Headlines

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ – Kannada News | Dog Bite Warning: Don’t Neglect Rabies Vaccine – Bagalakote Tragedy Highlights Risk

ಬಾಗಲಕೋಟೆ, ಮೇ.26: ಹುಚ್ಚು ನಾಯಿ ಕಚ್ಚಿದ ನಂತರ ಸಕಾಲದಲ್ಲಿ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ನಂತರ ಅದಕ್ಕೆ ಬೇಕಾದ ಚಿಕಿತ್ಸೆಗಳನ್ನು ಪಡೆಯುವುದು ಕಡ್ಡಾಯ. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದರೆ ಸಾವು ಖಂಡಿತ. ಮೂಲಗಳ ಪ್ರಕಾರ, ಕಳೆದ ಮಾರ್ಚ್…

Read More

ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್​ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ – Kannada News | Mahesh Babu and Prashanth Neel Movie: Why the Dream Project Faces Long Delays

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಮತ್ತು ಸ್ಯಾಂಡಲ್‌ವುಡ್ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರಾಗನ್’ ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾದ ಬೆನ್ನಲ್ಲೇ ಈ ಗಾಸಿಪ್‌ಗೆ ಮತ್ತಷ್ಟು ರೆಕ್ಕೆಪುಕ್ಕೆ ಬಂದಿದೆ. ಮಹೇಶ್ ಬಾಬು ಅವರು ತಮ್ಮ ಮುಂಬರುವ ‘ವಾರಣಾಸಿ’ ಚಿತ್ರವನ್ನು ಮುಗಿಸಿದ ನಂತರ ಪ್ರಶಾಂತ್ ನೀಲ್ ಜೊತೆ ಬಿಗ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮಾಡಲಿದ್ದಾರೆ ಎಂದು ವರದಿಯಾಗಿದೆ.ಆದರೆ,…

Read More

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ – Kannada News | Good News for Rail Passengers: SWR Extends Summer Special Trains Until June End; Check Route and Train List Here

ಸಾಂದರ್ಭಿಕ ಚಿತ್ರImage Credit source: South Western Railway ಬೆಂಗಳೂರು, ಮೇ 26: ಬೇಸಿಗೆಯ ರಜೆ ಮುಗಿಸಿ ಊರುಗಳಿಗೆ ಹಾಗೂ ಕೆಲಸದ ಸ್ಥಳಗಳಿಗೆ ಮರಳುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ (SWR) ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರ್ವಜನಿಕರ ದಟ್ಟಣೆ ನಿಯಂತ್ರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸದ್ಯ ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬೇಸಿಗೆ ವಿಶೇಷ ರೈಲುಗಳ (Summer Special Trains) ಅವಧಿಯನ್ನು ಜೂನ್ ತಿಂಗಳ ಕೊನೆಯ ವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಈ ಎಲ್ಲಾ…

Read More

Padma Awards 2026: ಧರ್ಮೇಂದ್ರ, ಅಲ್ಕಾ, ಮಮ್ಮುಟ್ಟಿ ಸೇರಿ 131 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಧಾನ – Kannada News | President Murmu Presents 131 Padma Awards 2026: Full List and Key Highlights

ದ್ರೌಪದಿ ಮುರ್ಮುImage Credit source: Screen shot from Video ನವದೆಹಲಿ, ಮೇ 26: ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ಅತ್ಯುತ್ತಮ ಕೊಡುಗೆ ನೀಡಿದ ದೇಶದ ಮಹಾನ್ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ‘ಪದ್ಮ ಪ್ರಶಸ್ತಿ'(Padma Awards)ಗಳನ್ನು ಪ್ರದಾನ ಮಾಡಲಾಗಿದೆ. ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ಇಂದು ಅಧಿಕೃತವಾಗಿ ವಿತರಿಸಲಾಗುತ್ತಿದೆ. ಪ್ರಶಸ್ತಿಗಳ ವಿವರ ಹೀಗಿದೆ: ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಅನುಮೋದಿಸಲಾಗಿದ್ದು, ಅವುಗಳ…

Read More

Vastu Guide: ಮನೆಗೆ ಯಾವ ಬಣ್ಣದ ಶಿವಲಿಂಗ ಶ್ರೇಷ್ಠ? ಖರೀದಿಸುವ ಮುನ್ನ ತಪ್ಪದೇ ಈ ವಾಸ್ತು ನಿಯಮ ತಿಳಿಯಿರಿ – Kannada News | Black vs. White Shiva Linga at Home: Vastu Guide for Peace and Prosperity

ಕಪ್ಪು ಶಿವಲಿಂಗ ಉತ್ತಮವೇ ಅಥವಾ ಬಿಳಿImage Credit source: Ai generated ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಮತ್ತು ಶಿವಲಿಂಗ ಪೂಜೆಗೆ ಅತ್ಯಂತ ವಿಶೇಷವಾದ ಮಹತ್ವವಿದೆ. ಶಿವಲಿಂಗವನ್ನು ಬ್ರಹ್ಮಾಂಡ, ಅಗಾಧ ಶಕ್ತಿ ಮತ್ತು ಆಧ್ಯಾತ್ಮಿಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಹೆಚ್ಚಿನ ಜನರು ತಮ್ಮ ಮನೆಯ ದೇವರ ಕೋಣೆಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಬಯಸುತ್ತಾರೆ. ಆದರೆ, ಮಾರುಕಟ್ಟೆಯಿಂದ ಶಿವಲಿಂಗವನ್ನು ಖರೀದಿಸುವಾಗ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಮೂಡುವ ದೊಡ್ಡ ಪ್ರಶ್ನೆಯೆಂದರೆ—ಮನೆಗೆ ಕಪ್ಪು ಶಿವಲಿಂಗ ಒಳ್ಳೆಯದೇ ಅಥವಾ ಬಿಳಿ ಶಿವಲಿಂಗವೇ? ಜ್ಯೋತಿಷ್ಯ ಮತ್ತು…

Read More

‘ಪದ್ಮಶ್ರೀ’ ಪ್ರಶಸ್ತಿ ಸ್ವೀಕರಿಸಿದ ಹರ್ಮನ್‌ಪ್ರೀತ್ ಕೌರ್ – Kannada News | Harmanpreet Kaur receives Padma Shri Award

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 25, 2026 ರಂದು ನಡೆದ ನಾಗರಿಕ ಹೂಡಿಕೆ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತೀಯ ಮಹಿಳಾ ಕ್ರಿಕೆಟ್‌ಗೆ ಅವರು ನೀಡಿದ ಅಪ್ರತಿಮ ಕೊಡುಗೆ ಮತ್ತು ಅವರ ನೇತೃತ್ವದಲ್ಲಿ ಭಾರತ ತಂಡ ಸಾಧಿಸಿದ ಐತಿಹಾಸಿಕ ಯಶಸ್ಸನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಈ ಪ್ರಶಸ್ತಿ…

Read More

CNG Price Hike: ಪೆಟ್ರೋಲ್, ಡೀಸೆಲ್​ ಆಯ್ತು ಈಗ ಸಿಎನ್​ಜಿ ದರ ಏರಿಕೆ! ವಾಹನ ಸವಾರರಿಗೆ ಶಾಕ್​ – Kannada News | CNG Price Hike: After Petrol and Diesel, CNG Prices Increased Due to Global Crude Turmoil and Supply Disruption

ನವದೆಹಲಿ, ಮೇ 26: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆಯಾದ ನಂತರ, ಈಗ ಸಿಎನ್‌ಜಿ (CNG) ದರವೂ ಹೆಚ್ಚಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಪ್ರತಿ ಕೆಜಿಗೆ 83 ರೂಪಾಯಿ 9 ಪೈಸೆಗೆ ತಲುಪಿದೆ. ಇದು ಸಿಎನ್‌ಜಿ ಬಳಸುವ ವಾಹನ ಮಾಲೀಕರಿಗೆ ಭಾರಿ ಆಘಾತ ನೀಡಿದೆ. ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆ ಕಂಡಿದ್ದವು. ಅದರ ಬೆನ್ನಲ್ಲೇ, ಸೋಮವಾರ ಮತ್ತೆ ಪ್ರತಿ ಲೀಟರ್‌ಗೆ 2 ರೂಪಾಯಿ 83 ಪೈಸೆ ಹೆಚ್ಚಳವಾಗಿತ್ತು. ಇದೀಗ ಸಿಎನ್‌ಜಿ…

Read More

ಬ್ಯಾನ್ ಬಳಿಕ ರಣವೀರ್ ಸಿಂಗ್ ಮುಂದಿರುವ ಆಯ್ಕೆಗಳೇನು? – Kannada News | Ranveer Singh Banned by FWICE: Don 3 Exit Triggers 40 Cr Row and Bollywood Hiatus

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ (Ranveer Singh) ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. *…

Read More

ಆಗ್ರಾ-ಲಕ್ನೋ ಎಕ್ಸ್​ಪ್ರೆಸ್​ವೇಯಲ್ಲಿ ಬಸ್ ಪಲ್ಟಿ, ಆರು ಮಂದಿ ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ – Kannada News | Delhi Bihar Bus Overturns on Agra Lucknow Expressway, Multiple Dead and Injured

ಉನ್ನಾವೋ, ಮೇ 26: ದೆಹಲಿಯಿಂದ ಬಿಹಾರಕ್ಕೆ ಹೋಗುತ್ತಿದ್ದ ಬಸ್(Bus) ಆಗ್ರಾ-ಲಕ್ನೋ ಎಕ್ಸ್​ಪ್ರೆಸ್​ವೇನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಔರಾಸ್ ಪೊಲೀಸ್ ಠಾಣೆ ಪ್ರದೇಶದ ಆಗ್ರಾ ಲಕ್ನೋ ಎಕ್ಸ್​ಪ್ರೆಸ್​ವೇಯಲ್ಲಿ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಔರಾಸ್ ಎಸ್‌ಒ ಸಂಜೀವ್ ಕುಶ್ವಾಹ ಅವರ ಪ್ರಕಾರ, ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ಮತ್ತು ಕೈದಿ ಸೇರಿದ್ದಾರೆ….

Read More

ಪೊಲೀಸರನ್ನ ಕಂಡು ಬಿಲ್ಡಿಂಗ್‌ನಿಂದ ಕೆಳಗೆ ಹಾರಿದ ರೌಡಿ ‘ಸ್ಪಾಟ್ ನಾಗ’; ಸೊಂಟ ಮುರಿದುಕೊಂಡು ಆಸ್ಪತ್ರೆ ಸೇರಿದ ಕಿರಾತಕ! – Kannada News | Soladevanahalli Police Chase: Spot Naga Jumps From Building, Suffers Hip Injury

ಬೆಂಗಳೂರು, ಮೇ.26 : ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೌಡಿಶೀಟರ್‌ ಒಬ್ಬ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಕೆಳಗೆ ಹಾರಿ ಸೊಂಟ ಜಾಯಿಂಟ್ ಕಂಪ್ರೆಷನ್ (ಸೊಂಟದ ಮೂಳೆ ಜರುಗುವಿಕೆ) ಆಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡಿರುವ ಆರೋಪಿಯನ್ನು ನಗರದ ಕುಖ್ಯಾತ ರೌಡಿ ನಾಗರಾಜ್ ಅಲಿಯಾಸ್ ‘ಸ್ಪಾಟ್ ನಾಗ’ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಈ ಹಿಂದೆ ಯುವಕನೊಬ್ಬನಿಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದ ಪ್ರಕರಣದಲ್ಲಿ ರೌಡಿ ಸ್ಪಾಟ್ ನಾಗ…

Read More