ಬಾಗಲಕೋಟೆ, ಮಾರ್ಚ್ 28: ಬಾಗಲಕೋಟೆ ಉಪಚುನಾವಣೆ (By election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್ ಅಹ್ಮದ್’ ಅಭಿಯಾನ ನಡೆಸಿದ್ದಾರೆ.
ಈ ವಿರೋಧಕ್ಕೆ ಪ್ರಮುಖ ಕಾರಣ, ಅಂಜುಮನ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಬೆಳವಣಿಗೆಗಳು. ಹಿಂದೆ ಇದ್ದ ಅಧ್ಯಕ್ಷರನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಅದರ ಅನುಮೋದನೆಗಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಕಳುಹಿಸಲಾಗಿತ್ತು. ಆದರೆ, ವಕ್ಫ್ ಸಚಿವರ ಇಲಾಖೆಯಿಂದ ಈ ಕೆಲಸಕ್ಕೆ ಒಂಬತ್ತು ತಿಂಗಳು ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ. ಬಡ ಸಂಸ್ಥೆಯಾದ ಅಂಜುಮನ್ಗೆ ಅನ್ಯಾಯ ಮಾಡಲಾಗಿದೆ ಎಂಬುದು ಮುಸ್ಲಿಂ ಮುಖಂಡರ ಆರೋಪವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ಕೆಲವರು ತಮ್ಮ ಇಷ್ಟದ ಹವ್ಯಾಸದತ್ತ ಮುಖ ಮಾಡುತ್ತಾರೆ. ಆದರೆ, ಈ ಆಪ್ಟಿಕಲ್ ಇಲ್ಯೂಷನ್ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಮೈಂಡ್ ರಿಲ್ಯಾಕ್ಸ್ ಆಗಿಸುತ್ತದೆ. ಅಷ್ಟೇ ಅಲ್ಲದೇ, ಈ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಬಹುದು. ಇದೀಗ ಮೆದುಳಿನ ಸಾಮರ್ಥ್ಯಕ್ಕೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. 9 ಸೆಕೆಂಡುಗಳೊಳಗೆ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಬೇಕು.
ಈ ಚಿತ್ರದಲ್ಲಿ ಏನಿದೆ?
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ರಸ್ತೆ ದುರಸ್ತಿ ಕೆಲಸ ಆಗುತ್ತಿರುವುದನ್ನು ಕಾಣಬಹುದು. ಹೀಗಾಗಿ ರಸ್ತೆ ತುಂಬಾ ಜೆಸಿಬಿಗಳು ಮತ್ತು ಲೋಡರ್ಗಳಿವೆ. ಇದೆಲ್ಲದರ ನಡುವೆ ಬಾಳೆಹಣ್ಣು ಕೂಡ ಇದೆ. ನೀವು ಕಣ್ಣು ಬಿಟ್ಟು ಈ ಚಿತ್ರ ನೋಡಿದ್ರೆ ಬಾಳೆ ಹಣ್ಣು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಈ ಸವಾಲು ಸ್ವೀಕರಿಸಲು ನೀವು ರೆಡಿ ಇದ್ದೀರಾ.
ಕಣ್ಣು ಅಗಲಿಸಿ ನೋಡಿದರೂ ಬಾಳೆಹಣ್ಣು ನಿಮ್ಮ ಕಣ್ಣಿಗೆ ಕಾಣಿಸಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಲು ಸಾಧ್ಯ. ನಿಮಗೂ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಗುರುತಿಸಿದ್ದೇವೆ ನೋಡಿ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮೈಸೂರು, ಮಾರ್ಚ್ 28: ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಕಳೆದ ಕೆಲವು ದಿನಗಳಿಂದ ಬೆದರಿಕೆ (Bomb Threat) ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ (Delhi Police) ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು (Mysuru) ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರ ತಂಡ ಆತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಿದೆ. ಆರೋಪಿಯು ಒಂದೇ ತಿಂಗಳಲ್ಲಿ ಅನೇಕ ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಎಂಬುದು ತಿಳಿದುಬಂದಿದೆ.
ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲೇ ಇದ್ದ ಆರೋಪಿ!
ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್ನಲ್ಲಿರುವ ಮನೆಯಲ್ಲಿ ಆರೋಪಿಯು ಅಡಗಿ ಕುಳಿತಿದ್ದ. ಈ ಕುರಿತು ಮಾಹಿತಿ ಪಡೆದ ದೆಹಲಿ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಸ್ಥಳೀಯ ವಿವಿ ಪುರಂ ಪೊಲೀಸ್ ಠಾಣೆಯ ಸಹಕಾರದಿಂದ ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧನದ ವೇಳೆ ಆರೋಪಿಯ ಮನೆಯಲ್ಲಿ ಹಲವು ಸಿಮ್ ಕಾರ್ಡ್ಗಳು ಹಾಗೂ ಲ್ಯಾಪ್ಟಾಪ್ ವಶಕ್ಕೆ ಪಡೆಯಲಾಗಿದೆ. ಇವುಗಳನ್ನು ಪರಿಶೀಲನೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಿದ್ದರು.
ಪ್ರಸ್ತುತ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದೊಯ್ಯಲಾಗುತ್ತಿದ್ದು, ಈ ಹಿಂದೆ ಕಳುಹಿಸಿದ ಎಲ್ಲಾ ಬೆದರಿಕೆ ಸಂದೇಶಗಳ ಹಿನ್ನಲೆ ಹಾಗೂ ಉದ್ದೇಶಗಳ ಬಗ್ಗೆ ವಿಚಾರಣೆ ಮುಂದುವರಿಯಲಿದೆ.
ಈ ಹಿಂದೆ ಮೈಸೂರಿನಲ್ಲಿ ದೊಡ್ಡ ಡ್ರಗ್ಸ್ ತಯಾರಿಕಾ ಮತ್ತು ಪೂರೈಕೆ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಬಯಲಿಗೆಳೆದಿದ್ದರು. ಅದಾದ ನಂತರವೂ ಮೈಸೂರಿನಲ್ಲಿ ಅನೇಕ ಡ್ರಗ್ಸ್ ಪ್ರಕರಣಗಳು ಬಯಲಿಗೆ ಬಂದಿವೆ. ಇದೀಗ ಬಾಂಬ್ ಬೆದರಿಕೆ ಸಂದೇಶಗಳ ಆರೋಪಿ ಸಹ ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಅಡಗಿ ಇದ್ದುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.
ಒಟ್ಟಿನಲ್ಲಿ, ಮೈಸೂರಿನಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಆತಂಕ ಸೃಷ್ಟಿಸಿದ್ದ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ದೆಹಲಿ ಪೊಲೀಸರು ತೆರೆ ಎಳೆದಿದ್ದು, ಆರೋಪಿಯ ಬಂಧನದಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 28: ಕರ್ನಾಟಕ ಲೋಕಾಯುಕ್ತ ತಂಡದ ಏಕಾಏಕಿ ಭೇಟಿ ವೇಳೆ ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆಯ (ವಿಕ್ಟೋರಿಯಾ ಆಸ್ಪತ್ರೆ)ಟ್ರಾಮಾ ಕೇರ್ ಸೆಂಟರ್ನಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಐಸಿಯುನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿದ್ದು, ಖಾಲಿ ಹಾಸಿಗೆಗಳಿದ್ದರೂ ತುರ್ತು ರೋಗಿಗೆ ದಾಖಲಾತಿ ನಿರಾಕರಿಸಿರುವುದು ಗಮನಕ್ಕೆ ಬಂದಿದೆ.
ಹಾಸಿಗೆಗಳಿದ್ದರೂ ರೋಗಿಗಳಿಗೆ ದಾಖಲಾತಿ ಇಲ್ಲ!
ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ , ವೆಂಟಿಲೇಟರ್ ದೋಷದಿಂದ ಹಾಸಿಗೆಗಳು ಬಳಸಿಲ್ಲ ಎಂದು ಹೇಳಿರುವುದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದಿದ್ದಾರೆ. ಪ್ರಕರಣದ ವರದಿಯನ್ನು ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಲಾಗಿದ್ದು, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಲಾಗಿದೆ.
ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಒತ್ತಾಯ
ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕರು ಮತ್ತು ಮಧ್ಯವರ್ತಿಗಳು ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಅವರು ವೈದ್ಯರನ್ನು ಸಂಪರ್ಕಿಸಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲು ಒತ್ತಾಯಿಸುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಕೆಲವು ಸಿಬ್ಬಂದಿ ಖಾಸಗಿ ಆಂಬ್ಯುಲೆನ್ಸ್ ಬಳಸುವಂತೆ ರೋಗಿಗಳ ಬಂಧುಗಳ ಮೇಲೆ ಒತ್ತಡ ಹೇರಿರುವುದು ತಿಳಿದುಬಂದಿದೆ.
ಈ ಹಿನ್ನೆಲೆ, ಖಾಸಗಿ ಆಂಬ್ಯುಲೆನ್ಸ್ ಸೇವೆಯನ್ನು ನಿಯಂತ್ರಿಸಲು ಪ್ರೀಪೇಯ್ಡ್ ವ್ಯವಸ್ಥೆ ಜಾರಿಗೆ ತರಬೇಕೆಂದು ಲೋಕಾಯುಕ್ತ ಸೂಚಿಸಿದೆ. ಈ ಬಗ್ಗೆ ಕ್ರಮ ಕೈಗೊಂಡಿರುವ ವಿವರಗಳನ್ನು ನೀಡಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.
ಅಕ್ರಮ ಚಟುವಟಿಕೆಗಳಿಗೆ ಬ್ರೇಕ್
ಲೋಕಾಯುಕ್ತ ಮುಂದೆ ಟ್ರಾಮಾ ಕೇರ್ ಸೆಂಟರ್ನ ಸಮಸ್ಯೆಗಳ ಕುರಿತು ಡಾ. ಅಸೀಮಾ ಅವರು ಮಾಹಿತಿ ನೀಡಿದ್ದು, ಹಾಸಿಗೆಗಳ ಕೊರತೆಯಿಂದ ಖಾಸಗಿ ಆಂಬ್ಯುಲೆನ್ಸ್ ಚಾಲಕರು ಹಾಗೂ ಮಧ್ಯವರ್ತಿಗಳು ರೋಗಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು. ಅವರಿಂದ ಉಂಟಾಗುವ ಅಡಚಣೆಗಳನ್ನು ನಿಯಂತ್ರಣಕ್ಕೆ ಬಾರದ ಮಟ್ಟಕ್ಕೆ ತಲುಪಿದ್ದು, ಕೆಲವೊಮ್ಮೆ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಮೇಲೆ ದಾಳಿ ನಡೆದ ಘಟನೆಗಳೂ ನಡೆದಿವೆ ಎಂದು ತಿಳಿಸಿದರು.
ಆದರೆ ಈ ಬಗ್ಗೆ ಯಾವುದೇ ನಿರ್ದಿಷ್ಟ ದೂರು ದಾಖಲಾಗಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ದಕ್ಷಿಣ ವಿಭಾಗದ ಡಿಸಿಪಿ ಲೋಕಾಯುಕ್ತರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಬಲಪಡಿಸಿ, ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸೂಚನೆ ನೀಡಿದೆ.
ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್ಗೆ ಆಯ್ಕೆಯಾಗಿರಲಿಲ್ಲ.
ಇತ್ತ ಐಪಿಎಲ್ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್ ಲೀಗ್ಗೆ ಹೆಸರು ನೀಡಿದ್ದಾರೆ. ಅದರಂತೆ ಅವರನ್ನು ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗಿಯನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತ್ತು. ಆದರೆ ಇದೀಗ ಪಾಕಿಸ್ತಾನ್ ಸೂಪರ್ ಲೀಗ್ನಿಂದ ಸ್ಪೆನ್ಸರ್ ಜಾನ್ಸನ್ ಹಿಂದೆ ಸರಿದಿದ್ದಾರೆ.
ಹೀಗೆ ಹಿಂದೆ ಸರಿಯಲು ಮುಖ್ಯ ಕಾರಣ ಐಪಿಎಲ್ನಲ್ಲಿ ಸಿಕ್ಕ ಅವಕಾಶ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ನಾಥನ್ ಎಲ್ಲಿಸ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಸಿಎಸ್ಕೆ ಸ್ಪೆನ್ಸರ್ ಜಾನ್ಸನ್ ಅವರನ್ನು ಸಂಪರ್ಕಿಸಿದೆ.
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಆಫರ್ ಸಿಗುತ್ತಿದ್ದಂತೆ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್ ಲೀಗ್ಗೆ ಕೈ ಕೊಟ್ಟಿದ್ದಾರೆ. ಗಮನಾರ್ಹ ವಿಷಯವೆಂದರೆ, ಅವರು ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಸಿಗುತ್ತಿದ್ದ ಹೆಚ್ಚಿನ ಸಂಭಾವನೆಯನ್ನು ಬಿಟ್ಟು, ಕಡಿಮೆ ಮೊತ್ತಕ್ಕೆ ಸಿಎಸ್ಕೆ ತಂಡಕ್ಕೆ ಬಂದಿರುವುದು.
ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಸ್ಪೆನ್ಸರ್ ಜಾನ್ಸನ್ಗೆ 1.88 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಪರ 1.50 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಅಂದರೆ ಸುಮಾರು ₹38 ಲಕ್ಷ ಕಡಿಮೆ ಮೊತ್ತ ಪಡೆದರೂ ಸ್ಪೆನ್ಸರ್ ಜಾನ್ಸನ್ ಐಪಿಎಲ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಗುವಿನ ಜನನವು ಕೇವಲ ಒಂದು ಕುಟುಂಬದ ವಿಸ್ತರಣೆಯಲ್ಲ, ಅದು ಸಾಕ್ಷಾತ್ ಲಕ್ಷ್ಮಿ ದೇವಿಯ ಆಗಮನವೆಂದೇ ಶತಶತಮಾನಗಳಿಂದ ನಂಬಿಕೊಂಡು ಬರಲಾಗಿದೆ. ಮನೆಯ ಅಂಗಳದಲ್ಲಿ ಹೆಣ್ಣು ಮಗುವಿನ ನಗು ಕೇಳಿಸಿದರೆ ಅಲ್ಲಿ ದಾರಿದ್ರ್ಯ ಸುಳಿಯುವುದಿಲ್ಲ ಎಂಬ ಮಾತು ಕೇವಲ ಭಾವನಾತ್ಮಕ ನುಡಿಯಲ್ಲ, ಅದರ ಹಿಂದೆ ಆಳವಾದ ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಶಾಸ್ತ್ರದ ಕಾರಣಗಳಿವೆ. ಹೆಣ್ಣು ಮಗು ಜನಿಸಿದಾಗ ಆಕೆಯ ಜಾತಕದಲ್ಲಿರುವ ಗ್ರಹಗತಿಗಳು ಇಡೀ ಕುಟುಂಬದ ಅದೃಷ್ಟವನ್ನೇ ಬದಲಿಸುವ ಶಕ್ತಿ ಹೊಂದಿರುತ್ತವೆ ಎಂದು ಶಾಸ್ತ್ರಗಳು ಉಲ್ಲೇಖಿಸುತ್ತವೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಣ್ಣು ಮಗುವಿನ ಜಾತಕದಲ್ಲಿ ಚಂದ್ರ, ಶುಕ್ರ ಮತ್ತು ಗುರು ಗ್ರಹಗಳು ಬಲವಾಗಿದ್ದರೆ, ಆಕೆ ಕಾಲಿಟ್ಟ ಕ್ಷಣದಿಂದಲೇ ಮನೆಯಲ್ಲಿ ಆರ್ಥಿಕ ಪ್ರಗತಿ ಮತ್ತು ಸುಖ-ಶಾಂತಿ ನೆಲೆಸುತ್ತದೆ. ಸ್ತ್ರೀ ಶಕ್ತಿಯು ಮನೆಯಲ್ಲಿನ ನಕಾರಾತ್ಮಕತೆಯನ್ನು ದೂರಮಾಡಿ, ಸಕಾರಾತ್ಮಕ ಶಕ್ತಿಯನ್ನು ವೃದ್ಧಿಸುತ್ತದೆ. ಅದಕ್ಕಾಗಿಯೇ ಹೆಣ್ಣು ಮಗುವನ್ನು ‘ಭಾಗ್ಯಲಕ್ಷ್ಮಿ’ ಎಂದು ಕರೆಯಲಾಗುತ್ತದೆ. ಆಕೆಯ ಜನನದ ನಂತರ ತಂದೆ-ತಾಯಿಯ ಬಾಳಿನಲ್ಲಿ ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳುವುದು, ಹೊಸ ಆಸ್ತಿ ಅಥವಾ ವಾಹನಗಳ ಖರೀದಿಯಂತಹ ಶುಭ ಘಟನೆಗಳು ಸಂಭವಿಸುವುದು ಆಕೆಯ ಅದೃಷ್ಟದ ಪ್ರತಿಫಲವೆಂದೇ ಪರಿಗಣಿತವಾಗಿದೆ.
“ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ:” ಎನ್ನುವ ವೇದವಾಣಿಯಂತೆ, ಎಲ್ಲಿ ಸ್ತ್ರೀಯರಿಗೆ ಗೌರವ ಸಿಗುತ್ತದೆಯೋ ಅಲ್ಲಿ ದೇವತೆಗಳು ನೆಲೆಸುತ್ತಾರೆ. ಮಗಳನ್ನು ಪ್ರೀತಿ ಮತ್ತು ಗೌರವದಿಂದ ಕಾಣುವ ಮನೆಯಲ್ಲಿ ಶುಕ್ರ ಗ್ರಹವು ಬಲಗೊಳ್ಳುತ್ತದೆ. ಜ್ಯೋತಿಷ್ಯದಲ್ಲಿ ಶುಕ್ರನು ಐಶ್ವರ್ಯ ಮತ್ತು ಭೌತಿಕ ಸುಖಗಳ ಕಾರಕನಾಗಿದ್ದು, ಮಗಳ ಸಂತೋಷವು ಪರೋಕ್ಷವಾಗಿ ಕುಟುಂಬದ ಸಮೃದ್ಧಿಗೆ ದಾರಿಯಾಗುತ್ತದೆ. ಹೀಗೆ ತನ್ನೊಂದಿಗೆ ಪುಣ್ಯದ ಫಲವನ್ನು ಹೊತ್ತು ತರುವ ಮಗಳು, ಇಡೀ ಕುಟುಂಬಕ್ಕೆ ದೈವಿಕ ಆಶೀರ್ವಾದದ ರೂಪವಾಗಿದ್ದಾಳೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರ ಓಂ ಅಧಿಕಾರಿ ಖಚಿತಪಡಿಸಿದ್ದಾರೆ.
ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಗೌರಿ ಬಹದ್ದೂರ್ ಕಾರ್ಕಿ ನೇತೃತ್ವದ ತನಿಖಾ ಸಮಿತಿಯು ನೀಡಿದ ಶಿಫಾರಸಿನ ಮೇರೆಗೆ ಈ ಬಂಧನವಾಗಿದೆ. ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲಪ್ರಯೋಗ ಮಾಡಿದ್ದಲ್ಲದೆ, ಹಿಂಸಾಚಾರವನ್ನು ತಡೆಯುವಲ್ಲಿ ಒಲಿ ಸರ್ಕಾರ ವಿಫಲವಾಗಿತ್ತು ಎಂದು ತನಿಖಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವಿಶೇಷವೆಂದರೆ, ಬಾಲೆನ್ ಶಾ ಅವರು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಈ ಪ್ರಮುಖ ಬೆಳವಣಿಗೆ ನಡೆದಿದೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿರುವ ನೂತನ ಗೃಹ ಸಚಿವ ಸುದನ್ ಗುರುಂಗ್, ‘ಕೊಟ್ಟ ಮಾತಿನಂತೆ ನಾವು ನಡೆದಿದ್ದೇವೆ. ಕಾನೂನಿಗಿಂತ ಯಾರೂ ಮೇಲಲ್ಲ. ಇದು ಯಾರ ವಿರುದ್ಧದ ಸೇಡಲ್ಲ, ಬದಲಾಗಿ ನ್ಯಾಯದ ಆರಂಭವಷ್ಟೇ’ ಎಂದು ಉಲ್ಲೇಖಿಸಿದ್ದಾರೆ. ಸೆಪ್ಟೆಂಬರ್ 8 ರಂದು ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು ಹತ್ಯೆ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗೆ ಥಿಯೇಟರ್ ಅಲ್ಲಿ ಬಿಡುಗಡೆ ಕಂಡಿತು. ಮಾರ್ಚ್ 19ರಂದ ಸಿನಿಮಾ ‘ಧುರಂಧರ್ 2’ ಎದುರು ರಿಈಸ್ ಆಗಿ, 100 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ. ಮಾಸ್ ಆ್ಯಕ್ಷನ್ ಎಂಟರ್ಟೈನರ್ ಆಗಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿ. ರಾಶಿ ಖನ್ನಾ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕಾಲಿವುಡ್ ನಟ ಪಾರ್ಥಿಬನ್ ಈ ಚಿತ್ರದಲ್ಲಿ ಖಳನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್ ಆದ ಕೆಲವೇ ವಾರದಲ್ಲಿ ಒಟಿಟಿಗೆ ಬರುತ್ತಿದೆ.
ಪವನ್ ಕಲ್ಯಾಣ್ ಅವರ ‘ಉಸ್ತಾದ್ ಭಗತ್ ಸಿಂಗ್’ ಜನರಿಗೆ ಇಷ್ಟ ಆಗಿಲ್ಲ. ಹರೀಶ್ ಶಂಕರ್ ಅವರ ಡೈಲಾಗ್ಸ್, ಶ್ರೀಲೀಲಾ ಮತ್ತು ರಾಶಿ ಖನ್ನಾ ಅವರ ಗ್ಲಾಮರ್ ಕೆಲಸಕ್ಕೆ ಬರಲಿಲ್ಲ. ಚಿತ್ರದಲ್ಲಿನ ಕೆಲ ಸಕಾರಾತ್ಮಕ ಅಂಶಗಳ ಹೊರತಾಗಿಯೂ, ಉಸ್ತಾದ್ ಭಗತ್ ಸಿಂಗ್ ಅವರ ಚಿತ್ರ ಕಥೆ ಮತ್ತು ನಿರೂಪಣೆಯ ವಿಷಯದಲ್ಲಿ ಸ್ವಲ್ಪ ದುರ್ಬಲವಾಗಿ ಕಾಣುತ್ತದೆ. ಇದರ ಜೊತೆಗೆ, ‘ಧುರಂಧರ್ 2’ ಬಿಡುಗಡೆಯು ಉಸ್ತಾದ್ಗೆ ಮೈನಸ್ ಆಗಿ ಪರಿಣಮಿಸಿದೆ. ಇದರಿಂದಾಗಿ, ಪವನ್ ಕಲ್ಯಾಣ್ ಅವರ ಚಿತ್ರವು ಸಾಧಾರಣ ಕಲೆಕ್ಷನ್ಗಳನ್ನು ಮಾತ್ರ ಪಡೆಯುತ್ತಿದೆ. ಈಗ ಚಿತ್ರದ OTT ಸ್ಟ್ರೀಮಿಂಗ್ ಬಗ್ಗೆ ಒಂದು ಕುತೂಹಲಕಾರಿ ಸುದ್ದಿ ಕೇಳಿಬರುತ್ತಿದೆ.
‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳು ಥಿಯೇಟ್ರಿಕಲ್ ಬಿಡುಗಡೆಗೂ ಮೊದಲೇ ಮಾರಾಟವಾಗಿವೆ. ಜನಪ್ರಿಯ OTT ಕಂಪನಿ ನೆಟ್ಫ್ಲಿಕ್ಸ್ ಈ ಚಿತ್ರವನ್ನು ಭಾರಿ ಬೆಲೆಗೆ ಖರೀದಿಸಿದೆ. ಚಿತ್ರದ ನಿರ್ಮಾಪಕ ನವೀನ್ ಎರ್ನೇನಿ ಪತ್ರಿಕಾಗೋಷ್ಠಿಯಲ್ಲಿ, ಉಸ್ತಾದ್ ಚಿತ್ರವು ಥಿಯೇಟ್ರಿಕಲ್ ಬಿಡುಗಡೆಯಾದ ಸುಮಾರು 5 ವಾರಗಳ ಅಂತರದಲ್ಲಿ OTT ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದರು. ಆದರೆ, ಅದಕ್ಕೂ ಮೊದಲೇ ಅಂದರೆ ಏಪ್ರಿಲ್ 16ರಂದು ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ.
ಎಂ.ಎಸ್. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಈ ಕಾರಣದಿಂದ ಐಪಿಎಲ್ನ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಧೋನಿ ಅಲಭ್ಯರಾಗುವುದು ಬಹುತೇಕ ಖಚಿತ.
ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಎರಡು ದಿನಗಳಿಂದ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಅಭ್ಯಾಸ ನಡೆಸುತ್ತಿದ್ದು, ಹೀಗಾಗಿ ಅವರೇ ಕೀಪಿಂಗ್ ಗ್ಲೌಸ್ ತೊಡಲಿದ್ದಾರೆ ಎನ್ನಬಹುದು.
ಇನ್ನು ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಹೇಂದ್ರ ಸಿಂಗ್ ಧೋನಿ ಏಪ್ರಿಲ್ 19 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಅಂದರೆ ಏಪ್ರಿಲ್ 15ರ ತನಕ ಧೋನಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಪಂದ್ಯಗಳಲ್ಲಿ 'ಥಲಾ' ವನ್ನು ಎದುರು ನೋಡುವಂತಿಲ್ಲ. ಇತ್ತ ಧೋನಿ ಹೊರಗುಳಿದರೆ ಸರ್ಫರಾಝ್ ಖಾನ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.