ಇಮ್ರಾನ್ ಖಾನ್ ಬದುಕಿಲ್ಲವೇ?; ಮಾಜಿ ಪ್ರಧಾನಿಯ ಕುರಿತು ಪಾಕಿಸ್ತಾನಿ ಪತ್ರಕರ್ತನ ಶಾಕಿಂಗ್ ಹೇಳಿಕೆ – Kannada News | Is Pakistan Former PM Imran Khan Dead Journalist Shocking Claim

ವಾಷಿಂಗ್ಟನ್, ಆಗಸ್ಟ್ 12: ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಮುಖ್ಯಸ್ಥ ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತು ಉಂಟಾಗಿದ್ದ ತೀವ್ರ ಗೊಂದಲಗಳು ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ. ಇಮ್ರಾನ್ ಖಾನ್ (Imran Khan) ಜೈಲಿನಲ್ಲೇ ನಿಧನರಾಗಿರಬಹುದು ಎಂದು ಅಮೆರಿಕ ಮೂಲದ ಪಾಕಿಸ್ತಾನಿ ಪತ್ರಕರ್ತ ವಜಾಹತ್ ಸಯೀದ್ ಖಾನ್ ನೀಡಿದ್ದ ಸ್ಫೋಟಕ ಹೇಳಿಕೆ ಭಾರಿ ಆತಂಕ ಸೃಷ್ಟಿಸಿದೆ.

“ಸೇನೆಯ ಮೂವರು ಹಿರಿಯ ಮಿಲಿಟರಿ ಮೂಲಗಳು ಇಮ್ರಾನ್ ಖಾನ್ ನಿಧನರಾಗಿರಬಹುದು ಎಂಬ ಆತಂಕ ವ್ಯಕ್ತಪಡಿಸಿವೆ. ಆದರೆ, ಇದನ್ನು ಯಾರೂ ಕಣ್ಣಾರೆ ಕಂಡಿಲ್ಲ” ಎಂದು ಪಾಕಿಸ್ತಾನದ ಪ್ರಸಿದ್ಧ ಪತ್ರಕರ್ತ ವಜಾಹತ್ ಸಯೀದ್ ಖಾನ್ ಪ್ರತಿಪಾದಿಸಿದ್ದಾರೆ. ಹೀಗಾಗಿ, ಈ ಮಾಹಿತಿ ಅಧಿಕೃತವಲ್ಲ.

ಜೈಲಿನಲ್ಲಿ ಇಮ್ರಾನ್ ಖಾನ್:

73 ವರ್ಷದ ಇಮ್ರಾನ್ ಖಾನ್ ಅವರು 2023ರ ಆಗಸ್ಟ್ 5ರಿಂದ ಜೈಲಿನಲ್ಲಿದ್ದು, 190 ಮಿಲಿಯನ್ ಅಲ್-ಖಾದಿರ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣದಲ್ಲಿ 14 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮತ್ತು ಇಮ್ರಾನ್ ಖಾನ್ ನಡುವಿನ ತೀವ್ರ ರಾಜಕೀಯ ಹಗೆತನವೇ ಈ ಸುದೀರ್ಘ ಬಂಧನಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು

ಇನ್ನೊಂದೆಡೆ, ಇಮ್ರಾನ್ ಖಾನ್ ಸಾವಿನ ಸುದ್ದಿಯನ್ನು ತಳ್ಳಿಹಾಕಿರುವ ಅವರ ಪಕ್ಷದ ನಾಯಕರು ಕಣ್ಣಿನ ಸಮಸ್ಯೆ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಇಮ್ರಾನ್ ಖಾನ್ ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇಮ್ರಾನ್ ಖಾನ್ ಅವರ ಕುಟುಂಬಸ್ಥರು, ವಕೀಲರು ಹಾಗೂ ಪಕ್ಷದ ನಾಯಕರಿಗೆ ಅವರನ್ನು ಭೇಟಿಯಾಗಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ ಎಂದು ಅವರ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಬೃಹತ್ ಪ್ರತಿಭಟನೆಯ ಎಚ್ಚರಿಕೆ: 

ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಹಾಗೂ ಪಿಟಿಐ ನಾಯಕ ಸೊಹೈಲ್ ಅಫ್ರಿದಿ ಅವರು ಮಂಗಳವಾರ ಜೈಲಿನಲ್ಲಿ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಲು ಬಿಡದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಸುಮಾರು 20 ಲಕ್ಷಕ್ಕೂ ಹೆಚ್ಚು ಜನರು ಬೀದಿಗಿಳಿದು ಹೋರಾಟ ನಡೆಸಲು ಸಿದ್ಧರಾಗಿದ್ದಾರೆ. ಪಾಕಿಸ್ತಾನದ ಯುವಜನತೆಯಲ್ಲಿ ಮೂಡಿರುವ ಆಕ್ರೋಶವನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕುರ್ಚಿಗೆ ಕುತ್ತು ತಂದಿದ್ದ ಅಸಲಿ ರಹಸ್ಯ ದಾಖಲೆ ಬಯಲು

ಇಮ್ರಾನ್ ಖಾನ್ ಅವರ ಭೇಟಿಗೆ ಅವಕಾಶ ನೀಡದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿರುವ ಪಿಟಿಐ, ಸೆಪ್ಟೆಂಬರ್ 27ರಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದೆ. ಇಮ್ರಾನ್ ಖಾನ್ ಅವರ ಸುದೀರ್ಘ ಜೈಲುವಾಸ ಹಾಗೂ ಅನಾರೋಗ್ಯದ ಕುರಿತು ಪಾಕಿಸ್ತಾನ ಸರ್ಕಾರದ ಮೇಲೆ ದೇಶೀಯವಾಗಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರಿ ಒತ್ತಡ ಹೆಚ್ಚುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಆ.13ರಂದು ಕರ್ನಾಟಕ ಬಂದ್​​​ಗೆ ಯಾರ್ಯಾರ ಬೆಂಬಲ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ವಿವರ – Kannada News | Karnataka bandh On August 13th for Cauvery Water Dispute: what is open what is closed? And Who Supported? here Is details

ಬೆಂಗಳೂರು (ಆಗಸ್ಟ್.12): ಕರ್ನಾಟಕದಲ್ಲಿ (Karnataka) ಮತ್ತೆ ಕಾವೇರಿ ನದಿ ನೀರು ವಿವಾದ (Cauvery Water Dispute) ಮುನ್ನೆಲೆಗೆ ಬಂದಿದ್ದು, ಬರದ ಮಧ್ಯೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ಹೊರಡಿಸಿರುವುದು ರಾಜ್ಯದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನಾಳೆ (ಆಗಸ್ಟ್ 13, ಗುರುವಾರ) ‘ಕರ್ನಾಟಕ ಬಂದ್’ (Karnataka Bandh) ಗೆ ಕರೆ ನೀಡಿದ್ದಾರೆ. ಆದರೆ, ಈ ಬಂದ್‌ಗೆ ರೈತ ಸಂಘಟನೆಗಳು ಬಿಟ್ಟರೆ ಬೇರೆ ಯಾವುದೇ ಸಂಘಟನೆಗಳು ಬೆಂಬಲಿಸಿಲ್ಲ. ಆರಂಭದಲ್ಲೇ ಬಂದ್​​​​ಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದವು. ಆದ್ರೆ, ಇದೇ ಸಮಯಕ್ಕೆ ಸ್ವಲ್ಪ ಮಳೆಯಾಗಿದ್ದರಿಂದ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಸಿಎಂ ಡಿಕೆ ಶಿವಕುಮಾರ್ ಸಹ ರೈತರ ಪರ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಕೆಲ ಸಂಘಟನೆಗಳು ಬಂದ್​​​ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ನಾಳಿನ ಬಂದ್ ಫ್ಲಾಪ್ ಆಗುವ ಸಾಧ್ಯತೆಯಿದ್ದು, ರಾಜ್ಯಾದ್ಯಂತ ಜನಜೀವನ ಎಂದಿನಂತೆ ಯಥಾಸ್ಥಿತಿಯಲ್ಲಿ ಇರಲಿದೆ.

ಖಾಸಗಿ ಶಾಲೆಗಳ ಒಕ್ಕೂಟ, ಖಾಸಗಿ ಬಸ್ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ನೈತಿಕ ಬೆಂಬಲ ಘೋಷಣೆ ಮಾಡಿದ್ದರಿಂದ ಶಾಲಾ-ಕಾಲೇಜುಗಳು, ಸಾರಿಗೆ ಸೇವೆಗಳು ಹಾಗೂ ವಾಣಿಜ್ಯ ಚಟುವಟಿಕೆಗಳು ಯಥಾರೀತಿ ನಡೆಯಲಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ.

ಇದನ್ನೂ ನೋಡಿ: ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಘೋಷಣೆ

ನಾಳೆ ಬಂದ್​​​​​​ ವೇಳೆ ಏನಿರುತ್ತೆ?

ನಾಳೆ ರಾಜ್ಯದಾದ್ಯಂತ ಬಹುತೇಕ ಎಲ್ಲಾ ಅಗತ್ಯ ಹಾಗೂ ಪ್ರಮುಖ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರಿಗೆ ಸೇವೆಗಳಾದ KSRTC, BMTC ಬಸ್‌ಗಳು, ನಮ್ಮ ಮೆಟ್ರೋ (Namma Metro), ರೈಲ್ವೆ ಸೇವೆಗಳು, ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ (Ola/Uber) ಸೇವೆಗಳು ಎಂದಿನಂತೆ ಲಭ್ಯವಿರಲಿವೆ. ಮುಖ್ಯವಾಗಿ ಶಾಲಾ-ಕಾಲೇಜುಗಳು ಎಂದಿನಂತೆ ಓಪನ್ ಇರಲಿವೆ.

ಇನ್ನು ಆರೋಗ್ಯ ಸೇವೆಗಳಾದ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಮೆಡಿಕಲ್ ಶಾಪ್‌ಗಳು ಹಾಗೂ ಆಂಬ್ಯುಲೆನ್ಸ್ ಸೇವೆಗಳು ಯಥಾರೀತಿ ಇರಲಿವೆ.

ಅಗತ್ಯ ಸರಕುಗಳಾದ ದಿನಸಿ ಅಂಗಡಿಗಳು, ಹಾಲು, ತರಕಾರಿ, ಮಾರುಕಟ್ಟೆಗಳು, ಬೇಕರಿ, ಜ್ಯೂಸ್ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರ ವಹಿವಾಟು ನಡೆಯಲಿದೆ.

ವಾಣಿಜ್ಯ ವಲಯಗಳಾದ ಮಾಲ್‌ಗಳು, ಚಿತ್ರಮಂದಿರಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೈಗಾರಿಕಾ ಕ್ಷೇತ್ರಗಳು ಹಾಗೂ ಸರ್ಕಾರಿ ಆಫೀಸ್‌ಗಳು ಎಂದಿನಂತೆ ಓಪನ್ ಇರಲಿವೆ.

ಬಂದ್‌ಗೆ ಯಾರ ಬೆಂಬಲವಿದೆ?

  • ವಾಟಾಳ್ ನಾಗರಾಜ್ ನೇತೃತ್ವದ ‘ಕನ್ನಡ ಸಂಘಟನೆಗಳ ಒಕ್ಕೂಟ’
  • ಕನ್ನಡ ಸೇನೆ
  • ಕನ್ನಡ ಜಾಗೃತಿ ವೇದಿಕೆ ಹಾಗೂ ಕೆಲವು ಸಣ್ಣಪುಟ್ಟ ಸಂಘಟನೆಗಳು ಮಾತ್ರ ಬಂದ್‌ಗೆ ಬೆಂಬಲ ನೀಡಿವೆ.

ನೈತಿಕ ಬೆಂಬಲ ಘೋಷಿಸಿದ ಹಲವು ಸಂಘಗಳು

  • ಕರ್ನಾಟಕದಲ್ಲಿ ಖಾಸಗಿ ಬಸ್ ಒಕ್ಕೂಟಗಳಿಂದ ಬಂದ್​ಗೆ ನೈತಿಕ ಬೆಂಬಲ
  • ಕ್ಯಾಮ್ಸ್ ಹಾಗೂ ರುಪ್ಸಾ ಖಾಸಗಿ ಶಾಲೆಗಳಿಂದ ನೈತಿಕ ಬೆಂಬಲ
  • ಹೋಟೆಲ್ ಮಾಲೀಕರ ಸಂಘ
  • ಖಾಸಗಿ ಬಸ್ ಒಕ್ಕೂಟ
  • ಖಾಸಗಿ ಆಸ್ಪತ್ರೆಗಳು

ಯಾರ ಬೆಂಬಲವಿಲ್ಲ

  • ಕರವೇ ಪ್ರವೀಣ್ ಶೆಟ್ಟಿ ಬಣ
  • ಶಿವರಾಮೇಗೌಡ ಬಣ
  • ನಾರಾಯಣಗೌಡ ಬಣ
  • ಬಿಎಂಟಿಸಿ, ಕೆಎಸ್‌ಆರ್‌ಟಿಸಿ
  • ಆಟೋ, ಕ್ಯಾಬ್ ಸಂಘಟನೆ

ಒಟ್ಟಿನಲ್ಲಿ ನಾಳಿನ ಕರ್ನಾಟಕ ಬಂದ್​​​​ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿಲ್ಲ. ಹೀಗಾಗಿ ಎಂದಿನಂತೆ ಜನಜೀವನ, ವ್ಯಾಪಾರ ವಹಿವಾಟುಗಳು ನಡೆಯಲಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಈ ವರ್ಷ ಇನ್ನೂ 19 ಟಿ20 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ – Kannada News | Team India T20 Schedule 2026: Asian Games, Afghanistan, WI, NZ, SL Series and 17+ Matches

ಪ್ರಸ್ತುತ ಟೀಂ ಇಂಡಿಯಾ ಶ್ರೀಲಂಕಾ (India vs Sri Lanka) ಪ್ರವಾಸದಲ್ಲಿದೆ. ಅಲ್ಲಿ ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿ ಬಳಿಕ ಟೀಂ ಇಂಡಿಯಾ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಈ ಕ್ರೀಡಾಕೂಟದಲ್ಲಿ ಟಿ20 ಮಾದರಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಶ್ರೇಯಸ್ ಅಯ್ಯರ್ ನಾಯಕತ್ವದ ತಂಡ ಕಣಕ್ಕಿಳಿಯಲಿದೆ. ಈ ವರ್ಷ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಸಾಕಷ್ಟು ಪಂದ್ಯಗಳನ್ನಾಡಿದೆ. ಇನ್ನು ಈ ವರ್ಷ ಉಳಿದಿರುವ ನಾಲ್ಕೂವರೆ ತಿಂಗಳಲ್ಲಿ ಟೀಂ ಇಂಡಿಯಾ ಕನಿಷ್ಠ ಪಕ್ಷ 17 ಟಿ20 ಪಂದ್ಯಗಳನ್ನಾಡಲಿದೆ. ಒಂದು ವೇಳೆ ಟೀಂ ಇಂಡಿಯಾ ಏಷ್ಯನ್ ಕ್ರೀಡಾಕೂಟದ ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ ಗೆದ್ದರೆ ಪಂದ್ಯಗಳ ಸಂಖ್ಯೆ 19 ಕ್ಕೇರಲಿದೆ.

ಇಂದು ಅಂದರೆ ಆಗಸ್ಟ್ 12 ರಂದು ಭಾರತದ ಮತ್ತೊಂದು ಟಿ20 ಸರಣಿಯ ವೇಳಾಪಟ್ಟಿಯೂ ಪ್ರಕಟವಾಗಿದೆ. ಅದರಂತೆ ಮೂರು ಪಂದ್ಯಗಳ ಟಿ20 ಸರಣಿಗೆ ಅಫ್ಘಾನಿಸ್ತಾನ ತಂಡ ಭಾರತದಲ್ಲಿ ಟೀಂ ಇಂಡಿಯಾಕ್ಕೆ ಆತಿಥ್ಯವಹಿಸಲಿದೆ. ಉಳಿದಂತೆ ಈ ವರ್ಷ ಟೀಂ ಇಂಡಿಯಾ, ಶ್ರೀಲಂಕಾ, ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಗಳನ್ನು ಆಡಲಿದೆ. ಹಾಗಿದ್ದರೆ, ಉಳಿದಿರುವ ನಾಲ್ಕೂವರೆ ತಿಂಗಳಲ್ಲಿ ಟೀಂ ಇಂಡಿಯಾದ ಟಿ20 ಸರಣಿ ವೇಳಾಪಟ್ಟಿ ಹೇಗಿದೆ ಎಂಬುದನ್ನು ನೋಡುವುದಾದರೆ..

ಭಾರತ vs ಅಫ್ಘಾನಿಸ್ತಾನ T20 ಸರಣಿ (ಸೆಪ್ಟೆಂಬರ್ 2026)

  1. ಮೊದಲ ಟಿ20: ಸೆಪ್ಟೆಂಬರ್ 13, 2026, ನವದೆಹಲಿ
  2. ಎರಡನೇ ಟಿ20: ಸೆಪ್ಟೆಂಬರ್ 15, 2026, ನವದೆಹಲಿ
  3. ಮೂರನೇ ಟಿ20: ಸೆಪ್ಟೆಂಬರ್ 17, 2026, ನವದೆಹಲಿ

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ತಂಡ (ಸೆಪ್ಟೆಂಬರ್-ಅಕ್ಟೋಬರ್ 2026)

ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ಸೆಪ್ಟೆಂಬರ್ 24, 2026 ರಿಂದ ಅಕ್ಟೋಬರ್ 3, 2026 ರವರೆಗೆ ನಡೆಯಲಿದೆ. ಮೊದಲ ಸುತ್ತಿನ ಪಂದ್ಯ ಸೆಪ್ಟೆಂಬರ್ 24 ರಂದು ಆರಂಭವಾಗಲಿದೆ, ಆದರೂ ಟೀಂ ಇಂಡಿಯಾ ಈ ಸುತ್ತನ್ನು ಆಡುವುದಿಲ್ಲ. ಬದಲಿಗೆ ಭಾರತ ತಂಡ ನೇರವಾಗಿ ಕ್ವಾರ್ಟರ್ ಫೈನಲ್ ಆಡಲಿದೆ. ಈ ಸುತ್ತನ್ನು ಗೆದ್ದರೆ, ಅಕ್ಟೋಬರ್ 3 ರಂದು ಸೆಮಿಫೈನಲ್ ಮತ್ತು ನಂತರ ಫೈನಲ್ ಆಡಲಿದೆ. ಇದರರ್ಥ ಟೀಂ ಇಂಡಿಯಾ ಈ ಪಂದ್ಯಾವಳಿಯಲ್ಲಿ ಗರಿಷ್ಠ ಮೂರು ಪಂದ್ಯಗಳನ್ನು ಆಡಬಹುದು.

ಭಾರತ vs ವೆಸ್ಟ್ ಇಂಡೀಸ್ ಟಿ20 ಸರಣಿ (ಅಕ್ಟೋಬರ್ 2026)

  1. ಮೊದಲ ಟಿ20: ಅಕ್ಟೋಬರ್ 6, 2026, ಲಕ್ನೋ
  2. ಎರಡನೇ ಟಿ20: ಅಕ್ಟೋಬರ್ 9, 2026, ರಾಂಚಿ
  3. ಮೂರನೇ ಟಿ20: ಅಕ್ಟೋಬರ್ 11, 2026, ಇಂದೋರ್
  4. ನಾಲ್ಕನೇ ಟಿ20: ಅಕ್ಟೋಬರ್ 14, 2026, ಹೈದರಾಬಾದ್
  5. ಐದನೇ ಟಿ20: ಅಕ್ಟೋಬರ್ 17, 2026, ಬೆಂಗಳೂರು

ಭಾರತ vs ನ್ಯೂಜಿಲೆಂಡ್ ಟಿ20 ಸರಣಿ (ಅಕ್ಟೋಬರ್-ನವೆಂಬರ್ 2026)

  1. ಮೊದಲ ಟಿ20: ಅಕ್ಟೋಬರ್ 22, 2026, ಕ್ರೈಸ್ಟ್‌ಚರ್ಚ್
  2. ಎರಡನೇ ಟಿ20 ಅಕ್ಟೋಬರ್ 24, 2026, ಕ್ರೈಸ್ಟ್‌ಚರ್ಚ್
  3. ಮೂರನೇ ಟಿ20: ಅಕ್ಟೋಬರ್ 27, 2026, ವೆಲ್ಲಿಂಗ್ಟನ್
  4. ನಾಲ್ಕನೇ ಟಿ20: ಅಕ್ಟೋಬರ್ 30, 2026, ಆಕ್ಲೆಂಡ್
  5. ಐದನೇ ಟಿ20: ನವೆಂಬರ್ 1, 2026, ಹ್ಯಾಮಿಲ್ಟನ್

ಭಾರತ vs ಶ್ರೀಲಂಕಾ ಟಿ20 ಸರಣಿ (ಡಿಸೆಂಬರ್ 2026)

  1. ಮೊದಲ ಟಿ20: ಡಿಸೆಂಬರ್ 22, 2026, ರಾಜ್‌ಕೋಟ್
  2. ಎರಡನೇ ಟಿ20: ಡಿಸೆಂಬರ್ 24, 2026, ಕಟಕ್
  3. ಮೂರನೇ ಟಿ20: ಡಿಸೆಂಬರ್ 27, 2026, ಪುಣೆ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:37 pm, Wed, 12 August 26

Source link

ರೀಟೇಲ್ ಹಣದುಬ್ಬರ ಜುಲೈನಲ್ಲಿ ಶೇ. 4.45ಕ್ಕೆ ಏರಿಕೆ; ಆರ್​ಬಿಐನ ತಾಳಿಕೆ ಮಿತಿಯೊಳಗಿದೆ ಬೆಲೆ ಏರಿಕೆ ದರ – Kannada News | CPI based Retail Inflation in July 2026 rise to 4.45pc from 4.38pc in June

ನವದೆಹಲಿ, ಆಗಸ್ಟ್ 12: ಆಹಾರ ಪದಾರ್ಥಗಳ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತದ ರೀಟೇಲ್ ಹಣದುಬ್ಬರವು (Consumer Price Index – CPI) ಜುಲೈ ತಿಂಗಳಲ್ಲಿ 4.45% ಗೆ ಏರಿಕೆಯಾಗಿದೆ. ಜೂನ್ ತಿಂಗಳಿನಲ್ಲಿ ಇದು 4.38% ಆಗಿತ್ತು. ಇದರೊಂದಿಗೆ ದೇಶದ ಚಿಲ್ಲರೆ ಹಣದುಬ್ಬರವು ಸತತ ಎರಡನೇ ಬಾರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿಗದಿಪಡಿಸಿರುವ 4% ಮಧ್ಯಮಾವಧಿ ಗುರಿಗಿಂತ ಮೇಲೆ ಹೋಗಿದೆ. ಆದರೆ, ಹಣದುಬ್ಬರ ತಾಳಿಕೆ ಮಿತಿಯಾದ 6% ಒಳಗೆಯೇ ಇದೆ.

ಹಣದುಬ್ಬರ ಹೆಚ್ಚಳಕ್ಕೆ ಆಹಾರ ಪದಾರ್ಥಗಳ ಬೆಲೆ ಕಾರಣ

ಗ್ರಾಹಕ ಬೆಲೆ ಅನುಸೂಚಿ ಆಧಾರಿತವಾದ ಈ ಚಿಲ್ಲರೆ ಹಣದುಬ್ಬರದ ಏರಿಕೆಗೆ ಆಹಾರ ದರಗಳ ತೀವ್ರ ಹೆಚ್ಚಳವೇ ಮುಖ್ಯ ಕಾರಣವಾಗಿದೆ. ಜುಲೈನಲ್ಲಿ ಆಹಾರ ಹಣದುಬ್ಬರ ಅಥವಾ ಆಹಾರ ಪದಾರ್ಥಗಳ ಸರಾಸರಿ ಬೆಲೆ ಏರಿಕೆ 5.52% ಇದೆ.

ಉಳ್ಳಿ, ಖಾದ್ಯ ತೈಲಗಳು, ಅಕ್ಕಿ ಮತ್ತು ಬೇಳೆಕಾಳುಗಳಂತಹ ಅತ್ಯಗತ್ಯ ಆಹಾರವಸ್ತುಗಳ ದರ ಹೆಚ್ಚಳವು ಗ್ರಾಹಕರ ಬಜೆಟ್ ಮೇಲೆ ನೇರ ಪರಿಣಾಮ ಬೀರಿದೆ.

ಇದನ್ನೂ ಓದಿ: ಟಾಟಾ ಸನ್ಸ್ ಉನ್ನತ ಸ್ಥಾನ ತೊರೆದ ಎನ್ ಚಂದ್ರಶೇಖರನ್ ಅವರ ವೇತನ, ಕಮಿಷನ್ ಇತ್ಯಾದಿ ವರಮಾನ ಎಷ್ಟು ಗೊತ್ತಾ?

ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಭಾವ: ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಹಣದುಬ್ಬರದ ಪ್ರಭಾವ ಹೆಚ್ಚಾಗಿದೆ. ಗ್ರಾಮೀಣ ಭಾಗದ ಕುಟುಂಬಗಳ ವೆಚ್ಚದಲ್ಲಿ ಆಹಾರ ಧಾನ್ಯಗಳ ಪಾಲು ಹೆಚ್ಚಾಗಿರುವುದೇ ಇದಕ್ಕೆ ಕಾರಣ.

ಮುಂಗಾರು ಮತ್ತು ಬೆಳೆ ಸ್ಥಿತಿಗತಿ

ದೇಶದಾದ್ಯಂತ ಅಸಮಾನ ಮುಂಗಾರು ಮಳೆಯು ಕೃಷಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಯ ಮೇಲೆ ಪರಿಣಾಮ ಬೀರಿದೆ. ಜುಲೈ ದ್ವಿತೀಯಾರ್ಧದಲ್ಲಿ ಮಳೆ ಪ್ರಮಾಣ ಸುಧಾರಿಸಿದ್ದು, ಶೇಕಡಾ 63 ರಷ್ಟು ರಾಜ್ಯಗಳಲ್ಲಿ ಸಾಧಾರಣ ಮಳೆಯಾಗಿದೆ. ಖಾರಿಫ್ ಬೆಳೆಗಳ ಬಿತ್ತನೆ ಪ್ರಮಾಣ ಉತ್ತಮವಾಗಿದ್ದರೂ, ಆಹಾರ ಪದಾರ್ಥಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ದರ ಏರಿಕೆಗೆ ದಾರಿಯಾಗಿದೆ.

ಇದನ್ನೂ ಓದಿ: ಕೆಲಸ ಬಿಟ್ಟ ಆರು ಮಂದಿಯ ಹುಚ್ಚುತನದಲ್ಲಿ ಆರಂಭವಾಗಿತ್ತು ಎಚ್​ಸಿಎಲ್; ಕಾರು ಮಾರಿ ಕಟ್ಟಿದ ಕಂಪನಿಯ ಕಥೆ ಇದು…

ಆರ್‌ಬಿಐ (RBI) ನಿಲುವು ಮತ್ತು ಭವಿಷ್ಯದ ಅಂದಾಜು

ಹಣದುಬ್ಬರವು ಆರ್‌ಬಿಐನ 4% ಗುರಿಯನ್ನು ಮೀರಿದ್ದರೂ, ಅದು ನಿಗದಿಪಡಿಸಿರುವ 2% ನಿಂದ 6% ಒಳಗಿನ ತಾಳಿಕೆಯ ಮಿತಿಯಲ್ಲೇ ಇದೆ. ಆದ್ದರಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಇತ್ತೀಚಿನ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ಬಡ್ಡಿದರಗಳನ್ನು (Repo Rate) ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದೆ.

ಆದಾಗ್ಯೂ, ಹವಾಮಾನ ವೈಪರೀತ್ಯ ಹಾಗೂ ಕಚ್ಚಾ ತೈಲ ದರಗಳ ಏರಿಳಿತಗಳಿಂದಾಗಿ ಮುಂಬರುವ ತಿಂಗಳುಗಳಲ್ಲಿ ಹಣದುಬ್ಬರ ಪ್ರಮಾಣ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Balasana Benefits: ಪ್ರತಿದಿನ ಬೆಳಗ್ಗೆ 15 ನಿಮಿಷಗಳ ಬಾಲಾಸನ ಮಾಡಿ, ಈ ಎಲ್ಲಾ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ – Kannada News | Balasana Benefits: Do Child’s Pose for 15 minutes every day to relieve stress

ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು, ಉತ್ತಮ ಜೀವನಶೈಲಿ, ಪೌಷ್ಟಿಕ ಆಹಾರ ಮತ್ತು ದೈಹಿಕ ಚಟುವಟಿಕೆ ಅತ್ಯಗತ್ಯ. ಆದರೆ ಇಂದಿನ ಈ ಬ್ಯುಸಿ ಜೀವನದ ಕಾರಣದಿಂದಾಗಿ ಅನೇಕರಿಗೆ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಒತ್ತಡವೂ (stress) ಹೆಚ್ಚುತ್ತಿದೆ. ಈ ಒತ್ತಡವು ದೀರ್ಘಕಾಲದವರೆಗೆ ಮುಂದುವರಿದರೆ, ಅದು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಹಾನಿ ಉಂಟುಮಾಡುತ್ತದೆ. ಈ ಒಂದು ಸಮಸ್ಯೆಗೆ ನಿತ್ಯ ಬಾಲಾಸನ ಮಾಡುವ ಮೂಲಕ ಪರಿಹಾರವನ್ನು ಪಡೆಯಬಹುದು. ಒತ್ತಡವನ್ನು ನಿವಾರಿಸುವಲ್ಲಿ ಬಾಲಾಸನ ಅತ್ಯಂತ ಪರಿಣಾಮಕಾರಿ ಯೋಗಭಂಗಿಯಾಗಿದೆ. ಚೈಲ್ಡ್ಸ್ ಪೋಸ್ ಎಂದೂ ಕರೆಯಲಾಗುವ ಬಾಲಾಸನದ ನಿಯಮಿತ ಅಭ್ಯಾಸವು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ಒತ್ತಡ, ಆತಂಕ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ.

ಬಾಲಾಸನ ಮಾಡುವುದರಿಂದ ಲಭಿಸುವ ಪ್ರಯೋಜನಗಳು:

ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ:  ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ನೀವು ಬಾಲಾಸನವನ್ನು ಪ್ರತಿದಿನವೂ ಅಭ್ಯಾಸ ಮಾಡಬೇಕು. ಇದು ಮನಸ್ಸಿಗೆ ಶಾಂತಿಯನ್ನು ತರುತ್ತದೆ ಮತ್ತು ಉದ್ವೇಗವನ್ನು ಕಡಿಮೆ ಮಾಡುತ್ತದೆ. ರಮಂಡಲವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ, ಮಾನಸಿಕವಾಗಿ ಹಗುರ ಮತ್ತು ಸಮತೋಲನವನ್ನು ಅನುಭವಿಸಲು ಸಹಾಯ ಮಾಡುತ್ತದೆ.

ಬೆನ್ನು ನೋವಿನಿಂದ ಪರಿಹಾರ: ಪ್ರತಿದಿನ 15 ನಿಮಿಷಗಳ ಕಾಲ ಬಾಲಾಸನವನ್ನು ಅಭ್ಯಾಸ ಮಾಡುವುದರಿಂದ ಬೆನ್ನು ನೋವು ನಿವಾರಣೆಯಾಗುತ್ತದೆ ಮತ್ತು ಗಮನಾರ್ಹ ವಿಶ್ರಾಂತಿ ದೊರೆಯುತ್ತದೆ. ಬಾಲಾಸನವು ಬೆನ್ನುಮೂಳೆ ಮತ್ತು ಬೆನ್ನಿನ ಸ್ನಾಯುಗಳನ್ನು ನಿಧಾನವಾಗಿ ಬಲಗೊಳಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ:  ಬಾಲಾಸನವು ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

ಮಾನಸಿಕ ಶಾಂತಿ: ನಿಯಮಿತ ಅಭ್ಯಾಸವು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

ಕುತ್ತಿಗೆ ಮತ್ತು ಭುಜಗಳಲ್ಲಿನ ಬಿಗಿತವನ್ನು ಕಡಿಮೆ ಮಾಡುತ್ತದೆ: ಪ್ರತಿದಿನ ಬಾಲಾಸನವನ್ನು ಅಭ್ಯಾಸ ಮಾಡುವುದರಿಂದ ನಿಮ್ಮ ಕುತ್ತಿಗೆ ಮತ್ತು ಭುಜಗಳಲ್ಲಿನ ಬಿಗಿತ ಕಡಿಮೆಯಾಗುತ್ತದೆ. ಲ್ಯಾಪ್‌ಟಾಪ್ ಅಥವಾ ಮೊಬೈಲ್ ಫೋನ್‌ನ ಅತಿಯಾದ ಬಳಕೆಯು ನಿಮ್ಮ ಕುತ್ತಿಗೆ ಮತ್ತು ಭುಜಗಳಲ್ಲಿ ಗಮನಾರ್ಹ ಒತ್ತಡವನ್ನು ಉಂಟುಮಾಡಬಹುದು. ಇದರಿಂದ ಪರಿಹಾರವನ್ನು ಕಂಡುಕೊಳ್ಳಲು ನಿತ್ಯ 15 ನಿಮಿಷಗಳ ಕಾಲ ಬಾಲಾಸನ ಮಾಡುವುದು ಒಳ್ಳೆಯದು.

ಉತ್ತಮ ನಿದ್ರೆಗೆ ಸಹಕಾರಿ:  ಈ ಆಸನವನ್ನು ಪ್ರತಿದಿನ ಅಭ್ಯಾಸ ಮಾಡುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಒತ್ತಡ ಅಥವಾ ಆತಂಕದಿಂದಾಗಿ ನಿಮಗೆ ನಿದ್ರಿಸಲು ತೊಂದರೆಯಾಗಿದ್ದರೆ, ನೀವು ಮಲಗುವ ಮುನ್ನ ಈ ಆಸನವನ್ನು ಅಭ್ಯಾಸ ಮಾಡಿ.

ಬಾಲಾಸನ ಮಾಡುವ ಸರಿಯಾದ ವಿಧಾನ:

ಹಂತ 1- ಯೋಗ ಚಾಪೆಯ ಮೇಲೆ ಮಂಡಿಯೂರಿ ಕುಳಿತುಕೊಳ್ಳಿ
ಹಂತ 2:  ನಿಮ್ಮ ಕಾಲ್ಬೆರಳುಗಳನ್ನು (ಕಣಕಾಲು) ನೇರವಾಗಿ ಹಿಂದಕ್ಕೆ ಚಾಚಿ ಮತ್ತು ನಿಮ್ಮ ಹಿಮ್ಮಡಿಯ ಮೇಲೆ ಕುಳಿತುಕೊಳ್ಳಿ.
ಹಂತ 3: ಉಸಿರನ್ನು ಎಳೆದುಕೊಳ್ಳುತ್ತಾ ನಿಧಾನವಾಗಿ ಮುಂದಕ್ಕೆ ಬಾಗಿ ನಿಮ್ಮ ಹಣೆಯನ್ನು ನೆಲಕ್ಕೆ ಸ್ಪರ್ಶಿಸಿ.
ಹಂತ 4: ಎರಡೂ ಕೈಗಳನ್ನು ನೇರವಾಗಿ ಮುಂದಕ್ಕೆ ಅಥವಾ  ಹಿಂದಕ್ಕೆ ಚಾಚಿ.
ಹಂತ 5:  ನಿಧಾನವಾಗಿ  ಉಸಿರಾಡುತ್ತಾ   30 ಸೆಕೆಂಡುಗಳಿಂದ 2 ನಿಮಿಷಗಳವರೆಗೆ ಇದೇ ಸ್ಥಾನದಲ್ಲಿರಿ.
ಹಂತ 7:  ನಿಧಾನವಾಗಿ ಆರಂಭಿಕ ಸ್ಥಾನಕ್ಕೆ ಹಿಂತಿರುಗಿ. ಮತ್ತೆ 3-5 ಬಾರಿ ಪುನರಾವರ್ತಿಸಿ.

ಇದನ್ನೂ ಓದಿ: ಒತ್ತಡದಿಂದ ಮುಕ್ತರಾಗಲು ಬಯಸಿದರೆ ಗಾರ್ಡನಿಂಗ್‌ ಹವ್ಯಾಸವನ್ನು ಬೆಳೆಸಿಕೊಳ್ಳಿ

ಬಾಲಾಸನ ಮಾಡುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು:

  • ತೀವ್ರವಾದ ಮೊಣಕಾಲು ನೋವು ಇದ್ದರೆ, ವೈದ್ಯರ ಸಲಹೆ ಇಲ್ಲದೆ ಈ ಆಸನವನ್ನು ಮಾಡಬಾರದು
  • ಗರ್ಭಿಣಿಯರು ತಜ್ಞರ ಸಲಹೆಯಿಲ್ಲದೆ ಇದನ್ನು ಮಾಡಬಾರದು.
  • ನಿಮಗೆ ಅಧಿಕ ರಕ್ತದೊತ್ತಡ ಅಥವಾ ತಲೆತಿರುಗುವಿಕೆ ಇದ್ದರೆ ಜಾಗರೂಕರಾಗಿರಿ.
  • ಕುತ್ತಿಗೆಗೆ ಗಾಯವಾಗಿದ್ದರೆ ಜಾಗರೂಕರಾಗಿರಿ.
  • ಹೆಚ್ಚು ಒತ್ತಡ ಹೇರಿ ನಿಮ್ಮ ಹಣೆಯನ್ನು ನೆಲದ ಮೇಲೆ ಇಡಬೇಡಿ.

ಬಾಲಾಸನವನ್ನು ಯಾವಾಗ ಮಾಡಬೇಕು?

  • ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಲಾಸನ ಮಾಡುವುದು ಉತ್ತಮ.
  • ಉತ್ತಮ ನಿದ್ರೆಗಾಗಿ ರಾತ್ರಿ ಮಲಗುವ ಮುನ್ನ ಬಾಲಾಸನ ಅಭ್ಯಾಸ ಮಾಡುವುದು ಒಳ್ಳೆಯದು.
  • ನೀವು ಒತ್ತಡಕ್ಕೊಳಗಾದಾಗಲೆಲ್ಲಾ ಬಾಲಾಸನ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:16 pm, Wed, 12 August 26

Source link

ಐವಿಎಫ್ ಬಳಿಕ ಬಾಣಂತಿಯರು ಮಗುವಿಗೆ ಹಾಲುಣಿಸಬಹುದೇ? ತಜ್ಞರು ನೀಡಿರುವ ಉತ್ತರವೇನು? – Kannada News | Can IVF Affect Breastfeeding After Delivery? Know What Doctors Say

ಐವಿಎಫ್ (IVF) ಮೂಲಕ ಗರ್ಭಧಾರಣೆ ಮಾಡಿಕೊಂಡ ಮಹಿಳೆಯರಲ್ಲಿ ಡೆಲಿವರಿ ನಂತರ ಮಗುವಿಗೆ ಸ್ತನ್ಯಪಾನ ಮಾಡಿಸಲು ಸಾಧ್ಯವಾಗುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿದೆ. ಐವಿಎಫ್ ವೇಳೆ ಹಾರ್ಮೋನ್‌ ಆಧಾರಿತ ಔಷಧಿಗಳನ್ನು ನೀಡುವುದರಿಂದ, ನಂತರ ಎದೆಹಾಲು ಉತ್ಪಾದನೆಗೆ ತೊಂದರೆಯಾಗಬಹುದೇ ಎಂಬ ಆತಂಕವೂ ಇರುತ್ತದೆ. ಹಾಗಾದರೆ ಐವಿಎಫ್ ನಂತರ ಸ್ತನ್ಯಪಾನ ಮಾಡುವಾಗ ನಿಜವಾಗಿಯೂ ಸಮಸ್ಯೆ ಉಂಟಾಗಬಹುದೇ, ಯಾವ ಅಂಶಗಳು ಪರಿಣಾಮ ಬೀರುತ್ತವೆ ಎಂಬುದರ ಬಗ್ಗೆ ತಜ್ಞರು ನೀಡಿರುವ ಮಾಹಿತಿ ಸ್ಟೋರಿಯಲ್ಲಿದೆ.

ಐವಿಎಫ್ ಬಳಸುವ ಹಾರ್ಮೋನ್‌ ಔಷಧಿಗಳು ಸಾಮಾನ್ಯವಾಗಿ ಚಿಕಿತ್ಸೆಯ ನಿರ್ದಿಷ್ಟ ಹಂತದಲ್ಲಿ ಮಾತ್ರ ಅಗತ್ಯವಿರುತ್ತವೆ. ಗರ್ಭಧಾರಣೆಯ ನಂತರ ವೈದ್ಯರ ಸಲಹೆಯಂತೆ ಅವುಗಳನ್ನು ಕ್ರಮೇಣ ನಿಲ್ಲಿಸಲಾಗುತ್ತದೆ. ಮಗುವಿನ ಜನನದ ವೇಳೆಗೆ ಸ್ತನ್ಯಪಾನವನ್ನು ನಿಯಂತ್ರಿಸುವ ದೇಹದ ಸ್ವಾಭಾವಿಕ ಹಾರ್ಮೋನ್‌ ಪ್ರಕ್ರಿಯೆಯೇ ಪ್ರಮುಖವಾಗಿರುತ್ತದೆ. ಅದರಲ್ಲಿಯೂ ಐವಿಎಫ್ ಮೂಲಕ ಗರ್ಭಧಾರಣೆಯಾದ ಕಾರಣಕ್ಕೆ ಮಾತ್ರ ಸ್ತನ್ಯಪಾನದಲ್ಲಿ ಸಮಸ್ಯೆ ಉಂಟಾಗುತ್ತದೆ ಎಂಬುದಕ್ಕೆ ಬಲವಾದ ವೈಜ್ಞಾನಿಕ ಸಾಕ್ಷ್ಯವಿಲ್ಲ.

ಐವಿಎಫ್ ನಂತರ ಸ್ತನ್ಯಪಾನ ಮಾಡಿಸಬಹುದೇ?

ಸಾಮಾನ್ಯವಾಗಿ ಐವಿಎಫ್ ಮೂಲಕ ಪ್ರೇಗ್ನೆಂಟ್ ಆದ ಮಹಿಳೆಯರೂ ಸಾಮಾನ್ಯವಾಗಿ ಮಗುವಿಗೆ ಸ್ತನ್ಯಪಾನ ಮಾಡಿಸಬಹುದು. ಮಗುವಿನ ಜನನದ ನಂತರ ಪ್ಲಾಸೆಂಟಾ ಹೊರಬಂದಾಗ ಗರ್ಭಾವಸ್ಥೆಯಲ್ಲಿ ಹೆಚ್ಚಾಗಿದ್ದ ಕೆಲವು ಹಾರ್ಮೋನ್‌ಗಳ ಮಟ್ಟ ಕಡಿಮೆಯಾಗುತ್ತದೆ. ಪ್ರೊಲ್ಯಾಕ್ಟಿನ್‌ (Prolactin) ಹಾರ್ಮೋನ್ ಎದೆಹಾಲು ಉತ್ಪಾದನೆಗೆ ಸಹಾಯ ಮಾಡುತ್ತದೆ. ಮಗು ಸ್ತನಕ್ಕೆ ಹಾಲು ಕುಡಿಯಲು ಅಂಟಿಕೊಂಡಾಗ ಆಕ್ಸಿಟೋಸಿನ್‌ (Oxytocin) ಬಿಡುಗಡೆಯಾಗಿ ಹಾಲು ಹೊರಬರಲು ಸಹಾಯ ಮಾಡುತ್ತದೆ. ಈ ಪ್ರಕ್ರಿಯೆ ಸ್ವಾಭಾವಿಕವಾಗಿ ಗರ್ಭಧಾರಣೆಯಾದ ಮಹಿಳೆಯರಲ್ಲಿಯೂ, IVF ಮೂಲಕ ಗರ್ಭಧಾರಣೆಯಾದ ಮಹಿಳೆಯರಲ್ಲಿಯೂ ಒಂದೇ ರೀತಿಯಾಗಿದೆ.

ತಜ್ಞರು ಏನು ಹೇಳುತ್ತಾರೆ?

ಐವಿಎಫ್ ತಜ್ಞೆ ಡಾ. ಸುತಪಾ ಸೇನ್ ಅವರ ಪ್ರಕಾರ, ಮಗುವಿನ ಜನನದ ನಂತರ ಸ್ತನ್ಯಪಾನ ಯಾವ ವಿಧಾನದಿಂದ ಆಯಿತು ಎನ್ನುವುದಕ್ಕಿಂತ, ಹೆರಿಗೆ ನಂತರ ತಾಯಿ ಮತ್ತು ಮಗುವಿಗೆ ಸಿಗುವ ಆರೈಕೆಯ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ. ಮಗುವಿನ ಜನನದ ಮೊದಲ ಗಂಟೆಯೊಳಗೆ ಸ್ತನ್ಯಪಾನ ಆರಂಭಿಸುವುದು, ತಾಯಿ-ಮಗುವಿನ Skin-to-Skin Contact, ಸರಿಯಾದ ರೀತಿಯಲ್ಲಿ ಮಗುವನ್ನು ಸ್ತನಕ್ಕೆ ಅಂಟಿಸುವುದು ಮತ್ತು ಮಗುವಿಗೆ ಆಗಾಗ ಹಾಲುಣಿಸುವುದು ಸ್ತನ್ಯಪಾನ ಯಶಸ್ವಿಯಾಗಲು ಸಹಾಯ ಮಾಡಬಹುದು.

ಮಹಿಳೆಯ ವಯಸ್ಸು ಹೆಚ್ಚಿರುವುದು, ಸಿಸೇರಿಯನ್ ಹೆರಿಗೆ, ಅವಳಿ ಗರ್ಭಧಾರಣೆ, ಅವಧಿಗೂ ಮುನ್ನ ಹೆರಿಗೆ, ಗರ್ಭಾವಸ್ಥೆಯ ಮಧುಮೇಹ ಅಥವಾ ಅಧಿಕ ರಕ್ತದೊತ್ತಡದಂತಹ ಅಂಶಗಳು ಸ್ತನ್ಯಪಾನ ಆರಂಭದ ಮೇಲೆ ಪರಿಣಾಮ ಬೀರಬಹುದು. ಮಗುವಿನ ಜನನದ ನಂತರ ಸಾಧ್ಯವಾದಷ್ಟು ಬೇಗ ಸ್ತನ್ಯಪಾನ ಆರಂಭಿಸುವುದು, ಮಗುವನ್ನು ತಾಯಿಯೊಂದಿಗೆ ಹೆಚ್ಚು ಸಮಯ ಇರಿಸುವುದು ಮತ್ತು ಮಗುವಿಗೆ ಅಗತ್ಯಕ್ಕೆ ಅನುಗುಣವಾಗಿ ಆಗಾಗ ಹಾಲುಣಿಸುವುದು ಸಹಾಯಕವಾಗಬಹುದು.

ಮಗುವಿಗೆ ಹಾಲು ಸರಿಯಾಗಿ ಸಿಗುತ್ತಿಲ್ಲ ಎಂದು ಅನಿಸಿದರೆ, ಹಾಲಿನ ಪ್ರಮಾಣ ಕಡಿಮೆಯಾಗಿದೆ ಎಂದು ಅನುಮಾನವಿದ್ದರೆ ಅಥವಾ ಸ್ತನಗಳಲ್ಲಿ ನೋವು ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ. ಸ್ತ್ರೀರೋಗ ತಜ್ಞರು, ಫರ್ಟಿಲಿಟಿ ತಜ್ಞರು ಅಥವಾ ಲ್ಯಾಕ್ಟೇಶನ್‌ ಕನ್ಸಲ್ಟೆಂಟ್‌ರನ್ನು ಸಂಪರ್ಕಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾಲು ಸಾಲು ಅಕ್ರಮ ಆರೋಪ: ಕೆಪಿಎಸ್​​​​ಸಿಗೆ ಮೇಜರ್ ಸರ್ಜರಿ! – Kannada News | KPSC Officer Transfers: IAS H. Prasanna, Lavish Ordia Appointed Amid Allegations

ಬೆಂಗಳೂರು, ಆಗಸ್ಟ್​​ 12: ಕರ್ನಾಟಕ ಲೋಕಸೇವಾ ಆಯೋಗದ (KPSC) ಇತ್ತೀಚಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಅಕ್ರಮಗಳ ವಿರುದ್ಧ ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳು ಉಗ್ರ ಹೋರಾಟ ಕೂಡ ಮಾಡಿದ್ದರು. ಹೀಗೆ ಸಾಲು ಸಾಲು ಅಕ್ರಮ ಆರೋಪಗಳ ಬೆನ್ನಲ್ಲೇ ಇದೀಗ ಸರ್ಕಾರ ಕೆಪಿಎಸ್​​​​ಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಅಧಿಕಾರಿಗಳ ವರ್ಗಾವಣೆ (Transfer) ಮಾಡಿ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಮುಖ ಅಧಿಕಾರಿಗಳ ಎತ್ತಂಗಡಿಗೆ ಆದೇಶಿಸಿದ್ದು, ಕೆಪಿಎಸ್‌ಸಿಗೆ ಇಬ್ಬರು ಐಎಎಸ್ (IAS) ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ, ಕೆಪಿಎಸ್​ಸಿ ಕಾರ್ಯವೈಖರಿ ಬಗ್ಗೆ ಗರಂ

ಈ ಮುಂಚೆ ಪರೀಕ್ಷಾ ನಿಯಂತ್ರಣ ಅಧಿಕಾರಿಯಾಗಿದ್ದ ದಿಗ್ವಿಜಯ್ ಬೋಡ್ಕೆ ಅವರನ್ನು ಯಾವುದೇ ಪರ್ಯಾಯ ಜಾಗ ತೋರಿಸದೆ ಸರ್ಕಾರ ವರ್ಗಾವಣೆಗೊಳಿಸಿದೆ. ತೆರವಾದ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಹೆಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರಾಗಿ ಲವೀಶ್ ಓರ್ಡಿಯಾ ನೇಮಕ 

ಇನ್ನು ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರಾಗಿ ಐಎಎಸ್ ಅಧಿಕಾರಿ ಲವೀಶ್ ಓರ್ಡಿಯಾ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿರುವ ಲವೀಶ್ ಓರ್ಡಿಯಾ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: KPSC ಪರೀಕ್ಷೆ ಅಕ್ರಮ, ಒಂದೇ ಕೊಠಡಿಯಲ್ಲಿದ್ದ 15 ಮಂದಿ ಪಾಸ್! ಕೆಎಎಸ್ ಮುಖ್ಯಪರೀಕ್ಷೆ ಫಲಿತಾಂಶದ ಬಗ್ಗೆಯೇ ಹತ್ತಾರು ಸಂಶಯ

ಸರ್ಕಾರದ ಆದೇಶದಂತೆ ಈ ಎರಡೂ ಹುದ್ದೆಗಳನ್ನು ಪೌರಾಡಳಿತ ನಿರ್ದೇಶಕರ ಹುದ್ದೆಗೆ ಸಮಾನವಾಗಿ ಪರಿಗಣಿಸಿ ಈ ನೇಮಕಾತಿಗಳನ್ನು ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Independence Day 2026: 1947 ಆಗಸ್ಟ್ 14-15ರ ಆ 24 ಗಂಟೆಗಳು: ಭಾರತದಲ್ಲಿ ನಡೆದ ರೋಮಾಂಚಕಾರಿ ಕ್ಷಣಗಳು – Kannada News | The 24 Hours of August 14–15, 1947; How the moment Indians felt during Indian Independence Announcement; details in Kannada

ದೆಹಲಿ, ಆ.12: ಬ್ರಿಟಿಷರ ಗುಲಾಮಿ ಸಂಕೋಲೆಯನ್ನು ಕಳಚಿ, ಭಾರತವು ಸ್ವತಂತ್ರ ರಾಷ್ಟ್ರವಾಗಿ ಜನ್ಮತಳೆದ 1947ರ ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆಯವರೆಗಿನ 24 ಗಂಟೆಗಳು ಭಾರತೀಯ ಇತಿಹಾಸದ ಅತ್ಯಂತ ಅವಿಸ್ಮರಣೀಯ ಅಧ್ಯಾಯ. ಒಂದೆಡೆ ದಶಕಗಳ ಸುದೀರ್ಘ ಹೋರಾಟಕ್ಕೆ ಸಿಕ್ಕ ಸ್ವಾತಂತ್ರ್ಯದ ಪರಮೋಚ್ಛ ಆನಂದ, ಮತ್ತೊಂದೆಡೆ ದೇಶ ವಿಭಜನೆಯ ಭೀಕರ ರಕ್ತಪಾತ ಮತ್ತು ನೋವು. ಈ 24 ಗಂಟೆಗಳಲ್ಲಿ ಇಡೀ ದೇಶ ಅನುಭವಿಸಿದ ಭಾವನೆಗಳನ್ನು ಶಬ್ದಗಳಲ್ಲಿ ವರ್ಣಿಸುವುದು ಅಸಾಧ್ಯ. ಅಂದು ದೆಹಲಿಯ ರಾಜಬೀದಿಗಳಿಂದ ಹಿಡಿದು ಗಡಿಭಾಗದ ಹಳ್ಳಿಗಳವರೆಗೆ ಭಾರತೀಯರ ಎದೆಯಲ್ಲಿ ಮೂಡಿದ ರೋಮಾಂಚಕಾರಿ ಘಟನೆಗಳು ಇಲ್ಲಿವೆ.

ಆಗಸ್ಟ್ 14, ಸಂಜೆ 4:00 ರಿಂದ ರಾತ್ರಿ 10:00: ದೆಹಲಿಯಲ್ಲಿ ನೆರೆದ ಜನಸ್ತೋಮ

ಆಗಸ್ಟ್ 14ರ ಸಂಜೆಯಾಗುತ್ತಿದ್ದಂತೆ ದೆಹಲಿಯ ಸಂವಿಧಾನ ಸಭೆಯ ಹೊರಭಾಗದಲ್ಲಿ ಲಕ್ಷಾಂತರ ಜನರು ಜಮಾಯಿಸಿದ್ದರು. ಮಳೆಯ ವಾತಾವರಣವಿದ್ದರೂ ಜನರ ಉತ್ಸಾಹ ಕುಂದಿರಲಿಲ್ಲ. ಕತ್ತಲಾಗುತ್ತಿದ್ದಂತೆ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಇನ್ನೊಂದೆಡೆ, ಅಂತಿಮವಾಗಿ ಯೂನಿಯನ್ ಜ್ಯಾಕ್ (ಬ್ರಿಟಿಷ್ ಧ್ವಜ) ಅನ್ನು ಕೆಳಗಿಳಿಸಿ, ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಲು ಸಿದ್ಧತೆಗಳು ಬಿರುಸಿನಿಂದ ಸಾಗಿದ್ದವು. ಬೀದಿ ಬೀದಿಗಳಲ್ಲಿ ‘ಇಂಕ್ವಿಲಾಬ್ ಜಿಂದಾಬಾದ್’, ‘ವಂದೇ ಮಾತರಂ’ ಮತ್ತು ‘ಮಹಾತ್ಮ ಗಾಂಧಿ ಕೀ ಜೈ’ ಎಂಬ ಘೋಷಣೆಗಳು ಮುಗಿಲು ಮುಟ್ಟುತ್ತಿದ್ದವು.

ಆಗಸ್ಟ್ 14, ಮಧ್ಯರಾತ್ರಿ 11:55 ರಿಂದ 12:00: ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಮತ್ತು ಸ್ವಾತಂತ್ರ್ಯದ ಉದಯ

ಸಂವಿಧಾನ ಸಭೆಯಲ್ಲಿ ಜವಾಹರಲಾಲ್ ನೆಹರೂ ಅವರು ತಮ್ಮ ಐತಿಹಾಸಿಕ “ಟ್ರಿಸ್ಟ್ ವಿತ್ ಡೆಸ್ಟಿನಿ” ಭಾಷಣವನ್ನು ಪ್ರಾರಂಭಿಸಿದರು. “ಮಧ್ಯರಾತ್ರಿಯ ಗಂಟೆ ಬಾರಿಸುತ್ತಿದ್ದಂತೆ, ಇಡೀ ಪ್ರಪಂಚವೇ ನಿದ್ರಿಸುತ್ತಿರುವಾಗ, ಭಾರತವು ಜೀವಂತಿಕೆ ಮತ್ತು ಸ್ವಾತಂತ್ರ್ಯದೊಂದಿಗೆ ಹೊಸ ಮುಂಜಾನೆಗೆ ಎಚ್ಚರಗೊಳ್ಳುತ್ತದೆ.” ಎಂದು ಹೇಳಿದರು. ಗಡಿಯಾರದಲ್ಲಿ ಸರಿ ಮಧ್ಯರಾತ್ರಿ 12 ಘಂಟೆಯಾಗುತ್ತಿದ್ದಂತೆ, ಸಂಸತ್ತಿನ Central Hall ನಲ್ಲಿದ್ದ ಶಂಖಗಳು ಮೊಳಗಿದವು. ಸ್ವತಂತ್ರ ಭಾರತದ ಮೊದಲ ಸಂಸತ್ತು ಅಧಿಕೃತವಾಗಿ ಜನ್ಮ ತಾಳಿತು. ಭಾರತೀಯರ ಮುಖದಲ್ಲಿ ಆನಂದಭಾಷ್ಪ ಹರಿಯಿತು.

ಇದನ್ನೂ ಓದಿ: ಹೆಮ್ಮೆಯ ತ್ರಿವರ್ಣ ಧ್ವಜವನ್ನು ಹಾರಿಸುವಾಗ ಈ ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು

ಆಗಸ್ಟ್ 15, ಮುಂಜಾನೆ 6:30: ರೇಡಿಯೋದಲ್ಲಿ ‘ವಂದೇ ಮಾತರಂ’ ಧ್ವನಿ

ಆಗಸ್ಟ್ 15ರ ಮುಂಜಾನೆ ಆಲ್ ಇಂಡಿಯಾ ರೇಡಿಯೋ (All India Radio) ಮೂಲಕ ಪಂಡಿತ್ ಓಂಕಾರನಾಥ್ ಠಾಕೂರ್ ಅವರ ಕಂಠದಲ್ಲಿ ‘ವಂದೇ ಮಾತರಂ’ ಗೀತೆ ಪ್ರಸಾರವಾಯಿತು. ಇದನ್ನು ಕೇಳಿದ ಕೋಟ್ಯಂತರ ಭಾರತೀಯರಲ್ಲಿ ದೇಶಭಕ್ತಿಯ ಅಲೆ ಎದ್ದಿತು. ಬೆಳಗ್ಗೆ ಲಾರ್ಡ್ ಮೌಂಟ್‌ಬ್ಯಾಟನ್ ಅವರು ಸ್ವತಂತ್ರ ಭಾರತದ ಮೊದಲ ಗವರ್ನರ್ ಜನರಲ್ ಆಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು ಜವಾಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ಕಲ್ಕತ್ತಾದಲ್ಲಿ ಶಾಂತಿಗಾಗಿ ಗಾಂಧೀಜಿ ಉಪವಾಸ: ಸಂಭ್ರಮದ ನಡುವೆ ವಿಭಜನೆಯ ಕಣ್ಣೀರು

ದೆಹಲಿಯಲ್ಲಿ ಸ್ವಾತಂತ್ರ್ಯದ ವಿಜಯೋತ್ಸವ ನಡೆಯುತ್ತಿದ್ದರೆ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮಾತ್ರ ಯಾವುದೇ ಸರ್ಕಾರಿ ಸಂಭ್ರಮದಲ್ಲಿ ಭಾಗವಹಿಸಲಿಲ್ಲ. ಅವರು ಕಲ್ಕತ್ತಾದ (ಈಗಿನ ಕೋಲ್ಕತಾ) ಬೆಲಿಯಾಘಾಟಾದಲ್ಲಿ ಹಿಂದೂ-ಮುಸ್ಲಿಂ ಕೋಮು ಗಲಭೆಯನ್ನು ಶಾಂತಗೊಳಿಸಲು 24 ಗಂಟೆಗಳ ಕಾಲ ಮೌನ ವ್ರತ ಹಾಗೂ ಉಪವಾಸ ಸತ್ಯಾಗ್ರಹದಲ್ಲಿದ್ದರು. “ನಾಳೆ ನಮಗೆ ಬ್ರಿಟಿಷ್ ಆಡಳಿತದಿಂದ ಮುಕ್ತಿ ಸಿಗಲಿದೆ. ಆದರೆ ಮಧ್ಯರಾತ್ರಿಯಿಂದ ಭಾರತವು ಇಬ್ಭಾಗವಾಗಲಿದೆ. ನಾಳೆ ನಮಗೆ ಆನಂದದ ದಿನ ಹೌದು, ಆದರೆ ಅದಕ್ಕಿಂತ ಹೆಚ್ಚಿನ ದುಃಖ ಮತ್ತು ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ.” ಎಂದು ಗಾಂಧಿ ಹೇಳಿದರು. ಪಂಜಾಬ್ ಮತ್ತು ಬೆಂಗಾಲ್ ಗಡಿಭಾಗಗಳಲ್ಲಿ ಕೋಟ್ಯಾಂತರ ಜನರು ತಮ್ಮ ಮನೆ-ಮಠಗಳನ್ನು ತೊರೆದು ವಲಸೆ ಹೋಗುತ್ತಿದ್ದರು. ಲಕ್ಷಾಂತರ ಜನರ ಆಕ್ರಂದನ ಹಾಗೂ ವಿಭಜನೆಯ ನೋವು ಸ್ವಾತಂತ್ರ್ಯದ ಸಂಭ್ರಮದ ಮೇಲೆಯೂ ನೆರಳು ಚೆಲ್ಲಿತ್ತು.

ಆಗಸ್ಟ್ 15, ಮಧ್ಯಾಹ್ನ ಮತ್ತು ಸಂಜೆ: ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ

ಆಗಸ್ಟ್ 15ರ ಮಧ್ಯಾಹ್ನದ ವೇಳೆಗೆ ದೆಹಲಿಯ ಇಂಡಿಯಾ ಗೇಟ್ ಹಾಗೂ ಸಂಸತ್ತಿನ ಸುತ್ತಮುತ್ತ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಜಮಾಯಿಸಿದ್ದರು. ಜನಸಂದಣಿ ಎಷ್ಟಿತ್ತೆಂದರೆ ನಿಗದಿತ ಧ್ವಜಾರೋಹಣ ಕಾರ್ಯಕ್ರಮಗಳನ್ನು ನಿರ್ವಹಿಸುವುದೇ ಸವಾಲಾಗಿತ್ತು. ಪ್ರಧಾನಿ ನೆಹರೂ ಅವರು ಮೊದಲ ಬಾರಿಗೆ ಕೆಂಪುಕೋಟೆಯ ಮೇಲೆ ಭಾರತದ ಹೆಮ್ಮೆಯ ತ್ರಿವರ್ಣ ಧ್ವಜವನ್ನು ಹಾರಿಸಿ, ದೇಶವನ್ನು ಉದ್ದೇಶಿಸಿ ಮಾತನಾಡಿದರು.

24 ಗಂಟೆಗಳಲ್ಲಿ ಭಾರತೀಯರು ಅನುಭವಿಸಿದ ಮೂರು ಮುಖ್ಯ ಘಟನೆಗಳು

ಎರಡು ಶತಮಾನಗಳ ಗುಲಾಮಗಿರಿಯಿಂದ ಮುಕ್ತಿ ಸಿಕ್ಕಿದ ಭಾವನೆ.

ದೇಶ ವಿಭಜನೆ ಹಾಗೂ ಗಡಿಭಾಗದ ರಕ್ತಪಾತದಿಂದ ಹುಟ್ಟಿದ ನೋವು.

ಸ್ವಂತ ಆಡಳಿತ, ಪ್ರಜಾಪ್ರಭುತ್ವ ಮತ್ತು ಕಟ್ಟಕಡೆಯ ವ್ಯಕ್ತಿಗೂ ಸ್ವತಂತ್ರ ಸಿಗಬೇಕೆಂಬ ಬದ್ಧತೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುಷ್ಕರ್ ಮಲ್ಲಿಕಾರ್ಜುನಯ್ಯ ನಟನೆಯ ‘ವಿಜಯನಗರ ಸಾಮ್ರಾಜ್ಯ’ ಚಿತ್ರದಲ್ಲಿ ಹೊಸ ತಂತ್ರಜ್ಞಾನ – Kannada News | Pushkarah Mallikarjunaiah Acting Directorial debut Vijayanagara Samrajya Movie

ಪುಷ್ಕರ್ ಮಲ್ಲಿಕಾರ್ಜುನಯ್ಯ (Pushkarah Mallikarjunaiah) ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಸಾಹಸಕ್ಕೆ ಕೈ ಹಾಕುತ್ತಾರೆ. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕಿರಿಕ್ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’, ‘ಅವತಾರ ಪುರುಷ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸಿರುವ ಅವರು ಈಗ ಹೀರೋ ಆಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ನಾಯಕನಟ ಆಗಲು ಅವರು ಕಳೆದ ಮೂರ್ನಾಲ್ಕು ವರ್ಷಗಳಿಂದ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಈಗ ಅವರು ‘ವಿಜಯನಗರ ಸಾಮ್ರಾಜ್ಯ’ (Vijayanagara Samrajya) ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ನೂತನ ತಂತ್ರಜ್ಞಾನ ಬಳಸಲಾಗುತ್ತಿದೆ.

ಹೊಸ ತಂತ್ರಜ್ಞಾನದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ವರ್ಚುವಲ್ ಪ್ರೊಡಕ್ಷನ್ (ಅನ್ ರಿಯಲ್ ಇಂಜಿನ್ ಬಳಸಿ) ಚಿತ್ರೀಕರಿಸಲಾಗುತ್ತಿದೆ. ಈವರೆಗೆ ಕನ್ನಡ ಚಿತ್ರರಂಗದಲ್ಲಿ ಬಳಕೆ ಆಗದ ತಂತ್ರಜ್ಞಾನ ಇದಾಗಿದೆ. ದುಬೈ, ಮುಂಬೈ ಮೂಲದ ತಂತ್ರಜ್ಞರು ಈ ಸಿನಿಮಾಗಾಗಿ ಕಾರ್ಯ ನಿರ್ವಹಿಸಿದ್ದಾರೆ. ತುಂಬಾ ಮುಂದುವರಿದ ಟೆಕ್ನಾಲಜಿಯನ್ನು ಈ ಸಿನಿಮಾಕ್ಕೆ ಬಳಸಿರುವುದು ಔಟ್ ಪುಟ್ ನೋಡಿದಾಗ ತಿಳಿಯುತ್ತದೆ ಎಂದು ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರು ಹೇಳಿದ್ದಾರೆ.

‘ವಿಜಯನಗರ ಸಾಮ್ರಾಜ್ಯ’ ಸಿನಿಮಾಗೆ ಈಗಾಗಲೇ ಶೇ.70ರಷ್ಟು ಕೆಲಸಗಳು ಪೂರ್ಣಗೊಂಡಿವೆ. ವಿಶೇಷ ಎಂದರೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರೇ ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿ ಹಾಗೂ ನಿರ್ದೇಶನ ಮಾಡುವ ಜವಾಬ್ದಾರಿ ಹೊತ್ತು ಅವರು ಕಾರ್ಯನಿರತರಾಗಿದ್ದಾರೆ.

ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾದಲ್ಲೇ ಬೃಹತ್ ವೆಚ್ಚದ, ಕರುನಾಡ ಮಹಿಮೆ ಸಾರುವ ವಿಜಯನಗರ ಸಾಮ್ರಾಜ್ಯದ ವೈಭವವನ್ನು ತೆರೆಯ ಮೇಲೆ ಕಟ್ಟಿ ಕೊಡಲು ಪುಷ್ಕರ್ ಮಲ್ಲಿಕಾರ್ಜುನಯ್ಯ ಮುಂದಾಗಿದ್ದಾರೆ. ಎರಡು ಕಾಲಘಟ್ಟದಲ್ಲಿ ಈ ಕಥೆ ಸಾಗಲಿದೆ. ಹಂಪಿ ಸುತ್ತಮುತ್ತ ಹಾಗೂ ಬೃಹತ್ ಸೆಟ್ ನಿರ್ಮಿಸಿ ಚಿತ್ರೀಕರಿಸಲಾಗಿದೆ.

ಇದನ್ನೂ ಓದಿ: ನಾನಿ ವಿರುದ್ಧ ನಿರ್ಮಾಪಕ ಪುಷ್ಕರ್ ಕಿಡಿ; ಹಕ್ಕು ಪಡೆಯದೇ ಸಿನಿಮಾ ರಿಮೇಕ್ ಮಾಡಿದ ಆರೋಪ

ಸಿನಿಮಾ ಕುರಿತು ಪುಷ್ಕರ್ ಮಲ್ಲಿಕಾರ್ಜುನಯ್ಯ ಮಾತನಾಡಿದ್ದಾರೆ. ‘ಹಕ್ಕ ಬುಕ್ಕ ವಿದ್ಯಾರಣ್ಯರಿಂದ ಸ್ಥಾಪನೆಯಾದ ವಿಜಯನಗರ ಸಾಮ್ರಾಜ್ಯದ, 1565ರ ತಾಳಿಕೋಟೆ ಕದನದಲ್ಲಿ ಪತನವಾಗುವವರೆಗೂ ಸುಮಾರು 250 ವರ್ಷ ನಡೆದ ಕೆಲವು ಮಹತ್ತರ ಘಟನೆಗಳನ್ನು ಈ ಚಿತ್ರದಲ್ಲಿ ತೋರಿಸಲಿದ್ದೇನೆ. ದಕ್ಷಿಣ ಭಾರತವನ್ನು 250 ವರ್ಷ ಒಂದು ಸಾಮ್ರಾಜ್ಯ ಹೇಗೆ ಕಾಪಾಡಿಕೊಂಡು ಬಂತು ಎಂಬುದು ಒಂದು ಅಂಶವಾದರೆ, 1770ರಲ್ಲಿ ನಡೆಯುವ ಒಂದು ಘಟನೆ ಪ್ಲಾಶ್ ಬ್ಯಾಕ್ ನಲ್ಲಿ ಬರುತ್ತದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ – Kannada News | Portfolios allocated to 19 newly sworn in Karnataka Ministers, here Is List

ಬೆಂಗಳೂರು, (ಆಗಸ್ಟ್ 11):  ತೀವ್ರ ಕುತೂಹಲ ಮೂಡಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಗೊಂದಲ ಕೊನೆಗೂ ಬಗೆಹರಿದಿದೆ.  ಎರಡನೇ ಹಂತದ ಸಂಪುಟ ಪುನಾರಚನೆಯಲ್ಲಿ ಡಿಕೆ ಶಿವಕುಮಾರ್ ಕ್ಯಾಬಿನೆಟ್ ಸೇರಿದ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೌದು….ಆಗಸ್ಟ್ 3ರಂದು ಸಂಪುಟ ಪುನಾರಚನೆ (Karnataka Cabinet Expansion)  ವೇಳೆ ಪ್ರಮಾಣವಚನ  ಸ್ವೀಕರಿಸಿದ  19 ನೂತನ ಸಚಿವರಿಗೆ ಖಾತೆ (Portfolios) ನೀಡಬೇಕೆಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಟ್ಟಿಯನ್ನು ಅಂತಿಮಗೊಳಿಸಿದ್ದು, ರಾಜಭವನದ ಅಂಕಿತ ಹಾಗೂ ಸರ್ಕಾರದ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

ಖಾತೆ ಹಂಚಿಕೆಗಾಗಿ ಸಚಿವ ಆಕಾಂಕ್ಷಿಗಳು ಹಾಗೂ ಹಿರಿಯ ನಾಯಕರು ನಡೆಸುತ್ತಿದ್ದ ಕಸರತ್ತು, ದೆಹಲಿ ಮಟ್ಟದ ಸಭೆಗಳು ಹಾಗೂ ಮುಖ್ಯಮಂತ್ರಿಗಳ ಜೊತೆಗಿನ ಸುದೀರ್ಘ ಚರ್ಚೆಗಳ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರಮುಖ ಇಲಾಖೆಗಳಿಗೆ ಅನುಭವ ಹಾಗೂ ಪ್ರಾದೇಶಿಕ ಸಮತೋಲನವನ್ನು ಆಧರಿಸಿ ನಾಯಕರಿಗೆ ಜವಾಬ್ದಾರಿ ನೀಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನೂ ಸಹ ಬದಲಾವಣೆ ಮಾಡಲಾಗಿದೆ.

ಯಾರಿಗೆ ಯಾವ ಖಾತೆ?

ಲಕ್ಷ್ಮಣ ಸವದಿ- ಸಹಕಾರ ಇಲಾಖೆ

ರಾಮಲಿಂಗರೆಡ್ಡಿ-ಅರಣ್ಯ (ಈ ಹಿಂದೆ ಜಲ ಸಂಪನ್ಮೂಲ)

ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ

ಸಂತೋಷ್ ಲಾಡ್- ಕಾರ್ಮಿಕ ಇಲಾಖೆ

ಯು.ಟಿ.ಖಾದರ್-ಆರೋಗ್ಯ ಮತ್ತು ಕಲ್ಯಾಣ ಇಲಾಖೆ

ಶಿವರಾಜ್ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ

ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ

ಎಚ್‌.ಸಿ.ಬಾಲಕೃಷ್ಣ-ಪೌರಾಡಳಿತ

ಕೆ.ಎಸ್‌.ಬಸವಂತಪ್ಪ-ಮುಜರಾಯಿ, ಮೀನುಗಾರಿಕೆ

ಎನ್‌.ಚಲುವರಾಯಸ್ವಾಮಿ- ಕೃಷಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಎಸ್‌.ಎಸ್‌.ಮಲ್ಲಿಕಾರ್ಜುನ್‌- ಗಣಿ ಮತ್ತು ಭೂವಿಜ್ಞಾನ ಇಲಾಖೆ

ಬಿ.ನಾಗೇಂದ್ರ-ಯೋಜನೆ & ಸಾಂಖ್ಯಿಕ ಇಲಾಖೆ

ಪಿ.ಎಂ.ನರೇಂದ್ರಸ್ವಾಮಿ-ಕೃಷಿ ಇಲಾಖೆ

ಸಿ.ಪುಟ್ಟರಂಗಶೆಟ್ಟಿ-ಪಶು ಸಂಗೋಪನಾ ಇಲಾಖೆ, ರೇಷ್ಮೆ

ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ

ರಿಜ್ವಾನ್‌ ಅರ್ಷದ್‌-ಆಹಾರ & ನಾಗರಿಕ ಪೂರೈಕೆ ಇಲಾಖೆ

ರುದ್ರಪ್ಪ ಲಮಾಣಿ- ಸಕ್ಕರೆ ಮತ್ತು ಜವಳಿ

ಶಿವಲಿಂಗೇಗೌಡ-ಅಬಕಾರಿ ಖಾತೆ

ವಿಜಯಾನಂದ ಕಾಶಪ್ಪನವರ್‌-ಸಣ್ಣ ಕೈಗಾರಿಕೆ

ಜಮೀರ್‌ ಅಹ್ಮದ್‌ ಖಾನ್-ವಸತಿ

ಅಜಯ್ ಸಿಂಗ್-ಸಣ್ಣ ನೀರಾವರಿ, ಐಟಿ ಬಿಟಿ

Published On – 5:36 pm, Wed, 12 August 26

Source link

Exit mobile version