ಉಘೇ ಉಘೇ ಮಾದಪ್ಪ: ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಚಾಮರಾಜನಗರ, ಮಾರ್ಚ್ 28: ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಕ್ಷೇತ್ರಕ್ಕೆ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಸರಣಿ ರಜಾ ದಿನಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಆರಾಧ್ಯ ದೈವ ಮಾದಪ್ಪನಿಗೆ ಒಟ್ಟು ಕೋಟ್ಯಂತರ ರೂಪಾಯಿ ಕಾಣಿಕೆ ಸಮರ್ಪಣೆಯಾಗಿದೆ. ಕೇವಲ 23 ದಿನಗಳ ಅವಧಿಯಲ್ಲಿ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.33 ಕೋಟಿ ರೂಪಾಯಿ ನಗದು ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಮಲೆಮಹದೇಶ್ವರ…