Headlines

ಪ್ರೀತಿಸಿದ ಹುಡುಗಿ ಜೊತೆ ವಿವಾಹ ಆದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್

ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಹೋದರ, ನಟ ಅಲ್ಲು ಸಿರೀಶ್ ಈಗ ವಿವಾಹ ಆಗಿದ್ದಾರೆ. ಅವರು ನಯನಿಕಾ ಅವರೊಂದಿಗೆ ಹೊಸ ಜೀವನವನ್ನು ಪ್ರಾರಂಭಿಸಿದರು. ಸಿರೀಶ್-ನಯನಿಕಾ ಅವರ ವಿವಾಹ ಶುಕ್ರವಾರ (ಮಾರ್ಚ್ 06) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಕುಟುಂಬದವರು, ಸಂಬಂಧಿಕರು, ಸ್ನೇಹಿತರ ಸಮ್ಮುಖದಲ್ಲಿ ಅಲ್ಲು ಸಿರೀಶ್ ನಯನಿಕಾ ಅವರ ಕುತ್ತಿಗೆಗೆ ಮೂರು ಗಂಟು ಹಾಕಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ವಿವಾಹ…

Read More

‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್​​ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ – Kannada News | Ravi Basrur Gets 35 Lakh Rolex from Tollywood Star Vishwak Sen for Cult Music

ಸಂಗೀತ ಸಂಯೋಜಕ ರವಿ ಬಸ್ರೂರು ಅವರಿಗೆ ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬೇಡಿಕೆ ಇದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಅವರಿಗೆ ಪರಭಾಷೆಯಿಂದಲೂ ಆಫರ್​​​ಗಳು ಬರುತ್ತಿವೆ. ಹೀಗಿರುವಾಗಲೇ ರವಿ ಬಸ್ರೂರಿಗೆ ಟಾಲಿವುಡ್ ಹೀರೋ 35 ಲಕ್ಷ ರೂಪಾಯಿಯ ರೊಲೆಕ್ಸ್ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ವಾಚ್ ಅನ್ನು ರವಿ ಅವರು ಎಲ್ಲರ ಎದುರು ತೋರಿಸಿದ್ದಾರೆ. ವಿಶ್ವಕ್​ಸೇನ್ ಅವರು ‘#ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅವರದ್ದೇ ನಿರ್ದೇಶನ ಕೂಡ ಇದೆ….

Read More

Vastu Tips: ಬೆಳಿಗ್ಗೆ ಎದ್ದ ಕೂಡಲೇ ಈ ವಸ್ತುಗಳನ್ನು ನೋಡಲೇಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips: Avoid These 4 Things in Morning for a Positive Day and Success

ವಾಸ್ತು ನಂಬಿಕೆಯ ಪ್ರಕಾರ, ಒಬ್ಬ ವ್ಯಕ್ತಿ ಬೆಳಿಗ್ಗೆ ಎದ್ದ ತಕ್ಷಣ ನೋಡುವ ಮೊದಲ ದೃಶ್ಯವು ಆ ದಿನದ ಮನಸ್ಥಿತಿ, ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಬೆಳಿಗ್ಗೆ ಕಾಣುವ ವಸ್ತುಗಳು ಮನಸ್ಸಿನಲ್ಲಿ ಸಕಾರಾತ್ಮಕ ಅಥವಾ ನಕಾರಾತ್ಮಕ ಆಲೋಚನೆಗಳನ್ನು ಹುಟ್ಟುಹಾಕಿ ದಿನದ ಫಲಿತಾಂಶಗಳ ಮೇಲೆ ಪ್ರಭಾವ ಬೀರುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅದಕ್ಕಾಗಿಯೇ, ಎದ್ದ ತಕ್ಷಣ ನೋಡುವ ಕೆಲವು ವಿಷಯಗಳನ್ನು ಅಶುಭವೆಂದು ಪರಿಗಣಿಸಲಾಗಿದೆ. ನೆರಳನ್ನು ನೋಡುವುದು: ವಾಸ್ತು ಪ್ರಕಾರ, ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ನಿಮ್ಮದೇ…

Read More

ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ – Kannada News | Metro ticket price war: This is only temporary, the war has not been completely won, says Tejasvi Surya

ಸಂಸದ ತೇಜಸ್ವಿ ಸೂರ್ಯImage Credit source: deccanherald ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ (Namma Metro) ಪ್ರಯಾಣ ದರ ಶೇಕಡಾ 5ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿತ್ತು. ಇದೇ ದರ ಏರಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ದಂಗಲ್ ಕೂಡ ಏರ್ಪಟ್ಟಿದೆ. ಈ ಮೆಟ್ರೋ ಪ್ರಯಾಣ ದರ ಏರಿಕೆ ಜಟಾಪಟಿಯ ನಡುವೆ ಸೋಮವಾರದಿಂದ ಮೆಟ್ರೋ ಪ್ರಯಾಣ ದರ ಏರಿಕೆಯಾಗಲ್ಲ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಘೋಷಿಸಿದ್ದು, ಇದು…

Read More

ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ; ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ – Kannada News | Big Shock for Liquor Lovers: Prices of Several Alcoholic Drinks Likely to Rise by 20 Percent

ವಿವಿಧ ಮದ್ಯದ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆImage Credit source: AI Image ಬೆಂಗಳೂರು, ಏಪ್ರಿಲ್​​ 19: ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಶೀಘ್ರದಲ್ಲೇ ಕನಿಷ್ಠ ಶೇ.20ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೊಸ ವ್ಯವಸ್ಥೆಯ ನಿಯಮದಂತೆ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ (AIB)…

Read More

ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ತುಮಕೂರು, ಮಾರ್ಚ್​ 30: ಖಾಸಗಿ ಜಾಗವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ (Food Inspector)​​​ ಶವ ಪತ್ತೆ (Death) ಆಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಾವರೆಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್​​ ಮೃತ ಹೆಲ್ತ್ ಇನ್ಸ್‌ಪೆಕ್ಟರ್. ಹುಟ್ಟುಹಬ್ಬದ ದಿನವೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ. ನಡೆದಿದ್ದೇನು? ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​…

Read More

ಪುಸ್ತಕ ಅನುವಾದಕ್ಕೂ ಬಂತು AI: ತಂತ್ರಜ್ಞಾನದ ಮೂಲಕ ಭಾಷಾಂತರಗೊಂಡ ಮೊದಲ ಬುಕ್​​ ಮಾ.15ರಂದು ಬಿಡುಗಡೆ

ಬೆಂಗಳೂರು, ಮಾರ್ಚ್​​ 13: ಬೇರೆ ಬೇರೆ ಭಾಷೆಗಳಲ್ಲಿರುವ ಪುಸ್ತಕ ಓದುಗರಿಗೆ ಅವರದ್ದೇ ಆದ ಭಾಷೆಯಲ್ಲಿ ಸಿಕ್ಕಿದಾಗ ಅದು ಹೆಚ್ಚಿನ ಸಂತ್ರಪ್ತಿ ನೀಡಬಲ್ಲದು. ಜೊತೆಗೆ ಬಹು ಭಾಷೆಗಳ ಅರಿವಿಲ್ಲದವರಿಗೂ ಆ ವಿಷಯವನ್ನು ಸುಲಭವಾಗಿ ಮುಟ್ಟಿಸಬಹುದು ಎಂಬ ಕಾರಣಕ್ಕೆ ಅದೆಷ್ಟೋ ಪುಸ್ತಗಳು ಈ ವರೆಗೆ ಕನ್ನಡಕ್ಕೆ ಅನುವಾದಗೊಂಡಿವೆ. ಓದುಗರ ಮನಸ್ಸನ್ನೂ ಗೆದ್ದಿವೆ. ಆದರೆ ಈ ಅನುವಾದದ ಕೆಲಸ ಬಹಳ ಕಠಿಣವಾದುದ್ದು. ಮೂಲ ಬರಹಗಾರರು ಹೇಳಿರುವ ವಿಷಯವನ್ನು ಅನರ್ಥಗೊಳಿಸದೆ ಮತ್ತೊಂದು ಭಾಷೆಗೆ ಭಟ್ಟಿ ಇಳಿಸಬೇಕಾಗುತ್ತದೆ. ಹೀಗಾಗಿ ಪುಸ್ತಕವೊಂದರ ಅನುವಾದಕ್ಕೆ ಬಹಳ ಸಮಯವೂ…

Read More

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing

ಶವ ಪತ್ತೆಯಾಗಿರುವ ಮನೆImage Credit source: Tv9 Kannada ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ…

Read More

ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ? – Kannada News | Davangere South Bye Election: Minister Zameer Ahmed Demands Congress Ticket for Muslims

ದಾವಣಗೆರೆ, ಜನವರಿ 08: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರೋ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರಿದ್ದು, ಈ ಉಪಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿದೆ. ಶಾಮನೂರು ಶಿವಶಂಕರಪ್ಪ ಅವರು ಹಿಂದಿನ ಚುನಾವಣೆಯ ಸಂದರ್ಭದಲ್ಲಿ ತಾವು 2023ರ ಚುನಾವಣೆಯನ್ನು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ…

Read More

ನಾಲ್ಕು ವರ್ಷಗಳ ಹೋರಾಟಕ್ಕೆ ಜಯ: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ – Kannada News | Chamarajanagar Oxygen Tragedy: Victims’ Families Get Government Jobs

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಚಾಮರಾಜನಗರ, ಜನವರಿ 10:  ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಕೊನೆಗೂ ಸಿಹಿ ಸುದ್ದಿ ಲಭಿಸಿದೆ. ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದ್ದು, ಗಣರಾಜ್ಯೋವದ ದಿನವೇ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ. ಗಣರಾಜ್ಯೋತ್ಸವದಂದೇ ನೇಮಕಾತಿ 2021ರ ಮೇ 3ರಂದು ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತ 36 ರೋಗಿಗಳು ಮೃತಪಟ್ಟಿದ್ದ ಈ ದುರಂತ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ…

Read More