ದುನಿಯಾ ವಿಜಯ್ ನಟನೆಯನ್ನು ಮೆಚ್ಚಿ ಕೊಂಡಾಡಿದ ತೆಲುಗಿನ ಸ್ಟಾರ್ ನಿರ್ದೇಶಕ – Kannada News | Puri Jagannath praised Duniya Vijay’s acting in Slum Dog movie

ದುನಿಯಾ ವಿಜಯ್ (Duniya Vijay) ಕನ್ನಡದ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕ. ತೀರ ಸಣ್ಣ ಪಾತ್ರಗಳಲ್ಲಿ ನಟಿಸಲು ಆರಂಭಿಸಿ, ವಿಲನ್ ಆಗಿ ಬಳಿಕ ನಾಯಕನಾಗಿ ಮಿಂಚಿದವರು ದುನಿಯಾ ವಿಜಯ್. ಹಲವು ಸ್ಪುರದ್ರೂತಿ ನಾಯಕ ನಟರ ನಡುವೆ ತಮ್ಮ ನಟನೆ, ಆಕ್ಷನ್ ಮಾಡುವ ಸಾಮರ್ಥ್ಯದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡು ಈಗಲೂ ಚಾಲ್ತಿಯಲ್ಲಿರುವ ನಾಯಕರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ ದುನಿಯಾ ವಿಜಯ್. ಇದೀಗ ನೆರೆಯ ತೆಲುಗು ಚಿತ್ರರಂಗದ ಸ್ಟಾರ್ ನಿರ್ದೇಶಕ ದುನಿಯಾ ವಿಜಯ್ ಅವರ ನಟನೆಯನ್ನು ಕೊಂಡಾಡಿದ್ದಾರೆ.

ರಾಜಮೌಳಿಗಿಂತಲೂ ಮೊದಲು ತೆಲುಗಿನ ಸೂಪರ್ ಸ್ಟಾರ್ ನಿರ್ದೇಶಕ ಎನಿಸಿಕೊಂಡಿದ್ದವರು ಪುರಿ ಜಗನ್ನಾಥ್. ಈಗಿನ ಹಲವು ಹಳೆಯ, ಹೊಸ ಹೀರೋಗಳಿಗೆ ಒಂದರ ಹಿಂದೊಂದರಂತೆ ಬ್ಲಾಕ್ ಬಸ್ಟರ್ ಹಿಟ್ ಮಾತ್ರವಲ್ಲ, ಕಲ್ಟ್ ಸಿನಿಮಾಗಳನ್ನು ನೀಡಿದವರು ಪುರಿ ಜಗನ್ನಾಥ್. ಪುನೀತ್ ನಟನೆಯ ಮೊದಲ ಸಿನಿಮಾ ‘ಅಪ್ಪು’ ನಿರ್ದೇಶನ ಮಾಡಿದ್ದೂ ಸಹ ಪುರಿ ಅವರೇ, ಆದರೆ ಅವರ ಇತ್ತೀಚೆಗಿನ ಕೆಲ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಸೋತಿವೆ. ಇದೇ ಕಾರಣಕ್ಕೆ ಅವರ ಹವಾ ತುಸು ಕಡಿಮೆ ಆಗಿದೆ, ಆದರೆ ಪ್ರತಿಭೆ ಕಡಿಮೆ ಆಗಿಲ್ಲ.

ಇದೀಗ ಪುರಿ ಜಗನ್ನಾಥ್ ಅವರು ‘ಸ್ಲಂ ಡಾಗ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ವಿಜಯ್ ಸೇತುಪತಿ ನಾಯಕ. ಹೆಸರೇ ಸೂಚಿಸುತ್ತಿರುವಂತೆ ಸ್ಲಂನಲ್ಲಿ ನಡೆಯುವ ಕತೆಯಿದು. ಸಿನಿಮಾನಲ್ಲಿ ದುನಿಯಾ ವಿಜಯ್ ಅವರು ಮುಖ್ಯವಾದ ಪಾತ್ರವೊಂದರಲ್ಲಿ ನಟಿಸುತ್ತಿದ್ದು, ಸಿನಿಮಾವನ್ನು ಪುರಿ ಜಗನ್ನಾಥ್ ಹಾಗೂ ನಟಿ ಚಾರ್ಮಿ ಅವರ ಪುರಿ ಕನೆಕ್ಟ್ಸ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುತ್ತಿದೆ.

ನಿನ್ನೆ (ಜನವರಿ 20) ದುನಿಯಾ ವಿಜಯ್ ಅವರ ಹುಟ್ಟುಹಬ್ಬವಿದ್ದು, ‘ಸ್ಲಂ ಡಾಗ್’ ಸಿನಿಮಾ ತಂಡದ ಮೂಲಕ ವಿಜಯ್ ಅವರಿಗೆ ಶುಭ ಕೋರಲಾಗಿದೆ. ಪುರಿ ಜಗನ್ನಾಥ್ ಅವರು ತಮ್ಮ ಪುರಿ ಕನೆಕ್ಟ್ಸ್ ಮೂಲಕ ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು, ‘ದುನಿಯಾ ವಿಜಯ್ ಅವರು ಪ್ರತಿಯೊಂದು ಪಾತ್ರಕ್ಕೂ ಪ್ರಾಮಾಣಿಕತೆ ಮತ್ತು ಆತ್ಮವನ್ನು ತರುವ ಅದ್ಭುತ ಕಲಾವಿದ, ‘ಸ್ಲಂ ಡಾಗ್: 33 ಟೆಂಪಲ್ ರೋಡ್’ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ನಿರ್ವಹಿಸಿರುವ ಪಾತ್ರ ನೈಜವಾಗಿಯೂ, ಕಚ್ಚಾ ಆಗಿಯೂ ಹಾಗೂ ರೋಮಾಂಚನಕಾರಿಯಾಗಿಯೂ ಇರಲಿದೆ’ ಎಂದಿದ್ದಾರೆ.

‘ಸ್ಲಂ ಡಾಗ್’ ಸಿನಿಮಾ ಶೂಟಿಂಗ್ ವೇಳೆಯ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದ್ದು, ದುನಿಯಾ ವಿಜಯ್ ಸಖತ್ ಭಿನ್ನವಾದ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ತಲೆ ಮೇಲೆ ಟೋಪಿ, ಕೊರಳಲ್ಲಿ ಆಫ್ರಿಕಾ ಖಂಡದ ಡಾಲರ್, ಮೀಸೆ-ಗಡ್ಡ ಇಲ್ಲದೆ ಒಂದು ರೀತಿ ಭಿನ್ನವಾಗಿ ಕಾಣುತ್ತಿದ್ದಾರೆ ವಿಜಿ. ‘ಸ್ಲಂ ಡಾಗ್’ ಸಿನಿಮಾನಲ್ಲಿ ವಿಜಯ್ ಸೇತುಪತಿ ನಾಯಕರಾಗಿದ್ದು, ಸಿನಿಮಾ ತೆಲುಗಿನಲ್ಲಿ ಮಾತ್ರವೇ ಅಲ್ಲದೆ ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ – Kannada News | HD Kumaraswamy Angry On His brother HD Revanna for disturbing During press conference In Hassan

ಹಾಸನ, (ಜನವರಿ 21): ಇದೇ ಜನವರಿ 24ರಂದು ಜೆಡಿಎಸ್​ ಹಾಸನದಲ್ಲಿ (Hassan) ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy )ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್​​​ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್​​​ಡಿ ರೇವಣ್ಣ  (HD Revanna) ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು…ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ ಅಡ್ಡ ಬಾಯಿ ಹಾಕಿದರು. ಇದರಿಂದ ಕುಮಾರಸ್ವಾಮಿ ಸ್ವಲ್ಪ ಸುಮ್ನೆ ಇರು ಎಂದು ಕೈ ಸಂಜ್ಞೆ ಮಾಡಿದರು. ಆಗ ರೇವಣ್ಣ ಸೈಲೆಂಟ್ ಮೂಡಿಗೆ ಜಾರಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಬ್ಬರ ಸಿಡಿಲಬ್ಬರ… ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗ – Kannada News | Will Malajczuk smashed fastest century in Under 19 World Cup history

ಅಂಡರ್-19 ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಯುವ ದಾಂಡಿಗ ವಿಲ್ ಮಲಾಚೆಕ್ (Will Malajczuk). ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. 

ನಮೀಬಿಯಾದ ವಿಂಡ್​ಹೋಕ್​ನಲ್ಲಿರುವ ಎಸಿಜಿ ಮೈದಾನದಲ್ಲಿ ನಡೆದ ಅಂಡರ್​-19 ವಿಶ್ವಕಪ್​​ನ 16ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಪಾನ್ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಎಡಗೈ ದಾಂಡಿಗ ವಿಲ್ ಮಲಾಚೆಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಆರ್ಭಟ ಶುರು ಮಾಡಿದ್ದ ವಿಲ್ ಶತಕ ಪೂರೈಸಿದ್ದು ಕೇವಲ 51 ಎಸೆತಗಳಲ್ಲಿ. ಈ ಮೂಲಕ ಅಂಡರ್-19 ವಿಶ್ವಕಪ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.

ಈ ಮೊದಲು ಈ ವಿಶ್ವ ದಾಖಲೆ ಪಾಕಿಸ್ತಾನದ ಖಾಸಿಂ ಅಖ್ತರ್ ಹೆಸರಿನಲ್ಲಿತ್ತು. 2022 ರ ಅಂಡರ್-19 ವಿಶ್ವಕಪ್​ನಲ್ಲಿ ಶ್ರೀಲಂಕಾ ವಿರುದ್ಧ ಖಾಸಿಂ ಅಖ್ತರ್ ಕೇವಲ 63 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂಲಕ ಕಿರಿಯ ವಿಶ್ವಕಪ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ವಿಶ್ವ ದಾಖಲೆಯನ್ನು ವಿಲ್ ಮಲಾಚೆಕ್ ಉಡೀಸ್ ಮಾಡಿದ್ದಾರೆ. ಜಪಾನ್ ವಿರುದ್ಧ ಕೇವಲ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿದ ವಿಲ್ 102 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು 29.1 ಓವರ್​ಗಳಲ್ಲಿ 204 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Published On – 2:29 pm, Wed, 21 January 26

Source link

ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Man Pelts Stone On Parked Cars At Bharath Colony In Davangere, Incident Caught On CCTV

ದಾವಣಗೆರೆ, ಜನವರಿ 21: ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವೃದ್ಧ ದಂಪತಿ ನಿಗೂಢ ಸಾವಿನ ರಹಸ್ಯ ರಿವೀಲ್​​: ಸಂಬಂಧಿಕನಿಂದಲೇ ನಡೀತು ಪೈಶಾಚಿಕ ಕೃತ್ಯ – Kannada News | Bhadravati Double Murder: Relative Doctor Arrested for Elderly Couple’s Death and Robbery

ವೃದ್ಧ ದಂಪತಿ ಕೊಂದ ಆರೋಪಿ ಅರೆಸ್ಟ್​​

ಶಿವಮೊಗ್ಗ, ಜನವರಿ 21: ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ಮನೆಯಲ್ಲಿಯೇ ವೃದ್ಧ ದಂಪತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ಸಂಬಂಧಿಕ ಮತ್ತು ವೈದ್ಯನಾಗಿರುವ ಡಾ. ಮಲ್ಲೇಶ್​​ ಎಂಬಾತನೇ ಚಂದ್ರಪ್ಪ(80) ಮತ್ತು ಅವರ ಪತ್ನಿ ಜಯಮ್ಮ(75) ಅವರನ್ನು ಕೊಲೆ ಮಾಡಿರೋದು ತನಿಖೆ ವೇಳೆ ಬಯಲಾಗಿದೆ. ಪಕ್ಕಾ ಪ್ಲ್ಯಾನ್​​ ಮಾಡಿ ಕೃತ್ಯ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ಮಾಡಿ ಲಕ್ಷಾಂತರ ರೂ. ದರೋಡೆ


ತಮ್ಮನ ಮಗನಾಗಿರುವ ಡಾ . ಮಲ್ಲೇಶ್​​ನಿಂದಲೇ ಮೃತ ಚಂದ್ರಪ್ಪ ಮತ್ತು ಅವರ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಪಿ ವೈದ್ಯ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಹೀಗಾಗಿ ದೊಡ್ಡಪ್ಪನ ಬಳಿ ಹಣ ಕೇಳಿದ್ದ. ಇದಕ್ಕೆ ಅವರು ಒಪ್ಪದ ಕಾರಣ ದೊಡ್ಡಪ್ಪ-ದೊಡ್ಡಮ್ಮ ಅಂತಲೂ ನೋಡದೆ ಕೊಲೆ ಮಾಡಿದ್ದಾನೆ. ಚಿಕಿತ್ಸೆ ನೆಪದಲ್ಲಿ ಇಬ್ಬರಿಗೂ ಇಂಜೆಕ್ಷನ್​​ ನೀಡಿದ್ದು, ಇದರಿಂದಲೇ ದಂಪತಿ ಮೃತಪಟ್ಟಿದ್ದಾರೆ. ದೇಹದ ಮೇಲೆ ಯಾವುದೇ ಗಾಯ ಮಾಡದೆ ಆರೋಪಿ ಡಬಲ್​​ ಮರ್ಡರ್​​ ಮಾಡಿದ್ದು, ಬಳಿಕ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು; ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು

ಮಕ್ಕಳು ತಮ್ಮ ಪೋಷಕರಿಗೆ ಫೋನ್ ಮಾಡಿದಾಗ ದಂಪತಿಗಳು ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡ ಮಕ್ಕಳು ಸ್ಥಳೀಯರಿಗೆ ವಿಷಯ ತಿಳಿಸಿದ್ದರು. ಬಳಿಕ ಸ್ಥಳೀಯರು ಮನೆಗೆ ಹೋಗಿ ಪರಿಶೀಲಿಸಿದಾಗ ದಂಪತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು. ಮನೆಯ ಬೆಡ್‌ರೂಮ್‌ನಲ್ಲಿ ಚಂದ್ರಪ್ಪ ಅವರ ಶವ ಪತ್ತೆಯಾದರೆ, ಹಾಲ್‌ನಲ್ಲಿ ಪತ್ನಿ ಜಯಮ್ಮ ಶವ ಬಿದ್ದಿರುವುದು ಗೊತ್ತಾಗಿತ್ತು. ಮೃತ ಚಂದ್ರಪ್ಪ ಭದ್ರಾವತಿಯ ವಿಐಎಸ್​ಎಲ್ ನಿವೃತ್ತ ಉದ್ಯೋಗಿಯಾಗಿದ್ದು, ಮನೆಗೆ ನುಗ್ಗಿ ದರೋಡೆಕೋರರು ಹತ್ಯೆಗೈದಿರುವ ಬಗ್ಗೆ ಮೊದಲು ಅನುಮಾನ ವ್ಯಕ್ತವಾಗಿತ್ತು. ಈ ಆಧಾರದಲ್ಲಿ ಪೊಲೀಸರು ತನಿಖೆಗೆ ಇಳಿದಾಗ ಸಂಬಂಧಿಕ ವೈದ್ಯನೇ ಕೃತ್ಯ ಎಸಗಿರೋದು ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:09 pm, Wed, 21 January 26

Source link

Video: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಪುಟ್ಟ ಬಾಲಕನನ್ನು ಎತ್ಕೊಂಡು ಹೋದ ತಾಯಿ – Kannada News | Mother takes little boy to school who refuses to go

ಮಕ್ಕಳು (children) ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಾಗ ಹೆತ್ತವರು ಪುಲಾಯಿಸಿ ಶಾಲೆಗೆ ಕಳಿಸ್ತಾರೆ. ಇನ್ನು ಕೆಲವೊಮ್ಮೆ ಮಕ್ಕಳಿಗೆ ಹೆತ್ತವರ ಕೈಯಲ್ಲಿ ಹೊದೆ ಬೀಳೋದಿದೆ. ಈ ವಿಡಿಯೋ ನೋಡಿದ್ರೆ ನಿಮಗೆ ನಿಮ್ಮ ಬಾಲ್ಯವಂತು ಖಂಡಿತ ನೆನಪಾಗದೇ ಇರದು. ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಾಗ ನಿಮ್ಮ ಅಮ್ಮನೂ ಕೂಡ ಹೀಗೆಯೇ ಮಾಡಿರುತ್ತಾಳೆ. ಹೌದು ಪುಟ್ಟ ಬಾಲಕನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಿದ್ದು, ಪುಟಾಣಿಯ ತಾಯಿ ಪಟ್ಟು ಹಿಡಿದು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ  ವೈರಲ್‌ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನಮ್ಮ ಬಾಲ್ಯ ನೆನಪಾಯ್ತು ಎಂದಿದ್ದಾರೆ.

ಮಾರಿಯಮ್ಮ ಎಂಬಿಡಿ (Mariyam_MBD) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋಗೆ ಒಬ್ಬ ತಾಯಿ ಅನಕ್ಷರಸ್ಥಳಾಗಿದ್ದರೂ, ಅವಳು ಯಾವಾಗಲೂ ತನ್ನ ಮಕ್ಕಳಿಗೆ ಶಿಕ್ಷಣ ನೀಡಲು ಬಯಸುತ್ತಾಳೆ ಎಂಬ ಶೀರ್ಷಿಕೆ ಬರೆಯಲಾಗಿದೆ. ಈ ಕ್ಲಿಪ್‌ನಲ್ಲಿ ಪುಟ್ಟ ಬಾಲಕನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದನ್ನು ಕಾಣಬಹುದು. ಈ ವೇಳೆ ತಾಯಿ ಒಂದು ಕೈಯಲ್ಲಿ ಚೀಲ ಹಾಗೂ ಕೋಲನ್ನು ಹಿಡಿದುಕೊಂಡು ಪುಟ್ಟ ಬಾಲಕನನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಈ ನಡುವೆ ಮತ್ತೆ ಮತ್ತೆ ಹಠ ಹಿಡಿಯಲು ಶುರು ಮಾಡಿದಾಗ ಕೋಲಿನಿಂದ ಜೋರಾಗಿ ಬಾರಿಸುತ್ತಾಳೆ. ಅಮ್ಮನ ಕೈಯಲ್ಲಿ ಹೊದೆ ತಿಂದು ಈ ಪುಟ್ಟ ಹುಡುಗನು ಅಳುತ್ತಿರುವುದನ್ನು ಕಾಣಬಹುದು. ಈ ವೇಳೆಯೂ ಅಲ್ಲೇ ಇದ್ದ ಮತ್ತೊಂದು ಪುಟಾಣಿಯೂ ಬಂದು ಅಮ್ಮನ ಕೈಯಲ್ಲಿದ್ದ ಬ್ಯಾಗ್ ತೆಗೆದು ಕೊಂಡು ಹೆಗಲಿಗೇರಿಸಿಕೊಂಡಿದೆ. ಇತ್ತ ಹಠ ಹಿಡಿದು ಅಳುತ್ತಾ ನಿಂತಿದ್ದ ತನ್ನ ಮಗನನ್ನು ತಾಯಿಯೂ ಎತ್ತು ಕೊಂಡು ಹೋಗುತ್ತಿರುವ ದೃಶ್ಯವನ್ನು ನೀವು ನೋಡಬಹುದು.

ಇದನ್ನೂ ಓದಿ: ನನ್ನ ತಂಗಿ ಎಷ್ಟು ಮುದ್ದಾಗಿದ್ದಾಳೆ; ನವಜಾತ ಶಿಶುವನ್ನು ಕಂಡೊಡನೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಪುಟ್ಟ ಹುಡುಗ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಈ ತಾಯಿಗೆ ನನ್ನದೊಂದು ನಮಸ್ಕಾರ ಎಂದಿದ್ದಾರೆ. ಮತ್ತೊಬ್ಬರು, ನಾವು ಬಾಲ್ಯದಲ್ಲಿ ಈ ರೀತಿಯೇ ಶಾಲೆಗೆ ಹೋಗುತ್ತಿದ್ದೆವು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನನ್ನ ತಾಯಿಯೂ ಹೀಗೆಯೇ ಇದ್ದರು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ – Kannada News | Close Call in the Skies: IAF Microlight Goes Down in Prayagraj, Crew Walks Away Safe

ಪ್ರಯಾಗ್​ರಾಜ್, ಜನವರಿ 21: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ  ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.. ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ. ಈ ಘಟನೆಯಿಂದ ಆ ಪ್ರದೇಶದಲ್ಲಿ ಭಯd ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ತಕ್ಷಣ ಸ್ಥಳಕ್ಕೆ ಹೋಗಿ  ಇಬ್ಬರೂ ಪೈಲಟ್‌ಗಳನ್ನು ನೀರಿನಿಂದ ಹೊರಬರಲು ಸಹಾಯ ಮಾಡಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ಆಧರಿಸಿ ಚಾಲಕನ ವಿರುದ್ಧ ಎಫ್‌ಐಆರ್ – Kannada News | Bengaluru Lamborghini Reckless Driving on Mysore Road FIR Filed by Kengeri Police

ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ

ಬೆಂಗಳೂರು, ಜನವರಿ 21: ನಗರದ ಮೈಸೂರು ಮುಖ್ಯರಸ್ತೆಯಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಅತಿವೇಗ ಹಾಗೂ ಅಜಾಗರೂಕವಾಗಿ ಚಲಾಯಿಸಿದ ಘಟನೆ ನಡೆದಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದ ಆರೋಪದ ಮೇಲೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ  (Bengaluru) ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋವನ್ನು ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿದ್ದಾರೆ.

ಎಕ್ಸ್​ನಲ್ಲಿ ಚಾಲಕನ ಹುಚ್ಚಾಟದ ದೃಶ್ಯ ವೈರಲ್

ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವಂತೆ, ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಸ್ವಾಮಿ ಆರ್, ಜನವರಿ 20ರಂದು ಸಂಚಾರ ಕರ್ತವ್ಯದಲ್ಲಿದ್ದ ವೇಳೆ ಸಾಮಾಜಿಕ ಜಾಲತಾಣವಾದ ‘ಎಕ್ಸ್’ ಪರಿಶೀಲಿಸುತ್ತಿದ್ದಾಗ, ಜನವರಿ 19ರಂದು ಅಪ್‌ಲೋಡ್ ಆಗಿದ್ದ ವಿಡಿಯೋ ಗಮನಕ್ಕೆ ಬಂದಿದೆ. ಸನಾತನ ಎಂಬ ಖಾತೆಯಿಂದ ಹಂಚಿಕೆಯಾಗಿದ್ದ ಈ ವಿಡಿಯೋದಲ್ಲಿ, ಹಸಿರು ಬಣ್ಣದ ಲ್ಯಾಂಬೋರ್ಗಿನಿ ಹುರಾಕಾನ್ ಕಾರು, ರಾಜರಾಜೇಶ್ವರಿ ನಗರ ಆರ್ಚ್ ಬಳಿ ಮೈಸೂರು ರಸ್ತೆಯತ್ತ ಅಪಾಯಕಾರಿ ರೀತಿಯಲ್ಲಿ ಚಲಿಸುತ್ತಿರುವುದು ಕಂಡುಬಂದಿದೆ.  ಪ್ರಕರಣ ದಾಖಲಾದ ಕುರಿತು ಸಂಚಾರ ಪೊಲೀಸ್ ಉಪ ಆಯುಕ್ತ  ಅನೂಪ್ ಶೆಟ್ಟಿ ದೃಢಪಡಿಸಿದ್ದಾರೆ.

ವೈರಲ್ ಆದ ವೀಡಿಯೋವನ್ನು ನ್ಯೂಸ್9 ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಸ್ವಯಂ ಪ್ರೇರಿತ ದೂರು ದಾಖಲಿಸಿದ ಪಿಎಸ್ಐ

ವಿಡಿಯೋದಲ್ಲಿ ಕಾರು ಅತಿವೇಗವಾಗಿ ಲೇನ್ ಬದಲಿಸುತ್ತಾ, ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಮಾನವ ಜೀವಕ್ಕೆ ಅಪಾಯ ಉಂಟು ಮಾಡುವ ರೀತಿಯಲ್ಲಿ ಚಲಾಯಿಸಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಾರಿನ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಅಜಾಗರೂಕ ಹಾಗೂ ಅಪಾಯಕಾರಿ ಚಾಲನೆ ಆರೋಪದಲ್ಲಿ ಪಿಎಸ್‌ಐ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ. ಸದ್ಯ ಕಾರಿನ ನೋಂದಣಿ ವಿವರಗಳು ಮತ್ತು ಚಾಲಕನ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಾನ್ಯಾವತ್ತೂ ಹೂಡಿಕೆ ಬಗ್ಗೆ ಮಾತನಾಡಲ್ಲ, ನಕಲಿ ವಿಡಿಯೋಗಳ ಬಗ್ಗೆ ಎಚ್ಚರದಿಂದಿರಿ: ಸುಧಾ ಮೂರ್ತಿ – Kannada News | Sudha Murthy, says she won’t talk about investment, flags deepfake videos circulating online

ಬೆಂಗಳೂರು, ಜನವರಿ 21: ಡೀಪ್ ಫೇಕ್ ತಂತ್ರಜ್ಞಾನ ಬಂದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ನಾನಾ ಸೆಲಬ್ರಿಟಿಗಳ ವಿಡಿಯೋಗಳು ಹರಿದಾಡುತ್ತಿವೆ. ಇಷ್ಟು ಹಣ ಹೂಡಿಕೆ ಮಾಡಿ, ಇಷ್ಟು ಲಾಭ ಮಾಡಿ ಎಂಬಿತ್ಯಾದಿ ಪ್ರಲೋಭನೆಗಳನ್ನು ಈ ವಿಡಿಯೋಗಳಲ್ಲಿ ಕಾಣಬಹುದು. ಇಂಥ ಬಹುತೇಕ ವಿಡಿಯೋಗಳು ಡೀಪ್​ಫೇಕ್ (Deepfake) ಬಳಸಿ ತಯಾರಾದ ನಕಲಿ ವಿಡಿಯೋಗಳೇ ಆಗಿವೆ. ನಿರ್ಮಲಾ ಸೀತಾರಾಮನ್, ಸುಧಾ ಮೂರ್ತಿ (Sudha Murthy) ಇತ್ಯಾದಿ ಗಣ್ಯ ವ್ಯಕ್ತಿಗಳೇ ಮಾತನಾಡಿರುವಂತೆ ಈ ವಿಡಿಯೋಗಳಿವೆ. ಸ್ವತಃ ನರೇಂದ್ರ ಮೋದಿ ಅವರನ್ನೇ ಬಿಟ್ಟಿಲ್ಲ.

ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಅವರು ತಮ್ಮ ಮುಖ ಬಳಸಿ ಸೃಷ್ಟಿ ಮಾಡಲಾಗಿರುವ ನಕಲಿ ವಿಡಿಯೋಗಳ ಬಗ್ಗೆ ಜಾಗ್ರತೆಯಿಂದ ಇರುವಂತೆ ಸಾರ್ವಜನಿಕರನ್ನು ಎಚ್ಚರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. 200 ಡಾಲರ್ ಹೂಡಿಕೆ ಮಾಡಿ ಹತ್ತು ಪಟ್ಟು ಹೆಚ್ಚು ರಿಟರ್ನ್ ಗಳಿಸಬಹುದು ಎಂದು ಅವರು ಹೇಳಿರುವ ಫೇಕ್ ವಿಡಿಯೋವೊಂದರ ಸಂಬಂಧ ಸುಧಾ ಮೂರ್ತಿ ಸ್ಪಷ್ಟನೆ ಕೊಟ್ಟು ವಿಡಿಯೋ ಹಾಕಿದ್ದಾರೆ.

ಇದನ್ನೂ ಓದಿ: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ

‘ನನ್ನ ಚಿತ್ರ ಮತ್ತು ಧ್ವನಿ ಬಳಸಿ ಹಣಕಾಸು ಯೋಜನೆ ಮತ್ತು ಹೂಡಿಕೆಗಳ ಬಗ್ಗೆ ಪ್ರಚಾರ ಮಾಡುತ್ತಿರುವ ವಿಡಿಯೋಗಳನ್ನು ರಚಿಸಿ ಆನ್​ಲೈನ್​ನಲ್ಲಿ ಹರಿಯಿಸಲಾಗುತ್ತಿದೆ. ಇವು ನನಗೆ ಗೊತ್ತಿಲ್ಲದಂತೆ ಮಾಡಿರುವ ಡೀಪ್​ಫೇಕ್ ವಿಡಿಯೋಗಳಾಗಿವೆ. ಇವುಗಳ ಬಗ್ಗೆ ಎಚ್ಚರದಿಂದಿರಿ’ ಎಂದು ಸುಧಾ ಮೂರ್ತಿ ಅವರು ತಿಳಿಸಿದ್ದಾರೆ.

200 ಡಾಲರ್ ಹೂಡಿಕೆ ಮಾಡಿ ಹತ್ತು ಪಟ್ಟು ಹೆಚ್ಚು ಹಣ ಗಳಿಸಿ ಎಂದು ತಾನು ಹೇಳಿದ್ದೆನ್ನಲಾದ ವಿಡಿಯೋಗಳು ಹರಿದಾಡುತ್ತಿವೆ. ಇದರಲ್ಲ ತಿಳಿಸಲಾಗಿರುವುದೆಲ್ಲವೂ ಸುಳ್ಳು. ತನಗೆ ಗೊತ್ತಿರುವ ಕೆಲ ಜನರು ಇಂಥ ಸ್ಕ್ಯಾಮ್​ಗಳಿಗೆ ಬಲಿಯಾಗಿ ಹಣ ಕಳೆದುಕೊಂಡಿದ್ದಾರೆ ಎಂದೂ ಸುಧಾ ಮೂರ್ತಿ ವಿವರಿಸಿದ್ದಾರೆ.

ಸುಧಾ ಮೂರ್ತಿ ಅವರ ಎಕ್ಸ್ ಪೋಸ್ಟ್

‘ನಾನ್ಯಾವತ್ತೂ ಕೂಡ ಹೂಡಿಕೆಗಳ ಬಗ್ಗೆ ಮಾತನಾಡುವುದಿಲ್ಲ. ಹಣದ ವಿಚಾರವನ್ನೂ ಮಾತನಾಡುವುದಿಲ್ಲ. ನಾನೇನಿದ್ದರೂ ಕೆಲಸ, ಭಾರತದ ಸಂಸ್ಕೃತಿ, ಮಹಿಳೆಯರು, ಶಿಕ್ಷಣದ ಬಗ್ಗೆ ಮಾತನಾಡುತ್ತೇನೆ’ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ

‘ಇಂಥ ನಕಲಿ ವಿಡಿಯೋಗಳಲ್ಲಿ ಹೇಳಲಾಗಿರುವುದನ್ನು ನಂಬಿ ಯಾವುದೇ ಹಣಕಾಸು ನಿರ್ಧಾರ ತೆಗೆದುಕೊಳ್ಳಬೇಡಿ. ಹೊಸ ಸ್ಕೀಮ್ ಎಂದಿದ್ದರೆ ಬ್ಯಾಂಕಿಗೆ ಹೋಗಿ ವಿಚಾರಿಸಿ, ಮಾಹಿತಿ ಸರಿಯೋ ತಪ್ಪೋ ಎಂಬುದನ್ನು ತಿಳಿದುಕೊಳ್ಳಿ. ಅನುಮಾನ ಬಂದರೆ ಪೊಲೀಸ್ ಠಾಣೆಗೆ ಹೋಗಿ ಮಾಹಿತಿ ಕೊಡಿ’ ಎಂದು ಸುಧಾ ಮೂರ್ತಿ ಸಲಹೆ ಕೊಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬ್ಯಾಂಕಾಕ್​ನಿಂದ ಬೆಂಗಳೂರಿಗೆ‌ ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ

ಬೆಂಗಳೂರು, ಜನವರಿ 21: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಈ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಷ್ಟೊಂದು ಸುಲಭವಾಗಿ ಈ ವನ್ಯಜೀವಿಗಳನ್ನು ಹೇಗೆ ಸಾಗಿಸಲಾಯಿತು ಎಂಬ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version