ಬೆಂಗಳೂರು, ಮಾರ್ಚ್ 28: ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್ನಲ್ಲಿರುವ ಕ್ಯಾಂಪಸ್ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ.
ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ಇದೇ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯ ಆಡಳಿತವು ತಕ್ಷಣ ಕ್ರಮ ಕೈಗೊಂಡು ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.
ನಂದಿನಿ ವೆಂಕಟಾದ್ರಿ (Nandini Venkatadri) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.
ಮಾರ್ಚ್ 27 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಲು ಹಲವಾರು ಮಾರ್ಗಗಳಿವೆ, ಆದ್ದರಿಂದ, ಇದು ನೈಸರ್ಗಿಕ ಹೂವಿನ ಗೌರವವಾದ ಹೂಕೋಸು ಮೂಲಕ ಭಕ್ತಿಯನ್ನು ವ್ಯಕ್ತಪಡಿಸುವ ಅತ್ಯಂತ ವಿಶಿಷ್ಟ ಮಾರ್ಗವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ತುಂಬಾ ಸುಂದರ ಹಾಗೂ ಹೃದಯ ಸ್ಪರ್ಶಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಜೈ ಶ್ರೀರಾಮ್ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಸಿದ್ದೇಗೌಡ್ರು ಹೆಸರಿನ ಪಾತ್ರವನ್ನು ಧನಂಜಯ್ ಮಾಡುತ್ತಿದ್ದಾರೆ. ಅವರು ಯುವ ಕಲಾವಿದ. ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ರಚಿತಾ ರಾಮ್ಗೋಸ್ಕರ ಅವರು ಕವಿಯಾಗಿದ್ದಾರೆ. ಸಾಲುಗಳ ಮೂಲಕ ರಚಿತಾಗೆ ಪ್ರಪೋಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಸಿದ್ದೇಗೌಡ್ರ ಸಾಲುಗಳು ಗಮನ ಸೆಳೆದಿವೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.
ಬೆಂಗಳೂರು, ಮಾರ್ಚ್ 28: ರವಿಶಂಕರ್ ಗುರೂಜಿ (Shri Shri Ravi Shankar Guruji)ವಿರುದ್ಧದ ಭೂ ಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ, ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ತಿಳಿಸಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ.
ಸ್ಪಷ್ಟ ಆರೋಪವಿಲ್ಲ, ಸಾಕ್ಷಿಗಳಿಲ್ಲ!
ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ 19 ಸೆಪ್ಟೆಂಬರ್ 2025ರಂದು ಕರ್ನಾಟಕ ಭೂ ಆದಾಯ ಕಾಯ್ದೆ 1964 ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿತ್ತು. ಕಾಗ್ಗಳಿಪುರ ಗ್ರಾಮದ ವಿವಿಧ ಸರ್ವೇ ಸಂಖ್ಯೆಗಳಲ್ಲಿನ ಸರ್ಕಾರಿ ಭೂಮಿ, ಕೆರೆ ಮತ್ತು ರಾಜಕಾಲುವೆ ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಪಿಐಎಲ್, ಲ್ಯಾಂಡ್ ಗ್ರಾಬಿಂಗ್ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ತಹಶೀಲ್ದಾರ್ ವರದಿ ಆಧರಿಸಿ ದೂರು ದಾಖಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಶ್ರೀ ಶ್ರೀ ರವಿಶಂಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಪರಿಶೀಲಿಸಿದ ಕರ್ನಾಟಕ ಹೈಕೋರ್ಟ್ ದೂರುದಲ್ಲಿ ಅರ್ಜಿದಾರರ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲವೆಂದು ಗಮನಿಸಿದೆ. ಹೀಗಾಗಿ ಕೇವಲ ಪ್ರತಿವಾದಿಯಾಗಿ ಹೆಸರು ಸೇರಿಸಿರುವುದನ್ನು ಆಧಾರವನ್ನಾಗಿಟ್ಟುಕೊಂಡು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪ್ರಾಥಮಿಕ ಸಾಕ್ಷ್ಯಗಳಿಲ್ಲದೆ ಪ್ರಕರಣ ಮುಂದುವರಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯವು ಗುರೂಜಿ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದ ಮೂಲಕ ‘ಬಾಡಿ ಕಂಟ್ರೋಲ್’ ನಿಯಮವನ್ನು ಪರಿಚಯಿಸಲಾಗುತ್ತಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ RCB ಮತ್ತು SRH ನಡುವಣ ಪಂದ್ಯದ ಮೂಲಕ ಈ ನಿಯಮವನ್ನು ಜಾರಿಗೊಳಿಸಲಾಗುತ್ತದೆ. ಈ ನಿಯಮವು ಫೀಲ್ಡರ್ಗಳ ಮೇಲೆ ನೇರ ಪರಿಣಾಮ ಬೀರಲಿದೆ.
ಏನಿದು ಬಾಡಿ ಕಂಟ್ರೋಲ್ ನಿಯಮ?
ಬಾಡಿ ಕಂಟ್ರೋಲ್ ಎಂಬುದು ದೇಹದ ಮೇಲಿನ ನಿಯಂತ್ರಣ. ಅಂದರೆ ಇಲ್ಲಿ ಈ ನಿಯಮವನ್ನು ಫೀಲ್ಡರ್ಗಳಿಗಾಗಿ ಪರಿಚಯಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕ್ಯಾಚ್ ಹಿಡಿದಾಗ ಈ ನಿಯಮ ಅನ್ವಯವಾಗಲಿದೆ.
ಕ್ಯಾಚ್ ಹಿಡಿಯುವಾಗ ಫೀಲ್ಡರ್ ಚೆಂಡಿನ ಮೇಲೆ ಮತ್ತು ತಮ್ಮ ದೇಹದ ಸಮತೋಲನದ ಮೇಲೆ ಎಷ್ಟು ನಿಯಂತ್ರಣ ಹೊಂದಿರಬೇಕು ಎಂಬುದರ ಕುರಿತು ಈಗಾಗಲೇ 10 ಫ್ರಾಂಚೈಸಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್ನ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ.
ಐಪಿಎಲ್ ಕ್ಯಾಚ್ ನಿಯಮಗಳು:
ಸಂಪೂರ್ಣ ನಿಯಂತ್ರಣ: ಐಪಿಎಲ್ ನಿಯಮ 33.3ರ ಪ್ರಕಾರ, ಫೀಲ್ಡರ್ ಚೆಂಡನ್ನು ಹಿಡಿದ ನಂತರ ತನ್ನ ದೇಹದ ಚಲನೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವವರೆಗೆ ಕ್ಯಾಚ್ ಪೂರ್ಣಗೊಳ್ಳುವುದಿಲ್ಲ.
ಸಂಭ್ರಮಾಚರಣೆ ಮತ್ತು ಸ್ಥಿರತೆ: ಫೀಲ್ಡರ್ ಕ್ಯಾಚ್ ಹಿಡಿದ ತಕ್ಷಣ ಸಂಭ್ರಮಿಸಲು ಶುರುಮಾಡಿ ಆ ಸಂದರ್ಭದಲ್ಲಿ ಚೆಂಡು ಕೈಜಾರಿದರೆ ಅಥವಾ ಅವರು ಸಮತೋಲನ ತಪ್ಪಿ ಬೌಂಡರಿ ಲೈನ್ ಮುಟ್ಟಿದರೆ ಅದನ್ನು ‘ನಾಟ್ ಔಟ್’ ಎಂದು ಪರಿಗಣಿಸಲಾಗುತ್ತದೆ.
ದೇಹದ ನಿಯಂತ್ರಣ: ಕ್ಯಾಚ್ ಹಿಡಿದ ಬಳಿಕ ದೇಹದ ಚಲನೆಯು ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ಸಂಭ್ರಮಿಸಬೇಕು. ಕ್ಯಾಚ್ ಹಿಡಿದ ತಕ್ಷಣವೇ ಚೆಂಡನ್ನು ಎಸೆಯುವಂತಿಲ್ಲ ಎಂದು ತಿಳಿಸಲಾಗಿದೆ. ಒಂದು ವೇಳೆ ಸಂಭ್ರಮದ ವೇಳೆ ಚೆಂಡು ಕೈ ಜಾರಿದರೆ ಅದನ್ನು ಕ್ಯಾಚ್ ಎಂದು ಪರಿಗಣಿಸಲಾಗುವುದಿಲ್ಲ. ಇದನ್ನೇ ಕ್ರಿಕೆಟ್ನಲ್ಲಿ ಫೀಲ್ಡರ್ಗಳ ಬಾಡಿ ಕಂಟ್ರೋಲ್ ಎಂದು ಕರೆಯಲಾಗುತ್ತದೆ.
ಬೌಂಡರಿ ಲೈನ್ ನಿಯಮ: ಫೀಲ್ಡರ್ ಬೌಂಡರಿ ಲೈನ್ ಒಳಗಿನಿಂದಲೇ ಜಿಗಿದು ಚೆಂಡನ್ನು ಹಿಡಿಯಬೇಕು. ಗಾಳಿಯಲ್ಲಿರುವಾಗ ಚೆಂಡನ್ನು ಒಳಕ್ಕೆ ತಳ್ಳಿ ನಂತರ ಮೈದಾನದ ಒಳಗೆ ಬಂದು ಕ್ಯಾಚ್ ಪೂರ್ಣಗೊಳಿಸಬೇಕು.
ರಿಲೇ ಕ್ಯಾಚ್: ಒಬ್ಬ ಫೀಲ್ಡರ್ ಬೌಂಡರಿ ಹೊರಗಿನಿಂದ ಪದೇ ಪದೇ ಜಿಗಿಯುತ್ತಾ (Bunny Hop) ಚೆಂಡನ್ನು ಒಳಕ್ಕೆ ತಳ್ಳುವುದು ಈಗ ಅಮಾನ್ಯ ಎಂದು ಪರಿಗಣಿಸಲಾಗುತ್ತದೆ.
ಒಂದೇ ಅವಕಾಶ: ಫೀಲ್ಡರ್ ಬೌಂಡರಿ ಲೈನ್ ಒಳಗಿಂದ ಜಿಗಿದು ಒಮ್ಮೆ ಚೆಂಡನ್ನು ಒಳಗೆ ತಳ್ಳಲು ಪ್ರಯತ್ನಿಸಿ, ಬೌಂಡರಿ ದಾಟಿದ ಬಳಿಕ ಹೊರಗಿನಿಂದ ಜಿಗಿದು ಮತ್ತೆ ಹೊರ ತಳ್ಳಲು ಅವಕಾಶವಿಲ್ಲ. ಅಂದರೆ ಬೌಂಡರಿ ಲೈನ್ ಒಳಗೆ ನಿಂತು ಗಾಳಿಯಲ್ಲಿ ಹಾರಿ ಚೆಂಡನ್ನು ಮತ್ತೊಮ್ಮೆ ಹೊರಹಾಕಿದರೆ ಅದನ್ನು ಸಿಕ್ಸ್ ಎಂದು ಪರಿಗಣಿಸಲಾಗುವುದು ಎಂದು ತಿಳಿಸಲಾಗಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತುವನ್ನು ಮೋಕ್ಷ ಕಾರಕ, ಆಧ್ಯಾತ್ಮಿಕತೆಯ ಅಧಿಪತಿ ಮತ್ತು ಹಠಾತ್ ಘಟನೆಗಳ ಪ್ರೇರಕ ಎಂದು ಕರೆಯಲಾಗುತ್ತದೆ. ಜಾತಕದಲ್ಲಿ ಕೇತು ದುರ್ಬಲನಾಗಿದ್ದಾಗ ಅಥವಾ ಕೇತು ಮಹಾದಶೆ ನಡೆಯುತ್ತಿರುವಾಗ ಜೀವನದಲ್ಲಿ ಅನಿರೀಕ್ಷಿತ ಏರಿಳಿತಗಳು ಎದುರಾಗುವುದು ಸಹಜ. ಇಂತಹ ಸಂದರ್ಭದಲ್ಲಿ ವೈಡೂರ್ಯ ಅಥವಾ ‘ಬೆಕ್ಕಿನ ಕಣ್ಣಿನ ರತ್ನ’ವು ಕೇವಲ ಒಂದು ಆಭರಣವಾಗಿ ಉಳಿಯದೆ, ಧರಿಸಿದವರ ಪಾಲಿಗೆ ರಕ್ಷಣಾತ್ಮಕ ಗುರಾಣಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ವ್ಯಕ್ತಿಯನ್ನು ದುಷ್ಟ ಶಕ್ತಿಗಳಿಂದ ಕಾಪಾಡುವುದಲ್ಲದೆ, ಆರ್ಥಿಕ ಸ್ಥಿರತೆಯನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ವೈಡೂರ್ಯ ರತ್ನದಿಂದ ಲಭಿಸುವ ಅದ್ಭುತ ಬದಲಾವಣೆಗಳು:
ಈ ವಿಶಿಷ್ಟ ರತ್ನವನ್ನು ಧರಿಸುವುದರಿಂದ ಜೀವನದ ವಿವಿಧ ಹಂತಗಳಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ, ವ್ಯವಹಾರದಲ್ಲಿ ಅನುಭವಿಸಿದ ನಷ್ಟವನ್ನು ಸರಿದೂಗಿಸಲು ಮತ್ತು ಕಳೆದುಹೋದ ಸಂಪತ್ತನ್ನು ಮರಳಿ ಪಡೆಯಲು ಇದು ಸಹಕಾರಿ. ವಿಶೇಷವಾಗಿ ಸಾಲದ ಸುಳಿಯಲ್ಲಿ ಸಿಲುಕಿದವರಿಗೆ ಈ ರತ್ನವು ಹೊಸ ಭರವಸೆಯ ಬೆಳಕನ್ನು ನೀಡುತ್ತದೆ. ಕೇವಲ ಹಣಕಾಸು ಮಾತ್ರವಲ್ಲದೆ, ಮಾನಸಿಕ ನೆಮ್ಮದಿಯ ದೃಷ್ಟಿಯಿಂದಲೂ ಇದರ ಪ್ರಭಾವ ಅಪಾರ. ಅಜ್ಞಾತ ಭಯ, ಆತಂಕ ಮತ್ತು ನಕಾರಾತ್ಮಕ ಯೋಚನೆಗಳಿಂದ ಬಳಲುವವರಿಗೆ ಇದು ಧೈರ್ಯವನ್ನು ತುಂಬುತ್ತದೆ.
ಆಧ್ಯಾತ್ಮಿಕ ಹಾದಿಯಲ್ಲಿ ಸಾಗುವವರಿಗೆ ಮತ್ತು ಧ್ಯಾನದಲ್ಲಿ ತೊಡಗಿಸಿಕೊಳ್ಳುವವರಿಗೆ ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸಲು ವೈಡೂರ್ಯವು ಪೂರಕವಾಗಿದೆ. ಇನ್ನು ಆರೋಗ್ಯದ ವಿಚಾರಕ್ಕೆ ಬಂದರೆ, ಚರ್ಮದ ಸಮಸ್ಯೆಗಳು, ಕೀಲು ನೋವು ಮತ್ತು ದೀರ್ಘಕಾಲದ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವಲ್ಲಿ ಈ ರತ್ನವು ಚಮತ್ಕಾರಿಕ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.
ಯಾರಿಗೆ ಈ ರತ್ನ ಹೆಚ್ಚು ಸೂಕ್ತ?
ವೈಡೂರ್ಯವು ಎಲ್ಲರಿಗೂ ಒಲಿಯುವುದಿಲ್ಲ; ಇದು ನಿರ್ದಿಷ್ಟ ಗ್ರಹಗತಿಗಳ ಮೇಲೆ ಅವಲಂಬಿತವಾಗಿದೆ. ಯಾರ ಜಾತಕದಲ್ಲಿ ಕೇತುವು 1, 3, 4, 5, 9 ಅಥವಾ 10ನೇ ಮನೆಗಳಲ್ಲಿ ಕುಳಿತು ದುರ್ಬಲನಾಗಿದ್ದಾನೋ, ಅಂತಹವರು ಈ ರತ್ನವನ್ನು ಧರಿಸುವುದು ಶ್ರೇಯಸ್ಕರ. ವಿಶೇಷವಾಗಿ ಯಾವುದೇ ತಿಂಗಳ 7, 17 ಅಥವಾ 25ನೇ ತಾರೀಖಿನಂದು ಜನಿಸಿದವರು, ಅಂದರೆ ಯಾರ ಅದೃಷ್ಟ ಸಂಖ್ಯೆ 7 ಆಗಿದೆಯೋ ಅವರಿಗೆ ಇದು ಅತ್ಯಂತ ಅದೃಷ್ಟದ ರತ್ನವಾಗಿದೆ. ಇದರೊಂದಿಗೆ ಕೇತು ಮಹಾದಶಾ ಅಥವಾ ಅಂತರದಶೆಯ ಕಠಿಣ ಅವಧಿಯನ್ನು ಎದುರಿಸುತ್ತಿರುವವರು ಇದರ ಪ್ರಯೋಜನ ಪಡೆಯಬಹುದು.
ರತ್ನದ ಸಂಪೂರ್ಣ ಫಲಿತಾಂಶ ಸಿಗಬೇಕಾದರೆ ಅದನ್ನು ಶಾಸ್ತ್ರೋಕ್ತವಾಗಿ ಧರಿಸುವುದು ಮುಖ್ಯ. ವೈಡೂರ್ಯವನ್ನು ಮಂಗಳವಾರ ಅಥವಾ ಶನಿವಾರದಂದು ಧರಿಸಲು ಸೂಚಿಸಲಾಗುತ್ತದೆ. ಈ ದಿನಗಳಲ್ಲಿ ರಾಹುಕಾಲವಿಲ್ಲದ ಶುಭ ಮುಹೂರ್ತವನ್ನು ನೋಡಿ, ಬೆಳ್ಳಿ ಅಥವಾ ಪಂಚಲೋಹದ ಉಂಗುರದಲ್ಲಿ ರತ್ನವನ್ನು ಜಡಿಸಬೇಕು. ನಂತರ ವಿಧಿವಿಧಾನದಂತೆ ಪೂಜೆ ಸಲ್ಲಿಸಿ, ಪುರುಷರು ಬಲಗೈಯ ಮತ್ತು ಮಹಿಳೆಯರು ಎಡಗೈಯ ಮಧ್ಯದ ಬೆರಳಿಗೆ ಧರಿಸುವುದು ಉತ್ತಮ ಎಂದು ಹೇಳಲಾಗುತ್ತದೆ.
ನೆನಪಿಡಿ, ರತ್ನಗಳು ಗ್ರಹಗಳ ಶಕ್ತಿಯನ್ನು ಪ್ರತಿಫಲಿಸುತ್ತವೆ. ಆದ್ದರಿಂದ ಯಾವುದೇ ರತ್ನವನ್ನು ಧರಿಸುವ ಮೊದಲು ನುರಿತ ಜ್ಯೋತಿಷಿಗಳ ಬಳಿ ಜಾತಕ ವಿಶ್ಲೇಷಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ. ಸರಿಯಾದ ಸಲಹೆಯೊಂದಿಗೆ ಧರಿಸಿದ ರತ್ನವು ನಿಮ್ಮ ಜೀವನದ ದಿಕ್ಕನ್ನೇ ಬದಲಿಸುವ ಶಕ್ತಿ ಹೊಂದಿದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಚಾಮರಾಜನಗರ, ಮಾರ್ಚ್ 28: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ. ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ 8 ಕಿಮೀ ದೂರ ಸಾಗಿಸಲು ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆ ಸಿಗದಿರುವುದು ಗರ್ಭಿಣಿಯರ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸಾರಿಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಸಾಧ್ಯವಾಗದೆ 5ನೇ ತರಗತಿವರೆಗೆ ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಭೇಟಿ ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಸೂಕ್ತ ಸೌಕರ್ಯ ಒದಗಿಸಲು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ನವದೆಹಲಿ, ಮಾರ್ಚ್ 28: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಮತ್ತೊಂದೆಡೆ, ಎಲ್ಪಿಜಿ ಗ್ಯಾಸ್ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಹಾಗೂ ಜಾಗತಿಕ ಬಿಕ್ಕಟ್ಟು ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವಂತಹ ನಿರ್ಧಾರವೊಂದನ್ನು ರಷ್ಯಾ (Russia) ಕೈಗೊಂಡಿದೆ. ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತನ್ನು (Crude Oil Export Ban) ಸ್ಥಗಿತಗೊಳಿಸಲು ರಷ್ಯಾ ಮುಂದಾಗಿದ್ದು, ಜುಲೈ 31 ರ ವರೆಗೆ ಇದು ಜಾರಿಯಲ್ಲಿರಲಿದೆ. ರಷ್ಯಾದ ಈ ನಿರ್ಧಾರ ಭಾರತದ (India) ಮೇಲೆ ಎಂತಹ ಪರಿಣಾಮ ಬೀರಲಿದೆ ಎಂಬ ಚರ್ಚೆ ಈಗ ಶುರುವಾಗಿದೆ.
ಉಕ್ರೇನ್ ಯುದ್ಧದ ನಂತರ ಭಾರತಕ್ಕೆ ರಿಯಾಯಿತಿ ದರದಲ್ಲಿ ತೈಲ ನೀಡುತ್ತಿದ್ದ ರಷ್ಯಾದ ಈ ನಡೆ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲದೆ, ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧ ಭೀತಿಯಿಂದ ಭಾರತಕ್ಕೆ ಕಚ್ಚಾ ತೈಲ ಸಾಗಾಟಕ್ಕೆ ಅಡ್ಡಿಯಾದಾಗಲೂ ರಷ್ಯಾ ಆಪತ್ಬಾಂಧವನಂತೆ ಭಾರತಕ್ಕೆ ತೈಲ ಪೂರೈಕೆ ಮಾಡಿದೆ.
ಕಚ್ಚಾ ತೈಲ ರಫ್ತು ಸ್ಥಗಿತದ ರಷ್ಯಾ ನಿರ್ಧಾರಕ್ಕೆ ಕಾರಣವೇನು?
ಅಂತರರಾಷ್ಟ್ರೀಯ ಒಪ್ಪಂದದ ಭಾಗವಾಗಿ ಮತ್ತು ದೇಶದ ಆಂತರಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯನ್ನು ನಿಯಂತ್ರಣದಲ್ಲಿಡಲು ರಷ್ಯಾ ಉತ್ಪಾದನೆಯನ್ನು ಕಡಿತಗೊಳಿಸುತ್ತಿದೆ. ಜಾಗತಿಕವಾಗಿ ಕಚ್ಚಾ ತೈಲದ ಬೆಲೆಯನ್ನು ಸ್ಥಿರವಾಗಿರಿಸಲು ರಷ್ಯಾ ಈ ತಂತ್ರ ಅನುಸರಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಭಾರತದ ಮೇಲೆ ಆಗುವ ಪರಿಣಾಮಗಳೇನು?
ರಿಯಾಯಿತಿ ತೈಲಕ್ಕೆ ಬ್ರೇಕ್: ಉಕ್ರೇನ್ ಯುದ್ಧದ ಬಳಿಕ ರಷ್ಯಾ ಭಾರತದ ಅತಿದೊಡ್ಡ ತೈಲ ಪೂರೈಕೆದಾರ ರಾಷ್ಟ್ರವಾಗಿ ಹೊರಹೊಮ್ಮಿತ್ತು. ಕಡಿಮೆ ದರದಲ್ಲಿ ಸಿಗುತ್ತಿದ್ದ ತೈಲ ಪೂರೈಕೆ ಈಗ ಇಲ್ಲವಾಗುವ ಆತಂಕ ಎದುರಾಗಿದೆ.
ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆ ಕಡಿಮೆಯಾದರೆ ಬೆಲೆ ಏರಿಕೆಯಾಗುವುದು ಸಹಜ. ಇದು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ನೇರ ಪರಿಣಾಮ ಬೀರಬಹುದು.
ಬದಲಿ ಮಾರ್ಗಗಳ ಹುಡುಕಾಟ: ರಷ್ಯಾದಿಂದ ಪೂರೈಕೆ ಕಡಿಮೆಯಾದರೆ ಭಾರತ ಮತ್ತೆ ಇರಾಕ್, ಸೌದಿ ಅರೇಬಿಯಾದಂತಹ ಪಶ್ಚಿಮ ಏಷ್ಯಾ ರಾಷ್ಟ್ರಗಳ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಇದು ಆಮದು ವೆಚ್ಚವನ್ನು ಹೆಚ್ಚಿಸಬಹುದು.
ಆದರೆ, ಭಾರತವು ಈಗಾಗಲೇ ರಷ್ಯಾದೊಂದಿಗೆ ದೀರ್ಘಾವಧಿಯ ಒಪ್ಪಂದಗಳನ್ನು ಮಾಡಿಕೊಂಡಿರುವುದರಿಂದ ತಕ್ಷಣಕ್ಕೆ ಯಾವುದೇ ದೊಡ್ಡ ಬಿಕ್ಕಟ್ಟು ಎದುರಾಗಲಾರದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರದ ಕಥೆ ನಮ್ಮದು ಎಂದು ಗುರು ದೇಶಪಾಂಡೆ ಆರೋಪ ಮಾಡಿದ್ದರು. ಗುರು ದೇಶಪಾಂಡೆ ಆರೋಪ ಸುಳ್ಳು ಎಂದು ಹೇಳಿದ್ದ ಕೃಷ್ಣ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡೋದಾಗಿಯೂ ಎಚ್ಚರಿಸಿದ್ದು. ಅಲ್ಲದೆ ಸುದ್ದಿಗೋಷ್ಠಿ ವೇಳೆ ಗುರು ಅವರ ವೈಯಕ್ತಿಕ ವಿಷಯಗಳನ್ನು ಎಳೆದು ತಂದಿದ್ದರು. ಈಗ ಈ ವಿವಾದ ಸುಖಾಂತ್ಯವಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭಯೆಲ್ಲಿ ಪ್ರಕರಣ ಇತ್ಯರ್ಥವಾಗಿದೆ.
‘ಲವ್ ಮಾಕ್ಟೇಲ್ 3’ ಸಿನಿಮಾದ ದ್ವಿತೀಯಾರ್ಧದಲ್ಲಿ ಕೋರ್ಟ್ ರೂಂ ವಿಷಯ ಇದೆ. ಈ ಬಗ್ಗೆ ರಾಘವೇಂದ್ರ ನಾಯ್ಕ್ ಹಾಗೂ ಗುರು ದೇಶಪಾಂಡೆ ಅಪಸ್ವರ ತೆಗೆದಿದ್ದರು. ‘ನಾವು ಕೃಷ್ಣಗೆ ಕಥೆ ಹೇಳಿದ್ದೆವು. ಆದರೆ, ಅವರು ಕಥೆ ಒಪ್ಪಿಕೊಳ್ಳಲಿಲ್ಲ. ‘ಲವ್ ಮಾಕ್ಟೇಲ್ 3’ ಸಿನಿಮಾ ನೋಡಿದ ಬಳಿಕ ಕಥೆ ನಮ್ಮದು ಎಂದು ಅನಿಸಿತು’ ಎಂದು ಕೃಷ್ಣ ಹೇಳಿದ್ದರು. ಇಬ್ಬರೂ ವೈಯಕ್ತಿಕ ವಿಷಯಗಳನ್ನು ಇಟ್ಟುಕೊಂಡು ಕಿತ್ತಾಡಿಕೊಂಡಿದ್ದರು. ಆರೋಪ ಪ್ರತ್ಯಾರೋಪ ಬಂತು.
ಮಾರ್ಚ್ 27ರಂದು ಜಯಮಾಲಾ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಕೃಷ್ಣ, ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಇನ್ನಿತರು ಹಾಜರಿದ್ದರು. ಸಭೆಯಲ್ಲಿ ಎಲ್ಲರೂ ತಮ್ಮ ತಮ್ಮ ವಾದ ಮುಂದಿಟ್ಟಿದ್ದಾರೆ. ವಾದದ ಬಳಿಕ ಪ್ರಕರಣಕ್ಕೆ ಸುಖಾಂತ್ಯ ನೀಡಲಾಗಿದೆ.
“Though the essence of the story draws inspiration from the same source, the screenplay by Darling Krishna and the one Guru Deshpande holds, are entirely different. The issue is now resolved.” #lovemocktail3#filmchamberpic.twitter.com/fnVZIHbCON
ಸುದ್ದಿಗೋಷ್ಠಿ ವೇಳೆ ಕೃಷ್ಣ ಅವರು ಗುರು ದೇಶಪಾಂಡೆ ಅವರ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಿದ್ದರು. ಇದಕ್ಕೆ ಕೃಷ್ಣ ಅವರು ಸಭೆಯಲ್ಲಿ ವೈಯಕ್ತಿಕವಾಗಿ ಕ್ಷಮೆ ಕೇಳಿದರು. ಇಬ್ಬರೂ ಕಥೆಯನ್ನು ಒಂದೇ ಘಟನೆಯಿಂದ ಸ್ಫೂರ್ತಿ ಪಡೆದರೂ, ಇಬ್ಬರ ಚಿತ್ರಕಥೆಯೂ ಬೇರೆ ಬೇರೆ ಎಂಬ ತೀರ್ಮಾನಕ್ಕೆ ಬರಲಾಗಿದೆ. ಈ ಮೂಲಕ ಪ್ರಕರಣವನ್ನು ಸುಖಾಂತ್ಯ ಮಾಡಲಾಗಿದೆ.
ರಾಘವೇಂದ್ರ ನಾಯ್ಕ್ ಅವರು ‘ಕೂಡಲಸಂಗಮ’ ಹೆಸರಿನ ಸಿನಿಮಾ ಮಾಡಲು ನಿರ್ಧರಿಸಿದ್ದರು. ಈ ಚಿತ್ರದ ಕಥೆ ‘ಲವ್ ಮಾಕ್ಟೇಲ್ 3’ಗೆ ಹೋಲಿಕೆ ಆಗುತ್ತದೆ ಎಂಬುದು ಇವರ ಆರೋಪ ಆಗಿತ್ತು. ಈಗ ವಿವಾದ ಬಗೆಹರಿದಿದ್ದು, ತಾವು ರಚಿಸಿದ ಕಥೆ ಇಟ್ಟುಕೊಂಡು ರಾಘವೇಂದ್ರ ನಾಯ್ಕ್ ಸಿನಿಮಾ ಮಾಡುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.
ಮಾರ್ಚ್ 22ರಿಂದ ಏಪ್ರಿಲ್ 04ರವರೆಗಿನ ಪ್ರೇಮ ಅಥವಾ ಪ್ರೀತಿಯ ಭವಿಷ್ಯ ಬಹಳ ಆಸಕ್ತಿದಾಯಕವೂ ರೋಮಾಂಚನಕಾರಿಯೂ ಆಗಿರಲಿದೆ. ನಿಮ್ಮ ಈ ವಾರದ ಕ್ಷಣಗಳು ಅಮೂಲ್ಯವಾದವುಗಳಾಗಿವೆ. ಅವಿಸ್ಮರಣೀಯತೆಯನ್ನು ರಮಣೀಯತೆಯನ್ನೂ ಕೊಡುತ್ತವೆ.
ಮೇಷ:
ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು, ತಾಳ್ಮೆಯಿಂದಿರಿ. ಹಳೆಯ ನೆನಪುಗಳು ಮರುಕಳಿಸಲಿವೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರುವ ಸಾಧ್ಯತೆಯಿದೆ. ಮಾತುಕತೆಯಲ್ಲಿ ಮೃದುತ್ವವಿರಲಿ.
ವೃಷಭ:
ಈ ವಾರ ಪ್ರೇಮ ಜೀವನದಲ್ಲಿ ಉತ್ಸಾಹ ಹೆಚ್ಚಿರಲಿದೆ. ಪ್ರಿಯಕರನೊಂದಿಗೆ ಪ್ರವಾಸ ಕೈಗೊಳ್ಳುವ ಯೋಗವಿದೆ. ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲು ಇದು ಸೂಕ್ತ ಸಮಯ. ಪರಸ್ಪರ ನಂಬಿಕೆ ವೃದ್ಧಿಯಾಗಲಿದೆ.
ಮಿಥುನ:
ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಅನಗತ್ಯ ವಾದಗಳಿಂದ ದೂರವಿರುವುದು ಒಳಿತು. ಪ್ರೇಮಿಗಳ ನಡುವೆ ಸಂವಹನ ಕೊರತೆ ಉಂಟಾಗಬಹುದು. ಪರಸ್ಪರ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ, ಸಂಬಂಧ ಗಟ್ಟಿಯಾಗುವುದು.
ಕರ್ಕಾಟಕ:
ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವ ವ್ಯಕ್ತಿ ಪರಿಚಯವಾಗುವ ಸಾಧ್ಯತೆಯಿದೆ. ಕುಟುಂಬದ ಬೆಂಬಲ ಪ್ರೇಮಕ್ಕೆ ದೊರೆಯಲಿದೆ.
ಸಿಂಹ:
ಸಂಬಂಧದಲ್ಲಿ ಈ ವಾರ ಸ್ವಲ್ಪ ಏರಿಳಿತ ಇರಬಹುದು. ಸಂಗಾತಿಯ ಮೇಲೆ ಅನಗತ್ಯ ಸಂಶಯ ಬೇಡ. ಒಂಟಿಯಾಗಿರುವವರಿಗೆ ಹೊಸ ಸ್ನೇಹ ಆರಂಭವಾಗಬಹುದು. ಪ್ರೀತಿಯಲ್ಲಿ ಪಾರದರ್ಶಕತೆ ಇರಲಿ, ಸಂಬಂಧ ಸುಧಾರಿಸುವುದು.
ಕನ್ಯಾ:
ನಿಮ್ಮ ಸಂಗಾತಿಯು ನಿಮ್ಮ ಭಾವನೆಗಳಿಗೆ ಸ್ಪಂದಿಸಲಿದ್ದಾರೆ. ಪ್ರೇಮಿಗಳ ನಡುವೆ ಇದ್ದ ಗೊಂದಲಗಳು ಬಗೆಹರಿಯಲಿವೆ. ದೂರದಲ್ಲಿರುವ ಪ್ರಿಯತಮದಿಂದ ಶುಭ ಸುದ್ದಿ ಸಿಗಲಿದೆ. ಪ್ರೇಮ ಸಂಬಂಧವು ವಿವಾಹದ ಹಂತಕ್ಕೆ ತಲುಪಬಹುದು.
ತುಲಾ:
ಪ್ರೇಮ ವಿಚಾರದಲ್ಲಿ ಈ ವಾರ ಮಿಶ್ರ ಫಲ ನೀಡಲಿದೆ. ಕೆಲಸದ ಒತ್ತಡದಿಂದ ಸಂಗಾತಿಗೆ ಸಮಯ ನೀಡಲು ಸಾಧ್ಯವಾಗದಿರಬಹುದು. ವಾರಾಂತ್ಯದಲ್ಲಿ ಸುಂದರ ಕ್ಷಣಗಳನ್ನು ಕಳೆಯುವಿರಿ. ಪ್ರೀತಿಯಲ್ಲಿ ಸಮತೋಲನ ಕಾಪಾಡಿಕೊಳ್ಳಿ.
ವೃಶ್ಚಿಕ:
ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸಂಗಾತಿಯೊಂದಿಗೆ ಆಪ್ತತೆ ಹೆಚ್ಚಲಿದೆ. ಪ್ರೇಮ ವಿವಾಹಕ್ಕೆ ಮನೆಯವರ ಸಮ್ಮತಿ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧದಲ್ಲಿರುವವರು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ, ಸಾವಕಾಶವಾಗಿ ಯೋಚಿಸಿ.
ಧನು:
ಪ್ರೇಮ ಜೀವನದಲ್ಲಿ ಹೊಸ ಚೈತನ್ಯ ಮೂಡಲಿದೆ. ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಮನಸ್ತಾಪಗಳು ದೂರವಾಗಿ ಪ್ರೀತಿ ಹೆಚ್ಚಲಿದೆ. ನಿಮ್ಮ ಸಂಗಾತಿಯ ಸಲಹೆಗಳು ನಿಮಗೆ ನೆರವಾಗಲಿವೆ.
ಮಕರ:
ಸಂಬಂಧದಲ್ಲಿ ಪರಸ್ಪರ ಗೌರವ ನೀಡಿದರೆ ಪ್ರೀತಿ ಉಳಿಯುತ್ತದೆ. ಸಂಗಾತಿಯೊಂದಿಗೆ ಗುಣಮಟ್ಟದ ಸಮಯ ಕಳೆಯಲು ಪ್ರಯತ್ನಿಸಿ. ಹಳೆಯ ಸಂಬಂಧವೊಂದು ಮತ್ತೆ ಚಿಗುರಬಹುದು. ಅತಿಯಾದ ನಿರೀಕ್ಷೆಗಳು ಬೇಡ, ವಾಸ್ತವದಲ್ಲಿ ಬದುಕಿ.
ಕುಂಭ:
ಪ್ರೇಮಿಗಳ ನಡುವೆ ನಂಬಿಕೆ ಹೆಚ್ಚಾಗುವ ಸಮಯವಿದು. ಸಂಗಾತಿಯ ಪ್ರಗತಿಯಲ್ಲಿ ನಿಮ್ಮ ಸಹಕಾರವಿರಲಿ. ಅವಿವಾಹಿತರಿಗೆ ವಿದೇಶದಲ್ಲಿರುವವರಿಂದ ವಿವಾಹದ ಸಂಬಂಧ ಬರಬಹುದು. ಪ್ರೀತಿಯಲ್ಲಿ ಪ್ರಾಮಾಣಿಕತೆ ನಿಮ್ಮ ಯಶಸ್ಸಿಗೆ ಕಾರಣವಾಗಲಿದೆ.
ಮೀನ:
ನಿಮ್ಮ ಪ್ರೇಮ ಜೀವನವು ಈ ವಾರ ಸುಖಮಯವಾಗಿರಲಿದೆ. ಮನಸ್ಸಿನ ಗೊಂದಲಗಳಿಗೆ ಸಂಗಾತಿಯಿಂದ ಪರಿಹಾರ ಸಿಗಲಿದೆ. ಪ್ರೇಮಿಗಳಿಗೆ ಒಟ್ಟಾಗಿ ಸಮಯ ಕಳೆಯುವ ಅವಕಾಶ ಸಿಗಲಿದೆ. ಸಂಬಂಧದಲ್ಲಿ ಹೊಸ ಭರವಸೆ ಮೂಡಲಿದೆ.
ಮತ್ತೆ ಯಾವುದಾದರೂ ರಾಶಿಯ ಬಗ್ಗೆ ಅಥವಾ ನಿರ್ದಿಷ್ಟ ಗ್ರಹಗಳ ಪ್ರಭಾವದ ಬಗ್ಗೆ ತಿಳಿಯಬೇಕೆ? ಅಥವಾ ಈ ಅವಧಿಯ ಸಾಮಾನ್ಯ ಭವಿಷ್ಯವನ್ನು ಬರೆದುಕೊಡಲೇ?
– ಲೋಹಿತ ಹೆಬ್ಬಾರ್