ಎಐ ಟೆಕ್ನಾಲಜಿಯಲ್ಲಿ ಅಮೆರಿಕ, ಚೀನಾ ಸಮಕ್ಕೆ ಭಾರತ ಬೆಳೆಯಬಲ್ಲುದೆ? ಡಾವೊಸ್ ಸಮಿಟ್​ನಲ್ಲಿ ಭಾರತದ ಎಐ ಪ್ಲಾನ್ ಬಿಚ್ಚಿಟ್ಟ ಎ ವೈಷ್ಣವ್ – Kannada News | Minister Ashwini Vaishnaw explains India’s AI preparedness at Davos WEF Summit

ನವದೆಹಲಿ, ಜನವರಿ 21: ಎಐ ಸಾಮರ್ಥ್ಯದಲ್ಲಿ ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ ಎಂದು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ಅವರು ಡಾವೊಸ್ ಶೃಂಗಸಭೆಯಲ್ಲಿ (Davos WEF Summit) ವಿವರಿಸಿದ್ದಾರೆ. ವರ್ಲ್ಡ್ ಎಕನಾಮಿಕ್ ಫೋರಂ 2026 ವೇದಿಕೆಯಲ್ಲಿ ಎಐ ಸಿದ್ಧತೆ (AI Preparedness) ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವ ಎ ವೈಷ್ಣವ್ ಅವರು ಭಾರತದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ನಿಯೋಜನೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವಿಶದಪಡಿಸಿದ್ದಾರೆ.

ಬಹಳ ದೊಡ್ಡದಾದ, ತೀವ್ರ ಗಣಕದ ಅವಶ್ಯಕತೆ ಇರುವ ಮಾಡಲ್​ಗಳ ಬದಲು 20ರಿಂದ 50 ಬಿಲಿಯನ್ ಪ್ಯಾರಾಮೀಟರ್​ಗಳಿರುವ ಸಣ್ಣ ಸಣ್ಣ ಮಾಡಲ್​ಗಳನ್ನು ನಿರ್ಮಿಸಿ ಭಾರತೀಯ ಭಾಷೆಗಳಿಗೆ ತಕ್ಕಂತೆ ರೂಪಿಸಿ ವಿವಿಧ ಸೆಕ್ಟರ್​ಗಳಿಗೆ ಅವುಗಳನ್ನು ನಿಯೋಜಿಸಲಾಗುತ್ತಿದೆ. ಈ ರೀತಿಯಾಗಿ ಎಐನ ಫಲವನ್ನು ಅತಿಹೆಚ್ಚು ಪಡೆಯಲು ಸಾಧ್ಯವಾಗುತ್ತದೆ ಎಂದು ಎ ವೈಷ್ಣವ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಜವಾಬ್ದಾರಿಯುತ ದೇಶಗಳ ಸೂಚ್ಯಂಕ; ಅಮೆರಿಕ, ಚೀನಾಗಿಂತ ಭಾರತ ಮೇಲೆ; ಪಾಕಿಸ್ತಾನ ಮತ್ತಿತರ ದೇಶಗಳು ಹೇಗೆ?

ಡಬ್ಲ್ಯುಇಎಫ್ ಫೋರಂನ ಸಂವಾದದಲ್ಲಿ ಅಶ್ವಿನಿ ವೈಷ್ಣವ್ ಅವರು ಭಾರತದ ಎಐ ಸಿದ್ಧತೆಯಲ್ಲಿನ ಐದು ಎಳೆಗಳನ್ನು ವಿವರಿಸಿದ್ದಾರೆ.

  1. ಅಪ್ಲಿಕೇಶನ್ ಲೇಯರ್
  2. ಮಾಡಲ್ ಲೇಯರ್
  3. ಚಿಪ್ ಲೇಯರ್
  4. ಡಾಟಾ ಸೆಂಟರ್ ಲೇಯರ್
  5. ಎನರ್ಜಿ ಲೇಯರ್

ಈ ಐದು ಲೇಯರ್​ಗಳಲ್ಲಿ ಭಾರತ ಪ್ರಗತಿ ಕಾಣುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಎಐ ಇನ್​ಫ್ರಾಸ್ಟ್ರಕ್ಚರ್​ನಲ್ಲಿ ಬಹಳ ಮುಖ್ಯವಾಗಿರುವ ಕಂಪ್ಯೂಟ್ ವ್ಯವಸ್ಥೆಗೆ ಜಿಪಿಯುಗಳು ಅಗತ್ಯ. ಅದಕ್ಕಾಗಿ ಭಾರತದಲ್ಲಿ 38,000 ಜಿಪಿಯುಗಳಿರುವ ಸಾಮಾನ್ಯ ಕಂಪ್ಯೂಟ್ ಫೆಸಿಲಿಟಿ ನಿರ್ಮಿಸಲಾಗುತ್ತಿದೆ. ಇದರಿಂದ ಜಿಪಿಯು ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವರು ವಿವರಿಸಿದ್ಧಾರೆ.

ಇದನ್ನೂ ಓದಿ: ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ

ಭಾರತದ ಎಐ ಸ್ಟ್ಯಾಕ್​ನ ಐದು ಲೇಯರ್​ಗಳ ಪರಿಚಯ

1. ಅಪ್ಲಿಕೇಶನ್ ಲೇಯರ್: ಕೃಷಿ, ಹೆಲ್ತ್​ಕೇರ್, ಶಿಕ್ಷಣ, ಆಡಳಿತ, ಉತ್ಪಾದನೆ ಇತ್ಯಾದಿ ವಿವಿಧ ಸೆಕ್ಟರ್​ಗಳಿಗೆ ಎಐ ಅನ್ನು ಸೂಕ್ತವಾಗಿ ಅಳವಡಿಸಲಾಗುತ್ತದೆ. ಜನರು ಮತ್ತು ಉದ್ಯಮಗಳು ಎಐ ಫಲಾನುಭವಿಗಳಾಗುತ್ತಾರೆ.

2. ಮಾಡಲ್ ಲೇಯರ್: ವಿವಿಧ ಎಐ ಮಾಡಲ್​ಗಳನ್ನು ತಯಾರಿಸುವುದು. ಭಾರತೀಯ ಭಾಷೆಗಳು, ಸೆಕ್ಟರ್​ಗಳು ಮತ್ತು ನಿಯಮಾವಳಿಗಳಿಗೆ ಅನುಗುಣವಾದ ಮಾಡಲ್​ಗಳನ್ನು ನಿರ್ಮಿಸಲಾಗುವುದು.

3. ಚಿಪ್ ಲೇಯರ್: ಸಬ್ಸಿಡಿಗಳ ಮೂಲಕ ಬಹಳ ಕಡಿಮೆ ಬೆಲೆಗೆ 38,000ಕ್ಕೂ ಅಧಿಕ ಜಿಪಿಯುಗಳನ್ನು ತಯಾರಿಸಲಾಗುತ್ತದೆ. ಎಐ ಅಭಿವೃದ್ಧಿಯಲ್ಲಿ ತೊಡಗಿರುವವರೆಲ್ಲರಿಗೂ ಈ ಜಿಪಿಯುಗಳು ಸಿಗುವಂತೆ ವ್ಯವಸ್ಥೆ ಮಾಡಲಾಗುವುದು.

4. ಡಾಟಾ ಸೆಂಟರ್ ಲೇಯರ್: ಎಐ ಮಾಡಲ್​ಗಳು, ಡಾಟಾ ಮತ್ತು ಕಂಪ್ಯೂಟ್ ರಿಸೋರ್ಸ್​ಗಳನ್ನು ಹೋಸ್ಟ್ ಮಾಡಲು ಡಾಟಾ ಸೆಂಟರ್ ಬೇಕು. ಈ ಡಾಟಾ ಸೆಂಟರ್​ಗಳನ್ನು ಕೂಲಿಂಗ್ ಮಾಡಲು, ಸಮರ್ಪಕವಾಗಿ ನೀರು ಉಪಯೋಗಿಸಲು ಮತ್ತು ವಿದ್ಯುತ್ ಉಪಯೋಗಿಸಲು ಇನ್ನೋವೇಟಿವ್ ಮಾರ್ಗಗಳನ್ನು ಅನುಸರಿಸಲಾಗುವುದು.

5. ಎನರ್ಜಿ ಲೇಯರ್: ಎಐ ಇನ್​ಫ್ರಾಸ್ಟ್ರಕ್ಚರ್ ಸಮರ್ಪಕವಾಗಿರಬೇಕು. ವಿದ್ಯುತ್ ಉತ್ಪಾದನೆ ಗಣನೀಯವಾಗಿ ಹೆಚ್ಚಬೇಕು. ಡಾಟಾ ಸೆಂಟರ್ ಹೆಚ್ಚಬೇಕು. ರಿನಿವಬಲ್ ಎನರ್ಜಿ ಹೆಚ್ಚಬೇಕು. ನ್ಯೂಕ್ಲಿಯಾರ್ ಎನರ್ಜಿ ಅಳವಡಿಸಬೇಕು. ಸಣ್ಣ ಸಣ್ಣ ಮಾಡ್ಯುಲಾರ್ ಮತ್ತು ಮೈಕ್ರೋ ರಿಯಾಕ್ಟರ್​ಗಳ ನಿರ್ಮಾಣ, ಪಬ್ಲಿಕ್ ಪ್ರೈವೇಟ್ ಪಾರ್ಟ್ನರ್​ಶಿಪ್, ವಿದೇಶೀ ಹೂಡಿಕೆ ಇತ್ಯಾದಿಗೆ ಅನುವು ಮಾಡಿಕೊಡಬಲ್ಲ ಶಾಂತಿ ಕಾಯ್ದೆ ಜಾರಿ ಮಾಡಲಾಗುತ್ತಿದೆ.

ಅಶ್ವಿನಿ ವೈಷ್ಣವ್ ಅವರೊಂದಿಗಿನ ಸಂವಾದದ ವಿಡಿಯೋ ಲಿಂಕ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು – Kannada News | Annigeri: Baba Jan Death Mystery Deepens as Parents Allege Murder; Body Exhumed for Probe

ಧಾರವಾಡ, ಜ.21: 2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​​ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ (Baba Jan )ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

NWKSRTC (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಯಲ್ಲಿ ಡ್ರೈವರ್ ಆಗಿದ್ದ ಬಾಬಾಜಾನ್ ಅವರು, ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆಗೆ ಸಂತೋಷದ ಜೀವನ ನಡೆಸುತ್ತಿದ್ದರು. ನವೆಂಬರ್​​​ 11ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾಬಾಜಾನ್ ಅವರ ಮೃತ ದೇಹವನ್ನು ಸ್ವಗ್ರಾಮ ಭದ್ರಾಪುರಕ್ಕೆ ತಂದು ಕುಟುಂಬ ತರಾತುರಿಯಾಗಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಅದಾದ ಬಳಿಕ ಸೊಸೆಯೇ ತಮ್ಮ ಮಗನ್ನು ಹತ್ಯೆ ಮಾಡಿದ್ದಾಳೆ ಎಂದು ಬಾಬಾಜಾನ್ ಅವರ ಪೋಷಕರು ದೂರಿದ್ದಾರೆ. ಯಾವುದೋ ದುರುದ್ದೇಶದಿಂದ ಮಗನ ಹತ್ಯೆ ಆಗಿದೆ ಎಂದು ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ

ನಮ್ಮ ಮಗ ಸತ್ತ ನಂತರ ಅವನ ಮರಣೋತ್ತರ ಪರೀಕ್ಷೆ ಮಾಡಿಲ್ಲ, ಯಾವ ಕಾರಣಕ್ಕೆ ಮಾಡಿಲ್ಲ ಎಂಬುದು ತಿಳಿಯಬೇಕು. ಅವನಿಗೆ ನಿಜವಾಗಿಯೂ ಹೃದಯಾಘಾತ ಆಗಿದ್ದೀಯಾ? ಎಂಬುದು ತಿಳಿಯಬೇಕು. ಇದರ ಹಿಂದೆ ನಮ್ಮ ಸೊಸೆಯ ಕೈವಾಡ ಇದೆ ಎಂದು ಬಾಬಾಜಾನ್ ಅವರ ಹೆತ್ತವರ ಆರೋಪವಾಗಿದೆ. ಈ ಕಾರಣದಿಂದ ಎಸ್ಪಿಗೆ ದೂರು ನೀಡಿದ್ದಾರೆ. ಇದೀಗ ತಹಶೀಲ್ದಾರ್ ನೇತೃತ್ವದಲ್ಲಿ ಮತ್ತೆ ಮರಣೋತ್ತರ ಪರೀಕ್ಷೆಗಾಗಿ ಭದ್ರಾಪುರದ ಸ್ಮಶಾನದಲ್ಲಿ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆಯಲಾಗಿದೆ. ಈ ಪರೀಕ್ಷೆಯ ನಂತರ ಇದು ಕೊಲೆಯೋ ಅಥವಾ ಹೃದಯಾಘಾತವೋ ಎಂಬುದು ತಿಳಿಯಲಿದೆ. ಮರಣೋತ್ತರ ನಂತರ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್​​ ಅಧಿಕಾರಿಗಳು ಹೇಳಿದ್ದಾರೆ. ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆಯುವ ಪ್ರಕ್ರಿಯೆಗಳು ಈಗಾಗಲೇ ಮುಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ ಎಂದು ಹೇಳಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Uttara Kannada: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ – Kannada News | Kali Tiger Reserve: Forest Officials Accused of Illegal Tree Felling for Pergola

ನಿರ್ಮಾಣ ಮಾಡಲಾಗಿರುವ ಪ್ಯಾರಾಗೋಲಾ

ಉತ್ತರ ಕನ್ನಡ, ಜನವರಿ 21: ಮೋಜು ಮಸ್ತಿ, ಪಾರ್ಟಿ ಮಾಡಲು ಅರಣ್ಯ ಅಧಿಕಾರಿಗಳೇ ಮರಗಳ ಮಾರಣ ಹೋಮ ಮಾಡಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಅರಣ್ಯ ವಲಯ ಪ್ರದೇಶದಲ್ಲಿ ಪ್ಯಾರಾಗೋಲಾ ನಿರ್ಮಿಸಲಾಗುತ್ತಿದ್ದು, ಅರಣ್ಯ ಸಂಪತ್ತನ್ನು ಉಳಿಸ ಬೇಕಿದ್ದ ಅಧಿಕಾರಿಗಳೇ ಕಾಡು ನಾಶ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ದಟ್ಟ ಅರಣ್ಯ ಮಧ್ಯ ಎರಡರಿಂದ ಮೂರು ಮರಗಳ ಕಟಾವು ಶಂಕೆ ವ್ಯಕ್ತವಾಗಿದ್ದು, ಅಕ್ಕ ಪಕ್ಕದ ಬೃಹತ್ ಗಾತ್ರದ ಮರಗಳ ಕೊಂಬೆಗು ಕೊಡಲಿ ಪೆಟ್ಟು ನೀಡಿದ್ದಾರೆ ಎನ್ನಲಾಗಿದೆ.

ಹುಲಿ ಸಂರಕ್ಷಿತ ಪ್ರದೇಶಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಅಡಿಯಲ್ಲಿ ಬರುತ್ತವೆ. ಈ ಕಾಯ್ದೆಯ ಪ್ರಕಾರ ಒಂದೇ ಒಂದು ಮರ ಕಡಿಯುವುದಕ್ಕೂ, ಯಾವುದೇ ಅರಣ್ಯ ಸಂಪನ್ಮೂಲ ಬಳಸುವುದಕ್ಕೂ ನಿಷೇಧವಿದೆ. ಇಂತಹ ಅಕ್ರಮಗಳನ್ನು ತಡೆಯುವ ಸಲುವಾಗಿ ಅರಣ್ಯ ಇಲಾಖೆಯೇ ಸಂರಕ್ಷಿತ ಪ್ರದೇಶಗಳೊಳಗೆ ತಂತ್ರಾತ್ಮಕ ಸ್ಥಳಗಳಲ್ಲಿ ಕಳ್ಳಬೇಟೆ ತಡೆ ಶಿಬಿರಗಳನ್ನು ಸ್ಥಾಪಿಸಿ, ದಿನದ 24 ಗಂಟೆ ಗಸ್ತು ವ್ಯವಸ್ಥೆ ನಡೆಸುತ್ತಿದೆ. ಹೀಗಿರುವಾಗ ಗುಂದ ಅರಣ್ಯ ವಲಯದ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಕೇಂದ್ರ ವಲಯದಲ್ಲಿರುವ ಚಪೇರಾ ಕಳ್ಳಬೇಟೆ ತಡೆ ಶಿಬಿರದ ಬಳಿ ಈ ಪ್ಯಾರಾಗೋಲಾ ನಿರ್ಮಾಣಗೊಂಡಿದೆ.

ಇದನ್ನೂ ಓದಿ: ಕಿತ್ತಳೆ ಮಾರ್ಗಕ್ಕಾಗಿ ಸಾವಿರಾರು ಮರಗಳ ಮಾರಣಹೋಮಕ್ಕೆ ಮುಂದಾದ BMRCL; ಸಿಡಿದೆದ್ದ ಪರಿಸರ ಪ್ರೇಮಿಗಳು

ಸಂಪೂರ್ಣವಾಗಿ ಟೀಕ್ ಮರ ಬಳಸಿ ಪ್ಯಾರಾಗೋಲಾ ನಿರ್ಮಿಸಲಾಗಿದ್ದು, ಹುಲಿ ಸಂರಕ್ಷಿತ ಪ್ರದೇಶದೊಳಗೆ ಪರ್ಗೊಲಾ ಏಕೆ ಬೇಕು ಎಂಬ ಪ್ರಶ್ನೆ ಉದ್ಭವಿಸಿದೆ. ಇಲ್ಲಿ ಮನರಂಜನೆಗೆ ಯಾವುದೇ ಅವಕಾಶವಿಲ್ಲ. ಸಾಮಾನ್ಯ ವ್ಯಕ್ತಿಯೊಬ್ಬರು ಒಂದಿಷ್ಟು ಕಟ್ಟಿಗೆ ಕೊಂಡೊಯ್ದರೂ ಕಿರುಕುಳ ನೀಡುವ ಅರಣ್ಯ ಅಧಿಕಾರಿಗಳು, ಮರಗಳನ್ನು ಕಡಿದು ಪ್ಯಾರಾಗೋಲಾ ನಿರ್ಮಿಸಿದ್ದಾದರು ಏಕೆ? ಎಂಬ ಮಾತುಗಳು ಪರಿಸರ ಪ್ರೇಮಿಗಳಿಂದ ಕೇಳಿಬಂದಿವೆ. ಈ ಕುರಿತು ಪ್ರತಿಕ್ರಿಯಿಸಿದ ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಪ್ರಶಾಂತ್ ಕುಮಾರ್, ಈ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿಕೊಟ್ಟು ವರದಿ ನೀಡುವಂತೆ ಡಿಸಿಎಫ್​​ಗೆ ಸಿಸಿಎಫ್ ಸೂಚನೆ ಕೂಡ ನೀಡಿರುವ ಹಿನ್ನೆಲೆ ಪ್ರಕರಣ ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ – Kannada News | Seconds from Disaster, Strangers Leap In to Save Woman from Sinking SUV

ವರ್ಜೀನಿಯಾ, ಜನವರಿ 21: ನಿಯಂತ್ರಣ ತಪ್ಪಿ ರಸ್ತೆಯಿಂದ ಸಮುದ್ರಕ್ಕೆ ಕಾರು ಬಿದ್ದಿತ್ತು. ಇನ್ನೇನು ಕಾರು ಮುಳುಗುವುದರಲ್ಲಿತ್ತು, ಅಷ್ಟರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿತರಲ್ಲ, ಹಾಗೆಂದ ಮಾತ್ರಕ್ಕೆ ಕಾರಿನ ವಿಡಿಯೋ ಮಾಡುತ್ತಲೂ ನಿಂತಿರಲಿಲ್ಲ. ಕೂಡಲೇ ಆಕೆಯನ್ನು ರಕ್ಷಿಸುವುದು ಮೊದ ಕರ್ತವ್ಯವೆಂದು ಅರಿತು ನೀರಿಗೆ ಹಾರಿದ್ದರು. ನೋಡನೋಡುತ್ತಲೇ ಕಾರು ಮುಳುಗಿತ್ತು. ಕೂಡಲೇ ಗಾಜನ್ನು ಒಡೆದು ಮಹಿಳೆಯನ್ನು ಕಾಪಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ – Kannada News | KSRTC Breakdowns Rise: Chikkamagaluru Incident Highlights Transport Dept’s Challenge

ಚಿಕ್ಕಮಗಳೂರು, ಜ.21: ಸರ್ಕಾರದ ಶಕ್ತಿ ಯೋಜನೆ ಬಂದ ನಂತರ ಈ ಬಸ್​​​ಗಳು ಅಲ್ಲಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಂತಿರುವ ವಿಡಿಯೋಗಳು ಕೂಡ ಆಗ್ಗಾಗೆ ವೈರಲ್​​ ಆಗುತ್ತಿದೆ. ಇದೀಗ ಚಿಕ್ಕಮಗಳೂರು ತಾಲೂಕಿನ‌ ಕೈಮರ ಸಮೀಪದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕೆಎಸ್​​ಆರ್​​​ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್​​​ನ್ನು ​​ ಸ್ಟಾರ್ಟ್​​ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ. ಕೊನೆಗೆ ಪ್ರಯಾಣಿಕರೇ ಇಳಿದು ತಳ್ಳಿದ್ದಾರೆ. ಚಿಕ್ಕಮಗಳೂರು ನಗರದಿಂದ ದೇವೀರಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದ ಈ ಬಸ್​​​​​ ಏಕಾಏಕಿ ದಾರಿ ಮಧ್ಯ ನಿಂತಿದೆ. ಎಷ್ಟೇ ಪ್ರಯತ್ನಿಸಿದರೂ ಸ್ಟಾರ್ಟ್​​ ಆಗಿಲ್ಲ. ಕೊನೆಗೆ ಎಲ್ಲರನ್ನು ಬಸ್ಸಿನಿಂದ ಕೇಳಗೆ ಇಳಿಸಿ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಹಿಂದಕ್ಕೆ ತಳ್ಳಿದ್ದಾರೆ. ಈ ಬಗ್ಗೆ ಪ್ರಯಾಣಿಕರು ಸಾರಿಗೆ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯೋ ಬದಲು ಈ ರೀತಿಯಾಗಿ ಪಾತ್ರೆ ಕ್ಲೀನ್‌ ಮಾಡಲು ಉಪಯೋಗಿಸಿ – Kannada News | Use banana peels in this way to remove stubborn dirt from dishes

ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ, ಅಡುಗೆಗೆ ಬಳಸುವ ಪಾತ್ರೆಗಳನ್ನು ಕ್ಲೀನ್‌ ಆಗಿ ಇಟ್ಟುಕೊಳ್ಳುವುದು ಸಹ ಮುಖ್ಯವಾಗಿದೆ. ಪ್ರತಿದಿನ ಅಡುಗೆ ಮಾಡುವ ಕಾರಣ ಎಷ್ಟೇ ಕ್ಲೀನ್‌ ಮಾಡಿದ್ರೂ ಸಹ ಕೆಲವೊಂದು ಪಾತ್ರೆಗಳಲ್ಲಿ ಜಿಡ್ಡು, ಮೊಂಡು ಕಲೆ, ಕಪ್ಪು ಪದರ ಹಾಗೆಯೇ ಉಳಿದು ಬಿಡುತ್ತವೆ. ಇದರಿಂದ ಪಾತ್ರೆಯ ಸೌಂದರ್ಯವೇ ಹಾಳಾಗುತ್ತದೆ ಎಂಬ ಕಾರಣಕ್ಕೆ ಈ ಕಲೆಗಳನ್ನು ತೆಗೆದು ಹಾಕಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ. ಇದರ ಬದಲು ಬಾಳೆಹಣ್ಣಿನ ಸಿಪ್ಪೆಯನ್ನು (banana peels) ಬಳಸಿ ಬಲು ಸುಲಭವಾಗಿ ಪಾತ್ರೆಗಳ ಮೇಲೆ ಅಂಟಿರುವ ಕಲೆಗಳನ್ನು ತೆಗೆದುಹಾಬಹುದು. ಬಾಳೆ ಹಣ್ಣಿನ ಸಿಪ್ಪೆ ಬಳಸಿ ಯಾವುದೇ ಖರ್ಚಿಲ್ಲದೆ  ಸುಲಭವಾಗಿ ಪಾತ್ರೆಗಳಲ್ಲಿ ಅಂಟಿರುವ ಮೊಂಡುತನದ ಕಲೆಗಳನ್ನು ಹೇಗೆ ತೊಡೆದುಹಾಕುವುದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

ಪಾತ್ರೆಗಳಲ್ಲಿ ಅಂಟಿರುವ ಕೊಳೆಯನ್ನು ಸ್ವಚ್ಛಗೊಳಿಸಲು ಸಹಕಾರಿ ಬಾಳೆಹಣ್ಣಿನ ಸಿಪ್ಪೆ:

ಬಾಳೆಹಣ್ಣಿನ ಸಿಪ್ಪೆಯ ಒಳಗಿನ ಬಿಳಿ ಭಾಗವು ಪೊಟ್ಯಾಸಿಯಮ್ ಮತ್ತು ಕೆಲವು ನೈಸರ್ಗಿಕ ಎಣ್ಣೆಗಳಿಂದ ಸಮೃದ್ಧವಾಗಿದ್ದು, ಇದು ಪಾತ್ರೆಗಳಲ್ಲಿನ ಕೊಳೆಯನ್ನು ತೆಗೆದುಹಾಕಲು ಸಹಕಾರಿ. ನಿಮ್ಮ ಸ್ಟೀಲ್ ಅಥವಾ ನಾನ್-ಸ್ಟಿಕ್ ಪಾತ್ರೆಗಳಲ್ಲಿ ಸುಟ್ಟ, ಮೊಂಡುತನದ ಕಲೆಗಳಿದ್ದರೆ, ಅದನ್ನು ತೆಗೆದು ಹಾಕಲು,  ಬಾಳೆಹಣ್ಣಿನ ಸಿಪ್ಪೆಯ ಒಳಭಾಗವನ್ನು ಪಾತ್ರೆಯ ಮೇಲೆ  ಉಜ್ಜಿ 10 ರಿಂದ 15 ನಿಮಿಷಗಳ ಕಾಲ ಬಿಡಿ. ನಂತರ ಅದನ್ನು ಸೌಮ್ಯವಾದ ಸ್ಕ್ರಬ್ಬರ್‌ನಿಂದ ಸ್ವಚ್ಛಗೊಳಿಸಿ. ಇದಲ್ಲದೆ ಬಾಳೆಹಣ್ಣಿನ ಸಿಪ್ಪೆಯ ಮೇಲೆ ಸ್ವಲ್ಪ ಟೂತ್‌ಪೇಸ್ಟ್‌ ಹಚ್ಚಿ ಪಾತ್ರೆಯ ಮೇಲೆ ಸ್ಕ್ರಬ್‌ ಮಾಡಬಹುದು.

ಬಾಳೆಹಣ್ಣಿನ ಸಿಪ್ಪೆಯ ಇತರೆ ಉಪಯೋಗಗಳು:

ಸಸ್ಯಗಳಿಗೆ ನೈಸರ್ಗಿಕ ಗೊಬ್ಬರ: ಬಾಳೆಹಣ್ಣಿನ ಸಿಪ್ಪೆಗಳು ಪೊಟ್ಯಾಸಿಯಮ್, ರಂಜಕ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿವೆ. ಸಿಪ್ಪೆಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಮಣ್ಣಿನಲ್ಲಿ ಹೂತುಹಾಕಿ, ಅಥವಾ ನೀರಿನಲ್ಲಿ ಕುದಿಸಿ ನಂತರ ಈ ನೀರನ್ನು ಗಿಡಗಳಿಗೆ ಹಾಕಿ.  ಇದು ನಿಮ್ಮ ಸಸ್ಯಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ.

ಶೂಗಳು, ಚರ್ಮದ ವಸ್ತುಗಳಿಗೆ ಹೊಳಪು ನೀಡುತ್ತದೆ: ಚರ್ಮದ ಶೂಗಳು, ಪರ್ಸ್‌ಗಳು ಅಥವಾ ಬೆಲ್ಟ್‌ಗಳು ಕಾಲಾನಂತರದಲ್ಲಿ ಹೊಳಪನ್ನು ಕಳೆದುಕೊಳ್ಳಬಹುದು. ಹಾಗಿರುವಾಗ ಬಾಳೆಹಣ್ಣಿನ ಸಿಪ್ಪೆಯ ಒಳಭಾಗವನ್ನು ನಿಮ್ಮ ಶೂಗಳ ಮೇಲೆ ಉಜ್ಜಿ ನಂತರ ಒಣ ಬಟ್ಟೆಯಿಂದ ಪಾಲಿಶ್ ಮಾಡಿ. ಇದು ಚರ್ಮದ ವಸ್ತುಗಳಿಗೆ ನೈಸರ್ಗಿಕ ಹೊಳಪನ್ನು ತಂದು ಕೊಡುತ್ತದೆ.

ಇದನ್ನೂ ಓದಿ: ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ರೀತಿಯಾಗಿ ಉಪಯೋಗಿಸಿ

ಚರ್ಮದ ಆರೈಕೆಗೆ ಸಹಕಾರಿ: ಬಾಳೆಹಣ್ಣಿನ ಸಿಪ್ಪೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಪೋಷಿಸುತ್ತದೆ. ಸಿಪ್ಪೆಯ ಒಳಭಾಗವನ್ನು ಮೊಡವೆ ಅಥವಾ ಒಣ ಚರ್ಮದ ಮೇಲೆ ನಿಧಾನವಾಗಿ ಉಜ್ಜಿ 10 ನಿಮಿಷಗಳ ನಂತರ ತೊಳೆಯಿರಿ. ಇದರ ನಿಯಮಿತ ಬಳಕೆಯು ಚರ್ಮವನ್ನು ಮೃದುಗೊಳಿಸಲು ಸಹಾಯ ಮಾಡುತ್ತದೆ.

ಬೆಳ್ಳಿ ಮತ್ತು ಉಕ್ಕಿನ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು: ಬೆಳ್ಳಿ ಪಾತ್ರೆಗಳು ಮಸುಕಾಗಿದ್ದರೆ ಅಥವಾ ಉಕ್ಕಿನ ಪಾತ್ರೆಗಳು ಹೊಳಪು ಕಳೆದುಕೊಂಡಿದ್ದರೆ, ಬಾಳೆಹಣ್ಣಿನ ಸಿಪ್ಪೆಯನ್ನು ಪೇಸ್ಟ್ ಮಾಡಿ ಪಾತ್ರೆಗಳಿಗೆ ಉಜ್ಜಿ ನಂತರ ನೀರಿನಿಂದ ತೊಳೆಯಿರಿ, ಇದು ಮರಳಿ ಹೊಳಪನ್ನು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DHFWS Mysuru Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ – Kannada News | DHFWS Mysuru Recruitment 2026: Apply for Medical and Nursing Officer Posts Online

ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದು, ವಿವಿಧ ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ವಿಶೇಷವಾಗಿ ಮೈಸೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳು ಜನವರಿ 27ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10, 12ನೇ ತರಗತಿ, ಡಿಪ್ಲೊಮಾ, GNM, ANM, MPW, DMLT, MLT, B.Sc, BDS, ಪದವಿ, D.Ch, DA, MBBS, MPH, DNB, MD ಸೇರಿದಂತೆ ಸಂಬಂಧಿತ ಶೈಕ್ಷಣಿಕ ಅರ್ಹತೆಗಳನ್ನು ಪೂರ್ಣಗೊಳಿಸಿರಬೇಕು. ಹುದ್ದೆಯ ಪ್ರಕಾರ ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಮಾನದಂಡಗಳು ವಿಭಿನ್ನವಾಗಿರುವುದರಿಂದ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನದಿಂದ ಪರಿಶೀಲಿಸುವುದು ಅಗತ್ಯವಾಗಿದೆ.

ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು DHFWS ಮೈಸೂರು ನೇಮಕಾತಿ ಅಧಿಸೂಚನೆ 2026 ಅನ್ನು ಸಂಪೂರ್ಣವಾಗಿ ಓದಿ, ತಮ್ಮ ಅರ್ಹತೆಗಳು ನಿಗದಿತ ಮಾನದಂಡಗಳಿಗೆ ಹೊಂದಿಕೆಯಾಗುತ್ತವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆನ್‌ಲೈನ್ ಅರ್ಜಿ ಪ್ರಕ್ರಿಯೆಗೆ ಮುನ್ನ ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಜೊತೆಗೆ ಗುರುತಿನ ಚೀಟಿ, ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ದಾಖಲೆಗಳು, ರೆಸ್ಯೂಮ್ ಮತ್ತು ಅನುಭವ ಪ್ರಮಾಣಪತ್ರಗಳು (ಅನ್ವಯಿಸಿದಲ್ಲಿ) ಮುಂತಾದ ದಾಖಲೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವುದು ಒಳಿತು.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಅರ್ಹ ಅಭ್ಯರ್ಥಿಗಳು DHFWS ಮೈಸೂರು ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ನೇಮಕಾತಿಗೆ ನೀಡಲಾಗಿರುವ ಅಧಿಕೃತ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ, ಅಗತ್ಯ ಪ್ರಮಾಣಪತ್ರಗಳ ಸ್ಕ್ಯಾನ್ ಪ್ರತಿಗಳನ್ನು ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಬೇಕು. ವರ್ಗದ ಪ್ರಕಾರ ಅರ್ಜಿ ಶುಲ್ಕ ಅನ್ವಯಿಸಿದಲ್ಲಿ ಅದನ್ನು ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಗಳು ಸಲ್ಲಿಸು (Submit) ಬಟನ್ ಮೇಲೆ ಕ್ಲಿಕ್ ಮಾಡಬೇಕು. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯ ಪ್ರಿಂಟ್​ ಕಾಪಿ ತೆಗೆದಿಟ್ಟುಕೊಳ್ಳಿ. ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಅಭ್ಯರ್ಥಿಗಳು DHFWS ಮೈಸೂರು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಅಧಿಸೂಚನೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ – Kannada News | Rohith Bhat of Robosoft explains how difficult it was to retain employees for his company

ಉಡುಪಿ, ಜನವರಿ 21: ಸಣ್ಣ ಪಟ್ಟಣಗಳಲ್ಲಿ ಓದಿದವರು ದೊಡ್ಡ ನಗರಗಳಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುತ್ತಾರೆ. ಅವರ ಮನೆಯವರೂ ಕೂಡ ತನ್ನ ಮಗ ಅಥವಾ ಮಗಳು ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಬ್ಯುಲ್ಡಿಂಗ್​ಗಳಲ್ಲಿ ಕೆಲಸಕ್ಕೆ ಹೋಗಲಿ ಎಂದು ಬಯಸುತ್ತಾರೆ. ಸಣ್ಣ ಪಟ್ಟಣಗಳಲ್ಲಿ ಒಳ್ಳೆಯ ಸಂಬಳ ಕೊಟ್ಟರೂ ಜನರು ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ರೋಬೋಸಾಫ್ಟ್ (Robosoft) ಎನ್ನುವ ಐಟಿ ಸರ್ವಿಸ್ ಕಂಪನಿಯ ಸಂಸ್ಥಾಪಕ ರೋಹಿತ್ ಭಟ್ (Rohith Bhat) ಅವರು ತಮ್ಮ ಒಂದು ಅನುಭವವನ್ನು ಹಂಚಿಕೊಂಡಿದ್ದಾರೆ. ವಸಂತ್ ಶೆಟ್ಟಿ ಅವರ ‘ಮುಂದೆ ಬನ್ನಿ’ ಪೋಡ್​ಕ್ಯಾಸ್ಟ್​ನಲ್ಲಿ ಮಾತನಾಡುತ್ತಿದ್ದ ರೋಹಿತ್ ಭಟ್ ಅವರು, ಉದ್ಯೋಗಿಗಳನ್ನು ತಮ್ಮ ಕಂಪನಿಯ ಕೆಲಸಕ್ಕೆ ಸೆಳೆಯಲು ಮಾಡಿದ ತಂತ್ರಗಳನ್ನು ವಿವರಿಸಿದ್ದಾರೆ.

ರೋಬೋಸಾಫ್ಟ್ ಕಂಪನಿ ಈಗ ಉಡುಪಿಯ ಹೆದ್ದಾರಿಯಲ್ಲೇ ಭವ್ಯವಾದ ಕಟ್ಟಡ ಹೊಂದಿದೆ. ಆರಂಭದಲ್ಲಿ ಸಣ್ಣ ಬ್ಯುಲ್ಡಿಂಗ್​ನಲ್ಲಿ ಕಚೇರಿ ಹೊಂದಿತ್ತು. ಕಂಪನಿಯಲ್ಲಿ ಉತ್ತಮ ಸಂಬಳ ಕೊಟ್ಟರೂ ಪ್ರತಿಭಾನ್ವಿತರೆನಿಸಿದ ಉದ್ಯೋಗಿಗಳು ಕೆಲಸ ಬಿಟ್ಟು ಹೋಗುತ್ತಿದ್ದರಂತೆ. ಅವರನ್ನು ರಿಟೆನ್ಷನ್ ಮಾಡುವುದು ಬಹಳ ಕಷ್ಟವಾಗಿತ್ತಂತೆ.

ಕಟ್ಟಡ ಎದ್ದುಕಾಣುತ್ತಿಲ್ಲ ಎನ್ನುವುದು ಸಮಸ್ಯೆ…

‘ಒಂದು ಹುಡುಗಿ ತಾನು ಕೆಲಸಕ್ಕೆ ಬರುವುದಿಲ್ಲ ಎಂದು ಒಂದು ದಿನ ಹೇಳಿತು. ಯಾಕೆ ಅಂತ ಕೇಳಿದೆ. ಮನೆಯವರಿಗೆ ಈ ಕೆಲಸದ ಸ್ಥಳ ಇಷ್ಟವಾಗಿಲ್ಲ. ಗ್ಲಾಸ್ ಬ್ಯುಲ್ಡಿಂಗ್ ಇಲ್ಲ. ಅಲ್ಲಿ ಮಾಡೋದು ಬೇಡ ಅಂತಾರೆ ಅಂತ ಆ ಹುಡುಗಿ ಹೇಳಿತು’ ಎಂದು ರೋಹಿತ್ ಭಟ್ ಹೇಳುತ್ತಾರೆ.

ಬಹಳ ಜನರು ಇದೇ ಕಾರಣಕ್ಕೆ ಕೆಲಸ ಬಿಟ್ಟು ಹೋಗುತ್ತಿದ್ದರಂತೆ. ರೋಹಿತ್ ಭಟ್ ಆಗಲೇ ಒಂದು ನಿರ್ಧಾರಕ್ಕೆ ಬಂದರಂತೆ. ಉಡುಪಿಯಲ್ಲಿ ಎದ್ದು ಕಾಣುವ ರೀತಿಯ ಬ್ಯುಲ್ಡಿಂಗ್ ಕಟ್ಟಲು ನಿರ್ಧರಿಸುತ್ತಾರೆ. ಹೆದ್ದಾರಿಯಲ್ಲೇ ಆಗಬೇಕು, ಒರೇಕಲ್ ರೀತಿಯ ಗ್ಲಾಸ್ ಬ್ಯುಲ್ಡಿಂಗೇ ಆಗಬೇಕು ಎಂದು ಹೇಳಿ ಪಕ್ಕಾ ಎಂಎನ್​ಸಿ ಐಟಿ ಕಂಪನಿಯ ಬ್ಯುಲ್ಡಿಂಗ್ ರೀತಿಯದ್ದೇ ಕಟ್ಟಡ ಕಟ್ಟಲಾಯಿತು.

ವಿದೇಶಗಳಿಗೆ ಪ್ರಾಜೆಕ್ಟ್ ಮೇಲೆ ಹೋದಾಗ ಜಾಹೀರಾತು…

ರೋಹಿತ್ ಭಟ್ ತಮ್ಮ ಕಂಪನಿಯ ಬ್ರ್ಯಾಂಡ್ ಬೆಳೆಸಲು ಬೇರೆ ರೀತಿಯ ಪ್ರಯೋಗಗಳನ್ನು ಮಾಡಿದರು. ತಮ್ಮಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಬೇರೆ ದೇಶಗಳಿಗೆ ಕೆಲಸದ ಮೇಲೆ ಹೋದಾಗ ಪತ್ರಿಕೆಗಳಲ್ಲಿ ಶುಭ ಹಾರೈಕೆಯ ಮೆಸೇಜ್​ಗಳನ್ನು ಹಾಕಿಸುವುದು ಇತ್ಯಾದಿ ಮಾಡಿದರು. ಆಗ ಜನರಿಗೆ ರೋಬೋಸಾಫ್ಟ್​ನಲ್ಲಿ ಕೆಲಸ ಮಾಡಿದರೆ ವಿದೇಶಕ್ಕೆ ಹೋಗಬಹುದು ಎನ್ನುವ ಇಮೇಜ್ ಮೂಡುತ್ತಿತ್ತು.

ಹೊಸ ಬ್ಯುಲ್ಡಿಂಗ್​ನಿಂದ ರೋಬೋಸಾಫ್ಟ್​ಗೆ ಹಲವು ಅನುಕೂಲಗಳು

ಗ್ಲಾಸ್ ಬ್ಯುಲ್ಡಿಂಗ್ ಕಟ್ಟಿದ್ದು ರೋಬೋಸಾಫ್ಟ್ ಕಂಪನಿಗೆ ಹಲವು ರೀತಿಯ ಪ್ರಯೋಜನಗಳಾಗಿವೆ. ಉದ್ಯೋಗಿಗಳನ್ನು ಸೆಳಯಲು ಸಾಧ್ಯವಾಗಿದೆ. ಕ್ಲೈಂಟ್​ಗಳನ್ನು ಆಕರ್ಷಿಸಲು ಸಾಧ್ಯವಾಗಿದೆ. ವಸಂತ್ ಶೆಟ್ಟಿ ಅವರ ಪೋಡ್​ಕ್ಯಾಸ್ಟ್​ನಲ್ಲಿ ಇಂಥ ಕೆಲ ವಿಚಾರಗಳನ್ನು ರೋಬೋಸಾಫ್ಟ್​ನ ರೋಹಿತ್ ಭಟ್ ಹಂಚಿಕೊಂಡಿದ್ದಾರೆ. ಈ ಸಣ್ಣ ತುಣುಕಿನ ವಿಡಿಯೋ ಲಿಂಕ್ ಈ ಕೆಳಕಂಡಂತಿದೆ.

ಪೋಡ್​ಕ್ಯಾಸ್ಟ್​ನ ಪೂರ್ಣ ವಿಡಿಯೋ ಇಲ್ಲಿದೆ:

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ – Kannada News | Staff nurse pregnant Before marriage, A Baby Suspected death after delivery at Hassan

ಚಿಕ್ಕಮಗಳೂರು, (ಜನವರಿ 21): ಮದುವೆಗೂ (Marriage)  ಮುನ್ನವೇ ಸ್ಟಾಫ್​​ ನರ್ಸ್​ವೊಬ್ಬರು (staff nurse) ತಾಯಿ ಆಗಿದ್ದಾರೆ. ಆದ್ರೆ, ಹರಿಗೆ ಆದ ಒಂದೇ ನಿಮಿಷದಲ್ಲಿ ಹಸುಗೂಸು ಸಾವನ್ನಪ್ಪಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹೌದು… ಚಿಕ್ಕಮಗಳೂರಿನ (Chikkamagaluru) ತರೀಕೆರೆಯ ಬಾವಿಕೆರೆ ಗ್ರಾಮದ ಸ್ಟಾಫ್ ನರ್ಸ್ ಮದುವೆಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದಾರೆ. ಆದ್ರೆ, ಮಗು ಮೃತಪಟ್ಟಿದ್ದು, ಸಮಾಜದ ಗೌರವಕ್ಕೆ ಅಂಜಿ ಕುಟುಂಬಸ್ಥರೇ ಹಸುಗೂಸನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಈ ಸಂಬಂಧ ಲಕ್ಕವಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡ ನರ್ಸ್

ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದು, ಕುಟುಂಬದ ಗೌರವದ ದೃಷ್ಟಿಯಿಂದ ಈ ವಿಷಯವನ್ನು ಗುಟ್ಟಾಗಿಡಲಾಗಿತ್ತು. ಆದ್ರೆ, ಕಳೆದ 15 ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹೀರಾಗುತ್ತದೆ ಎಂಬ ಭಯಕ್ಕೆ ನರ್ಸ್ ಆಗಿದ್ದ ಯುವತಿ, ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದಾಳೆ. ಆದ್ರೆ,  ಹುಟ್ಟಿದ ಒಂದೇ ನಿಮಿಷದಲ್ಲೇ ಮಗು ಸಾವನ್ನಪ್ಪಿದೆ. ಹೀಗಾಗಿ ಮರ್ಯಾದೆ ಹೆದರಿ ಮಗುವನ್ನು ಕುಟುಂಬಸ್ಥರೇ ಉಸಿರುಗಟ್ಟಿಸಿ ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು

ಮಗುವಿನ ಸಾವು ಬಯಲಿಗೆ ಬಂದಿದ್ಹೇಗೆ?

ಇನ್ನು ಮಗು ಸಾವನ್ನಪ್ಪಿದ ಬಳಿಕ ಮೃತದೇವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದಾರೆ. ಆದ್ರೆ, ಇದನ್ನು ತಿಪ್ಪೆ ಗುಂಡಿಯ ಪಕ್ಕದ ಮನೆಯ ಯುವಕ ನೋಡಿದ್ದು, ಏನೋ ಹೂತು ಹಾಕಿರುವ ಬಗ್ಗೆ ಯುವಕನಿಗೆ ಅನುಮಾನ ಮೂಡಿದೆ. ಬಳಿಕ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಮಾಹಿತಿ ಮೇರೆಗೆ ಕೂಡಲೇ ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ತಿಪ್ಪೆಯಲ್ಲಿ ಹೂತಿದ್ದ ಮಗುವಿನ ಮೃತದೇಹ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿರುವ ಪೊಲೀಸರು

ಸದ್ಯ ಪೊಲೀಸರು ಹಸುಗೂಸಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು,ಮರಣೋತ್ತರ ಪರೀಕ್ಷೆ ವರದಿ ಬಳಿಕ ಮಗು ಸಹಜವಾಗಿಯೇ ಉಸಿರುಗಟ್ಟಿ ಸಾವನ್ನಪ್ಪಿದೆಯೋ ಅಥವಾ ಕುಟುಂಬಸ್ಥರೇ ಉಸಿರುಗಟ್ಟಿಸಿ ಕೊಂದಿದ್ದಾರೋ ಎನ್ನುವುದು ಗೊತ್ತಾಗಲಿದೆ. ಹೀಗಾಗಿ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದಾರೆ.

ಇನ್ನು ಅನುಮಾಸ್ಪದ ಸಾವು ಎಂದು ಪ್ರಕರಣ ದಾಖಲಸಿಕೊಂಡಿರುವ ಪೊಲೀಸರು, ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದಾರೆ. ಆದ್ರೆ, ಇದುವರೆಗೂ ಯಾರನ್ನೂ ಬಂಧನ ಮಾಡಿಲ್ಲ. ಒಂದು ವೇಳೆ ವರದಿಯಲ್ಲಿ ಮಗುವನ್ನು ಕೊಲೆ ಮಾಡಲಾಗಿದೆ ಎಂದು ದೃಢವಾದರೆ ಕುಟುಂಬಸ್ಥರನ್ನು ಬಂಧಿಸಲಿದ್ದಾರೆ.

ಒಟ್ಟಿನಲ್ಲಿ ಮದುವೆಗೂ ಮುನ್ನವೇ ನರ್ಸ್ ತಾಯಿ ಆಗಿದ್ದು, ಅನಾಯಾಸವಾಗಿ ಕಣ್ಣು ಬಿಟ್ಟು ಪ್ರಪಂಚವನ್ನು ನೋಡುವ ಮೊದಲೇ ಮಗು ಮೃತಪಟ್ಟಿದ್ದು ದುರಂತ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version