ದಾವಣಗೆರೆ, ಮಾರ್ಚ್ 28: ಸಚಿವ ಜಮೀರ್ ಅಹ್ಮದ್ರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ. ಇದೀಗ ಅವರು ಕೇರಳ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರದಿದ್ದರೂ ಒಳ್ಳೆಯದೇ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಇಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಗರದ ವೆಂಕಾಭೋವಿ ಕಾಲೋನಿಯಲ್ಲಿರುವ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಹೋಗಿದೆ, ನಾವು ಸಾದಿಕ್ ಪೈಲ್ವಾನ್ ಎಲ್ಲಾ ಒಂದೇ. ಎಲ್ಲಾ ಒಂದಾಗಿ ಚುನಾವಣೆ ಮಾಡುತ್ತೇವೆ. ಯಾರು ಕೂಡ ಇಲ್ಲ ಸಲ್ಲದ ಹೇಳಿಕೆಯನ್ನು ಕೊಡುವುದು ಬೇಡ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸಹ ಪರಿಚಯಸ್ಥರೇ ಎಂದಿದ್ದಾರೆ.
ಬೆಂಗಳೂರು , ಮಾ.28 : ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ (ಮಾ.28) ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ಒಂದರಲ್ಲಿ ತನ್ನ ಪೋಷಕರ ಜೊತೆ ವಾಸವಿದ್ದಳು. ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ದಿಢೀರ್ ಕಾಣೆಯಾಗಿದ್ದಳು. ಪೋಷಕರು ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ. ಈ ಸಂಬಂಧ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.
ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾಗ, ಇಂದು ಸಂಜೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಶವವು ಸಂಪೂರ್ಣ ನಗ್ನ ಸ್ಥಿತಿಯಲ್ಲಿದ್ದು, ಕಿರಾತಕರು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಮಗುವಿನ ಗುರುತು ಪತ್ತೆಯಾಗಬಾರದೆಂಬ ಉದ್ದೇಶದಿಂದ ಮುಖವನ್ನು ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹತ್ಯೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.
ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್ನಿಂದ ಹರಿಶಂಕರ್ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಹನುಮಾನ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಬದಿಯಲ್ಲಿದ್ದ ದೈತ್ಯ ಬಂಡೆಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ಪರಿಣಾಮದಿಂದ ಹಲವಾರು ಪ್ರಯಾಣಿಕರು ಬಸ್ನಿಂದ ಹೊರಗೆ ಬಿದ್ದಿದ್ದಾರೆ. 10ಕ್ಕೂ ಹೆಚ್ಚು ಜನರು ಬಸ್ನ ಕೆಳಗೆ ಸಿಲುಕಿಕೊಂಡಿದ್ದಾರೆ. ಇದರಿಂದ ಅವರಲ್ಲಿ ಅನೇಕರು ಹೊರಬರಲಾಗದೆ ಒದ್ದಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಆಗಮಿಸಿದವು. ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಗ್ಯಾಸ್ ಕಟ್ಟರ್ ಬಳಸಿ ರಕ್ಷಿಸಲಾಯಿತು.
ಗಾಯಗೊಂಡ ಪ್ರಯಾಣಿಕರನ್ನು ದಸ್ಪಲ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಕೆಲವರನ್ನು ಜಿಲ್ಲಾ ಕೇಂದ್ರದ ಆಸ್ಪತ್ರೆಗಳಿಗೆ ಕಳುಹಿಸಲಾಯಿತು. “ಚಾಲಕ ಬಸ್ ಅನ್ನು ಅತಿ ವೇಗದಲ್ಲಿ ಓಡಿಸುತ್ತಿದ್ದ. ಅತಿ ವೇಗವೇ ಅಪಘಾತಕ್ಕೆ ಕಾರಣ” ಎಂದು ಪ್ರಯಾಣಿಕ ಆರಿಯಾ ಪಾತ್ರ ಹೇಳಿದ್ದಾರೆ.
ಅಪಘಾತದ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 28: ವ್ಯಕ್ತಿ ಓರ್ವ ತನ್ನ ಪಾಡಿಗೆ ತಾನು ಚಹಾ ಕುಡಿಯುತ್ತಾ ಅಂಗಡಿಯೊಂದರ ಬಳಿ ನಿಂತಿದ್ದ. ಇದೇ ವೇಳೆ ಆಗಮಿಸಿದ ಮೂವರು ಕಿಡಿಗೇಡಿಗಳು ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ನೋಡ ನೋಡುತ್ತಿದ್ದಂತೆ ವ್ಯಕ್ತಿಯನ್ನ ಆಟೋದಲ್ಲಿ ಹತ್ತಿಸಿಕೊಂಡಿದ್ದಾರೆ (Kidnape). ಸ್ವಲ್ಪ ಹೊತ್ತಲ್ಲೇ ಆಟೋದಿಂದ ಇಳಿಸಿ ಬೆದರಿಕೆ ಹಾಕಿ ಬಿಟ್ಟುಕಳುಹಿಸಿದ್ದಾರೆ. ಅಷ್ಟಕ್ಕೂ ಈ ವಿಚಿತ್ರ ಘಟನೆ ಬ್ಯಾಡರಹಳ್ಳಿಯ ನಾಗರಹೊಳೆ ಸರ್ಕಲ್ನಲ್ಲಿ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಡೆದಿದ್ದೇನು?
ಶರತ್ ಕಿಡ್ನ್ಯಾಪ್ ಆಗಿದ್ದ ವ್ಯಕ್ತಿ. ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ. ಮೂರು ದಿನದ ಹಿಂದೆ ಬ್ಯಾಡರಹಳ್ಳಿಯ ನಾಗರಹೊಳೆ ಸರ್ಕಲ್ ಬಳಿ ತನ್ನ ಸ್ನೇಹಿತನ ಜೊತೆಗೆ ಚಹಾ ಕುಡಿಯುತ್ತಾ ನಿಂತಿದ್ದರು. ಈ ವೇಳೆ ಆಟೋದಲ್ಲಿ ಬಂದ ಮೂವರ ಗ್ಯಾಂಗ್ ನೀನು ಹೀರೋನಾ ಎಂದು ವಿಚಾರಿಸಿದ್ದಾರೆ. ನಾನು ಅವನಲ್ಲ ಅಂತ ಶರತ್ ಹೇಳಿದ್ದರು, ಸುಳ್ಳು ಹೇಳುತ್ತೀಯಾ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾರೆ.
ನಟನಲ್ಲ ಎಂದಾಗ ಬಿಟ್ಟುಕಳುಹಿಸಿದ ಖದೀಮರು
ಒಬ್ಬಾತ ತನ್ನ ಕೈನಲ್ಲಿದ್ದ ಡ್ಯಾಗರ್ನಿಂದ ಶರತ್ ಮುಖಕ್ಕೆ ಹೊಡೆದಿದ್ದಾನೆ. ನೋಡನೋಡುತ್ತಿದ್ದಂತೆ ಶರತ್ ನನ್ನ ಆಟೋದಲ್ಲಿ ನೂಕಿ ಸ್ವಲ್ಪ ದೂರ ಕರ್ಕೊಂಡು ಹೋಗಿದ್ದರು. ದಾರಿಯಲ್ಲಿ ಶರತ್ ಅಕ್ಕನಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಶರತ್ ಫೋನ್ ಪರಿಶೀಲಿಸಿ ಇವನು ನಟ ಅಲ್ಲ ಅಂತ ಬಿಟ್ಟು ಕಳಿಸಿದ್ದಾರೆ.
ಯಾರು, ಯಾಕೆ, ಏನಾಗುತ್ತಿದೆ ಅಂತ ಗೊತ್ತಾಗದೇ ಶರತ್ ದಿಗ್ಬಾಂತರಾಗಿದ್ದಾರೆ. ಕೆಲ ಹೊತ್ತು ಸುಧಾರಿಸಿಕೊಂಡು ಬ್ಯಾಡರಹಳ್ಳಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಸದ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಪುಂಡರ್ ಗ್ಯಾಂಗ್ ಪತ್ತೆಗೆ ಬಲೆಬೀಸಿದ್ದಾರೆ.
ಪ್ರೀತಿಸಿದವಳನ್ನ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಹಾಕಿದ್ದ ವ್ಯಕ್ತಿ ಸೇರಿ ನಾಲ್ವರ ಬಂಧನ
ಕೌಟುಂಬಿಕ ವಿಚಾರಕ್ಕೆ ಅತ್ತೆಗೆ ಚಾಕು ಹಾಕಿದ್ಧ ವ್ಯಕ್ತಿ ಸೇರಿದಂತೆ ನಾಲ್ವರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಮನಿಕಿರಣ್, ಅಭಿಷೇಕ್, ಮನಿರಾಜ್ ಮತ್ತು ಮನಿವಣ್ಣನ್ ಬಂಧಿತರು. ಮಾ.25ರಂದು ಮಾಗೇಶ್ವರಿ ಎಂಬುವರ ಮನೆಯಲ್ಲಿ ಘಟನೆ ನಡೆದಿತ್ತು.
ಕಿರಣ್ಗೆ ಮದುವೆಯಾಗಿದ್ದರೂ ಮಾಗೇಶ್ವರಿ ಮೊಮ್ಮಗಳಾದ ಚಾರುಲತಾಳನ್ನ ಕರೆದುಕೊಂಡು ಹೋಗಿದ್ದ. ಕೆಲ ದಿನಗಳ ಹಿಂದೆ ಕಿರಣ್ ಬಿಟ್ಟು ಬಂದಿದ್ದ ಚಾರುಲತಾ ಅಜ್ಜಿ ಜೊತೆ ಇದ್ದಳು. ಮಾ.25ರಂದು ಚಾರುಲತಾ ಹುಡುಕಿ ಬಂದಿದ್ದ ಕಿರಣ್ ಮತ್ತು ಫ್ಯಾಮಿಲಿ ಬಲವಂತವಾಗಿ ಆಕೆಯನ್ನ ಕಿಡ್ನ್ಯಾಪ್ ಮಾಡಿ ಕರೆದುಕೊಂಡು ಹೋಗಿದ್ದರು. ತಡೆಯಲು ಬಂದ ವೃದ್ಧೆ ಮಾಗೇಶ್ವರಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದರು. ಸದ್ಯ ನಾಲ್ವರನ್ನು ಬಂಧಿಸಲಾಗಿದೆ.
ವಾಷಿಂಗ್ಟನ್, ಮಾರ್ಚ್ 28: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಳ ಮತ್ತು ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶಾಕಿಂಗ್ ಹೇಳಿಕೆ ನೀಡಿದ್ದು, ಮೊಜ್ತಬಾ ಖಮೇನಿ ಸತ್ತಿರಬಹುದು ಅಥವಾ ತುಂಬ ಕೆಟ್ಟ ಸ್ಥಿತಿಯಲ್ಲಿರಬಹುದು ಎಂದು ಹೇಳಿದ್ದಾರೆ.
“ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್ನ ನೂತನ ನಾಯಕ ಸತ್ತಿದ್ದಾರೆ ಎಂದು ನನಗೆ ಅನಿಸುತ್ತದೆ. ಅಥವಾ ಅವರು ಅತ್ಯಂತ ಕೆಟ್ಟ ಸ್ಥಿತಿಯಲ್ಲಿಯೂ ಇರಬಹುದು. ಏಕೆಂದರೆ ಅವರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ” ಎಂದು ಟ್ರಂಪ್ ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಭಾರತೀಯ ಯುವಜನತೆಯಲ್ಲಿ ವಿಮಾನ ನಿಲ್ದಾಣದ ಉದ್ಯೋಗಗಳ ಬಗ್ಗೆ ಯಾವಾಗಲೂ ಒಂದು ರೀತಿಯ ಕ್ರೇಜ್ ಇರುತ್ತದೆ. ಅತ್ಯಾಧುನಿಕ ಕೆಲಸದ ವಾತಾವರಣ, ವೃತ್ತಿಪರ ಗೌರವ ಮತ್ತು ಆಕರ್ಷಕ ವೇತನ ಶ್ರೇಣಿಯು ಈ ಕ್ಷೇತ್ರವನ್ನು ಯುವಕರ ನೆಚ್ಚಿನ ಆಯ್ಕೆಯನ್ನಾಗಿ ಮಾಡಿದೆ. ನೀವು ವಿಮಾನ ನಿಲ್ದಾಣದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸಿದ್ದರೆ, ಅಲ್ಲಿ ಲಭ್ಯವಿರುವ ವಿವಿಧ ಹುದ್ದೆಗಳು ಮತ್ತು ಅವುಗಳನ್ನು ಪಡೆಯುವ ಹಾದಿಯ ಬಗ್ಗೆ ಸವಿಸ್ತಾರವಾದ ಮಾಹಿತಿ ಇಲ್ಲಿದೆ
ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಪ್ರಮುಖ ಹುದ್ದೆಗಳು:
ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಯು ಕೇವಲ ವಿಮಾನ ಹಾರಾಟಕ್ಕೆ ಸೀಮಿತವಾಗಿಲ್ಲ; ಇದರ ಹಿಂದೆ ಸಾವಿರಾರು ಜನರ ಶ್ರಮವಿರುತ್ತದೆ. ಮುಖ್ಯವಾಗಿ ನೆಲದ ಸಿಬ್ಬಂದಿ (Ground Staff) ವಿಭಾಗದಲ್ಲಿ ಚೆಕ್-ಇನ್, ಬೋರ್ಡಿಂಗ್ ಮತ್ತು ಸಹಾಯ ಕೇಂದ್ರದ ಕೆಲಸಗಳಿರುತ್ತವೆ. ಇನ್ನು ಆಕಾಶದಲ್ಲಿ ಹಾರಾಡುವ ಕನಸುಳ್ಳವರಿಗೆ ಕ್ಯಾಬಿನ್ ಸಿಬ್ಬಂದಿ (ಗಗನಸಖಿ/ವಿಮಾನ ಪರಿಚಾರಕಿ) ಹುದ್ದೆಗಳಿವೆ. ಇವುಗಳ ಜೊತೆಗೆ ಭದ್ರತಾ ವಿಭಾಗದಲ್ಲಿ CISF ಸಿಬ್ಬಂದಿ, ಸರಕು ಮತ್ತು ಲಾಜಿಸ್ಟಿಕ್ಸ್ ವಿಭಾಗ, ಹಾಗೂ ತಾಂತ್ರಿಕ ವಿಭಾಗದಲ್ಲಿ ಎಂಜಿನಿಯರ್ಗಳು ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ (ATC) ಸಿಬ್ಬಂದಿ ಕೆಲಸ ಮಾಡುತ್ತಾರೆ.
ಉದ್ಯೋಗ ಪಡೆಯುವುದು ಹೇಗೆ? ಆಯ್ಕೆ ಪ್ರಕ್ರಿಯೆ ಏನು?
ವಿಮಾನ ನಿಲ್ದಾಣದಲ್ಲಿ ಕೆಲಸ ಪಡೆಯಲು ಪ್ರಮುಖವಾಗಿ ಮೂರು ಮಾರ್ಗಗಳಿವೆ. ಮೊದಲನೆಯದಾಗಿ, ಇಂಡಿಗೋ, ಏರ್ ಇಂಡಿಯಾದಂತಹ ಖಾಸಗಿ ವಿಮಾನಯಾನ ಸಂಸ್ಥೆಗಳು ತಮ್ಮ ಅಧಿಕೃತ ವೆಬ್ಸೈಟ್ಗಳ ಮೂಲಕ ನೇರ ನೇಮಕಾತಿ ನಡೆಸುತ್ತವೆ. ಎರಡನೆಯದಾಗಿ, ಸರ್ಕಾರಿ ಸ್ವಾಮ್ಯದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಕಾಲಕಾಲಕ್ಕೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತದೆ. ಮೂರನೆಯದಾಗಿ, ಭದ್ರತಾ ಹುದ್ದೆಗಳಿಗೆ SSC ಅಥವಾ ಇತರ ಸರ್ಕಾರಿ ಪರೀಕ್ಷೆಗಳ ಮೂಲಕ CISF ಸಿಬ್ಬಂದಿಯನ್ನು ಆಯ್ಕೆ ಮಾಡಲಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮೂರನೇ ವ್ಯಕ್ತಿಯ ಕಂಪನಿಗಳು ಕೂಡ ನೆಲದ ಸಿಬ್ಬಂದಿಯನ್ನು ನೇಮಿಸಿಕೊಳ್ಳುತ್ತವೆ.
2026 ರ ಐಪಿಎಲ್ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಲೀಗ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಬೆಂಗಳೂರಿನಲ್ಲಿ ಎದುರಿಸುತ್ತಿದೆ. ತವರಿನ ಅಭಿಮಾನಿಗಳ ಮುಂದೆ ಅಬ್ಬರಿಸಲು ಆರ್ಸಿಬಿಯ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಕೂಡ ಸರ್ವ ಸನ್ನದ್ಧರಾಗಿದ್ದಾರೆ. ಅಭಿಮಾನಿಗಳು ಕೂಡ ಅವರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ ತೆಲುಗು ಮೂಲದ ಯುವತಿಯೊಬ್ಬಳು ವಿರಾಟ್ ಕೊಹ್ಲಿಗೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾಳೆ.
ಇನ್ಸ್ಟಾಗ್ರಾಮ್ನಲ್ಲಿ ‘cricminaati’ ಎಂಬ ಹೆಸರಿನ ಖಾತೆ ಹೊಂದಿರುವ ಮಹಿಳೆಯೊಬ್ಬರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು, ‘ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದು ಹೇಳಿದನ್ನು ನಿವ್ಯಾರು ನಂಬಿರಲಿಲ್ಲ. ಎಲ್ಲರೂ ನನ್ನನ್ನು ಟ್ರೋಲ್ ಮಾಡಿದ್ದರು. ಆದರೀಗ ನೀವು ನಂಬುವಂತಹ ಸಾಕ್ಷಿಯೊಂದನ್ನು ತಂದಿದ್ದೇನೆ. ನನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿಗೆ ವಿರಾಟ್ ಕೊಹ್ಲಿಯೇ ತಂದೆ.ಇದನ್ನು ಫೇಕ್ ಮಾಡಲು ಸಾಧ್ಯ ಇಲ್ಲ ಅಲ್ವ? ನಾನು ವಿರಾಟ್ ಕೊಹ್ಲಿ ಬಗ್ಗೆ ಮಾಡಲಿರುವ ಎಲ್ಲಾ ವಿಡಿಯೋಗಳನ್ನು ನೀವು ನೋಡಬೇಕು. ಎಂದಿದ್ದಾರೆ. ಪ್ರಸ್ತುತ ಈ ಯುವತಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಾಕಷ್ಟು ವೈರಲ್ ಆಗುತ್ತಿದೆ.
ಆದರೆ ಈ ಯುವತಿ ಹಂಚಿಕೊಂಡಿರುವ ವಿಡಿಯೋದಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಹೇಳಲು ಅಸಾಧ್ಯ. ಏಕೆಂದರೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಸಲುವಾಗಿ ಕೆಲವರು ಈ ರೀತಿಯ ಮಾರ್ಗಗಳನ್ನು ಬಳಸುತ್ತಾರೆ. ಪ್ರಸಿದ್ಧ ವ್ಯಕ್ತಿಗಳ ಜೊತೆ ನನಗೆ ನಂಟಿದೆ ಎಂದು ಹೇಳಿಕೊಳ್ಳುವ ಮೂಲಕ ಅವರು ವೈರಲ್ ಆಗಲು ಬಯುತ್ತಾರೆ. ಅಂತಹವರ ಸಾಲಿಗೆ ಈ ಯುವತಿಯೂ ಸೇರಿರಬಹುದು ಎಂಬುದು ನೆಟ್ಟಿಗರ ಅಭಿಪ್ರಾಯವಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಕೊಹ್ಲಿ ಅಭಿಮಾನಿಗಳು ಈ ಯುವತಿಯ ವಿರುದ್ಧ ಕೆಂಡಕಾರಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಕಲೇಶಪುರ, ಮಾ.28: ಸಿನೆಮಾಗಳ ಚಿತ್ರೀಕರಣಕ್ಕೆ ಹೆಸರಾದ ಹಾಸನದ ಸಕಲೇಶಪುರ ತಾಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ತಾರಕಕ್ಕೇರಿ ಪೊಲೀಸ್ ಠಾಣೆಯ ಮುಂದೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಬೆಟ್ಟದ ಭೈರವೇಶ್ವರ ದೇಗುಲದ ಸುಂದರ ಪರಿಸರದಲ್ಲಿ ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ಶೂಟಿಂಗ್ನಲ್ಲಿ ನಿರತವಾಗಿದ್ದವು. ಈ ವೇಳೆ ಅಲ್ಲಿಗೆ ಬಂದ ಸ್ಥಳೀಯ ಕೆಲ ಕಿಡಿಗೇಡಿಗಳು, “ದೇವಸ್ಥಾನದ ಪಾವಿತ್ರತೆಗೆ ಧಕ್ಕೆ ತರುತ್ತಿದ್ದೀರಿ” ಎಂದು ಆರೋಪಿಸಿ ವಿನಾಕಾರಣ ಗಲಾಟೆ ಆರಂಭಿಸಿದ್ದಾರೆ. ಫೋಟೋಗ್ರಾಫರ್ಗಳು ಕೈಮುಗಿದು ಬೇಡಿಕೊಂಡರೂ ಕೇಳದ ಪುಂಡರು ಚೇತನ್, ಯಶು ಮತ್ತು ಸೋಮಶೇಖರ್ ಎಂಬುವವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ.
ಹಲ್ಲೆಕೋರರು ಲಕ್ಷಾಂತರ ರೂಪಾಯಿ ಬೆಲೆಯ ಕ್ಯಾಮೆರಾ, ಮೊಬೈಲ್ಗಳನ್ನು ಜಖಂಗೊಳಿಸಿದ್ದಾರೆ. ಮೇಕಪ್ ಆರ್ಟಿಸ್ಟ್ಗಳ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ದೂರು ನೀಡಲು ಸಕಲೇಶಪುರ ಗ್ರಾಮಾಂತರ ಠಾಣೆಗೆ ಬಂದಾಗ, ಪೊಲೀಸರ ಸಮ್ಮುಖದಲ್ಲೇ ಎರಡೂ ಗುಂಪುಗಳ ನಡುವೆ ಮತ್ತೆ ವಾಗ್ವಾದ ನಡೆದು ಮಾರಾಮಾರಿ ಸಂಭವಿಸಿದೆ. ಹಲ್ಲೆಗೊಳಗಾದ ಫೋಟೋಗ್ರಾಫರ್ ಒಬ್ಬರು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೊಂದೆಡೆ ಸ್ಥಳೀಯರು, “ಇದು ಪ್ರವಾಸಿ ತಾಣವಲ್ಲ, ನಮ್ಮ ಶ್ರದ್ಧಾ ಕೇಂದ್ರ. ಇಲ್ಲಿಗೆ ಬರುವವರು ಅಸಭ್ಯ ಉಡುಗೆ ತೊಟ್ಟು ಪಾವಿತ್ರತೆ ಹಾಳು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸುತ್ತಲೂ ಬೇಲಿ ಹಾಕಿ ಧಾರ್ಮಿಕ ಕೇಂದ್ರವನ್ನು ರಕ್ಷಿಸುವಂತೆ ಅವರು ಒತ್ತಾಯಿಸಿದ್ದಾರೆ. ಸದ್ಯ ಸಕಲೇಶಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಇನ್ನು ದೇವಾಲಯದಲ್ಲಿ ಫೋಟೋಶೂಟ್ ಮಾಡುವಾಗ ಕೆಲವೊಂದು ಕ್ರಮಗಳನ್ನು ಹಾಗೂ ನಿಯಮಗಳನ್ನು ಪಾಲಿಸಲೇಬೇಕು. ದೇವಸ್ಥಾನಗಳು ಕೇವಲ ಪ್ರವಾಸಿ ತಾಣಗಳಲ್ಲ, ಅವು ನಂಬಿಕೆಯ ಕೇಂದ್ರಗಳು. ಅಲ್ಲಿ ಶೂಟಿಂಗ್ ಮಾಡುವಾಗ ಈ ಕೆಳಗಿನ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಫೋಟೋಗ್ರಾಫರ್ಗಳು ಮತ್ತು ಜೋಡಿಗಳ ಕರ್ತವ್ಯ. ದೇವಸ್ಥಾನದ ಆಡಳಿತ ಮಂಡಳಿ ಅಥವಾ ಮುಜರಾಯಿ ಇಲಾಖೆಯಿಂದ ಲಿಖಿತ ಅನುಮತಿ ಪಡೆಯುವುದು ಒಳಿತು. ಖಾಸಗಿ ದೇವಸ್ಥಾನವಾಗಿದ್ದರೆ ಅಲ್ಲಿನ ಅರ್ಚಕರು ಅಥವಾ ಧರ್ಮದರ್ಶಿಗಳ ಗಮನಕ್ಕೆ ತರಬೇಕು. ಒಂದು ವೇಳೆ ಈ ಕೆಲಸ ಮಾಡದಿದ್ದರೆ ಇಂತಹ ಘಟನೆಗಳು ನಡೆಯುತ್ತದೆ. ಗರ್ಭಗುಡಿಯ ಒಳಗೆ ಅಥವಾ ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಧರಿಸಿ ಶೂಟಿಂಗ್ ಮಾಡಬಾರದು. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಭಂಗಿಗಳಲ್ಲಿ ಫೋಟೋ ತೆಗೆಯಬಾರದು ಎಂಬ ಬಗ್ಗೆ ಮೊದಲೇ ಆಲೋಚನೆ ಇರಬೇಕು. ದೇವಸ್ಥಾನದ ಮರ್ಯಾದೆಗೆ ತಕ್ಕಂತೆ ಸಾಂಪ್ರದಾಯಿಕ ಅಥವಾ ಸಭ್ಯ ಉಡುಗೆಗಳನ್ನು ತೊಡುವುದು ಉತ್ತಮ. ಅತಿಯಾದ ಮಾಡರ್ನ್ ಅಥವಾ ಅಸಭ್ಯ ಉಡುಗೆಗಳು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಬಹುದು.
ತುಮಕೂರು: ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಬಯಸುವವರಿಗೆ ತುಮಕೂರು ಮಹಾನಗರ ಪಾಲಿಕೆಯು ಸಿಹಿ ಸುದ್ದಿ ನೀಡಿದೆ. ನಗರದ ಸ್ವಚ್ಛತೆ ಮತ್ತು ನಾಗರಿಕ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಖಾಲಿ ಇರುವ 238 ಪೌರಕಾರ್ಮಿಕ (ನಾಗರಿಕ ಸೇವಕ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ ಮತ್ತು ಸ್ಥಳ:
ತುಮಕೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 238 ಪೌರಕಾರ್ಮಿಕ ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಸರ್ಕಾರದ ಮಾನದಂಡಗಳ ಪ್ರಕಾರ ಈ ಹುದ್ದೆಗಳಿಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಅರ್ಹತಾ ಮಾನದಂಡಗಳು ಮತ್ತು ವಯೋಮಿತಿ:
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 50 ವರ್ಷ ವಯೋಮಿತಿಯ ಒಳಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಮಾನದಂಡಗಳನ್ನು ಪೂರೈಸಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಈ ನೇಮಕಾತಿಯು ಆಫ್ಲೈನ್ (Offline) ಪ್ರಕ್ರಿಯೆಯ ಮೂಲಕ ನಡೆಯಲಿದೆ. ಆಸಕ್ತರು ಈ ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು:
ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಸರಿಯಾದ ಮಾಹಿತಿಗಳನ್ನು ಭರ್ತಿ ಮಾಡಿ.
ಅರ್ಜಿಯೊಂದಿಗೆ ನಿಮ್ಮ ಐಡಿ ಪ್ರೂಫ್, ವಯಸ್ಸಿನ ದಾಖಲೆ, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋಗಳನ್ನು ಲಗತ್ತಿಸಿ.
ಭರ್ತಿ ಮಾಡಿದ ಅರ್ಜಿಯನ್ನು ತುಮಕೂರು ಮಹಾನಗರ ಪಾಲಿಕೆ/ಪುರಸಭೆ, ತಿಪಟೂರು/ಶಿರಾ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಪೌರಕಾರ್ಮಿಕ ಹುದ್ದೆಗಳ ನೇಮಕಾತಿಯು ಸಾಮಾನ್ಯವಾಗಿ ಸ್ಥಳೀಯವಾಗಿ ನಡೆಯುವುದರಿಂದ, ಅರ್ಜಿ ನಮೂನೆಯನ್ನು ಪಡೆಯಲು ಈ ಕೆಳಗಿನ ಮಾರ್ಗಗಳನ್ನು ಬಳಸಬಹುದು:
ನೇರ ಭೇಟಿ: ತುಮಕೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಅಥವಾ ನಿಮ್ಮ ಹತ್ತಿರದ ಪುರಸಭೆ ಕಚೇರಿಯ (ತಿಪಟೂರು/ಶಿರಾ) ‘ಆಡಳಿತ ವಿಭಾಗ’ ಅಥವಾ **’ನೇಮಕಾತಿ ಶಾಖೆ’**ಗೆ ಭೇಟಿ ನೀಡಿ ಅಧಿಕೃತ ಅರ್ಜಿ ನಮೂನೆಯನ್ನು ಪಡೆಯಬಹುದು.
ವೆಬ್ಸೈಟ್: ತುಮಕೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್ಸೈಟ್ www.tumkurucity.mrc.gov.in ನಲ್ಲಿ ‘Recruitments’ ಅಥವಾ ‘Notifications’ ವಿಭಾಗವನ್ನು ಪರಿಶೀಲಿಸಿ ಅಲ್ಲಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
‘ಜನ ನಾಯಗನ್’ (Jana Nayagan) ಸಿನಿಮಾಕ್ಕೆ ಬಂದಿರುವ ಪರಿಸ್ಥಿತಿ ಬಲು ಶೋಚನೀಯ ಮಾತ್ರವಲ್ಲದೆ, ರಾಜಕೀಯ ಹೇಗೆ ಸಿನಿಮಾರಂಗವನ್ನು, ಸಿನಿಮಾವನ್ನು ನಿಯಂತ್ರಿಸುತ್ತದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಒಂದೆಡೆ ಘೋರಾತಿ ಘೋರ ಹಿಂಸೆ ಇರುವ ಸಿನಿಮಾಗಳಿಗೆ ಸುಲಭವಾಗಿ ಸೆನ್ಸಾರ್ ಸಿಕ್ಕು ಬಿಡುಗಡೆ ಆಗುತ್ತಿದ್ದರೆ, ‘ಜನ ನಾಯಗನ್’ ಸಿನಿಮಾ ಅನ್ನು ತಿಂಗಳುಗಳ ಕಾಲ ಕ್ಷುಲ್ಲಕ ಕಾರಣಗಳನ್ನು ನೀಡಿ ತಡೆ ಹಿಡಿಯಲಾಗಿದೆ. ‘ಜನ ನಾಯಗನ್’ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗಿದ್ದು, ಈ ಸಿನಿಮಾ ಬಿಡುಗಡೆ ಆದರೆ ಅವರಿಗೆ ರಾಜಕೀಯವಾಗಿ ಸಹಾಯ ಆಗುತ್ತದೆ ಎಂಬ ಕಾರಣಕ್ಕೆ ಸಿನಿಮಾವನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿದಿರುವುದು ಸ್ಪಷ್ಟ. ಆದರೆ ಇದರಿಂದ ಬೇಸತ್ತಿರುವ ನಿರ್ಮಾಣ ಸಂಸ್ಥೆಯಾದ ಕೆವಿಎನ್, ‘ಜನ ನಾಯಗನ್’ ಮೇಲೆ ಆಸೆಯನ್ನೇ ಬಿಟ್ಟಿದೆಯಂತೆ.
ಇದೀಗ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆಗಳು ಘೋಷಣೆ ಆಗಿದ್ದು ಚುನಾವಣೆ ಮುಗಿವ ವರೆಗೆ ಅಂದರೆ ಮೇ 6 ರವರೆಗೆ ಸಿನಿಮಾ ಬಿಡುಗಡೆ ಮಾಡುವಂತಿಲ್ಲ. ಅದಾದ ಬಳಿಕವಷ್ಟೆ ಸಿನಿಮಾವನ್ನು ಬಿಡುಗಡೆ ಮಾಡಬೇಕಿದೆ. ಆದರೆ ‘ಜನ ನಾಯಗನ್’ ಸುತ್ತುವರೆದಿರುವ ರಾಜಕೀಯದಿಂದ ಬೇಸತ್ತಿರುವ ಕೆವಿಎನ್ ನಿರ್ಮಾಣ ಸಂಸ್ಥೆ ಸಿನಿಮಾದ ಮೇಲೆ ಆಸೆಯನ್ನೇ ಕೈಬಿಟ್ಟಿದ್ದು, ಅದರ ಬದಲಿಗೆ ‘ಟಾಕ್ಸಿಕ್’ ಸಿನಿಮಾ ಮೇಲೆ ಗಮನ ಹರಿಸಿದೆ.
ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಮೇ 4ಕ್ಕೆ ಫಲಿತಾಂಶ ಮತ್ತು ಮೇ 6ಕ್ಕೆ ಚುನಾವಣಾ ನೀತಿ ಸಂಹಿತೆ ಅಂತ್ಯವಾಗಲಿದೆ. ಏಪ್ರಿಲ್ 23 ರಂದು ಮತದಾನ ಮುಗಿದ ಕೂಡಲೇ ಸಿನಿಮಾವನ್ನು ಬಿಡುಗಡೆ ಮಾಡುವ ಆಲೋಚನೆಯೂ ಕೆವಿಎನ್ಗೆ ಇದೆ. ಒಂದೊಮ್ಮೆ ಫಲಿತಾಂಶ ಬಂದ ಬಳಿಕ ಸಿನಿಮಾ ಬಿಡುಗಡೆ ಮಾಡಿದರೆ, ಫಲಿತಾಂಶದಲ್ಲಿ ವಿಜಯ್ ಪಕ್ಷಕ್ಕೆ ಹಿನ್ನಡೆ ಆಗಿದ್ದರೆ, ಅದರ ಪ್ರಭಾವ ಸಿನಿಮಾದ ಮೇಲೂ ಬೀಳಲಿದೆ. ಹಾಗಾಗಿ ಫಲಿತಾಂಶ ಬರುವ ಮೊದಲೇ ಸಿನಿಮಾವನ್ನು ಬಿಡುಗಡೆ ಮಾಡುವುದು ಕೆವಿಎನ್ನ ಯೋಚನೆ. ಅಲ್ಲದೆ, ಇದರಿಂದ ‘ಟಾಕ್ಸಿಕ್’ ಮತ್ತು ‘ಜನ ನಾಯಗನ್’ ಬಿಡುಗಡೆ ಮಧ್ಯೆ ತುಸು ಹೆಚ್ಚು ಗ್ಯಾಪ್ ದೊರೆತಂದೆ ಆಗಲಿದೆ.
‘ಟಾಕ್ಸಿಕ್’ ಸಿನಿಮಾ ಜೂನ್ 04ರಂದು ಬಿಡುಗಡೆ ಆಗಲಿದೆ. ‘ಜನ ನಾಯಗನ್’ಗೆ ಹೋಲಿಸಿದರೆ ‘ಟಾಕ್ಸಿಕ್’ಗೆ ಬ್ಲಾಕ್ ಬಸ್ಟರ್ ಆಗುವ ಸಾಮರ್ಥ್ಯ ಹೆಚ್ಚಿದೆಯಂತೆ. ಹಾಗಾಗಿ ತನ್ನ ಗಮನವನ್ನು ‘ಜನ ನಾಯಗನ್’ ಬದಲಿಗೆ ‘ಟಾಕ್ಸಿಕ್’ ಮೇಲೆ ಹರಿಸಲಿದೆ ಕೆವಿಎನ್. ‘ಟಾಕ್ಸಿಕ್’ ಸಿನಿಮಾಕ್ಕೆ ಭರ್ಜರಿ ಪ್ರಚಾರ ನೀಡಿ, ಭಾರಿ ಅದ್ಧೂರಿಯಾಗಿ ಸಿನಿಮಾವನ್ನು ಬಿಡುಗಡೆ ಮಾಡುವ ಆಲೋಚನೆಯಲ್ಲಿ ಚಿತ್ರತಂಡ ಇದೆ.
ಕೆವಿಎನ್ ನಿರ್ಮಾಣ ಸಂಸ್ಥೆ ಪ್ರಸ್ತುತ ಮೂರು ದೊಡ್ಡ ಸಿನಿಮಾಗಳ ಮೇಲೆ ಬಂಡವಾಳ ಹೂಡಿದ್ದು, ಮೂರೂ ಸಿನಿಮಾಗಳು ಒಂದಲ್ಲ ಒಂದು ರೀತಿಯ ಸಂಕಷ್ಟಕ್ಕೆ ಸಿಲುಕಿವೆ. ‘ಜನ ನಾಯಗನ್’ ಸಿನಿಮಾಕ್ಕೆ ರಾಜಕೀಯ ಸಂಕಷ್ಟ ಎದುರಾಗಿದೆ. ‘ಟಾಕ್ಸಿಕ್’ ಸಿನಿಮಾಕ್ಕೆ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಸಮಸ್ಯೆ ಆಗಿದೆ. ಇನ್ನು ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾಕ್ಕೆ ಹಾಡಿನ ಸಂಕಷ್ಟ ಎದುರಾಗಿದೆ. ಅಂದಹಾಗೆ ‘ಕೆಡಿ’ ಸಿನಿಮಾ ಏಪ್ರಿಲ್ 30ಕ್ಕೆ ಬಿಡುಗಡೆ ಆಗಲಿದೆ.