Headlines

Daily Devotional: ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ! – Kannada News | How to Escape the Debt Trap with Daily Devotional Practices

ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಮಾರ್ಗ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ ಸಾಲ ಪಡೆಯುವ ಮೊದಲು ಕುಬೇರನನ್ನು ಸ್ಮರಿಸುವುದು ಶುಭವೆಂದು ಹೇಳಲಾಗುತ್ತದೆ. ಮನೆಯಲ್ಲಿ ಒಂದು ರೂಪಾಯಿ ಕಾಯನ್ನು ಅರಿಶಿನ ಬಟ್ಟೆಯಲ್ಲಿ ಕಟ್ಟಿ ದೇವರ ಬಳಿ ಇಟ್ಟು, ಲಕ್ಷ್ಮಿ ಕುಬೇರರಿಗೆ ಪ್ರಾರ್ಥನೆ ಸಲ್ಲಿಸಿ ಸಾಲಕ್ಕೆ ಹೊರಟರೆ, ಅದು ಸುಲಭವಾಗಿ ತೀರುತ್ತದೆ. ಸಾಲವನ್ನು ಮರುಪಾವತಿಸುವಾಗ ದಕ್ಷಿಣಾಮೂರ್ತಿಯನ್ನು ನೆನೆದು ಹಣವನ್ನು ನೀಡಬೇಕು. ಮಂಗಳವಾರದಂದು ಸಾಲವನ್ನು ಮರುಪಾವತಿಸಲು ಪ್ರಾರಂಭಿಸಿದರೆ, ಮೂರು ಮಂಗಳವಾರಗಳ ಒಳಗೆ…

Read More

ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!

ಬೆಂಗಳೂರು/ಕೊಚ್ಚಿನ್, ಏಪ್ರಿಲ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ (Training and Organisation Development) ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಪ್ರತಿಷ್ಠಿತ ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ (World HRD Congress Award) ‘ಕೇರಳ ಲೀಡರ್‌ಶಿಪ್ ಪ್ರಶಸ್ತಿ-2026’ ಅನ್ನು ತನ್ನದಾಗಿಸಿಕೊಂಡಿದೆ. ಕೇರಳದ ಕೊಚ್ಚಿನ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ತರಬೇತಿ ಕ್ಷೇತ್ರದಲ್ಲಿ KSRTC ಕ್ರಾಂತಿ ನಿಗಮದ ವ್ಯಾಪ್ತಿಯ ಐದು ತರಬೇತಿ ಕೇಂದ್ರಗಳಲ್ಲಿ ಕಳೆದ 6 ತಿಂಗಳ…

Read More

ಲಾಂಗ್ ವೀಕೆಂಡ್ ಎಫೆಕ್ಸ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್! – Kannada News | Long Weekend Rush: Massive Traffic Jam on Bengaluru Nelamangala Highway as Residents Head to Hometowns

ನೆಲಮಂಗಲ, ಮೇ 1: ಇಂದಿನಿಂದ (ಮೇ 1) ಸತತ ಮೂರು ದಿನಗಳ ರಜೆ ಇರುವುದರಿಂದ ಬೆಂಗಳೂರಿಗರು ತಮ್ಮ ಊರುಗಳತ್ತ ಮತ್ತು ಪ್ರವಾಸಿ ತಾಣಗಳತ್ತ ತೆರಳುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಹೊರಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಕ್ರವಾರ ಬೆಳಗ್ಗೆ ವಾಹನಗಳ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದ್ದು, ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಗಿದೆ. ಅದರಲ್ಲೂ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಿಲೋಮೀಟರ್‌ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಅತ್ಯಂತ ನಿಧಾನಗತಿಯಲ್ಲಿ ಚಲಿಸುತ್ತಿವೆ. ನೆಲಮಂಗಲ ಟೋಲ್ ಬಳಿ ವಾಹನಗಳು ಸಾಲುಗಟ್ಟಿರುವ ಚಾಚಿಕೊಂಡಿದ್ದು, ಸಂಚಾರ…

Read More

ಸಿಜೆ ರಾಯ್ ಮಾದರಿಯಲ್ಲಿ ಮತ್ತೋರ್ವ ಆತ್ಮಹತ್ಯೆ: ಐಟಿಗೆ ಹೆದರಿದ್ರಾ ಬಿಬಿಎಂಪಿ ನಿವೃತ್ತ ಚೀಫ್ ಇಂಜಿನಿಯರ್? – Kannada News | BBMP retired chief engineer parameshwarayya Commits Suicide In Bengaluru Like CJ roy

ಬೆಂಗಳೂರು, (ಫೆಬ್ರವರಿ 25): ಐಟಿ ಅಧಿಕಾರಿಗಳ ದಾಳಿ (IT Raid) ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಬಲಿ ಪಡೆದಿದೆ. ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವಾಗಲೇ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಐಟಿ ದಾಳಿಯಿಂದ ಖಿನ್ನತೆಗೊಳಗಾಗಿ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ (BBMP retired Chief Engineer) ಪರಮೇಶ್ವರಯ್ಯ ಅವರು ಇಂದು (ಫೆಬ್ರವರಿ 25) ಬೆಳ್ಳಂಬೆಳಗ್ಗೆ ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮ ಆಸ್ತಿ ಸಂಬಂಧ ಸಿಸಿಬಿಯಲ್ಲಿ ದಾಖಲಾಗಿರುವ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ – Kannada News | Bengaluru temperature: clear sky and cold weather in Bengaluru, Dry weather all over Karnataka

ಬೆಂಗಳೂರು, ಫೆಬ್ರುವರಿ 08: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast)  ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್,…

Read More

ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು – Kannada News | Hubli Dharwad Honour Killing Case: Husband Vivekananda Breaks Down, Recalls Harrowing Night

ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು ಹುಬ್ಬಳ್ಳಿ, ಡಿಸೆಂಬರ್ 22: ‘ಅವರು ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿ ಹೊಡೆದು ಬಡಿಯುತ್ತಿದ್ದರು. ಆದರೂ ಅಂಗಲಾಚಿದರೂ ಯಾರೊಬ್ಬರೂ ನಮ್ಮ ನೆರವಿಗೆ ಬರಲಿಲ್ಲ’. ಇದು ಧಾರವಾಡ(Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಮರ್ಯಾದಾ ಹತ್ಯೆ ಬಗ್ಗೆ ಮೃತ ಯುವತಿ ಮಾನ್ಯಾಳ ಪತಿ ವಿವೇಕಾನಂದನ ಕಣ್ಣೀರ ಮಾತು. ಘಟನೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ವಿವೇಕಾನಂದ, ಎರಡು…

Read More

Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ – Kannada News | Viral Ernakulam Bike Accident: Overtaking Error Caught on CCTV

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. Source link

Read More

ಪೆನ್ನು ಹಿಡಿದ ಸ್ಟೈಲ್ ಕಿಂಗ್ ರಜನೀಕಾಂತ್: ಬರೆಯುತ್ತಿರುವುದು ಯಾವ ಪುಸ್ತಕ? – Kannada News | Rajinikanth writing his auto biography confirms his daughter

ರಜನೀಕಾಂತ್ (Rajinikantha) ಭಾರತದ ನಂಬರ್ 1 ಸೂಪರ್ ಸ್ಟಾರ್. ಹಲವು ದಶಕಗಳಿಂದಲೂ ರಜನೀಕಾಂತ್ ಅವರು ಸೂಪರ್ ಸ್ಟಾರ್ ಸ್ಥಾನದಲ್ಲಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ರಜನೀಕಾಂತ್ ಸಿನಿಮಾ ನಟನಾಗಿ ಅದ್ಭುತ ಕತೆಗಳ ಮೂಲಕ ಹಲವರಿಗೆ ಸ್ಪೂರ್ತಿ ತುಂಬಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನವೂ ಸಹ ಯಾವುದೇ ಸಿನಿಮಾ ಕತೆಗಿಂತಲೂ ಕಡಿಮೆ ಆಗಿದ್ದಲ್ಲ. ಬೆಂಗಳೂರಿನ ಸಣ್ಣ ಏರಿಯಾದಲ್ಲಿ ಬಡ ಕುಟುಂಬವೊಂದರಲ್ಲಿ ಜನಿಸಿ ರಜನೀ ಏರಿದ ಎತ್ತರ ಅಸಾಧಾರಣವಾದುದು. ಅಷ್ಟು ಎತ್ತರಕ್ಕೆ ಏರಿದ ಬಳಿಕವೂ ರಜನೀ ಕಾಯ್ದುಕೊಂಡ ಸರಳತೆ, ವಿನಮ್ರತೆ ಕೋಟ್ಯಂತರ…

Read More

ದಾವಣಗೆರೆ ಉಪಚುನಾವಣೆ: ಎಷ್ಟು ಮತದಾನ? ಬಿಜೆಪಿ-ಕಾಂಗ್ರೆಸ್​​ ನಾಯಕರ ಗೆಲುವಿನ ಲೆಕ್ಕಾಚಾರ ಏನು?

ದಾವಣಗೆರೆ, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere By Election) ಅಂತ್ಯವಾಗಿದೆ. ಕಳೆದ ಹದಿನೈದು ಇಪ್ಪತ್ತು ದಿನಗಳ ಅಬ್ಬರದ ಪ್ರಚಾರ ಒಂದು ರೀತಿಯಲ್ಲಿ ಭರ್ಜರಿ ಮಳೆ ಸುರಿದು ನಿಂತ ಅನುಭವ. ಬಿರು ಬಿಸಿಲು, ಸೀಮೆಂಟ್ ರಸ್ತೆ ಉಲ್ಟಾ ಝಳ. ನಿರಂತರ ಹುರಿಯುತ್ತಿರುವ ಮಂಡಕ್ಕಿ ಭಟ್ಟಿಗಳ ಕಾವಿಗಿಂತ ಇದು ಸ್ವಲ್ಪ ಹೆಚ್ಚಾಗಿತ್ತು. ನಾವು ಹೇಳುತ್ತಿರುವುದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಬಗ್ಗೆ. ಹಿರಿಯ ರಾಜಕಾರಣಿ ಆರು ಸಲ ಶಾಸಕ. ಒಮ್ಮೆ ಸಚಿವ, ಒಮ್ಮೆ ಸಂಸದ…

Read More

ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ – Kannada News | Major Twist in Mysuru Palace Helium Blast Case as NIA Enters Probe

ಮೈಸೂರು, ಡಿಸೆಂಬರ್​​ 26: ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ದೊರೆತಿದೆ. ಆರಂಭದಲ್ಲಿ ಇದೊಂದು ಸಾಮಾನ್ಯ ಸ್ಫೋಟ, ಬಹುಶಃ ಗ್ಯಾಸ್ ತುಂಬಿಸುವ ವೇಳೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈಗ ಈ ಘಟನೆಯಲ್ಲಿ ಹಲವು ಗಂಭೀರ ವಿಚಾರಗಳು ಅಡಗಿವೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಲಿದೆ. ಘಟನೆಯಲ್ಲಿ ಮೃತಪಟ್ಟಿರೋ ಸಲೀಂ ಜತೆ ವಾಸವಿದ್ದ ಇಬ್ಬರನ್ನು ಪೊಲೀಸರು…

Read More