ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ

ನವದೆಹಲಿ, ಮಾರ್ಚ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ (West Bengal Elections)  ಮುನ್ನ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಂಗಾಳದಲ್ಲಿ ಆಡಳಿತ ಪಕ್ಷದ ವಿರುದ್ಧ “ಚಾರ್ಜ್‌ಶೀಟ್” ಬಿಡುಗಡೆ ಮಾಡಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತಾ, ಅನುಕಂಪದ ಅಲೆ ಗಿಟ್ಟಿಸಿಕೊಳ್ಳುತ್ತಾ ಮಮತಾ ಬ್ಯಾನರ್ಜಿ ಜನರಲ್ಲಿ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ತಮ್ಮ ರಾಜಕೀಯ ಕಾರ್ಯಸೂಚಿಗಾಗಿ ಸುಳ್ಳು, ಬೆದರಿಕೆ ಮತ್ತು ಹಿಂಸಾಚಾರವನ್ನು ಅವಲಂಬಿಸಿದ್ದಾರೆ. ಗಡಿ ರಾಜ್ಯ ಬಂಗಾಳವು ದೇಶದ ಭದ್ರತೆಗೆ ಮುಖ್ಯವಾಗಿದೆ. ಏಕೆಂದರೆ ಒಳನುಸುಳುವವರು ದೇಶದ ಭದ್ರತೆಗೆ ಬೆದರಿಕೆಯೊಡ್ಡುತ್ತಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ

“ಮಮತಾ ಬ್ಯಾನರ್ಜಿ ನಿರಂತರವಾಗಿ ‘ವಿಕ್ಟಿಮ್ ಕಾರ್ಡ್’ ಬಳಸುತ್ತಿದ್ದಾರೆ. ಕೆಲವೊಮ್ಮೆ ಅವರ ಕಾಲು ಮುರಿಯುತ್ತದೆ ಅಥವಾ ತಲೆಗೆ ಬ್ಯಾಂಡೇಜ್ ಹಾಕಿಕೊಳ್ಳುತ್ತಾರೆ ಅಥವಾ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇತರ ಸಮಯಗಳಲ್ಲಿ, ಅವರು ಚುನಾವಣಾ ಆಯೋಗದ ಮುಂದೆ ಗೂಬೆ ಕೂರಿಸುತ್ತಾರೆ. ಬಂಗಾಳದ ಜನರು ನಿಮ್ಮ ರಾಜಕೀಯ ಬ್ರ್ಯಾಂಡ್ ಅನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಮಮತಾ ಬ್ಯಾನರ್ಜಿಯವರಿಗೆ ನಾನು ಹೇಳಲು ಇಲ್ಲಿಗೆ ಬಂದಿದ್ದೇನೆ” ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ

ಒಳನುಸುಳುವವರು ಭಾರತದ ಭದ್ರತೆಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಬಡ ಕಾರ್ಮಿಕರ ವೇತನ ಮತ್ತು ಯುವಕರ ಉದ್ಯೋಗಾವಕಾಶಗಳನ್ನು ಸಹ ಕಸಿದುಕೊಳ್ಳುತ್ತಿದ್ದಾರೆ. ಅಸ್ಸಾಂನಿಂದ ದೇಶದೊಳಗೆ ಒಳನುಸುಳುವಿಕೆಯನ್ನು ಬಿಜೆಪಿ ಬಹುತೇಕ ನಿಲ್ಲಿಸಿದೆ. ಆದ್ದರಿಂದ, ಬಂಗಾಳ ಚುನಾವಣೆಯು ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೂ ಅದರಲ್ಲೂ ವಿಶೇಷವಾಗಿ ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ಮಹತ್ವದ್ದಾಗಿದೆ. ಟಿಎಂಸಿ ಒಳನುಸುಳುವಿಕೆಯ ರಾಜಕೀಯದಿಂದಾಗಿ ಸಿಲಿಗುರಿ ಕಾರಿಡಾರ್‌ನ ಭದ್ರತೆಯು ತೀವ್ರವಾಗಿ ಸಮಸ್ಯೆಯಾಗಿ ಪರಿಣಮಿಸಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ: ಧಾರಾಕಾರ ಮಳೆಗೆ ಹಲವು ಅವಾಂತರ

ಬೆಂಗಳೂರು, ಮಾರ್ಚ್​ 28: ರಣರಣ ಅಂತಿರೋ ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ.

ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು ಹೆಚ್ಚಾಗಿದೆ. ಈ ಬಿಸಿಲಬೇಗೆ ನಡುವೆ ಅಲ್ಲಲ್ಲಿ ಮಳೆ ಆಗ್ತಿದೆ. ಇವತ್ತು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಮಳೆ ಆರ್ಭಟಿಸಿದೆ.

ಹಾರಿಹೋದ ಶಾಲೆಯ ಹೆಂಚು

ಅದರಲ್ಲೂ ಜೋರುಗಾಳಿ ಇದ್ದಿದ್ರಿಂದ ಮೂಡಿಗೆರೆಯ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಪ್ರೌಢಶಾಲೆಯ ಹೆಂಚುಗಳು ಪುಡಿಪುಡಿ ಆಗಿವೆ. ಹೆಂಚುಗಳು ಹಾರಿಹೋಗುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!

ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಬಿರುಗಾಳಿಗೆ ಕ್ಯಾಂಟೀನ್ ಮೇಲ್ಚಾವಣೆ ಹಾರಿಹೋಗಿದೆ. ತೆಂಗಿನ ಮರ ರಸ್ತೆಗೆ ಉರುಳಿದೆ. ಇನ್ನು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಧಾರಾಕಾರವಾಗಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ಥವಾಗಿತ್ತು.

ಕಾರಿನ ಮೇಲೆ ಉರುಳಿದ ಮರ: ದಂಪತಿ ಬಚಾವ್‌!

ಮೂಡಿಗೆರೆಯ ಪರಿಮಳಮ್ಮ ದೇಗುಲ ಬಳಿ ಚಲಿಸುತ್ತಿದ್ದ ಕಾರ್ ಮೇಲೆ ಬೃಹತ್‌ ಮರ ಉರುಳಿ ಬಿದ್ದಿತ್ತು. ಕಾರಿನಲ್ಲಿದ್ದ ದಂಪತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ದಂಪತಿ ರಕ್ಷಣೆ ಮಾಡಿರುವ ಅಗ್ನಿಶಾಮಕ ಸಿಬ್ಬಂದಿ ಮರ ತೆರವು ಮಾಡಿದ್ದಾರೆ.

ಹಾಸನದಲ್ಲಿ ಸಿಡಿಲಿನ ಆರ್ಭಟ: ಐವರಿಗೆ ಗಾಯ!

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೂ ಮಳೆ ಅಬ್ಬರಿಸಿದೆ. ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಗಾಯಗೊಂಡಿದ್ದು ಆಸ್ಪತ್ರೆ ಸೇರಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ರೂಪಾ, ಲಕ್ಷ್ಮೀ, ಸುಮಿತ್ರಾ, ಜಯಮ್ಮ ಸೇರಿದಂತೆ ಐವರನ್ನ ಸಕಲೇಶಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಲಿಕಲ್ಲು ಮಳೆ: ಮಾವು ಬೆಳೆಗಾರರು ಕಂಗಾಲು

ಧಾರವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ, ಧಾರವಾಡ ತಾಲೂಕಿನಲ್ಲಿ ವಾರದ ಹಿಂದೆ ಆಲಿಕಲ್ಲು ಮಳೆ ಆಗಿತ್ತು. ಥೇಟ್‌ ಕಾಶ್ಮೀರದಂತೆ ಬದಲಾಗಿತ್ತು. ಇದೇ ಆಲಿಕಲ್ಲು ಮಳೆ ಮಾವು ಬೆಳೆಗಾರರು ಕಂಗಾಲಾಗುವಂತೆ ಮಾಡಿದೆ. ಇಬ್ಬನಿಯಿಂದ್ಲೇ ಹೂವು ಉದುರಿ ಹೋಗಿದ್ವು. ಅಳಿದುಳಿದಿದ್ದ ಮಾವು, ಆಲಿಕಲ್ಲು ಮಳೆಯಿಂದ ಸಾವಿರಾರು ಎಕರೆಯಲ್ಲಿನ ಮಾವು ಹಾಳಾಗಿದೆ.

ಇದನ್ನೂ ಓದಿ: ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಬೇಸಿಗೆಯಿಂದ ಬೆಂದು ಹೋಗುತ್ತಿರುವ ಜನರಿಗೆ ಒಂದ್ಕಡೆ ಮಳೆರಾಯ ತಂಪೆರೆದರೆ, ಮತ್ತೊಂದ್ಕಡೆ ಇದೇ ಮಳೆ ಮಾವು ಬೆಳೆಯನ್ನ ನೆಲದ ಪಾಲು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೆಎಸ್‌ಆರ್‌ಟಿಸಿಗೆ ರಾಷ್ಟ್ರಮಟ್ಟದ ‘ಸ್ಕಾಚ್’ ಗೌರವ: ಪಾರದರ್ಶಕ ನೇಮಕಾತಿ ಮತ್ತು ತರಬೇತಿಗೆ ಸಂದ ದೊಡ್ಡ ಜಯ!

ಬೆಂಗಳೂರು, ಮಾ.28: ನಿಗಮವು ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ”ಕ್ಕೆ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದೆ. ನಿಗಮವು ಅರ್ಜಿ ಸಲ್ಲಿಕೆದಿಂದ ಆಯ್ಕೆ ಪ್ರಕ್ರಿಯೆಯವರೆಗೆ, ಘಟಕ ನಿಯೋಜನೆ ವರೆಗೆ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಏಕರೂಪತೆಯನ್ನು ಕಾಪಾಡಿಕೊಂಡು ಮೂಲಕ ಮಾನವ ಹಸ್ತಕ್ಷೇಪವನ್ನು ನಿಲ್ಲಿಸಲಾಗಿದೆ.

ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್ಲೈನ್ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್ ಕ್ಯಾಸ್ಟಿಂಗ್, ಅಟೋ ಜನರೇಟಡ್ ಅಂಕಪಟ್ಟಿ ನೀಡುವ ಮೂಲಕ 2000 ಚಾಲಕ‌/ ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿಗಳು, 441 ಅನುಕಂಪ‌ ಆಧಾರದಲ್ಲಿ‌ ಹುದ್ದೆಗಳನ್ನು ನೇಮಕಾತಿ ಮಾಡಲಾಗಿದೆ. ಇದಲ್ಲದೆ, ಕಳೆದ ಆರು ತಿಂಗಳಲ್ಲಿ ಸುಮಾರು 12,000ಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದ್ದು, ನಿಗಮದ ಸಮಗ್ರ‌ ವಿಷಯ ನಿರೂಪಣೆಯಲ್ಲಿನ ಬದಲಾವಣೆಗೆ ಸಹಕಾರಿಯಾಗಿದೆ.

ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ದೇಶದ ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ, ಪಾರದರ್ಶಕ ನೀತಿ, ಯೋಜನೆ, ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿರುವ ಕೊಡುಗೆಗಳು ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡಲಾಗುತ್ತದೆ.

ಇದನ್ನೂ ಓದಿ: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಇಂದು, ಸ್ಕಾಚ್ ಸಂಸ್ಥೆಯು ದೆಹಲಿಯ, ಸಿಲ್ವರ್ ಓಕ್ ಹಾಲ್, ಇಂಡಿಯಾ ಹ್ಯಾಬಿಟೇಟ್ ಸೆಂಟರ್ ನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಅಕ್ರಂ ಪಾಷ, ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್ಆರ್ ಟಿಸಿ ರವರು ಶ್ರೀ. ಸಮೀರ್ ಕೊಚ್ಚರ್‌,‌ಅಧ್ಯಕ್ಷರು ಸ್ಕಾಚ್ ಫೌಂಡೇಶನ್ , ಡಾ.ಗುರುಚರಣ್ ಧನ್ಜಾಲ್,‌ ಉಪಾಧ್ಯಕ್ಷರು, ಸ್ಕಾಚ್ ಗ್ರೂಪ್ ರವರಿಂದ ಸ್ವೀಕರಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs SRH: ಸೂಪರ್ ಮ್ಯಾನ್ ಫಿಲ್ ಸಾಲ್ಟ್ ಚಿರತೆಯ ಜಿಗಿತಕ್ಕೆ ದಂಗಾದ ಇಶಾನ್ ಕಿಶನ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಎಲ್ಲೆಲ್ಲಿಯೂ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ಅವರದ್ದೇ ಅಬ್ಬರ. ಈ ಪಂದ್ಯದಲ್ಲಿ ಫಿಲ್ ಸಾಲ್ಟ್ ಮೂರು ಅದ್ಭುತ ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಇಡೀ ಮೈದಾನವೇ ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅದರಲ್ಲೂ 80 ರನ್ ಬಾರಿಸಿ ಶತಕದತ್ತ ಮುನ್ನಗುತ್ತಿದ್ದ ಎಸ್​ಆರ್​ಎಚ್ ನಾಯಕ ಇಶಾನ್ ಕಿಶನ್ ಅವರ ಅತ್ಯಂತ ಕಷ್ಟಕರವಾದ ಕ್ಯಾಚ್ ಅನ್ನು ಸಾಲ್ಟ್, ಚಿರತೆಯಂತೆ ಎಗರಿ ಎಂದೇ ಕೈನಲ್ಲಿ ಹಿಡಿದರು. ಸ್ವತಃ ಇಶಾನ್ ಕಿಶನ್ ಅವರೇ ಸಾಲ್ಟ್ ಹಿಡಿದ ಈ ಅಸಾಧ್ಯವಾದ ಕ್ಯಾಚ್​ಗೆ ಒಂದು ಕ್ಷಣ ದಂಗಾಗಿ ನಿಂತರು.

ಆರ್​ಸಿಬಿ ಪರ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ ಅಭಿನಂದನ್ ಸಿಂಗ್, ಪಂದ್ಯದ 16ನೇ ಓವರ್ ಬೌಲ್ ಮಾಡಲು ಬಂದರು. ಈ ಓವರ್​ನ 5ನೇ ಎಸೆತವನ್ನು ಕಿಶನ್ ಭರ್ಜರಿ ಸಿಕ್ಸರ್ ಬಾರಿಸಿದರು. ಕೊನೆಯ ಎಸೆತದಲ್ಲೂ ಇದೇ ಪ್ರಯತ್ನ ಕಂಡುಬಂತು. ಅಭಿನಂದನ್ ಓವರ್​ನ ಕೊನೆಯ ಎಸೆತವನ್ನು ಫುಲ್ ಟಾಸ್ ಬೌಲ್ ಮಾಡಿದರು. ಇತ್ತ ಸ್ಟ್ರೈಕ್​ನಲ್ಲಿದ್ದ ಕಿಶನ್, ಪಾಯಿಂಟ್‌ ದಿಕ್ಕಿನ ಕಡೆಗೆ ಸ್ಲೈಸ್ ಮಾಡಿದರು. ಇತ್ತ ಫಿಲ್ ಸಾಲ್ಟ್ ಡೀಪ್ ಪಾಯಿಂಟ್‌ನಿಂದ ತನ್ನ ಬಲಕ್ಕೆ ವೇಗವಾಗಿ ಓಡಿ ಬಂದು ಚಿರತೆಯಂತೆ ಎಗರಿ ತನ್ನ ಬಲಗೈಯನ್ನು ಚಾಚಿ ಸ್ಲೈಡಿಂಗ್ ಮಾಡುವ ಮೂಲಕ ಅದ್ಭುತ ಕ್ಯಾಚ್ ಹಿಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’: ಯಶ್​​ ಎದುರು ಕಿಯಾರಾ ಆಯ್ಕೆ ಆಗಿದ್ದು ಹೇಗೆ? ಏಕೆ?

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 04ಕ್ಕೆ ತೆರೆಗೆ ಬರಲಿದೆ. ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ ‘ಟಾಕ್ಸಿಕ್’ ಸಿನಿಮಾ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ ಇಷ್ಟು ಮಂದಿ ನಟಿಯರಲ್ಲಿ ಕಿಯಾರಾ ಅಡ್ವಾಣಿ ಅವರದ್ದು ಬಹು ಮುಖ್ಯ ಪಾತ್ರ ಎನ್ನಲಾಗುತ್ತಿದೆ. ಇದು ಅವರ ಪಾಲಿಗೆ ಮೊದಲ ಕನ್ನಡ ಸಿನಿಮಾ ಆಗಿದ್ದು, ‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರು ಕಿಯಾರಾ ಅವರನ್ನೇ ‘ಟಾಕ್ಸಿಕ್’ ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದೇಕೆ ಎಂಬುದನ್ನು ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್ ದಾಸ್, ‘ನಾಡಿಯಾ ಪಾತ್ರಕ್ಕೆ ಕಿಯಾರಾ ಅವರೇ ನನ್ನ ಮೊದಲ ಮತ್ತು ಏಕೈಕ ಆಯ್ಕೆಯಾಗಿದ್ದರು” ಎಂದು ತಿಳಿಸಿದ್ದಾರೆ. ಈ ಪಾತ್ರವು ಏಕಕಾಲದಲ್ಲಿ ಮೃದುತ್ವ ಮತ್ತು ಉಗ್ರತೆಯನ್ನು ಬೇಡುವ ಪಾತ್ರ ಆಗಿತ್ತು. ಆ ಎರಡೂ ಕಿಯಾರಾ ಅಡ್ವಾಣಿ ಅವರಲ್ಲಿದೆ. ಕಿಯಾರಾ ಅವರ ಸ್ಕ್ರೀನ್ ಪ್ರೆಸೆನ್ಸ್‌ನಲ್ಲಿ ಒಂದು ಸಹಜವಾದ ಮಾನವೀಯ ಗುಣವಿದೆ, ಅದು ಈ ಪಾತ್ರಕ್ಕೆ ಬಹಳ ಅವಶ್ಯಕವಾಗಿತ್ತು ಎಂದು ಅವರು ಹೇಳಿದ್ದಾರೆ.

ಕಿಯಾರಾ ಅವರು ಪಾತ್ರವನ್ನು ಕೇವಲ ನಿರ್ದೇಶಕರು ಹೇಳಿದಷ್ಟು ಮಾತ್ರವೇ ನಟಿಸದೇ, ಪಾತ್ರದ ಭಾವನಾತ್ಮಕ ಆಳವನ್ನು ಅರ್ಥಮಾಡಿಕೊಂಡು ನಟಿಸುತ್ತಾರೆ. ಕ್ಯಾಮೆರಾ ಎದುರು ಬರುವ ಮೊದಲೇ ಅವರು ತಮ್ಮ ಮನಸ್ಸಿನಲ್ಲಿ ಆ ಪಾತ್ರವಾಗಿ ಬದುಕಿರುತ್ತಾರೆ. ಅವರ ಶಿಸ್ತು ಮತ್ತು ಪಾತ್ರದ ಬಗ್ಗೆ ಅವರಿಗಿರುವ ಕುತೂಹಲವು ಚಿತ್ರೀಕರಣದ ಪ್ರಕ್ರಿಯೆಯನ್ನು ಕೇವಲ ಒಂದು ಕಡೆಯ ನಿರ್ದೇಶನವಾಗಿಸದೆ, ಅರ್ಥಪೂರ್ಣ ಸಂವಾದವನ್ನಾಗಿ ಬದಲಿಸುತ್ತದೆ ಎಂದು ಗೀತು ಮೋಹನ್​​ದಾಸ್ ಪ್ರಶಂಸಿಸಿದ್ದಾರೆ.

ಇದನ್ನೂ ಓದಿ:ಗ್ಲಾಮರಸ್ ಅವತಾರದಲ್ಲಿ ನಟಿ ಭಾಗ್ಯಶ್ರೀ ಬೋರ್ಸೆ: ವಿಡಿಯೋ ನೋಡಿ

‘ನಾಡಿಯಾ’ ಪಾತ್ರವು ಕಿಯಾರಾ ಅವರನ್ನು ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಬಹಳಷ್ಟು ಪರೀಕ್ಷಿಸಿದೆ. ಅವರು ಈ ಪಾತ್ರಕ್ಕೆ ತಮ್ಮ ಸಂಪೂರ್ಣ ಶಕ್ತಿಯನ್ನು ಧಾರೆ ಎರೆದಿದ್ದಾರೆ. ಕೆಲವು ದೃಶ್ಯಗಳಲ್ಲಿ ಕಿಯಾರಾ ನಟಿಸುತ್ತಿದ್ದಾಗ, ಆ ಪಾತ್ರವು ಕಣ್ಣೆದುರೇ ಜೀವಂತವಾಗಿ ಉಸಿರಾಡುತ್ತಿರುವಂತೆ ನನಗೆ ಭಾಸವಾಯಿತು ಎಂದು ನಿರ್ದೇಶಕಿ ಗೀತು ಮೋಹನ್​​ದಾಸ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ ಅವರು ಜುಲೈ 2025 ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ, ಈ ದೊಡ್ಡ ಪ್ರಾಜೆಕ್ಟ್ ಮೂಲಕ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ‘ಟಾಕ್ಸಿಕ್’ ಚಿತ್ರವು ಜೂನ್ 4 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಯಶ್ ಅವರೊಂದಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ.

ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ ರೈತರು, ಈ ಬಾರಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಆಲಿಕಲ್ಲು ಮಳೆ ರೈತರ ಆಸೆಯ ಮೇಲೆ ತಣ್ಣೀರು ಎರಚಿದೆ.

ಬಿರುಗಾಳಿಯ ಹೊಡೆತಕ್ಕೆ ಮಾವಿನ ಕಾಯಿಗಳು ಉದುರಿ ಬಿದ್ದಿದ್ದರೆ, ಆಲಿಕಲ್ಲು ಬಿದ್ದಿದ್ದರಿಂದ ಗಿಡದಲ್ಲಿ ಉಳಿದಿರುವ ಕಾಯಿಗಳೂ ಕಲೆಗಳಾಗಿ ಹಾಳಾಗುತ್ತಿವೆ. ಮಾಚಾಪುರ ಗ್ರಾಮದಂತಹ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯ ತೀವ್ರತೆ ಎಷ್ಟಿತ್ತೆಂದರೆ, ಮರದಲ್ಲಿ ಕಾಯಿ ಹೋಗಲಿ, ಒಂದೇ ಒಂದು ಎಲೆಯೂ ಉಳಿಯದಂತೆ ಮರಗಳು ಬೋಳಾಗಿವೆ.

ಇದನ್ನೂ ಓದಿ: ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಹೂ ಬಿಡುವ ಹಂತದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಔಷಧ ಸಿಂಪಡಿಸಿದ್ದ ರೈತರಿಗೆ ಈಗ ಮಾಡಿದ ಖರ್ಚು ಕೂಡ ಕೈಗೆ ಬರದಂತಾಗಿದೆ. ಜಿಲ್ಲೆಯ ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಸಂಕಷ್ಟದಲ್ಲಿರುವ ತಮಗೆ ಸರ್ಕಾರ ಕೂಡಲೇ ವೈಜ್ಞಾನಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಮಾವು ಬೆಳೆಗಾರರು ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು ಪ್ರಮಾಣದ ನೀರಿನಾಂಶವನ್ನು ಕಾಪಾಡಿಕೊಳ್ಳಬಹುದು.

ನಿರ್ಜಲೀಕರಣದಿಂದ ಪಾರಾಗಲು ಸೇವನೆ ಮಾಡಿ ಈ ಹಣ್ಣು:

ಕಿತ್ತಳೆ: ಕಿತ್ತಳೆ ಹಣ್ಣು ನೀರಿನಾಂಶದ ಉತ್ತಮ ಮೂಲವಾಗಿದ್ದು, ಇದು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಅವುಗಳ ಹೆಚ್ಚಿನ ನೀರಿನ ಅಂಶವು ಬಿಸಿ ವಾತಾವರಣದಲ್ಲಿ ದೇಹಕ್ಕೆ ಉತ್ತಮ ಜಲಸಂಚಯನವನ್ನು ಒದಗಿಸುತ್ತವೆ. ಇದಲ್ಲದೆ, ಇದರಲ್ಲಿರುವ ವಿಟಮಿನ್‌ ಸಿ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ

ಕಲ್ಲಂಗಡಿ: ಬೇಸಿಗೆಯಲ್ಲಿ  ನಿರ್ಜಲೀಕರಣ ಸಮಸ್ಯೆಯಿಂದ ಪಾರಾಗಲು ಮತ್ತು ದೇಹದಲ್ಲಿ  ನೀರಿನಂಶವನ್ನು ಕಾಪಾಡಿಕೊಳ್ಳಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡುವುದು ಉತ್ತಮ. ಇದರಲ್ಲಿ ಶೇಕಡಾ 92 ರಷ್ಟು ನೀರು ಇರುವುದರಿಂದ ಇದು ಬೇಸಿಗೆಗೆ ಸೂಕ್ತವಾದ ಹಣ್ಣಾಗಿದೆ. ಇದು ಜಲಸಂಚಯನವನ್ನು ಒದಗಿಸುವುದಲ್ಲದೆ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ.

ಸ್ಟ್ರಾಬೆರಿ: ತಿನ್ನಲು ರುಚಿಕರವಾಗಿರುವ ಸ್ಟ್ರಾಬೆರಿ ಉತ್ತಮ ಪ್ರಮಾಣದ ನೀರನ್ನು ಸಹ ಹೊಂದಿರುತ್ತವೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಸ್ಟ್ರಾಬೆರಿಗಳು  ಸ್ವತಂತ್ರ ರಾಡಿಕಲ್ ಹಾನಿ ಮತ್ತು ಶಾಖದಿಂದ ದೇಹವನ್ನು ರಕ್ಷಿಸುತ್ತವೆ.

ಇದನ್ನೂ ಓದಿ: ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್: ಅನಾನಸ್ ಬೇಸಿಗೆಯಲ್ಲಿ ಸೇವಿಸಬಹುದಾದ ಒಂದು ಉತ್ತಮ ಹಣ್ಣು. ಈ ಹಣ್ಣು ರುಚಿಕರವಾಗಿರುವುದಲ್ಲದೆ, ದೇಹಕ್ಕೆ ಜಲಸಂಚಯನವನ್ನೂ ಒದಗಿಸುತ್ತದೆ. ಇದಲ್ಲದೆ, ಅನಾನಸ್ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ.

ಸೌತೆಕಾಯಿ: ಸೌತೆಕಾಯಿಗಳು 96 ಪ್ರತಿಶತದಷ್ಟು ನೀರನ್ನು ಹೊಂದಿರುತ್ತವೆ, ಇದು ದೇಹಕ್ಕೆ ಉತ್ತಮ ಪ್ರಮಾಣದ ಜಲ ಸಂಚಯನವನ್ನು ಒದಗಿಸುತ್ತದೆ. ಹಾಗಾಗಿ ಈ ಬೇಸಿಗೆಯಲ್ಲಿ ನೀವು ದಿನನಿತ್ಯ ಸೌತೆಕಾಯಿ ಸೇವನೆ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಸ್ ಶೆಲ್ಟರ್ ನಿರ್ಮಾಣಕ್ಕೆ ಜೆಡಿಎಸ್ ಸೇರಿ ಇತರರ ವಿರೋಧ: ಗುದ್ದಲಿ ಪೂಜೆ ಮಾಡದೆ ತೆರಳಿದ ಕಾಂಗ್ರೆಸ್​ ಶಾಸಕ

ರಾಮನಗರ, ಮಾರ್ಚ್​ 28: ರೇಷ್ಮೆನಗರಿ ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಕೇಂದ್ರ. ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿದ್ದರು, ಜಿಲ್ಲಾ ಕೇಂದ್ರದಲ್ಲಿ ಒಂದು ಬಸ್ ಶೆಲ್ಟರ್ (bus shelter) ಇಲ್ಲ. ಹೀಗಾಗಿ ಪ್ರಾಧಿಕಾರದ ವತಿಯಿಂದ ಸುಸಜ್ಜಿತ ಬಸ್ ಶೆಲ್ಟರ್ ಕಾಮಗಾರಿಗೆ ಗುದ್ದಲಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಗುದ್ದಲಿಪೂಜೆ ನೆರವೇರಿಸಲು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ (MLA Iqbal Hussain)​ ಕೂಡ ಆಗಮಿಸಿದ್ದರು. ಆದರೆ‌ ತಂಗುದಾಣ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು‌. ಹೀಗಾಗಿ ಗುದ್ದಲಿಪೂಜೆ ನೆರವೇರಿಸದೇ ಶಾಸಕರು ವಾಪಾಸ್ ತೆರಳಿದ್ದಾರೆ.

ವಿವಾದಕ್ಕೆ ಕಾರಣವಾದ ನೂತನ ಬಸ್ ಶೆಲ್ಟರ್ ನಿರ್ಮಾಣ 

ಹೌದು. ನೂತನ ಬಸ್ ಶೆಲ್ಟರ್ ನಿರ್ಮಾಣ ವಿಚಾರ ರಾಮನಗರದಲ್ಲಿ ವಿವಾದಕ್ಕೆ ಕಾರಣವಾಗಿದೆ. ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲು ಶಾಸಕ ಇಕ್ಬಾಲ್ ಹುಸೇನ್​ ಆಗಮಿಸಿದ್ದರು. ಸ್ಥಳೀಯರ ವಿರೋಧದ ಹಿನ್ನೆಲೆ ಗುದ್ದಲಿ ಪೂಜೆ ನಡೆಸದೇ ವಾಪಾಸ್ ತೆರಳಿದ ಘಟನೆ ನಡೆದಿದೆ. ಅಂದಹಾಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಐಜೂರು ವೃತ್ತದ ಬಳಿ, ರಾಮನಗರ ಪ್ರಾಧಿಕಾರದ ವತಿಯಿಂದ ಬಸ್ ಶೆಲ್ಟರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು.

ಇದನ್ನೂ ಓದಿ: ರಾಜ್ಯ ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ಬೆಂಗಳೂರಿನಿಂದ ಮೈಸೂರು ಕಡೆ ಪ್ರಯಾಣಿಸುವ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಶೆಲ್ಟರ್ ನಿರ್ಮಾಣಕ್ಕೆ ಮುಂದಾಗಿದ್ದರು. ಇನ್ನು ಪ್ರತಿನಿತ್ಯ ಬಸ್ ಶೆಲ್ಟರ್ ಇಲ್ಲದೆ ಬಿಸಿಲಿನಲ್ಲಿ ನಿಲ್ಲಬೇಕಾಗಿರುವ ಪ್ರಯಾಣಿಕರಿಗೆ ಈ ಯೋಜನೆ ಸಹಾಯಕವಾಗಬೇಕಿತ್ತು. ಹೀಗಾಗಿ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೂ ಸಕಲ ಸಿದ್ಧತೆ ಮಾಡಲಾಗಿತ್ತು. ಆದರೆ ಕಾಂಪ್ಲೆಕ್ಸ್ ಮಾಲೀಕರು ಹಾಗೂ ಜೆಡಿಎಸ್ ಮುಖಂಡರು, ಶೆಲ್ಟರ್ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ತಮ್ಮ ಅಂಗಡಿಗಳ ಮುಂದೆ ಶೆಲ್ಟರ್ ನಿರ್ಮಾಣವಾದರೆ ವ್ಯಾಪಾರಕ್ಕೆ ತೊಂದರೆಯಾಗಲಿದೆ ಎಂದು ಆಕ್ಷೇಪಿಸಿದರು. ಈ ಹಿನ್ನೆಲೆ ಗುದ್ದಲಿ ಪೂಜೆಗೆ ಆಗಮಿಸಿದ್ದ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿ ಪೂಜೆ ನೆರವೇರಿಸದೇ ವಾಪಾಸ್ ತೆರಳಿದ್ದಾರೆ.

ವ್ಯಾಪಾರಕ್ಕೆ ತೊಂದರೆ

ಅಂದಹಾಗೆ ನೂತನ ಬಸ್ ಶೆಲ್ಟರ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುತ್ತಾರೆ ಎಂಬ ವಿಚಾರ ತಿಳಿದು ಕಾಂಪ್ಲೆಕ್ಸ್ ಮಾಲೀಕರು ಮೊದಲೇ ಜಮಾವಣೆಗೊಂಡಿದ್ದರು. ಈ ವೇಳೆ ಗುದ್ದಲಿ ಪೂಜೆಗೆ ಆಗಮಿಸಿದ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಪರಿಸ್ಥಿತಿ ತೀವ್ರವಾಗುತ್ತಿದ್ದಂತೆ ಗುದ್ದಲಿ ಪೂಜೆ ನಡೆಸದೇ ಶಾಸಕ ಸ್ಥಳದಿಂದ ವಾಪಾಸ್ ತೆರಳಿದರು. ಇನ್ನು ಈ ಬಗ್ಗೆ ಮಾತನಾಡಿದ ಕಾಂಪ್ಲೆಕ್ಸ್ ಮಾಲೀಕ ಜಯರಾಮ್, ನಮ್ಮ ಕಾಂಪ್ಲೆಕ್ಸ್ ಮುಂಭಾಗ ನಿರ್ಮಾಣ‌ ಮಾಡಿದರೆ, ನಮ್ಮ ವ್ಯಾಪಾರಕ್ಕೆ ತೊಂದರೆ ಆಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ತಂಗುದಾಣ ನಿರ್ಮಾಣಕ್ಕೆ ಅವಕಾಶ ಕೊಡಲ್ಲ‌ ಎಂದಿದ್ದಾರೆ.

ಇದನ್ನೂ ಓದಿ: ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್​ನತ್ತ 14 ಕಾಂಗ್ರೆಸ್ ಶಾಸಕರು!

ಒಟ್ಟಾರೆ ರಾಮನಗರದ ಐಜೂರು ವೃತ್ತದ ಬಳಿ ಬಸ್ ಶೆಲ್ಟರ್ ನಿರ್ಮಾಣ ವಿಚಾರದಲ್ಲಿ ಸ್ಥಳೀಯರ ವಿರೋಧ ವ್ಯಕ್ತವಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಯೋಜನೆ ರೂಪಿಸಿದ್ದರೂ, ವ್ಯಾಪಾರಿಗಳಿಗೆ ಉಂಟಾಗುವ ಸಮಸ್ಯೆಗಳನ್ನು ಉಲ್ಲೇಖಿಸಿ ವಿರೋಧ ವ್ಯಕ್ತವಾಗಿದೆ. ಇದೀಗ ಅಧಿಕಾರಿಗಳು ಮುಂದಿನ ಕ್ರಮ ಏನು ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಒಂದಲ್ಲ ಎರಡು ಐಪಿಎಲ್ ಟಿಕೆಟ್ ಬೇಕು ಎಂದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?

ಬೆಂಗಳೂರು, ಮಾ.28: ಐಪಿಎಲ್ ಕ್ರೇಜ್ ಈಗ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಐಪಿಎಲ್ ಪಂದ್ಯಗಳ ವೀಕ್ಷಣೆಗೆ ಶಾಸಕರಿಗೆ ಟಿಕೆಟ್ ನೀಡುವ ವಿಚಾರ ಸದನದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸುರೇಶ್ ಕುಮಾರ್ ಅವರಂತಹ ಕೆಲವು ಹಿರಿಯ ಶಾಸಕರು ನಮಗೆ ಟಿಕೆಟ್ ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಐಪಿಎಲ್ ಪಂದ್ಯಗಳಿಗಾಗಿ ಶಾಸಕರು ಮತ್ತು ಎಂಎಲ್‌ಸಿಗಳಿಗೆ ನೀಡಲಾಗುತ್ತಿದ್ದ ಟಿಕೆಟ್ ಸಂಖ್ಯೆಯನ್ನು ಹೆಚ್ಚಿಸುವಂತೆ ಕೆಲವರು ಬೇಡಿಕೆ ಇಟ್ಟಿದ್ದರು. ಈ ಹಿಂದೆ ತಲಾ ಒಂದು ಟಿಕೆಟ್ ನೀಡಲಾಗುತ್ತಿತ್ತು, ಈಗ ಎರಡು ಟಿಕೆಟ್ ನೀಡಬೇಕು ಎಂಬ ಚರ್ಚೆ ನಡೆದಿದೆ. ಶಾಸಕರಿಗೆ ಟಿಕೆಟ್ ನೀಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಈ ಬಾರಿಯೂ ಅದನ್ನು ಮುಂದುವರಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ತಮಗೂ ಕ್ರಿಕೆಟ್‌ನಲ್ಲಿ ಆಸಕ್ತಿ ಇದೆ, ಆದರೆ ಚುನಾವಣೆ ಮತ್ತು ಕೆಲಸದ ಒತ್ತಡದ ನಡುವೆ ಸಮಯ ಸಿಕ್ಕರೆ ಮಾತ್ರ ಮುಂದಿನ ಪಂದ್ಯಗಳನ್ನು ವೀಕ್ಷಿಸುವುದಾಗಿ ಅವರು ಹೇಳಿದರು. ಏಪ್ರಿಲ್ 9ರವರೆಗೂ ಬಿಡುವಿಲ್ಲದ ಕಾರಣ ಸದ್ಯಕ್ಕೆ ಮೈದಾನಕ್ಕೆ ಹೋಗಲು ಸಾಧ್ಯವಿಲ್ಲ ಎಂದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಪ್ರಾದೇಶಿಕ ಸ್ಥಿರತೆ ಮತ್ತು ಕಡಲ ಭದ್ರತೆಗೆ ಆ ಯುದ್ಧದ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.

“ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಎಚ್‌ಆರ್‌ಎಚ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಚರ್ಚಿಸಿದ್ದೇನೆ. ಪ್ರಾದೇಶಿಕ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂದು ನಾನು ಪುನರುಚ್ಚರಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ

“ಹಡಗು ಮಾರ್ಗಗಳು ಮತ್ತು ವ್ಯಾಪಾರ ಮಾರ್ಗಗಳ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಈ ಪ್ರದೇಶದಲ್ಲಿ ನಿರಂತರ ಸಮುದ್ರ ಸಂಚಾರದ ಅವಕಾಶದ ಮಹತ್ವವನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದೇ ವೇಳೆ, ಸೌದಿ ಅರೇಬಿಯಾದಲ್ಲಿ ವಾಸಿಸುವ ಭಾರತೀಯ ಸಮುದಾಯಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಸೌದಿ ಕ್ರೌನ್ ಪ್ರಿನ್ಸ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version