ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್ – Kannada News | Bigg Boss Kannada 11 Contestant Dhanraj Achar Reveals Inside Details of Contestants Remuneration

ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಎಷ್ಟು ಸಂಭಾವನೆ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಈ ಪ್ರಶ್ನೆಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಧನರಾಜ್ ಆಚಾರ್ ಕೊನೆಗೂ ಉತ್ತರಿಸಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು ಸಂಭಾವನೆಯ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಧನರಾಜ್ ನೀಡಿರುವ ಈ ಮಾಹಿತಿ ಅನೇಕರಿಗೆ ತೀವ್ರ ಅಚ್ಚರಿ ಮೂಡಿಸಿದೆ. ಬಿಗ್ ಬಾಸ್ ಮನೆಯಿಂದ ದೊಡ್ಡ ಮಟ್ಟದಲ್ಲಿ ಹಣ…

Read More

ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ! – Kannada News | Revenge Plot: Vasundhara Injects HIV into Ex Lover’s Wife in Kurnool

ಆಂಧ್ರಪ್ರದೇಶ, ಜಿ.26: ಕರ್ನೂಲ್ ಪಟ್ಟಣದಲ್ಲಿ ಬಿ.ಬಿ. ವಸುಂಧರಾ (40) ಎಂಬ ಮಹಿಳೆ, ತನ್ನ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್‌ಐವಿ (HIV) ಇಂಜೆಕ್ಟ್ ಮಾಡುವ ಮೂಲಕ ಕೊಲೆಗೆ ಸಂಚು ರೂಪಿಸಿದ್ದಾಳೆ. ಸಂತ್ರಸ್ತ ಮಹಿಳೆಯು ವೃತ್ತಿಯಲ್ಲಿ ವೈದ್ಯೆಯಾಗಿದ್ದು (ಸಹಾಯಕ ಪ್ರಾಧ್ಯಾಪಕಿ), ಈಕೆಯ ಪತಿ ಕೂಡ ವೈದ್ಯರಾಗಿದ್ದಾರೆ. ವಸುಂಧರಾ ತನ್ನ ಮಾಜಿ ಪ್ರಿಯಕರ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದನ್ನು ಸಹಿಸಲಾರದೆ, ಅವರ ಸಂಸಾರವನ್ನು ಹಾಳುಮಾಡಲು ಈ ಭೀಕರ ಸಂಚು ರೂಪಿಸಿದ್ದಳು. ಜನವರಿ 9, 2026 ರಂದು ಸಂತ್ರಸ್ತ ವೈದ್ಯೆ ಸ್ಕೂಟರ್‌ನಲ್ಲಿ ಮನೆಗೆ…

Read More

RRB Recruitment: ರೈಲ್ವೆ ನೇಮಕಾತಿ; 312 ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB Recruitment 2025: 312 Specialist Posts – Apply Online!

ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಮುಖ್ಯ ಕಾನೂನು ಸಹಾಯಕ, ಸಾರ್ವಜನಿಕ ಅಭಿಯೋಜಕ, ಜೂನಿಯರ್ ಅನುವಾದಕ, ಹಿರಿಯ ಪ್ರಚಾರ ನಿರೀಕ್ಷಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ವೈಜ್ಞಾನಿಕ ಸಹಾಯಕ ತರಬೇತಿ ಇತ್ಯಾದಿ ಒಟ್ಟು 312 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್,…

Read More

ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಏಳು ಹೆಡೆ ಸರ್ಪದ ಕಾವಲು? – Kannada News | Gadag: Treasure Rumours Spread to Betageri After Lakkundi Discovery

ಗದಗ, ಜನವರಿ 27: ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬಳಿಕ ರಾಜ್ಯದಾದ್ಯಂತ ನಿಧಿ ವದಂತಿಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಬೆಟಗೇರಿಯಲ್ಲಿರುವ ನಿಗೂಢ ಗವಿಯೊಂದರಲ್ಲಿ ನಿಧಿ ಅಡಗಿದೆ ಎಂಬ ಮಾತುಗಳು ಹೊಸ ಚರ್ಚೆಗೆ ಕಾರಣವಾಗಿದೆ. ಗ್ರಾಮಸ್ಥರ ಪ್ರಕಾರ, ಈ ನಿಧಿಯನ್ನು ಏಳು ಹೆಡೆಯ ಸರ್ಪವೊಂದು ಕಾಯುತ್ತಿದೆಯಂತೆ. ಹಾವು ಹೊರಬಂದಾಗ ಸಾಂಬ್ರಾಣಿ ವಾಸನೆ ಬರುತ್ತದೆ. ತಮ್ಮ ತಂದೆ ಮತ್ತು ಅಜ್ಜಂದಿರು ಕೂಡ ಇಲ್ಲಿ ನಿಧಿ ಇರುವುದನ್ನು ನೋಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ದೊಡ್ಡ ಗಾತ್ರದ ಹಾವುಗಳು ಇಲ್ಲೇ ಸುತ್ತಾಡಿಕೊಂಡಿರುತ್ತವೆ ಎಂದೂ ತಿಳಿಸಿದ್ದಾರೆ….

Read More

ಮನೆಗೆ ನುಗ್ಗಿ ಮೀನು, ಮಾಂಸದೂಟ ಕದಿಯೋ ಮಂಗನ ಕಾಟಕ್ಕೆ ಜನ ಹೈರಾಣು: ಮಂಗಳೂರಿನಲ್ಲೊಂದು ನಾನ್ ವೆಜ್ ಪ್ರಿಯ ಕೋತಿ! – Kannada News | Mangaluru: Meet the Non Veg Lover Monkey Stealing Meat and Fish Dishes From Houses in Mannagudda

ಮಂಗಳೂರು, ಜೂನ್ 23: ಯಾತ್ರಾ ಸ್ಥಳಗಳಲ್ಲಿ ಅಥವಾ ಪ್ರವಾಸಿ ತಾಣಗಳಲ್ಲಿ ಮಂಗಗಳು ಜನರಿಂದ ಮೊಬೈಲ್, ವಾಟರ್ ಬಾಟಲ್ ಕಸಿದುಕೊಂಡು ಓಡಿಹೋಗುವ ಬಗ್ಗೆ ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳು ವೈರಲ್ ಆಗುತ್ತಿರುವುದನ್ನು ನೋಡಿರುತ್ತೇವೆ. ಆದರೆ, ಸಸ್ಯಾಹಾರಿಯಾಗಿಯೇ ಗುರುತಿಸಿಕೊಂಡಿರುವ ಮಂಗ (Monkey) ಮಾಂಸಹಾರಕ್ಕಾಗಿ ಮನೆಗೆ ನುಗ್ಗುವುದನ್ನು ಎಲ್ಲಾದರೂ ಕೇಳಿದ್ದೀರಾ? ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangalore) ಮಣ್ಣಗುಡ್ಡೆ ಪ್ರದೇಶದಲ್ಲಿ ನಾನ್ ವೆಜ್ (Non Veg) ಪ್ರಿಯ ಕೋತಿಯೊಂದು ಮನೆಗಳಿಗೆ ನುಗ್ಗಿ ಮಾಂಸದೂಟ ಕದ್ದುಕೂಂಡು ಹೋಗುತ್ತಿದ್ದು, ಜನರ ನಿದ್ದೆಗೆಡಿಸಿದೆ….

Read More

IPL: ಧೋನಿ, ರೋಹಿತ್, ಕೊಹ್ಲಿ.. ಅತಿ ಹೆಚ್ಚು ರನ್ ಗಳಿಸಿದ ನಾಯಕ ಯಾರು ಗೊತ್ತಾ?

ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದೆ. ಕೊಹ್ಲಿ 2011 ರಿಂದ 2023 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು. ಈ ಅವಧಿಯಲ್ಲಿ ನಾಯಕನಾಗಿ 143 ಪಂದ್ಯಗಳನ್ನಾಡಿದ್ದ ಕೊಹ್ಲಿ 4994 ರನ್ ಬಾರಿಸಿದ್ದರು. ಇದರಲ್ಲಿ ಐದು ಶತಕಗಳು ಮತ್ತು 37 ಅರ್ಧಶತಕಗಳನ್ನು ಸೇರಿದ್ದವು. ಆದರೂ ಕೊಹ್ಲಿಗೆ ತಂಡವನ್ನು ಟ್ರೋಫಿ ಗೆಲುವಿನತ್ತ ಮುನ್ನಡೆಸಲು ಸಾಧ್ಯವಾಗಲಿಲ್ಲ. ಎರಡನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ…

Read More

ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – Kannada News | 4 Killed In Massive Landslide In Nagaland, More Feared Dead

ಗುವಾಹಟಿ, ಜುಲೈ 19: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ (Landlside) ಸಂಭವಿಸಿದ್ದು, ಮಕ್ಕಳು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ದಿಢೀರ್ ಪ್ರವಾಹವೂ ಉಂಟಾಗಿದೆ. ಭೂಕುಸಿತದ ಭೀಕರತೆಗೆ ಹಲವು ಮನೆಗಳು ಕೊಚ್ಚಿಹೋಗಿವೆ. ಮಣ್ಣಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿರಬಹುದಾದ ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಭೂಕುಸಿತದ ಬೆನ್ನಲ್ಲೇ ಈ ಪ್ರದೇಶಕ್ಕೆ ಭಾರಿ ಪ್ರಮಾಣದ ನೀರು ನುಗ್ಗುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಗಿದೆ ಎಂದು ಪೊಲೀಸ್ ಮೂಲಗಳು…

Read More

ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್ – Kannada News | Bellari Violence: Minister Zameer Hands Over 25 Lakh Compensation to Rajashekhar Family

ಬಳ್ಳಾರಿ, ಜನವರಿ 03: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ್​​ ಮನೆಗೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿದ್ದಾರೆ. ನಿಮ್ಮೊಂದಿಗೆ ನಮ್ಮ ಸರ್ಕಾರ ಇರುತ್ತೆ, ನಮ್ಮ ಶಾಸಕರು ಇದ್ದಾರೆ ಎಂದು ಧೈರ್ಯ ತುಂಬಿದ್ದಾರೆ. ಸಚಿವ ಜಮೀರ್‌ಗೆ ಶಾಸಕರಾದ ಭರತ್ ರೆಡ್ಡಿ ಮತ್ತು ಗಣೇಶ್​ ಸಾಥ್ ನೀಡಿದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ….

Read More

ಭತ್ತ ಬಿತ್ತನೆ ಕುಂಠಿತವಾಗಿರುವ ಬೆನ್ನಲ್ಲೇ ಅಕ್ಕಿ ದರ ಗಗನಕ್ಕೆ: ಶೇ.35ರಷ್ಟು ಬೆಲೆ ಹೆಚ್ಚಳ – Kannada News | Kitchen Budget Hits: Rice Prices Soar by 35% in Karnataka Amid Deficit Rainfall and Poor Paddy Sowing

ಬೆಂಗಳೂರು, ಆಗಸ್ಟ್​​ 02: ಕರ್ನಾಟಕದಲ್ಲಿ ಮಳೆಯ ಕೊರತೆಯ ಎಫೆಕ್ಟ್ ಇದೀಗ ಜನರ ಊಟದ ತಟ್ಟೆಯ ಮೇಲೂ ಬಿದ್ದಿದೆ. ಭತ್ತ ಬಿತ್ತನೆ ಕುಂಠಿತವಾಗಿರುವ ಬೆನ್ನಲ್ಲೇ ಅಕ್ಕಿ ದರ ಏಕಾಏಕಿ ಗಗನಕ್ಕೇರಿದ್ದು, ಕಳೆದ ಒಂದು ದಶಕದಲ್ಲೇ ಕಾಣದಷ್ಟು ಬೆಲೆಯಲ್ಲಿ ಹೆಚ್ಚಳವಾಗಿದೆ. ಸ್ಟೀಮ್, ಸೋನಾ ಮಸೂರಿ ಸೇರಿದಂತೆ ಬಹುತೇಕ ಎಲ್ಲಾ ವಿಧದ ಅಕ್ಕಿಗಳು ದುಬಾರಿಯಾಗಿದ್ದು, ಶೇ.35ರಷ್ಟು ದರ ಏರಿಕೆಯಾಗಿದೆ. ಹೀಗಾಗಿ ಗ್ರಾಹಕರು ಮಾತ್ರವಲ್ಲ, ವ್ಯಾಪಾರಿಗಳೂ ಸಂಕಷ್ಟ ಎದುರಿಸುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಅಕ್ಕಿ ದರ ಎಷ್ಟು ಏರಿಕೆ ಅಕ್ಕಿಯ ವಿಧ ಹಿಂದಿನ…

Read More

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar: Manjra River in Bidar Faces Crisis; Illegal Sand Mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More