾರೆ.

ಗಿಲ್ಲಿ ನಟ ಅವರು ಗೊಂದಲದಲ್ಲೇ ಬಿಗ್ ಬಾಸ್​​ಗೆ ಬಂದರು. ಇರೋ ಅಭಿಮಾನಿಗಳನ್ನು ಕಾಪಾಡಿಕೊಂಡು ಹೋದರೆ ಸಾಕು ಎಂಬುದು ಅವರ ಆಲೋಚನೆ ಆಗಿತ್ತು. ಅವರು ಬಿಗ್ ಬಾಸ್​​ಗೆ ಹೋಗುವಾಗ ಇನ್​​ಸ್ಟಾಗ್ರಾಮ್​ ಅಲ್ಲಿ ಅವರಿಗೆ ಇದ್ದಿದ್ದು ಕೇವಲ ಒಂದು ಲಕ್ಷದಷ್ಟು ಹಿಂಬಾಲಕರು. ಆದರೆ, ಈ ಸಂಖ್ಯೆ ಈಗ 2 ಮಿಲಿಯನ್ ಅಂದರೆ 20 ಲಕ್ಷಕ್ಕೆ ಏರಿದೆ. ಇದೆಲ್ಲವೂ ಗಿಲ್ಲಿಗೆ ಶಾಕ್​ ತಂದಿದೆ.

ಗಿಲ್ಲಿ ನಟ ಅವರಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದೇ ತಿಳಿಯುತ್ತಿಲ್ಲ. ಕೆಲವರು ಗಿಲ್ಲಿಯ ಹಚ್ಚೆ ಹಾಕಿಸಿಕೊಂಡಿದ್ದಾರೆ. ರೋಡ್​​ಶೋನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದಾರೆ. ಇದೆಲ್ಲ ಗಿಲ್ಲಿಗೆ ಅಚ್ಚರಿ ತಂದಿದೆ. ಮುಂದೆ ಯಾವ ರೀತಿಯ ಹೆಜ್ಜೆ ಇಡಬೇಕು ಎಂಬ ಗೊಂದಲ ಅವರನ್ನು ಬಹುವಾಗಿ ಕಾಡುತ್ತಿದೆ.

‘ತುಂಬಾ ಗೊಂದಲ್ಲಿ ಇದ್ದೇನೆ. ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಸಾಮಾನ್ಯ ಊಟವನ್ನಾದರೆ ಮಾಡಬಹುದು. ಆದರೆ, ಮೃಷ್ಟಾನ್ನನ ಇಟ್ಟಿದ್ದಾರೆ. ಅದನ್ನು ತಿಂದು ಹೇಗೆ ಅರಗಿಸಿಕೊಳ್ಳಬೇಕು ಎಂಬುದೇ ಕನ್​ಫ್ಯೂಷನ್. ನನಗೆ ಅಷ್ಟು ಅನುಭವ ಇಲ್ಲ. ವಯಸ್ಸು ಕೂಡ ಸಣ್ಣದು. ಇದನ್ನು ಹೇಗೆ ಹ್ಯಾಂಡಲ್ ಮಾಡಬೇಕು ಗೊತ್ತಾಗುತ್ತಾ ಇಲ್ಲ’ ಎಂದಿದ್ದಾರೆ ಗಿಲ್ಲಿ ನಟ.

ಇದನ್ನೂ ಓದಿ: ‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ

ಗಿಲ್ಲಿ ನಟ ಅವರಿಗೆ ನೋಡಿ ಹೆಜ್ಜೆ ಇಡುವಂತೆ ಸುದೀಪ್ ಅವರು ಸೂಚಿಸಿದ್ದಾರೆ. ಇದನ್ನು ಪಾಲಿಸೋದಾಗಿ ಅವರು ಹೇಳಿದ್ದಾರೆ. ‘ನಾನು ಇನ್ನೂ ಶಾಕ್​​ನಿಂದ ಹೊರ ಬಂದಿಲ್ಲ’ ಎನ್ನುತ್ತಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಲವು ಯುವತಿಯರಿಗೆ ವಂಚನೆ, ಮಾಜಿ ಸಂಸದನ ಆಪ್ತನೆಂದುಕೊಂಡು ಉಂಡೆ ನಾಮ! ಬಯಲಾಯ್ತು ಮ್ಯಾಟ್ರಿಮೋನಿ ವಂಚಕನ ಕರ್ಮಕಾಂಡ – Kannada News | Matrimony Fraud Exposed: Man Cheating Women by Posing as Ex MPs Aide Arrested

ಬೆಂಗಳೂರು, ಜನವರಿ 23: ಮ್ಯಾಟ್ರಿಮೋನಿಯಲ್ಲಿ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬರು ನೀಡಿದ ದೂರಿನ ಅನ್ವಯ ಕೆಲವು ದಿನಗಳ ಹಿಂದೆ ಬೆಂಗಳೂರಿನ (Bangalore) ಕಾಡುಗೋಡಿ ಠಾಣೆಯಲ್ಲಿ ವಿಜಯ್ ರಾಜ್ ಗೌಡ ಎಂಬಾತ ಸೇರಿ ಆತನ ಇಡೀ ಕುಟುಂಬದ ವಿರುದ್ಧ ಕೇಸ್ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಆಸಾಮಿ ಮ್ಯಾಟ್ರಿಮೋನಿಯಲ್ಲಿ ಮೋಸ ಮಾಡಿರುವುದು ಇದೇ ಮೊದಲಲ್ಲ ಎಂಬುದು ಗೊತ್ತಾಗಿದೆ. ಕಳೆದ ಏಳೆಂಟು ವರ್ಷಗಳಿಂದ 2019 ರಿಂದಲೂ 2026 ರ ವರೆಗೆ ಹಲವಾರು ಯುವತಿಯರಿಗೆ ಮೋಸ ಮಾಡಿದ್ದು, ಕಂಡು ಬಂದಿದೆ.

2019 ರಲ್ಲಿ ಕುಣಿಗಲ್​ನಲ್ಲಿ, 2022 ರಲ್ಲಿ ಅತ್ತಿಬೆಲೆಯಲ್ಲಿ 2023 ರಲ್ಲಿ ಶಿವಮೊಗ್ಗ, 2025 ರಲ್ಲಿ ಬೆಂಗಳೂರು, 2026 ರಲ್ಲಿ ಕಾಡುಗೋಡಿ ಠಾಣೆಯಲ್ಲಿ ಕೇಸ್ ದಾಖಲಾಗಿವೆ. ಮ್ಯಾಟ್ರಿಮೋನಿಯಲ್ಲಿ ಪರಿಚಯ ಆದ ನಂತರ, ‘ನಾನು ದೊಡ್ಡ ಉದ್ಯಮಿ, ಇಡಿಯಲ್ಲಿ ಕೇಸ್ ಒಂದರ ಸಂಬಂದ ಹಣ ಪ್ರೀಜ್ ಆಗಿದೆ. ಅದನ್ನು ರಿಲೀಸ್ ಮಾಡಿಸಲು ಹಣ ಬೇಕು’ ಎಂದು ಹೇಳುತ್ತಿದ್ದ. ಅಲ್ಲದೆ, ಲಕ್ಷ ಲಕ್ಷ ಹಣ ಬ್ಯಾಂಕ್​ನಲ್ಲಿ ಪ್ರೀಜ್ ಆಗಿರುವುದಕ್ಕೆ ಬೇಕಾದ ನಕಲಿ ದಾಖಲೆಗಳನ್ನು, ಕೋರ್ಟ್ ಪ್ರತಿಗಳನ್ನು ತೋರಿಸಿ ಹಣ ಪಡೆದುಕೊಂಡು ನಂತರ ಪೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗುತ್ತಿದ್ದ.

ಹೀಗೆ ಒಬ್ಬೊಬರಿಂದ 10 ಲಕ್ಷ, 30 ಲಕ್ಷ, 13 ಲಕ್ಷ ಪಡೆದಿದ್ದಾನೆ. ಕೆಂಗೇರಿಯಲ್ಲಿ 1.53 ಕೋಟಿ ರೂ. ಹಣ ಪಡೆದುಕೊಂಡು ಹೆಂಡತಿಯನ್ನು ಅಕ್ಕ ಎಂದು ಪರಿಚಯ ಮಾಡಿಕೊಟ್ಟಿದ್ದ.

ಮಾಜಿ ಸಂಸದ ಡಿಕೆ ಸುರೇಶ್ ಹೆಸರು ದುರ್ಬಳಕೆ

ಈ ಆರೋಪಿ ಟೆಂಡರ್ ಕೊಡಿಸುವ ಡೀಲ್​​ನಲ್ಲಿ ಕುಣಿಗಲ್​​ನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪವೂ ಇದೆ. ಡಿಕೆ ಸುರೇಶ್ ನನಗೆ ಆಪ್ತರು ಎಂದು ಹೇಳಿಕೊಂಡು ಟೆಂಡರ್ ಕೊಡಿಸುವುದಾಗಿ ನಂಬಿಸಿದ್ದ. ಟಾಟಾ ಪವರ್ ಡಿಡಿಎಲ್ ಕಂಪನಿಗೆ ವಾಹನದ ಗುತ್ತಿಗೆ ಕೊಡಿಸುವುದಾಗಿ ಕೂಡ ಹೇಳಿದ್ದ. 2019 ರಲ್ಲಿ ಕುಣಿಗಲ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಾಜೆಕ್ಟ್ ಕೊಡಿಸುವುದಕ್ಕೆ ನಕಲಿ ಸಹಿ ಸೀಲ್ ರೆಡಿ ಉಪಯೋಗಿಸಿಕೊಂಡು ವಂಚನೆ ಮಾಡಿದ್ದ.

ಆನೇಕಲ್​​ನಲ್ಲಿ ಸಿಮೆಂಟ್ ಫ್ಯಾಕ್ಟರಿಯನ್ನು ಮಾರಾಟ ಮಾಡಿ ಹಣ ಪಾವಸ್ ಕೊಡುತ್ತೇನೆ ಎಂದು ನಂಬಿಸಿ ಯುವತಿಗೆ ಮೋಸ ಮಾಡಿದ್ದ. ಆರೋಪಿ ವಿರುದ್ಧ ಶಿವಮೊಗ್ಗ, ಆನೇಕಲ್, ಅತ್ತಿಬೆಲೆ, ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೀಗೆ ಕಳೆದ ಕೆಲವು ವರ್ಷಗಳಿಂದ ಮೋಸ, ವಂಚನೆ ಮಾಡಿಕೊಂಡು ಜೀವನ ನಡೆಸುತ್ತಿರುವ ಆರೋಪಿ ಈಗ ಲಾಕ್ ಆಗಿದ್ದಾನೆ.

ಇದನ್ನೂ ಓದಿ: ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ! ಬರೋಬ್ಬರಿ 1.53 ಕೋಟಿ ರೂ. ವಂಚನೆ

ಒಟ್ಟಿನಲ್ಲಿ ತಂದೆಯನ್ನು ನಿವೃತ್ತ ತಹಶೀಲ್ದಾರ್, ಹೆಂಡತಿಯನ್ನು ಅಕ್ಕ, ತಾಯಿಯನ್ನು ಪ್ರೊಫೆಸರ್ ಎಂದು ಹೇಳಿಕೊಂಡಿದ್ದ ವಂಚಕನ ಕುಟುಂಬ ಇವನಿಗೆ ಸಾಥ್ ಕೊಟ್ಟಿರುವುದು ಮಾತ್ರ ದುರಂತ. ಆರೋಪಿ ವಿರುದ್ದ ಮತ್ತಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆಗಳಿದ್ದು, ವಂಚನೆಗೊಳಾಗದವರು ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಶಿವಮೊಗ್ಗ, ಬಳ್ಳಾರಿ ಏರ್ ಕ್ವಾಲಿಟಿಯಲ್ಲಿ ಕುಸಿತ; ಬೆಂಗಳೂರಿಗಿಂತಲೂ ಕಳಪೆ AQI – Kannada News | Bangalore Air Pollution Crisis: Shivamogga and Ballari have Air quality worse than Bengaluru

ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ ಕಳಪೆ ಏರ್ ಕ್ವಾಲಿಟಿ

ಬೆಂಗಳೂರು, ಜನವರಿ 23: ಬೆಂಗಳೂರಿನ ಗಾಳಿಯ ಗುಣಮಟ್ಟ 162 ಇದ್ದು, ಏರ್ ಕ್ವಾಲಿಟಿ (Bengaluru Air Quality) ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ಬೆಂಗಳೂರನ್ನೂ ಮೀರಿಸುವ ಹಂತಕ್ಕೆ ತಲುಪಿರುವುದು ಶಿವಮೊಗ್ಗ ಮತ್ತು ಬಳ್ಳಾರಿಯ ವಾಯು ಗುಣಮಟ್ಟ. ಕೆಲ ದಿನಗಳಿಂದ 100ರ ಆಸುಪಾಸಿನಲ್ಲಿದ್ದ ಶಿವಮೊಗ್ಗದ ಏರ್ ಕ್ವಾಲಿಟಿ ಇಂದು ಒಮ್ಮೆಲೇ ಬೆಂಗಳೂರಿಗಿಂತಲೂ ಹೆಚ್ಚಿನ AQIಗೆ ತಲುಪಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೆಲ ದಿನಗಳ ಹಿಂದೆ ಶಿವಮೊಗ್ಗದ ಗಾಳಿಯ ಗುಣಮಟ್ಟ ನೂರರ ಆಸುಪಾಸಿನಲ್ಲಿತ್ತು. ಆದರಿಂದು ಏಕಾಏಕಿ 175ಕ್ಕೆ ತಲುಪಿರುವುದು ಆತಂಕ ಸೃಷ್ಟಿಸಿದೆ. ಬಳ್ಳಾರಿಯೂ 178 AQI ಹೊಂದಿದ್ದು, ಬೆಂಗಳೂರಿಗಿಂತ ಕಳಪೆ ಗುಣಮಟ್ಟದ ಏರ್ ಕ್ವಾಲಿಟಿಯಾಗಿದೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –162
  • ಮಂಗಳೂರು-156
  • ಮೈಸೂರು –94
  • ಬೆಳಗಾವಿ – 138
  • ಕಲಬುರ್ಗಿ-129
  • ಶಿವಮೊಗ್ಗ – 175
  • ಬಳ್ಳಾರಿ – 178
  • ಹುಬ್ಬಳ್ಳಿ- 156
  • ಉಡುಪಿ –157
  • ವಿಜಯಪುರ –111

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾತ್ರಿ 8 ಗಂಟೆಯ ಮೇಲೆ ಯಾರಿಗೂ ಸಿಗಲ್ಲ ಅಮಿತಾಭ್; ಕಾರಣ ಏನು? – Kannada News | Amitabh Bachchan’s Strict Routine: No Industry Meetings After 8 PM and His Unwavering Discipline

ಅಮಿತಾಭ್ ಬಚ್ಚನ್ (Amitabh Bachchan) ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಸಿನಿಮಾ ರಂಗದಲ್ಲಿ ಅವರು ಐದು ದಶಕಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ತುಂಬಾನೇ ಶಿಸ್ತಿನ ವ್ಯಕ್ತಿ. ನಟನೆಯ ಜೊತೆಗೆ ಅವರು ಶಿಸ್ತನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರನ್ನು ರಾತ್ರಿ 8 ಗಂಟೆ ಬಳಿಕ ಇಂಡಸ್ಟ್ರಿಯವರು ಭೇಟಿ ಮಾಡಲು ಸಾಧ್ಯವಿಲ್ಲ.

ಸಾಮಾನ್ಯವಾಗಿ ಬಾಲಿವುಡ್ ಹೀರೋಗಳು ಹೆಚ್ಚೆಚ್ಚು ಪಾರ್ಟಿ ಮಾಡೋಕೆ ಇಷ್ಟಪಡುತ್ತಾರೆ. ಅವರ ರಾತ್ರಿ ಜೀವನವೇ ಬೇರೆ ರೀತಿ ಇರುತ್ತದೆ. ಬೇರೆ ಹೀರೋಗಳು ಕರೆದರು ಎಂದು ಪಾರ್ಟಿಗೆ ಜಾಯಿನ್ ಆಗುತ್ತಾರೆ. ಇಲ್ಲವೇ ಸಿನಿಮಾ ಶೂಟ್​​​ನಲ್ಲಿ ರಾತ್ರಿಯಿಡಿ ಪಾಲ್ಗೊಳ್ಳುತ್ತಾರೆ. ಆದರೆ, ಖಾಸಗಿ ಜೀವನವನ್ನು ಅಮಿತಾಭ್ ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದು, ಒಂದಷ್ಟು ನಿಯಮಗಳನ್ನು ಹಾಕಿಕೊಂಡಿದ್ದಾರೆ.

ರಾಜಾ ಬುಂದೇಲಾ ಅವರು ಅಮಿತಾಭ್ ಬಚ್ಚನ್ ಜೊತೆ 1989ರ ‘ಮೇ ಆಜಾದ್ ಹೂ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಅಮಿತಾಭ್ ಕುರಿತ ಒಂದಷ್ಟು ವಿಷಗಳನ್ನು ಹಂಚಿಕೊಂಡಿದ್ದಾರೆ. ‘ಅಮಿತಾಭ್ ಬಚ್ಚನ್ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಅವರ ಜೊತೆ ಒಂದು ಸಿನಿಮಾ ಮಾಡಿದ್ದೆ. ಅವರಿಗೆ ಎಲ್ಲಾ ಸಂಭಾಷಣೆಗಳು ಚೆನ್ನಾಗಿ ನೆನಪಿದ್ದವು’ ಎಂದಿದ್ದಾರೆ.

‘ಒಮ್ಮೆ ನಾವು ಗೋವಾದಲ್ಲಿ ಚಿತ್ರೀಕರಣ ಮಾಡುತ್ತಿದ್ದಾಗ, ಅಮಿತಾಭ್ ಬಚ್ಚನ್ ಮುಂಬೈನಲ್ಲಿಯೇ ಉಳಿದುಹೋಗಿವೆ ಎಂದು ತಿಳಿದುಬಂತು. ಈ ಹಿಂದೆ ಅದೇ ಶೂನಲ್ಲಿ ಶೂಟ್ ಮಾಡಿದ್ದರಿಂದ ಕಂಟ್ಯೂನಿಟಿಗೆ ಅದೇ ಶೋಗಳು ಬೇಕಾಗಿದ್ದವು. ಆ ದಿನಗಳಲ್ಲಿ ವಿಮಾನದ ಕನೆಕ್ಟಿವಿಟಿ ಇಷ್ಟಾಗಿ ಇರಲಿಲ್ಲ’ ಎಂದಿದ್ದಾರೆ ಅವರು.
‘ಮರುದಿನ ಶೂಟ್ ಇರಲ್ಲ ಎಂದು ಎಲ್ಲರೂ ಖುಷಿಪಟ್ಟರು. ಆದರೆ, ಅಮಿತಾಭ್ ಅದೇ ಶೋಗಳ ಜೊತೆ ಮರುದಿನ 7.30ಕ್ಕೆ ಸೆಟ್​​​ನಲ್ಲಿ ಇದ್ದರು. ಅದು ಶಿಸ್ತು’ ಎಂದಿದ್ದಾರೆ ಬುಂದೇಲಾ.

ಇದನ್ನೂ ಓದಿ: ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್

‘ಅವರು ಎಲ್ಲವನ್ನೂ ಸಮಯಕ್ಕೆ ಸರಿಯಾಗಿ ಮಾಡುತ್ತಾರೆ. ನಾವು ಅವರ ಮನೆಯಲ್ಲಿ ಭೇಟಿಯಾದಾಗಲೂ ಅವರು ಎಂದಿಗೂ ಗಾಸಿಪ್ ಮಾಡುತ್ತಿರಲಿಲ್ಲ. ನಾನು ಕೇಳಿರುವಂತೆ, ರಾತ್ರಿ 8 ಗಂಟೆಯ ನಂತರ ಅವರು ಉದ್ಯಮದ ಯಾರನ್ನೂ ತಮ್ಮ ಮನೆಗೆ ಬಿಡುತ್ತಿರಲಿಲ್ಲ. ಅವರು ತಮ್ಮ ಬಾಗಿಲುಗಳಿಗೆ ಬೀಗ ಹಾಕಿಕೊಳ್ಳುತ್ತಿದ್ದರು. ಅವರು ತಮ್ಮ ವ್ಯವಹಾರ ಮತ್ತು ಕುಟುಂಬದ ನಡುವೆ ಆ ಸಮತೋಲನವನ್ನು ಕಾಯ್ದುಕೊಳ್ಳಲು ಇಷ್ಟಪಡುತ್ತಾರೆ’ ಎಂದಿದ್ದಾರೆ ರಾಜಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:07 am, Fri, 23 January 26

Source link

ಮನೆಕೆಲಸಕ್ಕೆಂದು 10 ವರ್ಷದ ಬಾಲಕಿಯ ಕರೆತಂದು ಬೆನ್ನು ಮೂಳೆ ಮುರಿಯುವಂತೆ ಚಿತ್ರಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ – Kannada News | CRPF Couple Arrested: 10 Year Old Maid Severely Tortured, Spine Fractured in Noida

ಬಾಲಕಿ-ಸಾಂದರ್ಭಿಕ ಚಿತ್ರImage Credit source: Vector Solutions

ನೋಯ್ಡಾ, ಜನವರಿ 23: ಮನೆಗೆಲಸಕ್ಕೆಂದು 10 ವರ್ಷದ ಬಾಲಕಿ(Girl)ಯ ಕರೆತಂದು ಸರಿಯಾಗಿ ಆಹಾರವನ್ನೂ ನೀಡದೆ, ಬೆನ್ನು ಮೂಳೆ ಮುರಿಯುವಂತೆ ಹೊಡೆದು ಚಿತ್ರ ಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ ಮತ್ತವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಘಟನೆ ನಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬಾಲಕಿಯನ್ನು ದಂಪತಿ ಮನೆಗೆಲಸಕ್ಕೆಂದು ಕರೆತಂದು ತಮ್ಮ ಸೋದರ ಸೊಸೆ ಎಂದು ಸುಳ್ಳು ಹೇಳಿದ್ದರು. ಕೇಂದ್ರ ಮೀಸಲು ಪೊಲೀಸ್ ಪಡೆಯ 235 ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿದ್ದ ಕಾನ್‌ಸ್ಟೆಬಲ್ ಜಿಡಿ ತಾರಿಕ್ ಅನ್ವರ್, ಅವಳು ತನ್ನ ಪತ್ನಿ ರಿಂಪಾ ಖಾತುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯ ಅಧಿಕಾರಿಗಳಿಂದ ಔಪಚಾರಿಕ ಅನುಮತಿಯಿಲ್ಲದೆ ಬಾಲಕಿ ಸಿಆರ್‌ಪಿಎಫ್ ಕ್ಯಾಂಪಸ್‌ನಲ್ಲಿ ದಂಪತಿಯೊಂದಿಗೆ ಬಾಲಕಿ ವಾಸವಿದ್ದಳು.

ಸಿಆರ್‌ಪಿಎಫ್ ಶಿಬಿರದಲ್ಲಿ ನಿಯೋಜಿಸಲಾದ ಸುಬೇದಾರ್ ಮೇಜರ್ ಭಾನುವಾರ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಇಕೋಟೆಕ್ 3 ಸಿಆರ್‌ಪಿಎಫ್ ಕ್ಯಾಂಪಸ್‌ನೊಳಗೆ ಬ್ಲಾಕ್ 60 ರ ಕ್ವಾರ್ಟರ್ ಸಂಖ್ಯೆ 13 ರಲ್ಲಿ ವಾಸಿಸುತ್ತಿದ್ದರು ಮತ್ತು ಬಾಲಕಿಗೆ ತಮ್ಮ ಮಕ್ಕಳನ್ನು ನೋಡಿಕೊಳ್ಳುವುದು ಸೇರಿದಂತೆ ಮನೆಕೆಲಸಗಳನ್ನು ಕೊಡಲಾಗುತ್ತಿತ್ತು ಮತ್ತು ಥಳಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಓದಿ: ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್

ಜನವರಿ 15 ರ ಮಧ್ಯರಾತ್ರಿ, ಬಾಲಕಿಯನ್ನು ದಂಪತಿ ಕ್ರೂರವಾಗಿ ಥಳಿಸಿದ್ದರಿಂದ ತೀವ್ರ ಗಾಯಗಳಾಗಿತ್ತ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆಕೆಯನ್ನು ಸಿಆರ್‌ಪಿಎಫ್ ಆಸ್ಪತ್ರೆಗೆ ಕರೆದೊಯ್ಯುವ ಬದಲು, ಅನ್ವರ್ ಆಕೆಯನ್ನು ಸರ್ವೋದಯ ಆಸ್ಪತ್ರೆಗೆ ದಾಖಲಿಸಿದ್ದರು ಬಾಲಕಿ ಸ್ನಾನ ಮಾಡುವಾಗ ಎಡವಿ ಬಿದ್ದಿದ್ದಾಳೆ ಎಂದು ಕಥೆ ಕಟ್ಟಿದ್ದರು.

ವೈದ್ಯರು ಆಕೆಯ ಪಕ್ಕೆಲುಬು ಮುರಿದಿದೆ, ಕಾಲುಗಳಲ್ಲಿ ಊತವಿದೆ, ಕಣ್ಣಿನ ಸುತ್ತ ಚರ್ಮ ಕಪ್ಪುಗಟ್ಟಿದೆ, ತಲೆ ಮತ್ತು ಎದೆಯ ಮೇಲೆ ಆಳವಾದ ಗಾಯಗಳಿವೆ. ಬಾಲಕಿಗೆ ಆಹಾರವನ್ನೂ ಕೊಟ್ಟಿಲ್ಲ ಹಿಮೋಗ್ಲೋಬಿನ್ ಮಟ್ಟವೂ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 15 ರಂದು ಮಗುವನ್ನು ಗಂಭೀರ ಸ್ಥಿತಿಯಲ್ಲಿ ತುರ್ತು ವಿಭಾಗಕ್ಕೆ ಕರೆತರಲಾಯಿತು, ಈಗಾಗಲೇ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅನ್ವರ್ ಅವರನ್ನು ಅಮಾನತುಗೊಳಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಆ ವಿಷಯಕ್ಕೆ ಜಮೀರ್-ಝೈದ್ ಮಧ್ಯೆ ಆಗಿದೆ ಸಾಕಷ್ಟು ಜಗಳ; ವಿವರಿಸಿದ ನಟ – Kannada News | Cult Hero Zaid Khan’s Film Passion Clashes with Zameer’s Business Push

ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಜನವರಿ 23) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿನಿಮಾ ಸಖತ್ ರಾ ಆಗಿರೋದು ಇದಕ್ಕೆ ಕಾರಣ. ಈಗ ಝೈದ್ ಖಾನ್ ಅವರು ತಂದೆ ಜೊತೆ ಆಗೋ ಕಿರಿಕ್​​​ಗಳ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ಜಗಳ ಆಗಿದೆಯಂತೆ.

ಸಾಮಾನ್ಯವಾಗಿ ರಾಜಕಾರಣಿಗಳ ಮಕ್ಕಳು ರಾಜಕೀಯದಲ್ಲೇ ಮುಂದುವರಿಯುವ ಪ್ರಯತ್ನ ಮಾಡುತ್ತಾರೆ. ಪಾಲಕರಿಗೂ ಇದೆ ಹಾರೈಕೆ ಇರುತ್ತದೆ. ಆದರೆ, ಜಮೀರ್​​ಗೆ ಇದು ಇಷ್ಟ ಇಲ್ಲ. ಸದ್ಯಕ್ಕೆ ಅವರು ಸಿನಿಮಾ ರಂಗದಲ್ಲಿ ನಟನಾಗಿ ಮಿಂಚುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಝೈದ್ ಖಾನ್ ಅವರು ತಂದೆಯ ಬಗ್ಗೆ ಮಾತನಾಡಿದ್ದಾರೆ.

‘ಕೆಲಸ ಎಂಬುದು ಬಂದರೆ ನಾನು ರಾಕ್ಷಸ. ನನ್ನ ನೂರರಷ್ಟು ಶ್ರಮ ಹಾಕುತ್ತೇನೆ . ಆದರೆ, ಕೆಲಸ ಇಲ್ಲ ಎಂದರೆ ನಾನು ಬೆಡ್ ಮೇಲೆ ಇರುತ್ತೇನೆ. ಯಾವಾಗಲೂ ಸುದ್ದಿಯಲ್ಲಿರಬೇಕು, ಕಾಣಿಸಿಕೊಳ್ಳುತ್ತಾ ಇರಬೇಕು ಎಂಬುದು ನಂಗೆ ಇಲ್ಲ. ನನಗೆ ನನ್ನದೇ ಆದ ಖಾಸಗಿ ಜೀವನ ಇದೆ’ ಎಂದಿದ್ದಾರೆ ಝದ್ ಖಾನ್.

ಇದನ್ನೂ ಓದಿ: ‘ನನ್ನ ಸಿನಿಮಾ ಯಾಕೆ ಕೊಲ್ತೀರ?’ ದುನಿಯಾ ವಿಜಿಯ ಪ್ರಶ್ನಿಸಿದ ಝೈದ್ ಖಾನ್, ಉತ್ತರ ಏನಿತ್ತು?

‘ಸಿನಿಮಾ ಇಂಡಸ್ಟ್ರಿಗೆ ನಾನು ಪ್ಯಾಷನ್​​ಗೆ ಬಂದಿದ್ದು. ನನ್ನ ಮನೆಯ ಬಿಸ್ನೆಸ್​​​ನ ನಡೆಸಿಕೊಂಡು ಹೋಗುವ ಜವಾಬ್ದಾರಿ ನನಗೆ ಇದೆ. ತಂದೆ ದುಡ್ಡು ಕೊಡ್ತಾರೆ ಎಂದು ಬದುಕೋದು ಜೀವನ ಅಲ್ಲ’ ಎಂದಿದ್ದಾರೆ ಅವರು.
‘ಸಿನಿಮಾ ಕರಿಯರ್​​ಗೆ ಹೋಗೋವಾಗ ತಂದೆ ಬಿಸ್ನೆಸ್ ಮಾಡುವಂತೆ ಸೂಚಿಸಿದ್ದರು. ದುಡ್ಡು ಬೇಕಿದ್ರೂ ಕೊಡ್ತೀನಿ ಎಂದರು. ನಾನು ರಾಜಕೀಯಕ್ಕೆ ಬರೋದು ಅವರಿಗೆ ಇಷ್ಟ ಇಲ್ಲ. ಬಿಸ್ನೆಸ್ ಮಾಡಬೇಕು ಎಂಬ ವಿಷಯಕ್ಕೆ ನನ್ನ ತಂದೆ ಹಾಗೂ ನನ್ನ ಮಧ್ಯೆ ಸಾಕಷ್ಟು ಜಗಳ ಆಗಿದೆ’ ಎಂದು ಝೈದ್ ಖಾನ್ ವಿವರಿಸಿದ್ದಾರೆ.

ತಂದೆಯ ಜೊತೆಗಿನ ಜಗಳದ ಬಗ್ಗೆ ವಿಡಿಯೋ ಅಂತ್ಯದಲ್ಲಿ ಝೈದ್ ಮಾತನಾಡಿದ್ದಾರೆ

ಝೈದ್ ಖಾನ್ ಅವರು ಚಿತ್ರರಂಗಕ್ಕೆ ಬರುತ್ತಾರೆ ಎಂದಾಗ ಅವರೇ ಎಲ್ಲವನ್ನೂ ಪ್ಲ್ಯಾನ್ ಮಾಡಿಕೊಂಡು ಬಂದರು. ಅವರಿಗೆ ತಂದೆಯ ಬೆಂಬಲ ಅಷ್ಟಾಗಿ ಸಿಕ್ಕಿಲ್ಲವಂತೆ. ತಂದೆ ಕೂಡ ಅವರ ಸಿನಿಮಾ ಕಾರ್ಯಕ್ರಮಗಳಿಗೆ ಬರೋದು ಕಡಿಮೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಾಧಕರಿಗೆ ಉದಯ ಟಿವಿ ಗೌರವ; ಶನಿವಾರ-ಭಾನುವಾರ ʼಉದಯ ಕನ್ನಡಿಗ-2025ʼ ಪುರಸ್ಕಾರ – Kannada News | Udaya Kannadiga 2025 Awards: Udaya TV Honors Kannada Achievers with different field

ಎಲ್ಲಾ ವಾಹಿನಿಗಳೂ ವೀಕ್ಷಕರನ್ನು ಸೆಳೆದುಕೊಳ್ಳಲು ಹೊಸ ಹೊಸ ಕಾರ್ಯಕ್ರಮ ಮಾಡೋದು ಗೊತ್ತೇ ಇದೆ. ಈಗ ಉದಯ ವಾಹಿನಿಯಲ್ಲಿ (Udaya TV) ಇದೇ ಶನಿವಾರ ಮತ್ತು ಭಾನುವಾರ ಸಂಜೆ 6ಕ್ಕೆ ʼಉದಯ ಕನ್ನಡಿಗ-2025ʼ ಪುರಸ್ಕಾರ ಪ್ರಸಾರ ಕಾಣಲಿದೆ. ಝಗಮಗಿಸುವ ವೇದಿಕೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ ಎಂಬುದು ವಿಶೇಷ.

ವರ್ಣರಂಜಿತ ಡ್ಯಾನ್ಸ್ ಕಾರ್ಯಕ್ರಮಗಳ ಜೊತೆ ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್‌, ಡಾಲಿ ಧನಂಜಯ್, ಪ್ರಕಾಶ್‌ ರಾಜ್‌, ಹಿರಿಯ ನಟ ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ ಬಿ.ಆರ್.ಲಕ್ಷ್ಮಣರಾವ್‌ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುವ ಕೆಲಸ ಇದರಲ್ಲಿ ಆಗಲಿದೆ.

ಗಾಯಕ ಸಂಜಿತ್‌ ಹೆಗ್ಡೆ, ಕಬ್ಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಕಾರ್ಗಿಲ್‌ ಯೋಧ ಕ್ಯಾಪ್ಟನ್‌ ನವೀನ್ ನಾಗಪ್ಪ, ಉದ್ಯಮಿ ಕಿಶೋರ್ ಕುಮಾರ್‌ ರೈ, ಪರಿಸರವಾದಿ ಶಿವಾನಂದ ಕಳವೆ, ಸುರಂಗ ಕೊರೆದು ನೀರು ಉಕ್ಕಿಸಿದ ಕೃಷಿಕ ಅಮೈ ಮಹಾಲಿಂಗ ನಾಯ್ಕ, ಐದು ರೂ.ವೈದ್ಯ ಎಂದೇ ಖ್ಯಾತರಾದ ಡಾ. ಶಂಕರೇ ಗೌಡ, ಪತ್ರಕರ್ತೆ ಶೋಭಾ ಮಳವಳ್ಳಿ, ಜಾನಪದ ಗಾಯಕ ಪದ್ಮಶ್ರೀ ವೆಂಕಟಪ್ಪ ಸುಗತೇಕರ್ ʻಉದಯ ಕನ್ನಡಿಗ – 2025ʼ ಪುರಸ್ಕಾರ ಸ್ವೀಕರಿಸಿದ ಸಾಧಕರ ಪಟ್ಟಿಯಲ್ಲಿ ಇದ್ದಾರೆ.

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಕಲಾವಿದರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌, ಬರಗೂರು ರಾಮಚಂದ್ರಪ್ಪ, ನಿರ್ಮಾಪಕ ಚಿನ್ನೇಗೌಡ, ಸಾ.ರಾ.ಗೋವಿಂದು, ನಟ ಶಶಿಕುಮಾರ್‌, ಓಂ ಸಾಯಿಪ್ರಕಾಶ್, ಕೆ. ಎಮ್‌. ಚೈತನ್ಯ, ಸಿಂಪಲ್‌ ಸುನಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಗಿರಿಜಾ ಲೋಕೇಶ್‌, ರಮೇಶ್‌ ಭಟ್‌, ಮಂಡ್ಯ ರಮೇಶ್‌, ರಾಗು ನಿಡುವಾಳ್‌, ಅರುಣ್‌ ಸಾಗರ್‌ ಅತಿಥಿಗಳಾಗಿ ಆಗಮಿಸಿದ್ದಾರೆ. ಇವರು ಸಾಧಕರಿಗೆ ʻಉದಯ ಕನ್ನಡಿಗʼ ಟ್ರೋಫಿ ನೀಡಿ ಗೌರವಿಸಲಿದ್ದಾರೆ.

ಇದನ್ನೂ ಓದಿ: ಧಮ್ಕಿಗಳಿಗೆ ಬಗ್ಗದೇ ‘ಸೂರ್ಯವಂಶ’ ಧಾರಾವಾಹಿ ಶುರು ಮಾಡಿದ ಅನಿರುದ್ಧ್; ಉದಯ ಟಿವಿಯಲ್ಲಿ ಪ್ರಸಾರ

ಶಿವರಾಜ್​​ಕುಮಾರ್ ಅವರು ಈ ಅವಾರ್ಡ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಕನ್ನಡ ಚಿತ್ರೋದ್ಯಮಕ್ಕೆ ದಶಕಗಳಿಂದ ಬೆಂಬಲವಾಗಿರುವ ಉದಯ ಟಿವಿ ನೀಡಿದ ಈ ಪುರಸ್ಕಾರ ಅತ್ಯಂತ ಮಹತ್ವದ್ದು’ ಎದರು. ಶಿವಾನಂದ ಕಳವೆ ರಾಕಿಂಗ್‌ ಸ್ಟಾರ್‌ ಯಶ್‌ ಅವರ ʻಯಶೋಮಾರ್ಗʼದ ವಿವರ ನೀಡಿದರು. ವೇದಿಕೆ ಮೇಲೆ ರಚನಾ ಇಂದರ್‌, ನಿಧಿ ಸುಬ್ಬಯ್ಯ, ಮೋಕ್ಷಾ ಕುಶಾಲ್, ಅನುಷಾ ರೈ, ಅಂಕಿತಾ ಅಮರ್‌, ಪೃಥ್ವಿ ಅಂಬರ್‌ ಡ್ಯಾನ್ಸ್ ಮಾಡಿ ವೀಕ್ಷಕರನ್ನು ರಂಜಿಸಿದ್ದಾರೆ. ವಾಸುಕಿ ವೈಭವ್‌, ಅಲೋಕ್‌ ಬಾಬು ಕಂಠಸಿರಿ ಕಾರ್ಯಕ್ರಮಕ್ಕೆ ಮೆರುಗು ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:49 am, Fri, 23 January 26

Source link

ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್ – Kannada News | Trump Warns Iran: US Military Deployment Escalates Tensions in Middle East

ವಾಷಿಂಗ್ಟನ್, ಜನವರಿ 23: ಇರಾನ್​ ಕಡೆಗೆ ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇತ್ತೀಚಿನ ಅಶಾಂತಿಯ ಸಂದರ್ಭದಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆಗಳು ಕಡಿಮೆಯಾಗುತ್ತಿದ್ದಂತೆ ಅವರ ಸ್ವರ ಮೃದುವಾಗಿದೆ.
ನೂರಾರು ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ಯೋಜನೆಯನ್ನು ಇರಾನ್ ಅಧಿಕಾರಿಗಳು ರದ್ದುಗೊಳಿಸಲು ವಾಷಿಂಗ್ಟನ್ ಒತ್ತಡ ಕಾರಣ ಎಂಬ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷರು ಪುನರಾವರ್ತಿಸಿದ್ದಾರೆ.

ಆರ್ಥಿಕ ಸಂಕಷ್ಟದ ಕುರಿತು ಡಿಸೆಂಬರ್ ಅಂತ್ಯದಲ್ಲಿ ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು, ನಂತರ ಅದು ರಾಷ್ಟ್ರವ್ಯಾಪಿ ಹರಡಿತ್ತು. ಎರಡು ದಿನಗಳ ಹಿಂದಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ಗೆ ಬಲವಾದ ಎಚ್ಚರಿಕೆ ನೀಡಿದ್ದರು. ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಡ್ರಂಪ್ ಹೇಳಿದ್ದಾರೆ.

ನ್ಯೂಸ್ ನೇಷನ್ ನ ‘ಕೇಟೀ ಪಾವ್ಲಿಚ್ ಟುನೈಟ್’ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಟ್ರಂಪ್ ಅವರ ಈ ಹೇಳಿಕೆ ಬಂದಿದೆ.
ಟ್ರಂಪ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಇರಾನ್ ಮಿಲಿಟರಿ ವಕ್ತಾರ ಜನರಲ್ ಅಬುಲ್ ಫಜಲ್ ಶೇಕರ್ಚಿ, ನಮ್ಮ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಕಡೆಗೆ ಯಾರಾದರೂ ಕೆಟ್ಟ ಉದ್ದೇಶದಿಂದ ಕೈ ಚಾಚಿದರೆ, ನಾವು ಆ ಕೈಯನ್ನು ಕತ್ತರಿಸುವುದಲ್ಲದೆ, ಅವರ ಇಡೀ ದೇಶವನ್ನೇ ಸುಟ್ಟು ಹಾಕುತ್ತೇವೆ ಎಂದು ಟ್ರಂಪ್‌ಗೆ ತಿಳಿದಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ನನ್ನನ್ನು ಕೊಲೆ ಮಾಡಿದ್ರೆ, ಇರಾನ್​ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್

ಖಮೇನಿಯವರ ಸುಮಾರು 40 ವರ್ಷಗಳ ಆಡಳಿತವನ್ನು ಕೊನೆಗೊಳಿಸುವ ಬಗ್ಗೆ ಮಾತನಾಡಿದ ಟ್ರಂಪ್ ಅವರ ಹೇಳಿಕೆಯ ನಂತರ ಈ ಎಚ್ಚರಿಕೆ ಬಂದಿದೆ.ಟ್ರಂಪ್ ಈ ಹಿಂದೆ ಇರಾನ್‌ಗೆ ಎಚ್ಚರಿಕೆ ನೀಡಿದ್ದರು ಮತ್ತು ಇರಾನ್ ತನ್ನ ವಿರುದ್ಧ ಯಾವುದೇ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶಮಾಡುವಂತೆ ತಮ್ಮ ಸಲಹೆಗಾರರಿಗೆ ಸೂಚಿಸಿದ್ದರು.

ಖಮೇನಿ ಅವರನ್ನು ಅಸ್ವಸ್ಥ ವ್ಯಕ್ತಿ ಎಂದು ಬಣ್ಣಿಸಿರುವ ಅವರು, ಅವರು ತನ್ನ ದೇಶವನ್ನು ಸರಿಯಾಗಿ ನಡೆಸಬೇಕು ಮತ್ತು ಜನರನ್ನು ಕೊಲ್ಲುವುದನ್ನು ನಿಲ್ಲಿಸಬೇಕು, ಇರಾನ್‌ಗೆ ಹೊಸ ನಾಯಕತ್ವ ಬೇಕು ಎಂದು ಹೇಳಿದ್ದಾರೆ. ಡಿಸೆಂಬರ್ 28 ರಂದು ಪ್ರಾರಂಭವಾದ ಪ್ರತಿಭಟನೆಗಳ ನಂತರ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಇರಾನ್‌ನ ಕಳಪೆ ಆರ್ಥಿಕತೆಯ ವಿರುದ್ಧ ಈ ಪ್ರತಿಭಟನೆಗಳನ್ನು ಪ್ರಾರಂಭಿಸಲಾಯಿತು. ತಿಭಟನೆಗಳ ನಡುವೆ ಅಮೆರಿಕದ ಮಿಲಿಟರಿಯೂ ಸಕ್ರಿಯವಾಗಿದ್ದು, ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ನಿರಂತರ ಏರಿಕೆಗೆ ಕಾರಣವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka for next 4 days

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ

ಬೆಂಗಳೂರು, ಜನವರಿ 23: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version