ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ? – Kannada News | Reasons why Deepinder Goyal resigns as CEO of Eternal

ನವದೆಹಲಿ, ಜನವರಿ 22: ಬ್ಲಿಂಕಿಟ್ ಮತ್ತು ಜೊಮಾಟೊದ ಮಾಲಕ ಸಂಸ್ಥೆಯಾದ ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್​ನ ಸಿಇಒ ಆಗಿದ್ದ ಆಲ್ಬೀಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಸಿಇಒ ಆಗಿ ಬಡ್ತಿ ಮತ್ತು ಜವಾಬ್ದಾರಿ ಪಡೆಯಲಿದ್ದಾರೆ. ದೀಪಿಂದರ್ ಗೋಯಲ್ ಅವರು ಸ್ಟಾಕ್ ಫೈಲಿಂಗ್​ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಷೇರುದಾರರು ಅನುಮಸತಿಸಿದರೆ ಎಟರ್ನಲ್ ನಿರ್ದೇಶಕರ ಮಂಡಳಿಯಲ್ಲಿ ವೈಸ್ ಛೇರ್ಮನ್ ಆಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ, ತಾನು ಎಟರ್ನಲ್ ಸಿಇಒ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೆ ಏನು ಮಾಡಲು ಹೊರಟಿದ್ದೇನೆ ಎಂಬುದರ ಮಾಹಿತಿ ನೀಡಿದ್ದಾರೆ.

ದೀಪಿಂದರ್ ಗೋಯಲ್ ಅವರಿಗೆ ಹಲವು ಕನಸುಗಳ ಸಾಕಾರಗೊಳಿಸುವ ಹುಮ್ಮಸ್ಸು

ದೀಪಿಂದರ್ ಗೋಯಲ್ ಜೊಮಾಟೊವನ್ನು ಯಶಸ್ವಿ ಕಂಪನಿಯಾಗಿಸಿದರು. ಬ್ಲಿಂಕಿಟ್ ಅನ್ನೂ ಸೂಪರ್ ಸಕ್ಸಸ್ ಆಗಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಎಟರ್ನಲ್ ಎನ್ನುವ ಗ್ರೂಪ್ ಕಂಪನಿಯ ನಿರ್ಮಾಣವಾಗಿದ್ದು, ಇದರ ಅಡಿಯಲ್ಲಿ ಜೊಮಾಟೊ ಮತ್ತು ಬ್ಲಿಂಕಿಟ್ ಇವೆ. ಎಟರ್ನಲ್​ಗೆ ಪ್ರಮುಖ ಆದಾಯ ಮೂಲವೇ ಬ್ಲಿಂಕಿಟ್ ಆಗಿದೆ. ಯಶಸ್ವಿ ಬ್ಯುಸಿನೆಸ್ ಮಾಡಲ್ ಅನ್ನು ರೂಪಿಸಿದ್ದರ ಹಿಂದೆ ದೀಪಿಂದರ್ ಅವರ ಶ್ರಮ ಇದೆ.

ಇದನ್ನೂ ಓದಿ: ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ

ಟೆಂಪಲ್ ಡಿವೈಸ್ ಅಭಿವೃದ್ಧಿ

ದೀಪಿಂದರ್ ಗೋಯಲ್ ಕೆಲ ಕುತೂಹಲಕಾರಿ ಪ್ರಾಜೆಕ್ಟ್​ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲಿ ಟೆಂಪಲ್ ಒಂದು. ಮುಖದ ಬದಲಿಯಲ್ಲಿ, ಅಂದರೆ ಕಣ್ಣು ಮತ್ತು ಕಿವಿ ನಡುವೆ ತುಸು ಮೇಲಿನ ಪ್ರದೇಶವನ್ನು ಟೆಂಪಲ್ ಎನ್ನುತ್ತಾರೆ. ಆ ಜಾಗದಲ್ಲಿ ಧರಿಸಬಹುದಾದ ಒಂದು ಉಪಕರಣವನ್ನು (Temple Device) ಗೋಯಲ್ ಅಭಿವೃದ್ಧಿಪಡಿಸುತ್ತಿದ್ದಾರೆ. ಮಿದುಳಿಗೆ ರಕ್ತದ ಹರಿವವನ್ನು ಇದು ಅಳೆಯಬಲ್ಲುದು. ಗುರುತ್ವಾಕರ್ಷಣ ಶಕ್ತಿಯಿಂದ ಮಿದುಳಿಗೆ ರಕ್ತದ ಚಲನೆ ಕಡಿಮೆ ಆಗಬಲ್ಲುದು ಎಂದು ಕೆಲ ತಜ್ಞರು ವಾದಿಸುತ್ತಿದ್ದಾರೆ. ಟೆಂಪಲ್ ಸಾಧನದ ಮೂಲಕ ಇದನ್ನು ಪರೀಕ್ಷಿಸಲಾಗುತ್ತಿದೆ. ಇದು ನಿಜವೇ ಎಂಬುದಕ್ಕೆ ಸಾಕ್ಷ್ಯಾಧಾರ ಸಿಕ್ಕರೆ ನರರೋಗ ಸಮಸ್ಯೆಗಳಿಗೆ ಚಿಕಿತ್ಸೆ ಕೊಡುವುದು ಸುಲಭವಾಗಬಹುದು.

ಎಲ್​ಎಟಿ ಏರೋಸ್ಪೇಸ್ ಮೂಲಕ ವೈಮಾನಿಕ ಕ್ರಾಂತಿ ಮಾಡ ಹೊರಟಿರುವ ಗೋಯಲ್

ಎಲ್​ಎಟಿ ಏರೋಸ್ಪೇಸ್ (LAT Aerospace) ಸದ್ಯ ದೀಪಿಂದರ್ ಗೋಯಲ್ ಅವರ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್. ದೇಶದಲ್ಲಿ ವೈಮಾನಿಕ ಕ್ರಾಂತಿ ಮಾಡಲು ಹೊರಟಂತಿದೆ. ಬಸ್ಸು, ಮೆಟ್ರೋಗಳಂತೆ ವಿಮಾನಗಳೂ ಕೂಡ ನಗರದ ವಿವಿಧ ಏರಿಯಾಗಳಲ್ಲಿ ಇಳಿಯಬಲ್ಲಂತಹ ಒಂದು ವ್ಯವಸ್ಥೆಯ ಪರಿಕಲ್ಪನೆ ಅದು. ಫ್ಲೈಯಿಂಗ್ ಟ್ಯಾಕ್ಸಿ ರೀತಿಯದ್ದು. 10-20 ಸೀಟರ್​ಗಳ ಸಣ್ಣ ಸಣ್ಣ ವಿಮಾನಗಳನ್ನು ನಿರ್ಮಿಸಲು ಯತ್ನಿಸಲಾಗುತ್ತಿದೆ. ಈಗಾಗಲೇ ಈ ನಿಟ್ಟಿನಲ್ಲಿ ಪ್ರಯೋಗಗಳಾಗಿವೆ. ಲಂಬವಾಗಿ ಟೆಕಾಫ್ ಆಗಿ ನಂತರ ಸುರಕ್ಷಿತವಾಗಿ ಇಳಿಯಬಲ್ಲಂತೆ ಆಗುವವರೆಗೂ ಪ್ರಯೋಗಗಳು ನಡೆಯಲಿವೆ.

ಇದನ್ನೂ ಓದಿ: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ

ವಿಶ್ವದಲ್ಲಿ ಯಾರೂ ಕೂಡ ಈ ಪ್ರಯೋಗ ಮಾಡಿಲ್ಲ. ತಾವೇ ಮೊದಲು ಮಾಡುತ್ತಿರುವುದು. ಇದು ವಿಫಲವಾದರೂ ಪರವಾಗಿಲ್ಲ. ಪ್ರಯತ್ನವನ್ನಂತೂ ಮಾಡುವುದಾಗಿ ರಾಜ್ ಶಮಾನಿ ಪೋಡ್​ಕ್ಯಾಸ್ಟ್​ನಲ್ಲಿ ದೀಪಿಂದರ್ ಗೋಯಲ್ ಹೇಳಿಕೊಂಡಿದ್ದಾರೆ. ಗೋಯಲ್ ಅವರು ಇವಿಷ್ಟೂ ಮಾತ್ರವಲ್ಲ, ಇನ್ನೂ ಕೆಲ ಬ್ಯುಸಿನೆಸ್ ಹಾಗೂ ಇತರ ಪರಿಕಲ್ಪನೆಗಳನ್ನು ಇಟ್ಟುಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಅವರು ವಿನ್ ಆದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ‘ಇದೆಲ್ಲ ನಿಜ ಎಂದು ನಂಬೋಕೆ ಇನ್ನೂ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಅಂದರೆ, ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರು ಎಲ್ಲಾ ಅಭಿಮಾನಿಗಳಿಗೆ, ಬೆಂಬಲಿಗರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾ ಮೀಮ್ ಪೇಜ್​​​ಗಳಿಗೆ ಧನ್ಯವಾದ ಹೇಳಿದ್ದಾರೆ. ಆ ಸಂಧರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Spiritual Tips: ಹಾಸಿಗೆ ಮೇಲೆ ಕುಳಿತು ಏಕೆ ಊಟ ಸೇವನೆ ಮಾಡಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | The Spiritual and Practical Consequences of Eating on the Bed: Insights

ಸನಾತನ ಸಂಪ್ರದಾಯದಲ್ಲಿ ಅನ್ನಕ್ಕೆ ವಿಶೇಷ ಸ್ಥಾನಮಾನವಿದೆ. ಅನೇಕ ಯಜ್ಞ, ಹೋಮ, ಹವನಗಳಲ್ಲಿ ಅನ್ನ ಯಜ್ಞಕ್ಕೆ ಮಹತ್ವ ನೀಡಲಾಗಿದೆ. ಭಗವದ್ಗೀತೆಯಲ್ಲಿ ‘ಅನ್ನಾತ್ ಭವಂತಿ ಭೂತಾನಿ ಪರ್ಜನ್ಯಾತ್ ಅನ್ನಸಂಭವಃ’ ಎಂದು ಹೇಳಿದಂತೆ, ಅನ್ನವು ಜೀವರಕ್ಷಕ ಮತ್ತು ಪ್ರಾಣ ರಕ್ಷಕವಾಗಿದೆ. ಅನ್ನಪೂರ್ಣೇಶ್ವರಿಯನ್ನು ನಾವು ಸದಾ ಪೂರ್ಣೆಯೆಂದು ಪೂಜಿಸುತ್ತೇವೆ. ನಾವು ಅನ್ನಕ್ಕೆ ಎಷ್ಟು ಗೌರವ ಮತ್ತು ಭಕ್ತಿ ಸಮರ್ಪಿಸುತ್ತೇವೆಯೋ, ನಮ್ಮ ದೇಹವೂ ಅಷ್ಟು ಚೆನ್ನಾಗಿರುತ್ತದೆ.

ಆದರೆ, ಅನ್ನದ ವಿಷಯದಲ್ಲಿ ಕೆಲವು ಅಭ್ಯಾಸಗಳನ್ನು ತ್ಯಜಿಸುವುದು ಅವಶ್ಯಕ. ಅವುಗಳಲ್ಲಿ ಪ್ರಮುಖವಾದುದು ಹಾಸಿಗೆ ಮೇಲೆ ಕುಳಿತು ಆಹಾರ ಸೇವಿಸುವುದು. ಹಾಸಿಗೆ ಮೇಲೆ ಕುಳಿತು ಅನ್ನ, ನೀರು, ಕಾಫಿ, ಅಥವಾ ಯಾವುದೇ ಹಣ್ಣುಗಳನ್ನು ತಿನ್ನುವುದು ಸಮಂಜಸವಲ್ಲ. ಈ ಅಭ್ಯಾಸವು ಸಕಾರಾತ್ಮಕ ಶಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಈ ಅಭ್ಯಾಸದಿಂದ ಮಕ್ಕಳಾಗಲಿ, ವಿದ್ಯಾರ್ಥಿಗಳಾಗಲಿ ಜ್ಞಾಪಕ ಶಕ್ತಿ ಕಡಿಮೆಯಾಗಲು ಕಾರಣವಾಗಬಹುದು. ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ನಷ್ಟಗಳು ಸಂಭವಿಸುತ್ತವೆ. ಒಟ್ಟಾರೆ, ಜೀವನದಲ್ಲಿ ಕಷ್ಟಗಳು ಹೆಚ್ಚಾಗುತ್ತವೆ ಮತ್ತು ಕೆಲವರು ಇದನ್ನು ನರಕ ಪ್ರಾಪ್ತಿಗೆ ಸಮವೆಂದು ಹೇಳುತ್ತಾರೆ. ಹಾಸಿಗೆ ಮೇಲೆ ಆಹಾರ ಸೇವನೆಯಿಂದ ಮಹಾಲಕ್ಷ್ಮಿಗೆ ಕೋಪ ಬರುತ್ತದೆ. ಇದರ ಜೊತೆಗೆ ನಮ್ಮ ನವಗ್ರಹಗಳು ಸಹ ವಿಚಿತ್ರವಾಗಿ ಮತ್ತು ವಿರೋಧವಾಗಿ ವರ್ತಿಸುತ್ತವೆ. ಇದರಿಂದ ಸಕಲ ದೇವಾನುದೇವತೆಗಳ ಕೃಪೆಗೆ ಪಾತ್ರರಾಗಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಪರಿಣಾಮವಾಗಿ, ಮನೆಯಲ್ಲಿ ಕಲಹಗಳು, ಗಲಾಟೆಗಳು, ಕೋಪ-ತಾಪಗಳು ಹೆಚ್ಚಾಗುತ್ತವೆ. ಮನಸ್ಸು ವಿಚಲಿತವಾಗುತ್ತದೆ ಮತ್ತು ಶುದ್ಧತೆ ಇರುವುದಿಲ್ಲ. ಸನಾತನ ಸಂಪ್ರದಾಯದಲ್ಲಿ ಹಾಸಿಗೆ ಮೇಲೆ ಕುಳಿತು ಆಹಾರವಾಗಲಿ, ಕಾಫಿಯಾಗಲಿ, ಪಾನೀಯವಾಗಲಿ ಅಥವಾ ಹಣ್ಣುಗಳಾಗಲಿ ಸೇವಿಸುವುದು ಒಳ್ಳೆಯದಲ್ಲ ಎಂದು ವಾಸ್ತು ತಜ್ಞರು ಎಚ್ಚರಿಸಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ನಾಯಕನ ಸೋದರಳಿಯ – Kannada News | Gujarat Crime: Tragic End After Domestic Fight, Couple Die in Suspected Murder Suicide

ಅಹಮದಾಬಾದ್, ಜನವರಿ 22: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಗುಜರಾತ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಗೋಹಿಲ್, ತನ್ನ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಮೂಲತಃ ಭಾವನಗರದ ಈ ದಂಪತಿ ಎರಡು ತಿಂಗಳ ಹಿಂದೆ ಮದುವೆಯಾದ ನಂತರ ಅಹಮದಾಬಾದ್‌ನಲ್ಲಿ ನೆಲೆಸಿದ್ದರು. ಇಬ್ಬರೂ ಈ ಹಿಂದೆ ಮದುವೆಯಾಗಿದ್ದರು, ಮತ್ತು ಇದು ಇಬ್ಬರಿಗೂ ಎರಡನೇ ವಿವಾಹವಾಗಿತ್ತು.

ಪೊಲೀಸ್ ಪ್ರಾಥಮಿಕ ವರದಿಗಳ ಪ್ರಕಾರ, ಮಂಗಳವಾರ ರಾತ್ರಿ ದಂಪತಿ ಊಟ ಮುಗಿಸಿ ಮನೆಗೆ ಹಿಂದಿರುಗಿದ ನಂತರ ಈ ಘಟನೆ ನಡೆದಿದೆ. ಯಶ್​ರಾಜ್, ರಾಜೇಶ್ವರಿ (30) ಅವರನ್ನು ಹತ್ಯೆ ಮಾಡಲು ತಮ್ಮ ಮನೆಯಲ್ಲಿ ಇರಿಸಲಾಗಿದ್ದ ಪರವಾನಗಿ ಪಡೆದ ಬಂದೂಕನ್ನು ಬಳಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯ ಪಂಚತಾರಾ ಹೋಟೆಲ್​ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ಪೊಲೀಸರ ಪ್ರಕಾರ, ರಾಜೇಶ್ವರಿ ಅವರ ತಲೆಯ ಹಿಂಭಾಗಕ್ಕೆ ಗುಂಡು ಹಾರಿಸಲಾಗಿತ್ತು ಮತ್ತು ಯಶ್ರಾಜ್ ಕೂಡ ತಲೆಗೆ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ತುರ್ತು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ರಾಜೇಶ್ವರಿ ಸಾವನ್ನು ದೃಢಪಡಿಸಿದ್ದಾರೆ.ರಾಜೇಶ್ವರಿ ಮೃತಪಟ್ಟ ಬಳಿಕ, ಸ್ವಲ್ಪ ಸಮಯದ ನಂತರ, ಯಶ್ರಾಜ್ ತನ್ನ ಪ್ರಾಣವನ್ನು ತಾನೇ ಕೊನೆಗೊಳಿಸಲು ಅದೇ ಪಿಸ್ತೂಲ್ ಬಳಸಿದ್ದಾರೆಂದು ವರದಿಯಾಗಿದೆ.
ಯಶ್‌ರಾಜ್ ಮನೆಯಲ್ಲಿ ಬಂದೂಕನ್ನು ಹೇಗೆ ಮತ್ತು ಏಕೆ ಇಟ್ಟುಕೊಂಡಿದ್ದನು ಎಂಬುದರ ಜೊತೆಗೆ, ಸಾವಿಗೆ ಕಾರಣವಾದ ಸಂದರ್ಭಗಳನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

ಮತ್ತೊಂದು ಘಟನೆ
ಕೋಲ್ಕತ್ತಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಪತ್ನಿ ಮತ್ತು ಆಕೆಯ ಸಂಬಂಧಿಕರು ಆತನನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಮೃತ ಸನ್ನಿ ಸಿಂಗ್ (34) ಅವರ ಶವವನ್ನು ನಿನ್ನೆ ರಾತ್ರಿ ಪೊಲೀಸರು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಯ ತನಿಖೆ ಆರಂಭವಾಗಿದೆ. ಆತನ ಕುಟುಂಬ ಸದಸ್ಯರು ಆತನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ, ಯುವಕನ ಪತ್ನಿ ಮತ್ತು ಭಾವನ ಕಡೆಗೆ ಬೆರಳು ತೋರಿಸಿದರು.

ಸಿಂಗ್ ಅವರ ಮೃತದೇಹ ಅದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪುನಿತಾ ವಾಸಿಸುತ್ತಿದ್ದ ಕೋಣೆಯ ಬಾಗಿಲು ಹೊರಗಿನಿಂದ ಲಾಕ್ ಆಗಿತ್ತು. ನೆರೆಹೊರೆಯವರ ಸಹಾಯದಿಂದ, ಅವರು ಬಾಲ್ಕನಿಯಿಂದ ಕೆಳಗೆ ಇಳಿದು, ಮನೆಯ ಬಾಗಿಲು ತೆರೆದು, ಒಳಗೆ ಹೋಗಿ ನೇತಾಡುತ್ತಿರುವ ಶವವನ್ನು ಕಂಡುಕೊಂಡಿದ್ದಾರೆ. ಶೀಘ್ರದಲ್ಲೇ ಸರ್ಶುನಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು. ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಶವವನ್ನು ವಶಪಡಿಸಿಕೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Weekly Career Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಉದ್ಯೋಗ ದೊರೆಯುವ ಸಾಧ್ಯತೆಯಿದೆ – Kannada News | Career Predictions Jan 25 31, 2026: Navigating Job Challenges and New Opportunities

25-01-2026ರಿಂದ 31  ರವರೆಗೆ ವೃತ್ತಿಯು ಅಧಿಕಾರಿಗಳ ಆಳ್ವಿಕೆಯಲ್ಲಿ ಇರಲಿದೆ. ಕೆಲವರಿಗೆ ಮುಂದಿನ ದಾರಿ ಕತ್ತಲೆನಿಸುವ ಸ್ಥಿತಿ. ಶ್ರಮ ಅಧಿಕವಾಗಲಿದೆ. ಸ್ವಂತ ಉದ್ಯಮಿಗಳಿಗೆ ನಷ್ಟವನ್ನು ತುಂಬಿಕೊಳ್ಳುವ ಯೋಚನೆ ಬರಲಿದ್ದು ಅಡ್ಡ ದಾರಿಗಳು ಗಮನ ಸೆಳೆಯಬಹುದು‌. ಸರಿಯಾದ ಮಾರ್ಗವಿದ್ದರೆ ಭಯದ ಅವಶ್ಯಕತೆ ಇಲ್ಲ. ದೈವ ನಿಮ್ಮನ್ನು ಕಾಪಾಡುತ್ತದೆ.

ಮೇಷ ರಾಶಿ:

ಈ ವಾರ ವೃತ್ತಿಜೀವನ ಹೊಸ ಎತ್ತರಕ್ಕೆ ಏರಲಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭ ಸುದ್ದಿ ಸಿಗಲಿದೆ.

ವೃಷಭ ರಾಶಿ:

ನಿಮಗೆ ಕೆಲಸದ ಸ್ಥಳದಲ್ಲಿ ಈ ವಾರ ಸ್ಥಿರತೆ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯುವ ಬಲವಾದ ಲಕ್ಷಣಗಳಿವೆ. ಹಿರಿಯ ಅಧಿಕಾರಿಗಳೊಂದಿಗೆ ವಾದ ಮಾಡಬೇಡಿ.

ಮಿಥುನ ರಾಶಿ:

ಮೂರನೇ ರಾಶಿಗೆ ಈ ವಾರ ಒಂದಕ್ಕಿಂತ ಹೆಚ್ಚು ಉದ್ಯೋಗಾವಕಾಶಗಳು ಎದುರಾಗಬಹುದು. ಐಟಿ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಇರುವವರಿಗೆ ಹೆಚ್ಚಿನ ಪ್ರಗತಿ ಕಂಡುಬರಲಿದೆ.

ಕರ್ಕಾಟಕ ರಾಶಿ:

ನಿಮ್ಮ ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಗೌರವ ಸಿಗಲಿದೆ. ಸಹೋದ್ಯೋಗಿಗಳ ಬೆಂಬಲ ದೊರೆಯುತ್ತದೆ.

ಸಿಂಹ ರಾಶಿ:

ಈ ವಾರ ನಿಮ್ಮ ಕೆಲಸದ ಬಗ್ಗೆ ಇತರರಿಂದ ಮೆಚ್ಚುಗೆ ಪಡೆಯುವಿರಿ. ಆದರೆ ಕಚೇರಿ ರಾಜಕೀಯದಿಂದ ದೂರವಿರುವುದು ಉತ್ತಮ.

ಕನ್ಯಾ ರಾಶಿ:

ಆರನೇ ರಾಶಿಗೆ ವೃತ್ತಿಯಲ್ಲಿ ಪ್ರಾಯೋಗಿಕ ನಿರ್ಧಾರಗಳು ಮುಖ್ಯ. ಕೆಲಸದ ಹೊರೆ ಹೆಚ್ಚಾದರೂ ಅದನ್ನು ನಿಭಾಯಿಸುವ ಶಕ್ತಿ ನಿಮ್ಮಲ್ಲಿರುತ್ತದೆ.

ತುಲಾ ರಾಶಿ:

ನೀವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಸರಿಯಾಗಿ ಯೋಚಿಸಿ. ವ್ಯಾಪಾರಸ್ಥರಿಗೆ ಈ ವಾರ ಸಾಧಾರಣ ಲಾಭ ಇರಲಿದೆ.

ವೃಶ್ಚಿಕ ರಾಶಿ:

ಈ ವಾರ ರಹಸ್ಯ ಮೂಲಗಳಿಂದ ಬಂದ ಅವಕಾಶಗಳು ನಿಮ್ಮ ವೃತ್ತಿಯ ದಿಕ್ಕನ್ನೇ ಬದಲಿಸಬಹುದು. ಸಂಶೋಧನೆ ಮತ್ತು ಭದ್ರತಾ ಕ್ಷೇತ್ರದಲ್ಲಿ ಇರುವವರಿಗೆ ಯಶಸ್ಸು ಸಿಗಲಿದೆ.

ಧನು ರಾಶಿ:

ನಿಮಗೆ ಆದಾಯದಲ್ಲಿ ಏರಿಕೆ ಕಂಡುಬರುತ್ತದೆ. ರಾಜಕೀಯ ಅಥವಾ ಸಾರ್ವಜನಿಕ ಕ್ಷೇತ್ರದಲ್ಲಿ ಇರುವವರಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗಲಿದೆ.

ಮಕರ:

ಹತ್ತನೇ ರಾಶಿಯವರಿಗೆ ನಿಮ್ಮ ಕಾರ್ಯಕ್ಷಮತೆಗೆ ಹಿರಿಯರ ಆಶೀರ್ವಾದ ಸಿಗಲಿದೆ. ದೂರ ಪ್ರಯಾಣದ ಕೆಲಸಗಳಲ್ಲಿ ಲಾಭದಾಯಕ ಫಲಿತಾಂಶಗಳನ್ನು ನಿರೀಕ್ಷಿಸಬಹುದು.

ಕುಂಭ ರಾಶಿ:

ಶನಿಯ ಆಧಿಪತ್ಯದ ಈ ರಾಶಿಗೆ ಶಿಕ್ಷಕ ವೃತ್ತಿ ಅಥವಾ ಬಟ್ಟೆ ವ್ಯಾಪಾರದಲ್ಲಿ ಇರುವವರಿಗೆ ಈ ವಾರ ಅತ್ಯಂತ ಅನುಕೂಲಕರವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ದೊರೆಯಲಿದೆ.

ಮೀನ ರಾಶಿ:

ಈ ವಾರ ಸರ್ಕಾರಿ ಕೆಲಸಗಳಿಗೆ ಸಂಬಂಧಿಸಿದ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಸಹೋದ್ಯೋಗಿಗಳ ಜೊತೆ ಕಿರಿಕಿರಿ ಉಂಟಾಗದಂತೆ ಎಚ್ಚರವಹಿಸಿ.

– ಲೋಹಿತ ಹೆಬ್ಬಾರ್ – 8762924271 (what’s app only)

Source link

ಕೋಮುದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್​​​ ಭಟ್ ಮೇಲೆ ಮತ್ತೆ ಎಫ್​​ಐಆರ್ ದಾಖಲು – Kannada News | RSS Leader Kalladka Bhat Booked Over Provocative Speech; BNS Charges in Puttur

ಮಂಗಳೂರು, ಜ.22: ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ (Kalladka Prabhakar Bhat) ವಿರುದ್ಧ ಪತ್ತೆ ಎಫ್​​ಐಆರ್​​ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲು ಮಾಡಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿದೆ ಎಂದು ಹೇಳಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ. ಎಂಬುವವರು ಕಲ್ಲಡ್ಕ ಪ್ರಭಾಕರ್​​​ ಭಟ್​​ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.

ಇನ್ನು ಇದರ ಜತೆಗೆ ಕಲ್ಲಡ್ಕ ಪ್ರಭಾಕರ್​​ ಭಟ್​​ ಅವರ ಈ ಭಾಷಣವನ್ನು ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನಲ್ ಹಾಗೂ ಆಯೋಜಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಜನವರಿ 12ರಂದು ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ಕೋಮುದ್ವೇಷದ ವಿಚಾರಗಳು ಇತ್ತು ಎಂದು ಹೇಳಲಾಗಿದೆ. ಅವರು ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರು ವಿವಾದಾತ್ಮಕ ಮಾತುಗಳನ್ನು ಆಡಿದ್ದಾರೆ ಎಂದು ಹೇಳಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ವಿವಿಧ ಗಂಭೀರ ಸೆಕ್ಷನ್‌ಗಳ ಮೂಲಕ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ

ಮಾನವ ಬಂಧುತ್ವ ವೇದಿಕೆಯಿಂದ ದೂರು:

ಇನ್ನು ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಕೆ. ಅವರು ಪೋಲಿಸರಿಗೆ ದೂರು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಪ್ರಭಾಕರ್​​ ಭಟ್​ ಮಾಡುತ್ತಿದ್ದಾರೆ. ಈ ಹಿಂದೆ ನ್ಯಾಯಾಲಯವು ದ್ವೇಷ ಭಾಷಣ ಮಾಡದಂತೆ ಅವರಿಗೆ ಷರತ್ತು ವಿಧಿಸಿದ್ದರೂ, ಅದರ ಉಲ್ಲಂಘನೆ ಮಾಡಿ ಮತ್ತೆ ಇಂತಹ ಭಾಷಣವನ್ನು ಮಾಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (BNS) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಇನ್ಮುಂದೆ ಯಾವ ಕಾರಣಕ್ಕೂ ದ್ವೇಷದ ಭಾಷಣ ಮಾಡುವುದಿಲ್ಲ ಎಂದು ಹೇಳಿದರೂ. ಇದೀಗ ಅದರ ಉಲ್ಲಂಘನೆ ಆಗಿದೆ. ಇದೀಗ ಅವರಿಗೆ ಅವರಿಗೆ ಕಾನೂನುಬದ್ಧವಾಗಿ ದೊಡ್ಡ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:46 am, Thu, 22 January 26

Source link

ಗ್ರೀನ್​ಲ್ಯಾಂಡ್​ ವಶಕ್ಕೆ ಪಡೆಯಲು ಅಮೆರಿಕ ಬಲ ಪ್ರಯೋಗ ಮಾಡುವುದಿಲ್ಲ: ಡೊನಾಲ್ಡ್​ ಟ್ರಂಪ್ – Kannada News | Greenland Acquisition: Trump Drops Force, Prioritizes Talks for US Security

ವಾಷಿಂಗ್ಟನ್, ಜನವರಿ 22: ಗ್ರೀನ್​ಲ್ಯಾಂಡ್​ ಅನ್ನು ಅಮೆರಿಕವು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ದಾವೋಸ್​ನಲ್ಲಿ ಮಾಡಿರುವ ಭಾಷಣದಲ್ಲಿ ಹೇಳಿದ್ದಾರೆ. ಭಾಷಣದ ಸಮಯದಲ್ಲಿ ಡ್ಯಾನಿಶ್ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಬೇಕೆಂಬ ತಮ್ಮ ಬೇಡಿಕೆಗೆ ದೃಢವಾಗಿ ಅಂಟಿಕೊಂಡಿದ್ದಾರೆ. ಅಮೆರಿಕ ಹೊರತುಪಡಿಸಿ ಬೇರೆ ಯಾವುದೇ ರಾಷ್ಟ್ರವು ಗ್ರೀನ್‌ಲ್ಯಾಂಡ್ ಅನ್ನು ಸುರಕ್ಷಿತವಾಗಿಡಲು ಸಾಧ್ಯವಿಲ್ಲ ಮತ್ತು ಆದ್ದರಿಂದ ಯುರೋಪಿಯನ್ ನಾಯಕರು ಸ್ವ-ಆಡಳಿತ ದ್ವೀಪವನ್ನು ಅಮೆರಿಕದ ನಿಯಂತ್ರಣಕ್ಕೆ ವರ್ಗಾಯಿಸುವುದು ಅತ್ಯಗತ್ಯ ಎಂದು ಟ್ರಂಪ್ ಪ್ರತಿಪಾದಿಸಿದರು.

ಗ್ರೀನ್‌ಲ್ಯಾಂಡ್ ಅನ್ನು ಅಮೆರಿಕ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಚರ್ಚಿಸಲು ಮತ್ತೊಮ್ಮೆ ತಕ್ಷಣದ ಮಾತುಕತೆಗಳನ್ನು ನಾನು ಬಯಸುತ್ತಿದ್ದೇನೆ ಎಂದು ಟ್ರಂಪ್ ಹೇಳಿದರು. ತಮ್ಮ ಮಹತ್ವಾಕಾಂಕ್ಷೆಗಳು ವಿಫಲವಾದರೆ ಪರಿಣಾಮಗಳ ಬಗ್ಗೆಯೂ ಅವರು ಸುಳಿವು ನೀಡಿದ್ದಾರೆ.

ನಾನು ಬಲಪ್ರಯೋಗ ಮಾಡುತ್ತೇನೆಂದು ಜನರು ಭಾವಿಸಿದ್ದರು, ಆದರೆ ನಾನು ಬಲಪ್ರಯೋಗ ಮಾಡಬೇಕಾಗಿಲ್ಲ ಎಂದು ಟ್ರಂಪ್ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಹೇಳಿದರು.

ಇತ್ತೀಚಿನ ವಾರಗಳಲ್ಲಿ ಅವರ ಬಲವಾದ ಹೇಳಿಕೆಗಳು NATO ಮಿತ್ರರಾಷ್ಟ್ರಗಳನ್ನು ಕೆರಳಿಸಿದ್ದವು. ಆದರೆ ಈಗ ಟ್ರಂಪ್ ಅವರು ಮಿಲಿಟರಿ ಕ್ರಮ ಕೈಗೊಳ್ಳುವುದಿಲ್ಲ ಅಥವಾ ಒತ್ತಡ ಹೇರಲು ಸುಂಕಗಳನ್ನು ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಎಲ್ಲರೂ ಸಂತೋಷಪಡುವ ಒಪ್ಪಂದವಾಗಿದೆ. ಇದು ದೀರ್ಘಾವಧಿಯ ಒಪ್ಪಂದವಾಗಿದೆ. ಟ್ರಂಪ್ ಇದನ್ನು ಶಾಶ್ವತ ಒಪ್ಪಂದ ಎಂದು ಕರೆದಿದ್ದಾರೆ.

ಡೆನ್ಮಾರ್ಕ್, ಗ್ರೀನ್‌ಲ್ಯಾಂಡ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಮಾತುಕತೆಗಳು ಮುಂದುವರೆಯುತ್ತವೆ, ಇದರಿಂದಾಗಿ ರಷ್ಯಾ ಮತ್ತು ಚೀನಾ ಗ್ರೀನ್‌ಲ್ಯಾಂಡ್ ಮೇಲೆ ಎಂದಿಗೂ ಆರ್ಥಿಕ ಅಥವಾ ಮಿಲಿಟರಿ ನಿಯಂತ್ರಣವನ್ನು ಪಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ತಾನೊಬ್ಬ ಸರ್ವಾಧಿಕಾರಿ ಎಂದು ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್

ವಿಧಿಸಲಾಗಿದ್ದ ಸುಂಕಗಳನ್ನು ಈಗ ತಡೆಹಿಡಿಯಲಾಗಿದೆ ಎಂದು ಅವರು ಘೋಷಿಸಿದರು. ಈ ವಿಷಯದ ಬಗ್ಗೆ ಟ್ರಂಪ್ ಮುಖಾಮುಖಿಯಾಗುವ ಬದಲು ರಾಜಿ ಮಾರ್ಗವನ್ನು ಅನುಸರಿಸಲು ಬಯಸುತ್ತಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ.

ಟ್ರಂಪ್ ಗ್ರೀನ್‌ಲ್ಯಾಂಡ್ ಅನ್ನು ಅಮೆರಿಕ ಸ್ವಾಧೀನಪಡಿಸಿಕೊಳ್ಳಲು ಒಪ್ಪಂದ ಮಾಡಿಕೊಳ್ಳುವವರೆಗೆ ಡೆನ್ಮಾರ್ಕ್ ಮತ್ತು ಇತರ ಏಳು ಯುರೋಪಿಯನ್ ರಾಷ್ಟ್ರಗಳ ಮೇಲೆ ಶೇ.10 ಸುಂಕವನ್ನು ವಿಧಿಸುವುದಾಗಿ ಹೇಳಿದ್ದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರೆ ಅವರಿಗೆ ವೈಯಕ್ತಿಕವಾಗಿ ಕಳುಹಿಸಿದ ಪತ್ರದಲ್ಲಿ ನೊಬೆಲ್ ಪ್ರಶಸ್ತಿ ಸಿಗದಿರುವುದು ಎಷ್ಟು ನಿರಾಶೆಗೊಂಡಿದೆ ಎಂಬುದನ್ನು ಬಹಿರಂಗಪಡಿಸಿದ್ದರು. ಪತ್ರದ ವಿಷಯಗಳ ಬಗ್ಗೆ ಆಘಾತಕಾರಿ ಮಾಹಿತಿ ಸೋರಿಕೆಯಾಗಿದ್ದು, ಅದರಲ್ಲಿ ವಿಶ್ವ ಶಾಂತಿಯನ್ನು ಖಚಿತಪಡಿಸುವುದು ತಮ್ಮ ಜವಾಬ್ದಾರಿಯಲ್ಲ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಟ್ರಂಪ್ ಅವರು ನೊಬೆಲ್ ಪ್ರಶಸ್ತಿ ನಿರಾಕರಿಸಲ್ಪಟ್ಟಾಗಿನಿಂದ ಜಾಗತಿಕ ವ್ಯವಹಾರಗಳ ಬಗ್ಗೆ ತಮ್ಮ ದೃಷ್ಟಿಕೋನ ಬದಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿದ್ದರು.

ಎಂಟಕ್ಕೂ ಹೆಚ್ಚು ಯುದ್ಧಗಳನ್ನು ನಿಲ್ಲಿಸಿದ್ದರೂ, ನನಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡದ ಕಾರಣ, ಶಾಂತಿಯ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ. ಶಾಂತಿಗಾಗಿ ಉತ್ತಮ ಕೆಲಸ ಮಾಡಿದರೂ ನೊಬೆಲ್ ಪ್ರಶಸ್ತಿ ಸಿಗಲಿಲ್ಲ, ಆದ್ದರಿಂದ ಈಗ ಅವರು ಗ್ರೀನ್‌ಲ್ಯಾಂಡ್‌ನ ಅಮೆರಿಕದ ಆಕ್ರಮಣದ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಟ್ರಂಪ್ ಪತ್ರದಲ್ಲಿ ತಿಳಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ನಾವು ಮದುವೆ ಆಗಿದ್ದೇವೆ, ಆದರೆ..’; ದೊಡ್ಡ ಹೇಳಿಕೆ ನೀಡಿದ ಆಮಿರ್ ಖಾನ್ – Kannada News | We Are Married By From Soul Says Aamir Khan About wedding plans with Gauri spratt

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್, ನಟ ಆಮಿರ್ ಖಾನ್ (Aamir Khan) ತಮ್ಮ ಖಾಸಗಿ ಜೀವನದ ಬಗ್ಗೆ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ತಮ್ಮ 60ನೇ ಹುಟ್ಟುಹಬ್ಬದಂದು, ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಮೇಲಿನ ಪ್ರೀತಿಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡರು ಮತ್ತು ಅವರನ್ನು ಮುನ್ನೆಲೆಗೆ ತಂದರು. ಅದಾದ ನಂತರ, ಇಬ್ಬರೂ ವಿವಿಧ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಈಗ, ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ತಮ್ಮ ಸಂಬಂಧ ಮತ್ತು ಮದುವೆಯ ಬಗ್ಗೆ ಮಾತನಾಡಿದ್ದಾರೆ.

ಆಮಿರ್ ಮತ್ತು ಅವರ ಗೆಳತಿ ಗೌರಿ ಸ್ಪ್ರಾಟ್ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದಾರೆ. ಎರಡೂ ಕುಟುಂಬಗಳಿಗೂ ಇದು ತಿಳಿದಿದೆ. ಇಬ್ಬರೂ ಕಳೆದ 25 ವರ್ಷಗಳಿಂದ ಪರಸ್ಪರ ಪರಿಚಿತರು ಮತ್ತು ಕಳೆದ ಎರಡೂವರೆ ವರ್ಷಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ. ಗೌರಿ ಬೆಂಗಳೂರಿನವರು ಮತ್ತು ಅಲ್ಲಿ ತಮ್ಮದೇ ಆದ ಸಲೂನ್ ಹೊಂದಿದ್ದಾರೆ.

‘ಬಾಲಿವುಡ್ ಹಂಗಾಮಾ’ಕ್ಕೆ ನೀಡಿದ ಸಂದರ್ಶನದಲ್ಲಿ ಆಮಿರ್ ಖಾನ್ , ‘ಗೌರಿ ಮತ್ತು ನಾನು ಈ ಸಂಬಂಧದ ಬಗ್ಗೆ ತುಂಬಾ ಗಂಭೀರವಾಗಿದ್ದೇವೆ. ನಾವು ಪರಸ್ಪರ ಬದ್ಧರಾಗಿದ್ದೇವೆ. ಒಳ್ಳೆಯ ಮತ್ತು ಕೆಟ್ಟ ಸಮಯಗಳಲ್ಲಿ ನಾವು ಪರಸ್ಪರ ಒಟ್ಟಿಗೆ ಇದ್ದೇವೆ’ ಎಂದಿದ್ದಾರೆ ಆಮಿರ್.

‘ನಾನು ಗೌರಿಯನ್ನು ನನ್ನ ಹೃದಯದಲ್ಲಿ ಮದುವೆಯಾಗಿದ್ದೇನೆ. ನಾವು ಕಾನೂನುಬದ್ಧವಾಗಿ ಮದುವೆಯಾಗುತ್ತೇವೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಇದು ಸತ್ಯ. ಭವಿಷ್ಯದಲ್ಲಿ ನಾನು ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದಿದ್ದಾರೆ ಆಮಿರ್. ಅವರು ಮತ್ತು ಗೌರಿ ತಮ್ಮ ಸಂಬಂಧದ ಬಗ್ಗೆ ತುಂಬಾ ಗಂಭೀರವಾಗಿದ್ದಾರೆ ಮತ್ತು ಮದುವೆಯ ಬಗ್ಗೆಯೂ ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.
‘ನಾವು ಅನಿರೀಕ್ಷಿತವಾಗಿ ಭೇಟಿಯಾದೆವು. ಅದರ ನಂತರ, ನಾವು ಪರಸ್ಪರ ಸಂಪರ್ಕದಲ್ಲಿದ್ದೆವು ಮತ್ತು ಈಗ ಅದಾಗಿಯೇ ಎಲ್ಲವೂ ನಡೆಯತ್ತಿದೆ’ ಎಂದಿದ್ದಾರೆ ಆಮಿರ್. ಗೌರಿಗೆ ಈಗ ಆರು ವರ್ಷದ ಮಗನೂ ಇದ್ದಾನೆ.

ಇದನ್ನೂ ಓದಿ: ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು?

ಆಮಿರ್ ಮೊದಲು ರೀನಾ ದತ್ತಾ ಅವರನ್ನು 1986 ರಲ್ಲಿ ವಿವಾಹವಾದರು. ಈ ದಂಪತಿಗೆ ಜುನೈದ್ ಮತ್ತು ಇರಾ ಎಂಬ ಇಬ್ಬರು ಮಕ್ಕಳಿದ್ದಾರೆ. ರೀನಾ ಮತ್ತು ಆಮಿರ್ 2002 ರಲ್ಲಿ ವಿಚ್ಛೇದನ ಪಡೆದರು. ನಂತರ ಅವರು 2005 ರಲ್ಲಿ ಕಿರಣ್ ರಾವ್ ಅವರನ್ನು ವಿವಾಹವಾದರು. ಕಿರಣ್ ಮತ್ತು ಆಮಿರ್ ಎಂಬ ಮಗ ಆಜಾದ್ ಇದ್ದಾರೆ. 2021ರಲ್ಲಿ, ದಂಪತಿಗಳು ತಮ್ಮ ವಿಚ್ಛೇದನ ಘೋಷಿಸಿದರು. ವಿಚ್ಛೇದನದ ನಂತರವೂ, ಆಮಿರ್ ತಮ್ಮ ಮಾಜಿ ಪತ್ನಿಯರೊಂದಿಗೆ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಆಮಿರ್ ರೀನಾ ಮತ್ತು ಕಿರಣ್ ಇಬ್ಬರೊಂದಿಗೂ ಸ್ನೇಹ ಸಂಬಂಧವನ್ನು ಉಳಿಸಿಕೊಂಡಿದ್ದಾರೆ.

ಗೌರಿ ಸ್ಪ್ರಾಟ್ ಯಾರು?

ಅವರ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿರುವ ಮಾಹಿತಿಯ ಪ್ರಕಾರ, ಗೌರಿ ಬ್ಲೂ ಮೌಂಟೇನ್ ಶಾಲೆಯಲ್ಲಿ ಅಧ್ಯಯನ ಮಾಡಿದರು. ನಂತರ, ಅವರು ಲಂಡನ್‌ನಲ್ಲಿ FDA ಸ್ಟೈಲಿಂಗ್ ಮತ್ತು ಛಾಯಾಗ್ರಹಣ ಫ್ಯಾಷನ್‌ನಲ್ಲಿ ಕೋರ್ಸ್ ಮಾಡಿದರು. ಅವರು ಮುಂಬೈನಲ್ಲಿ ‘ಬಿ ಬ್ಲಂಟ್’ ಎಂಬ ಸಲೂನ್ ಅನ್ನು ಸಹ ಹೊಂದಿದ್ದಾರೆ. ಗೌರಿಗೆ ಆರು ವರ್ಷದ ಮಗನೂ ಇದ್ದಾನೆ. ಆಮಿರ್ ಮತ್ತು ಗೌರಿ ನಡುವೆ ದೊಡ್ಡ ವಯಸ್ಸಿನ ಅಂತರವಿದೆ. ಆಮಿರ್ 60 ವರ್ಷ ಮತ್ತು ಗೌರಿ ಪ್ರಸ್ತುತ 46 ವರ್ಷ. ಅಂದರೆ, ಇಬ್ಬರ ನಡುವೆ ಸುಮಾರು 14 ವರ್ಷಗಳ ಅಂತರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ – Kannada News | Karnataka Governor vs Government: Karnataka Assembly Drama as Governor Skips Government Speech, Ends Address in One Line

ಬೆಂಗಳೂರು, ಜನವರಿ 22: ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

Source link

ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ – Kannada News | Beau Webster’s explosive knock powers Hobart Hurricanes to Challenger Match

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ನಾಕೌಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್​ಗಳಲ್ಲಿ ಕಲೆಹಾಕಿದ್ದು 93 ರನ್​ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್​ನಲ್ಲಿ ಬ್ಯೂ ವೆಬ್​ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರನ್ ಕಲೆಹಾಕಿತು. ಈ ಮೂಲಕ ನಿಗದಿತ 10 ಓವರ್​ಗಳಲ್ಲಿ ಹೋಬಾರ್ಟ್ ಹರಿಕೇನ್ಸ್ ತಂಡವು 114 ರನ್​ ಗಳಿಸಿತು.

ಈ ಗುರಿಯನ್ನು ಬೆನ್ನತ್ತಿದ ಮೆಲ್ಬೋರ್ನ್​ ಸ್ಟಾರ್ಸ್ ತಂಡಕ್ಕೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 7 ಓವರ್​ಗಳಲ್ಲಿ 85 ರನ್​ಗಳ ಗುರಿ ನೀಡಲಾಯಿತು.

ಪ್ರತಿ ಓವರ್​ಗೆ 12 ರನ್​ಗಳ ಗುರಿ ಪಡೆದ ಮೆಲ್ಬೋರ್ನ್ ಸ್ಟಾರ್ಸ್ ತಂಡವು 6 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 59 ರನ್​ಗಳು ಮಾತ್ರ. ಅದರಂತೆ ಅಂತಿಮ ಓವರ್​ನಲ್ಲಿ 26 ರನ್​ಗಳ ಗುರಿ ಪಡೆದಿದ್ದ ಮೆಲ್ಬೋರ್ನ್​ ಸ್ಟಾರ್ಸ್ 22 ರನ್​ಗಳಿಸಿ ಕೇವಲ 3 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇತ್ತ ಬ್ಯೂ ವೆಬ್​ಸ್ಟರ್ ಕೊನೆಯ ಓವರ್​ನಲ್ಲಿ ಬಾರಿಸಿದ 3 ಸಿಕ್ಸರ್​ಗಳು ಹೋಬಾರ್ಟ್ ಹರಿಕೇನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಹೀಗಾಗಿ ವೆಬ್​ಸ್ಟರ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ಹು ಸಹ ನೀಡಲಾಯಿತು.

 

Source link

Exit mobile version