Headlines

ಹೊಸ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಎಂಟ್ರಿ

ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ (R. Ashwin) ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಐಪಿಎಲ್​ನಿಂದ ನಿವೃತ್ತಿ ಘೋಷಿಸಿರುವ ಅವರು ಮುಂಬರುವ ಮೇಜರ್ ಲೀಗ್  ಕ್ರಿಕೆಟ್ (MLC) ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಅಮೆರಿಕ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ಈಗಾಗಲೇ ಮೂರು ಸೀಸನ್​ ಮುಗಿಸಿರುವ ಎಂಎಲ್​ಸಿಯ ನಾಲ್ಕನೇ ಆವೃತ್ತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯಲು ಅಶ್ವಿನ್ ಒಪ್ಪಂದ ಮಾಡಿಕೊಂಡಿದ್ದಾರೆ. ಇದರೊಂದಿಗೆ …

Read More

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ನವದೆಹಲಿ, ಮಾರ್ಚ್ 29: ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ. ಯಾವುದೇ ಒಂದು ತಿಂಗಳಲ್ಲಿ ಇಷ್ಟು ಮೊತ್ತದ ವಿದೇಶೀ ಹೂಡಿಕೆಗಳ ಹೊರಹರಿವು ಕಂಡಿದ್ದು ಇದೇ ಮೊದಲು….

Read More

Job Opportunities: 10ನೇ ತರಗತಿ ಪಾಸಾದ ಯುವಕ/ಯುವತಿಯರಿಗೆ ಗುಡ್​ನ್ಯೂಸ್​; ಇಲ್ಲಿದೆ ಉದ್ಯೋಗವಕಾಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಒಂದು ಮಹತ್ವದ ಉದ್ಯೋಗಾವಕಾಶ ಲಭಿಸಿದೆ. ಖ್ಯಾತ ಸಂಸ್ಥೆಯಾದ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” (Swiggy Insta Mart) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪಿಕರ್, ಪ್ಯಾಕರ್ ಮತ್ತು ಲೋಡಿಂಗ್ ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ…

Read More

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು. ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ…

Read More

ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು,…

Read More

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ಮಾಡುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಸ್ವಚ್ಛತೆಯ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು…

Read More

IDBI Bank Recruitment 2026: ಆಕರ್ಷಕ ವೇತನದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ

ಐಡಿಬಿಐ ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ತಜ್ಞ ಅಧಿಕಾರಿ (Specialist Officer) ಹುದ್ದೆಗಳ ಭರ್ತಿಗೆ ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಮೂಲಕ ಅವಕಾಶ ಕಲ್ಪಿಸಲಾಗಿದೆ. ಒಟ್ಟು 33 ತಜ್ಞ ಅಧಿಕಾರಿ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಐಟಿ & ಎಂಐಎಸ್ ವಿಭಾಗಕ್ಕೆ 19 ಹುದ್ದೆಗಳು, ಭದ್ರತಾ ಅಧಿಕಾರಿ (ಗ್ರೇಡ್-ಡಿ)…

Read More

Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದ ಮೂಲಕವೇ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೇವಲ 38 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಬರೆದಿರುವ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… 4000 ರನ್​: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ 4000 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ…

Read More

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ಬಾಗಲಕೋಟೆ, ಮಾರ್ಚ್​​ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ…

Read More

Tamil Nadu Elections: ತಮಿಳುನಾಡು ಚುನಾವಣೆ: ಟಿವಿಕೆ ಮತ್ತು ಡಿಎಂಕೆ ನಡುವೆ ನೇರ ಹಣಾಹಣಿ, ಎರಡು ಕ್ಷೇತ್ರಗಳಲ್ಲಿ ದಳಪತಿ ವಿಜಯ್ ಸ್ಪರ್ಧೆ

ಚೆನ್ನೈ, ಮಾರ್ಚ್​ 29: ತಮಿಳುನಾಡು ಚುನಾವಣೆ(Tamil Nadu Election)ಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜತೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಸಿ ಜೋಸೆಫ್ ವಿಜಯ್ ಅವರು ಚೆನ್ನೈನ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವದಿಂದ ಸ್ಪರ್ಧಿಸಲಿದ್ದಾರೆ, ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೂ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಟಿ ನಗರದಿಂದ ಎನ್…

Read More