ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ – Kannada News | Rakshitha Shetty Dance with Fish in Udupi Road Show

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ ರನ್ನರ್ ಅಪ್ ಆದ ಬಳಿಕ ಉಡುಪಿಯಲ್ಲಿ ರೋಡ್ ಶೋ ಮಾಡಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ಮೀನು ನೀಡಿದ್ದಾನೆ. ಇದನ್ನು ಹಿಡಿದುಕೊಂಡು ರಕ್ಷಿತಾ ಶೆಟ್ಟಿ ಡ್ಯಾನ್ಸ್ ಮಾಡಿದ್ದಾರೆ. ರಕ್ಷಿತಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಅಭಿಮಾನಿ ಬಳಗ ಈಗ ಹಿರಿದಾಗಿದೆ. ರಕ್ಷಿತಾ ಶೆಟ್ಟಿ ಅವರು ಪಟಾಕಿ ರಕ್ಷಿತಾ ಎಂಬ ಪಟ್ಟ ಕೂಡ ಪಡೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ – Kannada News | Gold Price Today on 22nd January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 22: ನಿನ್ನೆ ಭರ್ಜರಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ ಇವತ್ತು ಸ್ವಲ್ಪ ಇಳಿದಿದೆ. ಗ್ರಾಮ್​ಗೆ 45 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಐದು ರೂ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ತಗ್ಗಿರುವ ಹೊತ್ತಲ್ಲೇ ವಿದೇಶಗಳಲ್ಲಿ ಹೆಚ್ಚಿನ ಕಡೆ ಅದರ ಬೆಲೆಯಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 32,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 32,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 34,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,431 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,145 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,573 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 325 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,431 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,145 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 325 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,145 ರೂ
  • ಚೆನ್ನೈ: 14,200 ರೂ
  • ಮುಂಬೈ: 14,145 ರೂ
  • ದೆಹಲಿ: 14,160 ರೂ
  • ಕೋಲ್ಕತಾ: 14,145 ರೂ
  • ಕೇರಳ: 14,145 ರೂ
  • ಅಹ್ಮದಾಬಾದ್: 14,150 ರೂ
  • ಜೈಪುರ್: 14,160 ರೂ
  • ಲಕ್ನೋ: 14,160 ರೂ
  • ಭುವನೇಶ್ವರ್: 14,145 ರೂ

ಇದನ್ನೂ ಓದಿ: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 600 ರಿಂಗಿಟ್ (13,576 ರುಪಾಯಿ)
  • ದುಬೈ: 537.50 ಡಿರಾಮ್ (13,397 ರುಪಾಯಿ)
  • ಅಮೆರಿಕ: 151 ಡಾಲರ್ (13,826 ರುಪಾಯಿ)
  • ಸಿಂಗಾಪುರ: 191.50 ಸಿಂಗಾಪುರ್ ಡಾಲರ್ (13,655 ರುಪಾಯಿ)
  • ಕತಾರ್: 538 ಕತಾರಿ ರಿಯಾಲ್ (13,513 ರೂ)
  • ಸೌದಿ ಅರೇಬಿಯಾ: 550 ಸೌದಿ ರಿಯಾಲ್ (13,427 ರುಪಾಯಿ)
  • ಓಮನ್: 57.55 ಒಮಾನಿ ರಿಯಾಲ್ (13,684 ರುಪಾಯಿ)
  • ಕುವೇತ್: 43.88 ಕುವೇತಿ ದಿನಾರ್ (13,147 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 325 ರೂ
  • ಚೆನ್ನೈ: 340 ರೂ
  • ಮುಂಬೈ: 325 ರೂ
  • ದೆಹಲಿ: 325 ರೂ
  • ಕೋಲ್ಕತಾ: 325 ರೂ
  • ಕೇರಳ: 340 ರೂ
  • ಅಹ್ಮದಾಬಾದ್: 325 ರೂ
  • ಜೈಪುರ್: 325 ರೂ
  • ಲಕ್ನೋ: 325 ರೂ
  • ಭುವನೇಶ್ವರ್: 340 ರೂ
  • ಪುಣೆ: 325

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಾನೊಬ್ಬ ಸರ್ವಾಧಿಕಾರಿ ಎಂದು ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ – Kannada News | Provocation on a Global Stage, Trump’s Dictator Remark Steals Davos Spotlight

ಡೊನಾಲ್ಡ್​ ಟ್ರಂಪ್ Image Credit source: Hindustan Times

ವಾಷಿಂಗ್ಟನ್, ಜನವರಿ 22: ಡೊನಾಲ್ಡ್​ ಟ್ರಂಪ್(Donald Trump) ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಹಲವು ಸಂದರ್ಭಗಳಲ್ಲಿ ಸರ್ವಾಧಿಕಾರಿಯಂತೆ ವರ್ತಿಸಿದ್ದಾರೆ. ಈಗ ಟ್ರಂಪ್ ಸ್ವತಃ ತಮ್ಮನ್ನು ಸರ್ವಾಧಿಕಾರಿ ಎಂದು ಕರೆದುಕೊಂಡಿದ್ದಾರೆ. ದಾವೋಸ್​ನಲ್ಲಿ ಜಾಗತಿಕ ಆರ್ಥಿಕ ವೇದಿಕೆ ಉದ್ದೇಶಿಸಿ ಮಾತನಾಡುವಾಗ ಟ್ರಂಪ್ ಹೇಳಿಕೆ ಎಲ್ಲರ ಗಮನ ಸೆಳೆಯಿತು. ಟ್ರಂಪ್ ತಮ್ಮನ್ನು ಸರ್ವಾಧಿಕಾರಿಯಂದು ಕರೆದುಕೊಂಡಿದ್ದಷ್ಟೇ ಅಲ್ಲದೆ, ಯಾವಾಗಲೂ ಅಲ್ಲದಿದ್ದರೂ ಕೆಲವೊಮ್ಮೆ ಸರ್ವಾಧಿಕಾರಿಯಾಗುವುದು ಅವಶ್ಯಕ ಎಂದು ಹೇಳಿದ್ದಾರೆ.

ಟ್ರಂಪ್ ತಮ್ಮ ಭಾಷಣಕ್ಕೆ ಬಂದ ಪ್ರತಿಕ್ರಿಯೆಯ ಬಗ್ಗೆ ಚರ್ಚಿಸುತ್ತಿದ್ದರು, ತಮ್ಮ ಭಾಷಣಕ್ಕೆ ಬಂದ ಸಕಾರಾತ್ಮಕ ಪ್ರತಿಕ್ರಿಯೆಯಿಂದ ತಮಗೆ ಆಶ್ಚರ್ಯವಾಯಿತು ಎಂದರು. ನಮಗೆ ಉತ್ತಮ ವಿಮರ್ಶೆಗಳು ಬಂದವು. ನನಗೆ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ತಮ್ಮ ಆಡಳಿತ ವಿಧಾನ ವಿವರಿಸಲು ಪ್ರಯತ್ನಿಸಿದ ಟ್ರಂಪ್

ನಂತರ ಅವರು ತಮ್ಮ ಆಡಳಿತ ವಿಧಾನವನ್ನು ವಿವರಿಸಲು ಪ್ರಯತ್ನಿಸಿದರು. ಟ್ರಂಪ್ ತಮ್ಮ ನಿರ್ಧಾರಗಳು ಯಾವುದೇ ಸಿದ್ಧಾಂತದಿಂದಲ್ಲ, ಬದಲಾಗಿ ಸಾಮಾನ್ಯ ಜ್ಞಾನದಿಂದ ಬಂದಿವೆ . ಇದು ಸಂಪ್ರದಾಯವಾದಿಯೂ ಅಲ್ಲ ಅಥವಾ ಉದಾರವಾದಿಯೂ ಅಲ್ಲ. ಇದು ಸುಮಾರು 95 ಪ್ರತಿಶತ ಸಾಮಾನ್ಯ ಜ್ಞಾನವನ್ನು ಆಧರಿಸಿದೆ.

ಟ್ರಂಪ್ ಈ ಹಿಂದೆ ತಮ್ಮ ಭಾಷೆ ಕೆಲವೊಮ್ಮೆ ಉದ್ವಿಗ್ನತೆಯನ್ನು ಉಂಟುಮಾಡುತ್ತದೆ ಎಂದು ಒಪ್ಪಿಕೊಂಡಿದ್ದರು, ಆದರೆ ಅವರ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು?

ಗ್ರೀನ್‌ಲ್ಯಾಂಡ್ ಬಗ್ಗೆ ಟ್ರಂಪ್ ಹೇಳಿದ್ದೇನು?
ದಾವೋಸ್‌ನಲ್ಲಿ, ಟ್ರಂಪ್ ಗ್ರೀನ್‌ಲ್ಯಾಂಡ್‌ಗೆ ಸಂಬಂಧಿಸಿದಂತೆ ಮಹತ್ವದ ಸೂಚನೆಯನ್ನು ನೀಡಿದರು. ಇತ್ತೀಚಿನ ವಾರಗಳಲ್ಲಿ ಅವರ ಬಲವಾದ ಹೇಳಿಕೆಗಳು NATO ಮಿತ್ರರಾಷ್ಟ್ರಗಳನ್ನು ಕೆರಳಿಸಿದ್ದವು. ಆದರೆ ಈಗ ಟ್ರಂಪ್ ಅವರು ಮಿಲಿಟರಿ ಕ್ರಮ ಕೈಗೊಳ್ಳುವುದಿಲ್ಲ ಅಥವಾ ಒತ್ತಡ ಹೇರಲು ಸುಂಕಗಳನ್ನು ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ವಿಡಿಯೋ

ಇದು ಎಲ್ಲರೂ ಸಂತೋಷಪಡುವ ಒಪ್ಪಂದವಾಗಿದೆ. ಇದು ದೀರ್ಘಾವಧಿಯ ಒಪ್ಪಂದವಾಗಿದೆ. ಟ್ರಂಪ್ ಇದನ್ನು ಶಾಶ್ವತ ಒಪ್ಪಂದ ಎಂದು ಕರೆದಿದ್ದಾರೆ. ಡೆನ್ಮಾರ್ಕ್, ಗ್ರೀನ್‌ಲ್ಯಾಂಡ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಮಾತುಕತೆಗಳು ಮುಂದುವರೆಯುತ್ತವೆ, ಇದರಿಂದಾಗಿ ರಷ್ಯಾ ಮತ್ತು ಚೀನಾ ಗ್ರೀನ್‌ಲ್ಯಾಂಡ್ ಮೇಲೆ ಎಂದಿಗೂ ಆರ್ಥಿಕ ಅಥವಾ ಮಿಲಿಟರಿ ನಿಯಂತ್ರಣವನ್ನು ಪಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ವಿಧಿಸಲಾಗಿದ್ದ ಸುಂಕಗಳನ್ನು ಈಗ ತಡೆಹಿಡಿಯಲಾಗಿದೆ ಎಂದು ಅವರು ಘೋಷಿಸಿದರು. ಈ ವಿಷಯದ ಬಗ್ಗೆ ಟ್ರಂಪ್ ಮುಖಾಮುಖಿಯಾಗುವ ಬದಲು ರಾಜಿ ಮಾರ್ಗವನ್ನು ಅನುಸರಿಸಲು ಬಯಸುತ್ತಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Special Assembly Session Live: ನರೇಗಾ ಹೆಸರು ಬದಲಾವಣೆ ಚರ್ಚೆ, ರಾಜ್ಯಪಾಲರ ಭಾಷಣ – Kannada News | Special Assembly Session Live: NREGA Name Change Row, Governor Addresses Vidhan Soudha

ಬೆಂಗಳೂರು, ಜ.22: ಇಂದಿನ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ರಾಜ್ಯಪಾಲರು ಬರಲು ನಿರಾಕರಿಸಿದ್ದರು, ಇದೀಗ ಸದನಕ್ಕೆ ಬಂದು ಭಾಷಣ ಮಾಡಿದ್ದಾರೆ. ಸರ್ಕಾರಕ್ಕೆ ಟಕ್ಕರ್​​ ನೀಡಲು ವಿರೋಧ ಪಕ್ಷಗಳು ಕೂಡ ಸಿದ್ಧವಾಗಿದೆ. ವಿಧಾನಸಭೆಯ ವಿಶೇಷ ಅಧಿವೇಶನದ ಲೈವ್​​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಫರ್ ಇದೆಯೆಂದು ಆನ್​ಲೈನ್​​ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಬಂದಿದ್ದು ಆಲೂಗಡ್ಡೆ! – Kannada News | Online Watch Order Turns surprising in Raichur as Customer Receives Potatoes Instead of Product

ಆನ್​ಕೈನ್​ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಬಂದಿದ್ದು ಆಲೂಗಡ್ಡೆ!

ರಾಯಚೂರು, ಜನವರಿ 22: ಸಾಮಾಜಿಕ ಜಾಲತಾಣಗಳಲ್ಲಿ ಶಾಪಿಂಗ್ (Online Shopping) ಮಾಡುವವರಿಗಿದು ಎಚ್ಚರಿಕೆಯ ಗಂಟೆ. ಫೇಸ್‌ಬುಕ್ (Facebook) ಹಾಗೂ ಇನ್‌ಸ್ಟಾಗ್ರಾಂನಲ್ಲಿ ಕಾಣಿಸಿಕೊಂಡ ಭರ್ಜರಿ ಆಫರ್ ನಂಬಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಕೈಗೆ ಬಂದಿದ್ದು ಆಲೂಗಡ್ಡೆ ಪಾರ್ಸಲ್! ಈ ಅಚ್ಚರಿಯ ಘಟನೆ ರಾಯಚೂರು (Raichur) ಜಿಲ್ಲೆಯ ಯರಮರಸ್ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ದಗ್ಗುಬಾಟಿ ಬಾಬು ಎಂಬವರು ಕೆಲಸಕ್ಕಾಗಿ ರಾಯಚೂರಿಗೆ ಬಂದಿದ್ದು, ಯರಮರಸ್ ಸಮೀಪದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಜನವರಿ 13ರಂದು ಸಾಮಾಜಿಕ ಜಾಲತಾಣದಲ್ಲಿ 5 ಸಾವಿರ ರೂ. ಬೆಲೆ ಬಾಳುವ ವಾಚ್ ಕೇವಲ 1,200 ರೂ.ಗೆ ಸಿಗುತ್ತದೆ ಎಂಬ ಜಾಹೀರಾತು ನೋಡಿ ಅವರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದಾರೆ.

ಕೆಲವು ದಿನಗಳ ಬಳಿಕ ಕೊರಿಯರ್ ಮೂಲಕ ಪಾರ್ಸಲ್ ಬಂದಿದ್ದು, ಕ್ಯಾಶ್ ಆನ್ ಡೆಲಿವರಿ ಮೂಲಕ ಹಣ ಪಾವತಿಸಿ ಬಾಬು ಪಾರ್ಸಲ್ ಪಡೆದಿದ್ದಾರೆ. ಬಾಕ್ಸ್ ಅನ್ನು ಅಲ್ಲಿಯೇ ತೆರೆದು ತೋರಿಸುವಂತೆ ಅವರು ಕೇಳಿಕೊಂಡಾಗ, ವಾಚ್ ಬದಲು ಹಳೆ ಬಟ್ಟೆಯಲ್ಲಿ ಸುತ್ತಿದ ಒಂದು ಆಲೂಗಡ್ಡೆ ಕಂಡು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅರ್ಧಕ್ಕೆ ಕಾಲೇಜು ಬಿಟ್ಟು ತಾಯಿ ಜತೆ ಆನ್‌ಲೈನ್ ವಂಚನೆಗಿಳಿದ ಮೊಹಮ್ಮದ್ ಉಜೈಫ್

ಈ ಬಗ್ಗೆ ಖಾಸಗಿ ಕೊರಿಯರ್ ಕಂಪೆನಿಯೇ ವಂಚನೆ ಮಾಡಿದೆ ಎಂದು ಬಾಬು ಆರೋಪಿಸಿದರೂ, ಕೊರಿಯರ್ ಸಿಬ್ಬಂದಿ ಅದನ್ನು ನಿರಾಕರಿಸಿ ಪಾರ್ಸಲ್ ಬರುವ ಮೊದಲೇ ವಂಚನೆ ನಡೆದಿರಬಹುದು ಎಂದು ಸ್ಪಷ್ಟನೆ ನೀಡಿದ್ದಾರೆ. ಇದೀಗ ಈ ಕುರಿತು ಗ್ರಾಹಕ ನ್ಯಾಯಾಲಯ ಹಾಗೂ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಾಬು ಮುಂದಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ – Kannada News | Bigg Boss Kannada 12 Winner Gilli Nataraja’s Emotional Video and Big Announcement

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ಈಗ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರೋಕೆ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಅವರು ದೊಡ್ಡ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ.

ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಹುಟ್ಟೂರಿನಲ್ಲಿ ರ್ಯಾಲಿ ನಡೆಸಿದರು. ಆ ಬಳಿಕ ಮಾಧ್ಯಮಗಳಿಗೆ ಸಂದರ್ಶನ ನೀಡಿದರು. ಈಗ ಅವರು ವಿಡಿಯೋ ಮಾಡಿ ಇನ್​​ಸ್ಟಾಗ್ರಾಮ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಆಗುತ್ತಿಲ್ಲ ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ.

‘ನನ್ನ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ಬಿಗ್ ಬಾಸ್ ಮನೆಯಲ್ಲಿರುವಾಗ ಜನರಿಂದ ಇಷ್ಟೊಂದು ಬೆಂಬಲ ಸಿಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ಈಗಲೂ ಇದನ್ನು ನಂಬೋಕೆ ಆಗುತ್ತಿಲ್ಲ. ಟ್ಯಾಟೂ ಹಾಕಿಸಿಕೊಂಡ, ಹರಕೆ ಹೊತ್ತವರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾದಲ್ಲಿ ಬೆಂಬಲಿಸಿದವರಿಗೆ ಧನ್ಯವಾದ‘ ಎಂದಿದ್ದಾರೆ ಗಿಲ್ಲಿ.

ಆ ಬಳಿಕ ಅವರು ಹೊಸ ಘೋಷಣೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋಗೆ ಕ್ಯಾಪ್ಶನ್ ನೀಡಿರೋ ಅವರು, ‘ಇಷ್ಟು ದೂರ ಕರ್ಕೊಂಡು ಬಂದಿದ್ದೀರಿ. ಮನಸ್ಸಲ್ಲಿ ಜಾಗ ಕೊಟ್ಟಿದ್ದೀರಿ. ಕೈ ಮೇಲೆ ಹಚ್ಚೆ ಹಾಕಿಸ್ಕೊಂಡಿದ್ದೀರಿ. ನಿರಂತರವಾಗಿ ಬೆಂಬಲಿಸಿದ್ದೀರಿ. ಇದುವರೆಗೂ ಬರಿ ರನ್ನರ್ ಅಪ್ ಆಗೇ ಉಳ್ಕೊತಿದ್ದ ಗಿಲ್ಲಿಗೆ ಗೆಲುವಿನ ಕಿರೀಟ ತೊಡಿಸಿದ್ದೀರಿ, ಮೆರೆಸಿದ್ದೀರಿ. ಈ ಪ್ರೀತಿಗೆ ಏನು ಹೇಳಿದ್ರು, ಎಷ್ಟು ಹೇಳಿದ್ರು ಕಡಿಮೇನೆ’ ಎಂದಿದ್ದಾರೆ ಅವರು. ‘ಈ ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ , ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’ ಎಂದು ಬರೆಯಲಾಗಿದೆ. ಈ ಸಾಲು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಗಿಲ್ಲಿ ‘ಬಡವ’ ಕಾರ್ಡ್ ಬಳಸಿ ಗೆದ್ದ ಎಂದವರಿಗೆ ಮುಟ್ಟಿ ನೋಡಿಕೊಳ್ಳೋ ಉತ್ತರ ಕೊಟ್ಟ ಸಹ ಸ್ಪರ್ಧಿ ಅಭಿಷೇಕ್

‘ಗಿಚ್ಚಿ ಗಿಲಿಗಿಲಿ’ ಶೋ ಬರುತ್ತಿದೆ. ಅದರಲ್ಲಿ ಗಿಲ್ಲಿ ಕಾಣಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಈ ಶೋಗೆ ಅವರು ನಿರೂಪಣೆ ಮಾಡಬೇಕು ಎಂಬ ಬೇಡಿಕೆಯೂ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:38 am, Thu, 22 January 26

Source link

ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್​ಮೇಲ್, ಲಕ್ಷಾಂತರ ರೂ. ವಸೂಲಿ: ಚಿಕ್ಕಮಗಳೂರಿನ ಮಹಿಳೆಯ ಬಂಧನ – Kannada News | Senior Seer of Prominent Karnataka Mutt Allegedly Blackmailed, CCB Arrests Chikkamagaluru Woman for Extortion

ಒಳ ಚಿತ್ರದಲ್ಲಿ ಬಂಧಿತ ಮಹಿಳೆ ಸ್ಫೂರ್ತಿ

ಬೆಂಗಳೂರು, ಜನವರಿ 22: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು (Bangalore) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದುಕೊಂಡರೂ, ಮತ್ತೆ 1 ಕೋಟಿ ರೂ. ಕೊಡಬೇಕೆಂದು ತನ್ನ ಸಹಚರರ ಜೊತೆಗೂಡಿ ಬೆದರಿಕೆ ಮುಂದುವರಿಸಿದ್ದಳು.

ಕಾಟ ತಾಳಲಾರದೆ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದ ಸ್ವಾಮೀಜಿ

ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಎರಡು ವರ್​ಷ ಹಿಂದೆಯೂ ನಡೆದಿತ್ತು ಹನಿಟ್ರ್ಯಾಪ್ ಯತ್ನ

ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಬ್ಲ್ಯಾಕ್​ಮೇಲ್ ಕಾಟ ಎದುರಾಗಿದೆ.

ಇದನ್ನೂ ಓದಿ: ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ಕೇಸ್​​​​: ಸರ್ಕಾರದ ಮುಂದಿರುವ ಸವಾಲುಗಳೇನು?

ಸದ್ಯ ಬ್ಲ್ಯಾಕ್​ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ನೀವು ಬುದ್ಧಿವಂತರೇ, ಈ ಚಿತ್ರದಲ್ಲಿರುವ ಬೆಕ್ಕನ್ನು ಹುಡುಕಿ ನೋಡೋಣ – Kannada News | Optical Illusion: If you can find the sleeping cat hidden in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit

ನಿಮ್ಮ ಮೆದುಳು ಎಷ್ಟು ಚುರುಕಾಗಿದೆ ತಿಳಿದುಕೊಳ್ಳಬೇಕೇ, ಹಾಗಾದ್ರೆ ನೀವು ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಒಮ್ಮೆ ಕಣ್ಣಾಯಿಸುವುದು ಒಳ್ಳೆಯದು. ಈ ಒಗಟಿನ ಚಿತ್ರಗಳು ನಿಮಗೆ ಟ್ರಿಕ್ಕಿ ಎಂದೆನಿಸಬಹುದು. ನೀವು ಏಕಾಗ್ರತೆಯಿಂದ ಗಮನ ಹರಿಸಿದರೆ ಈ ಒಗಟು ಬಿಡಿಸುವುದು ಕಷ್ಟವಾಗಲ್ಲ. ಸಸ್ಯಗಳ ನಡುವೆ ಅಡಗಿರುವ ಬೆಕ್ಕನ್ನು ಕಂಡುಹಿಡಿಯಬೇಕು. ಇಲ್ಲಿ ಬೆಕ್ಕು ಮಲಗಿಕೊಂಡಿದೆ, ನೀವು ಕೇವಲ ಐದು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ.

@consiousovserver_22 ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಇಲ್ಯೂಷನ್ ಫೋಟೋವೊಂದನ್ನು ಹಂಚಿಕೊಳ್ಳಲಾಗಿದೆ. ನಿಮ್ಮ ಯೋಚನಾ ಸಾಮರ್ಥ್ಯಕ್ಕೆ ಸವಾಲು ನೀಡುವ ಈ ಒಗಟಿನ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಕಾಣಿಸುವುದೇ ಹಚ್ಚ ಹಸಿರಿನ ಸಸ್ಯಗಳಿಂದ ಆವೃತ್ತವಾಗಿರುವ ಪ್ರದೇಶ. ಆದರೆ ಈ ಸಸ್ಯಗಳ ನಡುವೆ ಬೆಕ್ಕೊಂದು ಮಲಗಿ ಕೊಂಡಿದೆ. ತೀಕ್ಷ್ಣ ದೃಷ್ಟಿ ಹೊಂದಿರುವವರು ಮಾತ್ರ ಬೆಕ್ಕನ್ನು ತಕ್ಷಣವೇ ಗುರುತಿಸಲು ಸಾಧ್ಯ. ನೀವು ಅಂತಹವರಲ್ಲಿ ಒಬ್ಬರೇ ಎಂದು ತಿಳಿಯಲು ಇದು ಸೂಕ್ತ ಸಮಯ.

ಇದನ್ನೂ ಓದಿ: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ

ಮಲಗಿರುವ ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತೇ?

ಈ ಒಗಟಿನ ಚಿತ್ರಗಳು ನಿಮ್ಮ ಕಣ್ಣನ್ನು ಮೋಸಗೊಳಿಸುವುದೇನು ಸಹಜ. ಈ ಚಿತ್ರದಲ್ಲಿರುವ ಬೆಕ್ಕನ್ನು ಹುಡುಕುವುದು ಅಷ್ಟು ಸುಲಭವಲ್ಲ. ಬೆಕ್ಕಿನ ಮೈ ಬಣ್ಣವು ಸುತ್ತಲಿನ ಪ್ರದೇಶದೊಂದಿಗೆ ಬೆರೆತು ಹೋಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲವೇ. ಬೆಕ್ಕು ಎಲ್ಲಿದೆ ಎಂದು ನಾವೇ ಹೇಳುತ್ತೇವೆ. ನೀವು ಬೆಕ್ಕನ್ನು ಎಡಭಾಗದಲ್ಲಿರುವ ನೆರಳಿನಲ್ಲಿ, ಎರಡು ಹೂವುಗಳ ಮೇಲೆ ನೋಡಬಹುದು. ನೀವು ಮಲಗಿರುವ ಬೆಕ್ಕನ್ನು ನೋಡಿದ್ದೀರಿ ಎಂದು ನಾವು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು – Kannada News | Daylight Killing on Delhi Street, Man Chased and Fatally Stabbed on Camera

ನವದೆಹಲಿ, ಜನವರಿ 22: ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ. ಪಕ್ಕದಲ್ಲಿದ್ದ ಜನರು ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದಾರೆಯೇ ವಿನಃ ಯಾರೂ ಕೂಡ ಅವರನ್ನು ಬದುಕಿಸುವ ಪ್ರಯತ್ನ ಮಾಡಲಿಲ್ಲ. ಮೃತರನ್ನು ಆಕಾಶ್ ಎಂದು ಗುರುತಿಸಲಾಗಿದೆ.ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Hindu Tradition: ಅಂತ್ಯಸಂಸ್ಕಾರದ ವೇಳೆ ಜನರು ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದು ಏಕೆ ಗೊತ್ತಾ? – Kannada News | The Significance of White Attire at Funerals in Hindu Tradition

ಸಾವಿನ ಮನೆಯಲ್ಲಿ ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬಿಳಿಯ ಬಣ್ಣವು ಏಳು ಬಣ್ಣಗಳಲ್ಲಿ ವಿಶೇಷವಾಗಿದ್ದು, ಇದನ್ನು ಶಾಂತಿಯ ಸಂಕೇತ, ಶುದ್ಧತೆಯ ಸಂಕೇತ, ಮೌನದ ಸಂಕೇತ ಮತ್ತು ಸಮೃದ್ಧಿಯ ಸಂಕೇತವಾಗಿ ಉಪಯೋಗಿಸಲಾಗುತ್ತದೆ. “ಜಾತಸ್ಯ ಮರಣಂ ಧ್ರುವಂ” ಎಂಬಂತೆ, ಜನಿಸಿದ ಪ್ರತಿಯೊಬ್ಬರೂ ಒಂದು ದಿನ ಮರಣವನ್ನಪ್ಪುವುದು ನಿಶ್ಚಿತ. ಭಗವದ್ಗೀತೆಯಲ್ಲಿ ಸಹ ಜನನ ಮತ್ತು ಮರಣಗಳು ಜೀವನದ ಅವಿಭಾಜ್ಯ ಅಂಗಗಳೆಂದು ಹೇಳಲಾಗಿದೆ. ಹೀಗಾಗಿ ಮರಣವೆಂಬುದು ಪ್ರಕೃತಿಯ ಸಹಜ ಪ್ರಕ್ರಿಯೆ. ಅಂತಹ ಮರಣಕಾಲದಲ್ಲಿ, ಆ ದುಃಖದ ಸಂದರ್ಭದಲ್ಲಿ ನಾವು ಆ ಕಾರ್ಯದಲ್ಲಿ ಭಾಗವಹಿಸಿದಾಗ, ಬಿಳಿಯ ವಸ್ತ್ರಗಳನ್ನು ಧರಿಸುವುದು ಹೆಚ್ಚು ಸೂಕ್ತ.

ಒಡವೆಗಳನ್ನು ಹಾಕಿಕೊಂಡು, ವಿಚಿತ್ರವಾದ ಅಥವಾ ಆಡಂಬರದ ಬಟ್ಟೆಗಳನ್ನು ಧರಿಸಿಕೊಂಡು ಹೋಗುವುದಕ್ಕಿಂತ ಬಿಳಿಯ ವಸ್ತ್ರವನ್ನು ಧರಿಸಿ ಸ್ವಲ್ಪ ಹೊತ್ತು ಮೌನವನ್ನು ಪಾಲಿಸಿದಾಗ ಮೃತರ ಆತ್ಮಕ್ಕೆ ಶಾಂತಿ ಸಿಗುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಸಹಾಯಕವಾಗುತ್ತದೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲದೆ, ಇದು ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಕಾರಿಯಾಗುತ್ತದೆ. ಹಿಂದೂ ಸಮಾಜದಲ್ಲಿ ಮತ್ತು ಹಿಂದೂ ಧರ್ಮದಲ್ಲಿ ಜ್ಞಾನ ಮತ್ತು ಸದ್ಭಾವನೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಬಿಳಿ ಬಣ್ಣವು ಇದೇ ಜ್ಞಾನ ಮತ್ತು ಸದ್ಭಾವನೆಗೆ ಪ್ರತೀಕವಾಗಿದೆ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಸಾವಿನ ಸಮಯದಲ್ಲಿ ಮೃತರ ಆತ್ಮಕ್ಕೆ ಮೋಕ್ಷವನ್ನು ಕೊಡಿಸಲು, ಸಾಮಾನ್ಯವಾಗಿ ಬಿಳಿಯ ವಸ್ತ್ರವನ್ನು ಪ್ರತಿಯೊಬ್ಬರೂ ಧರಿಸಲು ಪ್ರಯತ್ನಿಸಬೇಕು. ಒಂದು ವೇಳೆ ಸಂಪೂರ್ಣ ಬಿಳಿಯ ವಸ್ತ್ರ ಧರಿಸಲು ಸಾಧ್ಯವಾಗದಿದ್ದರೂ, ಕನಿಷ್ಠ ಒಂದು ಬಿಳಿಯ ಟವಲ್ ಅಥವಾ ಬಿಳಿಯ ಶಾಲು ಧರಿಸಿಕೊಂಡು ಹೋಗುವುದು ಉತ್ತಮ. ಇದರಿಂದ ಮೃತರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ, ಬಿಳಿ ವಸ್ತ್ರದಿಂದಾಗಿ ಆ ಸ್ಥಳದ ವಾತಾವರಣವೂ ಶುದ್ಧವಾಗಿ ಭಾವಿಸಲಾಗುತ್ತದೆ ಮತ್ತು ಅಲ್ಲಿಗೆ ಹೋದವರಿಗೂ ಕೂಡ ತುಂಬಾ ಒಳ್ಳೆಯದಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version