MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 221 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದ್ದು ಮಾತ್ರವಲ್ಲದೆ ಪವರ್‌ಪ್ಲೇನಲ್ಲಿಯೇ ತಂಡವನ್ನು 80 ರನ್​ಗಳ ಗಡಿ ಮುಟ್ಟಿಸಿದ್ದಾರೆ. ಇದೇ ವೇಳೆ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಅರ್ಧಶತಕವನ್ನು ಪೂರೈಸಿದರು.

ಈ ಐಪಿಎಲ್​ಗೆ ಭರ್ಜರಿ ತಯಾರಿ ಮಾಡಿಕೊಂಡು ಬಂದಿರುವ ರೋಹಿತ್ ಶರ್ಮಾ ದೈಹಿಕವಾಗಿಯೂ ಫಿಟ್ ಆಗಿ ಕಾಣುತ್ತಿದ್ದಾರೆ. ಅದರ ಪರಿಣಾಮ ಮೊದಲ ಪಂದ್ಯದಲ್ಲೇ ಕಂಡುಬಂದಿದೆ. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲೇ ಹೊಡಿಬಡಿ ಆಟಕ್ಕೆ ಮುಂದಾದರು. ಇದರ ಪರಿಣಾಮವಾಗಿ ರೋಹಿತ್ ಪವರ್‌ಪ್ಲೇನಲ್ಲಿಯೇ ತಮ್ಮ ಅರ್ಧಶತಕವನ್ನು ಪೂರೈಸಿದರು.

ಕೇವಲ 23 ಎಸೆತಗಳಲ್ಲಿ ಐದು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳ ಸಹಿತ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾಗೆ ಇದು ಅವರ ಐಪಿಎಲ್ ವೃತ್ತಿಜೀವನದಲ್ಲಿ ಅತಿ ವೇಗದ ಅರ್ಧಶತಕವಾಗಿದೆ. ರೋಹಿತ್ ಅರ್ಧಶತಕ ಬಾರಿಸುವುದರ ಜೊತೆಗೆ ರಿಕಲ್ಟನ್ ಜೊತೆಗೂಡಿ ಮೊದಲ 6 ಓವರ್​ಗಳಲ್ಲಿ 80 ರನ್​ಗಳ ಜೊತೆಯಾಟವನ್ನು ಕಟ್ಟಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತನ್ನ ಕಾರು ಡ್ರೈವರ್ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ

ದಳಪತಿ ವಿಜಯ್ (Thalapathy Vijay) ತಮಿಳುನಾಡು ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ. ತಮ್ಮ ಟಿವಿಕೆ ಪಕ್ಷದಿಂದ ಟಿಕೆಟ್ ವಿತರಣೆ ಆರಂಭಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಭರ್ಜರಿ ರ್ಯಾಲಿಗಳನ್ನು ಮಾಡುತ್ತಾ ಚುನಾವಣಾ ಪ್ರಚಾರವನ್ನು ಜೋರಾಗಿ ಮಾಡುತ್ತಿದ್ದಾರೆ. ಇದೀಗ ತಮ್ಮ ಬಳಿ ಹಲವು ವರ್ಷ ಡ್ರೈವರ್ ಆಗಿ ಕೆಲಸ ಮಾಡಿದ ವ್ಯಕ್ತಿಯ ಮಗನಿಗೆ ಚುನಾವಣಾ ಟಿಕೆಟ್ ಅನ್ನು ದಳಪತಿ ವಿಜಯ್ ನೀಡಿದ್ದು, ಡ್ರೈವರ್ ಪುತ್ರ, ಕಣ್ಣೀರು ಹಾಕುತ್ತಾ ವಿಜಯ್ ಕಾಲಿಗೆ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಬೆಂಗಳೂರು, (ಮಾರ್ಚ್ 29): ಪತ್ನಿಯ (Wife) ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (Husband) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆಗೆ  ಬೇಸತ್ತಿರುವ ಪತಿ,  ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ ಪತ್ನಿ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ವಿವರಿಸಿದ್ದಾರೆ.

ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ ವಿಕೃತವಾಗಿ ವರ್ತಿಸುತ್ತಾಳೆ. ಸ್ನೇಹಿತೆಯರ ಜೊತೆ ಸ್ವೀಟ್ ಮೆಮೋರಿ ಹಂಚಿಕೊಳ್ಳುವಂತೆ ಒತ್ತಾಯಿಸುತ್ತಾಳೆ. ಅಲ್ಲದೇ ಮದುವೆಗೂ ಮುನ್ನ ಆಕೆಯ ಸಂಬಂಧಗಳ ಬಗ್ಗೆ ಹೇಳಿ ಕಿರಿಕಿರಿ ಉಂಟುಮಾಡುತ್ತಾಳೆ.ಅಷ್ಟೇ ಅಲ್ಲ ಕುಡಿದು ಬರುವುದು, ಸ್ನೇಹಿತರ ಜೊತೆ ಅಲೆದಾಡುವುದು ಇಂದಿನ ಕಾಲದಲ್ಲಿ ಕಾಮನ್ ಎಂದು ಹೇಳಿ ವಿಕೃತವಾಗಿ ವರ್ತಿಸುತ್ತಾಳೆ. ವಿಕೃತ ದೈಹಿಕ ಸಂಪರ್ಕಕ್ಕೆ ಒಪ್ಪದೇ ಇದ್ದಾಗ ಕಿರುಕುಳ ನೀಡುತ್ತಾಳೆ ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾನೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಇನ್ನು ಪತ್ನಿಯ ಈ ಅಸಲಿ ಮುಖ ತಿಳಿಯುವ ಮುನ್ನವೇ ಆಕೆಗೆ ಒಡವೆಗಳನ್ನು ಕೊಟ್ಟಿದ್ದೇನೆ. ಆ ಒಡವೆಗಳನ್ನೂ ವಾಪಸ್ ನೀಡದೆ ಸತಾಯಿಸುತ್ತಿದ್ದಾಳೆ ಎಂದು ನೊಂದ ಪತಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ಹಾಸನ, ಮಾರ್ಚ್​ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿರುವಂತಹ ಘಟನೆ  ಹಾಸನದ ಅರಳೆಪೇಟೆಯ ಎಂಹೆಚ್​​ ಕನ್ವೆನ್ಷನ್​ಹಾಲ್​ನಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆನ್ಷನ್​ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

MI vs KKR: ಕಣಕ್ಕಿಳಿಯುವ ಮುನ್ನವೇ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸುನಿಲ್ ನರೈನ್

Source link

‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ ಬುದ್ಧಿ ಇಲ್ಲದ ಜನ, ಬಿಜೆಪಿ ಕಾರ್ಯಕರ್ತರು ಅದನ್ನು ನಂಬಿಕೊಂಡರೆ ಬೇಸರ ಇಲ್ಲ. ಆದರೆ ಶಿಕ್ಷಿತರು ಈ ಪ್ರೊಪೊಗಾಂಡಾಕ್ಕೆ ಒಳಗಾಗಬಾರದು’ ಎಂದಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರು, ಮಾರ್ಚ್​ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಇಂದು ಕೂಡ ಮಳೆ ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ ಆಗಿದೆ. ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್​ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ.

Source link

ಹೊಸ ಸಂಘರ್ಷಕ್ಕೆ ಕಾರಣವಾಯ್ತು ಮಕ್ಕಳ 1ನೇ ಕ್ಲಾಸ್ ಪ್ರವೇಶ ವಯೋಮಿತಿ ಸಡಿಲಿಕೆ

ಬೆಂಗಳೂರು, (ಮಾರ್ಚ್ 29): ಒಂದನೇ ತರಗತಿ (1st standard) ದಾಖಲಾತಿಗೆ ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂಬ ನಿಯಮಕ್ಕೆ ಸಾಕಷ್ಟು ಪೋಷಕರು ಈ ವರ್ಷವೂ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು (Madhu bangarappa) ಮೊನ್ನೆ ಸುದ್ದಿಗೋಷ್ಠಿ ನಡೆಸಿ 2026-27 ನೇ ಸಾಲಿಗೆ ವಯೋಮಿತಿ ಸಡಲಿಕೆ ಮಾಡಿ ಘೋಷಣೆ ಮಾಡಿದ್ದರು. 1ನೇ ತರಗತಿ ದಾಖಲಾತಿಗೆ ಎರಡು ತಿಂಗಳ ವಿನಾಯಿತಿ ನೀಡಲಾಗಿದ್ದು, ಒಂದನೇ ಕ್ಲಾಸ್​ಗೆ ಅಡ್ಮಿಷನ್ ಮಾಡಿಸಲು ಮಕ್ಕಳಿಗೆ 5.8 ವರ್ಷ ಆಗಿದ್ದರೆ ಸಾಕು. ಜೊತೆಗೆ ಯುಕೆಜಿ ವಯೋಮಿತಿಗೂ ಸಡಲಿಕೆ ಅವಕಾಶ ನೀಡಿದ್ದಾರೆ. ಆದ್ರೆ ಈ ವಯೋಮಿತಿ ಸಡಲಿಕೆ ಈಗ ಪೋಷಕರ ವಿರೋಧಕ್ಕೆ ಕಾರಣವಾಗಿದೆ. ಎರಡು ತಿಂಗಳ ಸಡಲಿಕೆ ಬೇಡ ಕಳೆದ ವರ್ಷದಂತೆ 5.5 ವರ್ಷಕ್ಕೆ 1ನೇ ತರಗತಿ ದಾಖಲಾತಿಗೆ ಅವಕಾಶ ನೀಡುವಂತೆ ಹೋರಾಟ ಶುರು ಮಾಡಿದ್ದಾರೆ.

ಹೌದು… ಸರ್ಕಾರ 2 ತಿಂಗಳ ವಯೋಮಿತಿ ಸಡಲಿಕೆ ಮಾಡಿದೆ. ಆದರೆ ಅರ್ಧಕರ್ಧ ಪೋಷಕರಿಗೆ ನಿಲ್ಲದ ಕಳವಳ ಶುರುವಾಗಿದೆ. 60 ದಿನ ಬೇಡ ಕಳೆದ ವರ್ಷದಂತೆ 5.5 ವರ್ಷಕ್ಕೆ ದಾಖಲಾತಿ ನೀಡಿ ವಯೋಮಿತಿ ಸಡಲಿಕೆಗೆ ಪೋಷಕರ ಒತ್ತಾಯ ಶುರು ಮಾಡಿದ್ದಾರೆ. 5.5 ವಯೋಮಿತಿ ಸಡಲಿಕೆಗೆ ವಯೋಮಿತಿ ಸಡಲಿಕೆ ಹೋರಾಟ ವೇದಿಕೆ ಮಾಡಿಕೊಂಡ ಪೋಷಕರು, ಸಿಎಂಗೂ ಮನವಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಶಾಲಾ ಪ್ರವೇಶಕ್ಕೆ ಕಡ್ಡಾಯ ವಯೋಮಿತಿ ವಿಚಾರ ಮತ್ತೊಂದು ಹೊಸ ಸಂಘರ್ಷಕ್ಕೆ ಕಾರಣವಾಗಿದೆ.

ಇದನ್ನೂ ನೋಡಿ: 1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ಪೋಷಕರ ಒತ್ತಾಯದ ಬಳಿಕ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವರ್ಷ ವಯೋಮಿತಿ ಸಡಲಿಕೆ ಏನೋ ನೀಡಿದ್ದಾರೆ. ಆದ್ರೆ ಇದರಿಂದ ಈಗ ಮತಷ್ಟು ಪೋಷಕರು ಎರಡು ತಿಂಗಳು ಸಾಲದು ಆರು ತಿಂಗಳವರೆಗೂ ಅವಕಾಶ ನೀಡಿ ಎಂದು ಹೋರಾಟ ಶುರು ಮಾಡಿದ್ದಾರೆ.

ಮೇ, ಆಗಸ್ಟ್ ತಿಂಗಳಲ್ಲಿ ಹುಟ್ಟಿದ ಮಕ್ಕಳಿಗೆ ಸಡಲಿಕೆ ಭಾಗ್ಯ ಇಲ್ಲ. ಹೀಗಾಗಿ ಸರ್ಕಾರದ ನಿರ್ಧಾರ ಅರ್ಧ ಖುಷಿ ಕೊಟ್ಟಿದೆ ಎಂದು ಪೋಷಕರು ಬೇಸರ ಹೊರ ಹಾಕಿದ್ದಾರೆ . ಸರ್ಕಾರದ ಸಡಲಿಕೆ ನಿರ್ಧಾರದಿಂದ ಕೇವಲ 1.70 ಲಕ್ಷ ಮಕ್ಕಳಿಗೆ ಮಾತ್ರ ಅನುಕೂಲ. ಇನ್ನುಳಿದ 75 ಸಾವಿರ ಮಕ್ಕಳಿಗೆ ಸಮಸ್ಯೆ ಕಟ್ಟಿಟ್ಟಬುತ್ತಿ. ಹೀಗಾಗಿ ಮತ್ತೆ ಸರ್ಕಾರ, ಶಿಕ್ಷಣ ಸಚಿವರಿಗೆ ಮನವಿ ಮಾಡಲು ಮುಂದಾಗಿದ್ದು, 5.5 ವರೆಗೂ ಸಡಿಲಿಕೆ ಮಾಡಿ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

ನವದೆಹಲಿ, ಮಾರ್ಚ್ 29: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ (Iran War) ಇನ್ನೂ ಅಂತ್ಯವಾಗದ ಹಿನ್ನೆಲೆಯಲ್ಲಿ ತೈಲ ಕಂಟಕ ಮತ್ತಷ್ಟು ಹೆಚ್ಚುತ್ತಿದೆ. ಪೆಟ್ರೋಲ್, ಡೀಸಲ್, ಗ್ಯಾಸ್ ಸಿಗದೇ ಹೋಗಬಹುದು ಎಂದು ಬಹಳಷ್ಟು ಜನರು ಆತಂಕಗೊಳ್ಳುತ್ತಿದ್ದಾರೆ. ಇಂಧನ ದಾಸ್ತಾನು ಸಾಕಷ್ಟಿದೆ ಎಂದು ಸರ್ಕಾರ ಹೇಳುತ್ತಿದ್ದರೂ ಜನರಿಗೆ ಆತಂಕ ತಪ್ಪಿಲ್ಲ. ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಇಂದು ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಇಂಧನ ಪರಿಸ್ಥಿತಿ ಬಗ್ಗೆ ಇಂಚಿಂಚು ಮಾಹಿತಿ ನೀಡಿದೆ.

ಇಂಧನ ಪೂರೈಕೆ ನಿರಂತರವಾಗಿ ನಡೆಯಲು ಪ್ರಯತ್ನಗಳನ್ನು ಹಾಕಲಾಗುತ್ತಿದೆ. ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಸರ್ಕಾರವು ಈ ಪ್ರಕಟಣೆ ಮೂಲಕ ಮನವಿ ಮಾಡಿದೆ.

ಇದನ್ನೂ ಓದಿ: ಹಾರ್ಮುಜ್ ನಂತರ ಮತ್ತೊಂದು ಜಲಸಂಧಿ ಕಂಟಕ; ಜಗತ್ತಿಗೆ ಕಾದಿದೆ ಡಬಲ್ ಶಾಕ್

ಎಲ್ಲಾ ಪೆಟ್ರೋಲ್ ಪಂಪ್​ಗಳಲ್ಲಿ ಪೆಟ್ರೋಲ್ ಮತ್ತು ಡೀಸಲ್ ಪೂರೈಕೆ ನಿರಂತರವಾಗಿ ಆಗುತ್ತಿದೆ. ಎಲ್​ಪಿಜಿ ಸಮಸ್ಯೆ ಕಡಿಮೆ ಮಾಡಲು ಪಿಎನ್​ಜಿ ಸಂಪರ್ಕ ಹೆಚ್ಚಿಸಲಾಗಿದೆ. ಎಲ್ಲಾ ರಿಫೈನರಿಗಳು ಉತ್ತಮ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್​ಗೆ 10 ರೂನಷ್ಟು ಕಡಿಮೆ ಮಾಡಿದೆ. ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್ ಮತ್ತು ಡೀಸಲ್ ಅನ್ನು ರಫ್ತು ಮಾಡದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಒಂದು ಲೀಟರ್​ ಡೀಸಲ್​ಗೆ 21.5 ರೂ ರಫ್ತು ಸುಂಕ ಹಾಕಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಏಪ್ರಿಲ್ 1ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?

ಎಲ್​ಪಿಜಿ ಸ್ಥಿತಿ ಹೇಗಿದೆ?

ಎಲ್​ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಆಗಿಲ್ಲ. ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಳ ಪೂರೈಕೆ ಸಹಜವಾಗಿ ನಡೆದಿದೆ. ಕಮರ್ಷಿಯಲ್ ಗ್ಯಾಸ್ ಹಂಚಿಕೆಯು ಶೇ. 70ರ ಸಾಮರ್ಥ್ಯಕ್ಕೆ ಏರಿದೆ. ಮಾರ್ಚ್ ತಿಂಗಳಲ್ಲಿ 2.9 ಲಕ್ಷ ಹೊಸ ಪಿಎನ್​ಜಿ ಸಂಪರ್ಕಗಳನ್ನು ನೀಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ. ಈ ಕ್ರಮಗಳಿಂದ ಎಲ್​ಪಿಜಿ ಮೇಲಿನ ಒತ್ತಡ ಕಡಿಮೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನಟಿ ರಮ್ಯಾ ಬಗ್ಗೆ ಪ್ರೀತಿಯಿಂದ ಮಾತನಾಡಿದ ಶ್ರೀಲೀಲಾ: ಹೇಳಿದ್ದೇನು?

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಈಗ ಅವರು ಮಿಂಚುತ್ತಿರುವುದು ಪರಭಾಷೆ ಸಿನಿಮಾಗಳಲ್ಲಿ. ತೆಲುಗಿನಲ್ಲಿ ಬಹಳ ಬೇಗ ಸ್ಟಾರ್ ನಟಿ ಎನಿಸಿಕೊಂಡ ಶ್ರೀಲೀಲಾ, ಇದೀಗ ಬಾಲಿವುಡ್ ಮತ್ತು ತಮಿಳು ಚಿತ್ರರಂಗಗಳಲ್ಲಿಯೂ ಮಿಂಚುತ್ತಿದ್ದಾರೆ. ಶ್ರೀಲೀಲಾ ನಟಿಸಿರುವ ಮೊದಲ ಹಿಂದಿ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಈಗ ಒಳ್ಳೆಯ ಆಫರ್​​ಗಳು ಬರುತ್ತಿವೆ. ಇಷ್ಟೆಲ್ಲಾ ಆದರೂ ಕನ್ನಡ ಚಿತ್ರರಂಗವನ್ನು ಶ್ರೀಲೀಲಾ ಮರೆತಿಲ್ಲ. ಇದೀಗ ಕನ್ನಡದ ಸಿನಿಮಾಗಳಿಗೆ ಸಂಬಂಧಿಸಿದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ್ದರು ಶ್ರೀಲೀಲಾ, ಈ ವೇಳೆ ನಟಿ ರಮ್ಯಾ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

ಚಿತ್ತಾರ ಫಿಲಂ ಅವಾರ್ಡ್ಸ್​​ನಲ್ಲಿ ನಟಿ ಶ್ರೀಲೀಲಾಗೆ ಪ್ರಶಸ್ತಿ ನೀಡಲಾಯ್ತು. ಈ ಪ್ರಶಸ್ತಿಯನ್ನು ವಿತರಣೆ ಮಾಡಿದ್ದು ನಟಿ ರಮ್ಯಾ. ಈ ವೇಳೆ ಮಾತನಾಡಿದ ನಟಿ ಶ್ರೀಲೀಲಾ, ‘ಈ ಪ್ರಶಸ್ತಿಯನ್ನು ಕ್ವೀನ್ ರಮ್ಯಾ ಅವರಿಂದ ಪಡೆದುಕೊಳ್ಳುತ್ತಿರುವುದು ನಿಜಕ್ಕೂ ನನ್ನ ಪಾಲಿಗೆ ಹೆಮ್ಮೆಯ ವಿಷಯ. ನಾನು ರಮ್ಯಾ ಅವರ ಬಹಳ ದೊಡ್ಡ ಅಭಿಮಾನಿ’ ಎಂದರು. ಇದಕ್ಕೆ ರಮ್ಯಾ ಸಹ ಶ್ರೀಲೀಲಾಗೆ ಧನ್ಯವಾದ ಹೇಳಿದರು.

ಇದನ್ನೂ ಓದಿ:ಸಿನಿಮಾ ರಂಗದಿಂದ ದೂರಾಗಲು ನಿರ್ಧರಿಸಿದ್ದರು ಶ್ರೀಲೀಲಾ: ಕಾರಣ ಏನು?

‘ಎಲ್ಲರಿಗೂ ನಮಸ್ಕಾರ, ಬಹಳ ಅವಧಿಯ ಬಳಿಕ ಚಿತ್ರರಂಗದ ಎಲ್ಲರೂ ಒಟ್ಟಿಗೆ ಸೇರಿದ್ದೀವಿ ಅನಿಸುತ್ತಿದೆ. ನಾನು ಬಹಳ ಇಷ್ಟಪಡುವ ರಮ್ಯಾ ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವುದು ಖುಷಿ ತಂದಿದೆ. ನನಗೆ ಪ್ರೀತಿ ಕೊಟ್ಟಿರುವ ಮತ್ತು ಪ್ರೀತಿ ಕೊಡುತ್ತಿರುವ ಎಲ್ಲರಿಗೂ ಈ ಪ್ರಶಸ್ತಿಯನ್ನು ಡೆಡಿಕೇಟ್ ಮಾಡುತ್ತೀನಿ. ಹೀಗೆ ನನ್ನ ಮೇಲೆ ಹಾಗೂ ನಾನು ಮಾಡುವ ಸಿನಿಮಾ ಮೇಲೆ ನಿಮ್ಮ ಪ್ರೀತಿ ಹೀಗೆಯೇ ಇರಲಿ’ ಎಂದಿದ್ದಾರೆ ನಟಿ ಶ್ರೀಲೀಲಾ. ಶ್ರೀಲೀಲಾ ಮಾತ್ರವೇ ಅಲ್ಲದೆ ಹಲವಾರು ಮಂದಿಗೆ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ. ನಟಿ ರಮ್ಯಾ ಅವರಿಗೂ ಪ್ರಶಸ್ತಿ ದೊರೆತಿದ್ದು ಆ ಪ್ರಶಸ್ತಿಯನ್ನು ಅವರು ಡಾ ರಾಜ್​​ಕುಮಾರ್ ಕುಟುಂಬ ಸೇರಿದಂತೆ, ತಮ್ಮ ಸಿನಿಮಾ ವೃತ್ತಿ ಜೀವನಕ್ಕೆ ಸಹಾಯ ಮಾಡಿದ ಅನೇಕರಿಗೆ ಡೆಡಿಕೇಟ್ ಮಾಡಿದರು.

ಶ್ರೀಲೀಲಾ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹಿಂದಿಯಲ್ಲಿ ಮೂರು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಅವುಗಳಲ್ಲಿ ಒಂದು ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಾಯಿ ಪಲ್ಲವಿ ನಟಿಸುತ್ತಿರುವ ಸಿನಿಮಾ ಒಂದರಲ್ಲಿ ಶ್ರೀಲೀಲಾ ಸಹ ನಾಯಕಿ. ತೆಲುಗಿನಲ್ಲಿ ಪ್ರಸ್ತುತ ಎರಡು ಸಿನಿಮಾಗಳನ್ನು ಶ್ರೀಲೀಲಾ ಒಪ್ಪಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version