ಕೊರಿಯನ್‌ ಸುಂದರಿಯರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕೆಂದರೆ ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to get glowing skin like Korean beauties

ಕೊರಿಯನ್‌ ಮಹಿಳೆಯರಂತೆ ಸುಂದರ, ಕಾಂತಿಯುತ ತ್ವಚೆ (glowing skin) ನಮ್ಮದಾಗಬೇಕೆಂಬ ಬಯಕೆ ಪ್ರತಿಯೊಬ್ಬ ಮಹಿಳೆಯರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತ ದುಬಾರಿ ಕ್ರೀಮ್‌ ಬಳಕೆ ಮಾಡುತ್ತಾರೆ. ತ್ವಚೆಯ ಹೊಳಪು ಹೆಚ್ಚಾಗಬೇಕೆಂದು ಫೇಶಿಯಲ್‌ ಸೇರಿದಂತೆ ಇತ್ಯಾದಿ ಪ್ರಯೋಗಗಳನ್ನು ಮಾಡುತ್ತಾರೆ. ಇದರಿಂದ ತ್ವಚೆಯ ಸೌಂದರ್ಯ ಹೆಚ್ಚಾಗುವ ಬದಲು ಮೊಡವೆ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುವುದೇ ಹೆಚ್ಚು. ಇದರ ಬದಲು ಹೆಚ್ಚು ಹಣ ಖರ್ಚು ಮಾಡದೆ ಈ ಕೆಲವೊಂದಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ನೈಸರ್ಗಿಕ ರೀತಿಯಲ್ಲಿ ಕೊರಿಯನ್‌ ಮಹಿಳೆಯರಂತೆ ಕಾಂತಿಯುತ ತ್ವಚೆಯನ್ನು ನೀವು ಕೂಡ ಪಡೆಯಬಹುದು. ಅದಕ್ಕಾಗಿ ಏನು ಮಾಡಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

ಕೊರಿಯನ್‌ ಗ್ಲಾಸ್‌ ಸ್ಕಿನ್‌ ನಿಮ್ಮದಾಗಲು ಈ ಟಿಪ್ಸ್‌ ಪಾಲಿಸಿ:

ಟೋನರ್:‌ ಟೋನರ್‌ ತ್ವಚೆಗೆ ತೇವಾಂಶವನ್ನು ನೀಡುತ್ತದೆ. ಜೊತೆಗೆ ಇದು ತ್ವಚೆಯನ್ನು ಮೃದುವಾಗಿಡಲು ಸಹಾಯ ಮಾಡುತ್ತದೆ. ಇದಕ್ಕಾಗಿ ನೀವು ದುಬಾರಿ ಟೋನರ್‌ಗಳನ್ನು ಬಳಸಬೇಕಿಲ್ಲ, ರೋಸ್‌ ವಾಟರ್‌ ಕೂಡ ಉತ್ತಮವಾಗಿ ಕೆಲಸ ಮಾಡುತ್ತದೆ. ರೋಸ್‌ ವಾಟರನ್ನು ಹತ್ತಿಯ ಉಂಡೆಯಿಂದ ಮುಖಕ್ಕೆ ಹಚ್ಚಿ ಇಲ್ಲದಿದ್ದರೆ ಸ್ಪ್ರೇ ಕೂಡ ಮಾಡಬಹುದು.

ಸೀರಮ್‌ ಹಚ್ಚಿ: ಕೊರಿಯನ್‌ ಸ್ಕಿನ್‌ಕೇರ್‌ನಲ್ಲಿ ಸೀರಮ್‌ಗಳನ್ನು ಅತ್ಯಗತ್ಯವೆಂದು ಪರಿಗಣಿಸಲಾಗುತ್ತದೆ. ಈ ಸೀರಮ್‌ ತ್ವಚೆಗೆ ಅಗತ್ಯವಿರುವ ಹವಾರು ವಿಟಮಿನ್‌ಗಳು ಮತ್ತು ಆಂಟಿ ಆಕ್ಸಿಡೆಂಟ್‌ಗಳನ್ನು ಒಳಗೊಂಡಿರುತ್ತವೆ. ಇದು ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಸಹಕಾರಿ. ಇದಕ್ಕಾಗಿ ಅಲೋವೆರಾ ಜೆಲ್‌ ಮತ್ತು ವಿಟಮಿನ್‌ ಇ ಕ್ಯಾಪ್ಸುಲ್‌ಗಳನ್ನು ಬೆರೆಸಿ ನೀವು ಮನೆಯಲ್ಲಿಯೇ ನೈಸರ್ಗಿಕ ಸೀರಮ್‌ ತಯಾರಿಸಬಹುದು. ಮಲಗುವ ಮುನ್ನ ಅದನ್ನು ನಿಮ್ಮ ಮುಖಕ್ಕೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿ.

ಮಾಯಿಶ್ಚರೈಸರ್‌ ಬಳಸಿ: ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಮಾಯಿಶ್ವರೈಸರ್‌ ಬಳಸುವುದು ಸಹ ಮುಖ್ಯ. ಇದು ಶುಷ್ಕತೆಯನ್ನು ನಿವಾರಿಸಿ ತ್ವಚೆಯನ್ನು ಮೃದುವಾಗಿಸುತ್ತದೆ. ವಿಶೇಷವಾಗಿ ಒಣ ಚರ್ಮಕ್ಕೆ ಕ್ರೀಮ್‌ ಅಥವಾ ತೆಂಗಿನ ಎಣ್ಣೆಯನ್ನು ಲಘುವಾಗಿ ಹಚ್ಚುವುದು ಸೂಕ್ತವಾಗಿದೆ.  ಇದು ತ್ವಚೆಯ ನೈಸರ್ಗಿಕ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಫೇಸ್‌ ಪ್ಯಾಕ್:‌ ವಾರಕ್ಕೆ ಒಂದು ಅಥವಾ ಎರಡು ಬಾರಿ ಮೊಸರು ಮತ್ತು ಜೇನುತುಪ್ಪದ ಫೇಸ್‌ ಪ್ಯಾಕ್‌ ಹಚ್ಚಿಕೊಳ್ಳಿ. ಮೊಸರು ಚರ್ಮವನ್ನು ತಂಪಾಗಿಸುತ್ತದೆ ಮತ್ತು ಜೇನುತುಪ್ಪವು ತ್ವಚೆಗೆ ನೈಸರ್ಗಿಕ ಹೊಳಪನ್ನು ತರುತ್ತದೆ. ಅಲ್ಲದೆ ಈ ಫೇಸ್‌ಪ್ಯಾಕ್‌ ಮೊಡವೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಮುಖಕ್ಕೆ ಹೊಳಪನ್ನು ತರುತ್ತದೆ.

ಇದನ್ನೂ ಓದಿ: ಜೀವನದಲ್ಲಿ ಸಂತೋಷ ಬೇಕೆಂದರೆ ನೀವು ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಉತ್ತಮ ಆಹಾರ ಸೇವನೆ: ಕಾಂತಿಯುತ ತ್ವಚೆಗಾಗಿ ಬಾಹ್ಯ ಆರೈಕೆ ಮಾತ್ರವಲ್ಲ, ಒಳಗಿನಿಂದ ಪೋಷಣೆ ಮಾಡುವುದು ಕೂಡ ಅತ್ಯಗತ್ಯ. ಅದಕ್ಕಾಗಿ ದಿನಕ್ಕೆ ಎಂಟು ಗ್ಲಾಸ್‌ ನೀರು ಕುಡಿಯಿರಿ, ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ, ಮತ್ತು ಎಣ್ಣೆಯಲ್ಲಿ ಕರಿದ ಆಹಾರಗಳನ್ನು ಸೇವಿಸುವುದನ್ನು ಮಿತಿಗೊಳಿಸಿ.

ನಿದ್ರೆ ಮತ್ತು ಒತ್ತಡ ರಹಿಸತ ಜೀವನ: ಕೊರಿಯನ್‌ ಮಹಿಳೆಯರ ಸುಂದರ ತ್ವಚೆಯ ಹಿಂದಿನ ಪ್ರಮುಖ ಕಾರಣವೆಂದರೆ ಸರಿಯಾದ ನಿದ್ರೆ ಮತ್ತು ಒತ್ತಡ ರಹಿತ ಜೀವನ. ಮನಸ್ಸು ಸಂತೋಷವಾಗಿದ್ದಾಗ ಅದರ ಪರಿಣಾಮಗಳು ನೇರವಾಗಿ ಮುಖದ ಮೇಲೆ ಪ್ರತಿಫಲಿಸುತ್ತದೆ. ಹಾಗಾಗಿ ತ್ವಚೆಯ ಕಾಂತಿಯನ್ನು ಕಾಪಾಡಿಕೊಳ್ಳಲು ಸರಿಯಾಗಿ ನಿದ್ರೆ ಮಾಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್​​ ಮರ್ಡರ್​​ ಕೆಸ್​​ನಲ್ಲಿ 8 ಮಂದಿ ಅಂದರ್​​ – Kannada News | Mangammanapalya Rowdy Murder: 8 Held in Shabbir Killing Over Area Dominance

ಬೆಂಗಳೂರು, ಜನವರಿ 21: ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್​​ನ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬರೋಬ್ಬರಿ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ ಮೊಹಮ್ಮದ್ ಶಬ್ಬೀರ್ ಮತ್ತು ಐವರು ರಾತ್ರಿ ತಮ್ಮ ಸ್ನೇಹಿತನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದ ಸಂದರ್ಭ ದಾಳಿ ನಡೆಸಿದ್ದ ಆರೋಪಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.

ಶಬ್ಬೀರ್​​ ಕಾಟ ತಾಳಲಾರದೆ ಮರ್ಡರ್​

ನೂರುಲ್ಲ, ನದೀಮ್, ಸಲ್ಮಾನ್ ಖಾನ್, ಮೊಹಮ್ಮದ್ ಅಲಿ, ಸೖಯದ್ ಇಸ್ಮಾಯಿಲ್, ಮೊಹಮ್ಮದ್ ಸಿದ್ದಿಕ್, ಸೖಯದ್ ಕಲೀಂ, ಉಮ್ರೇಜ್ ಬಂಧಿತ ಆರೋಪಿಗಳಾಗಿದ್ದು, ಹಳೆ ವೈಷ್ಯಮ್ಯ ಮತ್ತು ಹವಾ ಮಾಡೋ ವಿಚಾರಕ್ಕೆ ಶಬ್ಬೀರನನ್ನ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಮೊದಲೇ ರೌಡಿ ಶೀಟರ್ ಆಗಿದ್ದ ಶಬ್ಬೀರ್​​ ಹಾವಳಿ ಏರಿಯಾದಲ್ಲಿ ಹೆಚ್ಚಾಗಿತ್ತು. ಇಡೀ ಏರಿಯಾದಲ್ಲಿ ಯಾರೂ ಶಬ್ಬೀರ್​​ನ ಮಾತು ಮೀರುವಂತಿರಲಿಲ್ಲ. ಯಾರೇ ರೌಡಿಸಂ ಮಾಡಿದ್ರೂ ಮೊದಲು ಶಬ್ಬೀರ್​​ಗೆ ವಿಚಾರ ಹೇಳಬೇಕಿತ್ತು. ಆತನ ಬಿಟ್ಟು ಯಾವುದೇ ವ್ಯವಹಾರ ಮಾಡುವಂತಿರಲಿಲ್ಲ. ಯಾರಾದ್ರೂ ತಾನು ಮಾಡ್ತಿದ್ದ ಬ್ಯುಸಿನೆಸ್ ಮಾಡಿದ್ರೆ, ಹಫ್ತಾ ವಸೂಲಿ, ಸೆಟ್ಲಮೆಂಟ್ ಮಾಡಿದ್ರೆ ಗರಂ ಆಗ್ತಿದ್ದ. ಕೂಡಲೇ ಅವರನ್ನು ಕರೆಸಿ ಬೆದರಿಕೆ ಹಾಕಿ ಹಲ್ಲೆ ಮಾಡ್ತಿದ್ದ. ಇಂತಹುದ್ದೇ ಕಾರಣದಿಂದ ಸುಮಾರು 10-15 ಜನ ಶಬ್ಬೀರ್​​ನಿಂದ ಹಲ್ಲೆಗೊಳಗಾಗಿದ್ರು. ಹೀಗಾಗಿ ಶಬ್ಬೀರ್ ಇದ್ರೆ ನಮ್ಮ ವ್ಯವಹಾರಗಳು ನಡೆಯಲ್ಲ, ನಮ್ಮ ಜೀವಕ್ಕೆ ಅಪಾಯ ಎಂದು ಎಲ್ಲ ಸೇರಿ ಆತನ ಕತೆಯನ್ನೇ ಮುಗಿಸಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​; ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ

ಎರಡು ಬಾರಿ ಫೇಲ್​ ಆಗಿತ್ತು ಆರೋಪಿಗಳ ಪ್ಲ್ಯಾನ್​​!

ಇನ್ನು ಆರೋಪಿಗಳು ಈ ಹಿಂದೆಯೂ ಎರಡೆರಡು ಬಾರಿ ಶಬ್ಬೀರ್​​ನ ಮುಗಿಸಲೇ ಬೇಕು ಎಂದು ಹೊಂಚು ಹಾಕಿದ್ದರು. ಆದರೆ ಆತನ ಮೇಲಿನ ಭಯ ಇವರನ್ನು ಕೃತ್ಯದಿಂದ ಹಿಂದೆ ಸರಿಯುವಂತೆ ಮಾಡಿತ್ತು. ಅದಾದ ಬಳಿಕ ಮತ್ತೆ ಮೂರನೇ ಬಾರಿಗೆ ಸ್ಕೆಚ್​​ ಹಾಕಿದ್ದ ಗ್ಯಾಂಗ್​​, ಜ.12ರಂದು ಪಕ್ಕಾ ಪ್ಲ್ಯಾನ್​​ ಮಾಡಿ ಆಟೋದಲ್ಲಿ ಬರ್ತಿದ್ದ ಶಬ್ಬೀರ್ ಅಡ್ಡಗಟ್ಟಿ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಿರುವ ಪೊಲೀಸರು, ಇನ್ನೂ ಕೆಲವರಿಗೆ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವರದಿ: ಪ್ರದೀಪ್ ಚಿಕ್ಕಾಟಿ, Tv9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:10 pm, Wed, 21 January 26

Source link

ವಿಜಯಲಕ್ಷ್ಮಿ ದರ್ಶನ್​​ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ – Kannada News | Bad comment to Vijayalakshmi Darshan eight people arrested

ದರ್ಶನ್ ತೂಗುದೀಪ (Darshan Thoogudeepa) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್​​ಗಳನ್ನು ಮಾಡುತ್ತಿರುವ, ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಆಗಿ ಮೌಕಿಖವಾಗಿಯೂ ದೂರು ಹೇಳಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮೊದಲು ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಂಖ್ಯೆ ಎಂಟಕ್ಕೆ ಏರಿಕೆ ಆಗಿದೆ. ದಾವಣಗೆರೆಯ ಇಂಜಿನಿಯರ್ ನಿತಿನ್, ಚಿಕ್ಕಬಾಣಾವರದ ಆಟೋ ಡ್ರೈವರ್ ಚಂದ್ರು, ಹುಬ್ಬಳ್ಳಿ ಪೆಟ್ರೋಲ್ ಬಂಕ್ ಮ್ಯಾನೇಜರ್ ನಾಗರಾಜ್ ತಳವಾರ್, ಧಾರವಾಡದ ಆಡಿಟರ್ ಪ್ರಶಾಂತ್ ತಳವಾರ್ ಬಂಧಿತರಾಗಿದ್ದರು. ಇವರ ಜೊತೆಗೆ ಇನ್ನೂ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಟೆಕ್ನಿಕಲ್ ಸಾಕ್ಷ್ಯವನ್ನು ಸಂಗ್ರಹಿಸುತ್ತಿದ್ದಾರೆ. ಕೆಲವರನ್ನು ಜನವರಿ 7ನೇ ತಾರೀಖು ಹಾಗೂ ಅದಕ್ಕೆ ಮುಂಚೆಯೇ ಪೊಲೀಸರು ಬಂಧಿಸಿದ್ದರು. ಕೆಲವು ಆರೋಪಿಗಳು ಪರಾರಿ ಆಗಿದ್ದರು. ಇದೀಗ ಒಟ್ಟು ಎಂಟು ಮಂದಿಯನ್ನು ಬಂಧಿಸಿದ್ದು, ಸಾಕ್ಷ್ಯಗಳ ಪರಿಶೀಲನೆ ಬಳಿಕ ಎಲ್ಲರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಡಿಸೆಂಬರ್ ತಿಂಗಳಲ್ಲಿ ದಾವಣಗೆರೆಯಲ್ಲಿ ಮಾತನಾಡಿದ್ದ ವಿಜಯಲಕ್ಷ್ಮಿ, ‘ದರ್ಶನ್ ಇಲ್ಲದೇ ಇರುವಾಗ ಕೆಲವರು ಮಾತನಾಡುತ್ತಿದ್ದಾರೆ, ದರ್ಶನ್ ಇದ್ದಾಗ ಅವರ ಇದ್ದಾರೆಂಬುದು ಸಹ ಗೊತ್ತಾಗುತ್ತಿರಲಿಲ್ಲ’ ಎಂದು ಪರೋಕ್ಷವಾಗಿ ಸುದೀಪ್​​ಗೆ ಟಾಂಗ್ ನೀಡಿದ್ದರು. ಇದೇ ಕಾರಣಕ್ಕೆ ವಿಜಯಲಕ್ಷ್ಮಿ ವಿರುದ್ಧ ಟ್ರೋಲಿಂಗ್ ಶುರುವಾಗಿತ್ತು, ಅವರ ವಿರುದ್ಧ ಸುದೀಪ್ ಅಭಿಮಾನಿಗಳು ಮುಗಿಬಿದ್ದಿದ್ದರು. ಇದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರು ಪೊಲೀಸರಿಗೆ 15 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ದೂರು ನೀಡಿದ್ದರು. 150 ಸ್ಕ್ರೀನ್ ಶಾಟ್​​ಗಳನ್ನು ಸಹ ವಿಜಯಲಕ್ಷ್ಮಿ ಹಂಚಿಕೊಂಡಿದ್ದರು.

ಇದನ್ನೂ ಓದಿ:ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್

ವಿಜಯಲಕ್ಷ್ಮಿ ಅವರು ದೂರು ನೀಡಿದ ಕೆಲ ದಿನಗಳ ಬಳಿಕ, ತಮ್ಮ ದೂರನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವಿಜಯಲಕ್ಷ್ಮಿ, ‘ನಾನು ನೀಡಿದ ದೂರನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ, ಕಾನೂನಿನ ಮೇಲೆ ನನಗೆ ನಂಬಿಕೆ ಇತ್ತು, ಆದರೆ ಈಗ ಆ ನಂಬಿಕೆಯನ್ನು ಪ್ರಶ್ನೆ ಮಾಡುವಂತಾಗಿದೆ. ಅದೇ ಮತ್ತೊಬ್ಬ ಮಹಿಳೆ ಕೊಟ್ಟಿದ್ದ ದೂರಿಗೆ ಒಂದೇ ದಿನದಲ್ಲಿ ಸ್ಪಂದಿಸಿದ್ದರು. ನನ್ನ ವಕೀಲರು ಪದೇ ಪದೇ ಫಾಲೋ ಅಪ್ ಮಾಡಿದರೂ ಸಹ ಪೊಲೀಸರು ತನಿಖೆ ಮಾಡುತ್ತಿಲ್ಲ’ ಎಂದು ಪೊಲೀಸರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರು ಸ್ಪಷ್ಟನೆ ನೀಡಿ, ಇನ್ನಷ್ಟು ಸಕ್ರಿಯವಾಗಿ ತನಿಖೆ ನಡೆಸಿದ್ದು, ಈ ವರೆಗೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ವಿಜಯಲಕ್ಷ್ಮಿ ಅವರಿಗೆ ಮುಂಚೆ ನಟಿ ರಮ್ಯಾ ಅವರು ತಮಗೆ ಅಶ್ಲೀಲ ಕಮೆಂಟ್​​ಗಳನ್ನು ಮಾಡಿದ್ದ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದರು. ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿ ಕ್ರಮ ಜರುಗಿಸಿದ್ದರು. ಅದರ ಬಳಿಕ ವಿಜಯಲಕ್ಷ್ಮಿ ಅವರು ಸುದೀಪ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎಐ ಟೆಕ್ನಾಲಜಿಯಲ್ಲಿ ಅಮೆರಿಕ, ಚೀನಾ ಸಮಕ್ಕೆ ಭಾರತ ಬೆಳೆಯಬಲ್ಲುದೆ? ಡಾವೊಸ್ ಸಮಿಟ್​ನಲ್ಲಿ ಭಾರತದ ಎಐ ಪ್ಲಾನ್ ಬಿಚ್ಚಿಟ್ಟ ಎ ವೈಷ್ಣವ್ – Kannada News | Minister Ashwini Vaishnaw explains India’s AI preparedness at Davos WEF Summit

ನವದೆಹಲಿ, ಜನವರಿ 21: ಎಐ ಸಾಮರ್ಥ್ಯದಲ್ಲಿ ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ ಎಂದು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ಅವರು ಡಾವೊಸ್ ಶೃಂಗಸಭೆಯಲ್ಲಿ (Davos WEF Summit) ವಿವರಿಸಿದ್ದಾರೆ. ವರ್ಲ್ಡ್ ಎಕನಾಮಿಕ್ ಫೋರಂ 2026 ವೇದಿಕೆಯಲ್ಲಿ ಎಐ ಸಿದ್ಧತೆ (AI Preparedness) ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವ ಎ ವೈಷ್ಣವ್ ಅವರು ಭಾರತದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ನಿಯೋಜನೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವಿಶದಪಡಿಸಿದ್ದಾರೆ.

ಬಹಳ ದೊಡ್ಡದಾದ, ತೀವ್ರ ಗಣಕದ ಅವಶ್ಯಕತೆ ಇರುವ ಮಾಡಲ್​ಗಳ ಬದಲು 20ರಿಂದ 50 ಬಿಲಿಯನ್ ಪ್ಯಾರಾಮೀಟರ್​ಗಳಿರುವ ಸಣ್ಣ ಸಣ್ಣ ಮಾಡಲ್​ಗಳನ್ನು ನಿರ್ಮಿಸಿ ಭಾರತೀಯ ಭಾಷೆಗಳಿಗೆ ತಕ್ಕಂತೆ ರೂಪಿಸಿ ವಿವಿಧ ಸೆಕ್ಟರ್​ಗಳಿಗೆ ಅವುಗಳನ್ನು ನಿಯೋಜಿಸಲಾಗುತ್ತಿದೆ. ಈ ರೀತಿಯಾಗಿ ಎಐನ ಫಲವನ್ನು ಅತಿಹೆಚ್ಚು ಪಡೆಯಲು ಸಾಧ್ಯವಾಗುತ್ತದೆ ಎಂದು ಎ ವೈಷ್ಣವ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಜವಾಬ್ದಾರಿಯುತ ದೇಶಗಳ ಸೂಚ್ಯಂಕ; ಅಮೆರಿಕ, ಚೀನಾಗಿಂತ ಭಾರತ ಮೇಲೆ; ಪಾಕಿಸ್ತಾನ ಮತ್ತಿತರ ದೇಶಗಳು ಹೇಗೆ?

ಡಬ್ಲ್ಯುಇಎಫ್ ಫೋರಂನ ಸಂವಾದದಲ್ಲಿ ಅಶ್ವಿನಿ ವೈಷ್ಣವ್ ಅವರು ಭಾರತದ ಎಐ ಸಿದ್ಧತೆಯಲ್ಲಿನ ಐದು ಎಳೆಗಳನ್ನು ವಿವರಿಸಿದ್ದಾರೆ.

  1. ಅಪ್ಲಿಕೇಶನ್ ಲೇಯರ್
  2. ಮಾಡಲ್ ಲೇಯರ್
  3. ಚಿಪ್ ಲೇಯರ್
  4. ಡಾಟಾ ಸೆಂಟರ್ ಲೇಯರ್
  5. ಎನರ್ಜಿ ಲೇಯರ್

ಈ ಐದು ಲೇಯರ್​ಗಳಲ್ಲಿ ಭಾರತ ಪ್ರಗತಿ ಕಾಣುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಎಐ ಇನ್​ಫ್ರಾಸ್ಟ್ರಕ್ಚರ್​ನಲ್ಲಿ ಬಹಳ ಮುಖ್ಯವಾಗಿರುವ ಕಂಪ್ಯೂಟ್ ವ್ಯವಸ್ಥೆಗೆ ಜಿಪಿಯುಗಳು ಅಗತ್ಯ. ಅದಕ್ಕಾಗಿ ಭಾರತದಲ್ಲಿ 38,000 ಜಿಪಿಯುಗಳಿರುವ ಸಾಮಾನ್ಯ ಕಂಪ್ಯೂಟ್ ಫೆಸಿಲಿಟಿ ನಿರ್ಮಿಸಲಾಗುತ್ತಿದೆ. ಇದರಿಂದ ಜಿಪಿಯು ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವರು ವಿವರಿಸಿದ್ಧಾರೆ.

ಇದನ್ನೂ ಓದಿ: ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ

ಭಾರತದ ಎಐ ಸ್ಟ್ಯಾಕ್​ನ ಐದು ಲೇಯರ್​ಗಳ ಪರಿಚಯ

1. ಅಪ್ಲಿಕೇಶನ್ ಲೇಯರ್: ಕೃಷಿ, ಹೆಲ್ತ್​ಕೇರ್, ಶಿಕ್ಷಣ, ಆಡಳಿತ, ಉತ್ಪಾದನೆ ಇತ್ಯಾದಿ ವಿವಿಧ ಸೆಕ್ಟರ್​ಗಳಿಗೆ ಎಐ ಅನ್ನು ಸೂಕ್ತವಾಗಿ ಅಳವಡಿಸಲಾಗುತ್ತದೆ. ಜನರು ಮತ್ತು ಉದ್ಯಮಗಳು ಎಐ ಫಲಾನುಭವಿಗಳಾಗುತ್ತಾರೆ.

2. ಮಾಡಲ್ ಲೇಯರ್: ವಿವಿಧ ಎಐ ಮಾಡಲ್​ಗಳನ್ನು ತಯಾರಿಸುವುದು. ಭಾರತೀಯ ಭಾಷೆಗಳು, ಸೆಕ್ಟರ್​ಗಳು ಮತ್ತು ನಿಯಮಾವಳಿಗಳಿಗೆ ಅನುಗುಣವಾದ ಮಾಡಲ್​ಗಳನ್ನು ನಿರ್ಮಿಸಲಾಗುವುದು.

3. ಚಿಪ್ ಲೇಯರ್: ಸಬ್ಸಿಡಿಗಳ ಮೂಲಕ ಬಹಳ ಕಡಿಮೆ ಬೆಲೆಗೆ 38,000ಕ್ಕೂ ಅಧಿಕ ಜಿಪಿಯುಗಳನ್ನು ತಯಾರಿಸಲಾಗುತ್ತದೆ. ಎಐ ಅಭಿವೃದ್ಧಿಯಲ್ಲಿ ತೊಡಗಿರುವವರೆಲ್ಲರಿಗೂ ಈ ಜಿಪಿಯುಗಳು ಸಿಗುವಂತೆ ವ್ಯವಸ್ಥೆ ಮಾಡಲಾಗುವುದು.

4. ಡಾಟಾ ಸೆಂಟರ್ ಲೇಯರ್: ಎಐ ಮಾಡಲ್​ಗಳು, ಡಾಟಾ ಮತ್ತು ಕಂಪ್ಯೂಟ್ ರಿಸೋರ್ಸ್​ಗಳನ್ನು ಹೋಸ್ಟ್ ಮಾಡಲು ಡಾಟಾ ಸೆಂಟರ್ ಬೇಕು. ಈ ಡಾಟಾ ಸೆಂಟರ್​ಗಳನ್ನು ಕೂಲಿಂಗ್ ಮಾಡಲು, ಸಮರ್ಪಕವಾಗಿ ನೀರು ಉಪಯೋಗಿಸಲು ಮತ್ತು ವಿದ್ಯುತ್ ಉಪಯೋಗಿಸಲು ಇನ್ನೋವೇಟಿವ್ ಮಾರ್ಗಗಳನ್ನು ಅನುಸರಿಸಲಾಗುವುದು.

5. ಎನರ್ಜಿ ಲೇಯರ್: ಎಐ ಇನ್​ಫ್ರಾಸ್ಟ್ರಕ್ಚರ್ ಸಮರ್ಪಕವಾಗಿರಬೇಕು. ವಿದ್ಯುತ್ ಉತ್ಪಾದನೆ ಗಣನೀಯವಾಗಿ ಹೆಚ್ಚಬೇಕು. ಡಾಟಾ ಸೆಂಟರ್ ಹೆಚ್ಚಬೇಕು. ರಿನಿವಬಲ್ ಎನರ್ಜಿ ಹೆಚ್ಚಬೇಕು. ನ್ಯೂಕ್ಲಿಯಾರ್ ಎನರ್ಜಿ ಅಳವಡಿಸಬೇಕು. ಸಣ್ಣ ಸಣ್ಣ ಮಾಡ್ಯುಲಾರ್ ಮತ್ತು ಮೈಕ್ರೋ ರಿಯಾಕ್ಟರ್​ಗಳ ನಿರ್ಮಾಣ, ಪಬ್ಲಿಕ್ ಪ್ರೈವೇಟ್ ಪಾರ್ಟ್ನರ್​ಶಿಪ್, ವಿದೇಶೀ ಹೂಡಿಕೆ ಇತ್ಯಾದಿಗೆ ಅನುವು ಮಾಡಿಕೊಡಬಲ್ಲ ಶಾಂತಿ ಕಾಯ್ದೆ ಜಾರಿ ಮಾಡಲಾಗುತ್ತಿದೆ.

ಅಶ್ವಿನಿ ವೈಷ್ಣವ್ ಅವರೊಂದಿಗಿನ ಸಂವಾದದ ವಿಡಿಯೋ ಲಿಂಕ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು – Kannada News | Annigeri: Baba Jan Death Mystery Deepens as Parents Allege Murder; Body Exhumed for Probe

ಧಾರವಾಡ, ಜ.21: 2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​​ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ (Baba Jan )ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

NWKSRTC (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಯಲ್ಲಿ ಡ್ರೈವರ್ ಆಗಿದ್ದ ಬಾಬಾಜಾನ್ ಅವರು, ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆಗೆ ಸಂತೋಷದ ಜೀವನ ನಡೆಸುತ್ತಿದ್ದರು. ನವೆಂಬರ್​​​ 11ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾಬಾಜಾನ್ ಅವರ ಮೃತ ದೇಹವನ್ನು ಸ್ವಗ್ರಾಮ ಭದ್ರಾಪುರಕ್ಕೆ ತಂದು ಕುಟುಂಬ ತರಾತುರಿಯಾಗಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಅದಾದ ಬಳಿಕ ಸೊಸೆಯೇ ತಮ್ಮ ಮಗನ್ನು ಹತ್ಯೆ ಮಾಡಿದ್ದಾಳೆ ಎಂದು ಬಾಬಾಜಾನ್ ಅವರ ಪೋಷಕರು ದೂರಿದ್ದಾರೆ. ಯಾವುದೋ ದುರುದ್ದೇಶದಿಂದ ಮಗನ ಹತ್ಯೆ ಆಗಿದೆ ಎಂದು ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ

ನಮ್ಮ ಮಗ ಸತ್ತ ನಂತರ ಅವನ ಮರಣೋತ್ತರ ಪರೀಕ್ಷೆ ಮಾಡಿಲ್ಲ, ಯಾವ ಕಾರಣಕ್ಕೆ ಮಾಡಿಲ್ಲ ಎಂಬುದು ತಿಳಿಯಬೇಕು. ಅವನಿಗೆ ನಿಜವಾಗಿಯೂ ಹೃದಯಾಘಾತ ಆಗಿದ್ದೀಯಾ? ಎಂಬುದು ತಿಳಿಯಬೇಕು. ಇದರ ಹಿಂದೆ ನಮ್ಮ ಸೊಸೆಯ ಕೈವಾಡ ಇದೆ ಎಂದು ಬಾಬಾಜಾನ್ ಅವರ ಹೆತ್ತವರ ಆರೋಪವಾಗಿದೆ. ಈ ಕಾರಣದಿಂದ ಎಸ್ಪಿಗೆ ದೂರು ನೀಡಿದ್ದಾರೆ. ಇದೀಗ ತಹಶೀಲ್ದಾರ್ ನೇತೃತ್ವದಲ್ಲಿ ಮತ್ತೆ ಮರಣೋತ್ತರ ಪರೀಕ್ಷೆಗಾಗಿ ಭದ್ರಾಪುರದ ಸ್ಮಶಾನದಲ್ಲಿ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆಯಲಾಗಿದೆ. ಈ ಪರೀಕ್ಷೆಯ ನಂತರ ಇದು ಕೊಲೆಯೋ ಅಥವಾ ಹೃದಯಾಘಾತವೋ ಎಂಬುದು ತಿಳಿಯಲಿದೆ. ಮರಣೋತ್ತರ ನಂತರ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್​​ ಅಧಿಕಾರಿಗಳು ಹೇಳಿದ್ದಾರೆ. ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆಯುವ ಪ್ರಕ್ರಿಯೆಗಳು ಈಗಾಗಲೇ ಮುಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ ಎಂದು ಹೇಳಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Uttara Kannada: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ – Kannada News | Kali Tiger Reserve: Forest Officials Accused of Illegal Tree Felling for Pergola

ನಿರ್ಮಾಣ ಮಾಡಲಾಗಿರುವ ಪ್ಯಾರಾಗೋಲಾ

ಉತ್ತರ ಕನ್ನಡ, ಜನವರಿ 21: ಮೋಜು ಮಸ್ತಿ, ಪಾರ್ಟಿ ಮಾಡಲು ಅರಣ್ಯ ಅಧಿಕಾರಿಗಳೇ ಮರಗಳ ಮಾರಣ ಹೋಮ ಮಾಡಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಅರಣ್ಯ ವಲಯ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಿಸಲಾಗುತ್ತಿದ್ದು, ಅರಣ್ಯ ಸಂಪತ್ತನ್ನು ಉಳಿಸ ಬೇಕಿದ್ದ ಅಧಿಕಾರಿಗಳೇ ಕಾಡು ನಾಶ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ದಟ್ಟ ಅರಣ್ಯ ಮಧ್ಯ ಎರಡರಿಂದ ಮೂರು ಮರಗಳ ಕಟಾವು ಶಂಕೆ ವ್ಯಕ್ತವಾಗಿದ್ದು, ಅಕ್ಕ ಪಕ್ಕದ ಬೃಹತ್ ಗಾತ್ರದ ಮರಗಳ ಕೊಂಬೆಗು ಕೊಡಲಿ ಪೆಟ್ಟು ನೀಡಿದ್ದಾರೆ ಎನ್ನಲಾಗಿದೆ.

ಹುಲಿ ಸಂರಕ್ಷಿತ ಪ್ರದೇಶಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಅಡಿಯಲ್ಲಿ ಬರುತ್ತವೆ. ಈ ಕಾಯ್ದೆಯ ಪ್ರಕಾರ ಒಂದೇ ಒಂದು ಮರ ಕಡಿಯುವುದಕ್ಕೂ, ಯಾವುದೇ ಅರಣ್ಯ ಸಂಪನ್ಮೂಲ ಬಳಸುವುದಕ್ಕೂ ನಿಷೇಧವಿದೆ. ಇಂತಹ ಅಕ್ರಮಗಳನ್ನು ತಡೆಯುವ ಸಲುವಾಗಿ ಅರಣ್ಯ ಇಲಾಖೆಯೇ ಸಂರಕ್ಷಿತ ಪ್ರದೇಶಗಳೊಳಗೆ ತಂತ್ರಾತ್ಮಕ ಸ್ಥಳಗಳಲ್ಲಿ ಕಳ್ಳಬೇಟೆ ತಡೆ ಶಿಬಿರಗಳನ್ನು ಸ್ಥಾಪಿಸಿ, ದಿನದ 24 ಗಂಟೆ ಗಸ್ತು ವ್ಯವಸ್ಥೆ ನಡೆಸುತ್ತಿದೆ. ಹೀಗಿರುವಾಗ ಗುಂದ ಅರಣ್ಯ ವಲಯದ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಕೇಂದ್ರ ವಲಯದಲ್ಲಿರುವ ಚಪೇರಾ ಕಳ್ಳಬೇಟೆ ತಡೆ ಶಿಬಿರದ ಬಳಿ ಈ ಪ್ಯಾರಾಗೋಲಾ ನಿರ್ಮಾಣಗೊಂಡಿದೆ.

ಇದನ್ನೂ ಓದಿ: ಕಿತ್ತಳೆ ಮಾರ್ಗಕ್ಕಾಗಿ ಸಾವಿರಾರು ಮರಗಳ ಮಾರಣಹೋಮಕ್ಕೆ ಮುಂದಾದ BMRCL; ಸಿಡಿದೆದ್ದ ಪರಿಸರ ಪ್ರೇಮಿಗಳು

ಸಂಪೂರ್ಣವಾಗಿ ಟೀಕ್ ಮರ ಬಳಸಿ ಪ್ಯಾರಾಗೋಲಾ ನಿರ್ಮಿಸಲಾಗಿದ್ದು, ಹುಲಿ ಸಂರಕ್ಷಿತ ಪ್ರದೇಶದೊಳಗೆ ಪರ್ಗೊಲಾ ಏಕೆ ಬೇಕು ಎಂಬ ಪ್ರಶ್ನೆ ಉದ್ಭವಿಸಿದೆ. ಇಲ್ಲಿ ಮನರಂಜನೆಗೆ ಯಾವುದೇ ಅವಕಾಶವಿಲ್ಲ. ಸಾಮಾನ್ಯ ವ್ಯಕ್ತಿಯೊಬ್ಬರು ಒಂದಿಷ್ಟು ಕಟ್ಟಿಗೆ ಕೊಂಡೊಯ್ದರೂ ಕಿರುಕುಳ ನೀಡುವ ಅರಣ್ಯ ಅಧಿಕಾರಿಗಳು, ಮರಗಳನ್ನು ಕಡಿದು ಪ್ಯಾರಾಗೋಲಾ ನಿರ್ಮಿಸಿದ್ದಾದರು ಏಕೆ? ಎಂಬ ಮಾತುಗಳು ಪರಿಸರ ಪ್ರೇಮಿಗಳಿಂದ ಕೇಳಿಬಂದಿವೆ. ಈ ಕುರಿತು ಪ್ರತಿಕ್ರಿಯಿಸಿದ ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಪ್ರಶಾಂತ್ ಕುಮಾರ್, ಈ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿಕೊಟ್ಟು ವರದಿ ನೀಡುವಂತೆ ಡಿಸಿಎಫ್​​ಗೆ ಸಿಸಿಎಫ್ ಸೂಚನೆ ಕೂಡ ನೀಡಿರುವ ಹಿನ್ನೆಲೆ ಪ್ರಕರಣ ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ – Kannada News | Seconds from Disaster, Strangers Leap In to Save Woman from Sinking SUV

ವರ್ಜೀನಿಯಾ, ಜನವರಿ 21: ನಿಯಂತ್ರಣ ತಪ್ಪಿ ರಸ್ತೆಯಿಂದ ಸಮುದ್ರಕ್ಕೆ ಕಾರು ಬಿದ್ದಿತ್ತು. ಇನ್ನೇನು ಕಾರು ಮುಳುಗುವುದರಲ್ಲಿತ್ತು, ಅಷ್ಟರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿತರಲ್ಲ, ಹಾಗೆಂದ ಮಾತ್ರಕ್ಕೆ ಕಾರಿನ ವಿಡಿಯೋ ಮಾಡುತ್ತಲೂ ನಿಂತಿರಲಿಲ್ಲ. ಕೂಡಲೇ ಆಕೆಯನ್ನು ರಕ್ಷಿಸುವುದು ಮೊದ ಕರ್ತವ್ಯವೆಂದು ಅರಿತು ನೀರಿಗೆ ಹಾರಿದ್ದರು. ನೋಡನೋಡುತ್ತಲೇ ಕಾರು ಮುಳುಗಿತ್ತು. ಕೂಡಲೇ ಗಾಜನ್ನು ಒಡೆದು ಮಹಿಳೆಯನ್ನು ಕಾಪಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ – Kannada News | KSRTC Breakdowns Rise: Chikkamagaluru Incident Highlights Transport Dept’s Challenge

ಚಿಕ್ಕಮಗಳೂರು, ಜ.21: ಸರ್ಕಾರದ ಶಕ್ತಿ ಯೋಜನೆ ಬಂದ ನಂತರ ಈ ಬಸ್​​​ಗಳು ಅಲ್ಲಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಂತಿರುವ ವಿಡಿಯೋಗಳು ಕೂಡ ಆಗ್ಗಾಗೆ ವೈರಲ್​​ ಆಗುತ್ತಿದೆ. ಇದೀಗ ಚಿಕ್ಕಮಗಳೂರು ತಾಲೂಕಿನ‌ ಕೈಮರ ಸಮೀಪದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕೆಎಸ್​​ಆರ್​​​ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್​​​ನ್ನು ​​ ಸ್ಟಾರ್ಟ್​​ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ. ಕೊನೆಗೆ ಪ್ರಯಾಣಿಕರೇ ಇಳಿದು ತಳ್ಳಿದ್ದಾರೆ. ಚಿಕ್ಕಮಗಳೂರು ನಗರದಿಂದ ದೇವೀರಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದ ಈ ಬಸ್​​​​​ ಏಕಾಏಕಿ ದಾರಿ ಮಧ್ಯ ನಿಂತಿದೆ. ಎಷ್ಟೇ ಪ್ರಯತ್ನಿಸಿದರೂ ಸ್ಟಾರ್ಟ್​​ ಆಗಿಲ್ಲ. ಕೊನೆಗೆ ಎಲ್ಲರನ್ನು ಬಸ್ಸಿನಿಂದ ಕೇಳಗೆ ಇಳಿಸಿ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಹಿಂದಕ್ಕೆ ತಳ್ಳಿದ್ದಾರೆ. ಈ ಬಗ್ಗೆ ಪ್ರಯಾಣಿಕರು ಸಾರಿಗೆ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯೋ ಬದಲು ಈ ರೀತಿಯಾಗಿ ಪಾತ್ರೆ ಕ್ಲೀನ್‌ ಮಾಡಲು ಉಪಯೋಗಿಸಿ – Kannada News | Use banana peels in this way to remove stubborn dirt from dishes

ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ, ಅಡುಗೆಗೆ ಬಳಸುವ ಪಾತ್ರೆಗಳನ್ನು ಕ್ಲೀನ್‌ ಆಗಿ ಇಟ್ಟುಕೊಳ್ಳುವುದು ಸಹ ಮುಖ್ಯವಾಗಿದೆ. ಪ್ರತಿದಿನ ಅಡುಗೆ ಮಾಡುವ ಕಾರಣ ಎಷ್ಟೇ ಕ್ಲೀನ್‌ ಮಾಡಿದ್ರೂ ಸಹ ಕೆಲವೊಂದು ಪಾತ್ರೆಗಳಲ್ಲಿ ಜಿಡ್ಡು, ಮೊಂಡು ಕಲೆ, ಕಪ್ಪು ಪದರ ಹಾಗೆಯೇ ಉಳಿದು ಬಿಡುತ್ತವೆ. ಇದರಿಂದ ಪಾತ್ರೆಯ ಸೌಂದರ್ಯವೇ ಹಾಳಾಗುತ್ತದೆ ಎಂಬ ಕಾರಣಕ್ಕೆ ಈ ಕಲೆಗಳನ್ನು ತೆಗೆದು ಹಾಕಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ. ಇದರ ಬದಲು ಬಾಳೆಹಣ್ಣಿನ ಸಿಪ್ಪೆಯನ್ನು (banana peels) ಬಳಸಿ ಬಲು ಸುಲಭವಾಗಿ ಪಾತ್ರೆಗಳ ಮೇಲೆ ಅಂಟಿರುವ ಕಲೆಗಳನ್ನು ತೆಗೆದುಹಾಬಹುದು. ಬಾಳೆ ಹಣ್ಣಿನ ಸಿಪ್ಪೆ ಬಳಸಿ ಯಾವುದೇ ಖರ್ಚಿಲ್ಲದೆ  ಸುಲಭವಾಗಿ ಪಾತ್ರೆಗಳಲ್ಲಿ ಅಂಟಿರುವ ಮೊಂಡುತನದ ಕಲೆಗಳನ್ನು ಹೇಗೆ ತೊಡೆದುಹಾಕುವುದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

ಪಾತ್ರೆಗಳಲ್ಲಿ ಅಂಟಿರುವ ಕೊಳೆಯನ್ನು ಸ್ವಚ್ಛಗೊಳಿಸಲು ಸಹಕಾರಿ ಬಾಳೆಹಣ್ಣಿನ ಸಿಪ್ಪೆ:

ಬಾಳೆಹಣ್ಣಿನ ಸಿಪ್ಪೆಯ ಒಳಗಿನ ಬಿಳಿ ಭಾಗವು ಪೊಟ್ಯಾಸಿಯಮ್ ಮತ್ತು ಕೆಲವು ನೈಸರ್ಗಿಕ ಎಣ್ಣೆಗಳಿಂದ ಸಮೃದ್ಧವಾಗಿದ್ದು, ಇದು ಪಾತ್ರೆಗಳಲ್ಲಿನ ಕೊಳೆಯನ್ನು ತೆಗೆದುಹಾಕಲು ಸಹಕಾರಿ. ನಿಮ್ಮ ಸ್ಟೀಲ್ ಅಥವಾ ನಾನ್-ಸ್ಟಿಕ್ ಪಾತ್ರೆಗಳಲ್ಲಿ ಸುಟ್ಟ, ಮೊಂಡುತನದ ಕಲೆಗಳಿದ್ದರೆ, ಅದನ್ನು ತೆಗೆದು ಹಾಕಲು,  ಬಾಳೆಹಣ್ಣಿನ ಸಿಪ್ಪೆಯ ಒಳಭಾಗವನ್ನು ಪಾತ್ರೆಯ ಮೇಲೆ  ಉಜ್ಜಿ 10 ರಿಂದ 15 ನಿಮಿಷಗಳ ಕಾಲ ಬಿಡಿ. ನಂತರ ಅದನ್ನು ಸೌಮ್ಯವಾದ ಸ್ಕ್ರಬ್ಬರ್‌ನಿಂದ ಸ್ವಚ್ಛಗೊಳಿಸಿ. ಇದಲ್ಲದೆ ಬಾಳೆಹಣ್ಣಿನ ಸಿಪ್ಪೆಯ ಮೇಲೆ ಸ್ವಲ್ಪ ಟೂತ್‌ಪೇಸ್ಟ್‌ ಹಚ್ಚಿ ಪಾತ್ರೆಯ ಮೇಲೆ ಸ್ಕ್ರಬ್‌ ಮಾಡಬಹುದು.

ಬಾಳೆಹಣ್ಣಿನ ಸಿಪ್ಪೆಯ ಇತರೆ ಉಪಯೋಗಗಳು:

ಸಸ್ಯಗಳಿಗೆ ನೈಸರ್ಗಿಕ ಗೊಬ್ಬರ: ಬಾಳೆಹಣ್ಣಿನ ಸಿಪ್ಪೆಗಳು ಪೊಟ್ಯಾಸಿಯಮ್, ರಂಜಕ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿವೆ. ಸಿಪ್ಪೆಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಮಣ್ಣಿನಲ್ಲಿ ಹೂತುಹಾಕಿ, ಅಥವಾ ನೀರಿನಲ್ಲಿ ಕುದಿಸಿ ನಂತರ ಈ ನೀರನ್ನು ಗಿಡಗಳಿಗೆ ಹಾಕಿ.  ಇದು ನಿಮ್ಮ ಸಸ್ಯಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ.

ಶೂಗಳು, ಚರ್ಮದ ವಸ್ತುಗಳಿಗೆ ಹೊಳಪು ನೀಡುತ್ತದೆ: ಚರ್ಮದ ಶೂಗಳು, ಪರ್ಸ್‌ಗಳು ಅಥವಾ ಬೆಲ್ಟ್‌ಗಳು ಕಾಲಾನಂತರದಲ್ಲಿ ಹೊಳಪನ್ನು ಕಳೆದುಕೊಳ್ಳಬಹುದು. ಹಾಗಿರುವಾಗ ಬಾಳೆಹಣ್ಣಿನ ಸಿಪ್ಪೆಯ ಒಳಭಾಗವನ್ನು ನಿಮ್ಮ ಶೂಗಳ ಮೇಲೆ ಉಜ್ಜಿ ನಂತರ ಒಣ ಬಟ್ಟೆಯಿಂದ ಪಾಲಿಶ್ ಮಾಡಿ. ಇದು ಚರ್ಮದ ವಸ್ತುಗಳಿಗೆ ನೈಸರ್ಗಿಕ ಹೊಳಪನ್ನು ತಂದು ಕೊಡುತ್ತದೆ.

ಇದನ್ನೂ ಓದಿ: ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ರೀತಿಯಾಗಿ ಉಪಯೋಗಿಸಿ

ಚರ್ಮದ ಆರೈಕೆಗೆ ಸಹಕಾರಿ: ಬಾಳೆಹಣ್ಣಿನ ಸಿಪ್ಪೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಪೋಷಿಸುತ್ತದೆ. ಸಿಪ್ಪೆಯ ಒಳಭಾಗವನ್ನು ಮೊಡವೆ ಅಥವಾ ಒಣ ಚರ್ಮದ ಮೇಲೆ ನಿಧಾನವಾಗಿ ಉಜ್ಜಿ 10 ನಿಮಿಷಗಳ ನಂತರ ತೊಳೆಯಿರಿ. ಇದರ ನಿಯಮಿತ ಬಳಕೆಯು ಚರ್ಮವನ್ನು ಮೃದುಗೊಳಿಸಲು ಸಹಾಯ ಮಾಡುತ್ತದೆ.

ಬೆಳ್ಳಿ ಮತ್ತು ಉಕ್ಕಿನ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು: ಬೆಳ್ಳಿ ಪಾತ್ರೆಗಳು ಮಸುಕಾಗಿದ್ದರೆ ಅಥವಾ ಉಕ್ಕಿನ ಪಾತ್ರೆಗಳು ಹೊಳಪು ಕಳೆದುಕೊಂಡಿದ್ದರೆ, ಬಾಳೆಹಣ್ಣಿನ ಸಿಪ್ಪೆಯನ್ನು ಪೇಸ್ಟ್ ಮಾಡಿ ಪಾತ್ರೆಗಳಿಗೆ ಉಜ್ಜಿ ನಂತರ ನೀರಿನಿಂದ ತೊಳೆಯಿರಿ, ಇದು ಮರಳಿ ಹೊಳಪನ್ನು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version