ಬಾಗಲಕೋಟೆ, ಮಾರ್ಚ್ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ ಇದೆ. ಜನ ಅವರಿಗೆ ಮತ ಹಾಕಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ಐದು ದಿನಗಳ ಕಾಲ ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲು ಬರುತ್ತಿದ್ದು, ಇದು ಪಕ್ಷಕ್ಕೆ ಮತ್ತಷ್ಟು ಬಲ ತರಲಿದೆ ಎಂದು ತಿಳಿಸಿದ್ದಾರೆ.
ಚೆನ್ನೈ, ಮಾರ್ಚ್ 29: ತಮಿಳುನಾಡು ಚುನಾವಣೆ(Tamil Nadu Election)ಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜತೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದ್ದಾರೆ.
ಸಿ ಜೋಸೆಫ್ ವಿಜಯ್ ಅವರು ಚೆನ್ನೈನ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವದಿಂದ ಸ್ಪರ್ಧಿಸಲಿದ್ದಾರೆ, ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೂ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಟಿ ನಗರದಿಂದ ಎನ್ ಆನಂದ್, ಮೈಲಾಪುರದಿಂದ ವೆಂಕಟ್ ರಾಮನ್, ವಿಲ್ಲಿವಕ್ಕಂನಿಂದ ಆಧವ್ ಅರ್ಜುನ, ಗೋಬಿಚೆಟ್ಟಿಪಾಳ್ಯಂನಿಂದ ಕೆಎ ಸೆಂಗ್ಕೊಟ್ಟೈಯನ್, ತಿರುಚೆಂಗೋಡ್ನಿಂದ ಕೆ ಜಿ ಅರುಣ್ರಾಜ್ ಮತ್ತು ತಿರುಪ್ಪರಂಕುಂದ್ರಂನಿಂದ ಸಿಟಿಆರ್ ನಿರ್ಮಲ್ ಕುಮಾರ್ ಈ ಪಟ್ಟಿಯಲ್ಲಿದ್ದಾರೆ.
ಥೌಸಂಡ್ ಲೈಟ್ಸ್ನಿಂದ ಜೆಸಿಡಿ ಪ್ರಭಾಕರ್, ಕೊಳತ್ತೂರಿನಿಂದ ವಿಎಸ್ ಬಾಬು ಮತ್ತು ಆರ್ಕೆ ನಗರದ ಡಾ. ಮಾರಿಯಾ ವಿಲ್ಸನ್ ಅವರುಗಳು ಹೆಸರಿಸಲಾದ ಇತರ ಅಭ್ಯರ್ಥಿಗಳಾಗಿದ್ದಾರೆ. ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುವವರನ್ನು ನಾನು ಆಯ್ಕೆ ಮಾಡಿದ್ದೇನೆ ಎಂದು ಹೇಳಿದ್ದು, ಒಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಸ್ಪರ್ಧೆಯನ್ನು ನೇರ ಹೋರಾಟ ಎಂದು ಹೇಳುತ್ತಾ, ಇದು ನಮ್ಮ ಮತ್ತು ಸ್ಟಾಲಿನ್ ಸರ್ ಮೈತ್ರಿಕೂಟದ ನಡುವೆ ಮಾತ್ರ ಎಂದು ವಿಜಯ್ ಹೇಳಿದರು.
ಉದ್ಯೋಗ ಪಡೆಯಲು ಸಾಧ್ಯವಾಗದ 29 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಿಂಗಳಿಗೆ 4,000 ರೂ. ಮತ್ತು ಡಿಪ್ಲೊಮಾ ಹೊಂದಿರುವವರಿಗೆ 2,500 ರೂ. ನೀಡುವುದಾಗಿ ಪಕ್ಷ ಭರವಸೆ ನೀಡಿತು. 12 ನೇ ತರಗತಿಯಿಂದ ಪಿಎಚ್ಡಿ ಹಂತದವರೆಗೆ 20 ಲಕ್ಷ ರೂ.ಗಳವರೆಗೆ ಮೇಲಾಧಾರ ರಹಿತ ಸಾಲ ಖಾತರಿಗಳನ್ನು ಸಹ ಇದು ಪ್ರಸ್ತಾಪಿಸಿದೆ.
ನಾವು ಎಂದಿಗೂ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ ಅಥವಾ ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ. ನಾವು ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸುತ್ತೇವೆ, ಮಾದಕವಸ್ತು ಮುಕ್ತ ತಮಿಳುನಾಡನ್ನು ಸೃಷ್ಟಿಸುತ್ತೇವೆ ಮತ್ತು ಕಠಿಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತೇವೆ ಎಂದು ಭರವಸೆ ನೀಡಿದರು. ನಾನು ನಿಮಗೆ ಭರವಸೆ ನೀಡುತ್ತೇನೆ, ನಾವು ಎಂದಿಗೂ ಜನರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುವುದಿಲ್ಲ. ಇದು ನನ್ನ ಭರವಸೆ. ನಮಗೆ ಒಂದು ಅವಕಾಶ ಕೊಟ್ಟು ನೋಡಿ ಎಂದರು.
ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಶನ್ನ ಬಹುನಿರೀಕ್ಷಿತ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಘೋಷಿಸಿದಂತೆ ಏಪ್ರಿಲ್ 10ರಂದು ತೆರೆಗೆ ಬರಬೇಕಿದ್ದ ಈ ಚಿತ್ರ, ಈಗ ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ ಎಂಬ ಮಾಹಿತಿ ಕೇಳಿಬಂದಿದೆ. ಅಂದಹಾಗೆ, ಈ ಬದಲಾವಣೆಗೆ ಕಾರಣ ಆಗಿರುವುದು ‘ಧುರಂಧರ್ 2’ (Dhurandhar 2) ಸಿನಿಮಾದ ಅಬ್ಬರ. ಈ ಸಿನಿಮಾದ ಆರ್ಭಟಕ್ಕೆ ಅಕ್ಷಯ್ ಕುಮಾರ್ ಅವರಂತಹ ಸ್ಟಾರ್ ಹೀರೋ ಕೂಡ ಸೈಲೆಂಟ್ ಆಗಬೇಕಾಗಿದೆ.
ಬಾಕ್ಸ್ ಆಫೀಸ್ನಲ್ಲಿ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಸುನಾಮಿ ಎಬ್ಬಿಸಿದೆ. ಚಿತ್ರಮಂದಿರಗಳಲ್ಲಿ ಬಹುತೇಕ ಸ್ಕ್ರೀನ್ಗಳನ್ನು ಈ ಚಿತ್ರವೇ ಆಕ್ರಮಿಸಿಕೊಂಡಿದೆ. ಆದ್ದರಿಂದ, ಹೊಸ ಸಿನಿಮಾಗಳಿಗೆ ಜಾಗ ಸಿಗುವುದು ಕಷ್ಟವಾಗಿದೆ. ಹಾಲಿವುಡ್ ಸ್ಟಾರ್ ಹೀರೋ ರಿಯಾನ್ ಗೋಸ್ಲಿಂಗ್ ಅವರ ‘ಪ್ರಾಜೆಕ್ಟ್ ಹೇಲ್ ಮೇರಿ’ ಚಿತ್ರ ಕೂಡ ಈ ಕಾರಣದಿಂದ ಪ್ರದರ್ಶನ ಕಾಣಲು ಪರದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಇಷ್ಟಪಡದ ‘ಭೂತ್ ಬಂಗ್ಲ’ ತಂಡ, ಬಿಡುಗಡೆಯನ್ನು ಒಂದು ವಾರ ಮುಂದಕ್ಕೆ ಹಾಕಿದೆ.
ಇದು ಅತ್ಯಂತ ಬುದ್ಧಿವಂತಿಕೆಯ ನಿರ್ಧಾರ ಎಂಬ ಅಭಿಪ್ರಾಯ ಕೇಳಿಬಂದಿದೆ. ದೊಡ್ಡ ಚಿತ್ರಗಳ ನಡುವೆ ಪೈಪೋಟಿಗಿಂತ ಲಾಭ ಮುಖ್ಯ. ಈ ಹಿಂದೆ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಕೂಡ ‘ಧುರಂಧರ್ 2’ ಜೊತೆಗಿನ ಸಂಘರ್ಷವನ್ನು ತಪ್ಪಿಸಿತ್ತು. ಈಗ ‘ಭೂತ್ ಬಂಗ್ಲ’ ಮುಂದಕ್ಕೆ ಹೋಗುತ್ತಿರುವುದಕ್ಕೆ ಈ ಸಿನಿಮಾದ ನಿರ್ಮಾಪಕರು ಕೂಡ ಸಮ್ಮತಿಸಿದ್ದಾರೆ ಎಂದು ವರದಿ ಆಗಿದೆ.
ವಿಶೇಷವೆಂದರೆ, ಏಪ್ರಿಲ್ 17ರಂದು ಈ ಹಿಂದೆ ಸಲ್ಮಾನ್ ಖಾನ್ ಅಭಿನಯದ ‘ಮಾತೃಭೂಮಿ’ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಆ ಚಿತ್ರದ ಕೆಲಸಗಳು ವಿಳಂಬವಾಗಿ ಮುಂದೂಡಲ್ಪಟ್ಟಿದೆ. ಈಗ ಆ ದಿನಾಂಕವನ್ನು ‘ಭೂತ್ ಬಂಗ್ಲಾ’ ಆಕ್ರಮಸಿಕೊಳ್ಳುತ್ತಿದೆ. ಸದ್ಯಕ್ಕಂತೂ ಎಲ್ಲ ಚಿತ್ರಮಂದಿರಗಳಲ್ಲಿ ‘ಧುರಂಧರ್ 2’ ಸಿನಿಮಾದ ಹವಾ ಜೋರಾಗಿದೆ. ಹಾಗಾಗಿ ಹೊಸ ಸಿನಿಮಾಗಳ ಬಿಡುಗಡೆಗೆ ಹಿಂದೇಟು ಹಾಕುವಂತಾಗಿದೆ.
‘ಭೂತ್ ಬಂಗ್ಲ’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದ್ದರಿಂದ ಟ್ರೇಲರ್ ಬಿಡುಗಡೆಯಲ್ಲೂ ಬದಲಾವಣೆಯಾಗಿದೆ. ಈ ಮೊದಲು ಮಾರ್ಚ್ 30ರಂದು ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಅದರ ಬದಲು ಏಪ್ರಿಲ್ ಮೊದಲ ವಾರದಲ್ಲಿ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಆಲೋಚಿಸಿದೆ ಎನ್ನಲಾಗಿದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ.
ಬೆಂಗಳೂರು, ಮಾರ್ಚ್ 29: ರಾಜ್ಯದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accidents) ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ಟ್ಯಾಕ್ಟರ್ ಅಪಘಾತದಲ್ಲಿ ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಹಾಗೂ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಇಬ್ಬರು ಸೇರಿ ಒಟ್ಟೂ ಆರು ಜನ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಅವಘಡ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನಾಲ್ಕು ಮೈಲ್ ಕ್ಯಾಂಪ್ ಸಮೀಪ ಅಪಘಾತ ನಡೆದಿದೆ. ಜಮೀನಿಗೆ ತಿಪ್ಪೆಗೊಬ್ಬರ ಸಾಗಿಸುತ್ತಿದ್ದ ಟ್ಯಾಕ್ಟರ್ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿರೂಪಾಪುರ ಗ್ರಾಮದ ಸುಕುಮುನಿ (31) ಹಾಗೂ ಅರಳಹಳ್ಳಿ ನಿವಾಸಿ ವಿರೂಪನಗೌಡ (42) ಮೃತ ದುರ್ದೈವಿಗಳು. ಘಟನೆ ಬಗ್ಗೆ ಮಾಹಿತಿ ತಿಳಿದು ಸಿಂಧನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಗವಾಗಿ ಬಂದ ಕ್ಯಾಂಟರ್ಗೆ ಬೈಕ್ ಡಿಕ್ಕಿ
ಇನ್ನೊಂದು ಭೀಕರ ಅಪಘಾತ ಚಿಕ್ಕಬಳ್ಳಾಪುರ ತಾಲೂಕಿನ ಸಾದಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ವೇಗವಾಗಿ ಬಂದ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನರಸಿಂಹಪ್ಪ (45) ಮತ್ತು ನಾರಾಯಣಸ್ವಾಮಿ (44) ಮೃತರು. ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ನಿವಾಸಿಗಳಾಗಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಒನ್ವೇಲಿ ಬಂದ ಕಾರು
ಬೆಂಗಳೂರಿನಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಒನ್ವೇ ನಿಯಮ ಉಲ್ಲಂಘಿಸಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ನಗರದ ವಕ್ಫ್ ಬೋರ್ಡ್ ಸಮೀಪ ಕಳೆದ ರಾತ್ರಿ ಈ ಘಟನೆ ಸಂಭವಿಸಿದೆ. ಜುಬೇರ್ ಅಹಮದ್ (42) ಮತ್ತು ಅಬ್ದುಲ್ ಮುನ್ವಿರ್ ಪಾಷಾ (16) ಮೃತರಾಗಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ, ಪಿಂಜಾರ್ ಹೆಗ್ಡಾಳ್ ಬಳಿ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿದೆ. ಬಸ್ ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆ ಕಡೆ ಹೊರಟಿದ್ದ ಸಮಯದಲ್ಲೇ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆ ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪ್ರಯಾಣಿಕರು ಕೂಡ ಸುರಕ್ಷಿತರಾಗಿದ್ದಾರೆ.
ಯಾದಗಿರಿ, ಮಾರ್ಚ್ 29: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಒಟ್ಟಾಗಿ ಈಜಲು ಹೋಗಿದ್ದರು ಎನ್ನಲಾಗಿದೆ.
ಈಜಲು ಹೋಗಿ 4 ಮಕ್ಕಳು ಜಲಸಮಾಧಿ ವಿಷಯ ತಿಳಿದು ಪೋಷಕರು ಮತ್ತು ಸಂಬಂಧಿಕರಿಗೆ ತೀವ್ರ ಆಘಾತವಾಗಿದೆ. ಮೃತ ಮಕ್ಕಳೆಲ್ಲರೂ ತೀರಾ ಚಿಕ್ಕ ವಯಸ್ಸಿನವರಾಗಿದ್ದು, ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ಉತ್ತಮ ಭವಿಷ್ಯದ ಕನಸು ಕಂಡು, ನೂರಾರು ಆಸೆ,ಆಕಾಂಕ್ಷೆಗಳನ್ನು ಇಟ್ಟುಕೊಂಡಿದ್ದ ಹೆತ್ತವರೀಗ ಅಕ್ಷರಶಃ ಕಂಗಾಲಾಗಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಇದು 2026ರ ಮಾರ್ಚ್ ನ ಕೊನೆಯ ವಾರ ಹಾಗೂ ಏಪ್ರಿಲ್ ನ ಮೊದಲ ವಾರವಾಗಿದ್ದು ಎಲ್ಲದಕ್ಕೂ ಆರುರಾತುರ ಪಡುವ ಬದಲು ಸಮಯಕ್ಕೆ ಕಾಯಬೇಕು. ಆಗ ಮಾತ್ರ ಬೆಲೆ, ನಿಮಗೂ ವಸ್ತುವಿಗೂ. ಅಡ್ಡದಾರಿ ನಿಮ್ಮನ್ನು ಕೈಬೀಸಿ ಕರೆಯುವುದು. ದುರಭ್ಯಾಸವನ್ನು ಮುಚ್ಚಿಡುವ ಪ್ರಯತ್ನ ಪ್ರಗತಿಯಲ್ಲಿ ಇರಲಿದೆ. ಆದರೂ ಪ್ರಕಟವಾಗುವುದು. ವಿರುದ್ಧ ಸೆಣಸಾಟ ಬರಬಹುದು ಜಾಗರೂಕತೆಯಿಂದ ವಾರವನ್ನು ಕಳೆಯಿರಿ. ಶುಭವಾಗಲಿ.
ಮೇಷ ರಾಶಿ :
ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಲಾಭ ಉತ್ತಮವಾಗಿದ್ದರೂ ಖರ್ಚಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನಹರಿಸಿ.
ವೃಷಭ ರಾಶಿ :
ಕೈಗೆತ್ತಿಕೊಂಡ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ದೂರ ಪ್ರಯಾಣದ ಯೋಗವಿದ್ದು, ಹಿರಿಯರ ಮಾರ್ಗದರ್ಶನದಿಂದ ಸಂಕಷ್ಟಗಳು ದೂರಾಗುತ್ತವೆ. ವ್ಯಾಪಾರದಲ್ಲಿ ಲಾಭದಾಯಕ ವಾರವಿದು. ಸಂಗಾತಿಯೊಂದಿಗೆ ಸುಖದ ಸಮಯ ಕಳೆಯುವಿರಿ.
ಮಿಥುನ ರಾಶಿ :
ಮಿಶ್ರ ಫಲಗಳು ಕಂಡುಬರಲಿವೆ. ಅನಗತ್ಯ ಚರ್ಚೆಗಳಿಂದ ದೂರವಿರುವುದು ಒಳಿತು. ಹಣಕಾಸಿನ ವ್ಯವಹಾರದಲ್ಲಿ ಜಾಗರೂಕತೆ ಇರಲಿ. ವಾರದ ಅಂತ್ಯಕ್ಕೆ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. ಮಾನಸಿಕ ಶಾಂತಿಗಾಗಿ ದೈವದತ್ತ ಗಮನ ನೀಡಿ.
ಕರ್ಕಾಟಕ ರಾಶಿ:
ಉದ್ಯೋಗದಲ್ಲಿ ಬಡ್ತಿಯ ಸಾಧ್ಯತೆಯಿದೆ. ಸಾಮಾಜಿಕ ಗೌರವ ಹೆಚ್ಚಾಗಲಿದೆ. ಆಸ್ತಿ ಖರೀದಿ ಅಥವಾ ಮಾರಾಟ ಪ್ರಕ್ರಿಯೆಗೆ ಇದು ಸೂಕ್ತ ಸಮಯ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ಪ್ರಗತಿ ಕಂಡುಬರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಸಿಂಹ ರಾಶಿ:
ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಶತ್ರುಗಳ ಮೇಲೆ ಜಯ ಸಾಧಿಸುವಿರಿ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಹೊಸ ಹೂಡಿಕೆಗೆ ಅವಕಾಶಗಳಿವೆ. ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.
ಕನ್ಯಾ ರಾಶಿ:
ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ ಕಂಡುಬರುತ್ತದೆ. ಸೃಜನಾತ್ಮಕ ಕೆಲಸಗಳಲ್ಲಿ ಆಸಕ್ತಿ ಹೆಚ್ಚಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದ್ದು, ಸಾಲದ ಹೊರೆ ಕಡಿಮೆಯಾಗುವ ಸಂಭವವಿದೆ. ಆರೋಗ್ಯ ಸ್ಥಿರವಾಗಿರಲಿದೆ.
ತುಲಾ ರಾಶಿ :
ಮನೆ ಅಥವಾ ವಾಹನ ಖರೀದಿ ಯೋಗವಿದೆ. ತಾಯಿಯ ಕಡೆಯಿಂದ ಸಹಕಾರ ಸಿಗಲಿದೆ. ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ವೃಶ್ಚಿಕ ರಾಶಿ:
ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಲಿದೆ. ಸಣ್ಣ ಪ್ರಯಾಣಗಳಿಂದ ಲಾಭವಾಗಲಿದೆ. ಸಹೋದರರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ವೃತ್ತಿಯಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ.
ಧನು ರಾಶಿ:
ಆರ್ಥಿಕವಾಗಿ ಲಾಭದಾಯಕ ವಾರ. ಮಾತಿನ ಮೇಲೆ ಸಂಯಮವಿರಲಿ, ಇದರಿಂದ ಕೌಟುಂಬಿಕ ಕಲಹ ತಪ್ಪಿಸಬಹುದು. ಕಣ್ಣಿನ ಸಮಸ್ಯೆ ಅಥವಾ ಹಲ್ಲು ನೋವು ಕಾಣಿಸಿಕೊಳ್ಳಬಹುದು, ಜಾಗ್ರತೆ ವಹಿಸಿ. ನೆಮ್ಮದಿಯ ವಾರವಿದು.
ಮಕರ ರಾಶಿ :
ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ವ್ಯಕ್ತಿತ್ವಕ್ಕೆ ಹೆಚ್ಚಿನ ಮಾನ್ಯತೆ ಸಿಗಲಿದೆ. ಸ್ಥಗಿತಗೊಂಡ ಕೆಲಸಗಳು ಪುನಾರಂಭಗೊಳ್ಳಲಿವೆ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಸಾಮರಸ್ಯ ಹೆಚ್ಚಲಿದೆ.
ಕುಂಭ ರಾಶಿ:
ಖರ್ಚುಗಳು ಹೆಚ್ಚಾಗುವ ಸಾಧ್ಯತೆಯಿದೆ, ಬಜೆಟ್ ಬಗ್ಗೆ ಗಮನವಿರಲಿ. ವಿದೇಶಿ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯಲಿದೆ. ನಿದ್ದೆಯ ಕೊರತೆಯಾಗದಂತೆ ನೋಡಿಕೊಳ್ಳಿ. ದಾನ ಧರ್ಮ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ.
ಮೀನ ರಾಶಿ:
ಆದಾಯದ ಮೂಲಗಳು ಹೆಚ್ಚಾಗಲಿವೆ. ಹಳೆಯ ಬಾಕಿ ಹಣ ವಾಪಸ್ ಬರಲಿದೆ. ಪ್ರೇಮ ಜೀವನದಲ್ಲಿ ಯಶಸ್ಸು ಸಿಗಲಿದ್ದು, ಗೆಳೆಯರೊಂದಿಗೆ ಮೋಜಿನ ಸಮಯ ಕಳೆಯುವಿರಿ. ಎಲ್ಲ ಕೆಲಸಗಳಲ್ಲೂ ಅದೃಷ್ಟ ನಿಮ್ಮ ಪರವಾಗಿರಲಿದೆ.
ನವದೆಹಲಿ, ಮಾರ್ಚ್ 29: ರೇಮಂಡ್ ಗ್ರೂಪ್ ಕಟ್ಟಿ ಬೆಳೆಸಿದ್ದ ಮತ್ತು ಅದರ ಮಾಜಿ ಛೇರ್ಮನ್ ಆದ ವಿಜಯಪತ್ ಸಿಂಘಾನಿಯಾ ನಿನ್ನೆ ಶನಿವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ರೇಮಂಡ್ ಗ್ರೂಪ್ನ ಈಗಿನ ಮುಖ್ಯಸ್ಥ ಗೌತಮ್ ಸಿಂಘಾನಿಯಾ ಅವರ ತಂದೆಯಾದ ವಿಜಯಪತ್ ಸಿಂಘಾನಿಯಾ ಅವರ ಅಂತ್ಯಸಂಸ್ಕಾರ ಮುಂಬೈನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ
ತಮ್ಮ ತಂದೆ ಮೃತಪಟ್ಟಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಗೌತಮ್ ಸಿಂಘಾನಿಯಾ ಘೋಷಿಸಿದ್ದಾರೆ. ಮುಂಬೈನ ಚಂದನವಾಡಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ.
ವಿಜಯಪತ್ ಸಿಂಘಾನಿಯಾ ಅವರು 1980ರಲ್ಲಿ ರೇಮೆಂಡ್ ಸಂಸ್ಥೆಯ ಚುಕ್ಕಾಣಿ ಹಿಡಿದಿದ್ದರು. ಅವರ ನೇತೃತ್ವದಲ್ಲಿ ಸಂಸ್ಥೆ ಹೊಸ ಎತ್ತರ ಮತ್ತು ವಿಸ್ತಾರ ಪಡೆಯಿತು. ರೇಮಂಡ್ಸ್ ಬ್ರ್ಯಾಂಡ್ ಬಹಳ ಖ್ಯಾತವಾಯಿತು. ಆದರೆ, ಸಿಂಘಾನಿಯಾ ಅವರು ರೇಮೆಂಡ್ಸ್ ಅನ್ನು ಟೆಕ್ಸ್ಟೈಲ್ ಕ್ಷೇತ್ರಕ್ಕೆ ಸೀಮಿತಗೊಳಿಸಲಿಲ್ಲ. ಹಲವು ಸೆಕ್ಟರ್ಗಳಲ್ಲಿ ಅದರ ಬ್ಯುಸಿನೆಸ್ ಹರಡಿತು.
ಸಿಂಥೆಟಿಕ್ ಫ್ಯಾಬ್ರಿಕ್ಸ್, ಡೆನಿಮ್, ಉಕ್ಕು, ಸಿಮೆಂಟ್, ಕೈಗಾರಿಕಾ ಉತ್ಪನ್ನ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಇವತ್ತು ರೇಮಂಡ್ ಬ್ಯುಸಿನೆಸ್ಗಳಿವೆ.
ಎರಡು ದಶಕಗಳ ಕಾಲ ರೇಮೆಂಡ್ ಛೇರ್ಮನ್ ಆಗಿ ಕೆಲಸ ಮಾಡಿದ ವಿಜಯಪತ್ ಸಿಂಘಾನಿಯಾ ಅವರು 2000ರಲ್ಲಿ ತಮ್ಮ ಮಗ ಗೌತಮ್ ಸಿಂಘಾನಿಯಾ ಅವರಿಗೆ ಆಡಳಿತ ಚುಕ್ಕಾಣಿ ನೀಡಿದರು. ಸಂಸ್ಥೆಯಲ್ಲಿ ತಾವು ಹೊಂದಿದ್ದ ಎಲ್ಲಾ ಶೇ. 37ರಷ್ಟು ಪಾಲನ್ನು ಮಗನಿಗೆ ನೀಡಿದರು.
ವಿಜಯ್ಪತ್ ಸಿಂಘಾನಿಯಾ ಅವರು ಬ್ಯುಸಿನೆಸ್ ಅಲ್ಲದೇ ವೈಯಕ್ತಿಕ ಸಾಹಸಗಳಿಗೂ ಹೆಸರುವಾಸಿಯಾದವರು. ವಿಮಾನ ಚಲಾಯಿಸುವುದರಲ್ಲಿ ಬಹಳ ಆಸಕ್ತಿ ಹೊಂದಿದ್ದ ಅವರು 5,000ಕ್ಕೂ ಅಧಿಕ ಗಂಟೆಗಳ ಫ್ಲೈಯಿಂಗ್ ಮಾಡಿದ್ದಾರೆ. 67ರ ವಯಸ್ಸಿನಲ್ಲಿ ಹಾಟ್ ಏರ್ ಬಲೂನ್ನಲ್ಲಿ 69,000 ಅಡಿ ಎತ್ತರಕ್ಕೆ ಹೋಗಿ ವಿಶ್ವದಾಖಲೆ ಬರೆದಿದ್ದಾರೆ. 1988ರಲ್ಲಿ ಲಂಡನ್ನಿಂದ ದೆಹಲಿವರೆಗೆ ಒಬ್ಬರೇ ಮೈಕ್ರೋಲೈಟ್ ಫ್ಲೈಟ್ನಲ್ಲಿ 23 ದಿನದಲ್ಲಿ ಪ್ರಯಾಣಿಸಿದ್ದಾರೆ. ಅವರ ಸಾಹಸ ಗುರುತಿಸಿ ಭಾರತೀಯ ವಾಯುಪಡೆಯು ಗೌರವ ನೀಡಿದೆ.
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗಿನ ವಾರ ಭವಿಷ್ಯವನ್ನು ತಿಳಿಸಿದ್ದಾರೆ. ಈ ವಾರವು ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಮತ್ತು ಕೃಷ್ಣ ಪಕ್ಷಗಳನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಸೋಮ ಪ್ರದೋಷ, ನಂಜನಗೂಡು ಜಾತ್ರಾ ಮಹೋತ್ಸವ, ಮಹಾವೀರ ಜಯಂತಿ, ಚೈತ್ರ ಪೌರ್ಣಿಮೆ, ಸಂಕಷ್ಟ ಚತುರ್ಥಿ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗ್ರಹಗಳ ಸ್ಥಿತಿಯಲ್ಲಿ ಮಹತ್ವದ ಬದಲಾವಣೆಗಳಿದ್ದು, ಏಪ್ರಿಲ್ 2 ರಂದು ಕುಜ ಮೀನ ರಾಶಿಗೆ ಪ್ರವೇಶಿಸಲಿದ್ದಾರೆ. ಶುಕ್ರ ಮೇಷದಲ್ಲಿ, ಗುರು ಮಿಥುನದಲ್ಲಿ, ಕೇತು ಸಿಂಹದಲ್ಲಿ, ಬುಧ ಮತ್ತು ರಾಹು ಕುಂಭ ರಾಶಿಯಲ್ಲಿ ಸಂಚರಿಸಲಿದ್ದಾರೆ.
ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನ ರಾಶಿಯವರೆಗಿನ ಎಲ್ಲಾ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಸ್ತಾರವಾಗಿ ವಿವರಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕುಟುಂಬ ಸಂಬಂಧಗಳು, ಪ್ರೀತಿ ಮತ್ತು ಅದೃಷ್ಟದ ಬಣ್ಣ ಹಾಗೂ ಸಂಖ್ಯೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಜೊತೆಗೆ, ಶುಭ ಫಲಗಳಿಗಾಗಿ ಮಾಡಬೇಕಾದ ದಾನಗಳು ಮತ್ತು ಮಂತ್ರ ಜಪಗಳನ್ನು ಸಹ ಸೂಚಿಸಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಆನೇಕಲ್, ಮಾರ್ಚ್ 29:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಳೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ತಾಯಿ ಮತ್ತು ಅಕ್ಕನ ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೋಹನ್ ಗೌಡ ದೊಡ್ಡ ಮಟ್ಟದಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ. 10 ಲಕ್ಷ, 50 ಲಕ್ಷ, ಒಂದು ಕೋಟಿ ರೂಪಾಯಿಗಳವರೆಗಿನ ಚಿಟ್ ಫಂಡ್ಗಳನ್ನು ನಡೆಸಿದ್ದಲ್ಲದೆ, ಹಬ್ಬಗಳಿಗಾಗಿ ಮಟನ್, ಪಟಾಕಿ, ಯುಗಾದಿ ಹಬ್ಬ ಸೇರಿದಂತೆ ಸಾಕಷ್ಟು ಚಿಟ್ಗಳನ್ನು ನಡೆಸಿದ್ದಾನೆ. ಈ ವ್ಯವಹಾರಗಳಲ್ಲಿ ಭಾರಿ ನಷ್ಟ ಅನುಭವಿಸಿದ್ದರಿಂದ, ಸಾಲಗಾರರ ಕಾಟ ವಿಪರೀತವಾಗಿತ್ತು. ಈ ದುರಂತಕ್ಕೆ ಇದೇ ಮೂಲ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಪಿಎಲ್ 2026ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 201 ರನ್ ಕಲೆಹಾಕಿದರೆ, ಈ ಗುರಿಯನ್ನು ಆರ್ಸಿಬಿ ಕೇವಲ 15.4 ಓವರ್ಗಳಲ್ಲಿ ಚೇಸ್ ಮಾಡಿದೆ.
ಈ ಚೇಸಿಂಗ್ನಲ್ಲಿ ವಿರಾಟ್ ಕೊಹ್ಲಿಯ ಕೊಡುಗೆ ಅಜೇಯ 69 ರನ್ಗಳು. ಅದು ಸಹ ಕೇವಲ 38 ಎಸೆತಗಳಲ್ಲಿ. ಈ ಭರ್ಜರಿ ಬ್ಯಾಟಿಂಗ್ ಮೂಲಕ ಆರ್ಸಿಬಿ ತಂಡವನ್ನು ಗೆಲುವಿನ ದಡ ಸೇರಿಸಿದ ಬಳಿಕ ವಿರಾಟ್ ಕೊಹ್ಲಿ ಮೈದಾನದಿಂದಲೇ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ (flying kiss) ನೀಡಿ ಗಮನ ಸೆಳೆದರು.
ಅತ್ತ ಅನುಷ್ಕಾ ಶರ್ಮಾ ಕೂಡ ಫ್ಲೈಯಿಂಗ್ ಕಿಸ್ ನೀಡುತ್ತಿದ್ದಂತೆ ಇತ್ತ ಕಡೆಯಿಂದ ವಿರಾಟ್ ಕೊಹ್ಲಿ ತಮ್ಮ ‘ತುಂಟಾಟ’ ಪ್ರದರ್ಶಿಸಿದರು. ಇದನ್ನು ನೋಡಿ ನಾಚಿಕೆಯೊಂದಿಗೆ ಅನುಷ್ಕಾ ಶರ್ಮಾ ನಗುತ್ತಿರುವ ವಿಡಿಯೋ ವೈರಲ್ ಆಗಿದೆ.