Headlines

ಶಿವರಾಜ್ ಕುಮಾರ್​​ ಬಗ್ಗೆ ವಿಷ್ಣುವರ್ಧನ್​​ಗಿತ್ತು ಅಪಾರ ಪ್ರೀತಿ, ಕೊಟ್ಟಿದ್ದರು ಅಮೂಲ್ಯ ಉಡುಗೊರೆ

ವಿಷ್ಣುವರ್ಧನ್ (Vishnuvardhan), ಕನ್ನಡ ಚಿತ್ರರಂಗದ ಮೇರು ನಟ. ಹಲವಾರು ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಅವರು ಕನ್ನಡಕ್ಕೆ ನೀಡಿದ್ದಾರೆ. ಅಣ್ಣಾವ್ರ ಬಳಿಕ ಅತಿ ಹೆಚ್ಚು ಗೌರವಿಸಲ್ಪಡುವ ನಟ ವಿಷ್ಣುವರ್ಧನ್. ಆದರೆ ಒಂದು ಸಮಯದಲ್ಲಿ ವಿಷ್ಣುವರ್ಧನ್ ಮತ್ತು ರಾಜ್​​ಕುಮಾರ್ ಅವರ ನಡುವೆ ವೈಮನಸ್ಯ ಇದೆ ಎಂದೆಲ್ಲ ಸುದ್ದಿಗಳು ಹರಿದಾಡಿದ್ದವು. ರಾಜ್​​ಕುಮಾರ್ ಅಭಿಮಾನಿಗಳು ವಿಷ್ಣುವರ್ಧನ್ ಮೇಲೆ ದಾಳಿ ಮಾಡಿದ್ದರು, ವಿಷ್ಣುವರ್ಧನ್ ಅಭಿಮಾನಿಗಳು ಸಹ ರಾಜ್​​ಕುಮಾರ್ ಅವರ ಸಿನಿಮಾಗಳ ಸೋಲಿಸಲು ಯತ್ನಿಸಿದ್ದರು ಎಂದೆಲ್ಲ ಹೇಳಲಾಗುತ್ತದೆ. ಆದರೆ ವೈಯಕ್ತಿಕವಾಗಿ ರಾಜ್​​ಕುಮಾರ್ ಮತ್ತು…

Read More

ವಾಟ್ಸಾಪ್ ಬೆನ್ನಲ್ಲೇ ಟೆಲಿಗ್ರಾಮ್, ಸಿಗ್ನಲ್‌ಗೂ ಕೇಂದ್ರದ ನೋಟಿಸ್ – Kannada News | Govt Notice to Telegram, Signal on Username Feature After WhatsApp Action

ನವದೆಹಲಿ, ಜುಲೈ 03: ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳದೆಯೇ ಚಾಟ್ ಮಾಡಲು ಅನುಕೂಲ ಕಲ್ಪಿಸುವ ‘ಯೂಸರ್​​ನೇಮ್’ (Username) ವೈಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣಗಳ ವಿರುದ್ಧ ತನ್ನ ನಿಯಂತ್ರಣವನ್ನು ಮತ್ತಷ್ಟು ಬಿಗಿಗೊಳಿಸಿದೆ. ಬುಧವಾರವಷ್ಟೇ ವಾಟ್ಸಾಪ್ ಸಂಸ್ಥೆಗೆ ನೋಟಿಸ್ ನೀಡಿದ್ದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈಗ ಪ್ರಮುಖ ಮೆಸೇಜಿಂಗ್ ಆಪ್‌ಗಳಾದ ಟೆಲಿಗ್ರಾಮ್ ಮತ್ತು ಸಿಗ್ನಲ್ (Signal)ಗೂ  ಅಧಿಕೃತ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರದ ಕಳವಳ ಮತ್ತು ಪ್ರಶ್ನೆಗಳೇನು? ಮೊಬೈಲ್ ಸಂಖ್ಯೆ ಇಲ್ಲದೆಯೇ ಸಂಪರ್ಕ…

Read More

ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು: ಬೆಂಕಿ ಇಟ್ಟಿದ್ದು ದುಷ್ಕರ್ಮಿಗಳು! – Kannada News | Miscreants Set Plywood Warehouse Ablaze in Nelamangala

ನೆಲಮಂಗಲ, ಏಪ್ರಿಲ್​​ 22: ಫ್ಲೈವುಡ್ ಗೋದಾಮೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಅವಘಡದಿಂದ ಗೋದಾಮಿನಲ್ಲಿದ್ದ ಫ್ಲೈವುಡ್ ಮತ್ತು ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಸ್ಥಳಕ್ಕೆ ಬಂದ ಜನರು ಮತ್ತು ವೀಕ್ಷಕರಿಗೆ ಸುರಕ್ಷತೆ ದೃಷ್ಟಿಯಿಂದ ದೂರ ಉಳಿಯುವಂತೆ ಎಚ್ಚರಿಕೆ ನೀಡಲಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಬೆಂಕಿ ಅವಘಡವು ದುಷ್ಕರ್ಮಿಗಳ…

Read More

IND vs ENG: ಲಾರ್ಡ್ಸ್‌ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India vs England 3rd ODI: Predicted Playing XI and Key Changes at Lord’s

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಕಾರ್ಡಿಫ್‌ನಲ್ಲಿ ನಡೆದ ಎರಡನೇ ಪಂದ್ಯವನ್ನು ಇಂಗ್ಲೆಂಡ್ ಗೆದ್ದು ಸರಣಿಯನ್ನು ಸಮಬಲಗೊಳಿಸಿದೆ. ಸರಣಿಯ ಮೂರನೇ ಪಂದ್ಯ ಈಗ ಲಾರ್ಡ್ಸ್‌ನಲ್ಲಿ (Lord’s) ನಡೆಯಲಿದೆ. ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಸೋಲಲು ತಂಡದ ಬ್ಯಾಟಿಂಗ್‌ ವಿಭಾಗದ ಅದರಲ್ಲೂ ಆಲ್‌ರೌಂಡರ್​ಗಳ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಅಲ್ಲದೆಯೇ ವಾಷಿಂಗ್ಟನ್ ಸುಂದರ್ ಅವರ ಗಾಯ ಕೂಡ…

Read More

ಮಿತಿಮೀರಿದ ಆಟಗಾರರ ವರ್ತನೆ; ಶಿಸ್ತುಕ್ರಮದ ಎಚ್ಚರಿಕೆ ಕೊಟ್ಟ ಬಿಸಿಸಿಐ – Kannada News | IPL Discipline Crackdown: BCCI Warns Players and Owners on Misconduct Rules

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆಟಗಾರರಿಂದ ಪದೇ ಪದೇ ಶಿಸ್ತು ಉಲ್ಲಂಘನೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಆಟಗಾರರು ಮತ್ತು ಅಧಿಕಾರಿಗಳ ಕೊಠಡಿಗಳಿಗೆ ಅನಧಿಕೃತ ವ್ಯಕ್ತಿಗಳ ಭೇಟಿ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ‘ನಾವು ಸುಮ್ಮನೆ ಕುಳಿತಿಲ್ಲ, ನಿಯಮ ಮೀರಿದರೆ ಕಠಿಣ ಶಿಕ್ಷೆ ಖಚಿತ’ ಎಂದು ಎಚ್ಚರಿಸಿದ್ದಾರೆ. ಕೆಲವು ತಂಡಗಳ ಆಟಗಾರರು ಮತ್ತು ಫ್ರಾಂಚೈಸಿಗಳು ಬಿಸಿಸಿಐ ನಿಗದಿಪಡಿಸಿದ ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಮರೆತಿವೆ ಎಂಬ ಆರೋಪ ಕೇಳಿಬಂದಿದೆ….

Read More

Air Ambulance Crash: ಒಂದು ಜೀವ ಉಳಿಸಲು ಏರ್ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಕೊಟ್ಟಿದ್ರು, ಆದ್ರೆ 7 ಪ್ರಾಣ ಹೋಯ್ತು – Kannada News | Jharkhand Air Ambulance Tragedy: Rs7 Lakh Paid for One Life, 7 Died in Crash

ರಾಂಚಿ, ಫೆಬ್ರವರಿ 24: ಜಾರ್ಖಂಡ್​​ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್(Air Ambulance)​ ಅಪಘಾತಕ್ಕೀಡಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಜೀವವನ್ನು ಉಳಿಸಲು ಕುಟುಂಬ ಈ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಪಾವತಿ ಮಾಡಿತ್ತು.  ಆದರೆ ಅಪಘಾತದಲ್ಲಿ ಏಳು ಜನರ ಪ್ರಾಣ ಹೋಗಿದೆ. ಅಷ್ಟೇ ಅಲ್ಲದೆ ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲವನ್ನೂ ಕೂಡ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುವ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬ್ಯುಲೆನ್ಸ್ ರಾಂಚಿಯಿಂದ ಸಂಜೆ 7.11…

Read More

ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ: ಪತಿಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಬೆಂಗಳೂರು, ಏಪ್ರಿಲ್​​ 08: ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದಿಂದ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳಸಿರುವ ಪ್ರಕರಣ ಸಂಬಂಧ ಪತಿಯ ವಿರುದ್ಧದ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದಯ ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಅದಾಗಲೇ ದಂಪತಿ ಬೇರೆಯಾಗಿದ್ದರೂ ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಕಾರಣ ಪತಿಯ ವಿರುದ್ಧ ಐಪಿಸಿ ಸೆ. 376(ಬಿ) ಅಡಿ ಕೇಸ್ ದಾಖಲಾಗಿತ್ತು. ಪತ್ನಿ ದಾಖಲಿಸಿದ್ದ ಕೇಸ್ ರದ್ದು ಕೋರಿ ಹೈಕೋರ್ಟ್​ಗೆ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ…

Read More

‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ತಡೆ: ಹೈಕೋರ್ಟ್ ನೀಡಿದ ಕಾರಣವೇನು? – Kannada News | This is the reason why High Court stayed the release of The Kerala Story 2

ಲವ್ ಜಿಹಾದ್ ಕುರಿತ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈ ವಾರ ಬಿಡುಗಡೆ ಆಗುತ್ತಿಲ್ಲ. ಫೆಬ್ರವರಿ 27ರಂದು ರಿಲೀಸ್ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಈ ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಚಿತ್ರತಂಡಕ್ಕೆ ಆಘಾತ ಆಗಿದೆ. ಚಿತ್ರದ ಟೀಸರ್ ಬಿಡುಗಡೆ ಆದ ಬಳಿಕ ಅನೇಕರಿಂದ ವಿರೋಧ ವ್ಯಕ್ತವಾಗಿತ್ತು. ಕೆಲವರು ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿರುವ ಕೇರಳ…

Read More

ಪೊಲೀಸರನ್ನ ಕಂಡು ಬಿಲ್ಡಿಂಗ್‌ನಿಂದ ಕೆಳಗೆ ಹಾರಿದ ರೌಡಿ ‘ಸ್ಪಾಟ್ ನಾಗ’; ಸೊಂಟ ಮುರಿದುಕೊಂಡು ಆಸ್ಪತ್ರೆ ಸೇರಿದ ಕಿರಾತಕ! – Kannada News | Soladevanahalli Police Chase: Spot Naga Jumps From Building, Suffers Hip Injury

ಬೆಂಗಳೂರು, ಮೇ.26 : ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೌಡಿಶೀಟರ್‌ ಒಬ್ಬ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಕೆಳಗೆ ಹಾರಿ ಸೊಂಟ ಜಾಯಿಂಟ್ ಕಂಪ್ರೆಷನ್ (ಸೊಂಟದ ಮೂಳೆ ಜರುಗುವಿಕೆ) ಆಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡಿರುವ ಆರೋಪಿಯನ್ನು ನಗರದ ಕುಖ್ಯಾತ ರೌಡಿ ನಾಗರಾಜ್ ಅಲಿಯಾಸ್ ‘ಸ್ಪಾಟ್ ನಾಗ’ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಈ ಹಿಂದೆ ಯುವಕನೊಬ್ಬನಿಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದ ಪ್ರಕರಣದಲ್ಲಿ ರೌಡಿ ಸ್ಪಾಟ್ ನಾಗ…

Read More

ಎಲುಬುಗಳಲ್ಲಿ ನೋವು ಕಂಡುಬರುವುದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ? ಇದನ್ನು ತಡೆಗಟ್ಟಲು ಸಿಂಪಲ್ ಟ್ರಿಕ್ ಇಲ್ಲಿದೆ – Kannada News | Vitamin Deficiencies That Cause Bone Pain: What You Need to Know

ಇತ್ತೀಚಿನ ದಿನಗಳಲ್ಲಿ ಎಲುಬು ನೋವು ಮತ್ತು ದೇಹದ ದುರ್ಬಲತೆ ಸಮಸ್ಯೆಗಳು ಅನೇಕರಲ್ಲಿ ಹೆಚ್ಚಾಗಿ ಕಾಣಿಸುತ್ತಿವೆ. ಹಲವರು ಇದನ್ನು ಸಾಮಾನ್ಯ ದಣಿವು ಅಥವಾ ವಯಸ್ಸಿನ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ದೇಹದಲ್ಲಿ ಅಗತ್ಯ ವಿಟಮಿನ್ (Vitamin Deficiencies) ಮತ್ತು ಖನಿಜಗಳ ಕೊರತೆ ಕೂಡ ಎಲುಬು ನೋವಿಗೆ ಪ್ರಮುಖ ಕಾರಣವಾಗಬಹುದು. ತಜ್ಞರ ಪ್ರಕಾರ, ವಿಶೇಷವಾಗಿ ವಿಟಮಿನ್ ಡಿ ಕೊರತೆಯು ಎಲುಬು ನೋವಿಗೆ ಪ್ರಮುಖ ಕಾರಣವಾಗಿದೆ. ವಿಟಮಿನ್ ಡಿ ದೇಹದಲ್ಲಿ ಕ್ಯಾಲ್ಸಿಯಂ ಪೋಷಣೆಗೆ ಸಹಾಯ ಮಾಡುತ್ತದೆ. ಇದು ಎಲುಬುಗಳನ್ನು…

Read More