RCB vs GT: ಏಕಪಕ್ಷೀಯವಾಗಿ ಗುಜರಾತ್ ಮಣಿಸಿ ಸತತ 2ನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ – Kannada News | Defending Champions RCB Reach Second Consecutive IPL Final with Dominant Q1 Win vs gujarat titans

ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿರುವ ಹಾಲಿ ಚಾಂಪಿಯನ್ ಆರ್​ಸಿಬಿ, ತಾನು ಏಕೆ ಮತ್ತೊಮ್ಮೆ ಚಾಂಪಿಯನ್ ಆಗಬೇಕು ಎಂಬುದನ್ನು ಕ್ವಾಲಿಫೈಯರ್ 1 ಪಂದ್ಯದಲ್ಲಿಯೇ ಸಾಭೀತುಪಡಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಿಸಿದ ಆರ್​ಸಿಬಿ ದಾಖಲೆಯ ಗೆಲುವು ದಾಖಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ದಾಖಲೆಯ 255 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್, ಆರ್​ಸಿಬಿ ಬೌಲರ್​ಗಳಿಗೆ ದಾಳಿಗೆ ನಲುಗಿ ಅಲ್ಪ ಮೊತ್ತಕ್ಕೆ ಮಂಡಿಯೂರಿತು. ಆದಾಗ್ಯೂ ಗುಜರಾತ್​ಗೆ ಫೈನಲ್​ಗೇರಲು ಇನ್ನೊಂದು ಅವಕಾಶವಿದ್ದು, ಕ್ವಾಲಿಫೈಯರ್ 2 ಅನ್ನು ಆಡಲಿದೆ. ಆ ಪಂದ್ಯದಲ್ಲಿ ಗೆದ್ದರೆ ಮತ್ತೆ ಫೈನಲ್​ನಲ್ಲಿ ಆರ್​ಸಿಬಿಯನ್ನು ಎದುರಿಸಲಿದೆ.

Published On – 11:43 pm, Tue, 26 May 26

Source link

RCB vs GT: ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್ – Kannada News | RCB Captain Rajat Patidar Breaks World Record for Most Sixes in A T20 Series

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್, ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ನಿರ್ಣಾಯಕ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್, 33 ಎಸೆತಗಳಲ್ಲಿ 283.82 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 9 ಸಿಕ್ಸರ್ ಮತ್ತು 5 ಬೌಂಡರಿಗಳೊಂದಿಗೆ ಅಜೇಯ 93 ರನ್ ಗಳಿಸಿದರು. ರಜತ್ ಶತಕ ಬಾರಿಸುವ ಅವಕಾಶದಿಂದ ವಂಚಿತರಾದರೂ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯೊಂದನ್ನು ಮುರಿದಿದ್ದಾರೆ.

ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಬರೋಬ್ಬರಿ 9 ಸಿಕ್ಸರ್​ಗಳನ್ನು ಬಾರಿಸಿದ ರಜತ್, ಟಿ20 ಟೂರ್ನಮೆಂಟ್‌ವೊಂದರನ್ನು ಅತಿ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿದ ನಾಯಕರ ಪಟ್ಟಿಯಲ್ಲಿ ರಿಯಾನ್ ಪರಾಗ್ ಅವರ ದಾಖಲೆ ಮುರಿದು ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಐಪಿಎಲ್‌ನಲ್ಲಿ ಇದುವರೆಗೆ 41 ಸಿಕ್ಸರ್​ಗಳನ್ನು ಬಾರಿಸಿರುವ ರಜತ್, 2023-24 ರ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಅಸ್ಸಾಂ ತಂಡದ ನಾಯಕನಾಗಿ 40 ಸಿಕ್ಸರ್​ಗಳನ್ನು ಬಾರಿಸಿದ್ದ ರಿಯಾನ್ ಪರಾಗ್ ಅವರ ದಾಖಲೆಯನ್ನು ಮುರಿದರು.

Source link

RCB vs GT: ಸತತ 4ನೇ ಆವೃತ್ತಿಯಲ್ಲಿ 600 ರನ್; ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ

Source link

ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!

ಬೆಂಗಳೂರು, (ಮೇ 26): ತೀವ್ರ ಕುತೂಹಲ ಕೆರಳಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಎರಡ್ಮೂರು ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಆಗಲಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನಾಳೆ (ಮೇ 27) ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಜೊತೆ ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಿದ್ದರಾಮಯ್ಯನವರು ನಾಡಿದ್ದು ಅಂದರೆ ಮೇ 28ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ನೋದಿ: ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ

Source link

ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ

ನವದೆಹಲಿ, ಮೇ 26: ‘ಎದ್ದೇಳು ಮಗನೇ…’ ಎನ್ನುತ್ತಾ ಅಸಹಾಯಕ ತಾಯಾನೆ ತನ್ನ ಸತ್ತ ಮರಿಯಾನೆಯನ್ನು ಸೊಂಡಿಲಿನಿಂದ ಎಬ್ಬಿಸಲು ಪ್ರಯತ್ನಿಸುತ್ತಿರುವ ದೃಶ್ಯ ನೋಡಿದರೆ ಎಂಥವರ ಕಣ್ಣೂ ತುಂಬಿ ಬರುತ್ತದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ (Viral Video) ಆಗುತ್ತಿದ್ದು , ಜನರು ಭಾವುಕರಾಗುತ್ತಿದ್ದಾರೆ. ಛತ್ತೀಸ್​​ಗಢದಲ್ಲಿ ಈ ಘಟನೆ ನಡೆದಿದೆ. ಧರ್ಮಜೈಗಢ ಅರಣ್ಯ ವಿಭಾಗದ ಛಲ್ ಬೆಟ್ಟದಲ್ಲಿ 39 ಆನೆಗಳ ಹಿಂಡು ತಡರಾತ್ರಿ ಪುಸಲ್ಡಾ ಗ್ರಾಮದ ಬಳಿಯ ಕೊಳದಲ್ಲಿ ಸ್ನಾನ ಮಾಡಲು ಬಂದಿತ್ತು. ಈ ಘಟನೆಯಲ್ಲಿ, ಮರಿ ಆನೆಯೊಂದು ಆಳವಾದ ನೀರಿಗೆ ಹೋಗಿ ಮುಳುಗಿ ಸಾವನ್ನಪ್ಪಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೀದರ್: ಗಾಳಿ ಸಹಿತ ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು – Kannada News | Bidar Tragedy: 6 Year Old Child Dies After Roof Debris Falls During Hailstorm

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…

Read More

Source link

ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ? – Kannada News | Producer Latha Jayaprakash talks about AI Movie on Kittur Rani Chennamma

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು ಕರೆಸಿ ಈ ಸಿನಿಮಾ ಮಾಡಿಸಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿ ಈ ಸಿನಿಮಾ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಶ್ವೇತಾ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಇದು ಒಂದು ರೀತಿಯ ಪ್ರಯೋಗಾತ್ಮಕ ಸಿನಿಮಾ. ನಮ್ಮ ಎರಡನೇ ನಿರ್ಮಾಣದ ಸಿನಿಮಾ ಇದು. ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿರುವುದು ನಮ್ಮ ಹೆಗ್ಗಳಿಕೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ – Kannada News | India vs Afghanistan 2026: Full Squads, Test and ODI Series Schedule Announced

2026 ರ ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಹಾಗೂ ಅಫ್ಘಾನಿಸ್ತಾನದ ನಡುವೆ ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ಈ ಸರಣಿಗೆ ಬಿಸಿಸಿಐ ಈಗಾಗಲೇ ತಂಡಗಳನ್ನು ಪ್ರಕಟಿಸಿದೆ. ಇದೀಗ ಐಪಿಎಲ್ ಪ್ಲೇಆಫ್‌ ನಡುವೆ ಅಫ್ಘಾನಿಸ್ತಾನ ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ಹಶ್ಮತುಲ್ಲಾ ಶಾಹಿದಿ ನಾಯಕತ್ವದಲ್ಲಿ ಅಫ್ಘಾನಿಸ್ತಾನದ ಟೆಸ್ಟ್ ಮತ್ತು ಏಕದಿನ ತಂಡಗಳೆರಡನ್ನು ಪ್ರಕಟಿಸಲಾಗಿದೆ. ಟೆಸ್ಟ್ ಪಂದ್ಯಕ್ಕೆ ರಶೀದ್ ಖಾನ್ ಮತ್ತು ಇಬ್ರಾಹಿಂ ಜದ್ರಾನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ರಹಮಾನುಲ್ಲಾ ಜದ್ರಾನ್, ಬಿಲಾಲ್ ಸಮಿ ಮತ್ತು ನೆಂಗಿಯಾಲಿಯಾ ಖರೋಟೆ ಅವರನ್ನು ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಭಾರತ-ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ

  • ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ನ್ಯೂ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವು ಜೂನ್ 6 ರಿಂದ ಪ್ರಾರಂಭವಾಗಲಿದೆ.
  • ಮೊದಲ ಏಕದಿನ ಪಂದ್ಯ ಜೂನ್ 13 ರಂದು ಮಧ್ಯಾಹ್ನ 1.30 ಕ್ಕೆ ಧರ್ಮಶಾಲಾದಲ್ಲಿ ನಡೆಯಲಿದೆ.
  • ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
  • ಮೂರನೇ ಏಕದಿನ ಪಂದ್ಯ ಜೂನ್ 20 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1.30 ರಿಂದ ಆರಂಭವಾಗಲಿದೆ.

ಮುಖಾಮುಖಿ ದಾಖಲೆ

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಇಲ್ಲಿಯವರೆಗೆ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ಟೀಂ ಇಂಡಿಯಾ ಮೂರರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಅಂದರೆ ಅಫ್ಘಾನಿಸ್ತಾನ ಇದುವರೆಗೆ ಭಾರತದ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಒಂದು ಟೆಸ್ಟ್ ಪಂದ್ಯ ನಡೆದಿದ್ದು, ಆ ಪಂದ್ಯವನ್ನು ಭಾರತ ಗೆದ್ದಿದೆ.

ಅಫ್ಘಾನಿಸ್ತಾನ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ರಹಮಾನುಲ್ಲಾ ಗುರ್ಬಾಜ್, ರಹಮಾನುಲ್ಲಾ ಝದ್ರಾನ್, ಅಫ್ಸರ್ ಝಜೈ (ವಿಕೆಟ್ ಕೀಪರ್), ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜೈ, ಶರಫುದಿನ್ ಅಶ್ರಫ್, ನಂಗ್ಯಾಲ್ ಖರೋಟೈ, ಖೈಸ್ ಅಹ್ಮದ್, ಬಿಲಾಲ್ ಸಮಿ, ಜಿಯಾ ಶರೀಫಿ, ಸಲೀಮ್ ಸಫಿ

ಅಫ್ಘಾನಿಸ್ತಾನ ಏಕದಿನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:29 pm, Tue, 26 May 26

Source link

ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ – Kannada News | Inalienable part of India MEA rips into China and Pakistans reference to Jammu and Kashmir

ನವದೆಹಲಿ, ಮೇ 26: ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಬಿಡುಗಡೆ ಮಾಡಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ಉಲ್ಲೇಖಿಸಿದ್ದಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ” ಎಂದು ಪುನರುಚ್ಚರಿಸಿರುವ ಭಾರತ ಚೀನಾ-ಪಾಕಿಸ್ತಾನದ ವಿರುದ್ಧ ಕಿಡಿಕಾರಿದೆ.

ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಕುರಿತು ಮಾಡಲಾದ ಅನಗತ್ಯ ಉಲ್ಲೇಖಗಳನ್ನು ಭಾರತವು ಖಡಾಖಂಡಿತವಾಗಿ ಖಂಡಿಸುತ್ತದೆ ಎಂದು ಹೇಳಿದರು. ಭಾರತದ ದೀರ್ಘಾವಧಿಯ ನಿಲುವನ್ನು ಪುನರುಚ್ಚರಿಸಿದ ರಣಧೀರ್ ಜೈಸ್ವಾಲ್, ಭಾರತದ ಅವಿಭಾಜ್ಯ ಅಂಗಗಳಾಗಿರುವ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವ ಯಾವುದೇ ಹಕ್ಕು ಬೇರೆ ಯಾವುದೇ ದೇಶಕ್ಕೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಏನಿದು ಅಬ್ರಹಾಂ ಒಪ್ಪಂದ? ಟ್ರಂಪ್ ಮಾತಿಗೆ ಒಪ್ಪಿದರೆ ಪಾಕಿಸ್ತಾನದ ಪಾಸ್​ಪೋರ್ಟ್ ಏಕೆ ಬದಲಾಗುತ್ತದೆ?

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಕುರಿತಾದ ಉಲ್ಲೇಖಗಳಿಗೂ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುವ ಮೂಲಕ ಈ ಪ್ರದೇಶಗಳ ಮೇಲಿನ ಪಾಕಿಸ್ತಾನದ ಅಕ್ರಮ ಮತ್ತು ಬಲವಂತದ ಆಕ್ರಮಣವನ್ನು ಬಲಪಡಿಸಲು ಅಥವಾ ಕಾನೂನುಬದ್ಧಗೊಳಿಸಲು ಇತರ ದೇಶಗಳು ಮಾಡುವ ಯಾವುದೇ ಪ್ರಯತ್ನಗಳನ್ನು ನಾವು ದೃಢವಾಗಿ ವಿರೋಧಿಸುತ್ತೇವೆ ಮತ್ತು ತಿರಸ್ಕರಿಸುತ್ತೇವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ

1963ರಲ್ಲಿ ಪಾಕಿಸ್ತಾನ ಮತ್ತು ಚೀನಾ ನಡುವೆ ಸಹಿ ಮಾಡಲಾದ ಗಡಿ ಒಪ್ಪಂದವನ್ನು ಭಾರತ ಎಂದಿಗೂ ಮಾನ್ಯ ಮಾಡಿಲ್ಲ ಎಂಬುದನ್ನು ಭಾರತ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ವಿಶ್ವಸಂಸ್ಥೆಯ ಚಾರ್ಟರ್, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಪ್ರಕಾರ ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಚೀನಾ ಮತ್ತು ಪಾಕಿಸ್ತಾನ ಉಲ್ಲೇಖಿಸಿದ್ದವು. ಇದರೊಂದಿಗೆ, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಜಮ್ಮು-ಕಾಶ್ಮೀರ ಭಾಗದ “ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್” (CPEC) ಯೋಜನೆಗಳನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆಯೂ ಚರ್ಚಿಸಲಾಗಿತ್ತು. ಇದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕನ್ನ: ಲಾಕರನ್ನೇ ಕದ್ದೊಯ್ದ ಕಳ್ಳರು; ಬಂಧನ – Kannada News | House Robbery During Kashi Pilgrimage: Thieves Who Stole Locker Arrested

ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣಗಳುImage Credit source: tv9 kannada

ಬೆಂಗಳೂರು, ಮೇ 26: ನಗರದಲ್ಲಿ ಕಳ್ಳತನ (Theft) ಕೇಸ್​​ಗಳು ಕಡಿಮೆಯಾಗುತ್ತಿಲ್ಲ. ಭಿನ್ನ ವಿಭಿನ್ನ ರೀಯಿಯಲ್ಲಿ ಖದೀಮರು ದೋಚುತ್ತಿರುತ್ತಾರೆ. ಇತ್ತೀಚೆಗೆ ಒಂದು ತಂಡ ಜ್ಯುವೆಲರಿ ಶಾಪ್​​ಗೆ ಕನ್ನ ಹಾಕಿದ್ದರು. ಇದೀಗ ಮತ್ತೊಂದು ತಂಡ ಕಾಶಿ ಯಾತ್ರೆಗೆ ಹೋಗಿದ್ದವರ ಮನೆ ಟಾರ್ಗೆಟ್ ಮಾಡಿ ನುಗ್ಗಿದ್ದಾರೆ. ಎರಡು ಕೇಸ್​​​ ಭೇದಿಸಿರುವ ಪೊಲೀಸರು ದೋಚಿರುವ ವಸ್ತುಗಳ ಸಮೇತ ಆರೋಪಿಗಳ ಹೆಡೆಮುರಿ (Arrest) ಕಟ್ಟಿದ್ದಾರೆ.

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಂಗಾಧರ, ಬಸವ ಮತ್ತು ಕಿರಣ್ ಬಂಧಿತ ಆರೋಪಿಗಳು. ಸದ್ಯ ಬಂಧಿತರಿಂದ 70 ಲಕ್ಷ ರೂ ಮೌಲ್ಯದ ಅರ್ಧ ಕೆ.ಜಿ ಚಿನ್ನ, 1.43 ಲಕ್ಷ ರೂ. ನಗದು ಹಣ ಮತ್ತು 750 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪಕ್ಕಾ ಪ್ಲ್ಯಾನ್​ ಮಾಡಿ ಲಾಕರ್​​ರನ್ನೇ ಹೊತ್ತೊಯ್ದ ಖದೀಮರು

ಮಾರ್ಚ್ 26ರಂದು ಬ್ಯಾಡರಹಳ್ಳಿ ಸಿಂಡಿಕೇಟ್ ಲೇಔಟ್‌ನಲ್ಲಿ ಮನೆಯೊಂದನ್ನು ಟಾರ್ಗೆಟ್ ಮಾಡಿದ್ದ ಕಳ್ಳರು, ಅದಕ್ಕೂ ಎರಡು ಮೂರು ದಿನ ಏರಿಯಾದಲ್ಲಿ ರೌಂಡ್ಸ್ ಹಾಕಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲ ಅನ್ನೋದು ಗೊತ್ತಾಗಿದೆ. ಇತ್ತ ಮನೆ ಮಾಲೀಕರು ಕುಟುಂಬ ಸಮೇತ ಕಾಶಿಗೆ ತೀರ್ಥಯಾತ್ರೆಗೆ ಹೋಗಿದ್ದರು. ಮೂರ್ನಾಲ್ಕು ದಿನ ಮನೆ ಗಮನಿಸಿದ ಕಳ್ಳರ ತಂಡಕ್ಕೆ ಗೇಟ್ ಬಳಿ ಹಾಲು, ಪೇಪರ್ ಬಿದ್ದಿರುವುದು ನೋಡಿ ಯಾರು ಇಲ್ಲ ಅನ್ನೋದು ಗೊತ್ತಾಗಿತ್ತು.

ಇದನ್ನೂ ಓದಿ: ಹಳೆ ಮಾಲೀಕನ ಮನೆಗೆ ನುಗ್ಗಿ ಚಿನ್ನಾಭರಣ ಕದ್ದ ಮಾಜಿ ಕಾರು ಚಾಲಕ: ಸಿನಿಮಾ ಸ್ಟೈಲ್​​ನಲ್ಲಿ ಕಳ್ಳತನ

ಪ್ಲಾನ್ ಮಾಡಿ ಮನೆಯೊಳಗೆ ನುಗ್ಗಿದ್ದ ಟೀಂ ಒಳಗಿದ್ದ ಲಾಕರ್ ಅನ್ನು ಒಡೆಯಲು ಪ್ರಯತ್ನಿಸಿದ್ದರು. ಆದರೆ ಅದು ಓಪನ್ ಆಗದ ಕಾರಣ ಲಾಕರ್ ಅನ್ನೇ ಹೊತ್ತೊಯ್ದು ಅದರಲ್ಲಿದ್ದ ಚಿನ್ನಾಭರಣ, ಹಣ ಎಲ್ಲವನ್ನೂ ತೆಗೆದುಕೊಂಡಿದ್ದಾರೆ. ಕಾಶಿಯಿಂದ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಕೂಡಲೇ ಬ್ಯಾಡರಹಳ್ಳಿ ಠಾಣೆಗೆ ಮನೆ ಮಾಲೀಕರು ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೆಜಿಗಟ್ಟಲೆ‌ ಬೆಳ್ಳಿ ಕಳ್ಳತನ

ಇನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಖತರ್ನಾಕ್ ಗ್ಯಾಂಗ್​ವೊಂದನ್ನ ಅರೆಸ್ಟ್ ಮಾಡಿದ್ದಾರೆ. ಜ್ಯುವೆಲ್ಲರಿ ಅಂಗಡಿಯ ಗೋಡೆ ಕೊರೆದು ಕೆಜಿಗಟ್ಟಲೇ ಬೆಳ್ಳಿ ವಸ್ತುಗಳನ್ನ ಕದ್ದು ಎಸ್ಕೇಪ್ ಆಗಿದ್ದ ಮೂವರನ್ನ ಬಂಧಿಸಿದ್ದಾರೆ. ಜಾಟ್ ಸುರೇಶ್, ಧನರಾಮ್, ನೇಮಿಚಂದ್​​ ಎಂಬುವವರನ್ನು ಮಾಲ್ ಸಮೇತ ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಶಾಪ್​​ ಟಾರ್ಗೆಟ್ ಮಾಡಿದ್ದ ಆರೋಪಿಗಳು ಏಪ್ರಿಲ್ 27ರ ಬೆಳಗಿನ ಜಾವ ಗೋಡೆ ಕೊರದಿದ್ದರು. ಮಹೇಂದ್ರ ಕುಮಾರ್ ಎಂಬಾತ ತನ್ನ ಟೀಂ ಸಮೇತ ನುಗ್ಗಿದ್ದ. ಶಟರ್ ಮುರಿದು ಮತ್ತು ಗೋಡೆ ಕೊರೆದು ಒಳ ಹೊಕ್ಕಿದ್ದವರು ಸುಮಾರು 70 ಕೆಜಿ ಬೆಳ್ಳಿ ದೋಚಿದ್ದರು. ಜೊತೆಗೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್​ಗಳನ್ನು ಎಗರಿಸಿದ್ದಾರೆ.

ಬಂಗಾರ ಮುಟ್ಟದ ಕಳ್ಳರು

ಇಲ್ಲಿ ಮತ್ತೊಂದು ವಿಷಯ ಏನೆಂದರೆ ಜ್ಯುವೆಲ್ಲರಿ ಶಾಪ್​ನಲ್ಲಿ ಎಷ್ಟೇ ಬಂಗಾರ ಇದ್ದರು ಅದನ್ನ ಟಚ್ ಕೂಡ ಮಾಡಿರಲಿಲ್ಲ. ಬೆಳ್ಳಿಯನ್ನ ಮಾತ್ರ ಕೆಜಿಗಟ್ಟಲೇ ಬ್ಯಾಗ್​ಗೆ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಮುಂಚೆ ಕೂಡ ಇಂತಹದ್ದೇ ಕೃತ್ಯ ನಡೆಸಿದ್ದರೂ ಬಂಗಾರ ಕಳ್ಳತನ ಮಾಡಿರಲಿಲ್ಲ.

ಇದನ್ನೂ ಓದಿ: ಇದೇ ಕರ್ನಾಟಕ ಪೊಲೀಸ್ ತಾಕತ್ತು: ಇಡೀ ದೇಶದೆಲ್ಲೆಡೆ 100ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಖದೀಮ ಬೆಂಗಳೂರಿನಲ್ಲಿ ಲಾಕ್

ಇನ್ನು ಆರೋಪಿಗಳು ತಾವು ದೋಚಿದ್ದ ಬೆಳ್ಳಿಯ ಅರ್ಧ ಭಾಗವನ್ನು ಹೈದರಾಬಾದ್‌ನಲ್ಲಿ ಮಾರಾಟ ಮಾಡಿ, ನಂತರ ರಾಜಸ್ಥಾನಕ್ಕೆ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬಾಗಲಗುಂಟೆ ಪೊಲೀಸರು, ಒಂದು ಕೋಟಿ ರೂ ಮೌಲ್ಯದ 36 ಕೆಜಿ ಬೆಳ್ಳಿ ಸಮೇತ ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಗ್ಯಾಂಗ್‌ನ ಕಿಂಗ್‌ಪಿನ್ ಆಗಿರುವ ಮಹೇಂದ್ರ ಎಂಬಾತನಿಗಾಗಿ ಬಾಗಲಗುಂಟೆ ಪೊಲೀಸರು ಬಲೆ ಬೀಸಿದ್ದು, ತನಿಖೆ ನಡೆಸಿದ್ದಾರೆ.

ವರದಿ: ವಿಕಾಸ್ Tv9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version