ದಾವೋಸ್​​ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್​​ನದ್ದೇ​​ ಸದ್ದು – Kannada News | Karnataka CM Tussle: D.K. Shivakumar Expresses Confidence on Power Sharing at Davos

ದಾವೋಸ್​​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​

ಬೆಂಗಳೂರು, ಜನವರಿ 22: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್​ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​, ತಮ್ಮ ನಾಯಕರು ತಮಗೆ ನಿರಾಸೆ ಮಾಡಲಾರರು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆ ಮೂಲಕ ದಾವೋಸ್​​ನಲ್ಲಿಯೂ ಕರ್ನಾಟಕದಲ್ಲಿನ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾದಂತಾಗಿದೆ.

‘ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ’

ಹೌದು, ಎನ್​​ಡಿಟಿವಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಡಿಸಿಎಂ ಡಿಕೆಶಿ, ಎಲ್ಲ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಇದು ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ, ಇದು ನಮ್ಮಲ್ಲಿಯೇ ಆಗಬೇಕಾದ ಚರ್ಚೆ. ನಾನು ಸದಾ ಧನಾತ್ಮಕವಾಗಿದ್ದು, ಆಸೆಯ ಮೇಲೆಯೇ ಬದುಕುತ್ತೇನೆ. ಶ್ರಮಕ್ಕೆ ಯಾವಾಗಲೂ ಫಲ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ನನ್ನ ನಾಯಕರು ಖಂಡಿತವಾಗಿಯೂ ನನ್ನನ್ನು ನಿರಾಶೆಗೊಳಿಸುವುದಿಲ್ಲ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ!

‘140 ಶಾಸಕರ ಬೆಂಬಲ ತನಗಿದೆ’

ಡಿಕೆಶಿ ಅವರು ಸಿಎಂ ಆಗಲು ಶಾಸಕರ ಬೆಂಬಲ ಇಲ್ಲವಂತಲ್ಲ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು, ಹಾಗೆ ಹೇಳಿದ್ದು ಯಾರು? ಕೆಪಿಸಿಸಿ ಅಧ್ಯಕ್ಷನಾದ ತನಗೆ ಪಕ್ಷದ 140 ಶಾಸಕರ ಬೆಂಬಲವೂ ಇದೆ. ಹೀಗಾಗಿ ಸಂಖ್ಯೆಗಳ ಬಗ್ಗೆ ತೀರ್ಮಾನ ಬೇಕಿಲ್ಲ. ನಾವು ತಂಡವಾಗಿ ಕೆಲಸ ಮಾಡುತ್ತಿದ್ದು ಸಿದ್ದರಾಮಯ್ಯ ಮತ್ತು ತನಗೆ ಇಬ್ಬರಿಗೂ ಎಲ್ಲ ಶಾಸಕರ ಬೆಂಬಲ ಇದೆ. ನಾವು ಇಬ್ಬರೂ ಕೂತು ಚರ್ಚಿಸಿದ್ದು, ಎಲ್ಲವನ್ನೂ ಪಕ್ಷದ ನಾಯಕರ ತೀರ್ಮಾನಕ್ಕೆ ಬಿಟ್ಟಿದ್ದೇವೆ. ಸಿದ್ದರಾಮಯ್ಯ ಮತ್ತು ತಾನು ಇಬ್ಬರೂ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವನ್ನು ಒಪ್ಪಿಕೊಳ್ಳುತ್ತೇವೆ ಎಂದು ಈಗಾಗಲೇ ಹೇಳಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಹೊಸ ಹೋಮ್ ಗ್ರೌಂಡ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಈ ಹಿಂದೆ ಆಡುತ್ತಿದ್ದ ಜೈಪುರದ ಸವಾಯಿ ಮಾನ್ ​ಸಿಂಗ್ ಸ್ಟೇಡಿಯಂ ಈ ಬಾರಿ ಆರ್​ಆರ್ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಪದೇ ಪದೇ ಎಚ್ಚರಿಕೆ ನೀಡಿದ್ದರೂ ರಾಜಸ್ಥಾನ ಕ್ರಿಕೆಟ್ ಸಂಘವು ಇನ್ನೂ ಸಹ ಚುನಾವಣೆಯನ್ನು ನಡೆಸಿಲ್ಲ. ಹೀಗಾಗಿ ಜೈಪುರದ ಸವಾಯಿ ಮಾನ್​ ಸಿಂಗ್​ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸದಿರಲು ಬಿಸಿಸಿಐ ನಿರ್ಧರಿಸಿದೆ.

ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬದಲಿ ಹೋಮ್ ಗ್ರೌಂಡ್ ಅನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಎರಡು ಮೈದಾನಗಳಲ್ಲಿ ಕಣಕ್ಕಿಳಿಯಲಿದೆ. ಅದು ಸಹ ಅಸ್ಸಾಂ ಹಾಗೂ ಮಹಾರಾಷ್ಟ್ರದಲ್ಲಿ ಎಂಬುದು ವಿಶೇಷ.

ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಧೀನದಲ್ಲಿರುವ ಪುಣೆಯ ಎಂಸಿಎ ಸ್ಟೇಡಿಯಂ ಅನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತನ್ನ ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿದೆ. ಈ ಮೈದಾನದಲ್ಲಿ ಆರ್​ಆರ್ ನಾಲ್ಕರಿಂದ ಐದು ಪಂದ್ಯಗಳನ್ನಾಡಲಿದೆ ಎಂದು ವರದಿಯಾಗಿದೆ.

ಇನ್ನುಳಿದ ಹೋಮ್ ಗ್ರೌಂಡ್ ಮ್ಯಾಚ್​ಗಳನ್ನು ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ಆಡಲಿದೆ. ಕಳೆದ ಕೆಲ ವರ್ಷಗಳಿಂದ ಬರ್ಸಾಪರ ಸ್ಟೇಡಿಯಂ ಅನ್ನು ರಾಜಸ್ಥಾನ್ ರಾಯಲ್ಸ್ ತನ್ನ ದ್ವಿತೀಯ ಹೋಮ್ ಗ್ರೌಂಡ್ ಆಗಿ ಆಯ್ಕೆ ಮಾಡಿಕೊಂಡಿದೆ. ಅದರಂತೆ ಪ್ರತಿ ಸೀಸನ್​ನಲ್ಲೂ ಇಲ್ಲಿ 2 ಮ್ಯಾಚ್​ಗಳನ್ನಾಡುತ್ತಿದ್ದು, ಈ ಬಾರಿ ಕೂಡ ಅದು ಮುಂದುವರೆಯಲಿದೆ.

ಅಂದರೆ ತವರು ಮೈದಾನದಲ್ಲಿ ನಡೆಯಲಿರುವ 7 ಪಂದ್ಯಗಳನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 5+2 ರೀತಿಯಲ್ಲಿ ವಿಂಗಡಿಸುವ ಸಾಧ್ಯತೆಯಿದೆ. ಅದರಂತೆ 5 ಮ್ಯಾಚ್​ಗಳನ್ನು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಆಡಿದರೆ, ಇನ್ನುಳಿದ ಎರಡು ಪಂದ್ಯಗಳಿಗಾಗಿ ಗುವಾಹಟಿಗೆ ತೆರಳುವ ಸಾಧ್ಯತೆ ಹೆಚ್ಚಿದೆ.

ಆರ್​ಆರ್​ ಪಡೆಗೆ ಹೊಸ ನಾಯಕ

ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಆರ್ ತಂಡದ ಕ್ಯಾಪ್ಟನ್ ಆಗಿದ್ದ ಸಂಜು ಸ್ಯಾಮ್ಸನ್ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಆರ್​ ಫ್ರಾಂಚೈಸಿಯು ಈ ಬಾರಿ ಹೊಸ ಕ್ಯಾಪ್ಟನ್​ನನ್ನು ಪರಿಚಯಿಸಲಿದೆ.

ಇದನ್ನೂ ಓದಿ: IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

ರಾಜಸ್ಥಾನ್ ರಾಯಲ್ಸ್ ತಂಡ: ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ರಿಯಾನ್ ಪರಾಗ್, ಯಧುವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್​ರೆ ಬರ್ಗರ್,  ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರು, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್, ಕುಲ್ದೀಪ್ ಸೇನ್.

 

 

Source link

Ketu Transit 2026: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ – Kannada News | Ketu Transit 2026: Astrological Impact on Zodiac Signs Know Your Fortune

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂಬತ್ತು ಗ್ರಹಗಳಲ್ಲಿ ಕೇತು ಅತ್ಯಂತ ನಿಗೂಢ ಗ್ರಹವೆಂದು ಪರಿಗಣಿಸಲಾಗುತ್ತದೆ. ಕೇತು ಮೋಕ್ಷ, ವೈರಾಗ್ಯ, ಆಂತರಿಕ ಬದಲಾವಣೆಗಳನ್ನು ಸೂಚಿಸುತ್ತದೆ. 12 ರಾಶಿಗಳ ಮೇಲೆ ಕೇತುವಿನ ಸಂಚಾರವು ಗಾಢ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಕೇತು ಸುಮಾರು 18 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ.

2026 ರಲ್ಲಿ ಕೇತು ಹೆಚ್ಚಿನ ಸಮಯ ಸಿಂಹ ರಾಶಿಯಲ್ಲಿ ಸಂಚರಿಸುತ್ತದೆ. ಆದರೆ ವರ್ಷದ ಅಂತ್ಯದಲ್ಲಿ, ಡಿಸೆಂಬರ್ 5ರಂದು, ಸಿಂಹ ರಾಶಿಯನ್ನು ಬಿಟ್ಟು ಚಂದ್ರನ ರಾಶಿಯಾದ ಕರ್ಕ ರಾಶಿಗೆ ಪ್ರವೇಶಿಸುತ್ತದೆ. ಇದಕ್ಕೂ ಮುನ್ನ, ಜನವರಿ 25ರಂದು ಕೇತು ಪುನರ್ವಸು ನಕ್ಷತ್ರದ 2ನೇ ಹಂತದಿಂದ 1ನೇ ಹಂತಕ್ಕೆ ಸಾಗುತ್ತದೆ. ಕೇತು ಮಾರ್ಚ್ 29ರವರೆಗೆ ಈ ನಕ್ಷತ್ರದಲ್ಲಿಯೇ ಇರುತ್ತಾನೆ. ನಂತರ ರಾಶಿ ಮತ್ತು ನಕ್ಷತ್ರ ಬದಲಾವಣೆಯ ಪರಿಣಾಮಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳಲಿವೆ.

ಕೇತುವಿನ ಈ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ.  ಇನ್ನೂ ಕೆಲವು ರಾಶಿಗಳಿಗೆ ಎಚ್ಚರಿಕೆಯ ಸಮಯವಾಗಲಿದೆ. ಈಗ ಯಾವ ರಾಶಿಗಳಿಗೆ ಶುಭ ಫಲ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಈ ರಾಶಿಯವರು ಅದೃಷ್ಟವಂತರು:

ವೃಷಭ ರಾಶಿ:

ಕೇತುವಿನ ಸಂಚಾರವು ವೃಷಭ ರಾಶಿಯವರಿಗೆ ಶುಭ ಫಲ ನೀಡಲಿದೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಈಗ ಪೂರ್ಣಗೊಳ್ಳುತ್ತವೆ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಪರಸ್ಪರ ಅರ್ಥಮಾಡಿಕೊಳ್ಳುವಿಕೆ ಹೆಚ್ಚಾಗುತ್ತದೆ. ವೃತ್ತಿಜೀವನದಲ್ಲಿಯೂ ಉತ್ತಮ ಪ್ರಗತಿ ಕಂಡುಬರುತ್ತದೆ. ಆರ್ಥಿಕ ಸ್ಥಿತಿಯು ನಿಧಾನವಾಗಿ ಬಲಗೊಳ್ಳಲಿದೆ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಸಿಂಹ ರಾಶಿ:

ಕೇತು ಸ್ವರಾಶಿಯಲ್ಲಿ ಸಂಚರಿಸುವುದರಿಂದ ಸಿಂಹ ರಾಶಿಯವರಿಗೆ ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ದೊರೆಯುತ್ತವೆ. ಒಡಹುಟ್ಟಿದವರ ಬೆಂಬಲ ಹೆಚ್ಚಾಗುತ್ತದೆ. ಹೆಚ್ಚುವರಿ ಆದಾಯದ ಮೂಲಗಳು ಸೃಷ್ಟಿಯಾಗುವ ಸಾಧ್ಯತೆಯಿದೆ. ಹೂಡಿಕೆ ಮಾಡಿದರೆ ಲಾಭದಾಯಕ ಫಲಿತಾಂಶ ಸಿಗಲಿದೆ.

ವೃಶ್ಚಿಕ ರಾಶಿ:

ವೃಶ್ಚಿಕ ರಾಶಿಯವರಿಗೆ ಕೇತುವಿನ ಸಂಚಾರ ಒಂದು ರೀತಿಯ ಸುವರ್ಣಾವಕಾಶವನ್ನು ತರಲಿದೆ. ಶಿಕ್ಷಣ, ಉದ್ಯೋಗ ಮತ್ತು ವೈಯಕ್ತಿಕ ಜೀವನದಲ್ಲಿ ಯಶಸ್ಸು ಸಿಗಲಿದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. ವೃತ್ತಿಜೀವನದಲ್ಲಿ ನೀವು ತೆಗೆದುಕೊಳ್ಳುವ ದಿಟ್ಟ ನಿರ್ಧಾರಗಳು ಮುಂದಿನ ದಿನಗಳಲ್ಲಿ ಲಾಭ ತರುತ್ತವೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ , ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂ ಅನುಮತಿ – Kannada News | Supreme Court Clears Way for Saraswati Puja and Friday Prayers at Bhojshala

ಧಾರ್, ಜನವರಿ 22: ಭೋಜಶಾಲಾದಲ್ಲಿ ಶುಕ್ರವಾರ ಹಿಂದೂಗಳು ಪೂಜೆ ಮಾಡಲು, ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂಕೋರ್ಟ್(Supreme Court)​ ಅನುಮತಿ ನೀಡಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಐತಿಹಾಸಿಕ ಭೋಜಶಾಲೆಯ ಕುರಿತಾದ ದೀರ್ಘಕಾಲದ ವಿವಾದದ ಹೊಸ ಅರ್ಜಿಯ ಕುರಿತು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಇಂದು ಒಂದು ಮಹತ್ವದ ತೀರ್ಪು ನೀಡಿದೆ.

ವಸಂತ ಪಂಚಮಿಯಂದು ಸರಸ್ವತಿ ಪೂಜೆ ಮತ್ತು ಭೋಜಶಾಲೆಯಲ್ಲಿ ನಮಾಜ್ ಮಾಡಲು ಎರಡೂ ಧರ್ಮದವರಿಗೆ ಜಾಗವನ್ನು ಹಂಚಿಕೊಳ್ಳಲು ನ್ಯಾಯಾಲಯ ಅನುಮತಿ ನೀಡಿದೆ. ಮುಸ್ಲಿಂ ಸಮುದಾಯಕ್ಕೆ ಶುಕ್ರವಾರದಂದು ಮಧ್ಯಾಹ್ನ 1 ರಿಂದ 3 ರವರೆಗೆ ಪ್ರಾರ್ಥನೆ ಸಲ್ಲಿಸಲು ನ್ಯಾಯಾಲಯವು ಅನುಮತಿ ನೀಡಿದೆ.

ವಾಸ್ತವವಾಗಿ, ಹಿಂದೂ ಫ್ರಂಟ್ ಫಾರ್ ಜಸ್ಟೀಸ್ ಸಲ್ಲಿಸಿದ ಅರ್ಜಿಯಲ್ಲಿ ಮುಂಬರುವ ವಸಂತ ಪಂಚಮಿಯಂದು (ಶುಕ್ರವಾರ, ಜನವರಿ 23, 2026) ಭೋಜಶಾಲಾದಲ್ಲಿ ಸರಸ್ವತಿ ದೇವಿಯನ್ನು ಪೂಜಿಸಲು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು ಮತ್ತು ಮುಸ್ಲಿಂ ಸಮುದಾಯವು ನಮಾಜ್ ಮಾಡುವುದನ್ನು ತಡೆಯಬೇಕು ಎಂದು ಕೋರಲಾಗಿತ್ತು.

ಅರ್ಜಿಯನ್ನು ಆಲಿಸಿದ ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಬಸಂತ್ ಪಂಚಮಿಯಂದು ದಿನವಿಡೀ ಸಾಂಪ್ರದಾಯಿಕ ಆಚರಣೆಗಳನ್ನು ಮಾಡಲು ಹಿಂದೂಗಳಿಗೆ ಅನುಮತಿ ನೀಡಿತು, ಆದರೆ ನಮಾಜ್‌ಗೆ (ಮಧ್ಯಾಹ್ನ 1-3) ಸ್ಥಳಾವಕಾಶವನ್ನು ಒದಗಿಸಬೇಕೆಂದು ನಿರ್ದೇಶಿಸಿತು.

ಮತ್ತಷ್ಟು ಓದಿ: ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ

ಗುರುವಾರ ಸಂಜೆಯೊಳಗೆ ಮುಸ್ಲಿಂ ಕಡೆಯವರು ಪ್ರಾರ್ಥನೆಗೆ ಹಾಜರಾಗುವ ಅಂದಾಜು ಜನರ ಸಂಖ್ಯೆಯನ್ನು ಧಾರ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಒದಗಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಇದರಿಂದ ಪಾಸ್‌ಗಳನ್ನು ವಿತರಿಸಬಹುದು ಮತ್ತು ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಗಳನ್ನು ಮಾಡಬಹುದು. ಪರಸ್ಪರ ಗೌರವ, ಸಹಿಷ್ಣುತೆ ಮತ್ತು ಸಹಕಾರವನ್ನು ಪ್ರದರ್ಶಿಸಲು ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಆಡಳಿತದೊಂದಿಗೆ ಕೆಲಸ ಮಾಡಲು ನ್ಯಾಯಾಲಯ ಎರಡೂ ಧರ್ಮದವರಿಗೆ ಮನವಿ ಮಾಡಿದೆ.

ಇದು ಮತ್ತೆ ಸಂಭವಿಸಲಿ. ಶುಕ್ರವಾರದ ಪ್ರಾರ್ಥನೆಗಳು ಮಧ್ಯಾಹ್ನ 1 ರಿಂದ 3 ರವರೆಗೆ ನಡೆಯುತ್ತವೆ, ನಾವು ಮಧ್ಯಾಹ್ನ 3 ಗಂಟೆಯೊಳಗೆ ಜಾಗವನ್ನು ಖಾಲಿ ಮಾಡುತ್ತೇವೆ. ಆಮೇಲೆ ಅವರು ಪೂಜೆ ಮುಂದುವರೆಸಬಹುದು ಎಂದು ಮಸೀದಿ ಸಮಿತಿ ಪ್ರತಿನಿಧಿಸುವ ವಕೀಲ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ – Kannada News | Bangarpet Uruss: Moral Policing Assault on Hindu Youth; KGF SP Investigates

ಕೋಲಾರ, ಜ.22: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ದರ್ಗಾ ಮೈದಾನದಲ್ಲಿ ನಡೆಯುತ್ತಿರುವ ಉರುಸ್ ಮೆರವಣಿಗೆಯ ವೇಳೆ ನೈತಿಕ ಪೊಲೀಸ್‌ಗಿರಿ ನಡೆದ ಘಟನೆ ವರದಿಯಾಗಿದೆ.ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಎಂಬ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಜೊತೆಗಿದ್ದ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ. ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಜಹೀದ್, ಅಬೀದ್ ಅಹ್ಮದ್, ಶೇಕ್ ಸಕೀಬ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೆ ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ದೂರುದಾರ ಚಾಂದಿನಿ ತನ್ನ ಅಣ್ಣ ರಫೀ ಜೊತೆಗೆ ಇದ್ದಾಗ, ಅವರೊಂದಿಗೆ ಇದ್ದ ರಾಹುಲ್, ಪುರುಶೋತಮ್, ಲಾವಣ್ಯ ಮತ್ತು ಸಂಜಯ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಘಟನೆಯ ಮಾಹಿತಿ ಪಡೆದ ಬಳಿಕ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್​​ ಎರಚುವುದಾಗಿ ಬೆದರಿಕೆ – Kannada News | Acid Attack Threat to Shidlaghatta Municipal Commissioner; Letter Handed Over to Police

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ

ಚಿಕ್ಕಬಳ್ಳಾಪುರ, ಜನವರಿ 22: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ ಇನ್ನೂ ಆಗಿಲ್ಲ. ತಲೆ ಮರೆಸಿಕೊಂಡಿರುವ ಆರೋಪಿಗಾಗಿ ತಂಡಗಳಾಗಿ ಪೊಲೀಸರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಹೀಗಿದ್ದರೂ ಈ ನಡುವೆ ಪುಂಡಾಟ ಮಾತ್ರ ಮುಂದುವರಿದಿದೆ. ಆ್ಯಸಿಡ್​​ ಎರಚುವುದಾಗಿ ಶಿಡ್ಲಘಟ್ಟ ಪೌರಾಯುಕ್ತೆಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಆರೋಪಿ ರಾಜೀವ್ ಗೌಡ ಪರ ಪತ್ರ ಬರೆದು ಎಚ್ಚರಿಕೆ ನೀಡಿರುವ ಬಗ್ಗೆ ಪೌರಾಯುಕ್ತೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಬೆದರಿಕೆ ಪತ್ರವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಾಂಗ್ರೆಸ್​​ ಮುಖಂಡರಿಂದಲೇ ಆಕ್ರೋಶ

ಪೌರಾಯುಕ್ತೆಗೆ ನಿಂದಿಸಿ, ಬೆದರಿಕೆ ಹಾಕಿರುವ ಪ್ರಕರಣ ವಿಚಾರವಾಗಿ ರಾಜೀವ್​​ ಗೌಡನನ್ನು ಪೊಲೀಸರು ಇನ್ನೂ ಬಂಧಿಸದ ಬಗ್ಗೆ ಸ್ವಪಕ್ಷ ಕಾಂಗ್ರೆಸ್​​ನಲ್ಲಿಯೇ ಆಕ್ರೋಶ ಭುಗಿಲೆದ್ದಿದೆ. ಆತ ನಡೆದುಕೊಂಡಿರುವ ರೀತಿಯಿಂದ ಶಿಡ್ಲಘಟ್ಟದಲ್ಲಿ ಕಾಂಗ್ರೆಸ್​​ ಪಕ್ಷಕ್ಕೆ ನಷ್ಟವಾಗ್ತಿದ್ದು, ಪೊಲೀಸರು ಶೀಘ್ರ ಸೂಕ್ತಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು; ರಾಜೀವ್ ಗೌಡಗೆ ಕೋರ್ಟ್ ತರಾಟೆ

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ಚಿಕ್ಕಬಳ್ಳಾಪುರ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಇಂದು ಮತ್ತೆ ನಡೆಯಲಿದೆ. ನಿರೀಕ್ಷಣಾ ಜಾಮೀನಿಗಾಗಿ ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ಕೋರ್ಟ್‌, ವಿಚಾರಣೆಯನ್ನ ಜನವರಿ 22ಕ್ಕೆ ಅಂದರೆ ಇಂದಿಗೆ ಮುಂದೂಡಿತ್ತು.

ಅಮಾನತಿಗೆ ಶಿಫಾರಸು

ಪಕ್ಷದ ಮುಖಂಡನ ವರ್ತನೆ ಆಡಳಿತರೂಢ ಕಾಂಗ್ರೆಸ್​​ಗೆ ಮುಜುಗರ ತಂದ ಹಿನ್ನೆಲೆ, ಆರೋಪಿ ರಾಜೀವ್​ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದರೆ ಅದಕ್ಕೆ ನಾಪತ್ತೆಯಾಗಿರುವ ರಾಜೀವ್​​ ಗೌಡ ಉತ್ತರಿಸದ ಕಾರಣ ಆತನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಿಗೆ ಶಿಫಾರಸು ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು – Kannada News | UP Honor Killing: Interfaith Couple Murdered by Brothers in Moradabad

ಲಕ್ನೋ, ಜನವರಿ 22: ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ  ಮರ್ಯಾದಾ ಹತ್ಯೆ(Honor Killing)ಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ ನೋಡದೆ ಇಬ್ಬರನ್ನೂ ಹತ್ಯೆ ಮಾಡಿದ್ದಾರೆ. 27 ವರ್ಷದ ಮುಸ್ಲಿಂ ಯುವಕ ಹಾಗೂ 22 ವರ್ಷದ ಹಿಂದೂ ಯುವತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಈ ಸಮಯದಲ್ಲಿ, ಅವರು ಕಾಜಲ್ ಅವರನ್ನು ಭೇಟಿಯಾದರು ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಾಜಲ್ ಅವರ ಸಹೋದರರು ಅಂತರ್ಧರ್ಮೀಯ ಸಂಬಂಧವನ್ನು ವಿರೋಧಿಸಿದರು ಮತ್ತು ಆತನನ್ನು ಮರೆತುಬಿಡು ಎಂದು ಕೇಳಿಕೊಂಡಿದ್ದರು.

ಸುಮಾರು ಮೂರು ದಿನಗಳ ಹಿಂದೆ, ಅರ್ಮಾನ್ ಮತ್ತು ಕಾಜಲ್ ಕಾಣೆಯಾಗಿದ್ದರು. ಅರ್ಮಾನ್ ತಂದೆ ಹನೀಫ್ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಕಾಜಲ್ ಕೂಡ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿತ್ತು. ಆಕೆಯ ಸಹೋದರರನ್ನು ವಿಚಾರಣೆ ನಡೆಸಿದಾಗ, ಇಬ್ಬರನ್ನು ಕೊಂದಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ

ಆರೋಪಿಗಳು ಪೊಲೀಸರಿಗೆ ಶವಗಳನ್ನು ಹೂತಿಟ್ಟ ಸ್ಥಳಕ್ಕೆ ಪೊಲೀಸರನ್ನು ಕರೆದೊಯ್ದಿದ್ದರು. ಬುಧವಾರ ಸಂಜೆ ಶವಗಳನ್ನು ಹೊರತೆಗೆಯಲಾಯಿತು. ಅರ್ಮಾನ್ ಮತ್ತು ಕಾಜಲ್ ಅವರ ಕೈಕಾಲುಗಳನ್ನು ಕಟ್ಟಿಹಾಕಿ ಕೊಚ್ಚಿ ಕೊಲ್ಲಲಾಗಿದೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಯುವತಿಯ ಸಹೋದರರೇ ಅವರನ್ನು ಕೊಂದಿದ್ದಾರೆ ಎಂಬುದು ತಿಳಿದುಬಂದಿದೆ. ಸಹೋದರರು ತಪ್ಪೊಪ್ಪಿಕೊಂಡಿದ್ದು, ನಾವು ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಕೊಲೆಗಳಿಗೆ ಬಳಸಿದ ಗುದ್ದಲಿಯನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಆಂಟಿಲ್ ಹೇಳಿದ್ದಾರೆ.

ಮಹಿಳೆಯ ಮೂವರು ಸಹೋದರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರಲ್ಲಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅರ್ಮಾನ್ ಮತ್ತು ಕಾಜಲ್ ನಡುವಿನ ಯಾವುದೇ ಸಂಬಂಧದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಅರ್ಮಾನ್ ಸಹೋದರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಶಿಡ್ಲಘಟ್ಟ, ಮೈಸೂರು ಆಯ್ತು ಶಿವಮೊಗ್ಗ ಸರದಿ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ – Kannada News | After Sidlaghatta and Mysuru, Shivamogga Next: Congress Worker Abuses Villager, Video Goes Viral

ಶಿವಮೊಗ್ಗ, ಜನವರಿ 22: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ದಬ್ಬಾಳಿಕೆ ನಡೆಸಿದ ಆರೋಪ ಕೇಳಿಬಂದಿದೆ. ರಸ್ತೆ ಕಾಮಗಾರಿ ವಿಚಾರವಾಗಿ ಗ್ರಾಮಸ್ಥನೊಂದಿಗೆ ವಾಗ್ವಾದಕ್ಕಿಳಿದ ಸದಸ್ಯ ಧರ್ಮಪ್ಪ, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದು, ಘಟನೆ ಗ್ರಾಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ನಿವಾಸಿ ರಮೇಶ್​ಗೆ ಧರ್ಮಪ್ಪ ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ, ಕೋಪದ ಅತಿರೇಕದಲ್ಲಿ ಪಾದರಕ್ಷೆಯಿಂದ ಹೊಡೆಯಲು ಮುಂದಾದ ಘಟನೆಯೂ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಹಾಗೂ ಮೈಸೂರಿನಲ್ಲಿ ನಡೆದ ಇಂತಹ ಘಟನೆಗಳ ಬಳಿಕ, ಇದೀಗ ಶಿವಮೊಗ್ಗದಲ್ಲೂ ಪುಡಿ ಕಾರ್ಯಕರ್ತನ ಪುಂಡಾಟ ಮರುಕಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ‘ಕಾನೂನಿನ ಭಯವೇ ಇಲ್ಲದಂತೆ ವರ್ತಿಸುವ ಇಂಥ ಕೆಲ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್! – Kannada News | Shashi Tharoor Shout Out To Gambhir Amid Criticism For NZ ODI Loss

ಭಾರತದಲ್ಲಿ ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ, ಕಾಂಗ್ರೆಸ್ ಸಂಸದ ಶಶಿ ತರೂರ್. ನಾಗಪುರದಲ್ಲಿ ಗೌತಮ್ ಗಂಭೀರ್ ಅವರನ್ನು ಭೇಟಿಯಾದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶಶಿ ತರೂರ್ ಟೀಮ್ ಇಂಡಿಯಾ ಕೋಚ್ ಅನ್ನು ಹಾಡಿ ಹೊಗಳಿದ್ದಾರೆ.

ನನ್ನ ಹಳೆಯ ಗೆಳೆಯ ಗೌತಮ್ ಗಂಭೀರ್ ಅವರನ್ನು ನಾಗಪುರದಲ್ಲಿ ಭೇಟಿಯಾದೆ. ಅವರೊಂದಿಗಿನ ಒಳ್ಳೆಯ ಮತ್ತು ಮುಕ್ತ ಚರ್ಚೆಯನ್ನು ಆನಂದಿಸಿದೆ. ಪ್ರಧಾನಿ ಹುದ್ದೆಯ ನಂತರ ಭಾರತದಲ್ಲಿ ಅತ್ಯಂತ ಕಠಿಣ ಕೆಲಸ ಮಾಡುವ ವ್ಯಕ್ತಿ ಗೌತಮ್ ಗಂಭೀರ್.

ಪ್ರತಿದಿನ ಲಕ್ಷಾಂತರ ಜನರು ಅವರ ನಿರ್ಧಾರಗಳನ್ನು ಪ್ರಶ್ನಿಸುತ್ತಾರೆ. ಆದರೆ, ಅವರು ಸಂಪೂರ್ಣ ಶಾಂತತೆ ಮತ್ತು ದೃಢನಿಶ್ಚಯದಿಂದ, ಹಿಂಜರಿಯದೆ ಮುಂದುವರಿಯುತ್ತಿದ್ದಾರೆ. ಅವರ ಶಾಂತ ಸಂಕಲ್ಪ ಮತ್ತು ಸಮರ್ಥ ನಾಯಕತ್ವವನ್ನು ಶ್ಲಾಘಿಸಬೇಕು. ಮುಂದಿನ ಸವಾಲುಗಳಿಗೆ ಅವರು ಅವರಿಗೆ ಶುಭ ಹಾರೈಸುತ್ತೇನೆ ಎಂದು ಶಶಿ ತರೂರ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಶಶಿ ತರೂರ್ ಅವರ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಗೌತಮ್ ಗಂಭೀರ್, ಧನ್ಯವಾದಗಳು… ಎಲ್ಲಾ ಗದ್ದಲ ಮತ್ತು ಟೀಕೆಗಳು ಕಡಿಮೆಯಾದಾಗ, ತರಬೇತುದಾರರ ಅಪರಿಮಿತ ಶಕ್ತಿಯ ಹಿಂದಿನ ಸತ್ಯ ಮತ್ತು ತರ್ಕವು ಸ್ಪಷ್ಟವಾಗುತ್ತದೆ.ಅಲ್ಲಿಯವರೆಗೆ, ಅತ್ಯುತ್ತಮವಾಗಿರುವ ನನ್ನವರ ವಿರುದ್ಧವೇ ನನ್ನನ್ನು ಎತ್ತಿಕಟ್ಟುತ್ತಿರುವುದನ್ನು ನೋಡುವುದೇ ಕುತೂಹಲಕಾರಿ ಎಂದು ಗಂಭೀರ್ ಬರೆದುಕೊಂಡಿದ್ದಾರೆ.

ಅಂದಹಾಗೆ ಶಶಿ ತರೂರ್ ಅವರು ಗೌತಮ್ ಗಂಭೀರ್ ಅವರು ಕಷ್ಟಕರ ಹುದ್ದೆಯಲ್ಲಿದ್ದಾರೆ ಎಂದು ಹೇಳಲು ಮುಖ್ಯ ಕಾರಣ ಟೀಮ್ ಇಂಡಿಯಾ ಕೋಚ್ ವಿರುದ್ಧ ಕೇಳಿ ಬರುತ್ತಿರುವ ಟೀಕೆ ಟಿಪ್ಪಣಿಗಳು. ಗಂಭೀರ್ ಕೋಚಿಂಗ್​ನಲ್ಲಿ ಭಾರತ ಟೆಸ್ಟ್ ತಂಡವು ಅಧಃಪತನದತ್ತ ಸಾಗಿದೆ.

ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಸೋಲನುಭವಿಸಿದೆ. ಈ ಮೂಲಕ ನ್ಯೂಝಿಲೆಂಡ್ ತಂಡವು ಇದೇ ಮೊದಲ ಬಾರಿಗೆ ಭಾರತದಲ್ಲಿ ಏಕದಿನ ಸರಣಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಗೆದ್ದರೂ ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಕಳಪೆಯಾಟ..!

ಅಂದರೆ ಕಳೆದ 37 ವರ್ಷಗಳಲ್ಲಿ ನ್ಯೂಝಿಲೆಂಡ್ ಒಮ್ಮೆಯೂ ಭಾರತದಲ್ಲಿ ಏಕದಿನ ಸರಣಿ ಗೆದ್ದಿರಲಿಲ್ಲ. ಹೀಗಾಗಿಯೇ ಭಾರತ ತಂಡದ ಸೋಲಿಗೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರನ್ನು ಟೀಕಿಸಲಾಗಿತ್ತು. ಅವರ ಕಾರ್ಯ ವೈಖರಿಗಳ ಬಗ್ಗೆ ಪ್ರಶ್ನೆಗಳನ್ನೆತ್ತಲಾಗಿತ್ತು. ಹೀಗಾಗಿಯೇ ಶಶಿ ತರೂರ್ ಅವರು ಭಾರತದಲ್ಲಿ ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್ ಎಂದಿದ್ದಾರೆ.

Source link

‘ಟಾಕ್ಸಿಕ್’ ಟ್ರೇಲರ್ ಬರೋದು ಯಾವಾಗ? ಕಾಯಬೇಕು ಇನ್ನಷ್ಟು ದಿನ – Kannada News | Yash’s Toxic Trailer Release: Dates and March 19 Movie Premiere Details Revealed

ಯಶ್ (Yash) ನಟನೆಯ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ ಅದರ ಬಗ್ಗೆ ಶುರುವಾದ ಚರ್ಚೆ ನಿಂತಿಲ್ಲ. ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟೀಸರ್​​ನಲ್ಲಿ ಯಶ್ ಹೆಚ್ಚಿನ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಕೆಲ ಬೋಲ್ಡ್ ದೃಶ್ಯಗಳು ಚರ್ಚೆ ಹುಟ್ಟುಹಾಕಿದ್ದವು. ಟ್ರೇಲರ್ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಇದಕ್ಕಾಗಿ ಮತ್ತಷ್ಟು ದಿನ ಕಾಯಬೇಕಾಗಿ ಬರಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ ಸಿನಿಮಾ ರಿಲೀಸ್ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈದ್ ಹಾಗೂ ಯುಗಾದಿ ಪ್ರಯುಕ್ತ ಸಿನಿಮಾ ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್​​ಗೆ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಸಿನಿಮಾ ಟೀಸರ್ ಈಗಾಗಲೇ ರಿಲೀಸ್ ಆಗಿ ಸಾಕಷ್ಟು ಸದ್ದು ಮಾಡುತ್ತಿದೆ. ಕೆಲವರು ಟೀಸರ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುತ್ತಿದ್ದಾರೆಯಾದರೂ ಇದರಿಂದ ಚಿತ್ರಕ್ಕೆ ಪ್ರಚಾರ ಆಗಿದೆ. ಈಗ ಟ್ರೇಲರ್ ಮೂಲಕ ಜನರ ಎದುರು ಬರಲು ಯಶ್ ರೆಡಿ ಆಗುತ್ತಿದ್ದಾರೆ ಎಂದು ವರದಿ ಆಗಿದೆ.

ಮಾರ್ಚ್ 8-10ನೇ ತಾರಿಕಿನ ಸಮಯದಲ್ಲಿ ‘ಟಾಕ್ಸಿಕ್’ ಟ್ರೇಲರ್ ರಿಲೀಸ್ ಮಾಡುವ ಆಲೋಚನೆ ‘ಟಾಕ್ಸಿಕ್’ ತಂಡಕ್ಕೆ ಇದೆಯಂತೆ. ಟ್ರೇಲರ್ ಅದ್ದೂರಿಯಾಗಿ, ಗಮನ ಸೆಳೆಯುವ ರೀತಿಯಲ್ಲಿ ಇದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನಿಮಾಗೆ ಬರುತ್ತಾರೆ. ಸಿನಿಮಾ ಮಾರ್ಚ್ 19ಕ್ಕೆ ರಿಲೀಸ್. ಅದಕ್ಕೂ 8-10 ದಿನ ಮೊದಲು ಟ್ರೇಲರ್ ರಿಲೀಸ್ ಮಾಡಿದರೆ ಟಾಕ್ ಜೋರಾಗಿಯೇ ಇರುತ್ತದೆ ಎಂಬ ಊಹೆ ಪ್ರೇಕ್ಷಕರದ್ದು.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಅಶ್ಲೀಲತೆ: ಸಿಬಿಎಫ್​​ಸಿ ಮುಖ್ಯಸ್ಥ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಯಶ್ ಅವರನ್ನು ಮಾತ್ರ ತೋರಿಸಲಾಗಿದೆ. ಈ ಚಿತ್ರದಲ್ಲಿ ನಯನತಾರಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಸೇರಿದಂತೆ ಅನೇಕರಿದ್ದಾರೆ. ಅವರೆಲ್ಲರನ್ನೂ ಟ್ರೇಲರ್​​ನಲ್ಲಿ ಪರಿಚಯೋ ಸಾಧ್ಯತೆ ಇದೆ. ಒಂದಷ್ಟು ಮಾಸ್ ಡೈಲಾಗ್​​​ಗಳು ಇದ್ದರಂತೂ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ.
‘ಟಾಕ್ಸಿಕ್’ ಚಿತ್ರಕ್ಕೆ ದೊಡ್ಡ ಎದುರಾಳಿ ರೆಡಿ ಆಗಿದೆ. ಬಾಲಿವುಡ್​​ನ ‘ಧುರಂಧರ್ 2’ ಇದೇ ಸಮಯದಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಿಂತ ಹೆಚ್ಚಿನ ಮೈಲೇಜ್ ಪಡೆಯೋ ಅಗತ್ಯ ‘ಟಾಕ್ಸಿಕ್’ ಚಿತ್ರಕ್ಕೆ ಇದೆ. ಹೀಗಾಗಿ, ಆ ದೃಷ್ಟಿಯಲ್ಲಿ ಪ್ಲ್ಯಾನಿಂಗ್​​​ಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version