ಸೋರುತಿಹುದು ಏರ್​ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್ – Kannada News | Bengaluru Airport Flooding: Terminal 1 Roof Leaks Again After Heavy Rain at KIA, Video goes viral

ದೇವನಹಳ್ಳಿ, ಮೇ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಹಾಗೂ ರಾತ್ರಿ ಭಾರಿ ಮಳೆ ಸುರಿದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವ್ಯಾಪ್ತಿಯಲ್ಲೂ ಭಾರಿ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾದವು. ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ರನ್‌ವೇ ಸ್ಪಷ್ಟವಾಗಿ ಕಾಣಿಸದೆ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಭಾರಿ ವಿಳಂಬವಾಯಿತು. ಅನೇಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಯಿತು.

ಏರ್‌ಪೋರ್ಟ್‌ನ ಟರ್ಮಿನಲ್-1 ರ ಮೇಲ್ಛಾವಣಿಯಲ್ಲಿ ನೀರು ಸೋರಲು ಆರಂಭಿಸಿ ಟರ್ಮಿನಲ್ ಒಳಗೆಲ್ಲ ನೀರು ತುಂಬಿಕೊಂಡು ಪ್ರಯಾಣಿಕರು ಪರದಾಡುವಂತಾಯಿತು. ಟರ್ಮಿನಲ್ ಛಾವಣಿ ಸೋರುತ್ತಿರುವ ಮತ್ತು ಒಳಗೆ ಜಲಪ್ರವಾಹ ಸಂಭವಿಸಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ಕೂಡ ಕೆಲವು ಬಾರಿ ಟರ್ಮಿನಲ್ ಮೇಲ್ಛಾವಣಿ ಸೋರಿದ ಬಗ್ಗೆ ವರದಿಯಾಗಿದ್ದು, ವಿಡಿಯೋಗಳೂ ವೈರಲ್ ಆಗಿದ್ದವು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ! – Kannada News | Karnataka Weather Forecast: Heavy Rain in Bengaluru, Orange Alert Issued for Bagalkot, Kalaburagi and Vijayapura

ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ  (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಮುಖ್ಯಾಂಶಗಳು

  • ಬಾಗಲಕೋಟೆ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ.
  • ಹಾಸನ, ಕೊಡಗು, ಮೈಸೂರು ಭಾಗಗಳಲ್ಲಿ ಮಳೆ ಹೆಚ್ಚಳ, ಯೆಲ್ಲೋ ಅಲರ್ಟ್ ಮುನ್ನೆಚ್ಚರಿಕೆ.
  • ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ರೂಪದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು.

ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ 40-50 ಕಿಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆ ಆರ್ಭಟಿಸುವ ಸಾಧ್ಯತೆಯಿದೆ.

ಕರಾವಳಿಯಲ್ಲೂ ತುಂತುರು ಮಳೆ

ಕರಾವಳಿ ಕರ್ನಾಟಕದ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಮುನ್ಸೂಚನೆಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆ ಹಾಗೂ ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಮುಖವಾಗಿ ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ನಿಲ್ಲದಂತೆ ಮತ್ತು ವಿದ್ಯುತ್ ಕಂಬಗಳಿಂದ ದೂರವಿರಲು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಮಂಡಳಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್​​ನಿಂದ ಕಳುವಾಯ್ತು ಬರೋಬ್ಬರಿ 66 ಹಾರ್ಡ್​​ ಡಿಸ್ಕ್ – Kannada News | Bollywood Data Heist: 66 Hard Disks Stolen from Zoya Akhtar’s Tiger Baby Production House

ಬಾಲಿವುಡ್‌ನ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್‌ವೊಂದರಿಂದ ಬರೋಬ್ಬರಿ 66 ಹಾರ್ಡ್ ಡಿಸ್ಕ್‌ಗಳು ಕಳವಾಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಚಿತ್ರರಂಗದಲ್ಲಿ ಇಂತಹ ಹೈ-ಪ್ರೊಫೈಲ್ ಡೇಟಾ ಕಳ್ಳತನ ನಡೆಯುವುದು ತೀರಾ ಅಪರೂಪವಾಗಿದ್ದು, ಸದ್ಯ ಈ ಸುದ್ದಿ ಬಾಲಿವುಡ್ (Bollywood) ಅಂಗಳದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸಾಕಷ್ಟು ಎಚ್ಚರಿಕೆ ಮಧ್ಯೆಯೂ ಈ ರೀತಿ ಆಗಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಖ್ಯಾತ ನಿರ್ದೇಶಕಿಯರಾದ ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ಅವರಿಗೆ ಸೇರಿದ ‘ಟೈಗರ್ ಬೇಬಿ ಡಿಜಿಟಲ್ ಎಲ್‌ಎಲ್‌ಪಿ’ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ಕಚೇರಿಯಲ್ಲಿದ್ದ ಒಟ್ಟು 119 ಹಾರ್ಡ್ ಡಿಸ್ಕ್‌ಗಳ ಪೈಕಿ 66 ಹಾರ್ಡ್ ಡಿಸ್ಕ್‌ಗಳು ನಾಪತ್ತೆಯಾಗಿದ್ದು, ಇವುಗಳಲ್ಲಿ ಶೂಟಿಂಗ್‌ನ ರಾ ಫೂಟೇಜ್, ಎಡಿಟ್ ಮಾಡಿದ ದೃಶ್ಯಗಳು, ಪೋಸ್ಟ್-ಪ್ರೊಡಕ್ಷನ್ ಫೈಲ್‌ಗಳು ಮತ್ತು ಇನ್ನೂ ಬಿಡುಗಡೆಯಾಗದ ಚಿತ್ರಗಳ ಅತ್ಯಂತ ಪ್ರಮುಖ ಡೇಟಾ ಇತ್ತು ಎಂದು ತಿಳಿದುಬಂದಿದೆ.

ಕಳ್ಳತನ ಬಯಲಾಗಿದ್ದು ಹೇಗೆ?

ಮೇ 21 ರಂದು ಕಚೇರಿಯ ಸಿಬ್ಬಂದಿ ಪರಿಶೀಲಿಸಿದಾಗ ಹಾರ್ಡ್ ಡಿಸ್ಕ್ ಬಾಕ್ಸ್‌ಗಳು ಹರಿದಿರಿವುದು ಮತ್ತು ಅವು ಖಾಲಿ ಇರುವುದು ಪತ್ತೆಯಾಗಿದೆ. ತಕ್ಷಣವೇ ಮುಂಬೈನ ಬಾಂದ್ರಾ ಪೊಲೀಸರಿಗೆ ದೂರು ನೀಡಲಾಗಿದ್ದು, ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಶಾಹಿದ್ ಅಜೀಂ ಖಾನ್ ಮತ್ತು ರಿತೇಶ್ ಸುರೇಶ್ ಶಾ ಎಂಬ ಇಬ್ಬರು ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಡಿಮೆ ಬೆಲೆಗೆ ಮಾರಾಟ:

ಪೊಲೀಸ್ ವಿಚಾರಣೆಯ ವೇಳೆ ಆರೋಪಿಗಳು ಕಳೆದ ಐದು ತಿಂಗಳಲ್ಲಿ 24 ಹಾರ್ಡ್ ಡಿಸ್ಕ್‌ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. ಇವುಗಳನ್ನು ತಲಾ 15,000 ದಿಂದ 20,000 ರೂಪಾಯಿಗಳಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಾರ್ಡ್ ಡಿಸ್ಕ್‌ಗಳಲ್ಲಿ ಅಮೆಜಾನ್ ಪ್ರೈಮ್‌ನ ಸೂಪರ್ ಹಿಟ್ ಸರಣಿ ‘ಮೇಡ್ ಇನ್ ಹೆವನ್’ ಮತ್ತು ‘ಘೋಸ್ಟ್ ಸ್ಟೋರೀಸ್’ ಸೇರಿದಂತೆ ಹಲವು ಪ್ರಮುಖ ಸಿನಿಮಾಗಳ ಬ್ಯಾಕಪ್ ಡೇಟಾ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: ಎರಡನೇ ಮದುವೆ ಮಾಡಿಕೊಂಡ ಫರ್ಹಾನ್​ ಅಖ್ತರ್​; ಪ್ರೇಯಸಿ ಶಿಬಾನಿ​ ಜತೆ ಸಿಂಪಲ್​ ವಿವಾಹ

ಆನ್‌ಲೈನ್ ಲೀಕ್ ಆತಂಕ:

ಸಿನಿಮಾ ಬಿಡುಗಡೆಗೂ ಮುನ್ನವೇ ಇಷ್ಟೊಂದು ದೊಡ್ಡ ಮಟ್ಟದ ಡೇಟಾ ಕಳವಾಗಿರುವುದು ನಿರ್ಮಾಣ ಸಂಸ್ಥೆಗೆ ತಲೆನೋವಾಗಿ ಪರಿಣಮಿಸಿದೆ. ಕದ್ದಿರುವ ಡೇಟಾವನ್ನು ಆನ್‌ಲೈನ್‌ನಲ್ಲಿ ಎಲ್ಲಾದರೂ ಲೀಕ್ ಮಾಡಲಾಗಿದೆಯೇ ಅಥವಾ ದುರುಪಯೋಗಪಡಿಸಿಕೊಳ್ಳಲಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಬಾಂದ್ರಾ ಪೊಲೀಸರು ಸದ್ಯ ಸೈಬರ್ ಕ್ರೈಮ್ ತಜ್ಞರ ನೆರವು ಪಡೆದು ತನಿಖೆ ಚುರುಕುಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಸಂಸ್ಥೆಯ ಇತರ ಉದ್ಯೋಗಿಗಳ ಕೈವಾಡವಿದೆಯೇ ಎಂಬ ಕೋನದಲ್ಲೂ ತನಿಖೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

Source link

ವರುಣಾರ್ಭಟಕ್ಕೆ 6 ವರ್ಷದ ಕಂದಮ್ಮ ಬಲಿ: ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್ ಮರಗಳು, ವಿಮಾನ ಸಂಚಾರದಲ್ಲಿ ವ್ಯತ್ಯಯ – Kannada News | Bengaluru, Bidar Rain: 6 Year Old Child Killed in Roof Collapse, Trees Uprooted, and KIA Airport Terminal Flooded

ಬೆಂಗಳುರಿನಲ್ಲಿ ರಸ್ತೆಗೆ ಬೃಹತ್ ಮರ ಬಿದ್ದಿರುವುದುImage Credit source: tv9

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಮುಂಗಾರು (Monsoon) ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ತತ್ತರಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದ್ದು, 6 ವರ್ಷದ ಕಂದಮ್ಮ ಪ್ರಾಣ ಕಳೆದುಕೊಂಡಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬೀಸಿದ ಗಾಳಿಗೆ ಬೃಹತ್ ಮರಗಳು ರಸ್ತೆಗಳ ಮೇಲೆ ಬಿದ್ದವು. ಸಂಜೆಯಾಗುತ್ತಿದ್ದಂತೆ ಆರಂಭವಾದ ವರುಣನ ಅಬ್ಬರಕ್ಕೆ ಪ್ರಮುಖ ಅಂಡರ್‌ಪಾಸ್‌ಗಳು ಕೆರೆಯಂತಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ವಾಹನ ಸವಾರರು ರಸ್ತೆಗಳಲ್ಲೇ ನರಕಯಾತನೆ ಅನುಭವಿಸುವಂತಾಯಿತು.

ಮುಖ್ಯಾಂಶಗಳು

  • ಬೀದರ್‌ನ ಹುಲಸೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿ ಕುಸಿದು 6 ವರ್ಷದ ಮಾಹೇರಾ ಸಾವು, ನಾಲ್ವರಿಗೆ ಗಂಭೀರ ಗಾಯ.
  • ಬೆಂಗಳೂರಿನ ಸಂಜಯನಗರ, ವೈಟ್‌ಫೀಲ್ಡ್, ಪೀಣ್ಯ ಸೇರಿದಂತೆ ಹಲವೆಡೆ ನೂರಾರು ಬೃಹತ್ ಮರಗಳು ಧರೆಗೆ.
  • ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಸೋರಿಕೆ.

ಬೀದರ್‌ನಲ್ಲಿ ಕಂದಮ್ಮ ಬಲಿ

ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ತಹಶೀಲ್ದಾರ್ ಕಚೇರಿ ಬಳಿಯಿರುವ ಬಡಾವಣೆಯಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಆರ್ಭಟಕ್ಕೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದಿದೆ. ಮೇಲ್ಛಾವಣಿ ಮೇಲಿದ್ದ ಭಾರವಾದ ಕಲ್ಲುಗಳು ನೇರವಾಗಿ ಮನೆಯೊಳಗೆ ಬಿದ್ದ ಪರಿಣಾಮ, 6 ವರ್ಷದ ಬಾಲಕಿ ಮಾಹೇರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮನೆ ಮೇಲ್ಛಾವಣಿ ಕುಸಿದು ಅವಾಂತರವಾಗಿರುವುದು

ಘಟನೆಯಲ್ಲಿ ಕುಟುಂಬದ ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಜಲಾವೃತಗೊಂಡ ವಾಹನಗಳು!

ಬೆಂಗಳೂರಿನ ಇಂದಿರಾನಗರ, ಕೆ.ಆರ್. ಪುರಂ, ಮಹದೇವಪುರ, ಮಲ್ಲೇಶ್ವರಂ ಹಾಗೂ ಮೆಜೆಸ್ಟಿಕ್ ಸೇರಿದಂತೆ ಹಲವು ಭಾಗಗಳಲ್ಲಿ ಬಿರುಗಾಳಿ ಮಳೆ ಅವಾಂತರ ಸೃಷ್ಟಿಸಿದೆ. ಪೀಣ್ಯದ ಬಿಎಫ್‌ಡಬ್ಲ್ಯೂ ರಸ್ತೆ, ಸಂಜಯನಗರ ಮುಖ್ಯ ರಸ್ತೆ, ಗಂಗಮ್ಮ ಸರ್ಕಲ್, ಜಾಲಹಳ್ಳಿ ಹಾಗೂ ವೀರಣ್ಣಪಾಳ್ಯ ಜಂಕ್ಷನ್‌ಗಳಲ್ಲಿ ಬೃಹತ್ ಮರಗಳು ಉರುಳಿ ಬಿದ್ದಿವೆ. ವೈಟ್‌ಫೀಲ್ಡ್ ರಸ್ತೆಯೊಂದರಲ್ಲೇ 3 ರಿಂದ 4 ಕಡೆ ಮರಗಳು ಧರಾಶಾಯಿಯಾಗಿದ್ದು, ಶಾಂತಿನಿಕೇತನ ಜಂಕ್ಷನ್ ಬಳಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಅನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರು. ಹೆಬ್ಬಾಳ ಮತ್ತು ಕೆ.ಆರ್. ಪುರಂ ರಿಂಗ್ ರೋಡ್ ಸರ್ವಿಸ್ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದವು.

ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಪರದಾಟ

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದರಿಂದ ರನ್‌ವೇ ಸ್ಪಷ್ಟವಾಗಿ ಕಾಣಿಸದೆ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಭಾರಿ ವಿಳಂಬವಾಯಿತು. ಮಳೆಯ ಬಿರುಗಾಳಿಯ ಹೊಡೆತಕ್ಕೆ ಏರ್‌ಪೋರ್ಟ್‌ನ ಟರ್ಮಿನಲ್-1 ರ ಮೇಲ್ಛಾವಣಿಯ ಭಾಗವೊಂದು ಸೋರಲು ಆರಂಭಿಸಿತು.

ವಿಮಾನ ನಿಲ್ದಾಣದ ಟರ್ಮಿನಲ್-1 ಮೇಲ್ಛಾವಣಿ ಸೋರಿಕೆ

ಇದರಿಂದಾಗಿ ದೇಶಿ ಹಾಗೂ ವಿದೇಶಿ ಪ್ರಯಾಣಿಕರು ನಿಲ್ದಾಣದ ಒಳಗಡೆಯೇ ಲಗೇಜ್‌ಗಳೊಂದಿಗೆ ಇತ್ತ ಇತ್ತ ಓಡಾಡುತ್ತಾ ತೀವ್ರ ಪರದಾಡಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ

ನಗರದ ಹಲವೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ರಾತ್ರಿಯಿಡೀ ಕತ್ತಲೆ ಆವರಿಸಿತ್ತು. ಬಿಬಿಎಂಪಿ ಮತ್ತು ವಿಪತ್ತು ನಿರ್ವಹಣಾ ತಂಡಗಳು ಮರಗಳನ್ನು ತೆರವುಗೊಳಿಸಿ ವಿದ್ಯುತ್ ಸಂಪರ್ಕ ಪುನಃಸ್ಥಾಪಿಸಲು ಕಾರ್ಯಾಚರಣೆ ನಡೆಸಿದವು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದುವೆಯಾಗಿ ಆರೇ ತಿಂಗಳಿಗೆ ಮಹಿಳೆ ಸಾವು: ವರದಕ್ಷಿಣೆ ಕಿರುಕುಳ, ಕೊಲೆ ಮಾಡಿ ನೇಣು ಹಾಕಿರುವ ಆರೋಪ – Kannada News | Lucknow Dowry Death: Newlywed Found Dead, Family Alleges Murder and Harassment

ಪತಿಯೊಂದಿಗೆ ಮೃತ ಮಹಿಳೆ ಶ್ವೇತಾ Image Credit source: NDTV

ಲಕ್ನೋ, ಮೇ 27: ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ(Dowry)ಗಾಗಿ ಅಮಾಯಕ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈಗ ಲಕ್ನೋದಲ್ಲಿ ಮತ್ತೊಂದು ಮಹಿಳೆಯನ್ನು ಬಲಿ ಪಡೆದಿದೆ. ಮದುವೆಯಾಗಿ ಕೇವಲ ಆರೇ ತಿಂಗಳಿಗೆ ತನ್ನ ಅತ್ತೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಾರು ಕೊಡಿಸುವಂತೆ ಪತಿ ಮತ್ತು ಆತನ ಕುಟುಂಬದವರು ನಿತ್ಯ ಕಿರುಕುಳ ನೀಡುತ್ತಿದ್ದರು, ಅದೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

ಮದುವೆಯಾದ ಕೆಲವೇ ದಿನಗಳಲ್ಲಿ ಶುರುವಾಯ್ತು ನರಕಯಾತನೆ
ಮೃತ ಮಹಿಳೆಯನ್ನು ಶ್ವೇತಾ ಸಿಂಗ್ ಎಂದು ಗುರುತಿಸಲಾಗಿದೆ. ಶ್ವೇತಾ ವಿವಾಹ 2025ರ ನವೆಂಬರ್ 22ರಂದು ಭೂಪೇಂದ್ರ ಸಿಂಗ್ ಎಂಬಾತನೊಂದಿಗೆ ನಡೆದಿತ್ತು. ಶ್ವೇತಾ ಅವರ ತಂದೆ ಉಮೇಶ್ ಕುಮಾರ್ ಸಿಂಗ್ ಅವರ ಪ್ರಕಾರ, ಮದುವೆಯಾದ ಕೆಲವೇ ದಿನಗಳಲ್ಲಿ ಅತ್ತೆಯ ಮನೆಯವರಿಂದ ಕಿರುಕುಳ ಆರಂಭವಾಗಿತ್ತು. ಪತಿ ಭೂಪೇಂದ್ರ ಸಿಂಗ್ ಪ್ರತಿದಿನವೂ ಆಕೆಗೆ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದನು. ಅಷ್ಟೇ ಅಲ್ಲದೆ, ಶ್ವೇತಾಳ ಅತ್ತೆಯು ತನ್ನ ಸ್ವಂತ ಸಂಬಂಧಿಕರನ್ನು ಸೇರಿಸಿಕೊಂಡು ಆಕೆಯನ್ನು ನಿರಂತರವಾಗಿ ನಿಂದಿಸುತ್ತಿದ್ದಳು. ಇದರಿಂದಾಗಿ ಶ್ವೇತಾ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.

ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ?
ಲಕ್ನೋದ ಠಾಕೂರ್​​ಗಂಜ್ ಪ್ರದೇಶದಲ್ಲಿರುವ ಅತ್ತೆಯ ಮನೆಯಲ್ಲಿ ಶ್ವೇತಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರೂ, ಅಷ್ಟರೊಳಗೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶ್ವೇತಾಳ ಪೋಷಕರು ಇದನ್ನು ಆತ್ಮಹತ್ಯೆ ಎಂದು ಒಪ್ಪಲು ಸಿದ್ಧರಿಲ್ಲ. ಅತ್ತೆ-ಮಾವಂದಿರು ಕಾರಿಗಾಗಿ ಬೇಡಿಕೆ ಇಟ್ಟು ಆಕೆಯನ್ನು ಕೊಲೆ ಮಾಡಿದ್ದಾರೆ, ತದನಂತರ ಸಾಕ್ಷ್ಯ ನಾಶಪಡಿಸಲು ಶವವನ್ನು ನೇಣು ಹಾಕಿ ಆತ್ಮಹತ್ಯೆಯಂತೆ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾಟ್ರಸ್​ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್​​ನ ಪತ್ನಿ

ಮಗಳ ಸಾವಿನಿಂದ ಕಂಗಾಲಾದ ತಂದೆ ಉಮೇಶ್ ಕುಮಾರ್ ಸಿಂಗ್ ನೀಡಿದ ಕಟ್ಟುನಿಟ್ಟಿನ ದೂರಿನ ಮೇರೆಗೆ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ವೇತಾ ಅವರ ಪತಿ ಭೂಪೇಂದ್ರ ಸಿಂಗ್, ಮಾವ, ಅತ್ತೆ, ಮೈದುನ, ಮೈದುನನ ಪತ್ನಿ ಹಾಗೂ ನಾದಿನಿ ಸೇರಿದಂತೆ ಇಡೀ ಕುಟುಂಬದ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 80 (ವರದಕ್ಷಿಣೆ ಸಾವು), ಸೆಕ್ಷನ್ 85 (ಕ್ರೌರ್ಯ) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಅಡಿಯಲ್ಲಿ ಗಂಭೀರ ಮೊಕದ್ದಮೆ ಹೂಡಲಾಗಿದೆ.

ಪ್ರಸ್ತುತ ಪತಿಯ ಇಡೀ ಕುಟುಂಬ ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಶ್ವೇತಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿನ ಅಸಲಿ ಕಾರಣ ಬಯಲಾಗಲಿದೆ ಮತ್ತು ಅದರ ಆಧಾರದ ಮೇಲೆ ಮುಂದಿನ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:13 am, Wed, 27 May 26

Source link

ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್​ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ – Kannada News | Pawan Kalyan Feels ‘Jealous’ Of Vijay’s Political Success, Addresses Comparison With TVK Chief

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗೆ ತಮಿಳು ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ತಮಿಳುನಾಡು ಸಿಎಂ ವಿಜಯ್ ಅವರ ರಾಜಕೀಯ ಯಶಸ್ಸಿನ ಬಗ್ಗೆ ಆಸಕ್ತಿದಾಯಕ ಮಾತುಗಳನ್ನಾಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಜಯ್ ಅವರ ಗೆಲುವನ್ನು ನೋಡಿ ತಮಗೆ ಕೊಂಚ “ಅಸೂಯೆ” ಆಯಿತು ಎಂದು ತಮಾಷೆಯಾಗಿ ಹೇಳಿದ್ದಾರೆ.

‘ನಾನು ಇತ್ತೀಚೆಗೆ ತಮಿಳುನಾಡು ರಾಜಕೀಯವನ್ನು ಗಮನಿಸುತ್ತಿದ್ದೇನೆ. ಅವರು ಎಷ್ಟು ಆರಾಮವಾಗಿ ಚುನಾವಣೆ ಎದುರಿಸಿದರು ಎಂದರೆ ನನಗೆ ಸ್ವಲ್ಪ ಅಸೂಯೆ ಆಯಿತು. ಕಟೌಟ್‌ಗಳು ಮತ್ತು ಹೊಲೊಗ್ರಾಮ್‌ಗಳನ್ನು ಬಳಸಿಕೊಂಡು ಆರಾಮವಾಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೆ ನಾನು ಕಳೆದ 15 ವರ್ಷಗಳಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇನೆ.. ಆದರೆ’ ಎಂದು ಪವನ್ ಕಲ್ಯಾಣ್ ನಕ್ಕರು. 15 ವರ್ಷ ಹೋರಾಟ ಮಾಡಿದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂಬುದು ಈ ಮಾತಿನ ಅರ್ಥ. ಪಕ್ಷವನ್ನು ಮುನ್ನಡೆಸಲು ಮತ್ತು ಜನರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳಲು ಆಳವಾದ ಜ್ಞಾನ ಹಾಗೂ ತಳಮಟ್ಟದ ಶ್ರಮ ಬೇಕು ಎಂಬುದನ್ನು ಅವರು ಇದೇ ವೇಳೆ ನೆನಪಿಸಿಕೊಂಡಿದ್ದಾರೆ.

ವಿಜಯ್ ಅವರ ಯಶಸ್ಸನ್ನು ತಮಗೆ ಹೋಲಿಸುತ್ತಿರುವ ಜನರಿಗೆ ಪವನ್ ಕಲ್ಯಾಣ್ ತಿರುಗೇಟು ನೀಡಿದ್ದಾರೆ. ‘ಪಕ್ಕದ ರಾಜ್ಯದಲ್ಲಿ ನಟರೊಬ್ಬರು ಪಕ್ಷ ಕಟ್ಟಿ ಸಿಎಂ ಆದರು, ನೀವೂ ಆಂಧ್ರದಲ್ಲಿ ಹಾಗೆಯೇ ಮಾಡಬೇಕಿತ್ತು ಎಂದು ಹಲವರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ. ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ರಾಜಕೀಯ ಪರಿಸ್ಥಿತಿಗಳು ತೀರಾ ಭಿನ್ನವಾಗಿವೆ. ಈ ಹೋಲಿಕೆ ಸರಿಯಲ್ಲ’ ಎಂದಿದ್ದಾರೆ.

2019ರ ಚುನಾವಣೆಯಲ್ಲಿ ತಮಗೆ ಎದುರಾದ ಕಠಿಣ ಸವಾಲುಗಳು ಮತ್ತು ಸ್ವಂತ ಸಚಿವರೇ ಸಾಥ್ ನೀಡದ ದಿನಗಳನ್ನು ನೆನಪಿಸಿಕೊಂಡ ಪವನ್, ‘ನಮ್ಮ ಹೋರಾಟದ ಹಾದಿಯೇ ಬೇರೆ, ದಯವಿಟ್ಟು ಯಾರೊಂದಿಗೂ ಹೋಲಿಸಬೇಡಿ’ ಎಂದು ತಮ್ಮ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರಾಜಕೀಯದಲ್ಲಿ ದಶಕಕ್ಕೂ ಹೆಚ್ಚು ಕಾಲ ಸೈಕಲ್ ಹೊಡೆದು, ಹಂತಹಂತವಾಗಿ ಬೆಳೆದು ಇಂದು ಡಿಸಿಎಂ ಆಗಿರುವ ಪವನ್ ಕಲ್ಯಾಣ್ ಅವರ ಈ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:01 am, Wed, 27 May 26

Source link

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಚಿಂತೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 27, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋರು, ಶುಕ್ಲ ಪಕ್ಷದ ಏಕಾದಶಿ, ಹಸ್ತ ನಕ್ಷತ್ರ, ವ್ಯತಿಪಾತ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಬುಧವಾರದ ಏಕಾದಶಿಯು ವಿಷ್ಣುವಿನ ಕೃಪೆಗೆ ಪಾತ್ರವಾಗಲು ಉತ್ತಮ ದಿನವಾಗಿದೆ.

 

Source link

ಪಟ್ಟದಾಟಕ್ಕೆ ಕೊನೆಗೂ ತೆರೆ: ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ, ಈವರೆಗೆ ಏನೇನಾಯ್ತು? ಇಲ್ಲಿದೆ ವಿವರ – Kannada News | Karnataka CM Power Shift: Siddaramaiah Likely to Resign Tomorrow After Marathon 7 Hour Delhi Meeting with Rahul Gandhi

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್‌ನಲ್ಲಿ ತೆರೆ ಬಿದ್ದಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ರಾಹುಲ್ ಗಾಂಧಿ (Rahul Gandhi) ಅವರೊಂದಿಗಿನ ಮಹತ್ವದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ (Power Sharing Formula) ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.

ಮುಖ್ಯಾಂಶಗಳು

  • ದೆಹಲಿಯಲ್ಲಿ ನಡೆದ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ರಾಹುಲ್ ಗಾಂಧಿ ಸಂಧಾನದ ಬಳಿಕ ಪಟ್ಟ ಬಿಡಲು ಸಮ್ಮತಿಸಿದ ಸಿದ್ದರಾಮಯ್ಯ.
  • ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಆಪ್ತ ಸಚಿವರಿಂದ ತೀವ್ರ ಒತ್ತಡವಿದ್ದರೂ ಹೈಕಮಾಂಡ್ ಆದೇಶಕ್ಕೆ ತಲೆಬಾಗಿದ ಸಿಎಂ.
  • ನಾಳೆ ಸಚಿವರ ವಿದಾಯದ ಉಪಾಹಾರ ಕೂಟದ ಬಳಿಕ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನಿರ್ಧಾರ ಪ್ರಕಟಿಸುವ ಸಾಧ್ಯತೆ.

ಹೈಕಮಾಂಡ್ ಸಭೆಯಲ್ಲಿ ಏನೇನು ಚರ್ಚೆ ಆಯ್ತು? ಸಿದ್ದರಾಮಯ್ಯಗೆ ಕೊಟ್ಟ ಆಫರ್​ಗಳು ಏನೇನು?

ಮಂಗಳವಾರ ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯು ತೀವ್ರ ಕುತೂಹಲ ಮೂಡಿಸಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಸಭೆ ನಡೆಸಿದರು. ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಪ್ರತ್ಯೇಕ ಸಭೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಹಾಗೂ ಮುಂಬರುವ ಚುನಾವಣೆಗಳನ್ನು ಎದುರಿಸಲು ನಾಯಕತ್ವ ಬದಲಾವಣೆ ಅನಿವಾರ್ಯ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ರಾಜ್ಯಸಭಾ ಸ್ಥಾನದ ಆಫರ್ ಹಾಗೂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೊಸದಾಗಿ ರಚನೆಯಾಗಲಿರುವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಪಟ್ಟ ನೀಡುವ ಆಫರ್ ಅನ್ನು ಹೈಕಮಾಂಡ್ ಮುಂದಿಟ್ಟಿದೆ ಎನ್ನಲಾಗಿದೆ.

ಆಪ್ತರ ಒತ್ತಡ ಹಾಗೂ ಸಿಎಂ ನಿಲುವು

ದೆಹಲಿ ಸಭೆ ಮುಗಿದ ತಕ್ಷಣವೇ ಸಿಎಂ ಸಿದ್ದರಾಮಯ್ಯ ದೆಹಲಿಯ ಖಾಸಗಿ ಸ್ಥಳದಲ್ಲಿ ಆಪ್ತ ಸಚಿವರಾದ ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್ ಹಾಗೂ ಭೈರತಿ ಸುರೇಶ್ ಅವರೊಂದಿಗೆ ತುರ್ತು ಸಭೆ ನಡೆಸಿ ಹೈಕಮಾಂಡ್ ನಿರ್ಧಾರವನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಆಪ್ತ ಸಚಿವರು, ‘ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬೇಡಿ, ನಿಮ್ಮ ಪರವಾಗಿ ನಾವೇ ಹೈಕಮಾಂಡ್ ಜೊತೆ ಮತ್ತೊಮ್ಮೆ ಮಾತನಾಡುತ್ತೇವೆ’ ಎಂದು ಭಾವುಕರಾಗಿ ಒತ್ತಡ ಹೇರಿದ್ದಾರೆ. ಆದರೆ ಸಚಿವರ ಮನವಿಗೆ ಉತ್ತರಿಸಿದ ಸಿದ್ದರಾಮಯ್ಯ, ‘ರಾಹುಲ್ ಗಾಂಧಿ ಅವರ ಮಾತನ್ನು ನಿರಾಕರಿಸಲು ನನ್ನಿಂದ ಸಾಧ್ಯವಿಲ್ಲ. ಕೊಟ್ಟ ಮಾತಿನಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ’ ಎಂದು ಹೇಳುವ ಮೂಲಕ ಆಪ್ತರ ಒತ್ತಡಕ್ಕೆ ಬ್ರೇಕ್ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ

ಮಂಗಳವಾರ ತಡರಾತ್ರಿಯೇ ಸಿಎಂ ಸಿದ್ದರಾಮಯ್ಯ ಸಚಿವರಾದ ಜಮೀರ್ ಅಹ್ಮದ್ ಖಾನ್, ಹೆಚ್.ಸಿ. ಮಹದೇವಪ್ಪ, ಕೃಷ್ಣಬೈರೇಗೌಡ ಹಾಗೂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರೊಂದಿಗೆ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಬಂದು ತಲುಪಿದ್ದಾರೆ. ಇಂದು ಮುಖ್ಯಮಂತ್ರಿಗಳು ಮಹಾತ್ಮಾ ಗಾಂಧಿ ಹಾಗೂ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ತದನಂತರ ಮಹತ್ವದ ಸುದ್ದಿಗೋಷ್ಠಿ ನಡೆಸಿ ತಮ್ಮ ರಾಜೀನಾಮೆಯ ಅಧಿಕೃತ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ?

ಜೂನ್ 2026 ರ ಹೊತ್ತಿಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಸುಗಮವಾಗಿ ಮುಗಿಸಲು ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರೂ ಸಹ ಇಂದು (ಮೇ 27) ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕಾಂಗ ಪಕ್ಷದ (CLP) ಸಭೆ ನಡೆಸಿ ಮುಂದಿನ ಸಿಎಂ ಆಯ್ಕೆಯ ಪ್ರಕ್ರಿಯೆಯನ್ನು ಅಂತಿಮಗೊಳಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:46 am, Wed, 27 May 26

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಆಸ್ತಿಗೆ ಅನ್ಯರು ಕೈ ಹಾಕುವ ಸಾಧ್ಯತೆ ಇದೆ – Kannada News | Horoscope May 27 Wednesday 2026; Dina Rashi Bhavishya Today, Checkout the details here

ಮೇಷ ರಾಶಿ :

ನಿಮಗೂ ಕೆಲವರಿಗೂ ಬೆಳಕಾದೀತು. ಹಣದ ಹೊಸ ಮಾರ್ಗಗಳು ಕಣ್ಮುಂದೆ ಬರುತ್ತವೆ, ಆದರೆ ನಿರ್ಧಾರಗಳ ಕಡೆ ಯತ್ನಪೂರ್ವಕವಾಗಿ ಸಾಗಬೇಕು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹ ಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು.

ವೃಷಭ ರಾಶಿ :

ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು. ಒಮ್ಮೆಲೆ ಹತ್ತಾರು ವಿಚಾರಗಳಲ್ಲಿ ಆಸಕ್ತಿಯನ್ನು ಹೊಂದುವಿರಿ. ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ತುಂಬಾ ಭಾವುಕವಾಗಿ ಇರುವ ಕಾರಣದಿಂದ ನಿಮಗೆ ಕೆಲ ಸಂದರ್ಭಗಳಲ್ಲಿ ಕೋಪ ವಶವಾಗುವ ಸಾಧ್ಯತೆ ಇದೆ. ಹಣದ ವಿಚಾರದಲ್ಲಿ ನಿಮ್ಮ ನಿರ್ಧಾರಗಳು ನಿಖರವಾಗಿರಬೇಕಾಗಿದೆ. ಕುಟುಂಬದವರ ಜೊತೆ ಸಮಯವನ್ನು ಕಳೆಯುವಿರಿ. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ.

ಮಿಥುನ ರಾಶಿ :

ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಇಂದು ವಾಹನದ ಸಮಯವು ವ್ಯತ್ಯಾಸವಾದ್ದರಿಂದ ನಡೆಯಬೇಕಾಗ ಸ್ಥಿತಿ ಬರಬಹುದು. ಹಣಕಾಸು ವ್ಯವಹಾರದಲ್ಲಿ ಸುಧಾರಣೆಯಾಗಲಿದೆ. ಹೆತ್ತವರ ಜೊತೆ ಬಾಂಧವ್ಯ ಗಟ್ಟಿ ಮಾಡಿಕೊಳ್ಳಿ. ಪ್ರೀತಿಯ ಪ್ರಭಾತವು ನಿಮ್ಮ ಜೀವನವನ್ನು ಬೆಳಗಿಸುತ್ತದೆ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ.

ಕರ್ಕಾಟಕ ರಾಶಿ :

ಮಾತನ್ನು ಆಡುವಾಗ ಪದಗಳ ಮೇಲೆ ಗಮನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಹಣದ ವ್ಯವಹಾರಗಳಲ್ಲಿ ನೆಮ್ಮದಿ ಅನುಭವಿಸಲಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಮಾತುಕತೆ ಸಂತೋಷ ನೀಡಲಿದೆ. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು.

ಸಿಂಹ ರಾಶಿ :

ಸಿಕ್ಕ ಉದ್ಯೋಗವು ಮುಂದೆ ಅನೇಕ ಲಾಭವನ್ನು ಮಾಡಿ ಕೊಡಲಿದೆ. ಶಿಷ್ಟ ನಡವಳಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತದೆ. ಕಟುವಚನದಿಂದ ಅವಾಂತರ ಸೃಷ್ಟಿಯಾದೀತು. ಹಣದ ವ್ಯಯದಲ್ಲಿ ಮಿತಿಮೀರಬೇಡಿ, ಸಣ್ಣ ಉಡುಗೊರೆಗೂ ಸಂಯಮ ಬೇಕಾಗುತ್ತದೆ. ಕುಟುಂಬ ಸದಸ್ಯರ ಭಾವನೆಗಳಿಗೆ ಗೌರವ ನೀಡಿ, ಬೇಜವಾಬ್ದಾರಿಯ ಮಾತುಗಳಿಂದ ದೂರವಿರಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ.

ಕನ್ಯಾ ರಾಶಿ :

ಇಂದು ಹಲವಾರು ದಿನಗಳಿಂದ ವಾಹನ ಖರೀದಿಯ ಆಸೆಯನ್ನು ಪೂರ್ಣಮಾಡಿಕೊಳ್ಳುವಿರಿ. ವಿನಾಕಾರಣ ವಾಗ್ವಾದಗಳು ನಡೆಯಬಹುದು. ನ್ಯಾಯಾಲಯದಲ್ಲಿ ನಿಮಗೆ ಜಯವು ಸಿಗಲಿದೆ. ಕೋಪವನ್ನು ನಿಯಂತ್ರಿಸುವುದು ಅತ್ಯಗತ್ಯ, ಇಲ್ಲದಿದ್ದರೆ ಸಂಬಂಧಗಳು ಹಾಳಾಗಬಹುದು. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಹೊರದೇಶದಲ್ಲಿ ಇರುವವರಿಗೆ ಕಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು.

ತುಲಾ ರಾಶಿ :

ನೀವು ಇಂದು ಉದ್ಯೋಗದ ಸ್ಥಳದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ಹೊಸ ಹೂಡಿಕೆ ಯೋಜನೆಗಳ ಕುರಿತು ಅಧ್ಯಯನ ಮಾಡಿ ನಂತರ ನಿರ್ಧಾರ ಕೈಗೊಳ್ಳಿ. ಕುಟುಂಬದೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು.

ವೃಶ್ಚಿಕ ರಾಶಿ :

ನಿಮಗಿಷ್ಟವಾದವರ ಜೊತೆ ನಿಮ್ಮ ವಿಹಾರ ಇರುವುದು. ಇಂದು ಬಾಯಿ ಚಪಲಕ್ಕೆ ಅಹಿತಕರಚಮವಾದ ಆಹಾರವನ್ನು ಸೇವಿಸುವಿರಿ. ಹಣದ ಕುರಿತು ಸಕಾಲಿಕ ನಿರ್ಧಾರ ಅಗತ್ಯ. ಒಗ್ಗಟ್ಟನ್ನು ಪ್ರದರ್ಶಿಸಲು ಹೋಗಿ ಎಡವಟ್ಟು ಮಾಡಿಕೊಳ್ಳುವಿರಿ. ಕುಟುಂಬದ ಒಗ್ಗಟ್ಟಿಗೆ ಬಲ ನೀಡುವ ಯತ್ನ ಮಾಡಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು.

ಧನು ರಾಶಿ :

ಇಂದು ವಿದ್ಯಾರ್ಥಿಗಳಿಗೆ ತಂದೆಯಿಂದ ಅಗತ್ಯವಿರುವ ಧನವು ಲಭ್ಯವಾಗಬಹುದು. ಅಧರ್ಮ ಮಾರ್ಗದಲ್ಲಿ ಹೋಗಲು ಯಾರದರೂ ಪ್ರೇರಣೆ ಕೊಡಬಹುದು. ಖರ್ಚು ಹೆಚ್ಚಾಗಬಹುದು. ಮಿತ್ರನ ಸಲಹೆಯಿಂದ ಹಣಕಾಸಿನ ಲಾಭ ಸಂಭವಿಸುತ್ತದೆ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ಉನ್ನತ ವಿದ್ಯಾಭ್ಯಾಸಕ್ಕೆ ನಿಮ್ಮವರು ಸಲಹೆ ಕೊಡಬಹುದು. ನಿಮ್ಮ ಹಣವನ್ನು ಪರಿಚಿತರು ಕೇಳಬಹುದು. ಅಧಿಕಾರವು ಅಹಂಕಾರವಾಗಿ ಬದಲಾಗುವುದು ಬೇಡ.

ಮಕರ ರಾಶಿ :

ಅನ್ಯರ ಮಾತಿನಿಂದ ಒತ್ತಡದಲ್ಲಿ ಸಿಲುಕಿಕೊಳ್ಳಬೇಡಿ. ನಡವಳಿಕೆಯಿಂದ ತೊಂದರೆ ಆಗಬಹುದು, ತಾಳ್ಮೆಯಿಂದ ಮುಂದುವರಿಯಿರಿ. ಹಣಕಾಸಿನ ವಿಚಾರದಲ್ಲಿ ಲಾಭದಾಯಕ ದಿನ. ಸಂಗಾತಿಯ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಿ. ನಿಮ್ಮ ಪ್ರತಿಭೆ ಗುರುತಿಸಲ್ಪಡುವ ದಿನವಾಗಬಹುದು. ಹೊಸ ವ್ಯವಹಾರಕ್ಕೆ ಹಿಂದೇಟು ಮನಸ್ಸು ಹಾಕುವುದು. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು.

ಕುಂಭ ರಾಶಿ :

ಎಂದೋ ಹೂಡಿದ ಹಣವು ಇಂದು ಉಪಯೋಗಕ್ಕೆ ಬರಲಿದೆ. ಹಣಕಾಸು ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗುತ್ತವೆ. ಧರ್ಮಾರ್ಥ ಕಾರ್ಯಗಳಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಪಡೆದ ಹಣವನ್ನು ಹಿಂದಿರುಗಿ ಪ್ರೀತಿಯ ವಿಷಯದಲ್ಲಿ ಹೊಸ ತಿರುವು ಸಾಧ್ಯ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು.

ಮೀನ ರಾಶಿ :

ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿ. ನಿಮ್ಮನ್ನು ಬಿಟ್ಟುಕೊಡಲು ಆಗದು. ಸೋಲನ್ನು ಒಪ್ಪಿಕೊಳ್ಳಲು ನಿಮಗೆ ಇಂದು ಆಗದು. ಹಣಕಾಸು ಸಂಬಂಧಿತ ನ್ಯಾಯಾಲಯದ ವಿಚಾರದಲ್ಲಿ ನೀವು ಲಾಭ ಗಳಿಸಬಹುದು. ಮಕ್ಕಳ ಸಾಧನೆ ನಿಮ್ಮಲ್ಲಿ ಹೆಮ್ಮೆ ಹುಟ್ಟಿಸುತ್ತದೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವಜ್ರ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:34 – 17:10, ಯಮಗಂಡ ಕಾಲ 09:09 – 10:45, ಗುಳಿಕ ಕಾಲ 12:22 – 13:58

-ಲೋಹಿತ ಹೆಬ್ಬಾರ್-8762924271 (what’s app only)

Source link

Exit mobile version