ಬೆನ್ನುಮೂಳೆ ಮುರಿದು ನರಳುತ್ತಿದ್ದ ಸ್ನೇಹಿತನ ಕೆರೆಯಲ್ಲಿ ಮುಳುಗಿಸಿ ಕೊಂದ ಗೆಳೆಯರು! ಘನಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ಮಾಗಡಿ – Kannada News | New Year Party Turns Fatal in Vajarahalli, Magadi: Broken spine Youth Killed by Friends, Drowned in Lake

ಆರೋಪಿಗಳಾದ ಪ್ರಜ್ವಲ್ ಮತ್ತು ಸುದೀಪ್

ರಾಮನಗರ, ಜನವರಿ 21: ಹೀಗೂ ಸ್ನೇಹಿತರು ಇರುತ್ತಾರಾ? ತಮ್ಮ ಸ್ವಾರ್ಥಕ್ಕೆ ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಏಟು ಮಾಡಿಕೊಂಡಾಗ ಚಿಕಿತ್ಸಗೆ ಹತ್ತಾರು ಲಕ್ಷ ರೂ. ಖರ್ಚಾಗುತ್ತದೆಂದು ಸ್ನೇಹಿತರೇ ಆತನನ್ನು ಕೊಲೆ ಮಾಡಿದ ದಾರುಣ ಘಟನೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ (Ramanagara) ಮಾಗಡಿ (Magadi) ತಾಲೂಕಿನ ವಾಜರಹಳ್ಳಿ ಗ್ರಾಮ ಸಾಕ್ಷಿಯಾಗಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಗೆಳೆಯರ ಗುಂಪೇ, ತಮ್ಮ ಜೊತೆಯಲ್ಲಿದ್ದ ಯುವಕನನ್ನು ನಿರ್ದಯವಾಗಿ ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಅಮಾನವೀಯ ಘಟನೆ ಇದೀಗ ಬಯಲಾಗಿದೆ.

ಕೊಲೆಯಾದ ಯುವಕ ವಿನೋದ್ ಕುಮಾರ್ (26) ಹಾಗೂ ಆರೋಪಿಗಳಾದ ಸುದೀಪ್ ಮತ್ತು ಪ್ರಜ್ವಲ್ ಮೂವರೂ ಮಾಗಡಿ ತಾಲೂಕಿನ ಕಲ್ಯಾಣಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಜನವರಿ 1ರಂದು ಹೊಸವರ್ಷ ಆಚರಣೆಗಾಗಿ ಐವರು ಸ್ನೇಹಿತರು ಒಟ್ಟಾಗಿ ಪಾರ್ಟಿಗೆ ತೆರಳಿದ್ದರು. ಈ ವೇಳೆ ಮದ್ಯಕ್ಕೆ ಎಳನೀರು ಬೆರೆಸಲು ತೀರ್ಮಾನಿಸಿದ ಅವರು, ವಿನೋದ್ ಕುಮಾರ್​​ನನ್ನು ತೆಂಗಿನ ಮರ ಹತ್ತುವಂತೆ ಮಾಡಿದ್ದರು ಎನ್ನಲಾಗಿದೆ.

ವಿನೋದ್ ಕುಮಾರ್

ಆ ಸಂದರ್ಭದಲ್ಲಿ ವಿನೋದ್ ಕುಮಾರ್ ಮರದಿಂದ ಕೆಳಗೆ ಬಿದ್ದಿದ್ದ. ಪರಿಣಾಮವಾಗಿ ಆತನ ಬೆನ್ನುಮೂಳೆ ಮುರಿದು ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗೆ ಹತ್ತಾರು ಲಕ್ಷ ರೂಪಾಯಿ ಖರ್ಚಾಗಬಹುದು ಎಂಬ ಆತಂಕದಿಂದ ಆರೋಪಿಗಳು ಭೀತಿಗೊಂಡಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ವಿನೋದ್​ನನ್ನು ಮನೆಗೆ ಬಿಡುತ್ತೇವೆ ಎಂದು ನಂಬಿಸಿ, ಮಾರ್ಗಮಧ್ಯೆ ವಾಜರಹಳ್ಳಿ ಸಮೀಪದ ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾರೆ ಎಂಬುದು ಇದೀಗ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ತಂತಿಯಿಂದ ಕಲ್ಲುಕಟ್ಟಿ ಮೃತದೇಹವ ಬಾವಿಗೆ ಎಸೆದಿದ್ದ ಆರೋಪಿಗಳು

ಆರೋಪಿಗಳು ವಿನೋದ್​ನನ್ನು ಕೆರೆಯಲ್ಲಿ ಮುಳುಗಿಸಿದ ನಂತರ ಆರಾಮವಾಗಿ ಊರಿನಲ್ಲಿ ಓಡಾಡಿದ್ದರು. ಸಂಜೆ ವೇಳೆಗೆ ಮತ್ತೆ ಸ್ಥಳಕ್ಕೆ ಬಂದು ಕೆರೆಯಿಂದ ಮೃತದೇಹವನ್ನು ಹೊರತೆಗೆದು, ತಂತಿಯಿಂದ ಸೈಜುಕಲ್ಲು ಕಟ್ಟಿ ಬಾವಿಗೆ ಎಸೆದಿದ್ದರು.

ಕೊಲೆ ಪ್ರಕರಣ ಬೆಳಕಿಗೆ ಬಂದಿದ್ಹೇಗೆ?

ವಿನೋದ್ ಕುಮಾರ್ ನಾಪತ್ತೆಯಾಗಿರುವ ಬಗ್ಗೆ ಅವರ ಪೋಷಕರು ಕುದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಡೆಸಿದ ಸೂಕ್ಷ್ಮವಾಗಿ ತನಿಖೆ ನಡೆಸಿದ್ದು, ಸ್ನೇಹಿತರಿಂದಲೇ ಕೊಲೆಯಾಗಿರುವ ರಹಸ್ಯ ಬಯಲಾಗಿದೆ. ಇದೀಗ ಸುದೀಪ್ ಮತ್ತು ಪ್ರಜ್ವಲ್​ನನ್ನು ಬಂಧಿಸಿರುವ ಪೊಲೀಸರು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನನ್ನನ್ನು ಕೊಲೆ ಮಾಡಿದ್ರೆ, ಇರಾನ್​ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್ – Kannada News | Trump Warns Iran: Assassinate Me, US Erases You From World Map

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ಇರಾನ್​ಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಡ್ರಂಪ್ ಹೇಳಿದ್ದಾರೆ. ನ್ಯೂಸ್ ನೇಷನ್ ನ ‘ಕೇಟೀ ಪಾವ್ಲಿಚ್ ಟುನೈಟ್’ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಟ್ರಂಪ್ ಅವರ ಈ ಹೇಳಿಕೆ ಬಂದಿದೆ.

ಟ್ರಂಪ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಇರಾನ್ ಮಿಲಿಟರಿ ವಕ್ತಾರ ಜನರಲ್ ಅಬುಲ್ ಫಜಲ್ ಶೇಕರ್ಚಿ, ನಮ್ಮ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕಡೆಗೆ ಯಾರಾದರೂ ಕೆಟ್ಟ ಉದ್ದೇಶದಿಂದ ಕೈ ಚಾಚಿದರೆ, ನಾವು ಆ ಕೈಯನ್ನು ಕತ್ತರಿಸುವುದಲ್ಲದೆ, ಅವರ ಇಡೀ ದೇಶವನ್ನೇ ಸುಟ್ಟು ಹಾಕುತ್ತೇವೆ ಎಂದು ಟ್ರಂಪ್‌ಗೆ ತಿಳಿದಿದೆ ಎಂದು ಹೇಳಿದ್ದಾರೆ.

ಖಮೇನಿಯವರ ಸುಮಾರು 40 ವರ್ಷಗಳ ಆಡಳಿತವನ್ನು ಕೊನೆಗೊಳಿಸುವ ಬಗ್ಗೆ ಮಾತನಾಡಿದ ಟ್ರಂಪ್ ಅವರ ಹೇಳಿಕೆಯ ನಂತರ ಈ ಎಚ್ಚರಿಕೆ ಬಂದಿದೆ.ಟ್ರಂಪ್ ಈ ಹಿಂದೆ ಇರಾನ್‌ಗೆ ಎಚ್ಚರಿಕೆ ನೀಡಿದ್ದರು ಮತ್ತು ಇರಾನ್ ತನ್ನ ವಿರುದ್ಧ ಯಾವುದೇ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶಮಾಡುವಂತೆ ತಮ್ಮ ಸಲಹೆಗಾರರಿಗೆ ಸೂಚಿಸಿದ್ದರು.

ಮತ್ತಷ್ಟು ಓದಿ: ಶಾಂತಿ ಪುರಸ್ಕಾರ ಇಲ್ಲ, ಶಾಂತಿ ನನ್ನ ಜವಾಬ್ದಾರಿಯಲ್ಲ ಎನ್ನುತ್ತಾ ಗಾಜಾ ಶಾಂತಿ ಮಂಡಳಿ ತೆರೆದ ಟ್ರಂಪ್, 2 ದಿನಗಳಲ್ಲಿ ಕೊಟ್ಟ ಹೇಳಿಕೆಗಳೇನು?

ಖಮೇನಿ ಅವರನ್ನು ಅಸ್ವಸ್ಥ ವ್ಯಕ್ತಿ ಎಂದು ಬಣ್ಣಿಸಿರುವ ಅವರು, ಅವರು ತನ್ನ ದೇಶವನ್ನು ಸರಿಯಾಗಿ ನಡೆಸಬೇಕು ಮತ್ತು ಜನರನ್ನು ಕೊಲ್ಲುವುದನ್ನು ನಿಲ್ಲಿಸಬೇಕು, ಇರಾನ್‌ಗೆ ಹೊಸ ನಾಯಕತ್ವ ಬೇಕು ಎಂದು ಹೇಳಿದ್ದಾರೆ.

ಡಿಸೆಂಬರ್ 28 ರಂದು ಪ್ರಾರಂಭವಾದ ಪ್ರತಿಭಟನೆಗಳ ನಂತರ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಇರಾನ್‌ನ ಕಳಪೆ ಆರ್ಥಿಕತೆಯ ವಿರುದ್ಧ ಈ ಪ್ರತಿಭಟನೆಗಳನ್ನು ಪ್ರಾರಂಭಿಸಲಾಯಿತು. ತಿಭಟನೆಗಳ ನಡುವೆ ಅಮೆರಿಕದ ಮಿಲಿಟರಿಯೂ ಸಕ್ರಿಯವಾಗಿದ್ದು, ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ನಿರಂತರ ಏರಿಕೆಗೆ ಕಾರಣವಾಗಿದೆ.

ನನಗೆ ನೊಬೆಲ್ ಶಾಂತಿ ಪುರಸ್ಕಾರ ಕೊಟ್ಟಿಲ್ಲ, ಶಾಂತಿ ಇನ್ನು ನನ್ನ ಜವಾಬ್ದಾರಿಯಲ್ಲ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರೆ ಅವರಿಗೆ ವೈಯಕ್ತಿಕವಾಗಿ ಕಳುಹಿಸಿದ ಪತ್ರದಲ್ಲಿ ನೊಬೆಲ್ ಪ್ರಶಸ್ತಿ ಸಿಗದಿರುವುದು ಎಷ್ಟು ನಿರಾಶೆಗೊಂಡಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಪತ್ರದ ವಿಷಯಗಳ ಬಗ್ಗೆ ಆಘಾತಕಾರಿ ಮಾಹಿತಿ ಸೋರಿಕೆಯಾಗಿದ್ದು, ಅದರಲ್ಲಿ ವಿಶ್ವ ಶಾಂತಿಯನ್ನು ಖಚಿತಪಡಿಸುವುದು ತಮ್ಮ ಜವಾಬ್ದಾರಿಯಲ್ಲ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಟ್ರಂಪ್ ಅವರು ನೊಬೆಲ್ ಪ್ರಶಸ್ತಿ ನಿರಾಕರಿಸಲ್ಪಟ್ಟಾಗಿನಿಂದ ಜಾಗತಿಕ ವ್ಯವಹಾರಗಳ ಬಗ್ಗೆ ತಮ್ಮ ದೃಷ್ಟಿಕೋನ ಬದಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ಗಾಜಾ ಶಾಂತಿ ಮಂಡಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಜಾ ಪಟ್ಟಿಯಲ್ಲಿ ಶಾಶ್ವತ ಶಾಂತಿ, ಪುನರ್ನಿರ್ಮಾಣ ಮತ್ತು ಪರಿವರ್ತನಾ ಆಡಳಿತವನ್ನು ಮೇಲ್ವಿಚಾರಣೆ ಮಾಡಲು ಶಾಂತಿ ಮಂಡಳಿಯನ್ನು ರಚಿಸುವುದಾಗಿ ಘೋಷಿಸಿದರು. ಈ ಗಾಜಾ ಶಾಂತಿ ಮಂಡಳಿಗೆ ಸೇರಲು ಪ್ರಪಂಚದಾದ್ಯಂತದ ಹಲವಾರು ದೇಶಗಳ ನಾಯಕರನ್ನು ಆಹ್ವಾನಿಸಿದ್ದಾರೆ.

ಫ್ರೆಂಚ್ ವೈನ್ ಮೇಲೆ ಶೇ.200ರಷ್ಟು ಸುಂಕ ಜಾಗತಿಕ ಸಂಘರ್ಷದ ಮಧ್ಯಸ್ಥಿಕೆ ವಹಿಸಲು ಟ್ರಂಪ್ ರಚಿಸಿದ ಶಾಂತಿ ಮಂಡಳಿಯಲ್ಲಿ ಕುಳಿತುಕೊಳ್ಳಲು ಮ್ಯಾಕ್ರನ್ ನಿರಾಕರಿಸಿದ ನಂತರ ಅಮೆರಿಕ ಅಧ್ಯಕ್ಷ ಈ ಪ್ರಸ್ತಾಪವಿಟ್ಟಿದ್ದಾರೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ 200% ಸುಂಕ ವಿಧಿಸಬಹುದು ಎಂದು ಹೇಳಿದ್ದಾರೆ. ಮ್ಯಾಕ್ರನ್ ಅವರ ಐದು ವರ್ಷಗಳ ಅಧ್ಯಕ್ಷೀಯ ಅವಧಿ ಮೇ 2027 ರಲ್ಲಿ ಕೊನೆಗೊಳ್ಳಲಿದ್ದು, ಫ್ರೆಂಚ್ ಕಾನೂನಿನ ಪ್ರಕಾರ ಅವರು ಮೂರನೇ ಅವಧಿಗೆ ಮತ್ತೆ ಸ್ಪರ್ಧಿಸಲು ಸಾಧ್ಯವಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್ – Kannada News | Actor Srinath Dance For Neene sakida Gini Song

ನಟ ಶ್ರೀನಾಥ್ ಅವರಿಗೆ ಈಗ 82 ವರ್ಷ ವಯಸ್ಸು. ಅವರಿಗೆ ಇನ್ನೂ ಎನರ್ಜಿ ಕಡಿಮೆ ಆಗಿಲ್ಲ. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ನಾಲವಾರದ ಮಠದಲ್ಲಿ ನಡೆದ ಕೋರಿ ಸಿದ್ದೇಶ್ವರ ಜಾತ್ರೆಗೆ ನಟ ಶ್ರೀನಾಥ್ ಬಂದಿದ್ದರು. ಈ ವೇಳೆ ‘ಮಾನಸ ಸರೋವರ’ ಚಿತ್ರದ ‘ನೀನೆ ಸಾಕಿದ ಗಿಣಿ’ ಹಾಡಿಗೆ ಶ್ರೀನಾಥ್ ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ನಂತರ ಸಿದ್ದ ತೋಟೆಂದ್ರ ಶಿವಾಚಾರ್ಯರಿಂದ ನಾಲವಾರ ರತ್ನ ಪ್ರಶಸ್ತಿ ಸ್ವೀಕರಿಸಿದರು. ಶ್ರೀನಾಥ್ ಅವರ ಎನರ್ಜಿ ನೋಡಿ ಎಲ್ಲರಿಗೂ ಖುಷಿ ಆಗಿದೆ. ಆ ಸಂಧರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ!

ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು

PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –171
  • ಮಂಗಳೂರು-167
  • ಮೈಸೂರು –102
  • ಬೆಳಗಾವಿ – 104
  • ಕಲಬುರ್ಗಿ-69
  • ಶಿವಮೊಗ್ಗ – 167
  • ಬಳ್ಳಾರಿ – 170
  • ಹುಬ್ಬಳ್ಳಿ- 72
  • ಉಡುಪಿ –144
  • ವಿಜಯಪುರ –62

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು? – Kannada News | Trump’s Nobel Prize Claim: Why He Believes He Deserves Eight Awards

ಡೊನಾಲ್ಡ್​ ಟ್ರಂಪ್ Image Credit source: The Financial Express

ವಾಷಿಂಗ್ಟನ್, ಜನವರಿ 21: ಕಳೆದ ವರ್ಷ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಎಂಟು ಯುದ್ಧಗಳನ್ನು ತಡೆಗಟ್ಟುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ ಅವರು ಪ್ರತಿ ಯುದ್ಧಕ್ಕೆ ಒಂದರಂತೆ ಒಟ್ಟು ಎಂಟು ನೊಬೆಲ್ ಪುರಸ್ಕಾರಗಳನ್ನು ಪಡೆಯಬೇಕಾಗಿತ್ತು.

ನಾರ್ವೆ ಸರ್ಕಾರ ಉದ್ದೇಶಪೂರ್ವಕವಾಗಿ ತಮಗೆ ಪ್ರಶಸ್ತಿಯನ್ನು ನೀಡಿಲ್ಲ ಎಂದು ಟ್ರಂಪ್ ಆರೋಪಿಸಿದ್ದಾರೆ. ಆದಾಗ್ಯೂ, ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರೆ ಸರ್ಕಾರಕ್ಕೆ ನೊಬೆಲ್ ಪ್ರಶಸ್ತಿ ನೀಡುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರನ್ನು ಟ್ರಂಪ್ ಹೊಗಳಿದರು.

ಅವರು ತಮಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹಸ್ತಾಂತರ ಮಾಡಿದರು, ಮಚಾದೊ ಅವರು ಪ್ರಶಸ್ತಿಗೆ ಅರ್ಹರು ಎಂದು ಟ್ರಂಪ್ ನಂಬಿದ್ದರು ಎಂದು ಹೇಳಿದರು. ಮಾರಿಯಾ ಮಾಡಿದ್ದಕ್ಕೆ ನನಗೆ ತುಂಬಾ ಗೌರವವಿದೆ, ನೊಬೆಲ್ ಪ್ರಶಸ್ತಿಯನ್ನು ನನಗೆ ನೀಡಬೇಕಿತ್ತು, ಅವಳಿಗೆ ಅಲ್ಲ ಎಂದು ಅವರು ಹೇಳಿದರು ಎಂದು ಟ್ರಂಪ್ ಹೇಳಿದರು.

ಮತ್ತಷ್ಟು ಓದಿ: ಶಾಂತಿ ಪುರಸ್ಕಾರ ಇಲ್ಲ, ಶಾಂತಿ ನನ್ನ ಜವಾಬ್ದಾರಿಯಲ್ಲ ಎನ್ನುತ್ತಾ ಗಾಜಾ ಶಾಂತಿ ಮಂಡಳಿ ತೆರೆದ ಟ್ರಂಪ್, 2 ದಿನಗಳಲ್ಲಿ ಕೊಟ್ಟ ಹೇಳಿಕೆಗಳೇನು?

ಏತನ್ಮಧ್ಯೆ, ಮಚಾದೊ ಅವರ ನಡೆಯನ್ನು ಅನುಸರಿಸಿ, ನೊಬೆಲ್ ಪ್ರತಿಷ್ಠಾನವು ನೊಬೆಲ್ ಪ್ರಶಸ್ತಿ ವಿಜೇತರು ಈ ಗೌರವವನ್ನು ಇನ್ನೊಬ್ಬ ವ್ಯಕ್ತಿಗೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಪ್ರಶಸ್ತಿ ವಿಜೇತರು ಪ್ರಶಸ್ತಿಯನ್ನು ಬೇರೆಯವರೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಮತ್ತು ಘೋಷಣೆಯ ನಂತರ ಅದನ್ನು ವರ್ಗಾಯಿಸಲು ಸಾಧ್ಯವಿಲ್ಲ ಎಂದು ಪ್ರತಿಷ್ಠಾನವು ಹೇಳಿಕೆ ನೀಡಿದೆ.

ಎಂಟು ಯುದ್ಧಗಳನ್ನು ತಡೆಗಟ್ಟಿದ್ದಕ್ಕಾಗಿ ನಿಮ್ಮ ದೇಶವು ನನಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡದ ಕಾರಣ, ಇನ್ನು ಮುಂದೆ ಶಾಂತಿಯ ಮೇಲೆ ಮಾತ್ರ ಗಮನಹರಿಸುವ ಯಾವುದೇ ಬಾಧ್ಯತೆಯಿಲ್ಲ. ಶಾಂತಿ ಯಾವಾಗಲೂ ನನ್ನ ಪ್ರಮುಖ ಆದ್ಯತೆಯಾಗಿರುತ್ತದೆ, ಆದರೆ ನಾನು ಈಗ ಅಮೆರಿಕಕ್ಕೆ ಯಾವುದು ಒಳ್ಳೆಯದು ಮತ್ತು ಸರಿಯಾದದ್ದೋ ಅದರ ಮೇಲೆ ಕೇಂದ್ರೀಕರಿಸುತ್ತೇನೆ ಎಂದು ಟ್ರಂಪ್ ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಳಂಬವಾಗುತ್ತಿದೆ ‘ಜನ ನಾಯಗನ್’ ರಿಲೀಸ್; ಚುನಾವಣೆ ಘೋಷಣೆ ಆದರೆ ಸದ್ಯಕ್ಕಿಲ್ಲ ಬಿಡುಗಡೆ – Kannada News | Jana Nayagan Censor Controversy: Vijay Film Release Faces Delays and Court Battle

ದಳಪತಿ ವಿಜಯ್ ನಟನೆಯ, ಕೆವಿಎನ್ ನಿರ್ಮಾಣದ ‘ಜನ ನಾಯಗನ್’ (Jana Nayagan) ಚಿತ್ರದ ರಿಲೀಸ್ ದಿನಾಂಕ ಇನ್ನೂ ಅಧಿಕೃತವಾಗಿಲ್ಲ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಸಮಸ್ಯೆ ಆಗಿದೆ. ಸಿನಿಮಾಗೆ ‘ಯು/ಎ 16+’ ಸರ್ಟಿಫಿಕೇಟ್ ನೀಡಲು ನಿರ್ಧರಿಸಿದ್ದ ಸೆನ್ಸಾರ್ ಮಂಡಳಿ, ನಂತರ ಈ ಬಗ್ಗೆ ಅಪಸ್ವರ ತೆಗೆದಿತ್ತು. ಹೀಗಾಗಿ, ಸೆನ್ಸಾರ್ ಪತ್ರವನ್ನು ನೀಡದೇ ಸತಾಯಿಸುತ್ತಿದೆ. ಈ ವಿಷಯದಲ್ಲಿ ಕೆವಿಎನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್​​ನಲ್ಲಿಯೂ ಸಿನಿಮಾಗೆ ಹಿನ್ನಡೆ ಆಗುತ್ತಿದ್ದು, ರಿಲೀಸ್ ದಿನಾಂಕ ಇನ್ನೂ ಸ್ಪಷ್ಟವಾಗುತ್ತಿಲ್ಲ.

ಮದ್ರಾಸ್ ಹೈಕೋರ್ಟ್​​ನ ಸಿನಿಮಾಗೆ ‘ಯುಎ’ 16+ ಸರ್ಟಿಫಿಕೇಟ್ ನೀಡಲು ಆದೇಶಿಸಿತ್ತು. ನಂತರ ಸಂಜೆ ವೇಳೆಗೆ ತೀರ್ಪನ್ನು ಬದಲಿಸಿದ್ದ ಕೋರ್ಟ್, ತನ್ನದೇ ಆದೇಶಕ್ಕೆ ತಡೆ ನೀಡಿತ್ತು. ಈಗ ಮದ್ರಾಸ್ ಹೈಕೋರ್ಟ್​​ನ ಡಿವಿಷನ್ ಬೆಂಚ್ ಮಂಗಳವಾರ (ಜನವರಿ 20) ಈ ಪ್ರಕರಣದ ವಿಚಾರಣೆ ನಡೆಸಿದೆ. ಆದರೆ ಯಾವುದೇ ತೀರ್ಪು ಹೊರ ಬಿದ್ದಿಲ್ಲ.

ಸೆನ್ಸಾರ್ ಮಂಡಳಿ ಪರವಾಗಿ ಹಾಜರಾದ ವಕೀಲರು ಸಿನಿಮಾ ತಂಡದ್ದೇ ತಪ್ಪಿದೆ ಎಂಬರ್ಥದಲ್ಲಿ ವಾದಿಸಿದರು. ಜನವರಿ 6ರಂದು ಸಿನಿಮಾನ ಪುನರ್​ವಿಮರ್ಶೆ ಸಮಿತಿಗೆ ಕಳಿಸುವುದಾಗಿ ತಂಡಕ್ಕೆ ತಿಳಿಸಲಾಯಿತು. ಆದರೆ, ತಂಡದವರು ಇದನ್ನು ಪ್ರಶ್ನೆ ಮಾಡಿರಲಿಲ್ಲ ಎಂದು ವಕೀಲರು ವಾದಿಸಿದರು. ‘ಓರ್ವ ನೀಡಿದ ದೂರಿನಿಂದ ಪ್ರಕರಣವನ್ನು ಇಷ್ಟರ ಮಟ್ಟಿಗೆ ಎಳೆದುಕೊಂಡು ಹೋಗಲಾಗುತ್ತಿದೆ. ದೂರುದಾರ ಪ್ರಶ್ನೆ ಮಾಡಿದ ದೃಶ್ಯವನ್ನು ಈಗಾಗಲೇ ತೆಗೆದುಹಾಕಿದ್ದೇವೆ’ ಎಂದು ಕೋರ್ಟ್​​ಗೆ ತಂಡ ಮಾಹಿತಿ ನೀಡಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​​ನಲ್ಲಿ ‘ಜನ ನಾಯಗನ್’ಗೆ ಹಿನ್ನಡೆ, ಚೆಂಡು ಮತ್ತೆ ಹೈಕೋರ್ಟ್ ಅಂಗಳಕ್ಕೆ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜನವರಿ 5ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಸಿನಿಮಾಗೆ ಪ್ರಮಾಣಪತ್ರ ಸಿಕ್ಕಿದ್ದರೆ ಜನವರಿ 26ರಂದು ಚಿತ್ರ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅದೂ ಸಾಧ್ಯವಿಲ್ಲ ಎನ್ನಲಾಗುತ್ತಿದೆ. ದಳಪತಿ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದಕ್ಕಾಗಿ, ಪಕ್ಷ ಸ್ಥಾಪನೆ ಮಾಡಿದ್ದಾರೆ. ಒಂದೊಮ್ಮೆ ತಮಿಳುನಾಡು ಚುನಾವಣಾ ದಿನಾಂಕ ಘೋಷಣೆ ಆದರೆ, ತಂಡಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಆಗ ರಿಲೀಸ್ ಮತ್ತಷ್ಟು ಮುಂದಕ್ಕೆ ಹೋಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:44 am, Wed, 21 January 26

Source link

ಚಿನ್ನ ಸ್ಮಗ್ಲಿಂಗ್ ಮಾತ್ರವಲ್ಲ, ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್! ಬೃಹತ್ ಜಾಲ ಪತ್ತೆ – Kannada News | Diesel Smuggling from Gulf to Karnataka: Belagavi Police Bust Massive Petroleum Smuggling Racket

ಬೆಳಗಾವಿ, ಜನವರಿ 21: ಚಿನ್ನ ಕಳ್ಳಸಾಗಣೆ (Gold smuggling) ಮಾದರಿಯಲ್ಲೇ ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ (Karnataka) ಡೀಸೆಲ್ ಕಳ್ಳಸಾಗಣೆ (Diesel smuggling) ಮಾಡುತ್ತಿರುವ ಭಾರೀ ಜಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಮೇಲೆ ಮಾಳಮಾರುತಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾಗ ಡೀಸೆಲ್ ಕಳ್ಳಸಾಗಣೆ ಬೆಳಕಿಗೆ ಬಂದಿದೆ.

ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡೇಕರ್ ಅವರ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಯಾವುದೇ ದಾಖಲೆಯಿಲ್ಲದೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸಲಾಗುತ್ತಿರುವುದು ಪತ್ತೆಯಾಗಿದೆ.

17 ಲಕ್ಷ ರೂ. ಮೌಲ್ಯದ ಡೀಸೆಲ್ ಜಪ್ತಿ

ದಾಳಿಯ ವೇಳೆ ಸುಮಾರು 17 ಲಕ್ಷ ರೂ. ಮೌಲ್ಯದ 17 ಸಾವಿರ ಲೀಟರ್ ಡೀಸೆಲ್ ಹಾಗೂ ಟ್ಯಾಂಕರ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆ ವೇಳೆ, ತುಮಕೂರು ಮೂಲದ ಟ್ಯಾಂಕರ್ ಮಾಲೀಕ ಅರಿಹಂತ ಎಂಬಾತನ ಪಾತ್ರ ಬೆಳಕಿಗೆ ಬಂದಿದ್ದು, ಇದು ದೊಡ್ಡ ಮಟ್ಟದ ಸ್ಮಗ್ಲಿಂಗ್ ಜಾಲವಾಗಿರುವುದು ಸ್ಪಷ್ಟವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗಲ್ಫ್ ದೇಶಗಳಿಂದ ಅಕ್ರಮವಾಗಿ ತೈಲ ಉತ್ಪನ್ನಗಳನ್ನು ಭಾರತಕ್ಕೆ ತರಲಾಗುತ್ತಿದ್ದು, ಈ ಜಾಲದಲ್ಲಿ ಮಹಾರಾಷ್ಟ್ರ ಹಾಗೂ ರಾಜಸ್ಥಾನದ ಖದೀಮರು ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಇಷ್ಟು ವರ್ಷಗಳ ಕಾಲ ಈ ತೈಲ ಕಳ್ಳಸಾಗಣೆ ದಂಧೆ ನಡೆಯುತ್ತಿದ್ದರೂ ಯಾರಿಗೂ ಗೊತ್ತಾಗಿರಲಿಲ್ಲ ಎಂಬುದು ಅಚ್ಚರಿ ಮೂಡಿಸಿದೆ.

ಗಲ್ಫ್ ದೇಶಗಳಿಂದ ಹಡಗುಗಳ ಮೂಲಕ ಡೀಸೆಲ್ ಕಳ್ಳಸಾಗಣೆ

ಮೂಲಗಳ ಮಾಹಿತಿ ಪ್ರಕಾರ, ಗಲ್ಫ್ ದೇಶಗಳಿಂದ ಹಡಗುಗಳ ಮೂಲಕ ತೈಲ ನಿಗಮಗಳಿಗೆ ಪೆಟ್ರೋಲಿಯಂ ಉತ್ಪನ್ನಗಳು ಸಾಗಾಟವಾಗುತ್ತಿತ್ತು. ಕೆಲ ಹಡಗು ಮಾಲೀಕರು ಈ ಅಕ್ರಮ ಜಾಲದೊಂದಿಗೆ ಶಾಮೀಲಾಗಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಗಲ್ಫ್ ದೇಶಗಳ ತೈಲ ಉತ್ಪಾದಕರೊಂದಿಗೆ ಸ್ಮಗ್ಲರ್‌ಗಳು ನೇರ ಸಂಪರ್ಕ ಹೊಂದಿರುವ ಅನುಮಾನವೂ ವ್ಯಕ್ತವಾಗಿದೆ.

ಅರ್ಧ ದರಕ್ಕೆ ಡೀಸೆಲ್ ಮಾರಾಟ!

ಅಕ್ರಮವಾಗಿ ತರಲಾಗುತ್ತಿರುವ ಈ ಡೀಸೆಲ್ ಅನ್ನು ಕಾಳಸಂತೆಯಲ್ಲಿ ಅರ್ಧ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ವಿವಿಧ ಡೀಸೆಲ್ ಬಂಕ್‌ಗಳಿಗೆ ಸರಬರಾಜು ಮಾಡಿರುವ ಸಾಧ್ಯತೆಯಿದೆ. ತನಿಖೆಯಿಂದಷ್ಟೇ ಈ ತೈಲ ಕಳ್ಳರ ಕರಾಮತ್ತುಗಳು ಹೊರಬೀಳಬೇಕಿದೆ.

ಇದನ್ನೂ ಓದಿ: ರನ್ಯಾ ಚಿನ್ನ ಸ್ಮಗ್ಲಿಂಗ್ ಪ್ರಕರಣ: ಸಚಿವರ ನಂಟಿನ ರಹಸ್ಯದ ಬಗ್ಗೆ ಯತ್ನಾಳ್ ಸ್ಫೋಟಕ ಸುಳಿವು

ಸದ್ಯ ಪೊಲೀಸರು ಎರಡು ಆಯಾಮಗಳಲ್ಲಿ ತನಿಖೆ ನಡೆಸಲು ನಿರ್ಧರಿಸಿದ್ದು, ವಿಶೇಷ ತಂಡಗಳನ್ನು ಮುಂಬೈ ಹಾಗೂ ರಾಜಸ್ಥಾನಕ್ಕೆ ರವಾನಿಸಲು ಸಿದ್ಧತೆ ನಡೆಸಲಾಗಿದೆ. ಪ್ರಕರಣದ ಕುರಿತು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬರೋಬ್ಬರಿ ೩೭ ಸಿಕ್ಸ್… ಫಿನ್ ಅಲೆನ್ ಆರ್ಭಟ – Kannada News | Finn Allen creates new record in BBL 15

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ (BBL 15) ನ್ಯೂಝಿಲೆಂಡ್ ಬ್ಯಾಟರ್ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್ ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ.

Source link

ಮೈಸೂರು ರೇಷ್ಮೆ ಸೀರೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್! ಜಿಐ ಟ್ಯಾಗ್ ಇರುವ ಸೀರೆ ಖರೀದಿಗೆ ಸೂರ್ಯೋದಯಕ್ಕೂ ಮುನ್ನ ಮಹಿಳೆಯರ ಸರದಿ ಸಾಲು! – Kannada News | Mysore Silk Saree Craze: Women Queue for Hours at KSIC Showrooms to buy GI tagged sarees

ಜಿಐ ಟ್ಯಾಗ್ ಹೊಂದಿರುವ ಸೀರೆ ಖರೀದಿಗೆ ಸೂರ್ಯೋದಯಕ್ಕೂ ಮುನ್ನ ಮಹಿಳೆಯರ ಸರತಿ ಸಾಲು!

ಬೆಂಗಳೂರು, ಜನವರಿ 21: ಸೀರೆ ಎಂದರೆ ಸಾಕು ಮಹಿಳೆಯರು ಮುಗಿಬೀಳುತ್ತಾರೆ. ಅಂತೆಯೇ ಅಪಾರ ಬೇಡಿಕೆಯುಳ್ಳ ಶುದ್ಧ ಮೈಸೂರು ರೇಷ್ಮೆ ಸೀರೆಗಳನ್ನು (Mysore Silk Saree) ಖರೀದಿಸಲು ನಗರದ ರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್‌ (KSIC) ಶೋರೂಮ್‌ಗಳ ಮುಂದೆ ಮಹಿಳೆಯರು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಶೋ ರೂಮ್ ತೆರೆಯುವ ಸಮಯ 10 ಗಂಟೆಯಾದರೂ ಬೆಳಗಿನ 4 ಗಂಟೆಯಿಂದಲೇ ಹಾಜರಾಗುತ್ತಿರುವ ಮಹಿಳೆಯರು, ಟೋಕನ್ ತೆಗದುಕೊಂಡು ಕಾದು ಕೂರುತ್ತಿದ್ದಾರೆ.

ಬೆಳಗಿನ ಜಾವವೇ ಹೋಗಿ ನಿಂತರೂ ಒಬ್ಬರಿಗೆ ಒಂದೇ ಸೀರೆ?

23,000 ರೂ. ರಿಂದ 2.5 ಲಕ್ಷ ರೂ.ನವರೆಗೆ ಬೆಲೆ ಹೊಂದಿರುವ ಮೈಸೂರು ರೇಷ್ಮೆ ಸೀರೆಗಳು ದುಬಾರಿಯಾದರೂ ಅವುಗಳ ಗುಣಮಟ್ಟ, ಶುದ್ಧತೆ ಮತ್ತು ಪಾರಂಪರಿಕ ಮೌಲ್ಯಕ್ಕಾಗಿ ಹೆಚ್ಚು ಬೇಡಿಕೆ ಹೊಂದಿವೆ. ಜಿಐ ಟ್ಯಾಗ್ (Geographical Indication Tag) ಪಡೆದಿರುವ ಮೈಸೂರು ರೇಷ್ಮೆಯನ್ನು ಉತ್ಪಾದಿಸುವ ಏಕೈಕ ಅಧಿಕೃತ ಸಂಸ್ಥೆಯಾದ KSIC ನಲ್ಲಿ 2025ರಲ್ಲಿ ಸರಬರಾಜು ಕೊರತೆ ಮುಂದುವರಿದಿದ್ದು, 2026ರಲ್ಲಿಯೂ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ.

ಸಂಸ್ಥೆಯಲ್ಲಿನ ನಿಪುಣ ನೇಕಾರರು ಮತ್ತು ಕೈಗಾರರು ಸಂಖ್ಯೆ ಕಡಿಮೆ ಇರುವುದರ ಜೊತೆಗೆ ಒಬ್ಬ ನೇಕಾರನಿಗೆ ಕನಿಷ್ಠ ಮೂಲಭೂತ ತರಬೇತಿಗೇ 6–7 ತಿಂಗಳು ವ್ಯಯಿಸಬೇಕಾಗುತ್ತಿದೆ. ಇದರಿಂದ ಉತ್ಪಾದನೆಯನ್ನು ತ್ವರಿತವಾಗಿ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಮದುವೆ , ವರಲಕ್ಷ್ಮೀ ಪೂಜೆ, ಗೌರಿ ಗಣೇಶ ಹಬ್ಬ ಮತ್ತು ದೀಪಾವಳಿ ಹಬ್ಬದ ಸಂದರ್ಭಗಳಲ್ಲಿ ಸೀರೆಗಳ ಬೇಡಿಕೆ ಮತ್ತಷ್ಟು ಹೆಚ್ಚಾಗಿರುವುದರಿಂದ ಶೋರೂಮ್‌ಗಳಲ್ಲಿ ಸೀರೆಗಳು ಕೆಲವೇ ಗಂಟೆಗಳಲ್ಲಿ ಮಾರಾಟವಾಗುತ್ತಿವೆ. ಹೀಗಾಗಿ ಬೆಳಗಿನ ಜಾವವೇ ಶೋ ರೂಮ್ ಮುಂದೆ ಹೋಗಿ ನಿಂತರೂ ಒಬ್ಬ ಗ್ರಾಹಕನಿಗೆ ಒಂದೇ ಸೀರೆ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ ಮೈಸೂರು ರೇಷ್ಮೆ ಸೀರೆಯ ಇತಿಹಾಸವೇನು? ಮೈಸೂರಿಗೆ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಪರಿಚಯಿಸಿದ್ದು ಯಾರು?

ಈ ಬಗ್ಗೆ ಬೆಂಗಳೂರಿಗರೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಶೋ ರೂಮ್ ಮುಂದೆ ಮಹಿಳೆಯರ ಸರದಿ ಸಾಲಿನ ದೃಶ್ಯವನ್ನು ಹಂಚಿಕೊಂಡಿದ್ದು, ವೀಡಿಯೋ ಇಲ್ಲಿದೆ.

ಪರಂಪರೆಯ ಸಂಕೇತವಾಗಿರುವ ಮೈಸೂರು ಸಿಲ್ಕ್ ಸ್ಯಾರಿ

KSIC ಸೀರೆಗಳಿಗೆ ವಿಶಿಷ್ಟ ಕೋಡ್ ಹಾಗೂ ಹೋಲೋಗ್ರಾಂ ಅಳವಡಿಸಲಾಗಿದ್ದು, ಶೇ100 ಶುದ್ಧ ಚಿನ್ನದ ಜರಿ ಬಳಸಲಾಗುತ್ತದೆ. ಖಾಸಗಿ ವಲಯದಲ್ಲಿ ನಕಲಿ ಹಾಗೂ ಕೃತಕ ರೇಷ್ಮೆ ಮಾರಾಟದ ಆರೋಪಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, KSIC ಉತ್ಪನ್ನಗಳ ಶುದ್ಧತೆ ಗ್ರಾಹಕರ ಭರವಸೆಯನ್ನು ಇನ್ನೂ ಉಳಿಸಿಕೊಂಡಿದೆ. ಮೈಸೂರು ರೇಷ್ಮೆ ಸೀರೆ ಇಂದಿಗೂ ಮಹಿಳೆಯರ ಮನದಲ್ಲಿ ಪರಂಪರೆಯ ಸಂಕೇತವಾಗಿ ಉಳಿದಿದೆ. ಹೀಗಾಗಿ ಬೆಲೆಯೆಷ್ಟೇ ಇದ್ದರೂ ಸೀರೆಯನ್ನು ಖರೀದಿಸಲು ಇಂದಿಗೂ ಮಹಿಳೆಯರು ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.

Source link

ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್ – Kannada News | Amitabh Bachchan’s Golden Toilet: Vijay Varma’s Viral Selfie Sparks Luxury Debate

ಭಾರತದ ಅತ್ಯಂತ ಶ್ರೀಮಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಚಿನ್ನದ ಟಾಯ್ಲೆಟ್ ಇರುವ ವಿಷಯ ಇತ್ತೀಚೆಗೆ ಸುದ್ದಿ ಆಗಿತ್ತು. ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಮನೆಯಲ್ಲೂ ಇದೇ ರೀತಿಯ ಟಾಯ್ಲೆಟ್ ಇದೆಯಂತೆ. ವೈರಲ್ ಆಗಿರುವ ಫೋಟೋ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮತ್ತು ಚರ್ಚೆಯನ್ನು ಸೃಷ್ಟಿಸಿದೆ. ಈ ಫೋಟೋದಲ್ಲಿ ಬಿಗ್ ಬಿ ಅವರ ಮನೆಯ ಸ್ನಾನಗೃಹದಲ್ಲಿರುವ ಚಿನ್ನದ ಕಮೋಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಫೋಟೋವನ್ನು ನೋಡಿದ ನಂತರ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

ನಟ ವಿಜಯ್ ವರ್ಮಾ ಅವರ ಥ್ರೋಬ್ಯಾಕ್ ಪೋಸ್ಟ್‌ನಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಈ ಚರ್ಚೆ ಆರಂಭವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತ ಟ್ರೆಂಡಿಂಗ್ ಆಗಿರುವ ‘2026 ಈಸ್ ದಿ ನ್ಯೂ 2016’ ಎಂಬ ಟ್ರೆಂಡ್‌ನ ಭಾಗವಾಗಿದ್ದಾರೆ ವಿಜಯ್. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 2016 ರ ನೆನಪುಗಳನ್ನು ಮರಳಿ ತರುವ ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವಿಜಯ್ ಅವರ ವೃತ್ತಿಜೀವನದ ಪ್ರಮುಖ ಕ್ಷಣಗಳನ್ನು ತೋರಿಸುತ್ತದೆ. ಒಂದು ವಿಶೇಷ ಸೆಲ್ಫಿ ಎಲ್ಲರ ಗಮನ ಸೆಳೆಯುತ್ತಿದೆ.

ವಿಜಯ್ ವರ್ಮಾ ಹಂಚಿಕೊಂಡ ಈ ಸೆಲ್ಫಿ ನೇರವಾಗಿ ಅಮಿತಾಭ್ ಬಚ್ಚನ್ ಅವರ ಮನೆಯ ಸ್ನಾನಗೃಹದಲ್ಲಿ ತೆಗೆದುಕೊಳ್ಳಲಾಗಿದೆ. ಈ ಫೋಟೋದಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವುದು ಅಲ್ಲಿ ಕಂಡುಬರುವ ಚಿನ್ನದ ಬಣ್ಣದ ಶೌಚಾಲಯ.
ಕೆಲವರು, ‘ವಾವ್! ಗೋಲ್ಡನ್ ಟಾಯ್ಲೆಟ್!’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ವಿಜಯ್ ಇಷ್ಟೊಂದು ಐಷಾರಾಮಿ ಟಾಯ್ಲೆಟ್ ನೋಡಿದ್ದು ಇದೇ ಮೊದಲು ಮತ್ತು ತಕ್ಷಣ ಸೆಲ್ಫಿ ತೆಗೆದುಕೊಂಡಿದ್ದಾರೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮಿತಾಭ್ ಬಚ್ಚನ್ ಸಹೋದರ ಏನು ಮಾಡ್ತಿದ್ದಾರೆ ಗೊತ್ತಾ?

ಈ ಫೋಟೋ ಜೊತೆಗೆ ವಿಜಯ್ ವರ್ಮಾ ಭಾವನಾತ್ಮಕ ಶೀರ್ಷಿಕೆಯನ್ನೂ ಬರೆದಿದ್ದಾರೆ. ಅದರಲ್ಲಿ ಅವರು, ‘2016 ನನಗೆ ವಿಶೇಷ ವರ್ಷವಾಗಿತ್ತು. ‘ಪಿಂಕ್’ ನಂತಹ ಚಿತ್ರಗಳಲ್ಲಿ ಬಿಗ್ ಬಿ ಮತ್ತು ಶೂಜಿತ್ ದಾ ಅವರೊಂದಿಗೆ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿತು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾದೆ. ಅಮಿತಾಬ್ ಬಚ್ಚನ್ ಅವರ ಮನೆಯಲ್ಲಿ ಚಿನ್ನದ ಶೌಚಾಲಯದೊಂದಿಗೆ ಸೆಲ್ಫಿ ತೆಗೆದುಕೊಂಡೆ. ಸಂಜಯ್ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಅವರನ್ನು ಭೇಟಿಯಾದೆ. ನನ್ನ ಇಷ್ಟದ ಇರ್ಫಾನ್ ಖಾನ್ ಅವರನ್ನು ಭೇಟಿಯಾದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version