Headlines

ಬಿಕ್ಲು ಶಿವ ಕೊಲೆ ಕೇಸ್​​: ಶಾಸಕ ಬೈರತಿ ಬಸವರಾಜ್​​ ಫೆ.21ರವರೆಗೆ ಸಿಐಡಿ ಕಸ್ಟಡಿಗೆ – Kannada News | Biklu Shiva Murder Case: MLA Byrathi Basavaraj Remanded to CID Custody Till February 21

ಬೆಂಗಳೂರು, ಫೆಬ್ರವರಿ 15: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ರನ್ನು ಫೆ.21ರವರೆಗೆ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ಕೋರ್ಟ್​ ಜಡ್ಜ್ ಆದೇಶಿಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ವಿವಿಧ ಪರೀಕ್ಷೆಗಳ ಬಳಿಕ ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ಕೋರ್ಟ್​ ಜಡ್ಜ್ ನಿವಾಸಕ್ಕೆ ಶಾಸಕರನ್ನು ಹಾಜರುಪಡಿಸಲಾಗಿತ್ತು. ಸಿಐಡಿ ಪೊಲೀಸರ ಪರ ಎಸ್​ಪಿಪಿ ಅಶೋಕ್ ನಾಯ್ಕ್ ಈ ವೇಳೆ ಹಾಜರಿದ್ದರು. ಶಾಸಕರು ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ…

Read More

Optical Illusion: ಹಚ್ಚ ಹಸಿರಿನ ಮರದಲ್ಲಿ ಅಡಗಿ ಕುಳಿತಿರುವ ಹಮ್ಮಿಂಗ್ ಬರ್ಡ್‌ನ್ನು ಕಂಡು ಹಿಡಿಯುವಿರಾ – Kannada News | Optical illusion: If you find this hummingbird, it means you have eagle eyes.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಆದರೆ ನಿಮ್ಮ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ. ಹೀಗಾಗಿ ಹೆಚ್ಚಿನವರು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳತ್ತ ಗಮನ ಹರಿಸುತ್ತಾರೆ. ಈ ಚಿತ್ರಗಳಲ್ಲಿ ಕೆಲವೊಂದು ಟ್ರಿಕ್ಕಿಯಾಗಿದ್ದು, ಬಿಡಿಸಲು ಸಾಧ್ಯವಾಗದೇ ಇರಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಹಚ್ಚ ಹಸಿರಿನಿಂದ ಕೂಡಿದ ಕೊಂಬೆಗಳಲ್ಲಿ ಹಮ್ಮಿಂಗ್ ಬರ್ಡ್‌ವೊಂದು ಅಡಗಿ ಕುಳಿತಿದೆ. ಹತ್ತು ಸೆಕೆಂಡುಗಳಲ್ಲಿ…

Read More

ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡೋಂಟ್​​ ಕೇರ್​: ‘ಕೈ’ ಮನೆಯಲ್ಲಿ ನಿಲ್ಲದ ಬಣಗಳ ವಾರ್ – Kannada News | Karnataka Congress Faction War: Kharge’s Unity Call Ignored Amid CM Race

ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬೇಗುದಿ ಬೆಂಗಳೂರು, ಫೆಬ್ರವರಿ 15: ​ನಾಯಕತ್ವ ವಿಚಾರವಾಗಿ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್​​ ಸೂಚನೆಯ ಬಳಿಕವೂ ರಾಜ್ಯ ಕಾಂಗ್ರೆಸ್​​ನಲ್ಲಿ ಬಣಗಳ ನಡುವಿನ ಸಂಘರ್ಷ ಮುಂದುವರಿದಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್ ಎಂದಿದ್ದಾರೆ. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು, ಆದ್ರೆ ಹೈಕಮಾಂಡ್​ಗೆ‌ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಯತೀಂದ್ರ ನಮ್ಮ ಹೈಕಮಾಂಡ್ ಅಂತಾ…

Read More

ನಗರಗಳೇ ಅಭಿವೃದ್ಧಿ ಯಂತ್ರಗಳು; ಸರ್ಕಾರದಿಂದ 1 ಲಕ್ಷ ಕೋಟಿ ರೂ ಅರ್ಬನ್ ಚಾಲೆಂಜ್ ಫಂಡ್ – Kannada News | How Urban Challenge Fund can help cities become economic growth engine

ನವದೆಹಲಿ, ಫೆಬ್ರುವರಿ 15: ನಗರಗಳನ್ನು ಆರ್ಥಿಕ ಅಭಿವೃದ್ಧಿ ಎಂಜಿನ್ ಆಗಿ ಮಾರ್ಪಡಿಸಲು ಕೇಂದ್ರ ಸಂಪುಟವು ಅರ್ಬನ್ ಚಾಲೆಂಜ್ ಫಂಡ್ (Urban Challenge Fund) ಅನ್ನು ಆರಂಭಿಸಿದೆ. ಇದಕ್ಕಾಗಿ ಒಂದು ಲಕ್ಷ ಕೋಟಿ ರೂ ಮೀಸಲಿರಿಸಿದೆ. ಮುಂದಿನ ಐದು ವರ್ಷಕ್ಕೆ ಈ ಫಂಡ್ ಬಳಕೆಯಾಗಲಿದ್ದು, ದೇಶದ ವಿವಿಧ ನಗರಗಳಲ್ಲಿ ಒಟ್ಟಾರೆ ನಾಲ್ಕು ಲಕ್ಷ ಕೋಟಿ ರೂ ಹೂಡಿಕೆ ಆಗಲಿದೆ. ಗಮನಿಸಬೇಕಾದ ಸಂಗತಿ ಎಂದರೆ, ಈ ಫಂಡಿಂಗ್ ಸಾಂಪ್ರದಾಯಿಕ ಅನುದಾನ ಆಧಾರಿತವಾಗಿರುವುದಿಲ್ಲ. ಮಾರುಕಟ್ಟೆ ಮತ್ತು ಸುಧಾರಣೆ ಆಧಾರಿತವಾದ ನಗರ ಅಭಿವೃದ್ಧಿ…

Read More

ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಡಿಕ್ಕಿ ಹೊಡೆದ ಬೈಕ್, ಮೂವರು ಸಾವು – Kannada News | Three Die After Motorcycle Plunges Off Washed Out Bridge in Madhya Pradesh

ಮಧ್ಯಪ್ರದೇಶ, ಫೆಬ್ರವರಿ 15: ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆ(Bridge)ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತರು ರಾಹ್ಲಿ ವಿಧಾನಸಭಾ ಕ್ಷೇತ್ರದ ನಿವಾಸಿಗಳಾಗಿದ್ದು, ತೆಂಡುಖೇಡಾದಿಂದ ಝಾಪನ್‌ಗೆ ಪ್ರಯಾಣಿಸುತ್ತಿದ್ದರು. ಝಾಪನ್ ಬಳಿ, ಬೈರ್ಮಾ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕಳೆದ ವರ್ಷ ಸುರಿದ ಭಾರೀ ಮಳೆಯ ಸಮಯದಲ್ಲಿ ತೀವ್ರವಾಗಿ ಹಾನಿಗೊಳಗಾಗಿ ಭಾಗಶಃ ಕೊಚ್ಚಿಹೋಗಿತ್ತು. ಮುರಿದ ಸೇತುವೆ ಮೇಲೆ…

Read More

ಮಹಿಳೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​: ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ – Kannada News | Twists in Hassan Missing Case: Priyanka and David Under Police Custody After Elopement

ಹಾಸನ/ ತುಮಕೂರು, ಫೆಬವರಿ 15: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾಳನ್ನು ಪರಪುರುಷನ ಜೊತೆ ಪತ್ತೆ ಮಾಡಿರುವ ಪೊಲೀಸರು, ಪ್ರಿಯಾಂಕಾ ಮತ್ತು ಡೇವಿಡ್ ಇಬ್ಬರನ್ನೂ ವಶಕ್ಕೆ ಪಡೆದು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು ತನಿಖೆ ವೇಳೆ ಬಯಲಾಗಿದೆ. ತ್ತೊಂದೆಡೆ ಊರಿಗೆ ಏಕಪತ್ನಿ ವ್ರತಸ್ಥನಾಗಿ ಕಂಡವನ ಮನೆಯಲ್ಲಿಯೇ ಪ್ರಿಯಾಂಕಾ…

Read More

ಶಿವ ಶಂಭೋ ಸ್ವಯಂಭೋ: ಶಿವರಾತ್ರಿಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಹಾಡು – Kannada News | Shiva Shambho Swayambho: Hombale Films releases new AI song on Maha Shivaratri

ಸಿನಿಮಾ ನಿರ್ಮಾಣ ಕ್ಷೇತ್ರದಲ್ಲಿ ಈಗಾಗಲೇ ಅನೇಕ ದಾಖಲೆಗಳನ್ನು ಬರೆದಿರುವ ‘ಹೊಂಬಾಳೆ ಫಿಲ್ಮ್ಸ್’ (Hombale Films) ಈಗ ಹೊಸ ಹೆಜ್ಜೆ ಇಟ್ಟಿದೆ. ಶಿವರಾತ್ರಿ (Maha Shivaratri) ಹಬ್ಬದ ಪ್ರಯುಕ್ತ ಹೊಸ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಶಿವನ ಕುರಿತಾದ ಈ ಹಾಡನ್ನು ‘ಹೊಂಬಾಳೆ ಫಿಲ್ಮ್ಸ್’ ಯೂಟ್ಯೂಬ್ ಮೂಲಕ ಅನಾವರಣ ಮಾಡಲಾಗಿದ್ದು, ಶಿವನ ಭಕ್ತರಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಹಾಡಿನಲ್ಲಿ ಎಐ ಬಳಕೆ ಗಮನ ಸೆಳೆಯುತ್ತಿದೆ. ‘ಶಿವ ಶಂಭೋ ಸ್ವಯಂಭೋ’ (Shiva Shambho Swayambho) ಹಾಡಿನ ವಿಶೇಷತೆ ಬಗ್ಗೆ ಇಲ್ಲಿದೆ ಇನ್ನಷ್ಟು…

Read More

Solar Eclipse 2026: ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Effects on Pisces by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೀನ ರಾಶಿಯವರ ಮೇಲೆ ಬೀರುವ ಪ್ರಭಾವದ ಕುರಿತು ಮಾಹಿತಿ ನೀಡಿದ್ದಾರೆ. ಮೀನ ರಾಶಿಯವರು ಸಾಡೇ ಸಾತಿಯ ಗರ್ಭ ಭಾಗದಲ್ಲಿರುವುದರಿಂದ ಮಿಶ್ರಫಲಗಳನ್ನು ನಿರೀಕ್ಷಿಸಬಹುದು. ಆದಾಯದಲ್ಲಿ ಏರಿಕೆ ಮತ್ತು ಉದ್ಯೋಗದಲ್ಲಿ ಶುಭ ಫಲಗಳ ಸಾಧ್ಯತೆಯಿದೆ, ಕೆಲವರಿಗೆ ಉದ್ಯೋಗ ಬದಲಾವಣೆಯ ಯೋಗವಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾದರೂ ಚೇತರಿಕೆ ಕಾಣುವಿರಿ. ಮಾನಸಿಕವಾಗಿ ಆಪ್ತರಿಂದ ತಪ್ಪು ಕಲ್ಪನೆಗಳಿಗೆ ಒಳಗಾಗುವ ಸಾಧ್ಯತೆಗಳಿರುವುದರಿಂದ ಎಚ್ಚರಿಕೆ ಅಗತ್ಯ. ವ್ಯಾಪಾರದಲ್ಲಿ ಶುಭವಾಗಲಿದ್ದು, ಶಿಕ್ಷಣದಲ್ಲಿ ಕೀರ್ತಿ ಪ್ರತಿಷ್ಠೆ ದೊರೆಯುತ್ತದೆ….

Read More

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು – Kannada News | Mandya Chemical Tank Explosion: 2 Workers Dead During Kirti Factory Relocation

ಕೆಮಿಕಲ್ ಟ್ಯಾಂಕ್ ಸ್ಫೋಟImage Credit source: Tv9 Kannada ಮಂಡ್ಯ/ ಬೆಂಗಳೂರು, ಫೆಬ್ರವರಿ 15: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್​​…

Read More

IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result

T20 World Cup 2026: ಟಿ20 ವಿಶ್ವಕಪ್​​ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ. ಆದರೆ ಡಕ್​​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್​​ಗಳನ್ನು…

Read More