ಈ ವಾರ ಕನ್ನಡದ ಎರಡು ದೊಡ್ಡ ಸಿನಿಮಾಗಳು ರಿಲೀಸ್; ಎರಡರಲ್ಲೂ ರಚಿತಾ ನಟನೆ – Kannada News | Rachita Ram’s Double Treat: Cult and Landlord Hit Theaters Jan 23

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಸಿನಿಮಾಗಳು ರಿಲೀಸ್ ಆಗಿ ಅಬ್ಬರಿಸಿದವು. ಈಗ ಜನವರಿ 26 ಬರುತ್ತಿದೆ. ಇದರ ಲಾಭ ಪಡೆಯಲು ಕನ್ನಡದ ನಿರ್ಮಾಪಕರು ಮುಂದಾಗಿದ್ದಾರೆ. ಜನವರಿ 23ರಂದು ಕನ್ನಡದ ಎರಡು ಪ್ರಮುಖ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದು ಎ ಪ್ರಮಾಣ ಪತ್ರ ಪಡೆದ ಸಿನಿಮಾ (Cinema) ಆದರೆ ಮತ್ತೊಂದು ಯುಎ ಪ್ರಮಾಣ ಪತ್ರ ಪಡೆದ ಚಿತ್ರ. ಈ ಎರಡೂ ಸಿನಿಮಾಗಳು ಧೂಳೆಬ್ಬಿಸಲು ರೆಡಿ ಆಗಿದೆ.

ಕಲ್ಟ್

‘ಉಪಾಧ್ಯಕ್ಷ’ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದ ಅನಿಲ್ ಕುಮಾರ್ ಅವರು ‘ಕಲ್ಟ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ರಾಜಕಾರಣಿ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಹೀರೋ. ರಚಿತಾ ರಾಮ್, ಮಲೈಕಾ ವಾಸುಪಾಲ್, ರಂಗಾಯಣ ರಘು ಮೊದಲಾದವರು ನಟಿಸಿದ್ದಾರೆ.

ಈ ಚಿತ್ರ ‘ಎ’ ಪ್ರಮಾಣಪತ್ರ ಪಡೆದುಕೊಂಡಿದೆ. ಸಿನಿಮಾದ ಅವಧಿ 2 ಗಂಟೆ 43 ನಿಮಿಷ ಇದೆ. ಡ್ರಾಮಾ ಹಾಗೂ ರೊಮ್ಯಾಂಟಿಕ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ರಚಿತಾಗೆ ಎರಡು ಶೇಡ್ ಹಾಗೂ ಝೈದ್ ಖಾನ್​​ಗೆ ಮೂರು ಶೇಡ್ ಇದೆ ಎಂದು ತಂಡ ಹೇಳಿದೆ. ಜನವರಿ 23ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಟ್ರೇಲರ್ ಮೂಲಕ ಸಿನಿಮಾ ಈಗಾಗಲೇ ಗಮನ ಸೆಳೆದಿದೆ.

ಲ್ಯಾಂಡ್ ಲಾರ್ಡ್

ಜಡೇಶ್ ಕುಮಾರ್ ಹಂಪಿ ನಿರ್ದೇಶನದ ‘ಲ್ಯಾಂಡ್ ಲಾರ್ಡ್’ ಸಿನಿಮಾ ಕೂಡ ಜನವರಿ 23ಕ್ಕೆ ತೆರೆಗೆ ಬರುತ್ತಿದೆ. ದುನಿಯಾ ವಿಜಯ್ ಅವರು ಲ್ಯಾಂಡ್ ಲಾರ್ಡ್ ಅಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಚಿತ್ರಕ್ಕೆ ರಚಿತಾ ರಾಮ್ ನಾಯಕಿ. ರಾಜ್ ಬಿ ಶೆಟ್ಟಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ರಾಕೇಶ್ ಅಡಿಗ, ಅಚ್ಯುತ್ ಕುಮಾರ್ ಮೊಲಾದವರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್​​ಗೆ ಹಬ್ಬ

ಸತ್ಯ ಪ್ರಕಾಶ್ ನಿರ್ಮಾಣದ ಈ ಚಿತ್ರ ಜಾತಿ ತಾರತಮ್ಯದ ವಿಷಯವನ್ನು ಹೇಳಲಿದೆ ಎನ್ನಲಾಗಿದೆ. ಈಗಾಗಲೇ ಸಿನಿಮಾದ ಹಾಡುಗಳು ಮೆಚ್ಚುಗೆ ಪಡೆದಿವೆ. ಟ್ರೇಲರ್ ಕೂಡ ರಿಲೀಸ್ ಆಗಿ ಭೇಷ್ ಎನಿಸಿಕೊಂಡಿದೆ. ರಾಜ್ ಬಿ ಶೆಟ್ಟಿ ಅವರ ಡಿಫರೆಂಟ್ ಲುಕ್ ಗಮನ ಸೆಳೆಯೋ ರೀತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ: ಹರಿಯಾಣ ವ್ಯಕ್ತಿ ಅರೆಸ್ಟ್​​ – Kannada News | Bengaluru Gym Trainer Harassed by Haryana Man, Accused Arrested

ಬೆಂಗಳೂರು, ಜನವರಿ 21: ಯುವತಿಗೆ ಅಶ್ಲೀಲ ಮೆಸೇಜ್​ ಮಾಡುತ್ತಿದ್ದ ಹರಿಯಾಣ ಮೂಲದ ಸುಧೀರ್ ಕುಮಾರ್‌ ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​ ಆಗಿರುವ ಯುವತಿಯನ್ನುಇನ್​ಸ್ಟಾಗ್ರಾಂನಲ್ಲಿ ಫಾಲೋ ಮಾಡಿದ್ದ ಆರೋಪಿ ಅಶ್ಲೀಲ ಮೆಸೇಜ್ ಮಾಡ್ತಿದ್ದ. ಲೈಂಗಿಕವಾಗಿ ಪ್ರಚೋದಿಸುವ ಮೆಸೇಜ್​ ಮಾಡಿ ಹಿಂಸೆ ಕೊಡ್ತಿದ್ದ. ನಂತರ ಯುವತಿಗಾಗಿ ಹರಿಯಾಣದಿಂದ ಬೆಂಗಳೂರಿಗೆ ಬಂದಿದ್ದ ಈತ, ಬೆಂಗಳೂರಿಗೆ ಬಂದು ಜಿಮ್ ಹಾಗೂ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರಿಗೆ ಯುವತಿ ದೂರು ನೀಡಿದ್ದು, ಸದ್ಯ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Vastu for Wedding Cards: ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸುವ ಮುನ್ನ ಈ ವಾಸ್ತು ನಿಯಮ ತಿಳಿದುಕೊಳ್ಳಿ – Kannada News | Vastu for Wedding Cards: Auspicious Colors and Designs for a Blessed Marriage

ಸನಾತನ ಧರ್ಮದ ಗ್ರಂಥಗಳಲ್ಲಿ ಮದುವೆ ಸೇರಿದಂತೆ 16 ಸಂಸ್ಕಾರಗಳನ್ನು ವಿವರಿಸಲಾಗಿದೆ. ಅವುಗಳಲ್ಲಿ ವಿವಾಹವನ್ನು ಮಾನವನ ಜೀವನದ ಅತ್ಯಂತ ಪವಿತ್ರ ಮತ್ತು ಮಹತ್ವದ ಹಂತವೆಂದು ಪರಿಗಣಿಸಲಾಗುತ್ತದೆ. ಈ ಕಾರಣಕ್ಕೇ ಮದುವೆಯ ಆಮಂತ್ರಣ ಪತ್ರಿಕೆಗೂ ವಿಶೇಷ ಮಹತ್ವವಿದೆ. ಅದು ಕೇವಲ ಆಮಂತ್ರಣ ಪತ್ರವಲ್ಲ, ಬದಲಾಗಿ ಹೊಸ ಜೀವನದ ಆರಂಭವನ್ನು ಘೋಷಿಸುವ ಮೊದಲ ಅಧಿಕೃತ ಸಂದೇಶವಾಗಿದೆ.

ಪ್ರಾಚೀನ ವಾಸ್ತು ಶಾಸ್ತ್ರವು ಜೀವನದ ಎಲ್ಲ ಹಂತಗಳಿಗೂ ಮಾರ್ಗದರ್ಶನ ನೀಡುವ ವಿಜ್ಞಾನವಾಗಿದೆ. ಮದುವೆಯ ಆಮಂತ್ರಣ ಪತ್ರಿಕೆ ಹೇಗಿರಬೇಕು, ಅದರಲ್ಲಿ ಯಾವ ಬಣ್ಣಗಳು, ಪದಗಳು ಮತ್ತು ಚಿಹ್ನೆಗಳು ಇರಬೇಕು ಎಂಬುದನ್ನು ಸಹ ವಾಸ್ತು ಶಾಸ್ತ್ರ ವಿವರಿಸುತ್ತದೆ. ವಾಸ್ತು ನಿಯಮಗಳನ್ನು ಪಾಲಿಸಿ ತಯಾರಿಸಿದ ಮದುವೆಯ ಕಾರ್ಡ್‌ಗಳು ಮನೆಗೆ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತವೆ ಎಂದು ನಂಬಲಾಗಿದೆ.

ಮದುವೆಯ ಆಮಂತ್ರಣ ಪತ್ರಿಕೆ ಬಣ್ಣ:

ವಾಸ್ತು ಶಾಸ್ತ್ರದ ಪ್ರಕಾರ ಮದುವೆಯ ಆಮಂತ್ರಣ ಪತ್ರಿಕೆ ಕೆಂಪು, ಹಳದಿ, ಕೇಸರಿ ಅಥವಾ ಕೆನೆ ಬಣ್ಣಗಳನ್ನು ಬಳಸುವುದು ಅತ್ಯಂತ ಶುಭಕರ. ಕೆಂಪು ಬಣ್ಣವು ಪ್ರೀತಿ, ಶಕ್ತಿ ಮತ್ತು ವೈವಾಹಿಕ ಬಂಧನದ ಸಂಕೇತವಾಗಿದೆ. ಹಳದಿ ಮತ್ತು ಕೇಸರಿ ಬಣ್ಣಗಳು ಶುಭಾರಂಭ ಮತ್ತು ಸಮೃದ್ಧಿಯನ್ನು ಸೂಚಿಸುತ್ತವೆ. ಆದರೆ ಕಪ್ಪು ಅಥವಾ ಗಾಢ ಕಂದು ಬಣ್ಣಗಳನ್ನು ಮದುವೆಯ ಕಾರ್ಡ್‌ನಲ್ಲಿ ಬಳಸುವುದನ್ನು ತಪ್ಪಿಸಬೇಕು. ಈ ಬಣ್ಣಗಳನ್ನು ನಕಾರಾತ್ಮಕತೆ ಮತ್ತು ದುಃಖದ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ:

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ದೇವರ ಚಿತ್ರಗಳು ಅಥವಾ ಶುಭ ಚಿಹ್ನೆಗಳು ಇರಬೇಕು. ವಿಶೇಷವಾಗಿ ಗಣೇಶನ ಚಿತ್ರವನ್ನು ಸೇರಿಸುವುದು ಅತ್ಯಂತ ಅಗತ್ಯವೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಿಘ್ನ ನಿವಾರಕನಾದ ಗಣೇಶನ ಆಶೀರ್ವಾದವಿಲ್ಲದೆ ಯಾವುದೇ ಶುಭ ಕಾರ್ಯ ಪೂರ್ಣವಾಗುವುದಿಲ್ಲ ಎಂಬ ನಂಬಿಕೆ ಇದೆ. ಇದಷ್ಟೇ ಅಲ್ಲದೆ, ಸ್ವಸ್ತಿಕ ಮತ್ತು ಕಲಶದಂತಹ ಶುಭ ಚಿಹ್ನೆಗಳನ್ನು ಮದುವೆಯ ಕಾರ್ಡ್‌ನಲ್ಲಿ ಬಳಸುವುದು ಒಳಿತು. ಇವುಗಳು ಸಕಾರಾತ್ಮಕ ಶಕ್ತಿಯನ್ನು ಹರಡಿ, ದಾಂಪತ್ಯ ಜೀವನ ಸುಗಮವಾಗಲು ಸಹಾಯ ಮಾಡುತ್ತವೆ ಎಂದು ನಂಬಲಾಗಿದೆ. ಅತಿಯಾಗಿ ವಿಚಿತ್ರ ಅಥವಾ ಗೊಂದಲಕಾರಿ ವಿನ್ಯಾಸಗಳನ್ನು ಬಳಸುವುದನ್ನು ತಪ್ಪಿಸುವುದು ಉತ್ತಮ.

ಇದನ್ನೂ ಓದಿ: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಬಳಸುವ ಪದಗಳು:

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಬಳಸುವ ಪದಗಳು ಬಹಳ ಮಹತ್ವದ್ದಾಗಿವೆ. ಭಾಷೆ ಶುದ್ಧವಾಗಿರಬೇಕು ಮತ್ತು ಪದಗಳು ಮೃದುವಾಗಿರಬೇಕು. ಕಠಿಣ, ಭಾರವಾದ ಅಥವಾ ನಕಾರಾತ್ಮಕ ಅರ್ಥ ನೀಡುವ ಪದಗಳನ್ನು ಬಳಸದಿರುವುದು ಒಳಿತು. ಯುದ್ಧ, ದುಃಖ ಅಥವಾ ಖಿನ್ನತೆಯನ್ನು ಸೂಚಿಸುವ ಚಿತ್ರಗಳು ಅಥವಾ ಪದಗಳು ಕಾರ್ಡ್‌ನಲ್ಲಿ ಇರಬಾರದು. ಶುಭ ಮುಹೂರ್ತ, ದಿನಾಂಕ ಮತ್ತು ಸಮಯವನ್ನು ಸ್ಪಷ್ಟವಾಗಿ ಮತ್ತು ತಪ್ಪಿಲ್ಲದಂತೆ ಮುದ್ರಿಸಬೇಕು. ಪರಂಪರೆಯ ಪ್ರಕಾರ, ಮೊದಲ ಮದುವೆಯ ಕಾರ್ಡ್ ಅನ್ನು ಕುಟುಂಬದ ದೇವತೆ ಅಥವಾ ಗಣೇಶನಿಗೆ ಸಮರ್ಪಿಸುವುದು ಅತ್ಯಂತ ಶುಭಕರವೆಂದು ಪರಿಗಣಿಸಲಾಗುತ್ತದೆ.

ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನವಜೋಡಿಯ ಫೋಟೋ:

ಇತ್ತೀಚಿನ ದಿನಗಳಲ್ಲಿ ಅನೇಕರು ಮದುವೆಯ ಕಾರ್ಡ್‌ನಲ್ಲಿ ವಧು-ವರರ ಫೋಟೋಗಳನ್ನು ಮುದ್ರಿಸುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಇದು ಸೂಕ್ತವಲ್ಲ ಎಂದು ಹೇಳಲಾಗುತ್ತದೆ. ಕಾರ್ಡ್‌ನಲ್ಲಿ ವಧು-ವರರ ಚಿತ್ರವನ್ನು ಹಾಕುವುದು ಕಣ್ಣಿಗೆ ಕಟ್ಟುವಂತೆ ಮಾಡುತ್ತದೆ ಮತ್ತು ಅನಗತ್ಯ ದೃಷ್ಟಿದೋಷಕ್ಕೆ ಕಾರಣವಾಗಬಹುದು ಎಂಬ ನಂಬಿಕೆ ಇದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿ-ಕಾಂಗ್ರೆಸ್​​ ನಡುವೆ ಧ್ವಜ ದಂಗಲ್​​: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ – Kannada News | Udupi Flag Row: BJP Opposes Congress Complaint; DC Issues Clarification

ಉಡುಪಿ ಡಿಸಿ ನಡೆಗೆ ಪರ-ವಿರೋಧ ಚರ್ಚೆ

ಉಡುಪಿ, ಜನವರಿ 21: ಶೀರೂರು ಮಠದ ಪರ್ಯಾಯ ಮಹೋತ್ವ ಹಿನ್ನೆಲೆ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಜಿಲ್ಲಾಧಿಕಾರಿಗಳಿಂದ ಚಾಲನೆ ವಿಚಾರವೀಗ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಶಾಸಕ ಯಶಪಾಲ್ ಸುವರ್ಣ ನೀಡಿದ್ದ ಕೇಸರಿ ಧ್ವಜವನ್ನು ಪಡೆದಿದ್ದ ಡಿಸಿ ಸ್ವರೂಪ ಟಿ. ಕೆ. ಅದನ್ನು ತೋರಿಸುವ ಮೂಲಕ ಪರ್ಯಾಯ ಮೆರವಣಿಗೆ ಚಾಲನೆ ನೀಡಿದ್ದರು. ಇದೇ ವಿಚಾರಕ್ಕೀಗ ಉಡುಪಿ ಜಿಲ್ಲಾ ಕಾಂಗ್ರೆಸ್​​ ಸಮಿತಿ ಆಕ್ಷೇಪ ತೆಗೆದಿದೆ. ಮುಂದುವರಿದು ಮುಖ್ಯಮಂತ್ರಿಗಳಿಗೆ ದೂರು ನೀಡಿರೋದು ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಕಾಂಗ್ರೆಸ್​​ ಆರೋಪವೇನು?

ಜ. 18ರ ಮುಂಜಾನೆ ಸುಮಾರು 3 ಗಂಟೆಗೆ ಉಡುಪಿ ನಗರದ ಜೋಡುಕಟ್ಟೆಯಿಂದ ಶ್ರೀ ಕೃಷ್ಣ ಮಠದವರೆಗೆ ಪರ್ಯಾಯ ಮೆರವಣಿಗೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಭಾಗವಹಿಸಿದ್ದರು. ಪರ್ಯಾಯ ಮೆರವಣಿಗೆ ಆರಂಭಕ್ಕೂ ಮೊದಲು ಉಡುಪಿ ಶಾಸಕರು RSS ಧ್ವಜವನ್ನು ಜಿಲ್ಲಾಧಿಕಾರಿಯವರ ಕೈಗೆ ಹಸ್ತಾಂತರಿಸಿದ್ದು, ಅದೇ. ಈ ಧ್ವಜವನ್ನು ಕೈಯಲ್ಲಿ ಹಿಡಿದು ಮೇಲಕ್ಕೆ ಎತ್ತಿ ಸಾರ್ವಜನಿಕವಾಗಿ ಡಿಸಿ ಪ್ರದರ್ಶಿಸಿದ್ದಾರೆ. ಜಿಲ್ಲಾಧಿಕಾರಿಯವರ ಈ ನಡೆ ಸರ್ಕಾರಿ ಸೇವಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ​​ ಆಗ್ರಹಿಸಿದೆ.

ಇದನ್ನೂ ಓದಿ:  ಉಡುಪಿ ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ; ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ

ಜಿಲ್ಲಾಧಿಕಾರಿಯಿಂದ ಸ್ಪಷ್ಟನೆ

ಮೆರವಣಿಗೆ ಚಾಲನೆಗೆ ಕೇಸರಿ ಧ್ವಜ ತೋರಿಸಿದ ವಿಚಾರದ ಬಗ್ಗೆ ಆಕ್ಷೇಪಗಳು ಕೇಳಿಬಂದ ಹಿನ್ನೆಲೆ ಸ್ವರೂಪ ಅವರು ಸ್ಪಷ್ಟನೆ ನೀಡಿದ್ದಾರೆ. ಪರ್ಯಾಯ ಮಹೋತ್ಸವದ ವೇಳೆ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಅದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಮಾಡಿಲ್ಲ. ಈ ವಿಚಾರವನ್ನು ಸಾರ್ವಜನಿಕರು ಗಮನಿಸಬೇಕು ಎಂದು ವಿನಂತಿಸೋದಾಗಿ ಹೇಳಿದ್ದಾರೆ.

ಕಾಂಗ್ರೆಸ್​​ ನಡೆಗೆ ಬಿಜೆಪಿ ಕಿಡಿ

ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ವಿಚಾರವಾಗಿ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿ. ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ಕಾಂಗ್ರೆಸ್‌ ನಿರಂತರ ಅಡ್ಡಗಾಲು ಹಾಕುತ್ತಿದೆ. ಪಾಕಿಸ್ತಾನಕ್ಕೆ ಜಯಕಾರ ಹಾಕುವವರನ್ನು ಬಗಲಲ್ಲಿಟ್ಟುಕೊಳ್ಳುವ, ಉಗ್ರ ಸಂಘಟನೆ ಹಮಾಸ್ ಸಮರ್ಥಕರನ್ನು ಹಿಂಬಾಲಕರನ್ನಾಗಿ ಹೊಂದಿರುವ ಕಾಂಗ್ರೆಸ್‌ನ ದೃಷ್ಟಿಯಲ್ಲಿ ಭಗವಾಧ್ವಜ ಹಾರಿಸುವುದು ಅಪರಾಧ. ಆದರೆ ಪಾಕಿಸ್ತಾನ ಬಾವುಟ ಹಾರಿಸಿದರೆ ಅಪರಾಧವಲ್ಲ ಎಂದು ಕಿಡಿ ಕಾರಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಸಾರ್ವಜನಿಕ ಶೌಚಾಲಯದಲ್ಲಿ ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ – Kannada News | Mumbai: Newborn Puppy Brutally Abused in Malad, Suspect Taken into Custody

ಮುಂಬೈ, ಜನವರಿ 21: ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ  ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪ್ರಾಣಿ ಕಲ್ಯಾಣ ಸಂಸ್ಥೆ ಪಿಎಎಲ್ (ಪ್ಯೂರ್ ಅನಿಮಲ್ ಲವರ್ಸ್) ಫೌಂಡೇಶನ್ ಹಂಚಿಕೊಂಡಿರುವ ಈ ವೀಡಿಯೊದಲ್ಲಿ ಮುಂಬೈ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ಕಾರ್ಯಕರ್ತರು ಆ ಪ್ರದೇಶದ ಸಾರ್ವಜನಿಕ ಶೌಚಾಲಯಕ್ಕೆ ಪ್ರವೇಶಿಸುತ್ತಿರುವುದನ್ನು ತೋರಿಸಲಾಗಿದ್ದು, ಆರೋಪಿಯು ಕೃತ್ಯ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.

ವಿಡಿಯೋದಲ್ಲಿ ಆ ವ್ಯಕ್ತಿ ಆರಂಭದಲ್ಲಿ ಬಾಗಿಲು ತೆರೆಯಲು ನಿರಾಕರಿಸುವುದನ್ನು ಕಾಣಬಹುದು. ನಂತರ ಪೊಲೀಸರು ಬಲವಂತವಾಗಿ ಒಳಗೆ ಪ್ರವೇಶಿಸಿ ಆತನನ್ನು ವಶಕ್ಕೆ ಪಡೆದರು. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ ಆರೋಪಿಯನ್ನು  ವಶಕ್ಕೆ ತೆಗೆದುಕೊಳ್ಳಲಾಯಿತು.

ಮತ್ತಷ್ಟು ಓದಿ: ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! ಅಸಲಿಗೆ ಆಗಿದ್ದೇನು ಗೊತ್ತೇ?

ಪಿಎಎಲ್ ಫೌಂಡೇಶನ್ ಪ್ರಕಾರ, ನಾಯಿಮರಿಯನ್ನು ತಕ್ಷಣವೇ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ನಾಯಿಮರಿ ಈಗ ವೈದ್ಯಕೀಯ ಆರೈಕೆಯಲ್ಲಿದೆ ಮತ್ತು ಗಂಭೀರ ಸ್ಥಿತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:38 pm, Wed, 21 January 26

Source link

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಕ್ರಮವಾಗಿ ಗುಜರಾತ್ ವಾಹನಗಳಿಗೆ ಎಫ್​ಸಿ ಮಾಡಿದ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು – Kannada News | Karnataka RTO Officer Nisar Ahmed Suspended for Illegally Issuing Fitness Certificates to Gujarat Vehicles

ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು

ಬೆಂಗಳೂರು, ಜನವರಿ 21: ಗುಜರಾತ್ (Gujrat) ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿದ ಗಂಭೀರ ಆರೋಪದ ಮೇಲೆ ಕೋರಮಂಗಲ ಆರ್‌ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಭ್ರಷ್ಟಾಚಾರದ ಬಗ್ಗೆ ‘ಟಿವಿ9’ ದಾಖಲೆಗಳ ಸಹಿತ ವರದಿ ಮಾಡಿತ್ತು. ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ತನಿಖೆಗೆ ಆದೇಶಿಸಿತ್ತು. ಕೋರಮಂಗಲ ಆರ್‌ಟಿಒ ಅಧಿಕಾರಿಗಳು ಗುಜರಾತ್ ವಾಹನಗಳ ಖುದ್ದು ತಪಾಸಣೆ ನಡೆಸದೆಯೇ ಅವುಗಳಿಗೆ ಎಫ್‌ಸಿ ನೀಡಿದ್ದರು.

ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆ ಪ್ರಕಾರ, ಯಾವುದೇ ರಾಜ್ಯದಲ್ಲಾದರೂ ವಾಹನಗಳ ಎಫ್‌ಸಿ ಮಾಡಿಸಿಕೊಳ್ಳಲು ಅವಕಾಶವಿದೆ. ಆದರೆ, ವಾಹನವವನ್ನು ಖುದ್ದು ಆರ್‌ಟಿಒ ಮುಂದೆ ಹಾಜರುಪಡಿಸಿದ ನಂತರ ಪರಿಶೀಲನೆ ನಡೆಸಿಯೇ ಎಫ್​ಸಿ ನೀಡಬೇಕು ಎಂಬ ನಿಯಮವಿದೆ. ಆದರೆ, ಕೋರಮಂಗಲ ಆರ್‌ಟಿಒ ಅಧಿಕಾರಿಗಳು, ವಾಹನಗಳು ಇಲ್ಲಿಗೆ ಬಂದಿದ್ದವು, ನಾವು ಖುದ್ದಾಗಿ ಪರಿಶೀಲಿಸಿದ್ದೇವೆ ಎಂದು ಸುಳ್ಳು ಹೇಳಿ ಎಫ್‌ಸಿಗಳನ್ನು ನೀಡಿದ್ದರು. ಆದರೆ, ಆ ಸಮಯದಲ್ಲಿ ಆ ವಾಹನಗಳು ಗುಜರಾತ್‌ನಲ್ಲಿ ಸಂಚರಿಸುತ್ತಿರುವುದನ್ನು ಅಲ್ಲಿನ ಸಾರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಸಮೇತ ಬಹಿರಂಗಪಡಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸಾರಿಗೆ ಇಲಾಖೆ ಸಚಿವರು ತನಿಖೆಗೆ ಆದೇಶಿಸಿದ್ದರು. ಜಂಟಿ ಕಮಿಷನರ್ ನೇತೃತ್ವದಲ್ಲಿ ತನಿಖೆ ನಡೆದು, ಮೇಲ್ನೋಟಕ್ಕೆ ನಿಸಾರ್ ಅಹಮದ್ ಅವರು ತಪ್ಪೆಸಗಿರುವುದು ಕಂಡುಬಂದಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ರಾಜ್ಯ ಸಾರಿಗೆ ಇಲಾಖೆ ಆಯುಕ್ತರು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದು ಪ್ರಾಥಮಿಕ ಹಂತದ ಕ್ರಮವಾಗಿದ್ದು, ಈ ಅಕ್ರಮದಲ್ಲಿ ಶಾಮೀಲಾಗಿರುವ ಇತರೆ ಅಧಿಕಾರಿಗಳ ಬಗ್ಗೆಯೂ ತನಿಖೆ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅಧಿಕಾರಿಗಳ ಅಮಾನತು ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕರ್ನಾಟಕದ ಮಾನ ಗುಜರಾತ್​ನಲ್ಲಿ ಹರಾಜಿಗಿಟ್ಟ ಆರ್​ಟಿಒ ಅಧಿಕಾರಿಗಳು! ಕಾಸು ಕೊಟ್ರೆ ವಾಹನ ತಪಾಸಣೆಯೇ ಮಾಡದೆ ಕೊಡ್ತಾರೆ ಎಫ್​ಸಿ

ಗುಜರಾತ್‌ನ ಸುಮಾರು 50 ಶಾಲಾ ಬಸ್‌ಗಳಿಗೆ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗಿತ್ತು. ಈ ಅಕ್ರಮವನ್ನು ಗುಜರಾತ್ ರಾಜ್ಯದ ಸಾರಿಗೆ ಅಧಿಕಾರಿಗಳೇ ಬಯಲಿಗೆಳೆದಿದ್ದರು. ವಾಹನಗಳು ನಮ್ಮ ರಾಜ್ಯದಲ್ಲಿದ್ದಾಗ, ಕರ್ನಾಟಕದಲ್ಲಿ ಎಫ್​ಸಿ ಹೇಗೆ ನೀಡಲಾಯಿ ತುಎಂದು ಪ್ರಶ್ನಿಸಿ, ಸಾಕ್ಷ್ಯಾಧಾರಗಳೊಂದಿಗೆ ಕರ್ನಾಟಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಸಾಕ್ಷ್ಯಾಧಾರಗಳು ಟಿವಿ9ಗೆ ಲಭ್ಯವಾಗಿದ್ದವು. ಅದನ್ನಿಟ್ಟುಕೊಂಡೇ ವರದಿ ಮಾಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಜೆಟ್ 2026: ಆಸ್ಪತ್ರೆಗಳು ಹೆಚ್ಚಬೇಕು, ಸ್ಥಳೀಯ ಉತ್ಪಾದನೆ ಹೆಚ್ಚಬೇಕು- ಹೆಲ್ತ್​ಕೇರ್ ಉದ್ಯಮದ ಬಜೆಟ್ ನಿರೀಕ್ಷೆಗಳು… – Kannada News | Budget 2026, healthcare industry wants medical infrastructure expansion

ನವದೆಹಲಿ, ಜನವರಿ 21: ಭಾರತದ ವೈದ್ಯಕೀಯ ಕ್ಷೇತ್ರದ ಉದ್ಯಮ ಬಹಳ ವೇಗದಲ್ಲಿ ಬೆಳೆಯುತ್ತಿದ್ದರೂ ಹಲವು ಸಮಸ್ಯೆಗಳು, ಅಡೆತಡೆಗಳಿಂದ ಬಳಲುತ್ತಿರುವುದು ಹೌದು. ಜಾಗತಿಕ ಅನಿಶ್ಚಿತತೆ ಮತ್ತು ಅಮೆರಿಕದ ಟ್ಯಾರಿಫ್​ಗಳು ಭಾರತದಲ್ಲಿಯ ಈ ಉದ್ಯಮದ ಉತ್ಸಾಹ ಕುಂದಿಸಿದೆ. ಹೆಚ್ಚಿನ ವೈದ್ಯಕೀಯ ಉಪಕರಣಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಮುಂದುವರಿದಿದೆ. ಫಾರ್ಮಾ ಕಂಪನಿಗಳು ಅಮೆರಿಕದ ಟ್ಯಾರಿಫ್​ನಿಂದ ಭೀತಿಗೊಂಡಿವೆ. ಈ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್​ನಲ್ಲಿ (Union Budget) ಹೆಲ್ತ್​ಕೇರ್ ಉದ್ಯಮದ ಸಮಸ್ಯೆಗಳನ್ನು ಅರಿತು ಸರ್ಕಾರ ಒಂದಷ್ಟು ಕ್ರಮಗಳನ್ನು ಘೋಷಿಸಬಹುದು ಎನ್ನುವ ನಿರೀಕ್ಷೆಯಲ್ಲಿ ಉದ್ಯಮ ಇದೆ.

ಮೆಡಿಕಲ್ ಇನ್​ಫ್ರಾಸ್ಟ್ರಕ್ಚರ್ ವಿಸ್ತರಣೆ ನಿರೀಕ್ಷೆ…

ದೇಶದ ಮೊದಲ ಸ್ತರ ಮತ್ತು ಎರಡನೇ ಸ್ತರದ ನಗರಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳ ಸಂಖ್ಯೆ ಹೆಚ್ಚಿಸಬೇಕು. ಅದಕ್ಕೆ ತಕ್ಕುದಾಗಿ ವೈದ್ಯರು, ನರ್ಸ್ ಹಾಗು ಇತರ ಸಿಬ್ಬಂದಿಯ ನೇಮಕಾತಿಗಳೂ ಆಗಬೇಕು. ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಹೂಡಿಕೆ ಆಗಬೇಕು ಎಂದು ಈ ಉದ್ಯಮ ವಲಯ ನಿರೀಕ್ಷಿಸುತ್ತಿದೆ.

ಇದನ್ನೂ ಓದಿ: ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ?

ಮ್ಯಾನುಫ್ಯಾಕ್ಚರಿಂಗ್ ಸಾಮರ್ಥ್ಯ ಹೆಚ್ಚಬೇಕು…

ಆರ್ ಅಂಡ್ ಡಿ ಒಳಗೊಂಡ ವೈದ್ಯಕೀಯ ತಂತ್ರಜ್ಞಾನ ಉತ್ಪಾದನೆಗೆ ಉತ್ತೇಜಿಸಲಾಗುವಂತೆ ಪಿಎಲ್​ಐ ಸ್ಕೀಮ್ ಅನ್ನು ಮಾರ್ಪಡಿಸಬೇಕು ಎನ್ನುವ ಕೂಗು ಕೇಳಿಬರುತ್ತಿದೆ.

ಫಾರ್ಮಾ ಸೆಕ್ಟರ್​ನಲ್ಲೂ ಪರಿವರ್ತನೆಗೆ ಕೂಗು ಕೇಳಿ ಬಂದಿದೆ. ಸದ್ಯ ಫಾರ್ಮಾ ಕ್ಷೇತ್ರದಲ್ಲಿ ಕಡಿಮೆ ಮೌಲ್ಯದ ಸರಕುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತಿದೆ. ಆದರೆ, ಹೆಚ್ಚು ಮೌಲ್ಯದ ಸರಕುಗಳ ಉತ್ಪಾದನೆಗೆ ಆಧ್ಯತೆ ಕೊಡುವ ರೀತಿಯಲ್ಲಿ ಬೆಳವಣಿಗೆ ಆಗಬೇಕು. ಈ ನಿಟ್ಟಿನಲ್ಲಿ 2026ರ ಬಜೆಟ್​ನಲ್ಲಿ ಗಮನ ಹರಿಸಲಿ ಎಂದು ಫಾರ್ಮಾ ಉದ್ಯಮಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು…

ಜನರ ಜೇಬಿಂದ ಆಸ್ಪತ್ರೆ ವೆಚ್ಚ ಭರಿಸುವುದನ್ನು ಕಡಿಮೆ ಮಾಡಬೇಕು. ಹೆಲ್ತ್ ಇನ್ಷೂರೆನ್ಸ್, ಟ್ಯಾಕ್ಸ್ ಡಿಡಕ್ಷನ್ ಇತ್ಯಾದಿ ಹೆಚ್ಚಿಸಬೇಕು. ಜನರು ಕೆಲಸ ಮಾಡುವ ಕಂಪನಿಗಳು ಉದ್ಯೋಗಿಗಳ ಆರೋಗ್ಯ ಕಾಳಜಿ ಯೋಜನೆಗಳನ್ನು ನಡೆಸಬೇಕು. ಇವೇ ಮುಂತಾದ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನೀತಿ ರೂಪಿಸಬೇಕು ಎಂದು ಹೆಲ್ತ್​ಕೇರ್ ಉದ್ಯಮದವರು ಕೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 12:34 pm, Wed, 21 January 26

Source link

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಎಸ್ಕೇಪ್​​: ಮೃತದೇಹ ಕಚ್ಚಿತಿಂದ ಕಾಡು ಪ್ರಾಣಿಗಳು! – Kannada News | Drunk Friends Kill Man; Wild Animals Devour Body in Hassan

ಹಾಸನ/ಕಲಬುರಗಿ, ಜನವರಿ 21: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್​(46) ಮೃತ ದುರ್ದೈವಿಯಾಗಿದ್ದು, ಅಶೋಕ್ ಮತ್ತು ಸುಧೀರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ​ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ.

ಜ.19ರಂದು ಜಮೀನು ಕಾವಲು ಕಾಯಲು ಗಣೇಶ್​ ಹೋಗಿದ್ದು, ಈ ವೇಳೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ಶುರುವಾಗಿದ್ದು, ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದು ಗಣೇಶ್ ಕೊಲೆ ನಡೆದಿದೆ. ಸ್ಥಳದಲ್ಲೇ ಗಣೇಶ್ ಶವ ಬಿಟ್ಟು ಆರೋಪಿಗಳು ಪರಾರಿಯಾಗಿದ್ದು, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿವೆ. ಶವ ಗಮನಿಸಿದ ಕರ್ತವ್ಯಕ್ಕೆ ತೆರಳಿದ್ದ ಅರಣ್ಯ ಸಿಬ್ಬಂದಿ ಈ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಸೋಕೋ ತಂಡ ಭೇಟಿ ನೀಡಿ ಪರಿಶೀಲಿಸಿದ್ದು,  ಬಂಧಿತ ಅಶೋಕ್ ಈಗಾಗಲೇ ಕೊಲೆ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದಾತ ಎಂಬ ವಿಷಯ ಗೊತ್ತಾಗಿದೆ. ಈ ಬಗ್ಗೆ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ; ಹರಿಯಾಣ ವ್ಯಕ್ತಿ ಅರೆಸ್ಟ್​​

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಕಲಬುರಗಿಯ ಮೋಹನ್ ಲಾಡ್ಜ್ ಬಳಿಯ ಪಾರ್ಕ್​ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸೈಯದ್ ಮೆಹಬೂಬ್(21) ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೇ ದ್ವೇಷಕ್ಕೆ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸೈಯದ್ ಮೆಹಬೂಬ್ ಕೆಲವು ಕಳ್ಳತನ ಪ್ರಕರಣಗಳ ಆರೋಪಿಯೂ ಆಗಿದ್ದು, ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಭೇಟಿನೀಡಿ ಪರೀಶಿಲನೆ ನಡೆಸಿದ್ದಾರೆ. ಈ ಬಗ್ಗೆ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್; ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ – Kannada News | Hubballi Slum Board Homes: 42 Thousand Homes are to be Handed Over on January 24

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ, ಜನವರಿ 21: ಸ್ವಂತದಾದ ಸೂರು ಹೊಂದಬೇಕು ಎನ್ನುವುದು ಬಡ ಮತ್ತು ಮಧ್ಯಮ ವರ್ಗದವರ ಕನಸು. ರಾಜ್ಯ ಸರ್ಕಾರ ಈ ಕನಸನ್ನು ಈಡೇರಿಸಲು ಮುಂದಾಗಿದ್ದು, ರಾಜ್ಯದಲ್ಲಿ ನಲವತ್ತೆರಡು ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣ ಮಾಡಿದೆ. ಈ ಮನೆಗಳ ಹಂಚಿಕೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಇದೇ ಜನವರಿ 24ರಂದು ಹುಬ್ಬಳ್ಳಿಯಲ್ಲಿ (Hubballi) ಅದ್ದೂರಿ ಕಾರ್ಯಕ್ರಮ ನಡೆಯಲಿದೆ.

ಒಂದು ವರ್ಷ ಕಾಯಿಸಿದ ಸರ್ಕಾರ!

ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ಜಿ+3 ಮಾದರಿಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಮನೆಗಳಿಗೆ ಕಳೆದ ಒಂದು ವರ್ಷದಿಂದ ಉದ್ಘಾಟನೆ ಭಾಗ್ಯ ಸಿಕ್ಕಿರಲಿಲ್ಲ. ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು ಸೇರಿದಂತೆ ಹಿರಿಯ ನಾಯಕರ ಸಮಯಾವಕಾಶ ಲಭ್ಯವಾಗದೇ ಮನೆ ಹಂಚಿಕೆ ಕಾರ್ಯಕ್ರಮ ಪದೇಪದೇ ಮುಂದೂಡಲ್ಪಟ್ಟಿತ್ತು. 2013–18ರ ಅವಧಿಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರ ಕಾಲದಲ್ಲಿ ಈ ಮನೆಗಳಿಗೆ ಮಂಜೂರಾತಿ ದೊರೆತಿದ್ದರೂ, ಕಾಮಗಾರಿಯ ನಿಧಾನಗತಿಯ ಕಾರಣ ತಡವಾಗಿತ್ತು. ಕಳೆದ ವರ್ಷವೇ ಮನೆಗಳ ನಿರ್ಮಾಣ ಪೂರ್ಣಗೊಂಡರೂ ಫಲಾನುಭವಿಗಳಿಗೆ ಹಂಚಿಕೆ ಆಗಿರಲಿಲ್ಲ.

ಸಚಿವ ಜಮೀರ್ ನೇತೃತ್ವದಲ್ಲಿ ಮನೆ ಹಂಚಿಕೆ

ಈಗ ವಸತಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದು, ಬೃಹತ್ ವೇದಿಕೆ, ಜನರಿಗಾಗಿ ಬಸ್ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಅನೇಕ ವರ್ಷಗಳಿಂದ ಸ್ವಂತ ಮನೆ ಕನಸು ಕಂಡಿದ್ದ ಸಾವಿರಾರು ಕುಟುಂಬಗಳಿಗೆ ಇದು ಹೊಸ ಜೀವನದ ಆರಂಭವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version