ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ – Kannada News | Zaid Khan talks about his love story here is the video

ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ನಾಳೆ (ಜನವರಿ 23) ಬಿಡುಗಡೆ ಆಗಲಿದೆ. ಅಪ್ಪಟ ಪ್ರೇಮಕತೆಯುಳ್ಳ ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಸಿನಿಮಾದ ಪ್ರಚಾರವನ್ನು ಝೈದ್ ಖಾನ್ ಅವರು ಬಲು ಅಬ್ಬರದಿಂದ ಮಾಡುತ್ತಿದ್ದಾರೆ. ಟಿವಿ9 ಜೊತೆಗೆ ತಮ್ಮ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿರುವ ನಟ ಝೈದ್ ಖಾನ್ ಅವರು ತಮ್ಮ ಹಳೆಯ ಲವ್ ಸ್ಟೋರಿಯನ್ನೂ ಸಹ ಹಂಚಿಕೊಂಡಿದ್ದಾರೆ. ತಮ್ಮ ಹಳೆಯ ಲವ್ ಸ್ಟೋರಿ ಹೇಳಿಕೊಂಡ ಝೈದ್ ಖಾನ್, ಒಬ್ಬ ಹುಡುಗಿಯಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ಸಹ ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ.

‘ಮುದ್ದು ಗುಮ್ಮ’ ಎಂಬ ‘ಕರಾವಳಿ’ ಸಿನಿಮಾದ ಹಾಡ ಬಿಡುಗಡೆ ಆಗಿದ್ದು, ಹಾಡಿಗೆ ಖ್ಯಾತ ಗಾಯಕ ಸಿದ್ ಶ್ರೀರಾಮ್ ದನಿಯಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್​​ನಲ್ಲಿ ಹಾಡು ಬಿಡುಗಡೆ ಆಗಿದ್ದು, ಹಾಡಿನ ಜೊತೆಗೆ ವಿಡಿಯೋ ಸಹ ಗಮನ ಸೆಳೆದಿದೆ. ಮನಮೋಹಕ ಹಿನ್ನೆಲೆಯಲ್ಲಿ ಹಾಡಿನ ಚಿತ್ರೀಕರಣವನ್ನು ನಿರ್ದೇಶಕ ಗುರುದತ್ ಗಣಿಗ ಮಾಡಿರುವುದು ವಿಡಿಯೋ ಮೂಲಕ ತಿಳಿಯುತ್ತಿದೆ. ಈಗ ಬಿಡುಗಡೆ ಆಗಿರುವ ರೊಮ್ಯಾಂಟಿಂಕ್ ಹಾಡಿನಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ನಟಿಸಿದ್ದು ಇವರ ಜೋಡಿ ಮುದ್ದಾಗಿ ಕಾಣಿಸಿಕೊಂಡಿದೆ.

ಇದನ್ನೂ ಓದಿ:ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿ ರಕ್ಷಿತಾ ಸಾಧನೆ

‘ಕರಾವಳಿ’ ಸಿನಿಮಾಕ್ಕೆ ಸಚಿನ್ ಬಸ್ರೂರು ಸಂಗೀತ ನೀಡಿದ್ದು, ಈಗ ಬಿಡುಗಡೆ ಆಗಿರುವ ‘ಮುದ್ದು ಗುಮ್ಮ’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ಟೀಸರ್ ಮೂಲಕ ಭಾರಿ ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ‘ಕರಾವಳಿ’ ಈಗ ಹಾಡು ರಿಲೀಸ್ ಮಾಡಿ ನಿರೀಕ್ಷೆಯನ್ನು ಹೆಚ್ಚಿಸಿದೆ. ‘ಕರಾವಳಿ’ ಹೆಸರೆ ಹೇಳುತ್ತಿರುವಂತೆ ಕರಾವಳಿ ಭಾಗದ ಸಂಸ್ಕೃತಿ, ಸೊಗಡು, ಆಚರಣೆಗಳ ಬಗೆಗಿನ ಕತೆ ಹೊಂದಿರುವ ಸಿನಿಮಾ ಇದಾಗಿದೆ. ಪ್ರಜ್ವಲ್ ದೇವರಾಜ್ ಜೊತೆಗೆ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಮಾವೀರ ಎನ್ನುವ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಸಿನಿಮಾನಲ್ಲಿ ಹಲವು ಪವರ್​​ಫುಲ್ ಪಾತ್ರಗಳಿದ್ದು ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಅವರುಗಳು ನಟಿಸಿದ್ದಾರೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಔಷಧಿಗಳ ಬಳಕೆಗೆ ಹೊಸ ರೂಲ್ಸ್‌: ನಕಲಿ​​ ಹಾವಳಿಗೆ ಬೀಳುತ್ತಾ ಬ್ರೇಕ್​​​? – Kannada News | Karnataka health department making new rules to stop Fake Medicines

ಬೆಂಗಳೂರು, ಜನವರಿ 22: ಸದ್ಯ ದಿನಮಾನಗಳಲ್ಲಿ ಯಾವುದೇ ವಸ್ತು ತೆಗೆದುಕೊಂಡರು ಅದರಲ್ಲಿ ನಕಲಿ ಎನ್ನುವುದು ಇರುತ್ತೆ. ಅದರಲ್ಲೂ ಫಾರ್ಮಸಿ ಕ್ಷೇತ್ರದಲ್ಲಂತೂ ಫೇಕ್ ಔಷಧಿಗಳ (Medicines) ಹಾವಳಿ ಹೆಚ್ಚಾಗಿದೆ‌. ಇದಕ್ಕೆ ಕಡಿವಾಣ ಯಾವಾಗ ಬೀಳುತ್ತೆ ಎನ್ನುತ್ತಿರುವ ರೋಗಿಗಳಿಗೆ ಇದೀಗ ಆರೋಗ್ಯ ಇಲಾಖೆ (health department) ಗುಡ್ ನ್ಯೂಸ್ ಕೊಟ್ಟಿದೆ. ಔಷಧಿಗಳ ಬಳಕೆಯಲ್ಲಿ ಬದಲಾವಣೆ ತರುವುದಕ್ಕೆ ಮುಂದಾಗಿದೆ.

ಔಷಧಗಳ ಬಳಕೆಯಲ್ಲಿ ಅನೇಕ ಬದಲಾವಣೆ

ಮೆಡಿಕಲ್ ಫೀಲ್ಡ್‌ನಲ್ಲಿ ಫೇಕ್ ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ಉತ್ಪಾದನೆ ಹಾಗೂ ಮಾರಾಟದ ಪ್ರಕರಣಗಳು ಹೆಚ್ಚಾಗಿವೆ. ಈಗಾಗಲೇ ಆರೋಗ್ಯ ಇಲಾಖೆಯಿಂದ‌ ಫೇಕ್ ಹಾಗೂ ಕಳಪೆ ಗುಣಮಟ್ಟದ ಔಷಧಗಳನ್ನ ಪತ್ತೆ ಹಚ್ಚಿ ಅವುಗಳ ಬ್ಯಾಚ್ ನಂಬರ್ ಸಹಿತವಾಗಿ ಬ್ಯಾನ್ ಮಾಡಲಾಗುತ್ತಿದ್ದರೂ ಹೊಸ ಫೇಕ್ ಔಷಧಗಳು ತಲೆ ಎತ್ತುತ್ತಲಿವೆ. ಈ ಬೆನ್ನಲ್ಲೇ ಇದೀಗ ಮತ್ತಷ್ಟು ಔಷಧಗಳ ಬಳಕೆಯಲ್ಲಿ ಅನೇಕ ಬದಲಾವಣೆ ತರುವುದಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್​ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ

ಫೇಕ್‌ ಔಷಧಗಳನ್ನ ಪತ್ತೆ ಹಚ್ಚಲು ಕ್ಯೂಆರ್​ ಕೋಡ್ ಮೊರೆ ಹೋಗುತ್ತಿದೆ. ಆರೋಗ್ಯ ಇಲಾಖೆ ನಕಲಿ ಔಷಧಿಗಳ ಪತ್ತೆಹಚ್ಚಲು ಹಾಗೂ ಬ್ರೇಕ್ ಹಾಕಲು ನಯಾ ಪ್ಲಾನ್ ಮಾಡಿದೆ. ಔಷಧಗಳ ಪ್ಯಾಕ್‌ ಮೇಲೆ ಬಾರ್‌ಕೋಡ್‌ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಲು ಮುಂದಾಗಿದೆ. ಆ ಮೂಲಕ ಟ್ರ್ಯಾಕ್ ಮತ್ತು ಟ್ರೇಸ್ ಮಾಡಲು ಮುಂದಾಗಿದೆ. ಔಷಧಿಗಳನ್ನು ಬಾರ್ ಕೋಡ್, ಕ್ಯೂಆರ್ ಕೋಡ್ ವ್ಯಾಪ್ತಿಯಲ್ಲಿ ತಂದು ನಕಲಿ ಔಷಧಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡ್ತಿದ್ದಂತೆಯೇ ಔಷಧಿಗಳ ಬ್ಯಾಚ್, ಇದು ಯಾವಾಗ ತಯಾರಿಸಿದ್ದು, ಯಾವ ಕಂಪನಿ, ಇದರಲ್ಲಿ ಬಳಕೆ ಮಾಡಿರುವ ವಸ್ತುಗಳು ಎಷ್ಟು ಪ್ರಮಾಣದಲ್ಲಿದೆ ಹಾಗೂ ಎಕ್ಸ್ಪೆರಿ ಡೇಟ್ ಮತ್ತು ಇದರ ಬಳಕೆಯ ಉಪಯೋಗಗಳು ಹಾಗೂ ಸೈಡ್ ಎಫೆಕ್ಟ್ ಏನಿದೆ ಎಂಬುದನ್ನ ಸಂಪೂರ್ಣವಾಗಿ ಮಾಹಿತಿ ದೊರೆಯುತ್ತದೆ.

ಫಾರ್ಮಾ ಕ್ಷೇತ್ರಕ್ಕೆ ಕೋಡಿಂಗ್ ವ್ಯವಸ್ಥೆ

ಅಷ್ಟೇ ಅಲ್ಲದೆ ಪ್ರತಿ ಔಷಧಗಳಿಗೂ ಬಾರ್ ಕೋಡ್ ಹಾಕುವುದರಿಂದ ಪ್ರತಿಯೊಬ್ಬರು ಸುಲಭವಾಗಿ ಔಷಧಗಳ ಉತ್ಪಾದಕ ಕಂಪನಿಯ ಮಾಹಿತಿ ಪಡೆಯಬಹುದಾಗಿದೆ. ಪ್ರಾರಂಭ ಹಂತದಲ್ಲಿ ಔಷಧಿಗಳಿಗೆ ಕ್ಯೂಆರ್​​​​ ಕೋಡ್ ಬಳಸಿ ನಂತರ ಇಡೀ ಫಾರ್ಮಾ ಕ್ಷೇತ್ರಕ್ಕೆ ಕೋಡಿಂಗ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಎಲ್ಲಾ ರಾಜ್ಯಗಳ ಆರೋಗ್ಯ ಇಲಾಖೆಯಿಂದ ಈ ಬಗ್ಗೆ ಮಾಹಿತಿಯನ್ನ ಕೂಡ ಪಡೆಯಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ

ಒಟ್ಟಿನಲ್ಲಿ ನಕಲಿ ಔಷಧಿಗಳಿಗೆ ಕಡಿವಾಣ ಹಾಕುವುದಕ್ಕೆ ಇಲಾಖೆ ಹೊಸ ಮಾದರಿಯ ರೂಲ್ಸ್ ಜಾರಿಗೆ‌ ತರುತ್ತಿದ್ದು, ಇನ್ಮುಂದೆ ಔಷಧಿಗಳ ಸಂಪೂರ್ಣ ಮಾಹಿತಿಯನ್ನ ರೋಗಿಗಳೇ ಪಡೆಯಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹೊಟ್ಟೆಪಾಡಿಗಾಗಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಹೂ ಮಾರುತ್ತಿದ್ದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ – Kannada News | 11 year old girl kidnapped And physically assaulted in central Delhi, rickshaw driver Arrested

ನವದೆಹಲಿ, (ಜನವರಿ 22): ಹೊಟ್ಟೆಪಾಡಿಗಾಗಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಹೂವು ಮಾರುತ್ತಿದ್ದ  ಪುಟ್ಟ ಬಾಲಕಿಯನ್ನು (Girl) ಕಾಮುಕನೋರ್ವ ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.  ಜನವರಿ 11ರಂದು ಕೇಂದ್ರ ದೆಹಲಿ(New Delhi) ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗುಲಾಬಿ ಹೂ ಮಾರುತ್ತಿದ್ದ 11 ವರ್ಷದ ಬಾಲಕಿಯನ್ನು ಆಟೋ ಚಾಲಕನೋರ್ವ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ.  ಬಳಿಕ ಬಾಲಕಿಗೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಬಳಿಕ ಪೊಲೀಸರು 300 ಸಿಸಿಟಿವಿ ಪರಿಶೀಲಿಸಿ ಕಾಮುಕನ ಹೆಡೆಮುರಿ ಕಟ್ಟುವಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 40 ವರ್ಷದ ದುರ್ಗೇಶ್ ಬಂಧಿತ ಕಾಮುಕ.

ಹೂ ಮಾರುವ ಬಾಲಕಿ ಮೇಲೆ ಬಿದ್ದಿತ್ತು ಕಾಮುಕನ ಕಣ್ಣು

ಜನವರಿ 11 ರಂದು ದೆಹಲಿ ಪ್ರಸಾದ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪುಟ್ಟ ಹುಡುಗಿ ಗುಲಾಬಿ ಹೂ ಮಾರುತ್ತಾ ಸಿಗ್ನಲ್ ಬಳಿ ನಿಂತಿರುವುದನ್ನು ಆರೋಪಿ ದುರ್ಗೇಶ್ ನೋಡಿದ್ದಾನೆ. ಬಳಿಕ ತನ್ನ ಆಟೋದಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ಬಾಲಕಿ ಬಳಿ ಹೋಗಿದ್ದು, ಎಲ್ಲಾ ಹೂವುಗಳನ್ನು ಮಾರಲು ಸಹಾಯ ಮಾಡುವುದಾಗಿ ನಂಬಿಸಿ ಬಾಲಕಿಯನ್ನು ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು

ವಿಚಾರಣೆ ವೇಳೆ ಆರೋಪಿ ದುರ್ಗೇಶ್ , ಈ ಹಿಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಹುಡುಗಿಯನ್ನು ಗಮನಿಸಿ ಅಪಹರಣಕ್ಕೆ ಪ್ಲ್ಯಾನ್ ರೂಪಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ. ಕಾಮುಕ ತಪ್ಪೊಪ್ಪಿಗೆಯ ಬಳಿಕ ಪೊಲೀಸರು ರಕ್ತದ ಕಲೆಗಳಿರುವ ಬಟ್ಟೆಗಳು ಮತ್ತು ಇತರೆ ಸಾಕ್ಷಿಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಮಗುವಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತಿದೆ.

300 ಸಿಸಿಟಿವಿ ಕ್ಯಾಮೆರಾ ಜಾಲಾಡಿದ ಖಾಕಿ

ಆರೋಪಿಯ ಪತ್ತೆಗಾಗಿ ಪೊಲೀಸರು ಸುಮಾರು 15 ಮಾರ್ಗಗಳಲ್ಲಿ ಅಳವಡಿಸಲಾದ ಸುಮಾರು 300 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಒಂದು ದೃಶ್ಯದಲ್ಲಿ ಹುಡುಗಿ ಆಟೋ ಹತ್ತುತ್ತಿರುವುದು ಕಂಡುಬಂದಿದೆ. ನಂತರ ಆ ವಾಹನದ ನೋಂದಣಿ ಸಂಖ್ಯೆಯನ್ನು ಪತ್ತೆಹಚ್ಚಲಾಯಿತು. ಇದು ಅದೇ ದಿನ ಆರೋಪಿಯನ್ನು ಗುರುತಿಸಿ ಬಂಧಿಸಲು ಸಹಾಯವಾಗಯ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ಅಪಹರಣ ಮತ್ತು ಅತ್ಯಾಚಾರ, ಪೋಕ್ಸೊ ಕಾಯ್ದೆ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಾಳೆಹಣ್ಣು vs ಖರ್ಜೂರ: ಆಯಾಸ ಕಡಿಮೆ ಮಾಡಿ ತ್ವರಿತ ಶಕ್ತಿ ಪಡೆಯಲು ಇವೆರಡರಲ್ಲಿ ಯಾವುದು ಒಳ್ಳೆಯದು? – Kannada News | Bananas vs. Dates: Nutritional Comparison for Energy

Bananas Vs. Dates

ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಆಯಾಸ, ನಿಶಕ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾದರೆ ಮಲಗಿ ನಿದ್ರೆ ಮಾಡುವ ವರೆಗೂ ನಮ್ಮ ಉತ್ಸಾಹವನ್ನು ಕುಂದಿಸಿಬಿಡುತ್ತದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸುಲಭವಾದ ಮಾರ್ಗ ಕಂಡುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ರೀತಿ ಕಂಡುಬರುವ ಆಯಾಸದಿಂದ ಮುಕ್ತಿ ಕಂಡುಕೊಳ್ಳಲು ಜೊತೆಗೆ ವ್ಯಾಯಾಮ ಅಥವಾ ಇನ್ನಿತರ ಕೆಲಸ ಮಾಡಲು ತ್ವರಿತ ಶಕ್ತಿ ಪಡೆಯಲು ಅನೇಕರು ಬಾಳೆಹಣ್ಣು (Bananas) ಅಥವಾ ಖರ್ಜೂರವನ್ನು ಸೇವನೆ ಮಾಡುತ್ತಾರೆ. ಆದರೆ ಇವುಗಳಲ್ಲಿ ಯಾವುದು ಉತ್ತಮ ಮತ್ತು ಯಾವ ಸಮಯಕ್ಕೆ ಯಾವುದನ್ನು ಸೇವನೆ ಮಾಡಬೇಕು ಎಂದು ತಿಳಿದಿದ್ದರೆ ಇದರಿಂದ ದ್ವಿಗುಣ ಪ್ರಯೋಜನ ಪಡೆಯಬಹುದು. ಹಾಗಾದರೆ ಈ ಎರಡು ಆಹಾರಗಳ ನಡುವೆ ಇರುವ ವ್ಯತಾಸವೇನು, ಯಾವುದು ಆರೋಗ್ಯಕ್ಕೆ ಒಳ್ಳೆಯದು ತಿಳಿದುಕೊಳ್ಳಿ.

ಒಂದು ಬಾಳೆಹಣ್ಣು ಸುಮಾರು 105 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌, ಪೊಟ್ಯಾಸಿಯಮ್, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಬಾಳೆಹಣ್ಣಿಗೆ ಹೋಲಿಸಿದರೆ, ಖರ್ಜೂರವು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಕೇವಲ ಮೂರು ಅಥವಾ ನಾಲ್ಕು ಖರ್ಜೂರ ತಿನ್ನುವುದರಿಂದ ನಿಮಗೆ 90 ರಿಂದ 120 ಕ್ಯಾಲೋರಿಗಳಷ್ಟು ಶಕ್ತಿ ಸಿಗುತ್ತದೆ. ಅಷ್ಟೇಅಲ್ಲ, ಇವು ಫೈಬರ್, ಕಬ್ಬಿಣ ಮತ್ತು ಮೆಗ್ನೀಸಿಯಮ್‌ನಿಂದಲೂ ಸಮೃದ್ಧವಾಗಿದೆ. ದೀರ್ಘಕಾಲ ವ್ಯಾಯಾಮ ಮಾಡಲು ಅಥವಾ ದಿನವಿಡೀ ಚೈತನ್ಯಶೀಲರಾಗಿ ಕೆಲಸ ಮಾಡಲು ಬಯಸುವವರಿಗೆ, ಬಾಳೆಹಣ್ಣು ಒಳ್ಳೆಯದು. ಅವುಗಳಲ್ಲಿರುವ ನಾರು ಸಕ್ಕರೆಯನ್ನು ನಿಧಾನವಾಗಿ ರಕ್ತಕ್ಕೆ ಬಿಡುಗಡೆ ಮಾಡುತ್ತದೆ, ಹಾಗಾಗಿ ದೀರ್ಘಕಾಲದವರೆಗೆ ಶಕ್ತಿ ಒದಗಿಸಲು ಸಹಾಯ ಮಾಡುತ್ತದೆ.

ತ್ವರಿತ ಶಕ್ತಿ ಪಡೆಯಯಲು ಯಾವುದು ಒಳ್ಳೆಯದು?

ವ್ಯಾಯಾಮ ಮಾಡಿ ಬಂದ ನಂತರ ನೀವು ತುಂಬಾ ದಣಿದಿದ್ದರೆ ಅಥವಾ ಆಲಸ್ಯ ಕಾಡುತ್ತಿದ್ದರೆ ಖರ್ಜೂರ ಸೇವನೆ ಮಾಡುವುದು ಒಳ್ಳೆಯದು. ಏಕೆಂದರೆ ಅವುಗಳಲ್ಲಿ ಹೆಚ್ಚಿನ ಪ್ರಮಾಣದ ನೈಸರ್ಗಿಕ ಸಕ್ಕರೆ ಅಂಶವಿದ್ದು ದೇಹಕ್ಕೆ ತಕ್ಷಣದ ಗ್ಲೂಕೋಸ್ ಅನ್ನು ಒದಗಿಸುತ್ತದೆ. ಅದಕ್ಕಾಗಿಯೇ ಉಪವಾಸ ಮಾಡುವವರು ಖರ್ಜೂರಕ್ಕೆ ಆದ್ಯತೆ ನೀಡುತ್ತಾರೆ. ಆದರೆ ಮಧುಮೇಹ ಇರುವವರು ಖರ್ಜೂರ ಸೇವನೆ ಮಾಡುವುದನ್ನು ಆದಷ್ಟು ನಿಯಂತ್ರಿಸಬೇಕು. ಸ್ನಾಯು ಸೆಳೆತದಿಂದ ಬಳುತ್ತಿರುವವರು ಕೂಡ ಖರ್ಜೂರ ಸೇವನೆ ಮಾಡಬಹುದು. ಇದು ಮೆಗ್ನೀಸಿಯಮ್ ಅಂಶದಿಂದ ಸಮೃದ್ಧವಾಗಿದ್ದು ಸ್ನಾಯುಗಳು ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಬಾಳೆಹಣ್ಣನ್ನು ಈ ಸಮಯದಲ್ಲಿ ತಿನ್ನುವುದರಿಂದ ಸಿಗುತ್ತೆ ಊಹಿಸಲೂ ಸಾಧ್ಯವಾಗದ ಪ್ರಯೋಜನ!

ಯಾವುದು ಉತ್ತಮ?

ಎರಡೂ ಕೂಡ ದೇಹದ ಅಗತ್ಯಗಳಿಗೆ ಅನುಗುಣವಾಗಿ ಒಳ್ಳೆಯದು. ನೀವು ದೀರ್ಘಕಾಲ ಕೆಲಸ ಮಾಡಲು ಬಯಸಿದಲ್ಲಿ ಬಾಳೆ ಹಣ್ಣುಗಳನ್ನು ಸೇವನೆ ಮಾಡಿ. ತಕ್ಷಣ ಶಕ್ತಿ ಪಡೆಯಲು ಖರ್ಜೂರ ಸೇವನೆ ಮಾಡಿ. ಆದರೆ ಎಲ್ಲವೂ ಮಿತವಾಗಿರಲಿ. ಯಾವುದೇ ಆಗಲಿ ಅತಿಯಾದರೆ ಒಳ್ಳೆಯದಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup 2026: ದಕ್ಷಿಣ ಆಫ್ರಿಕಾ ತಂಡದಿಂದ ಇಬ್ಬರು ಔಟ್; ಬದಲಿಯಾಗಿ ಇಬ್ಬರ ಆಯ್ಕೆ – Kannada News | 2026 T20 World Cup: South Africa’s Injury Crisis and Squad Changes Revealed

2026 ರ ಟಿ20 ವಿಶ್ವಕಪ್​ಗಾಗಿ (T20 World Cup 2026) ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಇದೆಲ್ಲದರ ನಡುವೆ ಕೆಲವು ತಂಡಗಳಿಗೆ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಟಗಾರರ ಗಾಯದಿಂದ ಸಂಕಷ್ಟಕ್ಕೆ ಸಿಲುಕಿರುವ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾವೂ ಸೇರಿದೆ. ಇದೀಗ ಆ ಪಟ್ಟಿಗೆ ಕಳೆದ ಬಾರಿಯ ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡ ಸೇರಿಕೊಂಡಿದೆ. ಗಾಯದ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಆಟಗಾರರು ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ಅವರ ಬದಲಿಯಾಗಿ ಮತ್ತಿಬ್ಬರು ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿದೆ.

ಆಫ್ರಿಕಾ ತಂಡದಲ್ಲಿ 2 ಬದಲಾವಣೆ

2026 ರ ಟಿ20 ವಿಶ್ವಕಪ್‌ಗೂ ಮುನ್ನ ದಕ್ಷಿಣ ಆಫ್ರಿಕಾ ದೊಡ್ಡ ಹಿನ್ನಡೆ ಅನುಭವಿಸಿದೆ. ಟೋನಿ ಡಿ ಜಾರ್ಜಿ ಮತ್ತು ಡೊನೊವನ್ ಫೆರೇರಾ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಡಿಸೆಂಬರ್‌ನಲ್ಲಿ ಭಾರತ ಪ್ರವಾಸದ ಸಮಯದಲ್ಲಿ ಟೋನಿ ಡಿ ಜಾರ್ಜಿ ಅವರಿಗೆ ಮಂಡಿರಜ್ಜು ನೋವು ಕಾಣಿಸಿಕೊಂಡಿತು, ಅದರಿಂದ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇತ್ತ ಎಸ್‌ಎ 20 ಲೀಗ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಡೊನೊವನ್ ಫೆರೇರಾ ಕೂಡ ಭುಜದ ಗಾಯಕ್ಕೆ ತುತ್ತಾಗಿದ್ದರು. ಪರಿಣಾಮವಾಗಿ, ಇಬ್ಬರೂ ಆಟಗಾರರು ಟಿ20 ವಿಶ್ವಕಪ್​ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.

ಈ ಇಬ್ಬರು ಆಟಗಾರರಿಗೆ ಬದಲಿಯಾಗಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಯಾನ್ ರಿಕಲ್ಟನ್ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಪ್ರಸ್ತುತ ಉತ್ತಮ ಫಾರ್ಮ್​ನಲ್ಲಿರುವ ರಿಕಲ್ಟನ್ SA20 ಲೀಗ್​ನಲ್ಲಿ 156.01 ಸ್ಟ್ರೈಕ್ ರೇಟ್‌ನೊಂದಿಗೆ 337 ರನ್ ಗಳಿಸಿದ್ದಾರೆ.

ಈ ಆಟಗಾರರು ಕೂಡ ಗಾಯಗೊಂಡಿದ್ದಾರೆ

ದಕ್ಷಿಣ ಆಫ್ರಿಕಾದ ಚಿಂತೆಗಳು ಇನ್ನೂ ದೂರವಾಗಿಲ್ಲ. ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ ಮತ್ತು ಡೆವಾಲ್ಡ್ ಬ್ರೆವಿಸ್ ಕೂಡ ಇಂಜುರಿಗೆ ತುತ್ತಾಗಿದ್ದು, ಫಿಟ್‌ನೆಸ್ ಪರೀಕ್ಷೆಗಳಿಗೆ ಒಳಗಾಗುತ್ತಿದ್ದಾರೆ. ಪರಿಣಾಮವಾಗಿ, ತಂಡದಲ್ಲಿ ಮತ್ತಷ್ಟು ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಐಸಿಸಿ ನಿಯಮಗಳ ಪ್ರಕಾರ, ಜನವರಿ 31 ರವರೆಗೆ ಪೂರ್ವಾನುಮತಿ ಇಲ್ಲದೆ ತಂಡ ಬದಲಾವಣೆಗಳನ್ನು ಮಾಡಬಹುದು. ಅದರ ನಂತರ, ಯಾವುದೇ ಬದಲಾವಣೆಗಳನ್ನು ಮಾಡುವ ಮೊದಲು ಐಸಿಸಿ ಅನುಮೋದನೆ ಅಗತ್ಯವಿರುತ್ತದೆ.

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಮಾರ್ಕೊ ಯಾನ್ಸೆನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಮಫಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಅನ್ರಿಚ್ ನೋಕಿಯಾ, ಕಗಿಸೊ ರಬಾಡಾ, ರಯಾನ್ ರಿಕೆಲ್ಟನ್, ಜೇಸನ್ ಸ್ಮಿತ್ ಮತ್ತು ಟ್ರಿಸ್ಟಾನ್ ಸ್ಟಬ್ಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಬಿಎಲ್​ನಿಂದ ಹೊರಬಿದ್ದ ಬಾಬರ್ ಪ್ರತಿ ರನ್​ಗೆ ಪಡೆದ ಸಂಭಾವನೆ ಎಷ್ಟು ಲಕ್ಷ ಗೊತ್ತಾ? – Kannada News | Babar Azam’s BBL Debacle: Sydney Sixers Paid 1.26 Lakh Per Run for Star’s Slow Play

ಬಿಗ್ ಬ್ಯಾಷ್ ಲೀಗ್​ನಲ್ಲಿ ಇದೇ ಮೊದಲ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಬಾಬರ್ ಪ್ರದರ್ಶನ ತೀರ ಕಳಪೆಯಾಗಿತ್ತು. ಪ್ರತಿ ರನ್ ಗಳಿಸಲು ಬಾಬರ್ ಹರಸಾಹಸ ಪಡಬೇಕಾಯಿತು. ಕಳಪೆ ಫಾರ್ಮ್​ ಜೊತೆಗೆ ರಾಷ್ಟ್ರೀಯ ಕರ್ತವ್ಯದಿಂದಾಗಿ ಬಾಬರ್ ಸೀಸನ್ ಮಧ್ಯದಲ್ಲೇ ಲೀಗ್ ತೊರೆದಿದ್ದಾರೆ. ಪರಿಣಾಮವಾಗಿ, ಬಾಬರ್ ಗಳಿಸಿದ ಪ್ರತಿ ರನ್​ಗೆ ಸಿಡ್ನಿ ಸಿಕ್ಸರ್ಸ್‌ ಲಕ್ಷಾಂತರ ರೂಗಳ ವೇತನ ನೀಡಬೇಕಾಗಿ ಬಂದಿದೆ.

Source link

ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ: ಓಡೋಡಿ ಬಂದು ಜೀವ ಉಳಿಸಿತು ಖಾಕಿ! – Kannada News | Nelamangala Domestic Violence: Police Rescue Wife from Machete Assault

ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿದ ಪೊಲೀಸ್​

ನೆಲಮಂಗಲ, ಜನವರಿ 22: ದಂಪತಿ (couple) ಜಗಳದಲ್ಲಿ ಮಚ್ಚಿನಿಂದ ಹಲ್ಲೆಗೊಳಗಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ನೆಲಮಂಗಲ ಗ್ರಾಮಾಂತರ ಪೊಲೀಸರಿಂದ (police) ಒಂದು ಜೀವ ಉಳಿದಿದೆ. ನೆಲಮಂಗಲ ತಾಲೂಕಿನ ಗೋವಿಂದಪುರದಲ್ಲಿ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಡೆದದ್ದೇನು?

ನಗ್ಮಾ (25) ಹಲ್ಲೆಗೊಳಾಗಾದ ಪತ್ನಿ. ಸಲ್ಮಾನ್ (26) ಮಚ್ಚಿನಿಂದ ಹಲ್ಲೆ ಮಾಡಿದ ಪತಿ. ಬಳ್ಳಾರಿ ಮೂಲದ ದಂಪತಿ ಎರಡು ವರ್ಷದ ಹಿಂದೆ ಕೆಲಸ ಹರಸಿ ನೆಲಮಂಗಲಕ್ಕೆ ಬಂದಿದ್ದರು. ನೆಲಮಂಗಲ ತಾಲೂಕಿನ ಗೋವಿಂದಪುರದಲ್ಲಿ ವಾಸವಿದ್ದರು.

ಇದನ್ನೂ ಓದಿ: ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ಏರ್​ಲೈನ್ಸ್ ಸಿಬ್ಬಂದಿಯ ಬಂಧನ

ಇಂದು ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ಈ ವೇಳೆ ಸಲ್ಮಾನ್ ಮಚ್ಚಿನಿಂದ ನಗ್ಮಾಳ ಕೊಲೆ ಮಾಡಲು ಮುಂದಾಗಿದ್ದ. ಘಟನೆ ವೇಳೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ನಗ್ಮಾ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಳು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಕೂಡಲೇ ಪೊಲೀಸ್ ಜೀಪ್​​ನಲ್ಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಎಸ್​ಪಿ ವೆಂಕಟೇಶ್ ಪ್ರಸನ್ನ ಹಾಗೂ ಇನ್‌ಸ್ಪೆಕ್ಟರ್ ನರೇಂದ್ರ ಬಾಬು ಅವರಿಂದ ನಗ್ಮಾಳನ್ನ ಸಿದ್ದಾರ್ಥ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪೊಲೀಸರ ಮಾನವೀಯತೆಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತ ಆರೋಪಿ ಪತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸರಣಿ ಅಂಗಡಿ ಕಳ್ಳತನ: 2 ಲಕ್ಷ ರೂ ಬೆಲೆಬಾಳುವ ವಸ್ತು ಕಳ್ಳತನ 

ಬೆಂಗಳೂರು ವಾಯುವ್ಯ ವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರ ಕಾಟ ಜಾಸ್ತಿಯಾಗಿದ್ದು, ರಾತ್ರಿ ವೇಳೆ ರಾಡ್ ಹಿಡಿದು ಅಂಗಡಿ ಶೆಟರ್ ಮುರಿದು ಕಳ್ಳತನ ಮಾಡುತ್ತಿದ್ದಾರೆ. ಸದ್ಯ ಅಡಕಮಾರನಹಳ್ಳಿಯಲ್ಲಿ ಸರಣಿ ಅಂಗಡಿ ಕಳ್ಳತನ ನಡೆದಿದೆ.

ಇದನ್ನೂ ಓದಿ: 1997ರ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್: 29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ

3 ಅಂಗಡಿಗಳ ಬೀಗ ಮುರಿದು 2 ಲಕ್ಷ ರೂ ಬೆಲೆಬಾಳುವ ವಸ್ತು ಮತ್ತು ನಗದು ಕಳ್ಳತನ ಮಾಡಲಾಗಿದೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನಹಳ್ಳಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವರದಿ: ಮಂಜುನಾಥ್​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ನನ್ನ ಸಿನಿಮಾ ಯಾಕೆ ಕೊಲ್ತೀರ?’ ದುನಿಯಾ ವಿಜಿಯ ಪ್ರಶ್ನಿಸಿದ ಝೈದ್ ಖಾನ್, ಉತ್ತರ ಏನಿತ್ತು? – Kannada News | Zaid Khan talks about his Cult movie clash with Duniya Vijay’s Landlord movie

ಸ್ಯಾಂಡಲ್​​ವುಡ್​​ನಲ್ಲಿ (Sandalwood) ಮತ್ತೆ ಎರಡು ಸಿನಿಮಾಗಳು ಪೈಪೋಟಿಗೆ ಬಿದ್ದಿವೆ. ಡಿಸೆಂಬರ್ ತಿಂಗಳಲ್ಲಿ ದರ್ಶನ್ ನಟನೆಯ ‘ಡೆವಿಲ್’ ಬಿಡುಗಡೆ ಆಗಿತ್ತು, ಅದಾದ ಬಳಿಕ ಡಿಸೆಂಬರ್ 25 ರಂದು ಒಂದೇ ದಿನ ಸುದೀಪ್ ನಟನೆಯ ‘ಮಾರ್ಕ್’ ಮತ್ತು ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಬಿಡುಗಡೆ ಆಗಿತ್ತು. ಒಂದೇ ದಿನ ಎರಡು ದೊಡ್ಡ ಸಿನಿಮಾಗಳು ಬಿಡುಗಡೆ ಆಗಿ ಸ್ಪರ್ಧೆಗೆ ಬಿದ್ದಿದ್ದವು. ಈಗ ಇದೇ ಶುಕ್ರವಾರ ಮತ್ತೊಮ್ಮೆ ಎರಡು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿವೆ ಅದುವೇ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಮತ್ತು ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ.

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಪ್ರೇಮಕಥಾ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಇನ್ನು ‘ಲ್ಯಾಂಡ್​​ಲಾರ್ಡ್’ ಸಿನಿಮಾನಲ್ಲಿ ದುನಿಯಾ ವಿಜಯ್, ರಚಿತಾ ರಾಮ್ ನಟಿಸಿದ್ದಾರೆ. ಇದೀಗ ಝೈದ್ ಖಾನ್ ಅವರು ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಎರಡೂ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವ ಬಗ್ಗೆ ಮಾತನಾಡಿದ್ದು, ‘ಈ ವಿಷಯವಾಗಿ ನಾನು ಖುದ್ದಾಗಿ ದುನಿಯಾ ವಿಜಯ್ ಜೊತೆಗೆ ಮಾತನಾಡಿದ್ದು, ನನ್ನ ಸಿನಿಮಾವನ್ನು ಏಕೆ ಕೊಲೆ ಮಾಡುತ್ತಿದ್ದೀರಿ’ ಎಂದು ಪ್ರಶ್ನಿಸಿದೆ ಎಂದು ಹೇಳಿದ್ದಾರೆ.

‘ನಾವು ಅಕ್ಟೋಬರ್ 2ನೇ ತಾರೀಖಿನಂದೇ ನಮ್ಮ ಸಿನಿಮಾದ ಬಿಡುಗಡೆ ದಿನಾಂಕ ಜನವರಿ 23 ಎಂದು ಘೋಷಣೆ ಮಾಡಿದೆವು. ಅಂದು ರಚಿತಾ ರಾಮ್ ಅವರ ಹುಟ್ಟುಹಬ್ಬ ಇತ್ತು, ಹಾಗಾಗಿ ವಿಶೇಷ ದಿನದಂದೇ ನಮ್ಮ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆವು. ಆದರೆ ಅವರು ತುಸು ತಡವಾಗಿ ಘೋಷಣೆ ಮಾಡಿದರು. ಎಷ್ಟೇ ಆಗಲಿ ಅವರು ಸೂಪರ್ ಸ್ಟಾರ್ ನಾನು ಅವರಿಗೆ ಕರೆ ಮಾಡಿ ನೋಡಿ ಸರ್ ಮುಂದೆ ಹಾಕಿಕೊಳ್ಳಲು ಆಗುತ್ತಾ? ನನ್ನ ಸಿನಿಮಾವನ್ನೇ ಕೊಲೆ ಮಾಡ್ತಿದ್ದೀರಲ್ಲ, ಎಷ್ಟೇ ಆಗಲಿ, ನಾನು ನಿಮ್ಮ ಹುಡುಗನೇ’ ಎಂದು ಕೇಳಿಕೊಂಡೆ’ ಎಂದಿದ್ದಾರೆ ಝೈದ್ ಖಾನ್.

ಇದನ್ನೂ ಓದಿ:ದುನಿಯಾ ವಿಜಯ್ ನಟನೆಯನ್ನು ಮೆಚ್ಚಿ ಕೊಂಡಾಡಿದ ತೆಲುಗಿನ ಸ್ಟಾರ್ ನಿರ್ದೇಶಕ

‘ಅದಕ್ಕೆ ಉತ್ತರಿಸಿದ ದುನಿಯಾ ವಿಜಯ್, ಜನವರಿ 20ರಂದು ನನ್ನ ಹುಟ್ಟುಹಬ್ಬ ಇದೆ ಆ ಸಮಯಕ್ಕೆ ಸಿನಿಮಾ ರಿಲೀಸ್ ಮಾಡುವುದು ನಾನು ಪಾಲಿಸಿಕೊಂಡು ಬಂದಿದ್ದೇನೆ. ಎರಡು ಸಿನಿಮಾಗಳು ಒಟ್ಟಿಗೆ ಬರ್ತಿವೆ ಅಂತ ನೀನೇನು ತಲೆ ಕೆಡಿಸಿಕೊಳ್ಳೋಕೆ ಹೋಗಬೇಡ. ಅದೇನು ದೊಡ್ಡ ಸಮಸ್ಯೆ ಆಗಲ್ಲ. ನಮ್ಮಲ್ಲಿ ಸಾಕಷ್ಟು ಚಿತ್ರಮಂದಿರಗಳು ಇವೆ, ಒಳ್ಳೆಯ ಆಡಿಯೆನ್ಸ್ ಸಹ ಇದ್ದಾರೆ. ನನಗಿರುವ ಪ್ರೇಕ್ಷರೇ ಬೇರೆ, ನಿನಗಿರುವ ಪ್ರೇಕ್ಷಕರೇ ಬೇರೆ ಹಾಗಾಗಿ ಒಟ್ಟಿಗೆ ಬಂದರೂ ಸಮಸ್ಯೆ ಆಗಲ್ಲ ಎಂದರು’ ಎಂದು ಝೈದ್ ಖಾನ್ ಹೇಳಿದ್ದಾರೆ.

‘ಆಗ ನಾನು, ಸರಿ ಸರ್, ಹಾಗಿದ್ದರೆ ನಾನು ‘ಕಲ್ಟ್’ ಪ್ರಚಾರಕ್ಕೆ ಹೋದಾಗೆಲ್ಲ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಪ್ರಚಾರವನ್ನೂ ಮಾಡುತ್ತೀನಿ, ನೀವು ‘ಲ್ಯಾಂಡ್​​ಲಾರ್ಡ್’ ಸಿನಿಮಾ ಪ್ರಚಾರಕ್ಕೆ ಹೋದಾಗೆಲ್ಲ ‘ಕಲ್ಟ್’ ಸಿನಿಮಾದ ಬಗ್ಗೆಯೂ ಮಾತನಾಡಿ, ಎರಡೂ ಕನ್ನಡ ಸಿನಿಮಾನೇ, ಜೊತೆಯಾಗಿ ಕೈಹಿಡಿದುಕೊಂಡು ಕೆಲಸ ಮಾಡೋಣ, ಜೋಡೆತ್ತಿನ ರೀತಿ ಕೆಲಸ ಮಾಡೋಣ ಎಂದೆ, ಅದಕ್ಕೆ ದುನಿಯಾ ವಿಜಯ್ ಅವರು ಸಹ ಒಪ್ಪಿಕೊಂಡರು. ಹಾಗಾಗಿ ಈಗ ಇಬ್ಬರ ಸಿನಿಮಾಗಳು ಸಹ ಒಂದೇ ದಿನ ಬಿಡುಗಡೆ ಆಗುತ್ತಿವೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನ 10 ಸ್ಥಿರ ಆಸ್ತಿಗಳು ಮುಟ್ಟುಗೋಲು – Kannada News | Muda Scam Case: ED Attaches Siddaramaiah Close Aide Marigowda Property

ಬೆಂಗಳೂರು.ಮೈಸೂರು, (ಜನವರಿ 22): ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ (Muda Scam Case) ಮಹತ್ವದ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯನವರ ಪರಮಾಪ್ತ, ಮುಡಾದ ಮಾಜಿ ಅಧ್ಯಕ್ಷ ಮರೀಗೌಡ (Marigowda)  ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಹೀಗಾಗಿ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳು ಮುಟ್ಟುಗೋಲು

ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಈ ಸಂಬಂಧ ಇನ್ನಷ್ಟು ತನಿಖೆ ನಡೆಸಿದಾಗ ಮುಡಾದ ಮಾಜಿ ಅಧ್ಯಕ್ಷ ಮರಿಗೌಡ ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರ ಸಹಾಯದಿಂದ ಮರೀಗೌಡ ಅಕ್ರಮವಾಗಿ ಸೈಟ್ ಪಡೆದಿದ್ದಾರೆ ಎನ್ನುವುದು ಗೊತ್ತಾಗಿದೆ. ಇದರಿಂದ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 6 ಅಕ್ರಮ ಮುಡಾ ನಿವೇಶನಗಳು, 3 ಸ್ಥಿರ ಆಸ್ತಿಗಳು ಮತ್ತು 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಒಂದು ವಾಣಿಜ್ಯ ಕಟ್ಟಡ ಮುಟ್ಟುಗೋಲು ಹಾಕಿದೆ.

ಇದನ್ನೂ ಓದಿ: ಮುಡಾದಲ್ಲಿ ಅಕ್ರಮ ದೃಢ: 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಇದೇ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ, ಈಗಾಗಲೇ 283 ಮುಡಾ ಸೈಟ್‌ಗಳು ಮತ್ತು 03 ವೈಯಕ್ತಿಕ ಆಸ್ತಿ ಸೇರಿದಂತೆ ಒಟ್ಟು 60 ಕೋಟಿ ರೂಪಾಯಿ ಮೌಲ್ಯದ ಅಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಂಡಿತ್ತು.

ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಈಗಾಗಲೇ ಇಡಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸದ್ಯ ಜೈಲಿನಲ್ಲಿದ್ದು, ನಿನ್ನೆ ಅಷ್ಟೇ ಅವರ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ವಜಾ ಮಾಡಿದೆ. ಇನ್ನು ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಲಾಗಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಿಚಾರಣೆ ನಡೆಸಿದ್ದು,  ಜನವರಿ 28ಕ್ಕೆ ಆದೇಶ ಕಾಯ್ದಿರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version