Headlines

IPL 2026: ಆರ್‌ಸಿಬಿ ಕ್ವಾಲಿಫೈಯರ್ ಆಡದೆಯೇ ಫೈನಲ್ ತಲುಪಬಹುದು..! ಹೇಗೆ ಗೊತ್ತಾ? – Kannada News | IPL 2026 Qualifier 1: RCB’s Direct Final Path! Rain Rule and Points Table Advantage Explained

ಐಪಿಎಲ್ 2026 (IPL 2026) ರ ಸೀಸನ್ ಅಂತಿಮ ಹಂತಕ್ಕೆ ತಲುಪಿದೆ. ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ (RCB vs GT) ಇಂದು ಧರ್ಮಶಾಲಾದಲ್ಲಿ ಮೊದಲ ಕ್ವಾಲಿಫೈಯರ್ ಆಡಲು ಸಿದ್ಧವಾಗಿವೆ. ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡಕ್ಕೆ ಮತ್ತೊಂದು ಅವಕಾಶವಿದ್ದರೂ (ಕ್ವಾಲಿಫೈಯರ್-2), ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಇರಾದೆಯಲ್ಲಿವೆ….

Read More

ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಯುಎಸ್ ಕಾರ್ಯದರ್ಶಿ ರೂಬಿಯೋ – Kannada News | US Secretary Marco Rubio visits Taj Mahal With Wife During India Visit

ಆಗ್ರಾ, ಮೇ 26: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ತಮ್ಮ ಪತ್ನಿ ಜೀನೆಟ್ ರೂಬಿಯೋ ಅವರೊಂದಿಗೆ ಆಗ್ರಾದಲ್ಲಿರುವ ಐತಿಹಾಸಿಕ ತಾಜ್ ಮಹಲ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ತಾಜ್ ಮಹಲ್ ಸೌಂದರ್ಯವನ್ನು ಹೊಗಳಿದ ರೂಬಿಯೋ ಈ ಸ್ಮಾರಕವನ್ನು ವಿಶ್ವದ ಅತ್ಯಮೂಲ್ಯ ನಿಧಿಗಳಲ್ಲಿ ಒಂದೆಂದು ಶ್ಲಾಘಿಸಿದ್ದಾರೆ. ತಾಜ್ ಮಹಲ್‌ನಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ಕಳೆದ ದಂಪತಿ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ (Visitors Book) “ವಿಶ್ವದ ನಿಜವಾದ ನಿಧಿಗಳಲ್ಲಿ ಒಂದನ್ನು ವೀಕ್ಷಿಸಲು ನಮಗೆ ಅವಕಾಶ…

Read More

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ; ತಿಂಗಳಿಗೆ 9,000ರೂ. ಸ್ಟೈಫಂಡ್‌ನೊಂದಿಗೆ ಬಂಪರ್ ಉದ್ಯೋಗಾವಕಾಶ! – Kannada News | Government Internship 2026: Paid Opportunities and Skill Development for Youth

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆImage Credit source: Pinterest ದೇಶದ ಯುವಜನತೆಗೆ ಉದ್ಯೋಗ ಕೌಶಲ್ಯ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ (PM Internship Scheme 2026) ಅನ್ನು ಮತ್ತಷ್ಟು ಆಕರ್ಷಕ ನಿಯಮಗಳೊಂದಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿ ದೇಶದ ಪ್ರಮುಖ 500 ಕ್ಕೂ ಹೆಚ್ಚು ಕಂಪನಿಗಳಲ್ಲಿ ಯುವಕ-ಯುವತಿಯರಿಗೆ ಇಂಟರ್ನ್‌ಶಿಪ್ (ತರಬೇತಿ) ಅವಕಾಶ ಸಿಗಲಿದ್ದು, ಪ್ರತಿ ತಿಂಗಳು ಭಾರಿ ಸ್ಟೈಫಂಡ್ ಕೂಡ ಲಭ್ಯವಾಗಲಿದೆ. ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ಹಾಗೂ ಪದವಿ…

Read More

‘ವಿಜಯ್ ಅತ್ಯಂತ ಸಮರ್ಥ ಮುಖ್ಯಮಂತ್ರಿ’: ಮುಕ್ತಕಂಠದಿಂದ ಹೊಗಳಿದ ನಟ ವಿಶಾಲ್ – Kannada News | CM Vijay allows Five shows a day for new Tamil films in TN Actor Vishal reacts

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳು ಚಿತ್ರರಂಗದ ನೆರವಿಗಾಗಿ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಚಿತ್ರರಂಗದಲ್ಲಿ ಎದುರಾಗಿರುವ ಪ್ರಸ್ತುತ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಚಿತ್ರೋದ್ಯಮಿಗಳು ಇತ್ತೀಚೆಗಷ್ಟೇ ಸಿಎಂ ಅವರಿಗೆ ಕೆಲವು ಮನವಿಗಳನ್ನು ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಇನ್ಮುಂದೆ ರಾಜ್ಯದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮೊದಲ ವಾರದಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಚಿತ್ರಮಂದಿರಗಳಿಗೆ ಅನುಮತಿ ನೀಡಿದ್ದಾರೆ. ದಳಪತಿ ವಿಜಯ್ ಅವರ ಈ ಮಹತ್ವದ ನಿರ್ಧಾರವನ್ನು ಕಾಲಿವುಡ್…

Read More

ಸಲ್ಮಾನ್ ಖಾನ್ ಖಾಸಗಿ ವಿಡಿಯೋ ವೈರಲ್; ‘ಇದಕ್ಕಿಂತ ಕೆಟ್ಟದ್ದು ಬೇರೇನೂ ಇಲ್ಲ’ ಎಂದ ಫ್ಯಾನ್ಸ್ – Kannada News | Salman Khan secret private video leak raises privacy and security concerns

ಖ್ಯಾತ ನಟ ಸಲ್ಮಾನ್ ಖಾನ್ ಅವರನ್ನು ರಹಸ್ಯವಾಗಿ ಚಿತ್ರೀಕರಿಸಲಾದ ವಿಡಿಯೋವೊಂದು (Salman Khan Private Video) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇದರಿಂದ ಸೆಲೆಬ್ರಿಟಿಗಳ ಖಾಸಗಿತನ ಮತ್ತು ಭದ್ರತೆಯ ಕುರಿತು ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಸಣ್ಣ ವಿಡಿಯೋ ಕ್ಲಿಪ್‌ನಲ್ಲಿ, ಸಲ್ಮಾನ್ ಖಾನ್ (Salman Khan) ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಊಟದ ಮೇಜಿನ ಬಳಿ ಊಟ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋದ ಸ್ವರೂಪವನ್ನು ಗಮನಿಸಿದರೆ, ಇದು ಅವರಿಗೆ ತಿಳಿಯದಂತೆ ರಹಸ್ಯವಾಗಿ ಚಿತ್ರೀಕರಿಸಲಾಗಿದೆ ಎಂಬುದು…

Read More

ಜಮೀನು ವಿವಾದ: ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ

ಧಾರವಾಡ, ಮೇ 26: ಜಮೀನು ವ್ಯಾಜ್ಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿದ್ದು, ಈ ವೇಳೆ ಹುಬ್ಬಳ್ಳಿಯ ಉದ್ಯಮಿ ಫೆಲೋಮಿನಾ ಅಂಗರಕ್ಷಕರಿಂದ ಯುವಕನ ಕಾಲಿಗೆ ಫೈರಿಂಗ್ ಮಾಡಿರುವಂತಹ ಘಟನೆ ಧಾರವಾಡ ಹೊರವಲಯದ ತ್ರಿಬಲ್ ಐಟಿ ಬಳಿ ನಡೆದಿದೆ. ಅಂಗರಕ್ಷಕರಿಂದ 8 ಸುತ್ತು ಫೈರಿಂಗ್​ ಮಾಡಲಾಗಿದ್ದು, 24 ವರ್ಷದ ವಿಠ್ಠಲ್ ವಾಲೀಕಾರ್ ಕಾಲಿಗೆ ಗುಂಡು ತಗುಲಿದೆ. ಸದ್ಯ ಗಾಯಾಳು ವಿಠ್ಠಲ್​ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಸತಿ ನಿವೇಶನ ಮಾಡಲು ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಮ್ಮ…

Read More

ಇದೇ ಕರ್ನಾಟಕ ಪೊಲೀಸ್ ತಾಕತ್ತು: ಇಡೀ ದೇಶದೆಲ್ಲೆಡೆ 100ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಖದೀಮ ಬೆಂಗಳೂರಿನಲ್ಲಿ ಲಾಕ್ – Kannada News | Karnataka Police Arrest Notorious Thief Linked to Over 100 Thefts Across India in Bengaluru

ಸತ್ತಿಬಾಬು ಅಲಿಯಾಸ್​​ ಸ್ಪೈಡರ್ ಸತೀಶ್, ನರೇಂದರ್, ಸುನಿಲ್ ಕುಮಾರ್Image Credit source: tv9 kannada ಬೆಂಗಳೂರು, ಮೇ 26: ನಗರದಲ್ಲಿ ಮನೆ ಮತ್ತು ಜ್ಯುವೆಲ್ಲರಿ ಶಾಪ್​​​ನಲ್ಲಿ ಕಳ್ಳತನ (theft) ಮಾಡಿದ್ದ ಮೂವರು ಆರೋಪಿಗಳನ್ನು ವೈಟ್ ಫೀಲ್ಡ್ ಪೊಲೀಸರು (Whitefield police) ಬಂಧಿಸಿದ್ದಾರೆ. ಸುನಿಲ್ ಕುಮಾರ್, ಸತ್ತಿಬಾಬು ಅಲಿಯಾಸ್​​ ಸ್ಪೈಡರ್ ಸತೀಶ್, ನರೇಂದರ್ ಬಂಧಿತರು. ಕಾರಿನಲ್ಲಿ ಬಂದು ಕಳ್ಳತನ ಮಾಡಿ ಗ್ಯಾಂಗ್​ ಎಸ್ಕೇಪ್ ಆಗಿತ್ತು. ಎರಡು ತಿಂಗಳ ಅಂತರದಲ್ಲಿ ಖದೀಮರು ಕೃತ್ಯವೆಸಗಿದ್ದರು. ಸದ್ಯ ಆರೋಪಿಗಳಿಂದ 1 ಕೋಟಿ ರೂ…

Read More

ಕ್ವಾಡ್ ಸಭೆ: ಇಂಡೋ-ಪೆಸಿಫಿಕ್ ಇಂಧನ ಭದ್ರತೆ, ಸಮುದ್ರ ಮಾರ್ಗ ಸಂರಕ್ಷಣೆಗೆ ನಿರ್ಧಾರ – Kannada News | Quad Summit: Indo Pacific Energy Security & Sea Route Protection Decisions

ನವದೆಹಲಿ, ಮೇ 26: ಇಂದು ಮಂಗಳವಾರ ಇಲ್ಲಿ ನಡೆದ ಅಮೆರಿಕ, ಜಪಾನ್, ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳನ್ನೊಳಗೊಂಡ ‘ಕ್ವಾಡ್’ (Quad) ಒಕ್ಕೂಟದ ವಿದೇಶಾಂಗ ಸಚಿವರ ಉನ್ನತ ಮಟ್ಟದ ಸಭೆಯಲ್ಲಿ ಹಿಂದೂ-ಮಹಾಸಾಗರ ಮತ್ತು ಪೆಸಿಫಿಕ್ (Indo-Pacific) ವಲಯದಲ್ಲಿ ಮುಕ್ತ ವ್ಯಾಪಾರ, ಇಂಧನ ಭದ್ರತೆ ಹಾಗೂ ಸಮುದ್ರ ಮಾರ್ಗಗಳ ರಕ್ಷಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ, ಆಸ್ಟ್ರೇಲಿಯಾದ ವಿದೇಶಾಂಗ…

Read More

ಏನಿದು ಅಬ್ರಹಾಂ ಒಪ್ಪಂದ? ಇದಕ್ಕೆ ಸಹಿ ಹಾಕಿದರೆ ಪಾಕಿಸ್ತಾನದ ಪಾಸ್​ಪೋರ್ಟ್ ಏಕೆ ಬದಲಾಗುತ್ತದೆ? – Kannada News | Why Pakistan should Need New Passports If The Country Signs Abraham Accords after Donald Trumps pressure

ಇಸ್ಲಮಾಬಾದ್, ಮೇ 26: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಇಚ್ಛೆಯಂತೆ ಪಾಕಿಸ್ತಾನವು ಇಸ್ರೇಲ್ ಜೊತೆ ಸಂಬಂಧವನ್ನು ಸುಧಾರಿಸುವ ‘ಅಬ್ರಹಾಂ ಒಪ್ಪಂದಕ್ಕೆ’ (Abraham Accords) ಸಹಿ ಹಾಕಿದರೆ ಪಾಕಿಸ್ತಾನದ ಪ್ರಜೆಗಳಿಗೆ ಹೊಸ ಪಾಸ್‌ಪೋರ್ಟ್‌ಗಳನ್ನು ಪಡೆಯಬೇಕಾಗುತ್ತದೆ ಎಂಬ ಚರ್ಚೆ ಅಂತಾರಾಷ್ಟ್ರೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪಾಕಿಸ್ತಾನದ ಪಾಸ್‌ಪೋರ್ಟ್‌ನಲ್ಲಿರುವ ಇಸ್ರೇಲ್ ವಿರೋಧಿ ನಿಯಮ ಮತ್ತು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ನೀಡಿರುವ ಇತ್ತೀಚಿನ ಹೇಳಿಕೆಯೇ ಇದಕ್ಕೆ ಕಾರಣ. ಪ್ರಮುಖ ಮುಖ್ಯಾಂಶಗಳು: ಅಬ್ರಹಾಂ ಒಪ್ಪಂದಕ್ಕೆ ಸಹಿ…

Read More

ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ಬ್ರೇಕ್​​: ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: Home Ministry Halts Hate Speech Bill, Cites Existing BNS Provisions

ರಾಜ್ಯ ಸರ್ಕಾರಕ್ಕೆ ಹಿನ್ನಡೆImage Credit source: Tv9 Kannada ನವದೆಹಲಿ/ಬೆಂಗಳೂರು, ಮೇ 26: ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್​​ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್​​ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ಹೇಳಿದೆ. ಈ ಕುರಿತ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಇದೇ ವರ್ಷ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆಗೆ…

Read More