ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದು, ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಆಪ್ತರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದು, ನಿಮ್ಮ ಪರವಾಗಿ ನಾವೇ ರಾಹುಲ್ ಗಾಂಧಿ ಬಳಿ ಮಾತನಾಡುತ್ತೇವೆ ಎಂದಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಇಲ್ಲ, ನಾನು ರಾಹುಲ್ ಗಾಂಧಿಯವರನ್ನ ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ಕೊಡುತ್ತೇನೆ, ನೀವು ಬೇಕಾದ್ರೆ ಹೋಗಿ ಮಾತಾಡಿ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಆಧ್ಯಾತ್ಮಿಕ ಮತ್ತು ಮಾನವೀಯ ಆಂದೋಲನದ ಪ್ರಮುಖ ಸಂಸ್ಥೆಯಾದ ‘ಆರ್ಟ್ ಆಫ್ ಲಿವಿಂಗ್’ (Art of Living) ತನ್ನ 45 ವರ್ಷಗಳ ಯಶಸ್ವಿ ಪ್ರಯಾಣವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಭವ್ಯ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳ ಜಾಗೃತಿಯನ್ನು ಗೌರವಿಸಲು ದೇಶದ ಪ್ರಮುಖ ಚಿತ್ರನಿರ್ಮಾಪಕರು, ಬಾಲಿವುಡ್ ತಾರೆಯರು ಹಾಗೂ ರಾಜಕೀಯ ಮುಖಂಡರು ಒಂದೇ ಸೂರಿನಡಿ ಸೇರಿದರು.
ಈ ಕಾರ್ಯಕ್ರಮದಲ್ಲಿ ಕೇರಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಖ್ಯಾತ ಚಲನಚಿತ್ರ ನಿರ್ದೇಶಕ ರಾಜ್ ಕುಮಾರ್ ಹಿರಾನಿ, ಹೆಸರಾಂತ ನಿರ್ಮಾಪಕ ಸಾಜಿದ್ ನಾಡಿಯಾಡ್ವಾಲಾ, ನಟ ವಿಕ್ರಾಂತ್ ಮಾಸ್ಸಿ, ನಟ-ಹಾಸ್ಯ ಕಲಾವಿದ ಸುನಿಲ್ ಗ್ರೋವರ್, ಕವಿ ಹಾಗೂ ನಟ ವಿನೀತ್ ಕುಮಾರ್ ಸಿಂಗ್, ಸೆಲೆಬ್ರಿಟಿ ಫೋಟೋಗ್ರಾಫರ್ ಅವಿನಾಶ್ ಗೋವಾರಿಕರ್ ಮತ್ತು ಚಲನಚಿತ್ರ ನಿರ್ಮಾಪಕ ಮಹಾವೀರ್ ಜೈನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಗುರೂಜಿ ಅವರ ಸನ್ನಿಧಿಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
‘ವೈಟ್’ ಚಿತ್ರದಲ್ಲಿ ಗುರೂಜಿ ಪಾತ್ರ ಮಾಡಿದ ವಿಕ್ರಾಂತ್ ಮಾಸ್ಸಿ ಭಾವುಕ:
ಕಾರ್ಯಕ್ರಮದ ಅತ್ಯಂತ ಭಾವುಕ ಕ್ಷಣ ಎದುರಾಗಿದ್ದು ನಟ ವಿಕ್ರಾಂತ್ ಮಾಸ್ಸಿ ಅವರು ಮಾತನಾಡಿದಾಗ. ಮುಂಬರುವ ಬಯೋಪಿಕ್ ‘ವೈಟ್’ ಸಿನಿಮಾದಲ್ಲಿ ಗುರೂಜಿ ಶ್ರೀ ಶ್ರೀ ರವಿಶಂಕರ್ ಅವರ ಪಾತ್ರವನ್ನು ತಾವೇ ನಿರ್ವಹಿಸುತ್ತಿರುವುದಾಗಿ ವಿಕ್ರಾಂತ್ ಮಾಸ್ಸಿ ಬಹಿರಂಗಪಡಿಸಿದರು. ನೆರೆದಿದ್ದ ಸಹಸ್ರಾರು ಭಕ್ತರ ಚಪ್ಪಾಳೆಯ ನಡುವೆ ಮಾತನಾಡಿದ ಅವರು, ‘ಈ ಆಶ್ರಮವೇ ನನ್ನ ಮನೆ. ನನ್ನ ಗುರು, ನನ್ನ ಸರ್ವಸ್ವವೂ ಆಗಿರುವವರ ಪಾತ್ರವನ್ನು ತೆರೆಯ ಮೇಲೆ ನಿರ್ವಹಿಸುವ ಸುವರ್ಣಾವಕಾಶ ನನಗೆ ಸಿಕ್ಕಿದೆ. ಆ ಪಾತ್ರಕ್ಕೆ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ’ ಎಂದು ಭಾವುಕರಾದರು.
Vikrant Massey
ಶೂಟಿಂಗ್ ಮುನ್ನ ಇಡೀ ಚಿತ್ರತಂಡಕ್ಕೆ ಸುದರ್ಶನ ಕ್ರಿಯೆ ಕಲಿಸುವ ರಾಜ್ ಕುಮಾರ್ ಹಿರಾನಿ:
ಹೆಸರಾಂತ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಅವರು ಗುರೂಜಿ ಅವರೊಂದಿಗಿನ ತಮ್ಮ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡರು. ‘ನಾನು ಇಲ್ಲಿಗೆ ಬಂದಾಗಲೆಲ್ಲಾ ಒಂದು ವಿಶಿಷ್ಟವಾದ ಸಕಾರಾತ್ಮಕ ಶಕ್ತಿಯನ್ನು ಅನುಭವಿಸುತ್ತೇನೆ. ನಾನು ಯಾವುದೇ ಹೊಸ ಸಿನಿಮಾದ ಶೂಟಿಂಗ್ ಆರಂಭಿಸುವ ಮುನ್ನ, ನನ್ನ ಇಡೀ ಚಿತ್ರತಂಡದ ಸದಸ್ಯರಿಗೆ ಸುದರ್ಶನ ಕ್ರಿಯೆಯನ್ನು ಕಡ್ಡಾಯವಾಗಿ ಕಲಿಸುತ್ತೇನೆ’ ಎಂದು ತಮ್ಮ ಯಶಸ್ಸಿನ ರಹಸ್ಯವನ್ನು ಹಂಚಿಕೊಂಡರು.
Rajkumar Hirani
ಹಾಸ್ಯ ನಟ ಸುನಿಲ್ ಗ್ರೋವರ್ ಅವರು ಈ ಹಿಂದೆ ತಾವು ಭಾಗವಹಿಸಿದ್ದ ಧ್ಯಾನ ಶಿಬಿರದ ನೆನಪುಗಳನ್ನು ಹಾಸ್ಯದ ಶೈಲಿಯಲ್ಲಿ ಹಂಚಿಕೊಂಡು ನೆರೆದಿದ್ದವರನ್ನು ನಗಿಸಿದರು. ನಿರ್ಮಾಪಕ ಮಹಾವೀರ್ ಜೈನ್ ಮಾತನಾಡಿ, ‘70 ವರ್ಷಗಳ ಕಾಲ ಜಗತ್ತಿನಲ್ಲಿ ಒಳಿತನ್ನು ಗಟ್ಟಿಗೊಳಿಸಿದ್ದಕ್ಕಾಗಿ ಮತ್ತು ಕೋಟ್ಯಂತರ ಜನರಿಗೆ ಹೇಗೆ ಬದುಕಬೇಕೆಂದು ಕಲಿಸಿಕೊಟ್ಟಿದ್ದಕ್ಕಾಗಿ ನಾವು ನಿಮಗೆ ಧನ್ಯವಾದ ಅರ್ಪಿಸಲು ಬಂದಿದ್ದೇವೆ’ ಎಂದರು. ಫೋಟೋಗ್ರಾಫರ್ ಅವಿನಾಶ್ ಗೋವಾರಿಕರ್ ಹಾಗೂ ನಟ ವಿನೀತ್ ಕುಮಾರ್ ಸಿಂಗ್ ಕೂಡ ತಮಗೆ ಆಶ್ರಮದಲ್ಲಿ ಉಂಟಾದ ದೈವಿಕ ಅನುಭವವನ್ನು ಹಂಚಿಕೊಂಡರು.
ಆಧ್ಯಾತ್ಮಿಕ ನಾಯಕರ ಮಾರ್ಗದರ್ಶನ ಜಗತ್ತಿಗೆ ಅಗತ್ಯ ಎಂದ ಕೇರಳ ರಾಜ್ಯಪಾಲರು:
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಭಾರತದ ಆಧ್ಯಾತ್ಮಿಕ ಜ್ಞಾನವನ್ನು ಜಗತ್ತಿನಾದ್ಯಂತ ಪಸರಿಸುತ್ತಿರುವ ಗುರೂಜಿ ಅವರ ಕಾರ್ಯವನ್ನು ಶ್ಲಾಘಿಸಿದರು. ‘ಇಂತಹ ಮಹಾತ್ಮರು ತಮಗಾಗಿ ಬದುಕುವುದಿಲ್ಲ, ಇತರರ ಉದ್ಧಾರಕ್ಕಾಗಿ ಬದುಕುತ್ತಾರೆ. ಇಂದಿನ ಆಧುನಿಕ ಜಗತ್ತಿಗೆ ಮಾರ್ಗದರ್ಶನ ನೀಡಲು ಇಡೀ ವಿಶ್ವಕ್ಕೆ ನಮ್ಮ ಗುರೂಜಿ ಅವರಂತಹ ಅಪರೂಪದ ಆಧ್ಯಾತ್ಮಿಕ ನಾಯಕರ ಅಗತ್ಯವಿದೆ’ ಎಂದರು. ಬಿಹಾರದ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಅವರು ವಿಡಿಯೋ ಸಂದೇಶದ ಮೂಲಕ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಯುವ ಸಬಲೀಕರಣದ ಕಾರ್ಯಗಳನ್ನು ಪ್ರಶಂಸಿಸಿದರು.
Rajendra Vishwanath Arlekar
‘ಇಂಟ್ಯೂಷನ್ ಫೆಸ್ಟ್’:
ಆಚರಣೆಯ ಪ್ರಮುಖ ಆಕರ್ಷಣೆಯಾಗಿ ‘ಇಂಟ್ಯೂಷನ್ ಫೆಸ್ಟ್’ ಆಯೋಜಿಸಲಾಗಿತ್ತು. ಇದರಲ್ಲಿ 11,000ಕ್ಕೂ ಹೆಚ್ಚು ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು. ಆರ್ಟ್ ಆಫ್ ಲಿವಿಂಗ್ನ ವಿಶೇಷ ತರಬೇತಿ ಪಡೆದ ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿ ಪುಸ್ತಕ ಓದುವುದು, ಆಟ ಆಡುವುದು ಮತ್ತು ಚಿತ್ರ ಬಿಡಿಸುವ ಮೂಲಕ ತಮ್ಮ ತೀಕ್ಷ್ಣ ಬುದ್ಧಿಮತ್ತೆಯನ್ನು ಪ್ರದರ್ಶಿಸಿದರು. ಅತ್ಯಂತ ಆಶ್ಚರ್ಯಕರ ಘಟನೆಯೆಂದರೆ, 50ಕ್ಕೂ ಹೆಚ್ಚು ಮಕ್ಕಳು ಕಣ್ಣಿಗೆ ಸಂಪೂರ್ಣವಾಗಿ ಬಟ್ಟೆ ಕಟ್ಟಿಕೊಂಡು ಆಶ್ರಮದ ತಿರುವು ಮುರುವು ರಸ್ತೆಗಳಲ್ಲಿ ಅತ್ಯಂತ ಸುಲಭವಾಗಿ ಸೈಕಲ್ ಚಲಾಯಿಸಿ ನೆರೆದಿದ್ದವರನ್ನು ಬೆರಗುಗೊಳಿಸಿದರು.
ಕೊಲ್ಕತ್ತಾ, ಮೇ 26: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ರಾಜ್ಯದ ಜನರಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಇವುಗಳಲ್ಲಿ 5 ರೂ.ಗೆ ಮೀನು ಊಟ, ಅನ್ನಪೂರ್ಣ ಯೋಜನೆ ಮತ್ತು ರಾಜ್ಯಾದ್ಯಂತ ಮದ್ಯದಂಗಡಿಗಳ ಕುರಿತು ಹೊಸ ನಿಯಮಗಳು ಕೂಡ ಸೇರಿವೆ. ಈ ಮೀನೂಟದಲ್ಲಿ ತಟ್ಟೆಯ ತುಂಬ ಬಿಸಿ ಬಿಸಿ ಅನ್ನ, ದಾಲ್ ಅಥವಾ ಬೇಳೆ ಸಾರು, ಒಂದು ಬಗೆಯ ತರಕಾರಿ ಪಲ್ಯ, ರುಚಿಕರವಾದ ಮೀನಿನ ಸಾರು ಅಥವಾ ಫಿಶ್ ಫ್ರೈ ನೀಡಲಾಗುವುದು. ಬುಧವಾರದಿಂದ ರಾಜ್ಯ ಸರ್ಕಾರವು ಅನ್ನಪೂರ್ಣ ಯೋಜನೆಗೆ ಫಾರ್ಮ್ಗಳನ್ನು ನೀಡಲು ಪ್ರಾರಂಭಿಸಲಾಗುತ್ತದೆ. ಇದರ ಅಡಿಯಲ್ಲಿ ಮಹಿಳೆಯರು ಪ್ರತಿ ತಿಂಗಳು 3,000 ಪಡೆಯುತ್ತಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು, ಮಾಂಸ, ಮೊಟ್ಟೆ ನಿಷೇಧ ಮಾಡುತ್ತದೆ ಎಂದು ಟಿಎಂಸಿ ಆರೋಪಿಸಿತ್ತು. ಆದರೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸಬ್ಸಿಡಿ ದರದಲ್ಲಿ ಮೀನು ಊಟ ನೀಡಲು ನಿರ್ಧರಿಸಿದೆ. ಈ ಮೂಲಕ ಟಿಎಂಸಿಗೆ ತಿರುಗೇಟು ನೀಡಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಶಾಲೆಗಳು, ಕಾಲೇಜುಗಳು ಮತ್ತು ಪೂಜಾ ಸ್ಥಳಗಳ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇನ್ನು ಮುಂದೆ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ವಾರಕ್ಕೆ 2 ಬಾರಿ 400 ಕ್ಯಾಂಟೀನ್ಗಳಲ್ಲಿ 5 ರೂ.ಗೆ ಮೀನು ಮತ್ತು ಅನ್ನ ಊಟವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಕೇವಲ 5 ರೂಪಾಯಿ ಮುಖಬೆಲೆಯ ಈ ಊಟದ ತಟ್ಟೆಯಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡಲಾಗುತ್ತದೆ. ವಾಸ್ತವವಾಗಿ ಈ ಒಂದು ಊಟದ ತಟ್ಟೆಯ ಒಟ್ಟು ವೆಚ್ಚ ಸುಮಾರು 20ರಿಂದ 25 ರೂ.ಗಳಾಗಿರುತ್ತದೆ. ಆದರೆ, ಬಡವರಿಗೆ ಹೊರೆಯಾಗಬಾರದು ಎಂದು ಗ್ರಾಹಕರಿಂದ ಕೇವಲ 5 ರೂ. ಪಡೆಯಲಾಗುತ್ತದೆ. ಉಳಿದ ಹಣವನ್ನು ಪಶ್ಚಿಮ ಬಂಗಾಳ ಸರ್ಕಾರವೇ ಭರಿಸುತ್ತದೆ.
ದಿನಗೂಲಿ ಕಾರ್ಮಿಕರು, ರಿಕ್ಷಾ ಚಾಲಕರು, ವಲಸೆ ಕಾರ್ಮಿಕರು ಮತ್ತು ಆರ್ಥಿಕವಾಗಿ ಹಿಂದುಳಿದ ಜನರಿಗೆ ಪ್ರತಿದಿನ ಮಧ್ಯಾಹ್ನ ಅತ್ಯಂತ ಕಡಿಮೆ ದರದಲ್ಲಿ ಗೌರವಯುತವಾದ ಊಟ ನೀಡುವುದು ಇದರ ಗುರಿ. ಅತ್ಯಂತ ಕಡಿಮೆ ಬೆಲೆಯದ್ದಾಗಿದ್ದರೂ ಇಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದ ಪ್ರಮುಖ ನಗರಗಳ ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು ಮತ್ತು ಆಸ್ಪತ್ರೆಗಳ ಹತ್ತಿರ ಈ ಕ್ಯಾಂಟೀನ್ಗಳು ಕಾರ್ಯನಿರ್ವಹಿಸುತ್ತವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ದೇವನಹಳ್ಳಿ, ಮೇ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಟೇಕಾಫ್ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್ಗಾಗಿ ರನ್ವೇಗೆ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಸುರಕ್ಷಿತವಾಗಿ ಇಳಿಸಿ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ನಿರ್ಣಾಯಕ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಬಲಿಷ್ಠ ಗುಜರಾತ್ ಬೌಲಿಂಗ್ ವಿಭಾಗವನ್ನು ಹೈರಾಣಾಗಿಸಿದರು. ತಂಡ ಆರಂಭಿಕ ಆಘಾತಕ್ಕೆ ಸಿಲುಕಿಕೊಂಡಿದ್ದರೂ ತಾಳ್ಮೆಯಿಂದ ಇನ್ನಿಂಗ್ಸ್ ಕಟ್ಟಿದ ರಜತ್ ಆ ಬಳಿಕ ರೌದ್ರಾವತಾರ ತಾಳಿದರು ಇದರ ಪರಿಣಾಮವಾಗಿ ರಜತ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಮತ್ತಷ್ಟು ಉಗ್ರರೂಪ ತಾಳಿದ ರಜತ್ 20ನೇ ಓವರ್ವರೆಗೂ ಅಜೇಯರಾಗಿ ಉಳಿದ ರಜತ್ ಕೇವಲ 32 ಎಸೆತಗಳಲ್ಲಿ 93 ರನ್ ಬಾರಿಸಿದರು. ರಜತ್ ಅವರ ಈ ಅಬ್ಬರದ ಬ್ಯಾಟಿಂಗ್ನಿಂದಾಗಿ ಆರ್ಸಿಬಿ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 254 ರನ್ ಕಲೆಹಾಕಿತು.
ಇಂದಿನ ವೇಗದ ಜೀವನಶೈಲಿಯಲ್ಲಿ ಫಿಟ್ ಆಗಿರುವುದು ದೊಡ್ಡ ಸವಾಲಾಗಿದೆ. ವ್ಯಾಯಾಮ ಮಾಡುವುದಕ್ಕೂ ಸಮಯ ಸಿಗದವರ ಸಂಖ್ಯೆ ಹೆಚ್ಚುತ್ತಿದೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಪ್ರತಿದಿನ ಕೇವಲ 1 ಕಿಲೋಮೀಟರ್ ನಡೆಯುವ (Walk) ಅಭ್ಯಾಸವೂ ದೇಹದ ಆರೋಗ್ಯದಲ್ಲಿ ದೊಡ್ಡ ಬದಲಾವಣೆ ತರಬಹುದು. ಹೌದು, ತಜ್ಞರು ನೀಡಿರುವ ಮಾಹಿತಿ ಅನುಸಾರ, ಸಾಮಾನ್ಯವಾಗಿ 1 ಕಿ.ಮೀ. ನಡೆದರೆ ಸುಮಾರು 60ರಿಂದ 100 ಕ್ಯಾಲೊರಿಗಳವರೆಗೆ ಕರಗಿಸಬಹುದು. ಇದು ವ್ಯಕ್ತಿಯ ತೂಕ, ಎತ್ತರ ಮತ್ತು ನಡೆಯುವ ವೇಗದ ಮೇಲೆ ಅವಲಂಬಿತವಾಗಿರುತ್ತದೆ. ವೇಗವಾಗಿ ನಡೆದಷ್ಟು ಹೆಚ್ಚು ಕ್ಯಾಲೊರಿ ಕರಗುತ್ತದೆ.
ವಾಕಿಂಗ್ ಮಾಡುವುದರಿಂದ ಸಿಗುವ ಪ್ರಯೋಜನಗಳು:
ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಪ್ರತಿದಿನ ವಾಕಿಂಗ್ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರಲು ಸಹಾಯವಾಗುತ್ತದೆ. ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯ ಕಾಪಾಡಲು ನೆರವಾಗುತ್ತದೆ.
ಒತ್ತಡ ಕಡಿಮೆ ಮಾಡುತ್ತದೆ: ನಡೆಯುವಾಗ ದೇಹದಲ್ಲಿ ‘ಹ್ಯಾಪಿ ಹಾರ್ಮೋನ್’ ಎಂದು ಕರೆಯಲಾಗುವ ಎಂಡಾರ್ಫಿನ್ ಬಿಡುಗಡೆ ಆಗುತ್ತದೆ. ಇದು ಒತ್ತಡ, ಆತಂಕ ಮತ್ತು ಮನಸ್ಸಿನ ದೌರ್ಬಲ್ಯ ಕಡಿಮೆ ಮಾಡಲು ಸಹಕಾರಿ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಪ್ರತಿದಿನ ವಾಕಿಂಗ್ ಮಾಡುವುದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಮಲಬದ್ಧತೆ ಸಮಸ್ಯೆ ಕಡಿಮೆಯಾಗಬಹುದು ಮತ್ತು ದೇಹದ ಮೆಟಾಬಾಲಿಸಂ ಚುರುಕಾಗುತ್ತದೆ.
ಚೆನ್ನಾಗಿ ನಿದ್ರೆ ಬರುತ್ತದೆ: ವಾಕಿಂಗ್ ದೇಹಕ್ಕೆ ಸಹಜವಾದ ಶ್ರಮ ನೀಡುತ್ತದೆ. ಇದರಿಂದ ರಾತ್ರಿ ಗಾಢ ನಿದ್ರೆ ಬರಲು ಸಹಾಯವಾಗುತ್ತದೆ ಮತ್ತು ನಿದ್ರಾಹೀನತೆ ಸಮಸ್ಯೆ ಕಡಿಮೆಯಾಗಬಹುದು.
ತೂಕ ಇಳಿಕೆಗೆ ಸಹಕಾರಿ: ಸರಿಯಾದ ಆಹಾರ ಪದ್ಧತಿಯ ಜೊತೆಗೆ ಪ್ರತಿದಿನ ವಾಕಿಂಗ್ ಮಾಡಿದರೆ ತೂಕ ಇಳಿಕೆಗೆ ಉತ್ತಮ ಫಲಿತಾಂಶ ಸಿಗಬಹುದು. ವಿಶೇಷವಾಗಿ ಹೊಟ್ಟೆ ಸುತ್ತಿನ ಕೊಬ್ಬು ಕಡಿಮೆ ಮಾಡಲು ಸಹಾಯವಾಗುತ್ತದೆ.
ತಜ್ಞರ ಪ್ರಕಾರ, ಕೇವಲ 1 ಕಿಲೋಮೀಟರ್ ಎಂದು ನಿರ್ಲಕ್ಷಿಸಬಾರದು. ಈ ಚಿಕ್ಕ ಅಭ್ಯಾಸವನ್ನು ಪ್ರತಿದಿನ ಮುಂದುವರಿಸಿದರೆ ದೀರ್ಘಾವಧಿಯಲ್ಲಿ ಸಾವಿರಾರು ಕ್ಯಾಲೊರಿಗಳನ್ನು ಕರಗಿಸಬಹುದು. ಯಾವುದೇ ವೆಚ್ಚವಿಲ್ಲದೆ ಆರೋಗ್ಯಕರ ಜೀವನಶೈಲಿ ಪಾಲಿಸಲು ವಾಕಿಂಗ್ ಅತ್ಯುತ್ತಮ ಮಾರ್ಗವಾಗಿದೆ.
ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier 1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ಸಿಬಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಅದ್ಭುತ ಮೈಲಿಗಲ್ಲು ಸಾಧಿಸಿದ್ದಾರೆ. ಐಪಿಎಲ್ನ ಮೊದಲ ಸೀಸನ್ನಿಂದಲೂ ಆರ್ಸಿಬಿ ತಂಡದ ಆಧಾರಸ್ತಂಭವಾಗಿರುವ ಕೊಹ್ಲಿ, ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆಡುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮೇ 26 ರಂದು ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪ್ಲೇಆಫ್ ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.
ವಿಶೇಷ ಮೈಲಿಗಲ್ಲು ದಾಟಿದ ಕೊಹ್ಲಿ
ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ 18 ನೇ ಐಪಿಎಲ್ ಪ್ಲೇಆಫ್ ಪಂದ್ಯವನ್ನು ಆಡಿದರು. ಇದರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಕ್ವಾಲಿಫೈಯರ್ 1 ಪಂದ್ಯವೂ ಸೇರಿದೆ. ಇದರೊಂದಿಗೆ, ಅವರು ಶಿಖರ್ ಧವನ್, ದಿನೇಶ್ ಕಾರ್ತಿಕ್ ಮತ್ತು ಕೀರನ್ ಪೊಲಾರ್ಡ್ ಅವರಂತಹ ದಿಗ್ಗಜರ ದಾಖಲೆಯನ್ನು ಸರಿಗಟ್ಟಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ನ ಮಾಜಿ ನಾಯಕ ಎಂಎಸ್ ಧೋನಿ ಐಪಿಎಲ್ ಪ್ಲೇಆಫ್ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರಾಗಿ 28 ಪಂದ್ಯಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನಗಳಲ್ಲಿ ರವಿಚಂದ್ರನ್ ಅಶ್ವಿನ್ (24 ಪಂದ್ಯಗಳು), ಸುರೇಶ್ ರೈನಾ (24 ಪಂದ್ಯಗಳು), ರೋಹಿತ್ ಶರ್ಮಾ (23 ಪಂದ್ಯಗಳು), ಅಂಬಟಿ ರಾಯುಡು (23 ಪಂದ್ಯಗಳು), ರವೀಂದ್ರ ಜಡೇಜಾ (23 ಪಂದ್ಯಗಳು), ಮತ್ತು ಡ್ವೇನ್ ಬ್ರಾವೋ (19 ಪಂದ್ಯಗಳು) ಇದ್ದಾರೆ. ಈಗ ವಿರಾಟ್ ಕೊಹ್ಲಿ ಕೂಡ ಅವರ ಜೊತೆ ಸೇರಿದ್ದಾರೆ.
ಪ್ಲೇಆಫ್ನಲ್ಲಿ ಕೊಹ್ಲಿ ಪ್ರದರ್ಶನ
ಐಪಿಎಲ್ ನಾಕೌಟ್ ಹಂತದಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಏರಿಳಿತಗಳಿಂದ ಕೂಡಿದೆ. ಇಲ್ಲಿಯವರೆಗೆ ಆರ್ಸಿಬಿ ಪರ 4 ಐಪಿಎಲ್ ಫೈನಲ್ ಪಂದ್ಯಗಳನ್ನು ಆಡಿರುವ ಕೊಹ್ಲಿ 34.75 ಸರಾಸರಿ ಮತ್ತು 126.36 ಸ್ಟ್ರೈಕ್ ರೇಟ್ನೊಂದಿಗೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದಾಗ್ಯೂ, ಎಲಿಮಿನೇಟರ್ ಪಂದ್ಯಗಳ ವಿಷಯಕ್ಕೆ ಬಂದರೆ, ಕೊಹ್ಲಿ ಅವರ ಟ್ರ್ಯಾಕ್ ರೆಕಾರ್ಡ್ ಅಷ್ಟೊಂದು ಆಶಾದಾಯಕವಾಗಿಲ್ಲ. ಅವರು ಆಡಿದ 5 ಎಲಿಮಿನೇಟರ್ ಪಂದ್ಯಗಳಲ್ಲಿ, ಕೇವಲ 23.00 ಸರಾಸರಿ ಮತ್ತು 108.49 ಕಳಪೆ ಸ್ಟ್ರೈಕ್ ರೇಟ್ನಲ್ಲಿ ರನ್ ಗಳಿಸಿದ್ದಾರೆ.
ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2026 ರಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಸೀಸನ್ನಲ್ಲಿ ಆಡಿರುವ 14 ಲೀಗ್ ಪಂದ್ಯಗಳಲ್ಲಿ, 50 ಕ್ಕಿಂತ ಹೆಚ್ಚು ಸರಾಸರಿ ಮತ್ತು 162.03 ರ ಸ್ಟ್ರೈಕ್ ರೇಟ್ನಲ್ಲಿ ರನ್ ಗಳಿಸಿದ್ದಾರೆ. ಪ್ಲೇಆಫ್ಸ್ ಕ್ವಾಲಿಫೈಯರ್ 1 ತಲುಪಲು ಆರ್ಸಿಬಿಯ ಸತತ ಗೆಲುವುಗಳಲ್ಲಿ ಕೊಹ್ಲಿಯ ಬ್ಯಾಟಿಂಗ್ ಪ್ರಮುಖ ಶಕ್ತಿಯಾಗಿದೆ. ಗುಜರಾತ್ ವಿರುದ್ಧದ ಕ್ವಾಲಿಫೈಯರ್ 1 ಪಂದ್ಯದಲ್ಲೂ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಬಾರಿಸಿ ಔಟಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ನಿರ್ಮಾಣದ, 2025ರ ಸೂಪರ್ ಹಿಟ್ ಸಿನಿಮಾ ‘ಧುರಂಧರ್’ (Dhurandhar) ಈಗ ಕಿರುತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರವು ಮೇ 30ರ ಶನಿವಾರ ಸಂಜೆ 7 ಗಂಟೆಗೆ ಮೂರು ವಾಹಿನಿಗಳಲ್ಲಿ ಏಕಕಾಲಕ್ಕೆ ಪ್ರಸಾರ ಆಗಲಿದೆ. ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ವಾಹಿನಿಗಳಲ್ಲಿ ಒಟ್ಟಿಗೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ (Dhurandhar World Television Premiere) ಆಗಲಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಕಿರುತೆರೆಯಲ್ಲಿ ‘ಧುರಂಧರ್’ ಸಿನಿಮಾ ನೋಡಲು ಕಾದಿದ್ದ ಅಭಿಮಾನಿಗಳಿಗೆ ಇದು ಗುಡ್ ನ್ಯೂಸ್.
ಖ್ಯಾತ ನಿರ್ದೇಶಕ ಆದಿತ್ಯ ಧರ್ ಆ್ಯಕ್ಷನ್-ಕಟ್ ಹೇಳಿರುವ ‘ಧುರಂಧರ್’ ಸಿನಿಮಾವು ಹಮ್ಜಾ ಅಲಿ ಮಜಾರಿ ಎಂಬ ಭಾರತೀಯ ಅಂಡರ್ಕವರ್ ಏಜೆಂಟ್ನ ಕಥೆಯನ್ನು ಒಳಗೊಂಡಿದೆ. ದಶಕಗಳ ಕಾಲದ ಸುದೀರ್ಘ ಗುಪ್ತಚರ ಕಾರ್ಯಾಚರಣೆಯ ಭಾಗವಾಗಿ ಆತ ಕರಾಚಿಯ ಅಪರಾಧ ಮತ್ತು ರಾಜಕೀಯ ಜಗತ್ತನ್ನು ಹೇಗೆ ಭೇದಿಸುತ್ತಾನೆ ಎಂಬ ರೋಚಕ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ.
‘ಧುರಂಧರ್’ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಇವರೊಂದಿಗೆ ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್ಪಾಲ್, ಆರ್. ಮಾಧವನ್, ಸಾರಾ ಅರ್ಜುನ್, ರಾಕೇಶ್ ಬೇಡಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿವೆ.
ಚಿತ್ರದ ಟಿವಿ ಪ್ರೀಮಿಯರ್ ಕುರಿತು ಮಾತನಾಡಿರುವ ನಿರ್ದೇಶಕ ಆದಿತ್ಯ ಧರ್, ‘ಈ ಚಿತ್ರಕ್ಕೆ ಪ್ರೇಕ್ಷಕರು ನೀಡಿದ ಅಪಾರ ಪ್ರೀತಿ ಮತ್ತು ಈ ಫ್ರಾಂಚೈಸಿಗೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ನಾವು ನಿಜವಾಗಿಯೂ ಧನ್ಯರಾಗಿದ್ದೇವೆ. ಈಗ ಮೇ 30ರಂದು ಸಂಜೆ 7 ಗಂಟೆಗೆ ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ಮೂಲಕ ಈ ಚಿತ್ರವನ್ನು ದೇಶಾದ್ಯಂತದ ಮನೆ ಮನೆಗೆ ತಲುಪಿಸುತ್ತಿರುವುದು ನಮಗೆ ಅತ್ಯಂತ ಸಂತಸ ತಂದಿದೆ’ ಎಂದು ಹೇಳಿದ್ದಾರೆ.
ಈ ಬಗ್ಗೆ ಜಿಯೋಸ್ಟಾರ್ ವಕ್ತಾರರು ಮಾತನಾಡಿ, ‘ಕೆಲವು ಸಿನಿಮಾಗಳು ಕೇವಲ ಮನರಂಜನೆಯನ್ನು ಮೀರಿ ಸಾಂಸ್ಕೃತಿಕ ವಿದ್ಯಮಾನಗಳಾಗಿ ಬದಲಾಗುತ್ತವೆ. ಅಂತಹವುಗಳಲ್ಲಿ ಧುರಂಧರ್ ಕೂಡ ಒಂದು. ಈ ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡುವ ಮೂಲಕ, ನಾವು ಇಡೀ ದೇಶದ ಕುಟುಂಬಗಳು ಒಟ್ಟಿಗೆ ಕುಳಿತು ವೀಕ್ಷಿಸುವಂತಹ ಒಂದು ದೇಶವ್ಯಾಪಿ ಸುವರ್ಣಾವಕಾಶವನ್ನು ಸೃಷ್ಟಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.
ಬೆಂಗಳೂರು, ಮೇ26: ನಗರದಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿಯಾಗಿದ್ದ(RJ) ಆತ್ಮಹತ್ಯೆಗೆ (death) ಶರಣಾಗಿದ್ದಾರೆ. ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮುಖ್ಯಾಂಶಗಳು
ಫ್ಲಾಟ್ನಲ್ಲಿ ರೇಡಿಯೋ ಜಾಕಿ ಆತ್ಮಹತ್ಯೆ
ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ RJ
ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು
ವಿಚ್ಛೇದನದ ಬಳಿಕ ಬೆಂಗಳೂರಿಗೆ ಬಂದಿದ್ದ ಮನೀಷಾ
ಮುಂಬೈನಲ್ಲಿ ರೇಡಿಯೋ ಜಾಕಿಯಾಗಿದ್ದ ಮನೀಷಾ ಅವರು, 2024ರಲ್ಲಿ ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ತದನಂತರ ಕಳೆದ ಏಪ್ರಿಲ್ ತಿಂಗಳಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸದಾಗಿ ಫ್ಲಾಟ್ ಖರೀದಿಸಿ ಒಂಟಿಯಾಗಿ ವಾಸಿಸುತ್ತಿದ್ದರು. ಕಳೆದ ಮೇ 23ರಂದು ಮನೀಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸಂಬಂಧಿಕರು ಫೋನ್ ಮಾಡಿದಾಗ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ನನ್ನ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ
ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮನೀಷಾ ಅವರು ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ತಮ್ಮ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ‘ನಾನು ಮತ್ತು ಹರ್ಷವರ್ಧನ್ ಸಿಂಗ್ ರಿಲೇಷನ್ಶಿಪ್ನಲ್ಲಿದ್ದೆವು. ಈ ವಿಷಯ ಆತನ ಮನೆಯವರಿಗೂ ತಿಳಿದಿತ್ತು. ಆದರೆ ಆತ ಪ್ರತಿದಿನ ನನಗೆ ತೀವ್ರ ಮಾನಸಿಕ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳವನ್ನು ತಡೆಯಲಾರದೆ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಡೆತ್ನೋಟ್ ಹಾಗೂ ಮನೀಷಾ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.