‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ – Kannada News | Producer Vashu Bhagnani allegation on Varun Dhawan and David Dhawan

ಬಾಲಿವುಡ್ (Bollywood)​​ ನಲ್ಲಿ ಅಪ್ಪ-ಮಕ್ಕಳ ಜೋಡಿ ಹಲವು ಇವೆ. ನಿರ್ದೇಶಕರಾಗಿರುವ ಹಲವರು ತಮ್ಮ ಮಕ್ಕಳನ್ನು ನಟರನ್ನಾಗಿ ಲಾಂಚ್ ಮಾಡಿದ್ದಾರೆ. ಕೆಲವರು ಗೆದ್ದರೆ, ಕೆಲವರು ಸೋತಿದ್ದಾರೆ. ಇನ್ನು ಕೆಲವರು ಆರಕ್ಕೇರದೆ, ಮೂರಕ್ಕಿಳಿಯದೇ ನಿಂತಿದ್ದಾರೆ. ಅವರಲ್ಲಿ ಪ್ರಮುಖವಾದ ನಟ ವರುಣ್ ಧವನ್. ಬಾಲಿವುಡ್​ನ ಈ ನಟ ಆರಕ್ಕೇರದೆ-ಮೂರಕ್ಕಿಳಿಯದೆ ನಿಂತಿದ್ದಾರೆ. ಇದೀಗ ಬಾಲಿವುಡ್​ನ ಹಿರಿಯ ನಿರ್ಮಾಪಕರೊಬ್ಬರು, ವರುಣ್ ಧವನ್ ಮತ್ತು ಅವರ ತಂದೆ ಡೇವಿಡ್ ಧವನ್ ಅವರನ್ನು ಟೀಕಿಸಿದ್ದು, ‘ಅಪ್ಪ-ಮಗನ ನಂಬಿ ಕೆಟ್ಟೆ’ ಎಂದಿದ್ದಾರೆ.

ವರುಣ್ ಧವನ್ ಅವರ ತಂದೆ ಡೇವಿಡ್ ಧವನ್ ಬಾಲಿವುಡ್​ನ ಸೂಪರ್ ಹಿಟ್ ನಿರ್ದೇಶಕರಾಗಿದ್ದವರು. ಹಲವು ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾಗಳನ್ನು 90-2000 ದಶಕದಲ್ಲಿ ಅವರು ನೀಡಿದ್ದಾರೆ. ಇದೀಗ ಮಗ ವರುಣ್ ಧವನ್ ಅವರನ್ನು ಹಾಕಿಕೊಂಡು ಸಾಲು-ಸಾಲು ಸಿನಿಮಾ ಮಾಡುತ್ತಿದ್ದಾರೆ. ಅದರಲ್ಲೂ 90ರ ದಶಕದಲ್ಲಿ ತಾವೇ ನಿರ್ದೇಶಿಸಿದ ಸಿನಿಮಾಗಳ ಸೀಕ್ವೆಲ್ ಅನ್ನು ಈಗ ಪುತ್ರ ವರುಣ್ ಧವನ್ ಅನ್ನು ನಾಯಕನನ್ನಾಗಿ ಹಾಕಿಕೊಂಡು ಮಾಡುತ್ತಿದ್ದು, ಅವು ಬಾಕ್ಸ್ ಆಫೀಸ್​​ನಲ್ಲಿ ಫೇಲ್ ಆಗುತ್ತಿವೆ.

90ರ ದಶಕದಲ್ಲಿ ವರುಣ್ ಧವನ್ ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಖ್ಯಾತ ನಿರ್ಮಾಪಕರಲ್ಲಿ ಒಬ್ಬರಾದ ವಾಶು ಭಗ್ನಾನಿ ಇದೀಗ ಡೇವಿಡ್ ಧವನ್ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಅಪ್ಪ ಮಗ (ವರುಣ್-ಡೇವಿಡ್) ಅನ್ನು ನಂಬಿ ಕೆಟ್ಟೆ ಎಂದಿದ್ದಾರೆ. ‘ಕೂಲಿ ನಂಬರ್ 1’ ಸಿನಿಮಾ ಮಾಡಲು ತಾವು ಡೇವಿಡ್ ಧವನ್​​ಗೆ 70 ಕೋಟಿ ಕೊಟ್ಟಿದ್ದಾಗಿ ಹೇಳಿದ್ದಾರೆ. ಅಲ್ಲದೆ ಆ ಸಿನಿಮಾದಿಂದ ತಾವು 27 ಕೋಟಿ ರೂಪಾಯಿ ಹಣ ಕಳೆದುಕೊಂಡಿದ್ದಾಗಿಯೂ ಹೇಳಿದ್ದಾರೆ ನಿರ್ಮಾಪಕ.

ಇದನ್ನೂ ಓದಿ:ಸೆಲೆಬ್ರಿಟಿಗಳ ಅಹಂಕಾರಕ್ಕೆ ತೆರೆ ಹಾಕಲು ನಿರ್ಧರಿಸಿದ ಬಾಲಿವುಡ್​ನ ಖ್ಯಾತ ಹೇರ್​​​ಸ್ಟೈಲಿಸ್ಟ್

ಕೂಲಿ ಸಿನಿಮಾದ ಫ್ಲಾಪ್ ಬಳಿಕ ವಾಶು ಭಗ್ನಾನಿ ಬಳಿ ಮಾತನಾಡಿದ್ದ ಡೇವಿಡ್ ಧವನ್, ‘ಮನಿಮಗೆ ಆಗಿರುವ ನಷ್ಟವನ್ನು ಮುಂದೊಂದು ದಿನ ಸರಿದೂಗಿಸಿ ಕೊಡುತ್ತೇನೆ ಎಂದಿದ್ದರು. ‘ನಾವು ಬೀವಿ ನಂಬರ್ 1 ಸಿನಿಮಾವನ್ನು ಮತ್ತೆ ಮಾಡೋಣ ಎಂದಿದ್ದರಂತೆ. ಸರಿ ಎಂದಿದ್ದ ಭಗ್ನಾನಿ, ಚಿತ್ರಕತೆಗೆ ಕಾಯುತ್ತಿದ್ದರಂತೆ. ಆದರೆ ಡೇವಿಡ್ ಧವನ್ ಅಷ್ಟರಲ್ಲಿ ಟಿಪ್ಸ್ ಜೊತೆ ಸೇರಿಕೊಂಡು ಹೊಸ ಸಿನಿಮಾ ಮಾಡಿದ್ದು ಮಾತ್ರವಲ್ಲದೆ ತಮ್ಮ ಸಿನಿಮಾ ಆಗಿದ್ದ ‘ಬೀವಿ ನಂಬರ್ 1’ ಹಾಡನ್ನು ಆ ಸಿನಿಮಾನಲ್ಲಿ ಬಳಸಿದ್ದಾರೆ, ಅದಕ್ಕೆ ನನ್ನ ಅನುಮತಿಯನ್ನೂ ಸಹ ಪಡೆದಿಲ್ಲ ಎಂದು ಅವರು ಆರೋಪ ಮಾಡಿದ್ದಾರೆ.

ವರುಣ್ ಧವನ್ ನಟನೆಯ ‘ಹೇ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾವನ್ನು ಡೇವಿಡ್ ಧವನ್ ನಿರ್ದೇಶಿಸಿದ್ದು, ಆ ಸಿನಿಮಾನಲ್ಲಿ ‘ಚುನರಿ ಚುನರಿ’ ಹೆಸರಿನ ಹಾಡನ್ನು ಬಳಸಿಕೊಂಡಿದ್ದಾರೆ. ಇದೀಗ ಭಗ್ನಾನಿ ಅವರು ಸಿನಿಮಾ ವಿರುದ್ಧ ದೂರು ದಾಖಲಿಸಿದ್ದಾರೆ. ‘ಹೇ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ವರುಣ್ ಧವನ್ ಜೊತೆಗೆ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 12:17 pm, Tue, 26 May 26

Source link

ಕೋಲಾರ: ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷಾ ಅಕ್ರಮ ಬಯಲು, ಹಣ ಪಡೆದು ಮಾಸ್ ಕಾಪಿಗೆ ಬಿಟ್ಟ ಇನ್ವಿಜಿಲೇಟರ್‌ಗಳ ವಿಡಿಯೋ ವೈರಲ್! – Kannada News | KSOU Exam Scam Exposed in Kolar: Invigilators Caught on Camera Taking Bribes for Mass Copying in Degree Exams

ಕೋಲಾರ, ಮೇ 26: ಕೋಲಾರದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ಭಾರಿ ಪರೀಕ್ಷಾ ಅಕ್ರಮವೊಂದು ಬಯಲಿಗೆ ಬಂದಿದೆ. ಕೋಲಾರದ ಟಮಕಾ ಬಳಿಯಿರುವ ಮುಕ್ತ ವಿವಿಯ ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ ಬಿಎ, ಬಿಕಾಂ, ಬಿಸ್ಸಿ ಮತ್ತು ಬಿಬಿಎ ಸೇರಿದಂತೆ ಪ್ರಮುಖ ಪದವಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ನಕಲು ಮಾಡಲು ಮುಕ್ತ ಅವಕಾಶ ಮಾಡಿಕೊಡುತ್ತಿರುವುದು ಬೆಳಕಿಗೆ ಬಂದಿದೆ.

ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಇಲ್ಲಿನ ಪರೀಕ್ಷಾ ಮೇಲ್ವಿಚಾರಕರು (ಇನ್ವಿಜಿಲೇಟರ್‌ಗಳು) ಭಾರಿ ವಸೂಲಿಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಮತ್ತು ಪುಸ್ತಕಗಳನ್ನು ಕೊಂಡೊಯ್ಯಲು ಒಂದು ಪೇಪರ್​​ಗೆ 1,000 ದಿಂದ 1,500 ರೂಪಾಯಿಗಳವರೆಗೆ ದರ ನಿಗದಿ ಮಾಡಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಹಣ ನೀಡಿದ ವಿದ್ಯಾರ್ಥಿಗಳಿಗೆ ಯಾವುದೇ ಭಯವಿಲ್ಲದೆ ಮಾಸ್ ಕಾಪಿ ಮಾಡಲು ಇನ್ವಿಜಿಲೇಟರ್‌ಗಳೇ ಖುದ್ದಾಗಿ ಸಹಕರಿಸುತ್ತಿದ್ದಾರೆ. ಸದ್ಯ ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿಗಳಿಂದ ಇನ್ವಿಜಿಲೇಟರ್‌ಗಳಾದ ವಿನೋದ್ ಸಿಂಗ್, ರಾಜೇಂದ್ರ, ಪುನಿತ್ ಮತ್ತು ನಂದಿನಿ ಎಂಬುವವರು ರಾಜಾರೋಷವಾಗಿ ಹಣ ವಸೂಲಿ ಮಾಡುತ್ತಿರುವುದು ಎನ್ನಲಾದ ವಿಡಿಯೋ ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಫ್ರಾನ್ಸ್​ನಲ್ಲಿ ಬಿಸಿಲ ತಾಪ , ರೈಲಿನಲ್ಲಿ ಕೂರಲಾರದೆ ಹೊರ ಬಂದ ಪ್ರಯಾಣಿಕರು – Kannada News | Heatwave Chaos in France Leaves Paris Nice Train Passengers Stranded for Hours

ಪ್ಯಾರಿಸ್, ಮೇ 26: ಫ್ರಾನ್ಸ್​​ನಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲ ತಾಪ ಹೆಚ್ಚಾಗಿದೆ. ಯುರೋಪ್‌ನಲ್ಲಿ ಆವರಿಸಿರುವ ತೀವ್ರ ಬಿಸಿಗಾಳಿಯ ಭೀಕರತೆಗೆ ಫ್ರಾನ್ಸ್‌ನ ಪ್ಯಾರಿಸ್‌ನಿಂದ ನೈಸ್ ನಗರಕ್ಕೆ ಸಂಚರಿಸುತ್ತಿದ್ದ ರೈಲಿನ ನೂರಾರು ಪ್ರಯಾಣಿಕರು ತೀವ್ರವಾಗಿ ಕಂಗಾಲಾದ ಘಟನೆ ನಡೆದಿದೆ. ತಾಂತ್ರಿಕ ದೋಷದಿಂದ ನಿಂತ ರೈಲು ಎಸಿಯೂ ಇಲ್ಲದೆ ರೈಲಿನಲ್ಲೂ ಕೂರಲಾರದೆ ಪ್ರಯಾಣಿಕರು ಕೆಳಗಿಳಿದು ಬಂದಿರುವ ವಿಡಿಯೋ ವೈರಲ್ ಆಗಿದೆ.

ದುರದೃಷ್ಟವಶಾತ್, ಆ ರೈಲಿನ ಬೋಗಿಗಳಲ್ಲಿ ಹವಾನಿಯಂತ್ರಣ (Air-Condition) ವ್ಯವಸ್ಥೆ ಇರಲಿಲ್ಲ. ಧಗಧಗಿಸುವ ಸೂರ್ಯನ ತಾಪಕ್ಕೆ ರೈಲಿನ ಒಳಗಿನ ತಾಪಮಾನವು ಅಪಾಯಕಾರಿ ಮಟ್ಟಕ್ಕೆ ಏರತೊಡಗಿತು. ಬೋಗಿಗಳ ಒಳಗೆ ಉಸಿರಾಡಲು ಗಾಳಿ ಸಿಗದೆ ಸಣ್ಣ ಮಕ್ಕಳು ಮತ್ತು ವೃದ್ಧರು ಸೇರಿದಂತೆ ಇಡೀ ಪ್ರಯಾಣಿಕರು ನರಕಯಾತನೆ ಅನುಭವಿಸಿದರು.

ಕೊನೆಗೆ ಉಸಿರುಗಟ್ಟುವ ವಾತಾವರಣದಿಂದ ಪಾರಾಗಲು ಮತ್ತು ಕೇವಲ ಉಸಿರಾಡುವ ಶುದ್ಧ ಗಾಳಿಗಾಗಿ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿದು ಹಳಿಗಳ ಪಕ್ಕದಲ್ಲಿ ಆಶ್ರಯ ಪಡೆಯಬೇಕಾಯಿತು. ತೀವ್ರ ಹವಾಮಾನದ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಮುನ್ನೆಚ್ಚರಿಕೆ ಮತ್ತು ಸೌಲಭ್ಯಗಳ ಕೊರತೆಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಾಜ್ಯಕ್ಕೆ ಇದು ಗುಡ್​​ ನ್ಯೂಸ್​​: ಮಹತ್ವದ ಸಿದ್ಧತೆ ನಡೆಸುತ್ತಿರುವ ಡಿಕೆ ಶಿವಕುಮಾರ್

ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ಹೇಳಿದರು. ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಕರ್ನಾಟಕದ ಪರವಾಗಿಯೇ ಇತ್ತು. ಇದೀಗ ತಮಿಳುನಾಡಿನ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವುದರಿಂದ, ಮೇಕೆದಾಟು ಯೋಜನೆಯನ್ನು ಮುಂದುವರಿಸಲು ಕರ್ನಾಟಕಕ್ಕೆ ಹೆಚ್ಚಿನ ಅನುಕೂಲವಾಗಿದೆ. ನಾವು ಈಗಾಗಲೇ ಹೊಸ ಡಿಪಿಆರ್ ಸಲ್ಲಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಅವರು ವಿವರಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ: ಬೆಂಗಳೂರಿನಲ್ಲಿ ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್​​ನಲ್ಲಿ ಮತ್ತೆ ಕುರ್ಚಿ ಕದನ ತಾರಕಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಹಲವು ಮಂದಿ ಸಚಿವರೊಂದಿಗೆ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ಉನ್ನತ ಮಟ್ಟದ ನಾಯಕರ ಜತೆ ಚರ್ಚೆ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರಿಂದ ಹೈವೋಲ್ಟೇಜ್ ಸಭೆ ನಡೆಯುತ್ತಿದೆ. ಅತ್ತ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದ ಪಟ್ಟದ ಪಗಡೆಯಾಟ ಜೋರಾಗಿದ್ದರೆ ಇತ್ತ ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಸಿಎಂ ಆಗಲಿ ಎಂಬ ಕೂಗು ಕೇಳಿಬಂದಿದೆ. ಎರಡು ವಾರಗಳ ಹಿಂದೆ ಬೆಂಗಳೂರಿನಲ್ಲಿ ಮುಸ್ಲಿಂ ನಾಯಕರ ಸಭೆಯ ವೇಳೆ ಮಹೇಶ್ವರಾನಂದ ಸ್ವಾಮೀಜಿ ಸಚಿವ ಜಮೀರ್ ಅಹ್ಮದ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಬಹಿರಂಗವಾಗಿ ಜಮೀರ್ ಅವರನ್ನು ಬೆಂಬಲಿಸಿದ್ದರು. ಜಮೀರ್ ಅಹ್ಮದ್ ಖಾನ್ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಸ್ವಾಮೀಜಿ ಹೇಳಿದ್ದರು. ಇದೀಗ ಆ ವಿಡಿಯೋ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ದಳಪತಿ ವಿಜಯ್; ದೊಡ್ಡ ನಿರ್ಧಾರ ತೆಗೆದುಕೊಂಡ ಸಿಎಂ – Kannada News | TN CM Vijay Boosts Film Industry: 5 Shows Daily for New Movies – A Game Changer

ಸಿನಿಮಾ ಹಿನ್ನೆಲೆಯಿಂದ ಬಂದು ಮುಖ್ಯಮಂತ್ರಿಯಾದವರು ಚಿತ್ರರಂಗದ ಕಷ್ಟ-ನಷ್ಟಗಳನ್ನು ಬೇಗ ಅರ್ಥಮಾಡಿಕೊಳ್ಳುತ್ತಾರೆ ಎಂಬುದು ಅನೇಕರ ನಂಬಿಕೆ. ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರ ನಿರ್ಧಾರ ಈ ನಂಬಿಕೆಯನ್ನು ನಿಜ ಮಾಡಿದೆ. ಚಿತ್ರರಂಗ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಅರಿತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಮಾಜಿ ನಟ ವಿಜಯ್ ಅವರು, ಚಿತ್ರಮಂದಿರಗಳ ಮಾಲೀಕರು ಮತ್ತು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಡುಗಡೆಯಾಗುವ ಯಾವುದೇ ಹೊಸ ತಮಿಳು ಸಿನಿಮಾಗಳಿಗೆ ಮೊದಲ 7 ದಿನಗಳವರೆಗೆ ದಿನಕ್ಕೆ 5 ಶೋಗಳನ್ನು ನಡೆಸಲು ಅಧಿಕೃತವಾಗಿ ಅನುಮತಿ ನೀಡಿದ್ದಾರೆ. ತಮಿಳುನಾಡು ಸರ್ಕಾರ ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಮೇ 16ರಂದು ತಮಿಳು ಚಿತ್ರರಂಗದ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಚಿತ್ರಮಂದಿರಗಳ ಮಾಲೀಕರ ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತೋಡಿಕೊಂಡಿದ್ದರು. ಚಿತ್ರಮಂದಿರಗಳ ಆದಾಯ ಹೆಚ್ಚಿಸಲು ಮತ್ತು ಚಿತ್ರರಂಗವನ್ನು ನಷ್ಟದಿಂದ ರಕ್ಷಿಸಲು ದಿನಕ್ಕೆ 5 ಪ್ರದರ್ಶನಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು.

ವಿಜಯ್ ಕೂಡ ಸಿನಿಮಾ ಹಿನ್ನೆಲೆಯವರೇ ಆಗಿರುವುದರಿಂದ, ಸಿನಿಮಾ ನಿರ್ಮಾಪಕರು ಹಾಗೂ ಥಿಯೇಟರ್ ಮಾಲೀಕರ ಪ್ರಾಯೋಗಿಕ ಕಷ್ಟಗಳನ್ನು ಚೆನ್ನಾಗಿ ಅರಿತಿದ್ದಾರೆ. ಹೀಗಾಗಿ, ಸಿಎಂ ವಿಜಯ್, ಈ ಬೇಡಿಕೆ ನ್ಯಾಯಯುತವಾಗಿದೆ ಎಂದು ಪರಿಗಣಿಸಿ ತಕ್ಷಣವೇ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಹಳೆಯ ನಿಯಮ ಏನಾಗಿತ್ತು?

1957ರ ತಮಿಳುನಾಡು ಸಿನಿಮಾಸ್ (ರೆಗ್ಯುಲೇಶನ್) ನಿಯಮಾವಳಿಗಳ ಪ್ರಕಾರ, ರಾಜ್ಯದ ಚಿತ್ರಮಂದಿರಗಳಲ್ಲಿ ದಿನಕ್ಕೆ ಕೇವಲ 4 ಪ್ರದರ್ಶನಗಳನ್ನು ನೀಡಲು ಮಾತ್ರ ಅವಕಾಶವಿತ್ತು. ಹಬ್ಬದ ದಿನಗಳಲ್ಲಿ ಅಥವಾ ಸಾರ್ವಜನಿಕ ರಜಾದಿನಗಳಲ್ಲಿ 5ನೇ ವಿಶೇಷ ಪ್ರದರ್ಶನವನ್ನು ಪ್ರದರ್ಶಿಸಲು ಅವಕಾಶವಿತ್ತಾದರೂ, ಅದಕ್ಕಾಗಿ ಚಿತ್ರಮಂದಿರಗಳ ಮಾಲೀಕರು ಅಥವಾ ಚಿತ್ರದ ನಿರ್ಮಾಪಕರು ಆಯಾ ಜಿಲ್ಲಾಧಿಕಾರಿಗಳಿಂದ ಅಥವಾ ಚೆನ್ನೈನಲ್ಲಿ ಸಿಟಿ ಪೊಲೀಸ್ ಕಮಿಷನರ್ ಅವರಿಂದ ಪ್ರತ್ಯೇಕವಾಗಿ ಅನುಮತಿ ಪಡೆಯಬೇಕಾಗಿತ್ತು. ಸರ್ಕಾರ ಕೂಡ ಪ್ರತಿ ಬಾರಿಯೂ ವಿಶೇಷ ಆದೇಶವನ್ನು ಹೊರಡಿಸಬೇಕಾಗಿತ್ತು. ಇದು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿತ್ತಲ್ಲದೆ, ಸಿನಿಮಾಗಳ ಮುಂಗಡ ಬುಕಿಂಗ್ ಪ್ರಕ್ರಿಯೆಗೂ ತಡವಾಗುವಂತೆ ಮಾಡುತ್ತಿತ್ತು.

ಇದನ್ನೂ ಓದಿ: ತಮಿಳುನಾಡು ಸರ್ಕಾರದಿಂದಲೇ ಒಟಿಟಿ ಆರಂಭಿಸಲು ಸಿಎಂ ವಿಜಯ್‌ಗೆ ವಿಜಯ್ ಸೇತುಪತಿ ಮನವಿ

ಮುಖ್ಯಮಂತ್ರಿ ವಿಜಯ್ ಅವರ ಹೊಸ ಆದೇಶದ ಪ್ರಕಾರ, ಇನ್ಮುಂದೆ ಹೊಸ ಸಿನಿಮಾ ಬಿಡುಗಡೆಯಾದ ಮೊದಲ ವಾರ (7 ದಿನಗಳು) ಐದು ಪ್ರದರ್ಶನಗಳನ್ನು ಯಾವುದೇ ಅನುಮಪತಿ ಪಡೆಯದೆ ನಡೆಸಬಹುದು. ಬೇರೆ ಭಾಷೆಯಿಂದ ಡಬ್ ಆದ ಚಿತ್ರಗಳು, ಮರು-ಬಿಡುಗಡೆಯಾಗುವ ಸಿನಿಮಾಗಳಿಗೂ ಈ ವಿನಾಯಿತಿ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

200ಕ್ಕೂ ಹೆಚ್ಚು ಪೋಸ್ಟ್‌ ತೆಗೆದು ಹಾಕಿದ ಅರ್ಷದೀಪ್ ಸಿಂಗ್..! – Kannada News | IPL 2026: Arshdeep Singh Removes Over 200 Instagram Posts

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ಹೊರಬೀಳುತ್ತಿದ್ದಂತೆ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತನ್ನ ಇನ್​ಸ್ಟಾಗ್ರಾಮ್ ಖಾತೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ 234 ಪೋಸ್ಟ್​ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡುವ ಮೂಲಕ ಎಂಬುದೇ ಅಚ್ಚರಿ.

ಇತ್ತ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡಿರುವ ಕಾರಣ ಅವರ ಪ್ರೊಫೈಲ್‌ನಲ್ಲಿ ಈಗ ಕೇವಲ 44 ಪೋಸ್ಟ್​ಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಅರ್ಷದೀಪ್​ ಸಿಂಗ್ ತಮ್ಮ ಪ್ರೊಫೈಲ್ ಚಿತ್ರವನ್ನು (DP) ಬದಲಾಯಿಸಿದ್ದು, ಬಯೋದಲ್ಲಿದ್ದ ಪ್ರಮುಖ ವಿವರಗಳನ್ನೂ ತೆಗೆದುಹಾಕಿದ್ದಾರೆ.

ಪಂಜಾಬ್ ಕಿಂಗ್ಸ್ ಆಟಗಾರನ ಈ ದಿಢೀರ್ ಬದಲಾವಣೆಗೆ ಏನು ಕಾರಣ ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ. ಇದಾಗ್ಯೂ ಐಪಿಎಲ್ ವೇಳೆ ನಡೆದ ಕೆಲ ಘಟನೆಗಳಿಂದಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಐಪಿಎಲ್​ ವೇಳೆ ಏನಾಗಿತ್ತು?

ಅರ್ಷದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಕ್ಕೂ ಮುನ್ನ ಮಾಡಿದ ವಿಡಿಯೋದಲ್ಲಿ ತಿಲಕ್ ವರ್ಮಾ ಅವರನ್ನು ಅಂಧೇರಾ ಎಂದು ಕರೆಯುತ್ತಿರುವುದು ಸೆರೆಯಾಗಿತ್ತು. ತಿಲಕ್ ವರ್ಮಾ ಅವರ ಮೈ ಬಣ್ಣವನ್ನು ಪ್ರಸ್ತಾಪಿಸಿ ಮಾಡಲಾಗಿದ್ದ ಈ ವಿಡಿಯೋ ವಿರುದ್ಧ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು.

ಹಾಗೆಯೇ ಪಂಜಾಬ್ ಕಿಂಗ್ಸ್ ತಂಡದ ಸಹ-ಆಟಗಾರ ಪ್ರಿಯಾಂಶ್ ಆರ್ಯ ಅವರನ್ನು ಅಣಕಿಸುವಂತೆ ಅವರು ಕೆಲ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದರ ಜೊತೆಗೆ ಅರ್ಷದೀಪ್ ಸಿಂಗ್ ಹಂಚಿಕೊಂಡ ವಿಡಿಯೋದಲ್ಲಿ ಯುಜ್ವೇಂದ್ರ ಚಹಲ್ ವೇಪ್ ಮಾಡುತ್ತಿರುವುದು ಕೂಡ ಕಂಡು ಬಂದಿತ್ತು. ಹೀಗೆ ಮೈದಾನದಲ್ಲಿನ ಪಂದ್ಯಕ್ಕಿಂತ ಹೆಚ್ಚಾಗಿ ಅರ್ಷದೀಪ್ ಸಿಂಗ್ ತನ್ನ ವಿಡಿಯೋಗಳ ಮೂಲಕ ಸುದ್ದಿಯಲ್ಲಿದ್ದರು.

ಕಳಪೆ ಪ್ರದರ್ಶನ:

ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಈ ಬಾರಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆಡಿದ 14 ಪಂದ್ಯಗಳಿಂದ ಪಡೆದಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಅಲ್ಲದೆ ಪ್ರತಿ ಓವರ್​ಗೆ 10 ಕ್ಕಿಂತ ಹೆಚ್ಚಿನ ಸರಾಸರಿಯನ್ನು ರನ್ ಬಿಟ್ಟು ಕೊಟ್ಟಿದ್ದರು.

ಇದನ್ನೂ ಓದಿ: ಟ್ರೋಲ್ ಮಾಡಿದವರಿಗೆ ಶ್ರೇಷ್ಠಾ ಅಯ್ಯರ್ ತಿರುಗೇಟು!

ಈ ಎಲ್ಲಾ ಕಳಪೆ ಪ್ರದರ್ಶನ ನಡುವೆ ಅರ್ಷದೀಪ್ ಸಿಂಗ್ ಮಾತ್ರ ವಿಡಿಯೋ ಚಿತ್ರೀಕರಣದೊಂದಿಗೆ ಸುದ್ದಿಯಲ್ಲಿದ್ದರು. ಇದೀಗ ಪಂಜಾಬ್ ಕಿಂಗ್ಸ್ ತಂಡ ಸೋತು ಐಪಿಎಲ್​ನಿಂದ ನಿರ್ಗಮಿಸಿದೆ. ಈ ನಿರ್ಗಮನದೊಂದಿಗೆ ಅರ್ಷದೀಪ್ ಸಿಂಗ್ ಮನೆಗೆ ತೆರಳಿದ್ದಾರೆ. ಅತ್ತ ಮನೆಗೆ ತೆರಳಿದ ಬೆನ್ನಲ್ಲೇ ಅರ್ಷದೀಪ್ ಸಿಂಗ್ ಬರೋಬ್ಬರಿ 234 ವಿಡಿಯೋಗಳನ್ನು ಡಿಲೀಟ್ ಅಥವಾ ಅಥವಾ ಆರ್ಕೈವ್ ಮಾಡಿರುವುದು ವಿಶೇಷ.

Source link

ಕನಿಷ್ಠ ವೇತನದ ಎಫೆಕ್ಟ್​​: ಪ್ಲೇಟ್​​ ಇಡ್ಲಿ ಬೆಲೆ 90 ರೂ, ಬಿರಿಯಾನಿ 500 ರೂ. ತಲುಪುವ ಎಚ್ಚರಿಕೆ ಕೊಟ್ಟ ಹೋಟೆಲ್​​ ಮಾಲಕರು – Kannada News | Minimum Wage Impact: Bengaluru Hotels Warn of Food Price Hike Across Karnataka

ಸಾಂದರ್ಭಿಕ ಚಿತ್ರImage Credit source: amexessentials.com

ಬೆಂಗಳೂರು, ಮೇ 26: ಕಮರ್ಷಿಯಲ್​​ ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದಾಗಿ ತಿಂಡಿ-ತಿನಿಸುಗಳ ಬೆಲೆಯನ್ನು ಈಗಾಗಲೇ ಹೋಟೆಲ್​​ಗಳು ಏರಿಕೆ ಮಾಡಿರೋದು ಗ್ರಾಹಕರ ಕೈ ಸುಡುತ್ತಿದೆ. ಈ ನಡುವೆ ಹೋಟೆಲ್​​ಗಳು ಮತ್ತೊಂದು ಎಚ್ಚರಿಕೆ ನೀಡಿದ್ದು, ರಾಜ್ಯ ಸರ್ಕಾರ ಪರಿಷ್ಕರಿಸಿರುವ ಕನಿಷ್ಠ ವೇತನ ನಿಯಮಗಳಿಂದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಆಹಾರ ದರ ಹೆಚ್ಚಳ ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ (KSHA) ಹೇಳಿದೆ. ಈ ನಿರ್ಧಾರದಿಂದ ಒಂದು ಪ್ಲೇಟ್​​ ಬಿರಿಯಾನಿ ದರ 500 ರೂ. ಆಗಬಹುದು. ಜೊತೆಗೆ ಇಡ್ಲಿ, ಮಸಾಲೆ ದೋಸೆ ಸೇರಿದಂತೆ ಜನಪ್ರಿಯ ಉಪಹಾರಗಳ ಬೆಲೆಯೂ ಭಾರೀ ಏರಿಕೆಯಾಗಬಹುದು ಎಂಬ ಮುನ್ಸೂಚನೆಯನ್ನು ನೀಡಿದೆ. ಇದರಿಂದ ಗ್ರಾಹಕರ ಜೊತೆಗೆ ಸಣ್ಣ ಹೋಟೆಲ್ ಮಾಲೀಕರ ಮೇಲೂ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಸಂಘ ತಿಳಿಸಿದೆ.

ಕೆಎಸ್​​ಹೆಚ್​​ಎ ಅಧ್ಯಕ್ಷ ಜಿ.ಕೆ. ಶೆಟ್ಟಿ ಈ ಬಗ್ಗೆ ಮಾಹಿತಿ ನೀಡಿದ್ದು,ಸುಮಾರು ಶೇಕಡಾ 60ರಷ್ಟು ವೇತನ ಹೆಚ್ಚಳದಿಂದ ಈಗಾಗಲೇ ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚದ ಒತ್ತಡದಲ್ಲಿರುವ ಆತಿಥ್ಯ ವಲಯಕ್ಕೆ ಭಾರೀ ಹೊಡೆತ ಬೀಳಲಿದೆ. ಪರಿಷ್ಕೃತ ವೇತನದ ಪ್ರಕಾರ, ಕಾರ್ಮಿಕರಿಗೆ 19,300ರಿಂದ ಆರಂಭವಾಗಿ, ಅತ್ಯುನ್ನತ ಕೌಶಲ್ಯ ಹೊಂದಿದ ಕಾರ್ಮಿಕರಿಗೆ 31,100ರವರೆಗೆ ಕನಿಷ್ಠ ವೇತನ ನಿಗದಿಯಾಗಿದೆ. ಈ ವೇತನ ವ್ಯವಸ್ಥೆಯನ್ನು ಈಗಿನ ರೂಪದಲ್ಲೇ ಜಾರಿಗೆ ತಂದರೆ ಉಪಹಾರಗಳ ದರದಲ್ಲಿ ತೀವ್ರ ಏರಿಕೆ ಆಗಲಿದೆ. ಈಗ 50 ರೂ. ಇರುವ ಒಂದು ಪ್ಲೇಟ್​​ ಇಡ್ಲಿ ಬೆಲೆ 80-90ಕ್ಕೆ ಏರಬಹುದು. 80-90 ರೂ. ಇರುವ ಮಸಾಲೆ ದೋಸೆ ದರ 150ಕ್ಕೆ ತಲುಪಬಹುದು ಎಂದು ಅವರು ತಿಳಿಸಿದ್ದಾರೆ. ಅದೇ ರೀತಿ 150-200 ರೂ. ಇರುವ ಶಾಕಾಹಾರಿ ಊಟದ ದರ 250-300ಕ್ಕೆ ಏರಬಹುದು. ಬೆಂಗಳೂರಿನಲ್ಲಿ 300-350 ರೂ.ಗಳಿಗೆ ಸಿಗುತ್ತಿರುವ ಬಿರಿಯಾನಿ ಬೆಲೆ ಸುಮಾರು 500ಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಏಳು ಅಭ್ಯಾಸಗಳನ್ನು ಅಳವಡಿಸಿಕೊಂಡು ತನ್ನ ಖರ್ಚು ವೆಚ್ಚಕ್ಕೆ ಬ್ರೇಕ್ ಹಾಕಿದ ಬೆಂಗಳೂರಿಗ

ವಾಣಿಜ್ಯ LPG ಸಿಲಿಂಡರ್ ದರ ಏರಿಕೆಯೂ ಹೋಟೆಲ್​​ಗಳ ಮೇಲೆ ಈಗಾಗಲೇ ಆರ್ಥಿಕ ಹೊರೆ ಹೆಚ್ಚಿಸಿವೆ. ಕೆಲವೇ ತಿಂಗಳಲ್ಲಿ LPG ಸಿಲಿಂಡರ್ ದರ 1,884 ರೂ.ಗಳಿಂದ 3,152ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ದಿನಸಿ ಸಾಮಗ್ರಿಗಳ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ ಮತ್ತು ಕಸ ಸಂಗ್ರಹ ಸೆಸ್​​ ಶುಲ್ಕಗಳೂ ಹೋಟೆಲ್ ಉದ್ಯಮಕ್ಕೆ ಹೊರೆ ತಂದಿವೆ ಎಂದರು ತಿಳಿಸಿದ್ದಾರೆ. ಹೋಟೆಲ್‌ಗಳು ಈಗಾಗಲೇ ಕಾರ್ಮಿಕರಿಗೆ ಊಟ, ವಸತಿ, ಯೂನಿಫಾರ್ಮ್ ಸೌಲಭ್ಯ ನೀಡುತ್ತಿರುವುದರಿಂದ ಈ ವಲಯವನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:39 am, Tue, 26 May 26

Source link

ಶಿವಣ್ಣನ ಪವರ್​ಫುಲ್ ಕಣ್ಣಿನ ಬಗ್ಗೆ ನಟಿ ಜಾನ್ಹವಿ ಕಪೂರ್ ಹೇಳಿದ್ದೇನು? – Kannada News | Peddi Movie event, Actress Janhvi Kapoor talks about Shiva Rajkumar

ಶಿವರಾಜ್ ಕುಮಾರ್ (Shiva Rajkumar) ಕನ್ನಡ ಚಿತ್ರರಂಗದ ಹಿರಿಯ ನಟ. ಹಲವು ಯಂಗ್ ನಟರು, ನಟನೆ, ಫೈಟ್ಸ್, ಡ್ಯಾನ್ಸು ಎಲ್ಲ ರೀತಿಯಲ್ಲಿಯೂ ತಯಾರಾಗಿ ಚಿತ್ರರಂಗಕ್ಕೆ ಬರುತ್ತಿದ್ದರೂ ಈ ಮೂರೂ ವಿಭಾಗಗಳಲ್ಲಿ ಶಿವಣ್ಣನ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ವಯಸ್ಸಾದಂತೆ ಶಿವಣ್ಣನ ಖದರ್ ಹೆಚ್ಚಾಗಿದ್ದು, ಕಣ್ಣಿನಲ್ಲೇ ಖದರ್ ತೋರಿಸುತ್ತಾ ತೆರೆಯನ್ನು ಆವರಿಸಿಕೊಳ್ಳುತ್ತಾರೆ. ಇದೀಗ ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ಶಿವಣ್ಣನ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್ ಅವರುಗಳು ನಟಿಸಿದ್ದಾರೆ. ನಿನ್ನೆ ‘ಪೆದ್ದಿ’ ಚಿತ್ರತಂಡ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿತ್ತು. ಈ ವೇಳೆ ನಟಿ ಜಾನ್ಹವಿ ಕಪೂರ್ ಅವರು ಶಿವರಾಜ್ ಕುಮಾರ್ ಅವರ ಬಗ್ಗೆ ತಾವು ಗಮನಿಸಿದ ಅಂಶವನ್ನು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಜಾನ್ಹವಿ ಕಪೂರ್, ‘ಶಿವರಾಜ್ ಕುಮಾರ್ ಅವರು ಹಿರಿಯ ನಟ, ‘ಪೆದ್ದಿ’ಯಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ದರಾದೃಷ್ಟವಷಾತ್ ನನ್ನದು ಅವರೊಟ್ಟಿಗೆ ಕೇವಲ ಒಂದು ಸೀನ್ ಅಷ್ಟೆ ಇತ್ತು. ಅದರೆ ಆ ಒಂದು ಸೀನ್​​ನಲ್ಲೇ ಅವರು ಎಂಥಹಾ ಅದ್ಭುತ ಕಲಾವಿದ ಎಂಬುದನ್ನು ನಾನು ಅರಿತುಕೊಂಡೆ. ಅವರು ಬಹಳ ಗಾಢವಾಗಿ ತಮ್ಮ ನಟನೆ ನೀಡುತ್ತಾರೆ ಅವರ ಕಣ್ಣುಗಳು ಬಹಳ ಪವರ್​ಫುಲ್ ಆಗಿವೆ’ ಎಂದಿದ್ದಾರೆ.

ಇದನ್ನೂ ಓದಿ:ವಿಕಲಚೇತನ ಯುವಕನ ಚಿತ್ರಕಲೆ ಮೆಚ್ಚಿದ ಶಿವರಾಜ್ ಕುಮಾರ್

‘ಪೆದ್ದಿ’ ಸಿನಿಮಾನಲ್ಲಿ ಅವರೊಟ್ಟಿಗೆ ಹೆಚ್ಚು ನಟಿಸಲು ನನಗೆ ಅವಕಾಶ ಸಿಗಲಿಲ್ಲ ಆದರೆ ಮುಂದಿನ ದಿನಗಳಲ್ಲಿ ಅವರಂಥಹಾ ಮಹಾನ್ ನಟನೊಡನೆ ನಟಿಸಲು ಹೆಚ್ಚು ಅವಕಾಶ ಸಿಗಲಿದೆ ಎಂದು ಆಶಿಸುತ್ತೇನೆ’ ಎಂದು ನಟಿ ಜಾನ್ಹವಿ ಕಪೂರ್ ಹೇಳಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ನಟಿ ಜಾನ್ಹವಿ ಕಪೂರ್ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದರು. ಸಾಕಷ್ಟು ಅಭ್ಯಾಸ ಮಾಡಿ ಕೆಲ ಕನ್ನಡದ ಮಾತುಗಳನ್ನು ನಟಿ ಮಾತನಾಡಿದ್ದು ವಿಶೇಷ.

‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ನಾಯಕ. ಸಿನಿಮಾನಲ್ಲಿ ಅವರು ಕ್ರಿಕೆಟಿಗನಾಗಿ ಮತ್ತು ಕುಸ್ತಿ ಪಟುವಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಶಿವಣ್ಣ ಗೌಡನಾಯ್ಡು ಪಾತ್ರದಲ್ಲಿ ನಟಿಸಿದ್ದು, ರಾಮ್ ಚರಣ್​​ಗೆ ಕುಸ್ತಿ ಹೇಳಿಕೊಡುವ ಪಾತ್ರ ಅವರದ್ದು. ಜಾನ್ಹವಿ ಕಪೂರ್ ನಾಯಕಿ. ಜಗಪತಿ ಬಾಬು, ಬಾಲಿವುಡ್ ನಟ ದಿವ್ಯೇಂದು ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದು, ಸಿನಿಮಾ ನಿರ್ದೇಶನ ಮಾಡಿರುವುದು ಬುಚ್ಚಿಬಾಬು ಸನಾ. ನಿರ್ಮಾಣ ಮಾಡಿರುವುದು ಮೈತ್ರಿ ಮೂವಿ ಮೇಕರ್ಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:57 am, Tue, 26 May 26

Source link

Video: ಏಳು ಅಭ್ಯಾಸಗಳನ್ನು ಅಳವಡಿಸಿಕೊಂಡು ತನ್ನ ಖರ್ಚು ವೆಚ್ಚಕ್ಕೆ ಬ್ರೇಕ್ ಹಾಕಿದ ಬೆಂಗಳೂರಿಗ – Kannada News | Bengaluru: A Bengaluru man put a stop to spending by adopting seven habits

ಬೆಂಗಳೂರು, ಮೇ 26: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಕೈ ತುಂಬಾ ಸಂಬಳ ಇರುವ ಉದ್ಯೋಗವೇನೋ ಸಿಗುತ್ತದೆ. ಆದರೆ ಖರ್ಚು ಅಷ್ಟೇ ಇದೆ ಅನ್ನೋದು ಅನೇಕರ ಅಭಿಪ್ರಾಯ. ಮಾಯಾನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಉಳಿತಾಯ ಮಾಡುವುದು ಸುಲಭವಲ್ಲ. ಆದರೆ ಬೆಂಗಳೂರಿನ ವ್ಯಕ್ತಿಯೊಬ್ಬರು ತನ್ನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿದ್ದಾರೆ. ಉತ್ತಮ ಅಭ್ಯಾಸಗಳು ಚುರುಕಾದ ಆಯ್ಕೆಗಳಿಂದ ದುಡ್ಡು ಖರ್ಚಾಗುವುದನ್ನು ತಪ್ಪಿಸಿದ್ದಾರೆ. ತಾನು ಅಳವಡಿಸಿಕೊಂಡ ಏಳು ಅಭ್ಯಾಸಗಳನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.

@bangalore_viral ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಕ್ಷಯ್ ಸಿಎನ್ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪ್ ನ ಶೀರ್ಷಿಕೆಯಲ್ಲಿ “ನನ್ನ ಜೀವನಶೈಲಿಯನ್ನು ಹಾಳು ಮಾಡಿಕೊಳ್ಳದೆ ನನ್ನ ಬೆಂಗಳೂರಿನ ಖರ್ಚುಗಳನ್ನು ನಾನು ಹೇಗೆ ಕಡಿಮೆ ಮಾಡಿಕೊಂಡೆ” ಎಂದು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಅಕ್ಷಯ್ ಅವರು, ಹೆಚ್ಚು ಇಷ್ಟವಾದ ಸ್ಥಳವನ್ನು ಆಯ್ಕೆ ಮಾಡುವ ಬದಲು ಮೆಟ್ರೋ ಹತ್ತಿರಕ್ಕೆ ಬದಲಾಯಿಸಿದ್ದು ತಾನು ಮಾಡಿದ ದೊಡ್ಡ ಬದಲಾವಣೆಗಳಲ್ಲಿ ಒಂದಾಗಿದೆ. ಆರಂಭದಲ್ಲಿ ಬಾಡಿಗೆ ಸ್ವಲ್ಪ ಹೆಚ್ಚೇ ಇದ್ದಂತೆ ಕಂಡಿತು. ಆದರೆ ಅಂತಿಮವಾಗಿ ಇದು ದೈನಂದಿನ ಪ್ರಯಾಣ, ಇಂಧನ ಮತ್ತು ಆಟೋಗಳಲ್ಲಿ ವೆಚ್ಚ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡಿತು ಎಂದು ಬರೆದಿದ್ದಾರೆ.

ನಾನು ದೈನಂದಿನ ಖರ್ಚುಗಳಿಗೆ ಅನುಕೂಲತೆಯನ್ನು ನೆಪವಾಗಿ ಬಳಸುವುದನ್ನು ನಿಲ್ಲಿಸಿದೆ. ತ್ವರಿತ ವಿತರಣೆಗಳು, ಆಟೋಗಳು, ಚಂದಾದಾರಿಕೆಗಳು ಮತ್ತು ‘ಸಣ್ಣ’ ಆನ್‌ಲೈನ್ ಖರೀದಿಗಳು ಬೆಂಗಳೂರಿನಲ್ಲಿ ನನ್ನ ಅತಿದೊಡ್ಡ ಮಾಸಿಕ ವೆಚ್ಚಗಳಲ್ಲಿ ಒಂದಾದವು. ನಾನು ಯಾದೃಚ್ಛಿಕ ಖರ್ಚು ಮಾಡುವ ಬದಲು ನನ್ನ ವಾರಾಂತ್ಯಗಳನ್ನು ಯೋಜಿಸಲು ಪ್ರಾರಂಭಿಸಿದೆ. ಯೋಜಿತವಲ್ಲದ ಕೆಫೆ ಹಾಪಿಂಗ್, ಪಬ್‌ಗಳು ಮತ್ತು ಹಠಾತ್ ಪ್ರವಾಸಗಳು ಬೆಂಗಳೂರಿನಲ್ಲಿ ಜನರು ಅರಿತುಕೊಳ್ಳುವುದಕ್ಕಿಂತ ವೇಗವಾಗಿ ಉಳಿತಾಯವನ್ನು ಸದ್ದಿಲ್ಲದೆ ನಾಶಮಾಡುತ್ತವೆ ಎಂದು ವಿವರಿಸಿದ್ದಾರೆ.

ನನ್ನ ಸುತ್ತಲಿನ ಎಲ್ಲರೂ ಗ್ಯಾಜೆಟ್‌ಗಳಂತೆ ಇದ್ದ ಕಾರಣ ನಾನು ಗ್ಯಾಜೆಟ್‌ಗಳನ್ನು ಅಪ್‌ಗ್ರೇಡ್ ಮಾಡುವುದನ್ನು ನಿಲ್ಲಿಸಿದೆ. ಬೆಂಗಳೂರಿನ ಕೆಲಸದ ಸಂಸ್ಕೃತಿಯು ಸದ್ದಿಲ್ಲದೆ ಅನಗತ್ಯ ಜೀವನಶೈಲಿಯ ಒತ್ತಡವನ್ನು ಸೃಷ್ಟಿಸಬಹುದು. ಬೆಂಗಳೂರಿನ ಜೀವನಶೈಲಿಯ ಪ್ರವೃತ್ತಿಗಳೊಂದಿಗೆ ಮುಂದುವರಿಯಲು ಪ್ರಯತ್ನಿಸುವುದನ್ನು ನಿಲ್ಲಿಸಿದ್ದೇನೆ. ಅನೇಕ ಜನರು ಸಾಮಾಜಿಕವಾಗಿ ನವೀಕೃತವಾಗಿರಲು ಮಾತ್ರ ಹಣವನ್ನು ಖರ್ಚು ಮಾಡುತ್ತಾರೆ ಎಂದು ಉಲ್ಲೇಖಿಸಿರುವುದು ಕಾಣಬಹುದು.

ಇನ್ನೊಂದು ಪ್ರಮುಖ ಬದಲಾವಣೆಯೆಂದರೆ, ಪ್ರತಿದಿನ ಹೊರಗೆ ತಿನ್ನುವ ಬದಲು ಕೆಲವೊಮ್ಮೆ ಅಡುಗೆ ಮಾಡುವುದು. ಇದು ನನ್ನ ಆರೋಗ್ಯ ಹಾಗೂ ಉಳಿತಾಯ ಎರಡನ್ನೂ ನಿಜವಾಗಿಯೂ ಬದಲಾಯಿಸಿತು. ಹೆಚ್ಚಿನ ಸಂಬಳ ಮಾತ್ರ ಹಣದ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ ಎಂದು ನಾನು ಕಲಿತಿದ್ದೇನೆ. ಬೆಂಗಳೂರಿನಲ್ಲಿ ಉತ್ತಮ ಅಭ್ಯಾಸಗಳು ಹೆಚ್ಚು ಮುಖ್ಯ ಎಂದು ಕಟು ಸತ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಆಟೋ ಚಾಲಕಿಯನ್ನು ಶ್ಲಾಘಿಸಿದ ಬೆಂಗಳೂರಿನ ಅಮೆಜಾನ್ ಉದ್ಯೋಗಿ, ಕಾರಣ ಇದೇ ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬೇರೆಯವರನ್ನು ನೋಡಿ ಬದುಕುವುದನ್ನು ಬಿಟ್ಟರೆ ಖರ್ಚು ಹಿಡಿತದಲ್ಲಿರುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮ್ಮ ಮಾತನ್ನು ನಾನು ಒಪ್ಪುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಲೈಫ್ ಸ್ಟೈಲ್ ಬದಲಾಯಿಸಿದರೆ ಖರ್ಚಿಗೆ ಬ್ರೇಕ್ ಹಾಕ್ಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version