ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ಮೇಷ ರಾಶಿ:

ಇಂದು ಬರುವ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿಯನ್ನು ದೊರಕಿಸಿಕೊಳ್ಳುವ ಸಂಭವವಿದೆ. ಮಕ್ಕಳ‌ ಜೊತೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡುವುದಿಲ್ಲ.

ವೃಷಭ ರಾಶಿ:

ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. ನಿಮ್ಮ ಸಂಗಾತಿಯ ಸೃಜನಶೀಲತೆಯನ್ನು ನೋಡಿ ನೀವು ತುಂಬಾ ಸಂತೋಷಪಡುತ್ತೀರಿ. ನಿಮ್ಮ ಮಾತಿನಿಂದ ಸಮಾಧಾನವು ಬರುವುದು. ದೂರದಲ್ಲಿರುವ ಮಕ್ಕಳನ್ನು ನೋಡುವ ಆಸೆಯಾಗಬಹುದು. ಉದ್ಯಮದ ಕಾರಣ ಪ್ರಯಾಣ ಮಾಡುವ ಸ್ಥಿತಿಯು ಬರಬಹುದು.

ಮಿಥುನ ರಾಶಿ:

ನೀವು ಪರಿಚಿತರ ಸ್ವತ್ತನ್ನು ಗೊತ್ತಾಗದೇ ಅಪಹರಿಸುವಿರಿ. ದಾಂಪತ್ಯದಲ್ಲಿ ನೆಮ್ಮದಿ, ಶಾಂತಿ ಸಮಾಧಾನವನ್ನು ಪ್ರಯತ್ನಪೂರ್ವಕವಾಗಿ. ಕಂಡುಕೊಳ್ಳುವಿರಿ. ನಿಂತ ಕೆಲಸ ಕಾರ್ಯಗಳನ್ನು ಚಾಲನೆಗೊಳಿಸಿರಿ. ನೀವು ಚಿಂತಿತರಾಗಿರುವ ಕಾರಣ ಮಾನಸಿಕ ಒತ್ತಡವೂ ಇರುತ್ತದೆ. ಮಾನಸಿಕ ಸ್ಥಿತಿಯೂ ಬಹಳ ಆಹ್ಲಾದದಿಂದ ಇರಲಿದೆ. ಯಾವ ಹೂಡಿಕೆಯು ನಿಮಗೆ ಲಾಭದಾಯಕವಾಗುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅನ್ಯ ಚಟುವಟಿಕೆಯಲ್ಲಿ ಆಸಕ್ತಿ ಅಧಿಕ.

ಕರ್ಕಾಟಕ ರಾಶಿ:

ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣವಿರಲಿದೆ.‌ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಫಲಿತಾಂಶ ಉತ್ಸಾಹವನ್ನು ಕೊಡುವುದು. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಉದ್ಯೋಗಸ್ಥರು ಇಂದು ಕೆಲವು ನಿರಾಶೆಯನ್ನು ಎದುರಿಸಬೇಕಾಗಬಹುದು. ನಿಮ್ಮ ವಿಳಂಬ ಕಾರ್ಯಕ್ಕೆ ಹೇಳಿಸಿಕೊಳ್ಳಬೇಕಾದೀತು. ಪದೋನ್ನತಿಯ ಬಗ್ಗೆ ಕೇಳಿದರೂ ಏನೂ ಪ್ರಯೋಜನವಾಗದು. ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ.

ಸಿಂಹ ರಾಶಿ:

ಇನ್ನೊಬ್ಬರ ನೇರವಾದ ಮಾತಿನಿಂದ ನಿಮಗೆ ನೋವಾಗುವುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರ ಜೊತೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ ಅಸೂಯೆ ಉಂಟಾಗಲಿದೆ. ದೂರ ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ಉಳಿಯುತ್ತದೆ. ಹಿರಿಯರಿಂದ ನಿಮಗೆ ಮೆಚ್ಚುಗೆ ಸಿಗಬಹುದು. ದಾಂಪತ್ಯದಲ್ಲಿ ಪ್ರೀತಿಗೆ ನೀವು ಮಾರುಹೋಗಬಹುದು. ಅತಿಥಿಗಳ ಆಗಮನವು ನಿಮ್ಮ ಮನೆಗೆ ಆಗಲಿದೆ.

ಕನ್ಯಾ ರಾಶಿ:

ಇಂದು ನಿಮ್ಮ ಸಾಮಾಜಿಕ ಕಾಳಜಿಯನ್ನು ಜನರು ಹೊಗಳುವರು. ಹಣಕಾಸಿನ ಸ್ಥಿತಿ ಉತ್ತಮವಾಗಿಸಿಕೊಳ್ಳುವಿರಿ. ಮನೆಯ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗದು. ಸಮೀಪದ ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿಗೆ ಶಾಂತಿಯನ್ನು ಕೊಡುವಿರಿ. ಶ್ರಮವಹಿಸಿ ದುಡಿಯುವವರಿಗೆ ಉತ್ತಮ ದಿನ. ಅವರು ತಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಕೆಲವು ಮಾನಸಿಕ ಸ್ಥಿತಿಯನ್ನು ಬಿಡಲು ಪ್ರಯತ್ನಿಸುವಿರಿ. ಆದರೆ ಅದು ನಿಮಗೆ ಗೊತ್ತಿಲ್ಲದೇ ನಿಮ್ಮನ್ನು ಆವರಿಸಬಹುದು.

ತುಲಾ ರಾಶಿ:

ಇಂದು ಅನಿರೀಕ್ಷಿತ ಲಾಭದಿಂದ ತೃಪ್ತಿ ಇರವುದು. ನಿಮ್ಮ ಸಂಬಂಧಿಕರಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯವಾಗಿ ಇರುತ್ತದೆ. ಪ್ರೀತಿಯ ಜೀವನವನ್ನು ನಡೆಸುವ ಜನರು ಇಂದು ಕೆಲವು ಸಮಸ್ಯೆಗಳನ್ನು ಎದುರಿಸುವಿರಿ. ಸಾರ್ವಜನಿಕವಾಗಿ ಸಿಗುವ ಮನ್ನಣೆಯನ್ನು ವಿರೋಧಿಸುವರು. ಧನದ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಇಂದು ಅಧಿಕ ಒತ್ತಡವಿಲ್ಲದೇ ಕಾರ್ಯವು ಮುಗಿಯುವುದು. ವಿದೇಶಪ್ರಯಾಣದಿಂದ ಖುಷಿಯು ಇರಲಿದೆ.

ವೃಶ್ಚಿಕ ರಾಶಿ:

ಸ್ವಂತ ಕಾರ್ಯಕ್ಕೆ ಸಂಬಂಧಿಸಿದಂತೆ ಅಲ್ಪ ಪ್ರಯೋಜನವನ್ನು ಪಡೆಯುವಿರಿ. ನಿಮ್ಮ ಕೆಲಸವನ್ನು ನೀವು ಆನಂದಿಸುವಿರಿ ಮತ್ತು ಮುಂದೆ ಸಾಗುತ್ತೀರಿ. ಬಿಡದೇ ಹಠದಿಂದ ಮಾಡುವ ಕೆಲಸವು ಪೂರ್ಣವಾಗುವುದು. ಅದೃಷ್ಟ ನಿಮ್ಮ ಕಡೆ ಇರುತ್ತದೆ. ನೀವು ಯಾವುದೇ ಸವಾಲಿಗೆ ಹೆದರುವುದಿಲ್ಲ. ಮೆಚ್ಚುಗೆಯ ಮಾತಿನಿಂದ ಸಂಕೋಚಗೊಳ್ಳುವಿರಿ. ಆರಿಸಿಕೊಂಡ ಆಯ್ಕೆಯು ನಿಮಗೆ ಇಷ್ಟವಾಗದೇ ಈಗ ಇರುವುದು. ಪರಿಚಿತರ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವಿರಿ.

ಧನು ರಾಶಿ:

ನಿಮ್ಮ ಕುಟುಂಬದ ಜೊತೆ ನೀವು ಮುರಿಯಲಾಗದ ಬಂಧವನ್ನು ಬೆಳೆಸಿಕೊಳ್ಳುವಿರಿ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಮೆಚ್ಚುಗೆ ಪಡೆಯುತ್ತೀರಿ ಮತ್ತು ನಿಮ್ಮ ಕೆಲಸದ ಹೊರೆ ಹೆಚ್ಚಾಗುತ್ತದೆ. ನಿಮ್ಮ ಬಲವೃದ್ಧಿಗೆ ಬೇಕಾದ ತಯಾರಿಯನ್ನು ಮಾಡಿಕೋಳ್ಳುವುದು ಉತ್ತಮ. ಮಹಿಳೆಯರು ಆದಾಯದಲ್ಲಿ ಮುನ್ನಡೆ ಸಾಧಿಸುವರು ಇಂದು. ಇನ್ನೊಬ್ಬರ ಕಡೆಯಿಂದ ಕೆಲಸವನ್ನು ಮಾಡಿಸಿಕೊಳ್ಳುವ ಸಂದರ್ಭವು ಬರಬಹುದು.

ಮಕರ ರಾಶಿ:

ನಿಮಗೆ ಹಣಕಾಸಿನ ನೆರವು ಕುಟುಂಬ ವರ್ಗದವರ ಯಾರಿಂದಲಾದರೂ ದೊರೆಯುವುದು. ಆದಾಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ. ನಿಮಗೆ ಖರ್ಚು ಕೂಡ ಇರುತ್ತದೆ, ಆದರೆ ಹೆಚ್ಚು ಅಲ್ಲ. ಉದ್ಯೋಗಿಗಳು ಯಾವುದೇ ಎದುರಾಳಿಯ ಬಗ್ಗೆ ಸಕ್ರಿಯವಾಗಿ ಜಾಗರೂಕರಾಗಿರಬೇಕು. ವಿಳಂಬದ ಕಾರ್ಯಕ್ಕೆ ನೀವೇ ಜವಾಬ್ದಾರರು. ಮಿತ್ರರ ಆರ್ಥಿಕತೆಗೆ ನೀವು ಸಹಾಯ ಮಾಡುವಿರಿ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು.

ಕುಂಭ ರಾಶಿ:

ಇಂದು ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಅಂತಿಮವಾಗಿ ಶುಭ ಕಾಣುವಿರಿ. ಮನೆಯ ಖರ್ಚು ಹೆಚ್ಚಾಗಲಿದೆ. ಇದು ನಿಮ್ಮ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಕುಟುಂಬ ಸದಸ್ಯರಲ್ಲಿ ಪರಸ್ಪರ ಸಹೋದರತ್ವ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಅನವಶ್ಯಕ ಆಲೋಚನೆಗಳಿಂದ ಮನಸ್ಸು ಕ್ಷೋಭೆಗೊಳ್ಳುವುದು. ಆರೋಗ್ಯದ ವೃದ್ಧಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಕುಟುಂಬವನ್ನು ಮೆಚ್ಚಿಕೊಳ್ಳುವಿರಿ.

ಮೀನ ರಾಶಿ:

ಪ್ರೀತಿಯ ಜೀವನದಲ್ಲಿ ಸೃಜನಶೀಲತೆ ಉಪಯುಕ್ತವಾಗುವುದು. ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವಿವಾಹಿತರು ತಮ್ಮ ವೈವಾಹಿಕ ಜೀವನದಲ್ಲಿ ಒತ್ತಡದಿಂದ ಮುಕ್ತರಾಗುತ್ತಾರೆ. ಮಕ್ಕಳ ಬಗ್ಗೆ ತುಂಬಾ ಸಂತೋಷವಾಗುತ್ತದೆ. ಯಾರೊಂದಿಗೂ ಸ್ಪರ್ಧಿಸುವ ಅವಶ್ಯಕತೆ ಇಲ್ಲ. ಖಾಸಗಿಯ ಕೆಲಸವು ನಿಮಗೆ ಸಾಕೆನಿಸಬಹುದು. ಬಂಧುಗಳಿಂದ ಮಾನಸಿಕ ಹಿಂಸೆಯಾಗುವುದು. ಆರೋಗ್ಯದ ವಿಚಾರದಲ್ಲಿ ಕೆಲಸದಲ್ಲಿ ಬದಲಾವಣೆಯು ನಿಮಗೆ ಬೇಕಾದೀತು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದಶ‌ಮೀ, ನಿತ್ಯನಕ್ಷತ್ರ : ಪುನರ್ವಸು ಯೋಗ : ಅತಿಗಂಡ, ಕರಣ : ಕೌಲವ, ಸೂರ್ಯೋದಯ – 06 – 24 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:27 – 10:58, ಯಮಗಂಡ ಕಾಲ 14:01 – 15:32, ಗುಳಿಕ ಕಾಲ 06:24 – 07:56

-ಲೋಹಿತ ಹೆಬ್ಬಾರ್-8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1);

ಈ ದಿನ ನೀವು ಹೇಳಿದ್ದೇ ಸರಿ, ಮಾಡಿದ್ದೇ ಸರಿ ಎಂಬಂತೆ ಸುತ್ತಮುತ್ತ ಇರುವವರು ಹೇಳಲಿಕ್ಕೆ ಶುರು ಮಾಡಲಿದ್ದಾರೆ. ಇದರಿಂದ ನಿಮಗೂ ಖುಷಿ ಆಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಾಡು- ಬೆಟ್ಟ, ಗುಡ್ಡ ಪ್ರದೇಶಗಳಿಗೆ ತೆರಳುವ ಯೋಗ ಇದೆ. ಮಿಡ್ಲ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಇಷ್ಟು ಸಮಯ ಕೆಲಸ ಮಾಡುತ್ತಿರುವ ಕೆಲವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ, ಟಾಪ್ ಮ್ಯಾನೇಜ್ ಮೆಂಟ್ ಹುದ್ದೆಗೆ ಬಡ್ತಿ ನೀಡುವ ಸಾಧ್ಯತೆಗಳಿವೆ ಎಂಬುದು ತಿಳಿದುಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಈ ದಿನ ಒಂದು ವಿಚಾರವನ್ನು ಯಾರಿಗಾದರೂ ಹೇಳಿಕೊಳ್ಳಲೇಬೇಕು ಎಂಬ ಚಡಪಡಿಕೆ ನಿಮಗೆ ಶುರುವಾಗಲಿದೆ. ಆದರೆ ಅದು ಯಾರು ಎಂಬುದನ್ನು ನಿರ್ಧರಿಸುವುದೇ ಕಷ್ಟವಾಗಲಿದೆ. ಆಲೋಚನೆ ಮಟ್ಟದಲ್ಲೇ ಇರುವಂಥ ಯೋಜನೆಗೆ ಏಕಾಏಕಿ ಹಣ ಹಾಕುವುದಕ್ಕೆ ನಿರ್ಧಾರ ಮಾಡಬೇಡಿ. ಇನ್ನು ಸಾರ್ವಜನಿಕ ಜೀವನದಲ್ಲಿ ಇರುವಂಥವರು ಬಾಯಿ ತಪ್ಪಿ ಆಡಿದಂಥ ಮಾತೊಂದರ ಬಗ್ಗೆ ವಿಪರೀತ ಚರ್ಚೆಗೆ ಗುರಿ ಆಗಬೇಕಾಗುತ್ತದೆ. ಹಲವರಿಗೆ ಸಹಾಯ ಮಾಡಿದ ನಂತರವೂ ಕೆಲವು ಆಕ್ಷೇಪದ ಮಾತುಗಳನ್ನು ಕೇಳಿಸಿಕೊಳ್ಳ ಬೇಕಾದೀತು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕೃಷಿ ಭೂಮಿ, ಸೈಟು ಅಥವಾ ಬೇರೆ ಯಾವುದೇ ರೀತಿಯ ಆಸ್ತಿಯನ್ನು ಖರೀದಿ ಮಾಡುವುದಕ್ಕೆ ಗಂಭೀರವಾದ ಹುಡುಕಾಟವನ್ನು ನಡೆಸಲಿದ್ದೀರಿ. ಈ ಹಿಂದೆ ಯಾವಾಗಲೋ ನೋಡಿಕೊಂಡು ಬಂದಿದ್ದಂಥ ಆಸ್ತಿಯ ಬಗ್ಗೆಯೇ ನಿಮಗೆ ಮತ್ತೆ ಪ್ರಸ್ತಾವಗಳು ಬರಬಹುದು ಅಥವಾ ನಿಮಗೆ ಅದನ್ನು ಖರೀದಿ ಮಾಡಬೇಕು ಎಂಬ ಆಲೋಚನೆ ಬರಬಹುದು. ಈ ದಿನ ನಿಮ್ಮ ಊಟ- ತಿಂಡಿಯ ಸಮಯದ ಬಗ್ಗೆ ಹೆಚ್ಚಿನ ಲಕ್ಷ್ಯವನ್ನು ನೀಡಬೇಕು. ಏಕೆಂದರೆ ನಿಮ್ಮಲ್ಲಿ ಯಾರಿಗೆ ಗ್ಯಾಸ್ಟ್ರಿಕ್ ನಂಥ ಸಮಸ್ಯೆಗಳಿವೆಯೋ ಅಂಥವರಿಗೆ ಸಮಸ್ಯೆ ಉಲ್ಬಣ ಆಗಬಹುದು.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವುದಕ್ಕೆ ಹಣ ಖರ್ಚು ಮಾಡುವಂಥ ಸಾಧ್ಯತೆಗಳಿವೆ. ನಿಮ್ಮಲ್ಲಿ ಯಾರು ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದೀರಿ, ಅಂಥವರು ಅನಿವಾರ್ಯವಾಗಿ ಹುಡುಕಾಟವನ್ನು ಮುಂದಕ್ಕೆ ಹಾಕಬೇಕಾದ ಪರಿಸ್ಥಿತಿ ಸೃಷ್ಟಿ ಆಗಲಿದೆ. ಇದೇ ಮೊದಲ ಬಾರಿಗೆ ಎಂಬಂತೆ ಮಾಡಿದ ಕೆಲಸಗಳಲ್ಲಿ ಯಶಸ್ಸು ದೊರೆಯುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮಲ್ಲಿ ಯಾರು ಅಕ್ಕಪಕ್ಕದಲ್ಲಿಯೇ ಇರುವಂಥ ಸೈಟು, ಮನೆಯನ್ನು ಖರೀದಿ ಮಾಡಬೇಕು ಎಂದು ಪ್ರಯತ್ನಿಸುತ್ತಿರುವಿರೋ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಯೋಗ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಈ ದಿನ ಕೆಲವು ವ್ಯಕ್ತಿಗಳಿಂದ ದೂರ ಇರುವುದಕ್ಕೆ ಅಲೋಚನೆ ಮಾಡಲಿದ್ದೀರಿ. ವಿಪರೀತ ಪೊಸೆಸಿವ್ ನೆಸ್ ಅಂತಲೋ ಅಥವಾ ನೀವು ಹೇಳಿಕೊಂಡ ವಿಷಯವನ್ನು ಎಲ್ಲ ಕಡೆಗೆ ಹೇಳಿಕೊಂಡು ಬರುತ್ತಿದ್ದಾರೆ ಅಂತಲೋ ಅಥವಾ ನಿಮ್ಮ ಬಗ್ಗೆ ಹಾಗೂ ನಿಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೋ ಕೆಲವು ವ್ಯಕ್ತಿಗಳನ್ನು ದೂರ ಮಾಡುವುದಕ್ಕೆ ನಿರ್ಧರಿಸಲಿದ್ದೀರಿ. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್, ಹೂಡಿಕೆ ಹಾಗೂ ಸಾಲ ಎಷ್ಟಿದೆ ಎಂಬ ಸಂಗತಿಯನ್ನು ಸ್ನೇಹಿತರು, ಆಪ್ತರ ಜತೆಗೆ ಚರ್ಚೆ ನಡೆಸುವಂಥ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಂತಾನ ಅಪೇಕ್ಷಿತರಿಗೆ ಅಡೆ-ತಡೆಗಳು ಜಾಸ್ತಿ ಆಗುತ್ತಿವೆ ಎಂದು ಅನಿಸಲಿಕ್ಕೆ ಆರಂಭವಾಗಲಿದೆ. ಹಣಕಾಸಿನ ವಿಚಾರಕ್ಕೆ ದಂಪತಿ ಮಧ್ಯೆ ವಾಗ್ವಾದಗಳು ಆಗಲಿವೆ. ನೀವು ಒಂದು ವೇಳೆ ವ್ಯಾಪಾರ- ವ್ಯವಹಾರವನ್ನು ಮಾಡುತ್ತಿರುವವರಾದಲ್ಲಿ ಅದರ ಒಳಸುಳಿಗಳು, ರಹಸ್ಯಗಳನ್ನು ಯಾರ ಜತೆಗೂ ಹಂಚಿಕೊಳ್ಳುವುದಕ್ಕೆ ಹೋಗಬೇಡಿ. ಪದೇಪದೇ ಸಾಲ ಕೇಳುತ್ತಾ ಕೆಲವು ವ್ಯಕ್ತಿಗಳು ಮಾನಸಿಕ ಹಿಂಸೆಗೆ ಕಾರಣ ಆಗಲಿದ್ದಾರೆ. ಬ್ಯಾಂಗಲ್ ಸ್ಟೋರ್ ಗಳನ್ನು ನಡೆಸುತ್ತಿರುವವರು ಹಾಗೂ ಸೀರೆ- ಚೂಡಿದಾರ್ ಹೀಗೆ ಹೆಣ್ಣುಮಕ್ಕಳ ದಿರಿಸುಗಳ ಮಾರಾಟದಲ್ಲಿ ತೊಡಗಿರುವವರಿಗೆ ಆದಾಯದಲ್ಲಿ ಭಾರೀ ಇಳಿಕೆ ಆಗಿ, ಚಿಂತೆಗೆ ಕಾರಣವಾಗಬಹುದು.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನೀವು ಯಾವ ವಿಚಾರವನ್ನು ಮತ್ತು ಕೆಲಸವನ್ನು ಸಾಂಪ್ರದಾಯಿಕ ಅಲ್ಲದ ರೀತಿಯಲ್ಲಿ ನಿರ್ವಹಿಸಿರುತ್ತೀರಿ ಅದರಲ್ಲಿ ಉತ್ತಮವಾದ ಫಲಿತಾಂಶವನ್ನು ನಿರೀಕ್ಷೆ ಮಾಡಬಹುದು. ನಿಮ್ಮಲ್ಲಿ ಕೆಲವರಿಗೆ ಸಂಬಂಧದಲ್ಲೇ ವಿವಾಹ ನಿಶ್ಚಯ ಆಗುವ ಸಾಧ್ಯತೆಗಳು ಕಾಣಬಹುದು. ಅದು ದೂರದ ಸಂಬಂಧ ಇರಬಹುದು ಅಥವಾ ಸೋದರತ್ತೆ ಅಥವಾ ಸೋದರಮಾವ ಈ ರೀತಿಯ ಸಂಬಂಧಿಗಳ ಮಗ ಅಥವಾ ಮಗಳ ಜತೆಗೆ ನಿಶ್ಚಯ ಆಗಬಹುದು. ಬಹಳ ಸಮಯದಿಂದ ನೀವು ಆಸೆ ಪಡುತ್ತಿದ್ದ ಅಥವಾ ನಿಮಗೆ ಇಷ್ಟವಾದ ಕೆಲವು ಕೆಲಸಗಳನ್ನು ಮಾಡಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ ಕಾಣಿಸುವಂಥ ಸೂಚನೆಗಳು ದೊರೆಯಲಿವೆ. ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆ ಮಾಡಬೇಕು ಎಂದುಕೊಳ್ಳುತ್ತಿರುವಿರಿ ಅಂಥವರಿಗೆ ಸ್ನೇಹಿತರು ಅಥವಾ ಸಂಬಂಧಿಕರ ಮೂಲಕ ರೆಫರೆನ್ಸ್ ಸಿಗಬಹುದು. ನೀವು ಈಗಿರುವ ಸ್ಥಳದಿಂದ ಬೇರೆಡೆ ತೆರಳಬೇಕು ಎಂದೇನಾದರೂ ಅಂದುಕೊಳ್ಳುತ್ತಿದ್ದಲ್ಲಿ, ಅದು ಯಾವುದೇ ಉದ್ದೇಶದಿಂದಲಾದರೂ ಇರಬಹುದು, ಅದು ಸಾಧ್ಯವಾಗುವುದಿಲ್ಲ ಎಂದೆನಿಸಲಿದೆ. ನಿಮ್ಮ ಬಗ್ಗೆ ಕಾಳಜಿ, ಅಕ್ಕರಾಸ್ಥೆ ಇಟ್ಟುಕೊಂಡು ಮಾತನಾಡುವವರು ಹೇಳುವ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮ ಪ್ರತಿಭೆಗೆ ಪ್ರಾಶಸ್ತ್ಯ ದೊರೆಯುವಂಥ ದಿನ ಇದಾಗಿರುತ್ತದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದ್ದು, ಹತ್ತಿರದ ಸ್ಥಳಕ್ಕಾದರೂ ತೆರಳುವಂಥ ಯೋಗ ನಿಮ್ಮ ಪಾಲಿಗೆ ಇದೆ. ನಿಮ್ಮಲ್ಲಿ ಯಾರು ಬ್ಯಾಂಕ್- ಹಣಕಾಸು ಸಂಸ್ಥೆಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿರುತ್ತೀರಿ ಅಂಥವರಿಗೆ ದಾಖಲೆ, ಕಾಗದ- ಪತ್ರಗಳನ್ನು ಹೊಂದಿಸಿಕೊಳ್ಳುವುದಕ್ಕೆ ಇತರರ ಸಹಾಯ ದೊರೆಯಲಿದೆ. ಮನೆಗೆ ಏರ್ ಕೂಲರ್ ಅಥವಾ ಏಸಿ ಇಂಥದ್ದನ್ನು ಖರೀದಿಸಿ ತರುವ ಬಗ್ಗೆ ಆಲೋಚನೆಯನ್ನು ಮಾಡಲಿದ್ದೀರಿ. ಊಟ- ತಿಂಡಿ ವಿಚಾರಕ್ಕೆ ಕುಟುಂಬ ಸದಸ್ಯರ ಜತೆಗೆ ಸಣ್ಣ- ಪುಟ್ಟ ಮನಸ್ತಾಪಗಳು ಆಗಬಹುದು.

ಲೇಖನ- ಎನ್‌.ಕೆ.ಸ್ವಾತಿ

Source link

ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾ ನಗರದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (Flood) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ? ಎಸ್‌ಆರ್‌ಎಚ್ ತಂಡ ಹೇಗಿರಲಿದೆ?

ಐಪಿಎಲ್ 2026 (IPL 2026) ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು ಆಟಗಾರರ ಇಂಜುರಿಯಿಂದ ಅವರ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಹಾಲಿ ಚಾಂಪಿಯನ್ ಆರ್​ಸಿಬಿ ತನ್ನ ಪ್ಲೇಯಿಂಗ್ 11ನಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲು ಹೋಗುವುದಿಲ್ಲ. ಏಕೆಂದರೆ ತಂಡವನ್ನು ಚಾಂಪಿಯನ್‌ ಮಾಡಿದ್ದ ಅದೇ 11 ಆಟಗಾರರನ್ನು ಕಣಕ್ಕಿಳಿಸಲು ಆಡಳಿತ ಮಂಡಳಿ ನೋಡಲಿದೆ. ಆದರೆ ಕೆಲವು ಆಟಗಾರರ ಅಲಭ್ಯತೆ ಹಾಗೂ ಕೆಲವರ ಇಂಜುರಿ ಸಮಸ್ಯೆಯಿಂದ ತಂಡದಲ್ಲಿ ಬದಲಾವಣೆಗಳನ್ನು ಮಾಡಲೇಬೇಕಾಗಿದೆ.

ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ?

ಮೊದಲಿಗೆ ಆರ್​​ಸಿಬಿಯ ಬ್ಯಾಟಿಂಗ್‌ ವಿಭಾಗವನ್ನು ನೋಡುವುದಾದರೆ.. ಕಳೆದ ಬಾರಿಯಂತೆ ಈ ಬಾರಿಯೂ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ನಾಯಕ ರಜತ್ ಪಾಟಿದಾರ್ ಮತ್ತು ದೇವದತ್ ಪಡಿಕ್ಕಲ್ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಫಿನಿಶಿಂಗ್ ಜವಾಬ್ದಾರಿಯನ್ನು ವಹಿಸಲಿದ್ದಾರೆ. ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಜಿತೇಶ್ ಶರ್ಮಾ ನಿರ್ವಹಿಸಿದರೆ, ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

ಜೋಶ್ ಹೇಜಲ್‌ವುಡ್ ಬದಲಿಗೆ ಕಿವೀಸ್ ವೇಗಿ ಜಾಕೋಬ್ ಡಫಿ ಬೌಲಿಂಗ್ ವಿಭಾಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಅನುಭವಿ ವೇಗಿ ಭುವನೇಶ್ವರ ಕುಮಾರ್ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇವರಿಬ್ಬರ ಜೊತೆಗೆ ಸುಯಾಶ್ ಶರ್ಮಾ ಮತ್ತು ಎಡಗೈ ವೇಗದ ಬೌಲರ್ ಮಂಗೇಶ್ ಯಾದವ್ ತಂಡದಲ್ಲಿ ಅಡುವ ಅವಕಾಶ ಪಡೆಯಬಹುದು.

ಎಸ್​​ಆರ್​ಎಚ್ ತಂಡ ಹೀಗಿರಲಿದೆ

ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಲಿಯಾಮ್ ಲಿವಿಂಗ್‌ಸ್ಟೋನ್ ಕೆಳ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಬ್ರೈಡನ್ ಕಾರ್ಸೆ, ಶಿವಂ ಮಾವಿ ಕಾಣಿಸಿಕೊಳ್ಳಲಿದ್ದಾರೆ.

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜಾಕೋಬ್ ಡಫಿ.

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಬ್ರೇಡನ್ ಕಾರ್ಸೆ, ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಶಿವಂ ಮಾವಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು, ಪ್ರಧಾನಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ತಮ್ಮ ಅಚಲವಾದ ಫಿಟ್ನೆಸ್ ಶಿಸ್ತಿಗೆ ಹೆಸರುವಾಸಿಯಾಗಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಅವರು ದಿನನಿತ್ಯದ ಯೋಗ, ಜಿಮ್ ವರ್ಕೌಟ್ ಮತ್ತು ಡಯೆಟ್ ಮಾಡುತ್ತಾರೆ. ‘ಆರೋಗ್ಯವಾಗಿರಿ, ಸಂತೋಷವಾಗಿರಿ’ ಎಂಬುದು ಅವರ ಧ್ಯೇಯವಾಕ್ಯ. ಅವರು ತಮ್ಮ ದೈನಂದಿನ ವ್ಯಾಯಾಮದ ದಿನಚರಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಸ್ನಾಯುಗಳ ಬಲವರ್ಧನೆಗೆ ಒತ್ತು ನೀಡುವ ಅತ್ಯಂತ ಕಠಿಣ ಹಾಗೂ ಸವಾಲಿನ ವ್ಯಾಯಾಮಗಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಆ ಮೂಲಕ ಅಭಿಮಾನಿಗಳಿಗೂ ಸ್ಪೂರ್ತಿ ತುಂಬುತ್ತಾರೆ. 50ನೇ ವಯಸ್ಸಿನಲ್ಲೂ ಫಿಟ್ ಆಗಿ ಕಾಣುವ ಶಿಲ್ಪಾ ಶೆಟ್ಟಿ ಅವರು ಇಷ್ಟೆಲ್ಲ ಶಿಸ್ತು ಪಾಲಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ ನೋಡಿ

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಬೆಳ್ಳಿ ಪರದೆಯ ಬಳಿಕ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಈ ಕ್ಷಣವನ್ನು ಸಂಭ್ರಮಿಸಲು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನನ್ನ ಈ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳಿಂದ ಅಭಿನಂದನೆಗಳ ಕಮೆಂಟ್ ಬಂದಿದೆ. ಸೋನಾಕ್ಷಿ ಸಿನ್ಹಾ ಅವರ ಯೂಟ್ಯೂಬ್ ಚಾನೆಲ್ (Sonakshi Sinha YouTube Channel) ಕೇವಲ ಸಿನಿಮಾ ಪ್ರಚಾರಕ್ಕೆ ಸೀಮಿತವಾಗಿಲ್ಲ. ಬದಲಿಗೆ, ಅವರು ತಮ್ಮ ವೈಯಕ್ತಿಕ ಜೀವನ ಮತ್ತು ಆಸಕ್ತಿಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಜಯಪುರ ಶಾಸಕ ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ

ಕೋಲಾರ, ಮಾರ್ಚ್​​ 27: ನಗರದಲ್ಲಿ ಶ್ರೀರಾಮನವಮಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಎಂ.ಜಿ.ರಸ್ತೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಆಯೋಜಿಸಿದ್ದ 10ನೇ ವರ್ಷದ ರಾಮೋತ್ಸವ ಸಮಾರಂಭ ಇದಾಗಿತ್ತು. ಈ ಸಂದರ್ಭದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ಯತ್ನಾಳ್ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಮುನಿಸ್ವಾಮಿ, ನಾಗಲಾಪುರ ಮಠದ ತೇಜೇಶಲಿಂಗ ಶಿವಚಾರ್ಯ ಸ್ವಾಮಿಜಿ, ಶ್ರೀರಾಮಸೇನೆಯ ಶ್ರೀನಿವಾಸ್ ಗುರೂಜಿ ಸೇರಿದಂತೆ ಹಲರು ಉಪಸ್ಥಿತರಿದ್ದರು. ವಿಜಯಪುರ ಶಾಸಕರನ್ನು ನೋಡಲು ಜನಸಾಗರವೇ ಕಾರ್ಯಕ್ರಮಕ್ಕೆ ಹರಿದುಬಂದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಲಡಾಖ್‌ನ ಜೋಜಿಲಾದಲ್ಲಿ ಭಾರೀ ಹಿಮಪಾತವಾಗಿ 7 ಮಂದಿ ಸಾವು; ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಲಡಾಖ್, ಮಾರ್ಚ್ 27: ಲಡಾಖ್​​ನ ಜೋಜಿಲಾ ಪಾಸ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ (Ladakh avalanche) 7 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಜನರು ಹಿಮಪಾತದಿಂದ ಹೂತುಹೋಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5 ವಾಹನಗಳು ಭಾರೀ ಹಿಮದ ಅಡಿಯಲ್ಲಿ ಹೂತುಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಶ್ರೀನಗರ-ಲೇಹ್ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಹಠಾತ್ ಮತ್ತು ತೀವ್ರವಾದ ಹಿಮಪಾತವು ಹಲವಾರು ವಾಹನಗಳನ್ನು ಆವರಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಪ್ರಯತ್ನಗಳು ಮುಂದುವರೆದಿವೆ. ಗ್ಯಾಂಡರ್‌ಬಾಲ್ ಪೊಲೀಸರು, ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ, ಸಿಕ್ಕಿಬಿದ್ದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Video: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ, ಗುಂಡಿನ ದಾಳಿ

ಜೋಜಿಲಾ ಪಾಸ್ ಹಿಮಾಲಯದಲ್ಲಿರುವ ಒಂದು ಎತ್ತರದ ಪರ್ವತ ಮಾರ್ಗವಾಗಿದ್ದು, ಇದು ಕಾಶ್ಮೀರ ಕಣಿವೆಯನ್ನು ಲಡಾಖ್‌ನೊಂದಿಗೆ ಸಂಪರ್ಕಿಸುತ್ತದೆ. ಇದು ಶ್ರೀನಗರ ಮತ್ತು ಲೇಹ್ ನಡುವಿನ ರಾಷ್ಟ್ರೀಯ ಹೆದ್ದಾರಿ 1ರಲ್ಲಿದೆ. ಇದು ಸುಮಾರು 3,528 ಮೀಟರ್ ಎತ್ತರದಲ್ಲಿದೆ. ಇದು ಲಡಾಖ್‌ಗೆ ನಾಗರಿಕ ಸಾರಿಗೆ ಮತ್ತು ಮಿಲಿಟರಿ ಸರಬರಾಜು ಮಾರ್ಗಗಳಿಗೆ ಪ್ರಮುಖ ಮಾರ್ಗವಾಗಿ ಕಾರ್ಯನಿರ್ವಹಿಸುತ್ತದೆ.

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಲಡಾಖ್ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ, “ಜೋಜಿಲಾದಲ್ಲಿ ಹಿಮಪಾತದ ದುರದೃಷ್ಟಕರ ಸುದ್ದಿ ಕೇಳಿದೆ. ಕಾರ್ಗಿಲ್‌ನ ಡಿಸಿ ಮತ್ತು ಎಸ್‌ಎಸ್‌ಪಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಜ್ಜುಗೊಳಿಸಲು ನಾನು ನಿರ್ದೇಶಿಸಿದ್ದೇನೆ. ವಿಪತ್ತು ಪರಿಹಾರ ಪಡೆಗಳು ಮತ್ತು ಬಿಆರ್‌ಒ ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ” ಎಂದು ಎಕ್ಸ್‌ನಲ್ಲಿ ಬರೆದ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ಅಪಘಾತ: ಮೂರು ವಷರ್ದ ಬಾಲಕಿ ಸೇರಿ ಇಬ್ಬರು ಸಾವು, 12 ಮಕ್ಕಳಿಗೆ ಗಾಯ

ಕೋಲಾರ/ಮಂಡ್ಯ, ಮಾರ್ಚ್​​ 27: ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂರು ವರ್ಷದ ಬಾಲಕಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಒಟ್ಟು 12 ಮಕ್ಕಳಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಕೆರೆ ಕಟ್ಟೆ ಬಳಿ ಟೆಂಪೋ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕ್ರುತ್ಯಾರೆಡ್ಡಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋ ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್​​ನಲ್ಲಿದ್ದ ಯುವಕರಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಲಾ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಅಪಘಾತವಾದ ವಾಹನಗಳು

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿರುವ ಶಾಲಾ ಬಸ್ ಮತ್ತು ಖಾಸಗಿ ಬಸ್ ನಡುವಿನ ಅಪಘಾತದಲ್ಲಿ ಶಾಲಾ ಬಸ್​​ನಲ್ಲಿದ್ದ 12 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಲಾ ಬಸ್​​ ಮದ್ದೂರು ಪಟ್ಟಣದ ಮರಿಯಪ್ಪ ಶಾಲೆಗೆ ಸೇರಿದ್ದು ಎಂದು ತಿಳಿದುಬಂದಿದೆ. ಮಕ್ಕಳಿಗೆ ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಸ್ಪತ್ರೆಗೆ ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದ ಕುರಿತು ಮಾಹಿತಿ ಪಡೆದ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.ಮದ್ದೂರು ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಕೇಸ್​​ ದಾಖಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಕಲಬೆರಕೆ ಹಾಲು; ವರದಿಯಲ್ಲಿ ಆಘಾತಕಾರಿ ಅಂಶ

ಕಾರು ಅಪಘಾತ: ಯುವಕ ಸಾವು

ಚನ್ನಪಟ್ಟಣದ ಹರಿಸಂದ್ರ ಕ್ರಾಸ್ ಬಳಿ ನಡೆದ ಕಾರು ಅಪಘಾತದಲ್ಲಿ ಕೊಂಡಾಪುರ ಗ್ರಾಮದ ವಿಕಾಸ್(23) ಜೀವ ಕಳೆದುಕೊಂಡಿದ್ದಾರೆ. ಗಾಯಗೊಂಡ ಇಬ್ಬರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version