Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ – Kannada News | Bangalore Weather Update: Heavy Rain Expected, Temperature Drops, Yellow Alert Issued by IMD

ಬೆಂಗಳೂರು, ಮೇ.25: ತೀವ್ರ ಉಷ್ಣಾಂಶ ಮತ್ತು ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಕೂಲ್​ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ಹೊರಡಿಸಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೇ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ಉಂಟಾಗಿರುವುದರಿಂದ ಹವಾಮಾನ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಇದು ಬೆಂಗಳೂರಿನಾದ್ಯಂತ ವ್ಯಾಪಕ ಮತ್ತು ನಿರಂತರ ಮಳೆಗೆ ಅತ್ಯಂತ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ, ಬಿಹಾರದ ದಕ್ಷಿಣ ಭಾಗದಿಂದ ಜಾರ್ಖಂಡ್ ಮತ್ತು ಒಡಿಶಾ ಮೂಲಕ ಆಂಧ್ರಪ್ರದೇಶದ ಉತ್ತರ ಕರಾವಳಿಯವರೆಗೆ ವಿಸ್ತರಿಸಿರುವ ಉತ್ತರ-ದಕ್ಷಿಣ ವಾಯುಭಾರ ಕುಸಿತವೂ ಪ್ರಸ್ತುತ ಹವಾಮಾನ ವೈಪರೀತ್ಯಕ್ಕೆ ಪ್ರಮುಖ ಕಾರಣವಾಗಿದೆ.

ಇನ್ನು ನಗರದಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ದಟ್ಟವಾದ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ನಗರದ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಾರದಾದ್ಯಂತ ಬೆಂಗಳೂರಿಗೆ ‘ಹಳದಿ ಎಚ್ಚರಿಕೆ’ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕಳೆದ ವಾರಕ್ಕೆ ಹೋಲಿಸಿದರೆ ಬೆಂಗಳೂರಿನಾದ್ಯಂತ ತಾಪಮಾನದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗಿದೆ. ಈ ಹಿಂದೆ ಸರಾಸರಿ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದ್ದ ಗರಿಷ್ಠ ತಾಪಮಾನವು ಸದ್ಯ 30 ಡಿಗ್ರಿ ಸೆಲ್ಸಿಯಸ್‌ಗಿಂತ ಕೆಳಗೆ ಇಳಿದಿದೆ. ಇನ್ನು ಬೆಂಗಳೂರು ಮಾತ್ರವಲ್ಲದೆ, ಇಡೀ ಉತ್ತರ ಒಳನಾಡು ಕರ್ನಾಟಕ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಬಹುತೇಕ ಜಿಲ್ಲೆಗಳಿಗೂ ಮೇ 29 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:59 am, Mon, 25 May 26

Source link

ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ – Kannada News | Mandya Nagamangala Land Scam: Upa Lokayukta Justice B Veerappa Confirms Bagar Hukum Fraud Expanded to 1,000 Acres

ಮಂಡ್ಯ, ಮೇ 25: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕು ಕಂದಾಯ ಇಲಾಖೆಯಲ್ಲಿ ನಡೆದಿರುವ ಬಗರ್‌ಹುಕುಂ ಭೂ ಮಂಜೂರಾತಿ ಹಗರಣದ ಲೋಕಾಯುಕ್ತ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿ ನಡೆಸಿದ್ದ ಭೂ ಮಾಫಿಯಾದ ಜಾಲವು ಬರೋಬ್ಬರಿ 1,000 ಎಕರೆ ಸರ್ಕಾರಿ ಜಮೀನನ್ನು ನುಂಗಿ ನೀರು ಕುಡಿದಿರುವುದು ತನಿಖೆಯಲ್ಲಿ ಬಯಲಾಗಿದೆ. ಅರ್ಹತೆ ಇಲ್ಲದ ಸ್ಥಳೀಯ ಪ್ರಭಾವಿಗಳಿಗೆ, ಹಣ ಕೊಟ್ಟ ಖದೀಮರಿಗೆ ಹಾಗೂ ಹೊರ ರಾಜ್ಯದ ವ್ಯಕ್ತಿಗಳಿಗೂ ಕಾನೂನು ಬಾಹಿರವಾಗಿ ನಕಲಿ ದಾಖಲೆ ಸೃಷ್ಟಿಸಿ ಮಂಜೂರಾತಿ ಖಾತೆ ಮಾಡಿಕೊಡಲಾಗಿತ್ತು ಎಂಬುದನ್ನು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಬಹಿರಂಗಪಡಿಸಿದ್ದಾರೆ.

ಮುಖ್ಯಾಂಶಗಳು

  • ಮೂರು ತಿಂಗಳ ಹಿಂದೆ ಲೋಕಾಯುಕ್ತರು ಪ್ರಾಥಮಿಕ ದಾಳಿ ನಡೆಸಿದಾಗ ಕೇವಲ 238 ಎಕರೆ ಭೂ ಅಕ್ರಮ ಪತ್ತೆಯಾಗಿತ್ತು.
  • ಮಂಡ್ಯ ಎಎಸ್‌ಪಿ ನೇತೃತ್ವದ ವಿಶೇಷ ತಂಡ ನಡೆಸಿದ ವಿಸ್ತೃತ ತನಿಖೆಯ ವೇಳೆ, 1,000 ಎಕರೆಯಷ್ಟು ಗೋಮಾಳ ಭೂಮಿ ಲೂಟಿಯಾಗಿರುವುದು ಸಾಬೀತಾಗಿದೆ.
  • ಕಂದಾಯ ಇಲಾಖೆಯ ಅಧಿಕಾರಿಗಳು ಮಂಜೂರಾತಿ ನಿಯಮಗಳನ್ನು ಗಾಳಿಗೆ ತೂರಿ, ಕೃಷಿ ಮಾಡದ ಹೊರ ರಾಜ್ಯದ ಶ್ರೀಮಂತ ವ್ಯಕ್ತಿಗಳ ಹೆಸರಿಗೂ ನಕಲಿ ಸಾಗುವಳಿ ಚೀಟಿ ನೀಡಿ ಕೋಟ್ಯಂತರ ರೂ. ಅವ್ಯವಹಾರ ನಡೆಸಿದ್ದಾರೆ.

ಯಾರನ್ನೂ ಬಿಡಲ್ಲ ಎಂದ ನ್ಯಾ.ವೀರಪ್ಪ

ಈ ಮಹಾ ವಂಚನೆಯಲ್ಲಿ ಭಾಗಿಯಾಗಿರುವ ಇಲಾಖೆಯ ಸಣ್ಣ ನೌಕರರಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೂ ಯಾರನ್ನೂ ಬಿಡುವುದಿಲ್ಲ, ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಉಪಲೋಕಾಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ

ಈ ಹಿಂದೆ ಜನವರಿಯಲ್ಲಿ ಲೋಕಾಯುಕ್ತ ಪೊಲೀಸರು ನಾಗಮಂಗಲ ತಾಲೂಕು ಕಚೇರಿ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿ ಐವರನ್ನು ಬಂಧಿಸಿದ್ದರು. ತದನಂತರ ಹಗರಣದ ತೀವ್ರತೆ ಹೆಚ್ಚಿರುವ ಅನುಮಾನ ಕಂಡುಬಂದುದರಿಂದ ವಿಸ್ತೃತ ತನಿಖೆಗೆ ಆದೇಶಿಸಲಾಗಿತ್ತು. ಅಧಿಕಾರಿಗಳು ಮೂಲ ದಾಖಲೆಗಳ ಪುಟಗಳನ್ನೇ ಹರಿದು, ತಿದ್ದುಪಡಿ ಮಾಡಿ ಈ ಗೋಲ್‌ಮಾಲ್ ಎಸಗಿದ್ದಾರೆ. ಸದ್ಯ ಎಎಸ್‌ಪಿ ನೇತೃತ್ವದ ತಂಡ ಸಂಪೂರ್ಣ ವರದಿಯನ್ನು ಸಿದ್ಧಪಡಿಸುತ್ತಿದ್ದು, ಮತ್ತಷ್ಟು ಭ್ರಷ್ಟ ಅಧಿಕಾರಿಗಳಿಗೆ ಜೈಲು ಫಿಕ್ಸ್ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:31 am, Mon, 25 May 26

Source link

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್​​ ಯಾಕೆ?: ಇಲ್ಲಿದೆ ಅಸಲಿ ಕಾರಣ – Kannada News | High Command Summons: CM Siddaramaiah To Visit Delhi Tonight Amid Cabinet Reshuffle and Leadership Talks

ಬೆಂಗಳೂರು, ಮೇ 25: ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್​​ನಿಂದ ಬುಲಾವ್​​ ಬಂದಿರೋದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಸಂಜೆ 7 ಗಂಟೆಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, HALನಿಂದ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ರಾತ್ರಿ 9.30ಕ್ಕೆ ಅವರು ದೆಹಲಿ ತಲುಪಲಿದ್ದು, ನಾಳೆ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಮಾತುಕತೆ ನಡೆಸಲಿದ್ದಾರೆ.

ಸಭೆಯಲ್ಲಿ ಏನೆಲ್ಲ ಚರ್ಚೆ ಸಾಧ್ಯತೆ?

ನಾಳೆ ಬೆಳಗ್ಗೆ 11 ಗಂಟೆಗೆ ಹೈಕಮಾಂಡ್‌ ನಾಯಕರ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದು, ದೆಹಲಿಯಲ್ಲಿರುವ ಐಸಿಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ಸಭೆ ನಡೆಯಲಿದೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾಗಿ ಸಾಧ್ಯತೆ ಇದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯರಿಂದ ರಾಹುಲ್ ಗಾಂಧಿ ಭೇಟಿ ಅಂದಾಜಿಸಲಾಗಿದೆ. ಸಭೆ ವೇಳೆ ಸಂಪುಟ ಪುನರ್ ರಚನೆ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ ಸಾಧ್ಯತೆ ಇದ್ದು, ದೆಹಲಿ ಪ್ರವಾಸದ ಬಗ್ಗೆ ಈಗಾಗಲೇ ಸಚಿವರ ಜೊತೆ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ದೆಹಲಿ ಭೇಟಿಗೂ ಮುನ್ನ ಸಚಿವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಏನಂದ್ರು?

ದೆಹಲಿಯಲ್ಲಿ ಎರಡು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ ಇದ್ದು, ರಾಜ್ಯಸಭಾ ಸ್ಥಾನಗಳ ಹಂಚಿಕೆ ವಿಚಾರವಾಗಿ ಮೊದಲು ಮಾತುಕತೆ ನಡೆಯಲಿದೆ. ಸಂಪುಟ ಪುನಾರಚನೆ ಬಗ್ಗೆಯೂ ಸಿದ್ದರಾಮಯ್ಯ ಪ್ರಸ್ತಾಪ ಮಾಡಲಿದ್ದು, ಪುನಾರಚನೆ ಮಾಡದಿದ್ದರೆ ಏನೇನಾಗಬಹುದೆಂದು ಮನವರಿಕೆ ಮಾಡಿಕೊಡಲಿದ್ದಾರೆ. ಡಿ.ಕೆ.ಶಿವಕುಮಾರ್ ಸಭೆಗೆ ಹಾಜರಾದರೆ ಮಾತ್ರ ನಾಯಕತ್ವ ಬಗ್ಗೆ ಚರ್ಚೆ ನಡೆಯಬಹುದು ಎಂಬ ಮಾತುಗಳು ಕೇಳಿಬಂದಿವೆ.

ಸಿಎಂ ಜೊತೆ ಸಚಿವರು, ಶಾಸಕರ ಪ್ರಯಾಣ

ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಹೌದು, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ ಎಂದಷ್ಟೇ ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿಗಳ ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಕೆಲ ಶಾಸಕರೂ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಸಕರಾದ ಹಂಪನಗೌಡ ಬಾದರ್ಲಿ, ದದ್ದಲ್, ನರೇಂದ್ರಸ್ವಾಮಿ, MLCಗಳಾದ ಶರಣಗೌಡ ಬೈಯ್ಯಾಪುರ, ವಸಂತ್ ಕುಮಾರ್ ಕೂಡ ದೆಹಲಿ ಪ್ರವಾಸ ಕೈಗೊಳ್ಳುವ ಬಗ್ಗೆ ಮಾಹಿತಿ ಸಿಕ್ಕಿದೆ.

ಊಹಾಪೋಹ ಬೇಡ ಎಂದ ಸುರ್ಜೇವಾಲ

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್ ವಿಚಾರ ಸಂಬಂಧ ದಯಮಾಡಿ ಏನೂ ಊಹಾಪೋಹಗಳಿಗೆ ಹೆಚ್ಚು ಗಮನ ಕೊಡಬೇಡಿ. ಸುಳ್ಳು ಸುದ್ದಿ ಹರಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಈಗಾಗಲೇ ರಾಜ್ಯಸಭೆ ಚುನಾವಣೆಗೆ ನೋಟಿಫಿಕೇಷನ್ ಆಗಿದೆ. ನಂತರ ವಿಧಾನಪರಿಷತ್ ಚುನಾವಣೆ ನಡೆಯಬೇಕಿದೆ. ಈ ಸಂಬಂಧ ಪಕ್ಷ ಅಭಿಪ್ರಾಯ ಕೇಳುತ್ತದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:43 pm, Mon, 25 May 26

Source link

ಬಿಗ್ ಬಾಸ್ ಖ್ಯಾತಿಯ ಕಾವ್ಯಾ ಶೈವಾಗೆ ಅವಮಾನ; ವೇದಿಕೆಯಲ್ಲೇ ಮೈಕ್ ಕಿತ್ತುಕೊಂಡ ವ್ಯಕ್ತಿ – Kannada News | Kavya Shaiva Mic Snatched: Bigg Boss Star’s Kalaburagi Event Controversy Goes Viral

ನಟಿ ಕಾವ್ಯಾ ಶೈವ ಅವರಿಗೆ ಬಿಗ್ ಬಾಸ್ (Bigg Boss) ಮೂಲಕ ತುಂಬಾನೇ ಖ್ಯಾತಿ ಸಿಕ್ಕಿದೆ. ಅವರು ಅನೇಕ ಸಮಾರಂಭಗಳಿಗೆ ತೆರಳುತ್ತಿದ್ದಾರೆ. ಈಗ ಅವರು ವೇದಿಕೆ ಮೇಲೆ ಇದ್ದಾಗಲೇ ನಡೆದ ಒಂದು ಘಟನೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಕಾವ್ಯಾ ಅವರು ವೇದಿಕೆ ಮೇಲೆ ಮಾತನಾಡುವಾಗ ಮೈಕ್ ಕಸಿದುಕೊಳ್ಳಲಾಗಿದೆ. ಕಲಬುರಗಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಾ ಇದೆ.

ಕಾವ್ಯಾ ಶೈವ ಅವರು ಕಲಬುರಗಿಯ ಕಲಬುರಗಿಯ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ಆಗಲೇ ವೇದಿಕೆ ಪೂರ್ತಿ ಜನರಿಂದ ತುಂಬಿತ್ತು. ಅವರಿಗೆ ಸರಿಯಾಗಿ ನಿಲ್ಲಲೂ ಜಾಗ ಇರಲಿಲ್ಲ. ಆದಾಗ್ಯೂ ಕಾವ್ಯಾ ಮಾತನಾಡುತ್ತಿದ್ದರು. ಆಗ ಬಂದ ವ್ಯಕ್ತಿಯೋರ್ವ ಕಾವ್ಯಾ ಅವರಿಂದ ಮೈಕ್ ಕಸಿದುಕೊಂಡಿದ್ದಾರೆ. ಇದರಿಂದಾಗಿ ವೇದಿಕೆಯ ಮೇಲೆ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ವೇದಿಕೆ ಮೇಲೆ ಮಾತನಾಡುತ್ತಿದ್ದಾಗ ಏಕಾಏಕಿ ಮೈಕ್ ಕಿತ್ತುಕೊಂಡಿದ್ದನ್ನು ಕಂಡು ಕಾವ್ಯಾ ಶಾಕ್ ಆದರು. ಆದರೆ, ಎಲ್ಲಿಯೂ ಅವರು ಕೋಪ ಹೊರಹಾಕಿಲ್ಲ. ಕಾವ್ಯಾಗೆ ಆದ ಅವಮಾನವನ್ನು ಸಂಘಟಕರೊಬ್ಬರು ಪ್ರಶ್ನಿಸಿದ್ದಾರೆ. ಮೈಕ್ ಕಿತ್ತುಕೊಂಡ ವ್ಯಕ್ತಿ ಹಾಗೂ ವೇದಿಕೆಯ ಮೇಲೆಯೇ ಇದ್ದ ಸಂಘಟಕರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ‘ನಷ್ಟ ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ

ಕಾವ್ಯಾ ಶೈವ ಅವರು ಕಿರುತೆರೆ ಮೂಲಕ ಸದ್ದು ಮಾಡಿದವರು. ‘ಕೆಂಡ ಸಂಪಿಗೆ’ ಸೀರಿಯಲ್ ಅಲ್ಲಿ ನಟಿಸಿದರು. ‘ಕೊತ್ತಲವಾಡಿ’ ಸಿನಿಮಾದಲ್ಲಿ ನಾಯಕಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭರವಸೆ ಮೂಡಿಸಿದ ಅಮೆರಿಕ-ಇರಾನ್ ಡೀಲ್; ಗರಿಗೆದರಿದ ಷೇರುಬಜಾರು – Kannada News | Stock Market rising today on May 25th, know the reasons behind this rise

ನವದೆಹಲಿ, ಮೇ 25: ಭಾರತದ ಷೇರು ಮಾರುಕಟ್ಟೆ (Stock Market) ಇವತ್ತು ಸೋಮವಾರ ಚೇತರಿಸಿಕೊಂಡಿದೆ. ಪ್ರಮುಖ ಸೂಚ್ಯಂಕಗಳಾದ ನಿಫ್ಟಿ50 ಮತ್ತು ಸೆನ್ಸೆಕ್ಸ್30 ಇದು ಶೇ. 1ರಿಂದ ಶೇ. 1.20ರಷ್ಟು ಹೆಚ್ಚಳ ಕಂಡಿವೆ. ಹೂಡಿಕೆದಾರರಿಗೆ 5 ಲಕ್ಷ ಕೋಟಿ ರೂ ಗಳಿಕೆ ಆಗಿದೆ. ನಿಫ್ಟಿ ಸೂಚ್ಯಂಕ 240 ಅಂಕಗಳ (ಶೇ. 1.02) ಹೆಚ್ಚಳದೊಂದಿಗೆ 23,959 ಮಟ್ಟಕ್ಕೆ ಏರಿದೆ. ಸೆನ್ಸೆಕ್ಸ್ 863 ಅಂಕಗಳ ಏರಿಕೆಯೊಂದಿಗೆ 76,279 ಮಟ್ಟ ಮುಟ್ಟಿದೆ. ಬಿಎಸ್​ಇ ಮತ್ತು ಎನ್​ಎಸ್​ಇಯಲ್ಲಿರುವ ಬಹುತೇಕ ಎಲ್ಲಾ ಸೂಚ್ಯಂಕಗಳೂ ಕೂಡ ಹಸಿರುಬಣ್ಣದಲ್ಲಿವೆ. ಷೇರು ಬಜಾರು ಇವತ್ತು ಸೋಮವಾರ ಗರಿಗೆದರಲು ಪ್ರಮುಖ ಕಾರಣಗಳೇನು?

ಅಮೆರಿಕ ಇರಾನ್ ಒಪ್ಪಂದ ಏರ್ಪಡುವ ನಿರೀಕ್ಷೆ

ಅಮೆರಿಕ ಮತ್ತು ಇರಾನ್ ದೇಶಗಳು ಒಂದು ಸರ್ವಸಮ್ಮತವಾದ ಒಪ್ಪಂದಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಮೂರು ತಿಂಗಳ ಸಂಘರ್ಷದಿಂದ ಇಡೀ ಜಗತ್ತು ನಲುಗಿ ಹೋಗಿದೆ. ಅದರಲ್ಲೂ ಭಾರತಕ್ಕೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ. ಹೀಗಾಗಿ, ಸಂಘರ್ಷ ಕೊನೆಗೊಳ್ಳುವ ನಿರೀಕ್ಷೆಯು ಹೂಡಿಕೆದಾರರಿಗೆ ಸಮಾಧಾನ ಕೊಟ್ಟಿರಬಹುದು.

ಇದನ್ನೂ ಓದಿ: ಮೊದಲ ಬಾರಿ ಇನ್ವೆಸ್ಟ್​ಮೆಂಟ್​ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್

ಕಚ್ಚಾ ತೈಲ ಬೆಲೆ 100 ಡಾಲರ್​ನೊಳಗೆ

ಅಮೆರಿಕ ಇರಾನ್ ಮಧ್ಯೆ ಒಪ್ಪಂದ ಏರ್ಪಡುವ ಸಾಧ್ಯತೆಯು ಕಚ್ಚಾ ತೈಲ ಬೆಲೆ ಇಳಿಕೆಗೆ ದಾರಿ ಮಾಡಿಕೊಟ್ಟಿದೆ. ಬ್ರೆಂಟ್ ಕ್ರೂಡ್ ಫ್ಯೂಚರ್ಸ್ ಶೇ. 4.6ರಷ್ಟು ತಗ್ಗಿ 98.8 ಡಾಲರ್​ಗೆ ಇಳಿದಿದೆ.

ಆರ್​ಬಿಐನಿಂದ ಭರ್ಜರಿ ಡಿವಿಡೆಂಡ್

ಭಾರತೀಯ ರಿಸರ್ವ್ ಬ್ಯಾಂಕ್ ಮೊನ್ನೆ ಸರ್ಕಾರಕ್ಕೆ ಭರ್ಜರಿ ಡಿವಿಡೆಂಡ್ ಪ್ರಕಟಿಸಿದೆ. 2025-26ರ ವರ್ಷದಲ್ಲಿ ಆರ್ಬಿಐನಿಂದ ಸರ್ಕಾರಕ್ಕೆ 2.87 ಲಕ್ಷ ಕೋಟಿ ರೂ ಲಾಭಾಂಶ ಸಂದಾಯವಾಗಲಿದೆ. ಇದು ಅದರ ಇತಿಹಾಸದಲ್ಲೇ ಯಾವುದೇ ವರ್ಷದಲ್ಲಿ ಸರ್ಕಾರಕ್ಕೆ ನೀಡಲಾಗಿರುವ ಅತಿದೊಡ್ಡ ಡಿವಿಡೆಂಡ್ ಮೊತ್ತ. ಆರ್ಥಿಕವಾಗಿ ಒತ್ತಡದಲ್ಲಿರುವ ಭಾರತಕ್ಕೆ ಈ ಡಿವಿಡೆಂಡ್ ಬಹಳ ಸಹಾಯಕ್ಕೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಭಾರತದ ಸ್ಟುಡೆಂಟ್ ಸ್ಟಾರ್ಟ್‌ಅಪ್‌ಗಳಲ್ಲಿ ಡೀಪ್-ಟೆಕ್ ಕ್ರಾಂತಿ: ಕ್ಯಾಂಪಸ್ ಫಂಡ್ ವರದಿ

ಡಾಲರ್ ಎದುರು ರುಪಾಯಿ ಚೇತರಿಕೆ

ಅಮೆರಿಕದ ಡಾಲರ್ ಎದುರು ರುಪಾಯಿ ಚೇತರಿಸಿಕೊಳ್ಳುತ್ತಿರುವುದೂ ಕೂಡ ಷೇರು ಪೇಟೆ ಉಬ್ಬಲು ಒಂದು ಕಾರಣ. ಕಳೆದ ವಾರ 96 ದಾಟಿ 97 ರ ಸಮೀಪಕ್ಕೆ ಹೋಗಿದ್ದ ರುಪಾಯಿ ಇದೀಗ 95.20ಗೆ ಬಂದಿದೆ. ಹಾಗೆಯೇ, ಭಯದ ಸೂಚಿಯಾಗಿರುವ ವಿಐಎಕ್ಸ್ ಕೂಡ ಕಡಿಮೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗೆಲ್ಲೋರು ಯಾರು? ಹೀಗಿದೆ RCB ಲೆಕ್ಕಾಚಾರ – Kannada News | GT vs RCB: Dharamshala Debut in Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಆತಿಥ್ಯವಹಿಸಲು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್‌ಪಿಸಿಎ (HPCA) ಸ್ಟೇಡಿಯಂ ಸಜ್ಜಾಗಿದೆ. ಈ ಮೈದಾನದಲ್ಲಿ ನಾಳೆ (ಮೇ 26) ನಡೆಯಲಿರುವ ಪ್ಲೇಆಫ್​ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ಆರ್​ಸಿಬಿ ಈ ಮೈದಾನದಲ್ಲಿ ಗೆಲ್ಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಹೆಚ್​ಪಿಸಿಎ ಮೈದಾನದಲ್ಲಿ ಆರ್​ಸಿಬಿ ಈವರೆಗೆ ಆಡಿರುವುದು ಕೇವಲ 3 ಪಂದ್ಯಗಳು. ಈ ಮೂರು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡದ ಪ್ರದರ್ಶನ ಹೇಗಿತ್ತು ಎಂಬುದರ ಇಣುಕು ನೋಟ ಇಲ್ಲಿದೆ…

  •  ಮೇ 17, 2026: ಇತ್ತೀಚೆಗೆ ಈ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ 4 ವಿಕೆಟ್‌ ಕಳೆದುಕೊಂಡು 222 ರನ್ ಕಲೆಹಾಕಿದ್ದರು. ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡವನ್ನು 199/8 ರನ್‌ಗಳಿಗೆ ನಿಯಂತ್ರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಸಾಧಿಸಿತ್ತು
  • 2. ಮೇ 9, 2024: ಈ ಮೈದಾನದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ದಾಖಲೆ ಆರ್​ಸಿಬಿ ತಂಡದ ಹೆಸರಿನಲ್ಲಿದೆ. 2024 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಈ ಮೈದಾನದಲ್ಲಿ ಆರ್​ಸಿಬಿ 20 ಓವರ್​ಗಳಲ್ಲಿ 241 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ ಕೇವಲ 181 ರನ್‌ಗಳಿಗೆ ಆಲೌಟ್ ಆಗಿತ್ತು.
  • ಮೇ 17, 2011: ಧರ್ಮಶಾಲಾದಲ್ಲಿ ಆರ್‌ಸಿಬಿ ಆಡಿದ ಮೊದಲ ಪಂದ್ಯದಲ್ಲಿ ಸೋಲನುಭವಿಸಿತ್ತು. ಅದು ಕೂಡ 15 ವರ್ಷಗಳ ಹಿಂದೆ. ಅಂದು ಆ್ಯಡಮ್ ಗಿಲ್‌ಕ್ರಿಸ್ಟ್ ನೇತೃತ್ವದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 232 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಕೇವಲ 121 ರನ್‌ಗಳಿಗೆ ಆಲೌಟ್ ಆಗಿ ಹೀನಾಯವಾಗಿ ಸೋಲೊಪ್ಪಿಕೊಂಡಿದ್ದರು.

ಅಂದರೆ ಧರ್ಮಶಾಲಾದಲ್ಲಿ ಆರ್​ಸಿಬಿ ಆಡಿದ ಮೂರು ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದೆ. ಈ ಎರಡೂ ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ವಿರುದ್ಧದವೇ ಗೆದ್ದುಕೊಂಡಿದೆ. ಅಂದರೆ ತವರು ಪ್ರೇಕ್ಷಕರ ಎದುರಲ್ಲಿ ಪಂಜಾಬ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿಯೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್​ಸಿಬಿ ಗುರುತಿಸಿಕೊಂಡಿದೆ.

ಏಕೆಂದರೆ ಗುಜರಾತ್ ಟೈಟಾನ್ಸ್ ತಂಡವು ಧರ್ಮಶಾಲಾ ಮೈದಾನದಲ್ಲಿ ಈವರೆಗೆ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಇದೇ ಮೊದಲ ಬಾರಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಅತ್ತ ಮೂರು ಪಂದ್ಯಗಳನ್ನಾಡಿರುವ ಅನುಭವ ಹೊಂದಿರುವ, ಅದರಲ್ಲೂ ಈ ಬಾರಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೆಚ್​ಪಿಸಿಎ ಮೈದಾನದ ಪಿಚ್​ ಬಗ್ಗೆ ಸ್ಪಷ್ಟತೆ ಇದೆ. ಹೀಗಾಗಿಯೇ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪ್ರಚಂಡ ಪ್ರದರ್ಶನ ನೀಡುವುದನ್ನು ಎದುರು ನೋಡಬಹುದು.

ಧರ್ಮಶಾಲಾದಲ್ಲಿ ಮಿಂಚಿದ ಆರ್‌ಸಿಬಿ ಸ್ಟಾರ್ಸ್:

  •  ವಿರಾಟ್ ಕೊಹ್ಲಿ: ಹೆಚ್​ಪಿಸಿಎ ಗ್ರೌಂಡ್ ವಿರಾಟ್ ಕೊಹ್ಲಿಯ ನೆಚ್ಚಿನ ಮೈದಾನಗಳಲ್ಲಿ ಒಂದು. ಇಲ್ಲಿ ಆಡಿದ ಪಂದ್ಯಗಳಲ್ಲಿ ಕೊಹ್ಲಿ 92 (2024) ಮತ್ತು 58 (2026) ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
  •  ವೆಂಕಟೇಶ್ ಅಯ್ಯರ್: ಈ ಬಾರಿಯ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ಧ ಕೇವಲ 40 ಎಸೆತಗಳಲ್ಲಿ ಅಜೇಯ 73 ರನ್ ಚಚ್ಚಿ ವೆಂಕಟೇಶ್ ಅಯ್ಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
  • ರಾಸಿಖ್ ಸಲಾಮ್: ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಡೆತ್ ಓವರ್‌ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ರಾಸಿಖ್  3 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದನ್ನೂ ಓದಿ: 2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..!

ಅಂದರೆ ಈ ಬ್ಯಾಟಿಂಗ್ ಸ್ನೇಹಿ ಪಿಚ್​ನಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಇವರೊಂದಿಗೆ ವೆಂಕಟೇಶ್ ಅಯ್ಯರ್, ರಜತ್ ಪಾಟಿದಾರ್ ಹಾಗೂ ಟಿಮ್ ಡೇವಿಡ್ ಅಬ್ಬರಿಸಿದರೆ ಗುಜರಾತ್ ಟೈಟಾನ್ಸ್ ವಿರುದ್ಧ ಬೃಹತ್ ಮೊತ್ತದ ಸ್ಕೋರ್ ಎದುರು ನೋಡಬಹುದು.

Published On – 12:53 pm, Mon, 25 May 26

Source link

ಲಕ್ಷ ಲಕ್ಷ ನಾಣ್ಯಗಳನ್ನು ಕೊಟ್ಟು ಕನಸಿನ ಬುಲೆಟ್ ಬೈಕ್ ಖರೀದಿಸಿದ ಮೀನು ವ್ಯಾಪಾರಿ – Kannada News | Fish Seller in Andhra Pradesh Buys Dream Bike Using Only Coins

ಆಂಧ್ರಪ್ರದೇಶ, ಮೇ 25: ಬಾಲ್ಯದ ಕನಸೊಂದನ್ನು ನನಸು ಮಾಡಿಕೊಳ್ಳಲು ವ್ಯಕ್ತಿಯೊಬ್ಬರು ಮೂರು ವರ್ಷಗಳ ಕಾಲ ಸತತವಾಗಿ ಶ್ರಮಿಸಿ, ವಿಭಿನ್ನ ರೀತಿಯಲ್ಲಿ ಬೈಕ್(Bike) ಖರೀದಿಸಿರುವ ಅಪರೂಪದ ಘಟನೆಯೊಂದು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ. ಈ ವಿಚಿತ್ರ ಘಟನೆಯ ವೀಡಿಯೊಗಳು ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

ಬಾಪಟ್ಲಾ ಜಿಲ್ಲೆಯ ಪಟಾಚಿರಾದ ಮೀನು ವ್ಯಾಪಾರಿಯಾದ ರಸನಿ ರಾಘವ ಅವರಿಗೆ ಬಾಲ್ಯದಿಂದಲೂ ಬುಲೆಟ್ ಬೈಕ್ ಖರೀದಿಸಬೇಕೆಂಬ ಬಲವಾದ ಆಸೆ ಇತ್ತು. ಆದರೆ, ಆರ್ಥಿಕ ತೊಂದರೆಗಳಿಂದಾಗಿ ಅವರ ಕನಸು ನನಸಾಗುತ್ತಿರಲಿಲ್ಲ. ಆಗ ಅವರು ಎಲ್ಲರಿಗಿಂತ ವಿಭಿನ್ನವಾಗಿ ಬೈಕ್ ಖರೀದಿಸಲು ನಿರ್ಧರಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು, ತಮ್ಮ ವ್ಯಾಪಾರದಿಂದ ಗಳಿಸಿದ ಹಣದಲ್ಲಿ ಕೇವಲ 10 ರೂಪಾಯಿ ಮುಖಬೆಲೆಯ ನಾಣ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಆರಂಭಿಸಿದರು.

ಹೀಗೆ ಮೂರು ವರ್ಷಗಳ ಕಾಲ ನಿರಂತರವಾಗಿ ಸಂಗ್ರಹಿಸಿದ ಪರಿಣಾಮವಾಗಿ ಬರೋಬ್ಬರಿ 3 ಲಕ್ಷ ರೂಪಾಯಿ ಮೌಲ್ಯದ 10 ರೂಪಾಯಿ ನಾಣ್ಯಗಳು ಇವರ ಬಳಿ ಇದ್ದವು. ಇವು ಒಟ್ಟು 30,000 ನಾಣ್ಯಗಳಾಗಿದ್ದು, ಇವುಗಳ ಒಟ್ಟು ತೂಕ 220 ಕೆಜಿ ಇತ್ತು. ರಾಘವ ಅವರು ತಮ್ಮ ಸ್ನೇಹಿತರು ಮತ್ತು ಕುಟುಂಬಸ್ಥರ ಸಹಾಯದಿಂದ ಈ ನಾಣ್ಯಗಳನ್ನು ಎಣಿಸಿ 300 ಪ್ಯಾಕೆಟ್‌ಗಳಲ್ಲಿ ಜೋಡಿಸಿದರು.

ಮತ್ತಷ್ಟು ಓದಿ:
Video: ಬೈಕ್ ಓಡಿಸುತ್ತಿರುವಾಗಲೇ ಪತ್ನಿ ಕೈಯಲ್ಲಿ ಒದೆ ತಿಂದ ಪತಿ, ವೈರಲ್‌ ಆಯ್ತು ದೃಶ್ಯ

ಕೊನೆಗೆ, ಈ 220 ಕೆಜಿ ತೂಕದ ನಾಣ್ಯಗಳ ಚೀಲಗಳನ್ನು ಲಗೇಜ್ ವಾಹನವೊಂದರಲ್ಲಿ ತುಂಬಿಕೊಂಡು ಒಂಗೋಲ್‌ನಲ್ಲಿರುವ ಶೋರೂಂಗೆ ಸಾಗಿಸಿದ್ದಾರೆ. ಮೊದಮೊದಲು ಇಷ್ಟು ದೊಡ್ಡ ಪ್ರಮಾಣದ ನಾಣ್ಯಗಳನ್ನು ನೋಡಿ ಶೋರೂಂ ಸಿಬ್ಬಂದಿ ಆಶ್ಚರ್ಯಚಕಿತರಾದರು. ಆದರೆ, ರಾಘವ ಅವರ ದೃಢಸಂಕಲ್ಪ ಮತ್ತು ಬುಲೆಟ್ ಬೈಕ್ ಮೇಲಿರುವ ಪ್ರೀತಿಯನ್ನು ಕಂಡು ಮನಸಾರೆ ಶ್ಲಾಘಿಸಿ, ನಾಣ್ಯಗಳನ್ನು ಪಡೆದು ಅವರ ಕನಸಿನ ಬುಲೆಟ್ ಬೈಕ್ ಅನ್ನು ಹಸ್ತಾಂತರಿಸಿದರು. ಕೊನೆಗೂ ನೆಚ್ಚಿನ ಬುಲೆಟ್ ಬೈಕ್ ಏರಿ ಮನೆ ತಲುಪಿದ ರಾಘವ ಅವರನ್ನು ನೋಡಿ ಅವರ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿನಲ್ಲಿ ಆರ್ಥಿಕ ಅಪರಾಧಗಳ ಭಾರಿ ಏರಿಕೆ: ಪ್ರತಿ 2.5 ಗಂಟೆಗೆ ದಾಖಲಾಗ್ತಿದೆ ಒಂದು ಆರ್ಥಿಕ ವಂಚನೆ ಕೇಸ್! – Kannada News | Bengaluru Economic Crime: One Financial Fraud Case Filed Every 2.5 Hours, NCRB 2024 Report Reveals Structural Shift

ಬೆಂಗಳೂರು, ಮೇ 25: ದೇಶದ ತಂತ್ರಜ್ಞಾನ ರಾಜಧಾನಿ, ಸಿಲಿಕಾನ್ ಸಿಟಿ ಎಂದೆಲ್ಲ ಖ್ಯಾತಿ ಪಡೆದಿರುವ ಬೆಂಗಳೂರು (Bengaluru) ಈಗ ಆರ್ಥಿಕ ಅಪರಾಧಗಳ ಕೇಂದ್ರವಾಗಿ ಹೊರಹೊಮ್ಮುತ್ತಿದೆ! ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ‘ಕ್ರೈಮ್ ಇನ್ ಇಂಡಿಯಾ 2024’ ವರದಿಯ ಪ್ರಕಾರ, ನಗರದಲ್ಲಿ ಕಳೆದ ಮೂರು ವರ್ಷಗಳಲ್ಲಿ (2022 ರಿಂದ 2024) ಪ್ರತಿ 2.5 ಗಂಟೆಗೆ ಸರಾಸರಿ ಒಂದರಂತೆ ಆರ್ಥಿಕ ಅಪರಾಧ ಪ್ರಕರಣಗಳು ದಾಖಲಾಗಿವೆ. ನಕಲಿ ದಾಖಲೆ ಸೃಷ್ಟಿ, ವಂಚನೆ, ಹಣಕಾಸು ಹಗರಣಗಳು ಮತ್ತು ವೈಟ್ ಕಾಲರ್ ಅಪರಾಧಗಳು ಸೇರಿ ಕಳೆದ 3 ವರ್ಷಗಳಲ್ಲಿ ಒಟ್ಟು 10,580 ಪ್ರಕರಣಗಳು ದಾಖಲಾಗಿವೆ. 2024ರ ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ 3,477 ಆರ್ಥಿಕ ಅಪರಾಧಗಳು ದಾಖಲಾಗಿವೆ. ಇದರೊಂದಿಗೆ, ದೇಶದಲ್ಲೇ ಅತಿ ಹೆಚ್ಚು ಆರ್ಥಿಕ ವಂಚನೆ ನಡೆಯುವ ಟಾಪ್ 5 ಮಹಾನಗರಗಳ ಪಟ್ಟಿಗೆ ಬೆಂಗಳೂರು ಸೇರಿದೆ.

ಮುಖ್ಯಾಂಶಗಳು

  • ಶೇ 93 ರಷ್ಟು ವಂಚನೆ ಪ್ರಕರಣಗಳು ನಕಲಿ ದಾಖಲೆ ಸೃಷ್ಟಿ ಮತ್ತು ವಂಚನೆಗೆ ಸಂಬಂಧಿಸಿದ್ದಾಗಿವೆ.
  • ಇಡೀ ಕರ್ನಾಟಕದಲ್ಲೇ ವಂಚಕರ ಜಾಲ ಸಕ್ರಿಯ.
  • ನ್ಯಾಯಾಲಯದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಕೇವಲ ಶೇ 5 ರಷ್ಟಿದೆ.

ಡಿಜಿಟಲ್ ವಂಚನೆಗಳತ್ತ ಶಿಫ್ಟ್ ಆದ ಅಪರಾಧ ಲೋಕ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿರುವ ಅಂಕಿ-ಅಂಶಗಳನ್ನು ಗಮನಿಸಿದರೆ ಬೆಂಗಳೂರಿನ ಅಪರಾಧದ ಸ್ವರೂಪವೇ ಬದಲಾಗುತ್ತಿರುವುದು ಸ್ಪಷ್ಟವಾಗಿದೆ. ಸಾಮಾನ್ಯ ಕಳ್ಳತನ, ದರೋಡೆ ಮತ್ತು ದೈಹಿಕ ದೌರ್ಜನ್ಯಗಳಿಗಿಂತಲೂ ಸಾರ್ವಜನಿಕರನ್ನು ಡಿಜಿಟಲ್ ಹಾಗೂ ಆರ್ಥಿಕವಾಗಿ ವಂಚಿಸುವ ಜಾಲಗಳು ಇಲ್ಲಿ ಹೆಚ್ಚಾಗುತ್ತಿವೆ. ನಗರದಲ್ಲಿ ದೊಡ್ಡ ಮಟ್ಟದ ಡಿಜಿಟಲ್ ಆರ್ಥಿಕತೆ, ಆನ್‌ಲೈನ್ ಬ್ಯಾಂಕಿಂಗ್ ಬಳಕೆ ಮತ್ತು ಹೂಡಿಕೆಯ ಸಂಸ್ಕೃತಿ ಹೆಚ್ಚಿರುವುದು ಖದೀಮರಿಗೆ ವರದಾನವಾಗಿದೆ. ನಕಲಿ ಹೂಡಿಕೆ ಪ್ಲಾಟ್‌ಫಾರ್ಮ್‌ಗಳು, ಕ್ರಿಪ್ಟೋಕರೆನ್ಸಿ ಹಗರಣಗಳು, ಲೋನ್ ಆಪ್ ಮುಖಾಂತರ ಬ್ಲ್ಯಾಕ್‌ಮೇಲ್ ಮಾಡುವುದು ಮತ್ತು ಟ್ರೇಡಿಂಗ್ ಆಪ್‌ಗಳ ಹೆಸರಲ್ಲಿ ಜನರನ್ನು ಲೂಟಿ ಮಾಡಲಾಗುತ್ತಿದೆ.

ಇದನ್ನೂ ಓದಿ: ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ

ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಈ ವಂಚಕ ಜಾಲಗಳು ನಕಲಿ ಬ್ಯಾಂಕ್ ಖಾತೆಗಳು, ತಾತ್ಕಾಲಿಕ ಸಿಮ್ ಕಾರ್ಡ್‌ಗಳು ಮತ್ತು ಎನ್‌ಕ್ರಿಪ್ಟ್ ಮಾಡಿದ ಆ್ಯಪ್‌ಗಳನ್ನು ಬಳಸುತ್ತಿರುವುದರಿಂದ ಪೊಲೀಸರಿಗೆ ಇವರನ್ನು ಪತ್ತೆ ಹಚ್ಚಿ ಹಣ ರಿಕವರಿ ಮಾಡುವುದು ಮತ್ತು ಚಾರ್ಜ್‌ಶೀಟ್ ಹಾಕುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ! – Kannada News | Bakrid 2026: Heavy Demand at Chikkaballapur’s Peresandra Sheep Market, Traders Flock from Neighboring States

ಚಿಕ್ಕಬಳ್ಳಾಪುರ, ಮೇ 25: ಬಕ್ರೀದ್ ಹಬ್ಬ ಹತ್ತಿರ ಬರುತ್ತಿದ್ದಂತೆ ರಾಜ್ಯಾದ್ಯಂತ ಕುರಿ, ಮೇಕೆ ಹಾಗೂ ಕೋಳಿಗಳ ಖರೀದಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಅದರಲ್ಲೂ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪೆರೆಸಂದ್ರ ಕುರಿ ಸಂತೆಯಲ್ಲಿ ವರ್ತಕರು ಕುರಿ, ಮೇಕೆ ಖರೀದಿಗೆ ಮುಗಿಬಿದ್ದಿದ್ದಾರೆ. ಈ ಸಂತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ತಮಿಳುನಾಡು ಮತ್ತು ಕೇರಳದಿಂದಲೂ ವರ್ತಕರು ಆಗಮಿಸುತ್ತಿದ್ದಾರೆ.

ಮಾರಾಟಕ್ಕೆ ಸುಮಾರು 40 ಸಾವಿರಕ್ಕೂ ಹೆಚ್ಚು ಕುರಿಗಳು ಆಗಮಿಸಿದ್ದು, ಪ್ರಸ್ತುತ 25 ಸಾವಿರದಿಂದ 30 ಸಾವಿರಕ್ಕೂ ಹೆಚ್ಚು ಕುರಿಗಳು ಮಾರಾಟಕ್ಕೆ ಲಭ್ಯವಿವೆ. ಸಾವಿರಾರು ವ್ಯಾಪಾರಿಗಳು ತಮಗೆ ಇಷ್ಟವಾದ ಕುರಿ, ಮೇಕೆ, ಟಗರುಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಿದ್ದಾರೆ. ಪರಿಣಾಮವಾಗಿ, ಕುರಿ ಮಾಲೀಕರ ಮುಖದಲ್ಲಿ ಮಂದಹಾಸ ಮೂಡಿದೆ. ಒಂದು ಕುರಿಗೆ ಕನಿಷ್ಠ 3,000 ರೂಪಾಯಿಗಳಿಂದ ಆರಂಭವಾಗಿ, ಮೇಕೆಗಳಿಗೆ 10,000 ದಿಂದ 15,000 ರೂಪಾಯಿಗಳವರೆಗೂ ಬೆಲೆ ಇದೆ. ಒಟ್ಟಾರೆ, ಬಕ್ರೀದ್ ಹಬ್ಬದ ಪ್ರಯುಕ್ತ ಪೆರೆಸಂದ್ರ ಕುರಿ ಸಂತೆಯಲ್ಲಿ ವ್ಯಾಪಾರ-ವಹಿವಾಟು ಅತ್ಯಂತ ಬಿರುಸಿನಿಂದ ಸಾಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ – Kannada News | Ashwini Gowda Ask Fans to Watch Hayagriva Movie

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಅವರು ಈಗ ಅಭಿಮಾನಿಗಳ ಬಳಿ ಒಂದು ವಿಶೇಷ ಮನವಿ ಇಟ್ಟಿದ್ದಾರೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಅಶ್ವಿನಿ ಗೌಡ, ಧನ್ವೀರ್, ಸುನೀಲ್ ಮೊದಲಾದವರು ನಟಿಸಿರುವ ‘ಹಯಗ್ರೀವ’ ಹೆಸರಿನ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಆರಂಭಿಸಿದೆ. ಈ ಚಿತ್ರವನ್ನು ನೋಡುವಂತೆ ಅವರು ಅಭಿಮಾನಿಗಳಲ್ಲಿ ಕೋರಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅಶ್ವಿನಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version