‘ಉಳಿದವರು ಕಂಡಂತೆ’ಗೆ 12 ವರ್ಷ, ರಕ್ಷಿತ್ ಶೆಟ್ಟಿ ನೆನಪು ಮಾಡಿಕೊಂಡಿದ್ದಕ್ಕೆ ಕಾರಣ ಇದೆ

‘ಉಳಿದವರು ಕಂಡಂತೆ’ಗೆ 12 ವರ್ಷ, ರಕ್ಷಿತ್ ಶೆಟ್ಟಿ ನೆನಪು ಮಾಡಿಕೊಂಡಿದ್ದಕ್ಕೆ ಕಾರಣ ಇದೆ

‘ಉಳಿದವರು ಕಂಡಂತೆ’ ರಕ್ಷಿತ್ ಶೆಟ್ಟಿಯ (Rakshit Shetty) ಮೊದಲ ನಿರ್ದೇಶನದ ಸಿನಿಮಾ. ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ (ಮಾರ್ಚ್ 28) ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ಸಿನಿಮಾವನ್ನು ನೆನಪು ಮಾಡಿಕೊಳ್ಳಲು ಏನೇನೋ ಹೊಸ ಕಾರಣಗಳು ಸಿಗುತ್ತಲೇ ಇರುತ್ತವೆ ಎಂದಿದ್ದಾರೆ. ಜೊತೆಗೆ ಒಂದು ಲಿಂಕ್ ಸಹ ಹಂಚಿಕೊಂಡಿದ್ದಾರೆ.

‘ಉಳಿದವರು ಕಂಡಂತೆ’ ಸಿನಿಮಾ 2014 ರ ಮಾರ್ಚ್ 28ಕ್ಕೆ ಬಿಡುಗಡೆ ಆಗಿತ್ತು. ಲೈವ್ ಸೌಂಡ್, ಭಿನ್ನ ರೀತಿಯ ಸ್ಟೋರಿ ಟೆಲ್ಲಿಂಗ್ ಸೇರಿದಂತೆ ಹಲವು ಪ್ರಯೋಗಗಳನ್ನು ರಕ್ಷಿತ್ ಶೆಟ್ಟಿ ಮಾಡಿದ್ದರು. ಬಹುತೇಕ ವಿಮರ್ಶಕರು ಸಿನಿಮಾ ಚೆನ್ನಾಗಿಲ್ಲ ಎಂದೇ ಬರೆದರು. ಪ್ರೇಕ್ಷಕರಿಗೂ ಸಹ ಸಿನಿಮಾ ಆರಂಭದಲ್ಲಿ ಅರ್ಥವಾಗಲಿಲ್ಲ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಎನಿಸಿಕೊಂಡಿತು. ಆದರೆ ಸಿನಿಮಾಕ್ಕೆ ಒಂದು ಕಲ್ಟ್ ಅಭಿಮಾನಿ ವರ್ಗ ಹುಟ್ಟಿಕೊಳ್ತು, ಸಿನಿಮಾವನ್ನು ಪೈರಸಿ ಡೌನ್​​ಲೋಡ್ ಮಾಡಿ ಹೆಚ್ಚು ಮಂದಿ ನೋಡಿದರು. ಹಾಗೆ ನೋಡುತ್ತಾ-ನೋಡುತ್ತಾ ಸಿನಿಮಾ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಇದೀಗ 21ನೇ ಶತಮಾನದ ಈ ವರೆಗಿನ ಅತ್ಯುತ್ತಮ 25 ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ:ರಕ್ಷಿತ್ ಶೆಟ್ಟಿ ಹೇಗಿದ್ದಾರೆ, ಏನು ಮಾಡ್ತಿದ್ದಾರೆ? ಗೆಳೆಯ ಹೇಮಂತ್ ಕೊಟ್ಟರು ಉತ್ತರ

ಜನಪ್ರಿಯ ಸಿನಿಮಾ ಮ್ಯಾಗಜೈನ್ ‘ದಿ ಹಾಲಿವುಡ್ ರಿಪೋರ್ಟರ್’ 2000ರ ಶತಕದಲ್ಲಿ ಅಥವಾ 21ನೇ ಶತಮಾನದ ಈ ವರೆಗಿನ ಅತ್ಯುತ್ತಮ 25 ಭಾರತೀಯ ಸಿನಿಮಾಗಳ ಪಟ್ಟಿ ಪ್ರಕಟಿಸಿದ್ದು, ಆ ಪಟ್ಟಿಯಲ್ಲಿ ‘ಉಳಿದವರು ಕಂಡಂತೆ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ‘ಲಗಾನ್’, ‘ಗ್ಯಾಂಗ್ಸ್ ಆಫ್ ವಸೇಪುರ್’ ಸೇರಿದಂತೆ ಹಲವು ಅತ್ಯುತ್ತಮ ಸಿನಿಮಾಗಳಿರುವ ಪಟ್ಟಿಯಲ್ಲಿ ‘ಉಳಿದವರು ಕಂಡಂತೆ’ ಸಹ ಸ್ಥಾನ ಪಡೆದುಕೊಂಡಿರುವುದು ಮಾತ್ರವೇ ಅಲ್ಲದೆ, ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಕನ್ನಡ ಸಿನಿಮಾ ಇದಾಗಿದೆ.

ಈ ಪಟ್ಟಿಯಲ್ಲಿ ಮಲಯಾಳಂನ ‘ಕುಂಬಳಂಗಿ ನೈಟ್ಸ್’, ‘ಮಹೇಶಿಂಟೆ ಪ್ರತಿಕಾರಂ’, ‘ಅಂಗಮಲೈ ಡೈರೀಸ್’, ‘ದೃಶ್ಯಂ’, ‘ದಿ ಗ್ರೇಟ್ ಇಂಡಿಯನ್ ಕಿಚನ್’ ಇನ್ನೂ ಹಲವು ಸಿನಿಮಾಗಳಿವೆ. ಹಿಂದಿಯ ‘ಲಗಾನ್’, ‘ಗ್ಯಾಂಗ್ಸ್ ಆಫ್ ವಸೇಪುರ್’, ‘ಚಕ್ ದೇ ಇಂಡಿಯಾ’, ‘ದಿಲ್ ಚಾಹ್ತಾ ಹೈ’, ‘ಓಂಕಾರ’ ಇನ್ನೂ ಹಲವು ಸಿನಿಮಾಗಳಿವೆ. ತಮಿಳಿನ ‘ಅಲೈಪಾಯುತೆ’, ‘ಅನ್ಬೆ ಶಿವಂ’, ‘ಆಡುಕುಳಂ’, ‘ಪರಿಯೇರುಂ ಪೆರುಮಾಲ್’ ಇನ್ನೂ ಹಲವು ಸಿನಿಮಾಗಳಿವೆ. ಮರಾಠಿಯ ‘ಕೋರ್ಟ್’, ‘ಸೈರಾಟ್’ ಇನ್ನೂ ಕೆಲ ಸಿನಿಮಾಗಳಿವೆ. ತೆಲುಗಿನ ‘ಈಗ’ ಇದೆ. ಕನ್ನಡದ ‘ಉಳಿದವರು ಕಂಡಂತೆ’ ಸಿನಿಮಾ ಇದೆ. ‘ಉಳಿದವರು ಕಂಡಂತೆ’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾ ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ರಕ್ಷಿತ್ ಶೆಟ್ಟಿ ಅವರು ‘ಉಳಿದವರು ಕಂಡಂತೆ’ ಸಿನಿಮಾದ ಸ್ಪಿನ್ ಆಫ್ ಆಗಿರುವ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಿಸಿದ್ದು, ಸಿನಿಮಾ ಘೋಷಿಸಿಯೇ ವರ್ಷಗಳು ಕಳೆದಿವೆ. ಇತ್ತೀಚೆಗಷ್ಟೆ ಮಾಧ್ಯಮಗಳೊಟ್ಟಿಗೆ ಮಾತನಾಡಿ, ‘ರಿಚರ್ಡ್ ಆಂಟೊನಿ’ ಸಿನಿಮಾದ ಚಿತ್ರೀಕರಣ ಶುರು ಮಾಡಿರುವುದಾಗಿ ಹೇಳಿದ್ದರು. ಮುಂದೇನಾಗುತ್ತದೆ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು.

ವಾಸ್ತವವಾಗಿ ಗುರಿ ಬೆನ್ನಟಲು ಬಂದ ಆರ್​ಸಿಬಿಗೆ ಉತ್ತಮ ಆರಂಭ ಸಿಗಲಿಲ್ಲ. ಫೀಲ್ಡಿಂಗ್​ನಲ್ಲಿ ಮಿಂಚಿದ್ದ ಫಿಲ್ ಸಾಲ್ಟ್ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಕೇವಲ 9 ರನ್ ಗಳಿಸಿ ಔಟಾದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರು. ಆ ಬಳಿಕವೂ ಟಾಪ್ ಗೇರ್​ನಲ್ಲಿ ಬ್ಯಾಟಿಂಗ್‌ ಮಾಡಿದ ಪಡಿಕ್ಕಲ್ ಬೌಂಡರಿ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಆರ್​​ಸಿಬಿ ಕೇವಲ 4 ಓವರ್​ಗಳಲ್ಲಿ ಅರ್ಧಶತಕದ ಗಡಿ ದಾಟಿತು.

ಈ ಹಂತದಲ್ಲಿ ಪಡಿಕ್ಕಲ್ 11 ಎಸೆತಗಳಲ್ಲಿ 34 ರನ್ ಬಾರಿಸಿದ್ದರು. ನಂತರವೂ ಅಬ್ಬರ ಮುಂದುವರೆಸಿದ ಪಡಿಕ್ಕಲ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಬರೆದರು. ಅಂತಿಮವಾಗಿ 9ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ ಪಡಿಕ್ಕಲ್ 26 ಎಸೆತಗಳಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್ ಬಾರಿಸಿ ಔಟಾದರು. ಹಾಗೆಯೇ ಕೊಹ್ಲಿ ಜೊತೆಗೆ ಎರಡನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ನಡೆಸಿ ತಂಡದ ಗೆಲುವನ್ನು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 2 LPG ಟ್ಯಾಂಕರ್‌ಗಳು

ನವದೆಹಲಿ, ಮಾರ್ಚ್ 28: ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟನ್ನು (LPG Crisis) ಬಗೆಹರಿಸುವ ನಿಟ್ಟಿನಲ್ಲಿ ಇನ್ನೆರಡು ಎಲ್​ಪಿಜಿ ಟ್ಯಾಂಕರ್​ಗಳು ಇರಾನ್​ನ ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತದತ್ತ ಸಾಗಿವೆ. ಭಾರತ ಸೇರಿದಂತೆ 5 ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗುವುದು ಎಂದು ನಿನ್ನೆ ಇರಾನ್ ಹೇಳಿಕೆ ನೀಡಿತ್ತು. ಅದರಂತೆ ಇಂದು 2 ಟ್ಯಾಂಕರ್​ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಭಾರತದತ್ತ ಆಗಮಿಸುತ್ತಿವೆ.

90,000 ಟನ್‌ಗಳಿಗಿಂತ ಹೆಚ್ಚು LPG ಹೊತ್ತ ಎರಡು ಭಾರತ ಧ್ವಜವಿರುವ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ವಿಶ್ವದ ಅತ್ಯಂತ ನಿರ್ಣಾಯಕ ತೈಲ ಸಾಗಣೆ ಚಾಕ್‌ಪಾಯಿಂಟ್‌ಗಳಲ್ಲಿ ಒಂದಾದ ಹಾರ್ಮುಜ್ ಬಗ್ಗೆ ಟೆಹ್ರಾನ್‌ನ ನಿಲುವನ್ನು ಸ್ಪಷ್ಟಪಡಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. 5 “ಸ್ನೇಹಪರ ರಾಷ್ಟ್ರಗಳಾದ” ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನಗಳ ಟ್ಯಾಂಕರ್‌ಗಳಿಗೆ ಸುರಕ್ಷಿತ ಮಾರ್ಗವನ್ನು ಅನುಮತಿಸಲಾಗುವುದು ಎಂದು ಅರಘ್ಚಿ ತಿಳಿಸಿದ್ದರು.

ಇದನ್ನೂ ಓದಿ: ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು

ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ಭಾರತಕ್ಕೆ ತೆರಳುತ್ತಿದ್ದ ಎರಡು ಎಲ್‌ಪಿಜಿ (ಅಡುಗೆ ಅನಿಲ) ಟ್ಯಾಂಕರ್‌ಗಳಾದ ಬಿಡಬ್ಲ್ಯೂ ಎಲ್ಮ್ ಮತ್ತು ಬಿಡಬ್ಲ್ಯೂ ಟೈರ್, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿವೆ.
ಇರಾನ್ ವಿರುದ್ಧ ಅಮೆರಿಕ-ಇಸ್ರೇಲಿ ದಾಳಿಗಳಿಂದಾಗಿ ಈ ಪ್ರಮುಖ ಸಮುದ್ರ ಮಾರ್ಗವು ಅಪಾಯದಲ್ಲಿದೆ. ಆದರೂ ಇರಾನ್ ತನ್ನ ಅನುಮತಿಯೊಂದಿಗೆ ಮಿತ್ರ ರಾಷ್ಟ್ರಗಳ ಹಡಗುಗಳು ಅದರ ಮೂಲಕ ಹಾದುಹೋಗಬಹುದು ಎಂದು ಹೇಳಿದೆ.

ಇದನ್ನೂ ಓದಿ: ಗೃಹೇತರ ಬಳಕೆಯ ಎಲ್​ಪಿಜಿ, ಹೆಚ್ಚುವರಿ ಶೇ. 20 ಹಂಚಿಕೆ; ಒಟ್ಟು ಪೂರೈಕೆ ಶೇ. 70ಕ್ಕೆ ಏರಿಕೆ

ಭಾರತೀಯ ಧ್ವಜ ಹೊತ್ತ ಎರಡೂ ಹಡಗುಗಳು ಈಗ ಗಲ್ಫ್ ಪ್ರದೇಶವನ್ನು ದಾಟಿ ಪೂರ್ವ ಹಾರ್ಮುಜ್ ಜಲಸಂಧಿಯನ್ನು ತಲುಪಿವೆ. ಇಲ್ಲಿಯವರೆಗೆ, ಶಿವಾಲಿಕ್, ನಂದಾ ದೇವಿ, ಪೈನ್ ಗ್ಯಾಸ್ ಮತ್ತು ಜಗ್ ವಸಂತ್ ಎಂಬ ನಾಲ್ಕು ಟ್ಯಾಂಕರ್‌ಗಳು ಹಾರ್ಮುಜ್ ದಾಟಿ ಬಂದಿವೆ. ಭಾರತವು ವಿಶ್ವದ ಎರಡನೇ ಅತಿದೊಡ್ಡ LPG ಆಮದುದಾರ ರಾಷ್ಟ್ರವಾಗಿದ್ದು, ಪ್ರಸ್ತುತ ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಅನಿಲ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮಧ್ಯಪ್ರಾಚ್ಯದ ಮೇಲಿನ ಅತಿಯಾದ ಅವಲಂಬನೆ
ಕಳೆದ ವರ್ಷ ಭಾರತ ಸುಮಾರು 33.15 ಮಿಲಿಯನ್ ಟನ್ ಎಲ್‌ಪಿಜಿಯನ್ನು ಬಳಸಿದ್ದು, ಅದರಲ್ಲಿ ಸುಮಾರು ಶೇ.60ರಷ್ಟು ಆಮದುಗಳಿಂದ ಬಂದಿದೆ. ಈ ಪೂರೈಕೆಗಳಲ್ಲಿ ಸುಮಾರು ಶೇ. 90ರಷ್ಟು ಮಧ್ಯಪ್ರಾಚ್ಯದಿಂದ ಬರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇಂದ್ರದ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ನಟಿ ರಾಗಿಣಿ ವಿರೋಧ: ವಿಡಿಯೋ

ಕೇಂದ್ರ ಸರ್ಕಾರವು 2019ರ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆಗೆ ತಿದ್ದುಪಡಿ ತಂದಿದೆ. ಆದರೆ ಈ ಮಸೂದೆಗೆ ಆರಂಭದಿಂದಲೂ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು, ಸಾಕಷ್ಟು ಪ್ರತಿಭಟನೆಗಳು, ವಿರೋಧಗಳ ಬೆನ್ನಲ್ಲೆ ಈ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. ನಟಿ ರಾಗಿಣಿ ದ್ವಿವೇದಿ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಾಗಿಣಿ ಹೇಳಿರುವುದೇನು? ಕಾಯ್ದೆಗೆ ವಿರೋಧ ಏಕೆ? ವಿಡಿಯೋ ನೋಡಿ ಮಾಹಿತಿ ತಿಳಿಯಿರಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs SRH: ಈ ಅತ್ಯದ್ಭುತ ಕ್ಯಾಚ್ ಹಿಡಿದ ಸಾಲ್ಟ್​ಗೊಂದು ಸಲಾಂ ಹೊಡೆಯಲೇಬೇಕು

ಐಪಿಎಲ್ 2026 ಟೂರ್ನಮೆಂಟ್‌ನ ಮೊದಲ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ತಮ್ಮ ಅಮೋಘ ಫಿಲ್ಡಿಂಗ್ ಪ್ರದರ್ಶನದ ಮೂಲಕ ಮೊದಲ ಪಂದ್ಯವನ್ನೇ ರೋಮಾಂಚನಗೊಳಿಸಿದರು. ಒಂದಲ್ಲ, ಎರಡಲ್ಲ.. ಈ ಪಂದ್ಯದಲ್ಲಿ ಸಾಲ್ಟ್ ಹಿಡಿದಿದ್ದು ಬರೋಬ್ಬರಿ 3 ಕ್ಯಾಚ್​ಗಳು. ಈ ಮೂರು ಕ್ಯಾಚ್​ಗಳು ಅಷ್ಟು ಸುಲಭದ ತುತ್ತಾಗಿರಲಿಲ್ಲ. ಹಾಗಿದ್ದರೂ ಫಿಲ್ ಸಾಲ್ಟ್ ಈ ಮೂರು ಕ್ಯಾಚ್ಗಳನ್ನು ಹಿಡಿದು ಎಸ್​ಆರ್​ಎಚ್ ರನ್​ ವೇಗಕ್ಕೆ ಕಡಿವಾಣ ಹಾಕಿದರು.

ಅದರಲ್ಲೂ ನಾಯಕ ಇಶಾನ್ ಕಿಶನ್ ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ 53 ಎಸೆತಗಳಲ್ಲಿ 97 ರನ್‌ಗಳ ಪಾಲುದಾರಿಕೆಯನ್ನು ನಿರ್ಮಿಸಿದ್ದ ಸ್ಫೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರ ವಿಕೆಟ್ ಉರುಳಿಸುವಲ್ಲಿ ಸಾಲ್ಟ್ ಅವರ ಚಾಣಾಕ್ಷತನದ ಫಿಲ್ಡಿಂಗ್ ಎಲ್ಲರ ಗಮನ ಸೆಳೆಯಿತು. 22 ಎಸೆತಗಳಲ್ಲಿ 31 ರನ್ ಬಾರಿಸಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಲಾರಂಭಿಸಿದ ಕ್ಲಾಸೆನ್ ದೊಡ್ಡ ಇನ್ನಿಂಗ್ಸ್ ಆಡುವ ಸುಳಿವು ನೀಡಿದ್ದರು. ಇದಕ್ಕೆ ಪೂರಕವಾಗಿ ಕಿಶನ್ ಹಾಗೂ ಕ್ಲಾಸೆನ್ ಜೋಡಿ 13 ಓವರ್‌ಗಳಲ್ಲಿ ತಂಡವನ್ನು 126 ರನ್‌ಗಳ ಗಡಿ ದಾಟಿಸಿದ್ದರು. ಆದ್ದರಿಂದ, ಈ ಜೋಡಿ ಮುರಿಯದಿದ್ದರೆ, ಅದು 250 ರನ್‌ಗಳಾಗಬಹುದೆಂಬ ಭಯವಿತ್ತು. ಆದಾಗ್ಯೂ 14 ನೇ ಓವರ್‌ನಲ್ಲಿ ಈ ಜೋಡಿಯ ಜೊತೆಯಾಟ ಮುರಿದುಬಿತ್ತು. ಅದು ಸಾಲ್ಟ್ ಅವರ ಫಿಲ್ಡಿಂಗ್​ನಿಂದ.

14 ನೇ ಓವರ್ ಬೌಲ್ ಮಾಡಲು ಬಂದ ರೊಮಾರಿಯೊ ಶೆಫರ್ಡ್‌ ಅವರ ಮೊದಲ ಎಸೆತದಲ್ಲೇ ಹೆನ್ರಿಕ್ ಕ್ಲಾಸೆನ್ ಭರ್ಜರಿ ಸಿಕ್ಸರ್‌ ಹೊಡೆಯಲು ಪ್ರಯತ್ನಿಸಿದರು. ಆದರೆ ಬೌಂಡರಿ ಲೈನ್ ಬಳಿ ನಿಂತಿದ್ದ ಫಿಲ್ ಸಾಲ್ಟ್ ಅದ್ಭುತ ಕ್ಯಾಚ್ ಪಡೆದರು. ಆದರೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ನಿಯಂತ್ರಣ ಕಳೆದುಕೊಂಡರು. ಹೀಗಾಗಿ ಕ್ಯಾಚ್ ಪಡೆದ ಬಳಿಕ ಸಾಲ್ಟ್ ನೆಲಕ್ಕುರುಳಿದರು. ಇದರಿಂದ ಕ್ಯಾಚ್ ಪೂರ್ಣಗೊಂಡಿದೆಯೇ ಎಂಬುದನ್ನು ತಿಳಿದುಕೊಳ್ಳಲು ಫಿಲ್ಡ್ ಅಂಪೈರ್, ಮೂರನೇ ಅಂಪೈರ್​ನ ಮೊರೆ ಹೋದರು.

ಕುಲಂಕುಶವಾಗಿ ಪರಿಶೀಲಿಸಿದ ಮೂರನೇ ಅಂಪೈರ್ ಫೇರ್ ಕ್ಯಾಚ್ ಎಂಬ ತೀರ್ಪು ನೀಡಿದರು. ಆದಾಗ್ಯೂ ಅಂಪೈರ್ ಅವರ ಈ ನಿರ್ಧಾರ ಎಸ್​ಆರ್​ಎಚ್ ಪಾಳಾಯದಲ್ಲಿ ಅಸಮಾಧಾನ ಮೂಡಿಸಿತು. ಏಕೆಂದರೆ ಸಾಲ್ಟ್ ಅವರ ದೇಹ ಬೌಂಡರಿ ಗೆರೆಗೆ ತಾಗಿದೆ ಎಂಬುದು ಅವರ ಅಭಿಪ್ರಾಯವಾಗಿತ್ತು. ಹೀಗಾಗಿ ಕ್ಲಾಸೆನ್ ಕೂಡ ನಾಲ್ಕನೇ ಅಂಪೈರ್ ಬಳಿ ಈ ಬಗ್ಗೆ ಚರ್ಚೆ ನಡೆಸಿದರಾದರೂ ಅದರಿಂದ ಯಾವ ಪ್ರಯೋಜನವೂ ಸಿಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಕ್ಕಳೊಟ್ಟಿಗೆ ಸಮುದ್ರದಲ್ಲಿ ಈಜಾಡಿದ ಹೃತಿಕ್ ರೋಷನ್: ವಿಡಿಯೋ ನೋಡಿ

ಬಾಲಿವುಡ್ (Bollywood) ಸ್ಟಾರ್ ನಟ ಹೃತಿಕ್ ರೋಷನ್ ಅದ್ಭುತ ನಟ ಮತ್ತು ಯಶಸ್ವಿ ಉದ್ಯಮಿ ಆಗಿರುವ ಜೊತೆಗೆ ಬಹಳ ಒಳ್ಳೆ ತಂದೆಯೂ ಸಹ ಹೌದು. ಪತ್ನಿ ಸೂಸನ್​​ ಜೊತೆಗೆ ಹಲವು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದರೂ ಸಹ ಮಕ್ಕಳೊಟ್ಟಿಗೆ ಆತ್ಮೀಯ ಬಂಧವನ್ನು ಇರಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮಕ್ಕಳೊಂದಿಗಿನ ಕೆಲವು ಮುದ್ದಾದ ವಿಡಿಯೋಗಳನ್ನು ಹೃತಿಕ್ ರೋಷನ್ ಹಂಚಿಕೊಂಡಿದ್ದಾರೆ. ಅದರಲ್ಲೂ ಮಕ್ಕಳಿಬ್ಬರ ಜೊತೆಗೆ ಸಮುದ್ರದಲ್ಲಿ ಈಜಾಡುತ್ತಿರುವ ವಿಡಿಯೋ ಬಹಳ ಚೆನ್ನಾಗಿದೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಈ ರಾಶಿಯಲ್ಲಿ ಸಂಭವಿಸುವ ಗ್ರಹ ಬದಲಾವಣೆಯಿಂದ ಏಪ್ರಿಲ್​​ನಲ್ಲಿ​​​​ ದೇಶದಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ

ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕೇವಲ ವ್ಯಕ್ತಿಗಳ ಮೇಲೆ ಮಾತ್ರವಲ್ಲದೆ, ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಿವೆ. ಏಪ್ರಿಲ್ 2026 ರಲ್ಲಿ ದೇಶ ಮತ್ತು ವಿದೇಶಗಳಲ್ಲಿ ಎಂತಹ ಬದಲಾವಣೆಗಳು ಆಗಲಿವೆ ಎನ್ನುವುದರನ್ನು ಸರಿಯಾಗಿ ಊಹಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯಲ್ಲಿ ವಿಶೇಷವಾಗಿ ಮೀನ ಮತ್ತು ಮೇಷ ರಾಶಿಯಲ್ಲಿ ಸಂಭವಿಸುವ ಗ್ರಹಗಳ ಸಂಯೋಜನೆಯು ರಾಷ್ಟ್ರಗಳ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಪ್ರಭಾವ ಬೀರಲಿದೆ.

ಭಾರತಕ್ಕೆ ಆಗುವ ಲಾಭ ಮತ್ತು ಶುಭ ಫಲಗಳು

​ತಾಂತ್ರಿಕಕ್ರಾಂತಿ:

ಬುಧ ಮತ್ತು ಗುರು ಗ್ರಹಗಳ ಅನುಕೂಲಕರ ಸ್ಥಿತಿಯಿಂದಾಗಿ ಭಾರತದ ಐಟಿ, ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ಮೂಲಸೌಕರ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಪ್ರಗತಿ ಕಂಡುಬರಲಿದೆ. ಹೊಸ ಸ್ಟಾರ್ಟ್‌ಅಪ್‌ಗಳಿಗೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಸಿಗಲಿದೆ.

​ರಕ್ಷಣಾ ಕ್ಷೇತ್ರದ ಬಲ :

ಮಂಗಳ ಗ್ರಹದ ಪ್ರಭಾವದಿಂದ ಭಾರತದ ರಕ್ಷಣಾ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಲಿದೆ. ಸೈನ್ಯಕ್ಕೆ ಆಧುನಿಕ ಶಸ್ತ್ರಾಸ್ತ್ರಗಳ ಸೇರ್ಪಡೆಯಾಗಲಿದ್ದು, ಜಾಗತಿಕವಾಗಿ ಭಾರತದ ಸೈನಿಕ ಶಕ್ತಿ ಮತ್ತಷ್ಟು ಬಲಗೊಳ್ಳಲಿದೆ.

​ಕೃಷಿಭೂಮಿಯ ಮೌಲ್ಯವರ್ಧನೆ:

ಭೂಮಿಗೆ ಸಂಬಂಧಿಸಿದ ಗ್ರಹಗಳ ಸಂಯೋಜನೆಯಿಂದಾಗಿ ಕೃಷಿ ಭೂಮಿ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೂಡಿಕೆ ಮಾಡುವವರಿಗೆ ಲಾಭದಾಯಕ ಸಮಯವಿದು.

​ಭಾರತಕ್ಕೆ ಎದುರಾಗಬಹುದಾದ ನಷ್ಟ ಮತ್ತು ಸವಾಲುಗಳು

​ಗಡಿ ಭಾಗದಲ್ಲಿ ಉದ್ವಿಗ್ನತೆ:

ಏಪ್ರಿಲ್ ಎರಡನೇ ವಾರದಲ್ಲಿ ಮಂಗಳ ಮತ್ತು ಶನಿ ಗ್ರಹಗಳ ಯುತಿಯು ಮೀನ ರಾಶಿಯಲ್ಲಿ ಸಂಭವಿಸುವುದರಿಂದ, ನೆರೆಹೊರೆಯ ರಾಷ್ಟ್ರಗಳೊಂದಿಗೆ ಗಡಿ ವಿವಾದ ಅಥವಾ ಸಣ್ಣಪುಟ್ಟ ಸಂಘರ್ಷಗಳು ಉಂಟಾಗುವ ಸಾಧ್ಯತೆ ಇದೆ.

​ಆಡಳಿತಾತ್ಮಕ ಬದಲಾವಣೆ:

ಸೂರ್ಯ ಮತ್ತು ಶನಿಯ ಪ್ರಭಾವದಿಂದ ದೇಶದ ರಾಜಕೀಯದಲ್ಲಿ ದಿಢೀರ್ ಬದಲಾವಣೆಗಳು ಅಥವಾ ಸಚಿವ ಸಂಪುಟದಲ್ಲಿ ಪುನಾರಚನೆಯಂತಹ ವಿದ್ಯಮಾನಗಳು ನಡೆಯಬಹುದು.

​ಷೇರು ಮಾರುಕಟ್ಟೆಯಲ್ಲಿ ಅಸ್ಥಿರತೆ:

ಹಣಕಾಸಿನ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತಗಳು ಕಂಡುಬರಲಿವೆ. ಹೂಡಿಕೆದಾರರು ಜಾಗರೂಕರಾಗಿರಬೇಕಾದ ಸಮಯವಿದು.

​ಇತರ ರಾಷ್ಟ್ರಗಳು ಮತ್ತು ಜಾಗತಿಕ ಸ್ಥಿತಿ

​ಆರ್ಥಿಕ ಪುನಶ್ಚೇತನ:

ಜಾಗತಿಕವಾಗಿ ಅನೇಕ ರಾಷ್ಟ್ರಗಳು ತಮ್ಮ ಹಳೆಯ ಆರ್ಥಿಕ ನೀತಿಗಳನ್ನು ಕೈಬಿಟ್ಟು ಹೊಸ ಡಿಜಿಟಲ್ ಕರೆನ್ಸಿ ಅಥವಾ ಸುಧಾರಿತ ತೆರಿಗೆ ನೀತಿಗಳತ್ತ ಮುಖ ಮಾಡಲಿವೆ. ಇದು ದೀರ್ಘಕಾಲದ ಲಾಭಕ್ಕೆ ದಾರಿ ಮಾಡಿಕೊಡಲಿದೆ.

​ನೈಸರ್ಗಿಕ ವಿಕೋಪ ಭೀತಿ:

ಗ್ರಹಗಳ ಸಂಘರ್ಷದಿಂದಾಗಿ ಇಂಡೋನೇಷ್ಯಾ, ಜಪಾನ್ ಮತ್ತು ರಷ್ಯಾದ ಕೆಲವು ಭಾಗಗಳಲ್ಲಿ ಭೂಕಂಪ ಅಥವಾ ಸಮುದ್ರ ಮಟ್ಟದಲ್ಲಿ ಏರಿಕೆಯಂತಹ ನೈಸರ್ಗಿಕ ವಿಕೋಪಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ.

​ಸಾಂಸ್ಕೃತಿಕ ಪುನರುತ್ಥಾನ:

ಯೂರೋಪ್ ಮತ್ತು ಅಮೆರಿಕದಂತಹ ರಾಷ್ಟ್ರಗಳಲ್ಲಿ ಭಾರತೀಯ ಆಧ್ಯಾತ್ಮಿಕತೆ ಮತ್ತು ಯೋಗದಂತಹ ಪದ್ಧತಿಗಳಿಗೆ ಹೆಚ್ಚಿನ ಬೇಡಿಕೆ ಕಂಡುಬರಲಿದ್ದು, ಸಾಂಸ್ಕೃತಿಕ ವಿನಿಮಯದಿಂದ ಭಾರತಕ್ಕೆ ಗೌರವ ಲಭಿಸಲಿದೆ.

​ಲೋಹ ಮತ್ತು ವಸ್ತುಗಳ ಬೆಲೆ ಏರಿಕೆ

​ಚಿನ್ನದ ಬೆಲೆ:

ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬರುವ ಸಾಧ್ಯತೆ ಇದೆ. ಈ ಸಮಯದಲ್ಲಿ ಮಾಡುವ ಹೂಡಿಕೆ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುವುದು.

​ಇಂಧನ:

ಕಚ್ಚಾ ತೈಲದ ಬೆಲೆಯಲ್ಲಿ ಅಸ್ಥಿರತೆ ಇರಲಿದ್ದು, ಇದರಿಂದಾಗಿ ಕೆಲವು ರಾಷ್ಟ್ರಗಳಲ್ಲಿ ಸಾರಿಗೆ ವೆಚ್ಚ ಅಧಿಕವಾಗಬಹುದು.

​ಒಟ್ಟಾರೆಯಾಗಿ ಏಪ್ರಿಲ್ ೨೦೨೬ರಲ್ಲಿ ಭಾರತವು ತನ್ನ ಆಂತರಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಪ್ರಭಾವಿ ದೇಶವಾಗಿ ಹೊರಹೊಮ್ಮಲಿದೆ. ಆದಾಗ್ಯೂ, ಗಡಿ ಸುರಕ್ಷತೆ ಮತ್ತು ಆರ್ಥಿಕ ಶಿಸ್ತಿನ ಕಡೆಗೆ ಹೆಚ್ಚಿನ ಗಮನ ಹರಿಸುವುದು ಅನಿವಾರ್ಯ. ಇದಕ್ಕೆ ತಕ್ಕಂತೆ ವೈಯಕ್ತಿಕ ವ್ಯಾಪಾರ ವ್ಯವಹಾರ, ಯೋಜನೆಗಳು ಇದ್ದರೆ ಸುಖವಾದ ಜೀವನ ಸಾಧ್ಯ.

– ಲೋಹಿತ ಹೆಬ್ಬಾರ್

Source link

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ

ನವದೆಹಲಿ, ಮಾರ್ಚ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ (West Bengal Elections)  ಮುನ್ನ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಂಗಾಳದಲ್ಲಿ ಆಡಳಿತ ಪಕ್ಷದ ವಿರುದ್ಧ “ಚಾರ್ಜ್‌ಶೀಟ್” ಬಿಡುಗಡೆ ಮಾಡಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತಾ, ಅನುಕಂಪದ ಅಲೆ ಗಿಟ್ಟಿಸಿಕೊಳ್ಳುತ್ತಾ ಮಮತಾ ಬ್ಯಾನರ್ಜಿ ಜನರಲ್ಲಿ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ತಮ್ಮ ರಾಜಕೀಯ ಕಾರ್ಯಸೂಚಿಗಾಗಿ ಸುಳ್ಳು, ಬೆದರಿಕೆ ಮತ್ತು ಹಿಂಸಾಚಾರವನ್ನು ಅವಲಂಬಿಸಿದ್ದಾರೆ. ಗಡಿ ರಾಜ್ಯ ಬಂಗಾಳವು ದೇಶದ ಭದ್ರತೆಗೆ ಮುಖ್ಯವಾಗಿದೆ. ಏಕೆಂದರೆ ಒಳನುಸುಳುವವರು ದೇಶದ ಭದ್ರತೆಗೆ ಬೆದರಿಕೆಯೊಡ್ಡುತ್ತಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ

“ಮಮತಾ ಬ್ಯಾನರ್ಜಿ ನಿರಂತರವಾಗಿ ‘ವಿಕ್ಟಿಮ್ ಕಾರ್ಡ್’ ಬಳಸುತ್ತಿದ್ದಾರೆ. ಕೆಲವೊಮ್ಮೆ ಅವರ ಕಾಲು ಮುರಿಯುತ್ತದೆ ಅಥವಾ ತಲೆಗೆ ಬ್ಯಾಂಡೇಜ್ ಹಾಕಿಕೊಳ್ಳುತ್ತಾರೆ ಅಥವಾ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇತರ ಸಮಯಗಳಲ್ಲಿ, ಅವರು ಚುನಾವಣಾ ಆಯೋಗದ ಮುಂದೆ ಗೂಬೆ ಕೂರಿಸುತ್ತಾರೆ. ಬಂಗಾಳದ ಜನರು ನಿಮ್ಮ ರಾಜಕೀಯ ಬ್ರ್ಯಾಂಡ್ ಅನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಮಮತಾ ಬ್ಯಾನರ್ಜಿಯವರಿಗೆ ನಾನು ಹೇಳಲು ಇಲ್ಲಿಗೆ ಬಂದಿದ್ದೇನೆ” ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ

ಒಳನುಸುಳುವವರು ಭಾರತದ ಭದ್ರತೆಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಬಡ ಕಾರ್ಮಿಕರ ವೇತನ ಮತ್ತು ಯುವಕರ ಉದ್ಯೋಗಾವಕಾಶಗಳನ್ನು ಸಹ ಕಸಿದುಕೊಳ್ಳುತ್ತಿದ್ದಾರೆ. ಅಸ್ಸಾಂನಿಂದ ದೇಶದೊಳಗೆ ಒಳನುಸುಳುವಿಕೆಯನ್ನು ಬಿಜೆಪಿ ಬಹುತೇಕ ನಿಲ್ಲಿಸಿದೆ. ಆದ್ದರಿಂದ, ಬಂಗಾಳ ಚುನಾವಣೆಯು ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೂ ಅದರಲ್ಲೂ ವಿಶೇಷವಾಗಿ ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ಮಹತ್ವದ್ದಾಗಿದೆ. ಟಿಎಂಸಿ ಒಳನುಸುಳುವಿಕೆಯ ರಾಜಕೀಯದಿಂದಾಗಿ ಸಿಲಿಗುರಿ ಕಾರಿಡಾರ್‌ನ ಭದ್ರತೆಯು ತೀವ್ರವಾಗಿ ಸಮಸ್ಯೆಯಾಗಿ ಪರಿಣಮಿಸಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ: ಧಾರಾಕಾರ ಮಳೆಗೆ ಹಲವು ಅವಾಂತರ

ಬೆಂಗಳೂರು, ಮಾರ್ಚ್​ 28: ರಣರಣ ಅಂತಿರೋ ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ.

ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು ಹೆಚ್ಚಾಗಿದೆ. ಈ ಬಿಸಿಲಬೇಗೆ ನಡುವೆ ಅಲ್ಲಲ್ಲಿ ಮಳೆ ಆಗ್ತಿದೆ. ಇವತ್ತು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಮಳೆ ಆರ್ಭಟಿಸಿದೆ.

ಹಾರಿಹೋದ ಶಾಲೆಯ ಹೆಂಚು

ಅದರಲ್ಲೂ ಜೋರುಗಾಳಿ ಇದ್ದಿದ್ರಿಂದ ಮೂಡಿಗೆರೆಯ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಪ್ರೌಢಶಾಲೆಯ ಹೆಂಚುಗಳು ಪುಡಿಪುಡಿ ಆಗಿವೆ. ಹೆಂಚುಗಳು ಹಾರಿಹೋಗುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!

ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಬಿರುಗಾಳಿಗೆ ಕ್ಯಾಂಟೀನ್ ಮೇಲ್ಚಾವಣೆ ಹಾರಿಹೋಗಿದೆ. ತೆಂಗಿನ ಮರ ರಸ್ತೆಗೆ ಉರುಳಿದೆ. ಇನ್ನು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಧಾರಾಕಾರವಾಗಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ಥವಾಗಿತ್ತು.

ಕಾರಿನ ಮೇಲೆ ಉರುಳಿದ ಮರ: ದಂಪತಿ ಬಚಾವ್‌!

ಮೂಡಿಗೆರೆಯ ಪರಿಮಳಮ್ಮ ದೇಗುಲ ಬಳಿ ಚಲಿಸುತ್ತಿದ್ದ ಕಾರ್ ಮೇಲೆ ಬೃಹತ್‌ ಮರ ಉರುಳಿ ಬಿದ್ದಿತ್ತು. ಕಾರಿನಲ್ಲಿದ್ದ ದಂಪತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ದಂಪತಿ ರಕ್ಷಣೆ ಮಾಡಿರುವ ಅಗ್ನಿಶಾಮಕ ಸಿಬ್ಬಂದಿ ಮರ ತೆರವು ಮಾಡಿದ್ದಾರೆ.

ಹಾಸನದಲ್ಲಿ ಸಿಡಿಲಿನ ಆರ್ಭಟ: ಐವರಿಗೆ ಗಾಯ!

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೂ ಮಳೆ ಅಬ್ಬರಿಸಿದೆ. ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಗಾಯಗೊಂಡಿದ್ದು ಆಸ್ಪತ್ರೆ ಸೇರಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ರೂಪಾ, ಲಕ್ಷ್ಮೀ, ಸುಮಿತ್ರಾ, ಜಯಮ್ಮ ಸೇರಿದಂತೆ ಐವರನ್ನ ಸಕಲೇಶಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಲಿಕಲ್ಲು ಮಳೆ: ಮಾವು ಬೆಳೆಗಾರರು ಕಂಗಾಲು

ಧಾರವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ, ಧಾರವಾಡ ತಾಲೂಕಿನಲ್ಲಿ ವಾರದ ಹಿಂದೆ ಆಲಿಕಲ್ಲು ಮಳೆ ಆಗಿತ್ತು. ಥೇಟ್‌ ಕಾಶ್ಮೀರದಂತೆ ಬದಲಾಗಿತ್ತು. ಇದೇ ಆಲಿಕಲ್ಲು ಮಳೆ ಮಾವು ಬೆಳೆಗಾರರು ಕಂಗಾಲಾಗುವಂತೆ ಮಾಡಿದೆ. ಇಬ್ಬನಿಯಿಂದ್ಲೇ ಹೂವು ಉದುರಿ ಹೋಗಿದ್ವು. ಅಳಿದುಳಿದಿದ್ದ ಮಾವು, ಆಲಿಕಲ್ಲು ಮಳೆಯಿಂದ ಸಾವಿರಾರು ಎಕರೆಯಲ್ಲಿನ ಮಾವು ಹಾಳಾಗಿದೆ.

ಇದನ್ನೂ ಓದಿ: ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಬೇಸಿಗೆಯಿಂದ ಬೆಂದು ಹೋಗುತ್ತಿರುವ ಜನರಿಗೆ ಒಂದ್ಕಡೆ ಮಳೆರಾಯ ತಂಪೆರೆದರೆ, ಮತ್ತೊಂದ್ಕಡೆ ಇದೇ ಮಳೆ ಮಾವು ಬೆಳೆಯನ್ನ ನೆಲದ ಪಾಲು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೆಎಸ್‌ಆರ್‌ಟಿಸಿಗೆ ರಾಷ್ಟ್ರಮಟ್ಟದ ‘ಸ್ಕಾಚ್’ ಗೌರವ: ಪಾರದರ್ಶಕ ನೇಮಕಾತಿ ಮತ್ತು ತರಬೇತಿಗೆ ಸಂದ ದೊಡ್ಡ ಜಯ!

ಬೆಂಗಳೂರು, ಮಾ.28: ನಿಗಮವು ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ”ಕ್ಕೆ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದೆ. ನಿಗಮವು ಅರ್ಜಿ ಸಲ್ಲಿಕೆದಿಂದ ಆಯ್ಕೆ ಪ್ರಕ್ರಿಯೆಯವರೆಗೆ, ಘಟಕ ನಿಯೋಜನೆ ವರೆಗೆ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಏಕರೂಪತೆಯನ್ನು ಕಾಪಾಡಿಕೊಂಡು ಮೂಲಕ ಮಾನವ ಹಸ್ತಕ್ಷೇಪವನ್ನು ನಿಲ್ಲಿಸಲಾಗಿದೆ.

ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್ಲೈನ್ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್ ಕ್ಯಾಸ್ಟಿಂಗ್, ಅಟೋ ಜನರೇಟಡ್ ಅಂಕಪಟ್ಟಿ ನೀಡುವ ಮೂಲಕ 2000 ಚಾಲಕ‌/ ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿಗಳು, 441 ಅನುಕಂಪ‌ ಆಧಾರದಲ್ಲಿ‌ ಹುದ್ದೆಗಳನ್ನು ನೇಮಕಾತಿ ಮಾಡಲಾಗಿದೆ. ಇದಲ್ಲದೆ, ಕಳೆದ ಆರು ತಿಂಗಳಲ್ಲಿ ಸುಮಾರು 12,000ಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದ್ದು, ನಿಗಮದ ಸಮಗ್ರ‌ ವಿಷಯ ನಿರೂಪಣೆಯಲ್ಲಿನ ಬದಲಾವಣೆಗೆ ಸಹಕಾರಿಯಾಗಿದೆ.

ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ದೇಶದ ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ, ಪಾರದರ್ಶಕ ನೀತಿ, ಯೋಜನೆ, ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿರುವ ಕೊಡುಗೆಗಳು ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡಲಾಗುತ್ತದೆ.

ಇದನ್ನೂ ಓದಿ: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಇಂದು, ಸ್ಕಾಚ್ ಸಂಸ್ಥೆಯು ದೆಹಲಿಯ, ಸಿಲ್ವರ್ ಓಕ್ ಹಾಲ್, ಇಂಡಿಯಾ ಹ್ಯಾಬಿಟೇಟ್ ಸೆಂಟರ್ ನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಅಕ್ರಂ ಪಾಷ, ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್ಆರ್ ಟಿಸಿ ರವರು ಶ್ರೀ. ಸಮೀರ್ ಕೊಚ್ಚರ್‌,‌ಅಧ್ಯಕ್ಷರು ಸ್ಕಾಚ್ ಫೌಂಡೇಶನ್ , ಡಾ.ಗುರುಚರಣ್ ಧನ್ಜಾಲ್,‌ ಉಪಾಧ್ಯಕ್ಷರು, ಸ್ಕಾಚ್ ಗ್ರೂಪ್ ರವರಿಂದ ಸ್ವೀಕರಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version