ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!

ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!

ಉತ್ತರ ಪ್ರದೇಶ, ಮಾರ್ಚ್​ 28: ಜೆವಾರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನರೇಂದ್ರ ಮೋದಿ ಉದ್ಘಾಟಿಸಿದರು. ಸುಮಾರು 11,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಈ ಯೋಜನೆ ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ. ಈ ವಿಮಾನ ನಿಲ್ದಾಣ ಉದ್ಘಾಟನೆಯೊಂದಿಗೆ ಉತ್ತರ ಪ್ರದೇಶ ದೇಶದಲ್ಲೇ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ. ಹೊಸ ಏರ್‌ಪೋರ್ಟ್‌ನಿಂದ ಪ್ರಯಾಣಿಕರಿಗೆ ಸುಧಾರಿತ ಸೇವೆಗಳು ಲಭ್ಯವಾಗಲಿದ್ದು, ಉದ್ಯೋಗಾವಕಾಶಗಳು ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!

ಚಿಕ್ಕಮಗಳೂರು, ಮಾ.28: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ. ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ಚರಂಡಿಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದ್ದು, ಮಾರುಕಟ್ಟೆಗೆ ಬಂದಿದ್ದ ಸಾರ್ವಜನಿಕರು ಮತ್ತು ವಾಹನ ಸವಾರರು ಹೈರಾಣಾಗಿದ್ದಾರೆ. ಮಲೆನಾಡು ಭಾಗದ ಹಲವೆಡೆ ಮರಗಳು ಉರುಳುವ ಭೀತಿ ಎದುರಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.

ವಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: 10 ತಂಡಗಳ ಆರಂಭಿಕ ಜೋಡಿಗಳ ಪಟ್ಟಿ ಇಲ್ಲಿದೆ

Source link

ಬಾಗಲಕೋಟೆಯಲ್ಲಿ ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ; ಭಯಾನಕ ವಿಡಿಯೋ

ಬಾಗಲಕೋಟೆ, ಮಾ.28: ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ. ಈ ದೃಶ್ಯವು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸ್ಥಳೀಯ ಯುವಕರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಪಲ್ಟಿಯಾದ ಆಂಬುಲೆನ್ಸ್‌ನಲ್ಲಿದ್ದ ಗರ್ಭಿಣಿ ಮಹಿಳೆಯನ್ನು ಅತ್ಯಂತ ಜಾಗರೂಕತೆಯಿಂದ ಹೊರತೆಗೆದು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ತೀವ್ರತೆಗೆ ಎಲ್ಲರೂ ಗಾಬರಿಗೊಂಡಿದ್ದರು. ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ಕುರಿತು ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ಅಪಘಾತದ ದೃಶ್ಯಗಳು ದಾಖಲಾಗಿದ್ದು, ಫೂಟೇಜ್‌ಗಳನ್ನು ಪರಿಶೀಲಿಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಐಪಿಎಲ್ ಟಿಕೆಟ್​ಗಳು ಖಂಡಿತಾ ನನಗೆ ಬೇಡ’: ವಿಶೇಷ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್!

ಬೆಂಗಳೂರು, ಮಾರ್ಚ್​ 28: ಐಪಿಎಲ್ ಮ್ಯಾಚ್​ಗಳ ಟಿಕೆಟ್ (IPL Ticket) ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್​ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿಯೇ ಈ ರೀತಿಯ ಸ್ಪಂದನೆ ದೊರೆತಿರುವುದೂ ವಿವಾದವೆದ್ದಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಮ್ಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್​ಗಳನ್ನು ನಿರಾಕರಿಸಿದ್ದಾರೆ.

ಟಿಕೆಟ್ ಬೇಡವೆಂದು ಫೆಸ್​ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ

ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ ಐಪಿಎಲ್ ಟಿಕೆಟ್​​ಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಿದ ಬೆನ್ನಲ್ಲೇ ಕೆಎಸ್‌ಸಿಎ ಉದ್ಘಾಟನಾ ಪಂದ್ಯಕ್ಕೆ ಶಾಸಕರಿಗೆ 2+1 ಒಟ್ಟು 3 ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿಕೊಂಡಿದೆ. ಸದ್ಯ ಒಬ್ಬ ಶಾಸಕರಿಗೆ ಎರಡು ಟಿಕೆಟ್ ನೀಡಲು ಒಪ್ಪಿರುವ ಕೆಎಸ್‌ಸಿಎ, ಮುಂದಿನ‌ ಐಪಿಎಲ್‌ ಪಂದ್ಯಕ್ಕೆ 5 ಟಿಕೆಟ್ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದೆ. ಇದೆಲ್ಲದರ ನಡುವೆ ವಿಜಯೇಂದ್ರ ಟಿಕೆಟ್ ನಿರಾಕರಿಸಿದ್ದಲ್ಲದೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ಕೂಡ ತಮ್ಮ ಸಾಮಾಜಿಕ ಜಾಲತಾನದ ಪೋಸ್ಟ್ ಮೂಲಕ ತಾನು ಟಿಕೆಟ್ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ 24 ಗಂಟೆಯಲ್ಲೇ ಬಗೆಹರಿದ ಶಾಸಕರ IPL ಟಿಕೆಟ್ ಜ್ವಲಂತ ಸಮಸ್ಯೆ, ಒಬ್ಬರಿಗೆ ಎಷ್ಟು ಗೊತ್ತಾ?

ಪೋಸ್ಟ್​ನಲ್ಲೇನಿದೆ?

ಶಾಸಕರು ಐಪಿಎಲ್ ಟಿಕೆಟ್ ಸ್ವೀಕರಿಸುವುದನ್ನು ಖಂಡಿಸಿರುವ ಸುರೇಶ್ ಕುಮಾರ್ , ಮಾಧ್ಯಮಗಳಲ್ಲಿ ಸುದ್ದಿಯಾಗಿರುವಂತೆ ಪ್ರತಿಯೊಬ್ಬ ಶಾಸಕರಿಗೆ ಎರಡು ಟಿಕೆಟ್ ಹಾಗೂ ಮುಂದಿನ ದಿನಗಳಲ್ಲಿ ಐದು ಟಿಕೆಟ್ ನೀಡುವ ವಿಷಯಕ್ಕೆ ತಮ್ಮ ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಸರಿಯಾದ ನಿರ್ಧಾರವಲ್ಲ ಎಂದ ಶಾಸಕ, ವಿಧಾನಸಭೆಯಲ್ಲಿ ಚರ್ಚೆ ನಡೆದ 24 ಗಂಟೆಗಳಲ್ಲಿ ಸರ್ಕಾರ ತಕ್ಷಣ ಘೋಷಣೆ ಮಾಡಿರುವುದು ಆಶ್ಚರ್ಯಕರ. ಜನಪ್ರತಿನಿಧಿಗಳ ವಿಷಯ ಬಂದಾಗ ಮಾತ್ರ ಕಾರ್ಯ ಕೈಗೊಳ್ಳುವುದರಿಂದ ಸಾರ್ವಜನಿಕ ನಂಬಿಕೆಗೆ ಹೊಣೆ ಬರುತ್ತದೆ. ಆ ಟಿಕೆಟ್ ಅಥವಾ ಪಾಸ್‌ಗಳನ್ನು ನಾನು ಸವಿನಯವಾಗಿ ನಿರಾಕರಿಸುತ್ತೇನೆ. ವಿಐಪಿ ಸಂಸ್ಕೃತಿ ಮುಂದುವರಿದಂತೆ ರಾಜಕಾರಣಿಗಳು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರಾಗುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಕುಲ್ ಪ್ರೀತ್ ಮಾವನಿಂದ ಐಷಾರಾಮಿ ಪ್ರಾಪರ್ಟಿ ಖರೀದಿಸಿದ ಖ್ಯಾತ ಕ್ರಿಕೆಟರ್

ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಮಾವ ಹಾಗೂ ನಿರ್ಮಾಪಕ ವಶು ಭಗ್ನಾನಿ ಇತ್ತೀಚೆಗೆ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಮಾಡಿ ಅವರು ಸಾಕಷ್ಟು ಕೈ ಸುಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆಗಿವೆ. ಈ ಕಾರಣಕ್ಕೆ ಹಣ ಸಂಪಾದನೆಗೆ ವಶು ಅವರು ರಿಯಲ್ ಎಸ್ಟೇಟ್​​ ಮೇಲೆ ಗಮನ ಹರಿಸಿದ್ದಾರೆ. ಅವರು ಈಗ ಖ್ಯಾತ ಕ್ರಿಕೆಟರ್​​ಗೆ ಅಪಾರ್ಟ್​​ಮೆಂಟ್ ಮಾರಾಟ ಮಾಡಿದ್ದಾರೆ.

ವಶು ಅವರದ್ದು ಬಾಲಿವುಡ್​​​ನಲ್ಲಿ ದೊಡ್ಡ ಹೆಸರು. ಅವರ ನಿರ್ಮಾಣ ಸಂಸ್ಥೆಯಿಂದ ‘ಕೂಲಿ ನಂಬರ್ 1’, ‘ಪ್ಯಾರ್ ಕಿಯಾ ತೋ ಡರ್ನಾ ಕ್ಯಾ’, ‘ಬಿವಿ ನಂಬರ್ 1’, ‘ಮಿಷನ್ ರಾಣಿಗಂಜ್’ ಮೊದಲಾದ ಚಿತ್ರಗಳನ್ನು ಪ್ರೊಡ್ಯೂಸ್ ಮಾಡಿದ್ದಾರೆ. ಆದರೆ, ಇತ್ತೀಚೆಗೆ ಅವರು ನಿರ್ಮಾಣ ಮಾಡಿದ ಸಿನಿಮಾಗಳು ನೆಲಕಚ್ಚಿವೆ. ಹೀಗಾಗಿ, ಪ್ರಾಪರ್ಟಿ ಸಿದ್ಧಪಡಿಸಿ ಅದನ್ನು ಮಾರುವ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ

ಜಾಕಿ ಭಗ್ನಾನಿ, ವಶು ಭಗ್ನಾನಿ ಹಾಗೂ ಪೂಜಾ ಭಗ್ನಾನಿ ಅವರಿಂದ ಖ್ಯಾತ ಕ್ರಿಕೆಟರ್ ಶುಭ್​​ಮನ್ ಗಿಲ್ ಅವರು 20.7 ಕೋಟಿ ರೂಪಾಯಿ ಕೊಟ್ಟು ಈ ಅಪಾರ್ಟ್​​​ಮೆಂಟ್ ಖರೀದಿ ಮಾಡಿದ್ದಾರೆ. ಜುಹು ಭಾಗದಲ್ಲಿರೋ ಅಪಾರ್ಟ್​​​ಮೆಟ್​​​ನ 12ನೇ ಅಂತಸ್ತಿನಲ್ಲಿ ಇವರು ಮನೆ ಖರೀದಿ ಮಾಡಿದ್ದಾರೆ. ಇದು 3,369 ಅಡಿ ಇದೆ.

ವಶು ಅವರು ಸಿನಿಮಾ ರಂಗ ತೊರೆಯುತ್ತಾರಾ? ಖಂಡಿತವಾಗಿಯೂ ಇಲ್ಲ. ವಶು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸ ಮುಂದುವರಿಸುತ್ತಿದ್ದಾರೆ. ಕೆಲವು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸವನ್ನು ಇವರು ಮಾಡುತ್ತಿದ್ದಾರೆ.

ಇದನ್ನೂ ಓದಿ: ರಕುಲ್ ಪ್ರೀತ್ ಸಿಂಗ್ ಹೆಸರಿನಲ್ಲಿ ವಾಟ್ಸಪ್ ಮೂಲಕ ದೋಖಾ: ಎಚ್ಚರಿಕೆ ನೀಡಿದ ನಟಿ

ವಶು ಭಗ್ನಾನಿ ನಿರ್ಮಾಣದ ‘ಮಿಷನ್ ರಾಣಿಗಂಜ್’ ಸಿನಿಮಾ ಹೀನಾಯವಾಗಿ ಸೋತಿತ್ತು. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಈ ಚಿತ್ರದಲ್ಲಿ ನಟಿಸಿದ್ದಕ್ಕೆ ಅಕ್ಷಯ್​​ಗೆ ಸಂಭಾವನೆ ನೀಡಿರಲಿಲ್ಲ ವಶು. ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಮಾತನಾಡಿದ್ದರು. ಆದಾಗ ಸಂಭಾವನೆ ಕೊಡಿ ಎಂದಿದ್ದರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ

ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆ ನಡೆಸಲಾಗುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಾಸನಪುರ ಗ್ರಾಮದಲ್ಲಿ ಇರುವ ಪಕ್ಕದ ಆಸ್ಪತ್ರೆ ಕಾವಲ್‌ನಲ್ಲಿ ಇದ್ದ ಒಂಟಿ ಮನೆಯಲ್ಲಿ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಹುಣಸೂರು ಟೌನ್ ರೆಹಮತ್ ಮೊಹಲ್ಲಾ ನಿವಾಸಿಯ ಶೆಡ್‌ನಲ್ಲಿ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ತಿಳಿದುಬಂದಿದೆ.

ಪೊಲೀಸರು ಜಪ್ತು ಮಾಡಿದ ವಸ್ತುಗಳು

ಪೊಲೀಸರು 7.35 ಕೆ.ಜಿ ತೂಕದ ಮೆಫೆಡ್ರೋನ್ ಮತ್ತು 41 ಕೆ.ಜಿ ತೂಕದ ಡ್ರಗ್ಸ್ ಪ್ರಿಕರ್ಸರ್ ವಸ್ತುಗಳನ್ನು ವಶಪಡಸಿಕೊಂಡಿದ್ದು, ಒಟ್ಟು 48 ಕೆ.ಜಿ ತೂಕದ ಡ್ರಗ್ಸ್ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಈ ರೀತಿಯಾಗಿ ಸಿಂಥೆಟಿಕ್ ಡ್ರಗ್ಸ್ ತಯಾರಣೆ ಮತ್ತು ವಿತರಣೆ ಮಾಡುತ್ತಿದ್ದಂತೆ ಪೊಲೀಸರು ವರದಿ ನೀಡಿದ್ದಾರೆ. ಪ್ರಕರಣವನ್ನು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Revenue Dept Jobs 2026: ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ; ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಉಪ ತಹಶೀಲ್ದಾರ್ ಮತ್ತು ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗಳ ವಿವರ ಮತ್ತು ಸಂಬಳ:

ಕಂದಾಯ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕ ರೂ. 22,000 ರಿಂದ 55,000/- ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ ಐಎಂಎ (IMA) ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳ ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿಯಲ್ಲಿ ಕೆಲಸ ಮಾಡಲು ಈ ನೇಮಕಾತಿ ನಡೆಯುತ್ತಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ LLB, BE/B.Tech (CSE/IS), ಅಥವಾ PG ಡಿಪ್ಲೊಮಾ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಅನುಭವ ಮತ್ತು ಅರ್ಹತೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಇನ್ನು ವಯೋಮಿತಿಯ ವಿಷಯಕ್ಕೆ ಬಂದರೆ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು ಮೀರಿರಬಾರದು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಆಸಕ್ತರು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅದರೊಂದಿಗೆ ಅಗತ್ಯವಿರುವ ಸ್ವಯಂ-ದೃಢೀಕರಿಸಿದ ದಾಖಲೆಗಳನ್ನು (ವಯಸ್ಸಿನ ಪುರಾವೆ, ಶೈಕ್ಷಣಿಕ ದಾಖಲೆಗಳು, ಅನುಭವದ ಪತ್ರ ಇತ್ಯಾದಿ) ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 04 ರೊಳಗೆ “ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ (ಐಎಂಎ ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳು)” ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಮುನ್ನ ಗಮನಿಸಿ:

  • ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ಇತ್ತೀಚಿನ ಫೋಟೋ, ರೆಸ್ಯೂಮ್ ಮತ್ತು ಸರಿಯಾದ ಮೊಬೈಲ್ ಸಂಖ್ಯೆ/ಇಮೇಲ್ ಐಡಿ ಹೊಂದಿರಲಿ.
  • ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ನಿಗದಿತ ವಿಳಾಸಕ್ಕೆ ಕಳುಹಿಸಿ.
  • ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಅಭ್ಯರ್ಥಿಗಳು ಕರ್ನಾಟಕ ಕಂದಾಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ನವದೆಹಲಿ, ಮಾರ್ಚ್​ 28: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ (Delhi) ತೆರಳುತ್ತಿದ್ದ ಇಂಡಿಗೋ ವಿಮಾನವೊಂದು (IndiGo Flight) ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಘಟನೆಯ ವಿವರ

ಇಂಡಿಗೋ ಸಂಸ್ಥೆಯ ಬೋಯಿಂಗ್ 737 (ವಿಮಾನ ಸಂಖ್ಯೆ 6E 579) ಶನಿವಾರ ಬೆಳಗ್ಗೆ ವಿಶಾಖಪಟ್ಟಣಂನಿಂದ ದೆಹಲಿಗೆ ಪ್ರಯಾಣ ಬೆಳೆಸಿತ್ತು. ವಿಮಾನವು ದೆಹಲಿ ವಿಮಾನ ನಿಲ್ದಾಣವನ್ನು ತಲುಪುವ ಕೆಲವೇ ನಿಮಿಷಗಳ ಮೊದಲು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೈಲಟ್‌ಗಳು ಎಮರ್ಜೆನ್ಸಿ ಲ್ಯಾಂಡಿಂಗ್‌ಗೆ ಅನುಮತಿ ಕೋರಿದ್ದಾರೆ.

ಬೆಳಗ್ಗೆ 10:39ಕ್ಕೆ ವಿಮಾನ ನಿಲ್ದಾಣದಲ್ಲಿ ‘ಫುಲ್ ಎಮರ್ಜೆನ್ಸಿ’ ಘೋಷಿಸಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳದ ವಾಹನಗಳು ಮತ್ತು ತುರ್ತು ಚಿಕಿತ್ಸಾ ತಂಡಗಳು ರನ್‌ವೇ ಬಳಿ ಸನ್ನದ್ಧವಾಗಿದ್ದವು. ಅದೃಷ್ಟವಶಾತ್, ಬೆಳಗ್ಗೆ 10:54ಕ್ಕೆ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು.

ಟರ್ಕಿ ಸಂಸ್ಥೆಯ ವಿಮಾನ

ಈ ವಿಮಾನವನ್ನು ಇಂಡಿಗೋ ಸಂಸ್ಥೆಯು ಟರ್ಕಿಯ ‘ಕೊರೆಂಡನ್ ಏರ್ಲೈನ್ಸ್’ನಿಂದ ಗುತ್ತಿಗೆ ಆಧಾರದ ಮೇಲೆ ಪಡೆದುಕೊಂಡಿತ್ತು. ಸದ್ಯ ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದು ಇಂಡಿಗೋ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version