ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಹೆಡ್ ಕೋಚ್

ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಹೆಡ್ ಕೋಚ್

ಪ್ರಸ್ತುತ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು 2026 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಆರ್​ಸಿಬಿ ತಂಡದಲ್ಲಿ ವಿಕೆಟ್ ಕೀಪರ್ ಜವಾಬ್ದಾರಿ ನಿಭಾಯಿಸುತ್ತಿರುವ ಜಿತೇಶ್ ಶರ್ಮಾ ಪಾಡ್‌ಕ್ಯಾಸ್ಟ್‌ವೊಂದರಲ್ಲಿ ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ (Dinesh Karthik) ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಬಹುದು ಎಂದಿದ್ದಾರೆ. ಒಂದು ವೇಳೆ ದಿನೇಶ್ ಕಾರ್ತಿಕ್ ಅವರಿಗೆ ಟೀಂ ಇಂಡಿಯಾದ ಕೋಚ್ ಆಗುವ ಅವಕಾಶ ಸಿಗದಿದ್ದರೂ ಖಂಡಿತವಾಗಿಯೂ ಅವರು ಬೇರೊಂದು ದೇಶದ ತಂಡದ ಮುಖ್ಯ ಕೋಚ್ ಆಗುತ್ತಾರೆ. ಏಕೆಂದರೆ ಅವರು ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.

ದಿನೇಶ್ ಕಾರ್ತಿಕ್ ಮುಖ್ಯ ಕೋಚ್?

ರಣವೀರ್ ಅಲಹಾಬಾದ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿರುವ ಜಿತೇಶ್ ಶರ್ಮಾ, ‘ಭವಿಷ್ಯದಲ್ಲಿ ದಿನೇಶ್ ಕಾರ್ತಿಕ್ ಭಾರತೀಯ ಕ್ರಿಕೆಟ್ ತಂಡದ ತರಬೇತುದಾರರಾಗುತ್ತಾರೆಯೇ?” ಎಂದು ರಣವೀರ್ ಜಿತೇಶ್ ಶರ್ಮಾ ಅವರನ್ನು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಜಿತೇಶ್, ‘ಅವರು ಖಂಡಿತಾ ಆಗಬಹುದು. ದಿನೇಶ್ ಕಾರ್ತಿಕ್ ಭಾರತವಲ್ಲದಿದ್ದರೆ, ಇನ್ನೊಂದು ಪ್ರಮುಖ ದೇಶದ ತರಬೇತುದಾರರಾಗುವ ಸಾಮರ್ಥ್ಯ ಹೊಂದಿದ್ದಾರೆ. ಭಾರತ ಅವರನ್ನು ಕೋಚ್ ಆಗಿ ನೇಮಿಸದಿದ್ದರೆ, ಬೇರೆ ಯಾವುದಾದರೂ ದೇಶ ಮಾಡುತ್ತದೆ ಎಂದು ನಾನು ನಂಬುತ್ತೇನೆ’ ಎಂದು ಜಿತೇಶ್ ಶರ್ಮಾ ಉತ್ತರಿಸಿದ್ದಾರೆ.

ದಿನೇಶ್ ಕಾರ್ತಿಕ್ ಯೋಗ್ಯ ಅಭ್ಯರ್ಥಿ

ಜಿತೇಶ್ ಹೇಳಿದಂತೆ, ದಿನೇಶ್ ಕಾರ್ತಿಕ್ ಅವರ ಅನುಭವ ಮತ್ತು ಕ್ರಿಕೆಟ್ ಜ್ಞಾನ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಯೋಗ್ಯ ಅಭ್ಯರ್ಥಿಯನ್ನಾಗಿ ಮಾಡಿದೆ. ದಿನೇಶ್ ಕಾರ್ತಿಕ್ ಅವರ ಯಶಸ್ಸಿಗೆ ದೊಡ್ಡ ಸಾಕ್ಷಿಯೆಂದರೆ ಆರ್‌ಸಿಬಿಯ ಐಪಿಎಲ್ ಗೆಲುವು. 2025 ರಲ್ಲಿ, ದಿನೇಶ್ ಕಾರ್ತಿಕ್ ಬಲಿಷ್ಠ ತಂಡವನ್ನು ಕಟ್ಟಿ ತಂಡವನ್ನು ಚಾಂಪಿಯನ್ ಮಾಡಿದ್ದರು. ದಿನೇಶ್ ಕಾರ್ತಿಕ್ ದಿ ಹಂಡ್ರೆಡ್‌ನಲ್ಲಿ ಲಂಡನ್ ಸ್ಪಿರಿಟ್‌ನ ಬ್ಯಾಟಿಂಗ್ ಕೋಚ್ ಮತ್ತು ಮಾರ್ಗದರ್ಶಕರೂ ಆಗಿದ್ದಾರೆ. ಹೀಗಾಗಿ ಮುಂದೊಂದು ದಿನ ದಿನೇಶ್ ಕಾರ್ತಿಕ್ ಭಾರತ ತಂಡದ ಹೆಡ್ ಕೋಚ್ ಆಗುವ ಸಾಧ್ಯತೆಗಳಿವೆ.

IPL 2026: ಆರ್​ಸಿಬಿಗೆ ಆರಂಭಿಕ ಆಘಾತ; ಮೊದಲ ಪಂದ್ಯದಲ್ಲಿ ಅಡಲ್ಲ ಸ್ಟಾರ್ ಪ್ಲೇಯರ್

ದಿನೇಶ್ ಕಾರ್ತಿಕ್ ವೃತ್ತಿಜೀವನ

ದಿನೇಶ್ ಕಾರ್ತಿಕ್ ತಮ್ಮ ವೃತ್ತಿಜೀವನದಲ್ಲಿ ಭಾರತ ಪರ 26 ಟೆಸ್ಟ್, 94 ಏಕದಿನ ಮತ್ತು 60 ಟಿ20 ಪಂದ್ಯಗಳನ್ನು ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 28 ಶತಕಗಳು ಸೇರಿದಂತೆ ಅವರು ಒಟ್ಟು 9,620 ರನ್ ಗಳಿಸಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ 12 ಶತಕಗಳು ಸೇರಿದಂತೆ 7,603 ರನ್ ಗಳಿಸಿರುವ ಕಾರ್ತಿಕ್ 415 ಟಿ20 ಪಂದ್ಯಗಳನ್ನು ಆಡಿದ್ದು, 7,557 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ

ಚಿಕ್ಕಮಗಳೂರು, ಮಾರ್ಚ್​​ 27: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಸಂಬಂಧ ಮನನೊಂದು ಮಹಿಳಾ ಸಂಘದ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರಿನ ತರೀಕೆರೆಯ ಹೆಚ್​​. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಷಾ (45) ಮೃತ ಮಹಿಳೆಯಾಗಿದ್ದು, ಕಿರುಕುಳ ತಡೆಯಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿರುವ ವಿಡಿಯೋ ರೆಕಾರ್ಡ್​​ ಮಾಡಿ ನೇಣಿಗೆ ಶರಣಾಗಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರೋದು ತನ್ನಿಂದಾದ ತಪ್ಪು ಎಂದು ವಿಡಿಯೋದಲ್ಲವರು ಅಲವತ್ತುಕೊಂಡಿದ್ದಾರೆ.

ಕಳೆದ 10 ವರ್ಷಗಳಿಂದ ಹಣ ದುರುಪಯೋಗ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಸಂಬಂಧ ನಡೆದಿದ್ದ ಪಂಚಾಯತಿಯಲ್ಲೂ ಲೆಕ್ಕಪತ್ರ ಮಿಸ್ಸಿಂಗ್​​ ಆಗಿರೋದು ನಿಜ ಎಂದು ಉಷಾ ಒಪ್ಪಿಕೊಂಡಿದ್ದರು. 2010ರಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಆರಂಭವಾಗಿತ್ತು. ಅಲ್ಲಿಂದಲೂ ಉಷಾ ಸಂಘದ ಕಾರ್ಯದರ್ಶಿಯಾಗಿದ್ದರು. ಈ ನಡುವೆ 2025ರಲ್ಲಿ ಸಂಘಕ್ಕೆ ಹೊಸ ಸದಸ್ಯರು ಸೇರ್ಪಡೆಗೊಂಡ ಬಳಿಕ ಎಲ್ಲಾ ಲೆಕ್ಕಪತ್ರ ಕೇಳಲು ಅವರು ಪ್ರಾರಂಭಿಸಿದ್ದರು. ಆ ವೇಳೆ ಉಷಾ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲೊಂದು ಮನಕಲಕುವ ಘಟನೆ; ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ದೂರು ದಾಖಲು

ಘಟನೆ ಬಗ್ಗೆ ಮೃತ ಉಷಾ ಅವರ ಪತಿ ಪೊಲೀಸರಿಗೆ ದೂರು ನೀಡಿದ್ದು, ಪತ್ನಿ ಸಾವಿಗೆ ಕೆಲವರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಆಕೆ ಎಲ್ಲ ಲೆಕ್ಕಪತ್ರವನ್ನೂ ನೀಡಿದ್ದಳು. ಹೀಗಿದ್ದರೂ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿತ್ತು. ಎಚ್. ಎನ್. ಜಗದೀಶ್ (ದೊಡ್ಡೆರಿ), ದಕ್ಷಿಣ ಮೂರ್ತಿ, ಎಚ್. ಎಂ. ಯತೀಶ, ಲವಕುಮಾರ, ಕುಮಾರಸ್ವಾಮಿ, ವಿನಯ್ ಕುಮಾರ, ದರ್ಶನ್‌ ಕುಮಾರ್ ಎಚ್. ಆರ್., ಮಂಜುನಾಥ, ರಾಜೇಶ್ ಬಿನ್ ಪಾಲಾಕ್ಷಿ ಇವರೇ ತನ್ನ ಪತ್ನಿಯ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಉಷಾ ವಿಡಿಯೋದಲ್ಲಿ 10 ಜನರ ಹೆಸರು ಉಲ್ಲೇಖಿಸಿರುವ ಹಿನ್ನೆಲೆ ಹೆಚ್​​. ಮಲ್ಲೇನಹಳ್ಳಿ ಗ್ರಾಮದ 10 ಜನರ ಮೇಲೆ ತರೀಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

ನವದೆಹಲಿ, ಮಾರ್ಚ್ 27: ಜನರಿಗೆ ತೈಲ ಬೆಲೆ ಏರಿಕೆಯ ಬಿಸಿ ತಾಗದಿರಲೆಂದು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು (Excise Duty) ಕಡಿಮೆಗೊಳಿಸಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ಆಗಬಹುದಾಗಿದ್ದ ನಷ್ಟದ ಹೊರೆ ಕಡಿಮೆ ಆಗಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಬೆಲೆ (Petrol Price) ಏರಿಕೆಯ ಭಾರವೂ ತಪ್ಪಿದಂತಾಗುತ್ತದೆ.

ಅಬಕಾರಿ ಸುಂಕ ಇಳಿಕೆಯಿಂದ ಸರಕಾರದ ಆದಾಯಕ್ಕೆ ಸಾಕಷ್ಟು ನಷ್ಟ ಆಗಲಿದೆ. ಕೇಂದ್ರೀಯ ನೇರ ತೆರಿಗೆ ಮತ್ತು ಸುಂಕ ಮಂಡಳಿ ಛೇರ್ಮನ್ ವಿವೇಕ್ ಚತುರ್ವೇದಿ ಪ್ರಕಾರ, ಕೇವಲ 15 ದಿನದಲ್ಲಿ ಸರ್ಕಾರಕ್ಕೆ ಆಗುವ ಆದಾಯ ನಷ್ಟ ಬರೋಬ್ಬರಿ 7,000 ಕೋಟಿ ರೂ.

ಇದನ್ನೂ ಓದಿ: ರಷ್ಯನ್ ಎಲ್​ಎನ್​ಜಿಯನ್ನು ಖರೀದಿಸಲಿರುವ ಭಾರತ; ಎಲ್​ಪಿಜಿ, ಪಿಎನ್​ಜಿ, ಎಲ್​ಎನ್​ಜಿಗಿರುವ ವ್ಯತ್ಯಾಸಗಳೇನು?

ಆದರೆ, ತೈಲ ಮಾರುಕಟ್ಟೆ ಸಂಸ್ಥೆಗಳು ವಿಪರೀತ ನಷ್ಟ ಎದುರಿಸುವುದನ್ನು ತಪ್ಪಿಸಲು ಸರ್ಕಾರ ಅಬಕಾರಿ ಸುಂಕ ಇಳಿಸುವುದು ಅನಿವಾರ್ಯವಾಗಿತ್ತು. ಇಲ್ಲದಿದ್ದರೆ ಪೆಟ್ರೋಲ್, ಡೀಸಲ್ ಬೆಲೆಗಳನ್ನು ಏರಿಸಲು ಅವಕಾಶ ಕೊಡುವ ಒಂದು ಮಾರ್ಗ ಇತ್ತಾದರೂ ಅದರಿಂದ ಜನಸಾಮಾನ್ಯರಿಗೆ ನೇರವಾಗಿ ಬಿಸಿ ತಗುಲುತ್ತಿತ್ತು. ಹೀಗಾಗಿ, ಅಬಕಾರಿ ಸುಂಕವನ್ನು ಇಳಿಸಲು ಸರ್ಕಾರ ನಿರ್ಧರಿಸಿದೆ.

ಜಾಗತಿಕ ಕಚ್ಛಾ ತೈಲ ಬೆಲೆ ಇರಾನ್ ಯುದ್ಧಕ್ಕೆ ಮುನ್ನ ಒಂದು ಬ್ಯಾರಲ್​ಗೆ ಸುಮಾರು 60 ಡಾಲರ್ ಇತ್ತು. ಈಗ ಅದು 100 ಡಾಲರ್ ದಾಟಿ ಹೋಗಿದೆ. ಒಂದು ಹಂತದಲ್ಲಿ ಅದು 120 ಡಾಲರ್ ಗಡಿ ಮುಟ್ಟಿತ್ತು. ತೈಲ ಬೆಲೆ ಹೆಚ್ಚಿದಷ್ಟೂ ಒಎಂಸಿಗಳಿಗೆ ನಷ್ಟದ ಹೊರೆ ಹೆಚ್ಚುತ್ತಾ ಹೋಗುತ್ತದೆ. ಸರ್ಕಾರ ಪ್ರತೀ 15 ದಿನಗಳಿಗೊಮ್ಮೆ ಅಬಕಾರಿ ಸುಂಕಗಳನ್ನು ಪರಿಷ್ಕರಿಸಲೂ ನಿರ್ಧರಿಸಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಆಪರೇಷನ್ ಊರ್ಜಾ ಸುರಕ್ಷಾ; ಏನಿದು ವಿಶೇಷ ಕಾರ್ಯಾಚರಣೆ?

ಕೆಲ ದಿನಗಳ ಹಿಂದೆ ಖಾಸಗಿ ಪೆಟ್ರೋಲಿಯಂ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ ತನ್ನ ಪೆಟ್ರೋಲ್ ಮತ್ತು ಡೀಸಲ್ ದರಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 5 ರೂ ಹೆಚ್ಚಿದರೆ, ಡೀಸಲ್ ಬೆಲೆ 3 ರೂ ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಆಪರೇಷನ್ ಊರ್ಜಾ ಸುರಕ್ಷಾ; ಏನಿದು ವಿಶೇಷ ಕಾರ್ಯಾಚರಣೆ?

ನವದೆಹಲಿ, ಮಾರ್ಚ್ 27: ಭಾರತ ಈ ತಿಂಗಳು (ಮಾರ್ಚ್) ಆಪರೇಷನ್ ಊರ್ಜಾ ಸುರಕ್ಷಾ (Operation Oorja Suraksha) ಆರಂಭಿಸಿದೆ. ಭಾರತೀಯ ನೌಕಾಪಡೆಯ ವಿಶೇಷ ಕಾರ್ಯಾಚರಣೆಯಾದ ಇದರಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಭಾರತೀಯ ತೈಲ ನೌಕೆಗಳ ಸಾಗಣೆಗೆ ರಕ್ಷಣೆ ಒದಗಿಸುವುದು ಮುಖ್ಯ ಉದ್ದೇಶವಾಗಿದೆ. ಯುದ್ಧದ ಬಳಿಕ ಹಾರ್ಮುಜ್ ಜಲಸಂಧಿಯು ಅಕ್ಷರಶಃ ಇರಾನ್ ಹತೋಟಿಯಲ್ಲಿದೆ. ಭಾರತ ಸೇರಿದಂತೆ ಕೆಲವೇ ಆಯ್ದ ದೇಶಗಳ ತೈಲ ಹಡಗುಗಳಿಗೆ ಸಾಗಲು ಇರಾನ್ ಅನುಮತಿ ಕೊಟ್ಟಿದೆ. ಆದರೂ ತ್ರಿವರ್ಣ ಧ್ವಜ ಲಾಂಛನದ ತೈಲ ಹಡಗುಗಳಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಆಪರೇಷನ್ ಊರ್ಜಾ ಸುರಕ್ಷಾ ಕೈಗೊಳ್ಳಲಾಗಿದೆ.

ಊರ್ಜಾ ಎಂದರೆ ಇಂಧನ. ಈ ಕಾರ್ಯಾಚರಣೆಯ ಉದ್ದೇಶ ಇಂಧನ ಸುರಕ್ಷತೆಯಾಗಿದೆ. ಸದ್ಯ ಬಹಳ ಅಪಾಯಕಾರಿಯಾಗಿ ಮಾರ್ಪಟ್ಟಿರುವ ಹಾರ್ಮುಜ್ ಜಲಸಂಧಿ, ಓಮನ್ ಗಲ್ಫ್ ಮೂಲಕ ಕಚ್ಛಾ ತೈಲ, ಎಲ್​ಎನ್​ಜಿ ಮತ್ತು ಎಲ್​ಪಿಜಿ ಹೊತ್ತ ಭಾರತೀಯ ಹಡಗುಗಳು ಸುರಕ್ಷಿತವಾಗಿ ಭಾರತವನ್ನು ತಲುಪುವುದು ಈ ಆಪರೇಷನ್​ನ ಗುರಿ.

ಇದನ್ನೂ ಓದಿ: ಗೃಹೇತರ ಬಳಕೆಯ ಎಲ್​ಪಿಜಿ, ಹೆಚ್ಚುವರಿ ಶೇ. 20 ಹಂಚಿಕೆ; ಒಟ್ಟು ಪೂರೈಕೆ ಶೇ. 70ಕ್ಕೆ ಏರಿಕೆ

ಆಪರೇಷನ್ ಊರ್ಜಾ ಸುರಕ್ಷಾದಲ್ಲಿ ನೌಕಾಪಡೆಯು ತನ್ನ ಫ್ರಂಟ್​ಲೈನ್ ಸಮರನೌಕೆಗಳನ್ನು ಗಲ್ಫ್​ನತ್ತ ಕಳುಹಿಸಿಕೊಡುತ್ತದೆ. ಭಾರತೀಯ ತೈಲ ನೌಕೆಗಳು ಗಲ್ಫ್ ದಾಟಿ ಬರಲು ಅನುವಾಗುವ ರೀತಿಯಲ್ಲಿ ಅದರ ಹಿಂದೆ ಮುಂದೆ ಸಮರನೌಕೆಗಳನ್ನು ನಿಯೋಜಿಸಲಾಗುತ್ತದೆ. ಹಡಗುಗಳನ್ನು ಯಾರಾದರೂ ಹೈಜಾಕ್ ಮಾಡುವುದೋ, ಬೇರೆಡೆ ವಿಮುಖಗೊಳಿಸುವುದೋ ಇತ್ಯಾದಿ ಮಾಡದಂತೆ ನೌಕಾಪಡೆ ಎಚ್ಚರ ವಹಿಸುತ್ತದೆ.

ಹಾರ್ಮುಜ್ ಜಲಸಂಧಿ ಮತ್ತು ಓಮನ್ ಗಲ್ಫ್​ನಲ್ಲಿ ಭಾರತೀಯ ಹಡಗುಗಳಿಗೆ ಸಾಗಲು ಇರಾನ್ ಅನುಮತಿಸಿದೆ. ಆದರೆ ಹೌತಿಸ್ ಬಂಡುಕೋರರು ಅಥವಾ ಇನ್ಯಾರಾದರೂ ತೈಲ ನೌಕೆಗಳಿಗೆ ಹಾನಿ ಮಾಡುವ ಸಾಧ್ಯತೆ ಇದ್ದೇ ಇದೆ. ಹೀಗಾಗಿ, ನೌಕೆಗಳ ರಕ್ಷಣೆ ಉದ್ದೇಶದಿಂದ ಮಾತ್ರವೇ ಭಾರತೀಯ ನೌಕಾಪಡೆಯು ಆಪರೇಷನ್ ಊರ್ಜಾ ಸುರಕ್ಷಾ ಕೈಗೊಂಡಿರುವುದು.

ಇದನ್ನೂ ಓದಿ: ಅಬಕಾರಿ ಸುಂಕ ಕಡಿಮೆಗೊಂಡರೂ ಪೆಟ್ರೋಲ್, ಡೀಸಲ್ ಬೆಲೆಯಲ್ಲಿ ಆಗಲ್ಲ ಇಳಿಕೆ; ಏನು ಕಾರಣ?

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜವಿರುವ ಹಲವು ಹಡಗುಗಳಿವೆ. ಇವುಗಳ ಪೈಕಿ ಎಲ್​ಪಿಜಿ ಹೊತ್ತಿರುವ 22 ಹಡಗುಗಳನ್ನು ಆಪರೇಷನ್ ಊರ್ಜಾ ಸುರಕ್ಷಾ ಮೂಲಕ ರಕ್ಷಣೆ ಕೊಡಲು ಆಯ್ದುಕೊಳ್ಳಲಾಗಿದೆ. ನೌಕಾಪಡೆಯ ಐದು ಸಮರನೌಕೆಗಳು ಈ ಆಪರೇಷನ್​ನಲ್ಲಿ ಇರುತ್ತವೆ. ಮಲ್ಟಿರೋಲ್ ಫ್ರಿಗೇಟ್ಸ್, ಡೆಸ್ಟ್ರಾಯರ್​ಗಳು ಇದರಲ್ಲಿ ಇರುತ್ತವೆ. ರಾಡಾರ್, ಕ್ಷಿಪಣಿ, ಹೆಲಿಕಾಪ್ಟರ್ ಪ್ಲಾಟ್​ಫಾರ್ಮ್​ಗಳು, ಆ್ಯಂಟಿ ಡ್ರೋನ್ ರಕ್ಷಣೆ, ಎಲೆಕ್ಟ್ರಾನಿಕ್ ದಾಳಿ ರಕ್ಷಣೆ ಇತ್ಯಾದಿ ಪೂರ್ಣ ಮಿಲಿಟರಿ ಸಜ್ಜಿತ ಸಮರನೌಕೆಗಳಿವು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಆರ್​ಸಿಬಿಗೆ ಆರಂಭಿಕ ಆಘಾತ; ಮೊದಲ ಪಂದ್ಯದಲ್ಲಿ ಅಡಲ್ಲ ಸ್ಟಾರ್ ಪ್ಲೇಯರ್

Source link

ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ

ನವದೆಹಲಿ, ಮಾರ್ಚ್ 27: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕ ಹಾಗೂ ಇಸ್ರೇಲ್​ಗೆ ಭಾರತ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ. ಇಸ್ರೇಲ್ ಸರ್ಕಾರದ ಜೊತೆ ಮಾತನಾಡಿ ಶಾಂತಿ ಮಾತುಕತೆಗೆ ಕರೆ ನೀಡಿದ್ದ ಪ್ರಧಾನಿ ಮೋದಿ ಅತ್ತ ಇರಾನ್​ಗೂ ವೈದ್ಯಕೀಯ ನೆರವು ಕಳುಹಿಸಿಕೊಟ್ಟಿತ್ತು. ಮೊನ್ನೆಯಷ್ಟೇ ಫೋನ್ ಮಾಡಿದ್ದ ಅಮೆರಿಕದ ಅಧ್ಯಕ್ಷ ಟ್ರಂಪ್​ಗೂ ಈ ಬಿಕ್ಕಟ್ಟನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುವುದು ಉತ್ತಮ ಎಂಬ ಸಂದೇಶ ನೀಡಿದ್ದರು. ಇರಾನ್ ಮೇಲೆ ಇನ್ನೂ ಕತ್ತಿ ಮಸೆಯುತ್ತಲೇ ಇರುವ ಟ್ರಂಪ್ (Donald Trump) ಇದೀಗ ಇದ್ದಕ್ಕಿದ್ದಂತೆ ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದಾರೆ.

ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯ ಮೂಲಕ ಹಂಚಿಕೊಂಡ ಸಂದೇಶದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಭಾರತದೊಂದಿಗಿನ ನಮ್ಮ ಅದ್ಭುತ ಸಂಬಂಧವು ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳುತ್ತದೆ. ಪ್ರಧಾನಿ ಮೋದಿ ಮತ್ತು ನಾನು ಕೆಲಸಗಳನ್ನು ಮಾಡುವ ಇಬ್ಬರು ವ್ಯಕ್ತಿಗಳು. ಹೆಚ್ಚಿನವರ ವಿಷಯದಲ್ಲಿ ಈ ಕುರಿತು ಏನೂ ಹೇಳಲಾಗದು” ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್; ಇರಾನ್ ಮೇಲಿನ ಯುದ್ಧ, ಹಾರ್ಮುಜ್ ಜಲಸಂಧಿಯ ಬಗ್ಗೆ ಚರ್ಚೆ

ಮಾರ್ಚ್ 24ರಂದು ಟ್ರಂಪ್ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಸಂಘರ್ಷದ ಕುರಿತು ಚರ್ಚಿಸಿದ್ದರು. ಈ ಯುದ್ಧ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಇದು ಜಾಗತಿಕ ಇಂಧನ ಪೂರೈಕೆಗೆ ಗಮನಾರ್ಹ ಅಡಚಣೆಗಳನ್ನು ಉಂಟುಮಾಡಿದೆ. ಇರಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷವು ಭೌಗೋಳಿಕ ರಾಜಕೀಯ ಅಪಾಯಗಳನ್ನು ಹೆಚ್ಚಿಸುತ್ತಿರುವ ಸಮಯದಲ್ಲಿ ಹಾರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿಸುವುದು ಬಹಳ ಮುಖ್ಯ ಎಂದು ಅವರಿಬ್ಬರೂ ಚರ್ಚಿಸಿದ್ದರು.

ಇದನ್ನೂ ಓದಿ: ಮೊದಲು ಐದು, ಈಗ ಹತ್ತು ದಿನ, ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಗಡುವು ವಿಸ್ತರಿಸಿದ ಟ್ರಂಪ್

“ಟ್ರಂಪ್ ಅವರಿಂದ ಕರೆ ಸ್ವೀಕರಿಸಿದೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡೆವು. ಭಾರತವು ಸಾಧ್ಯವಾದಷ್ಟು ಬೇಗ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಬೆಂಬಲ ನೀಡುತ್ತದೆ. ಹಾರ್ಮುಜ್ ಜಲಸಂಧಿಯು ಮುಕ್ತ, ಸುರಕ್ಷಿತ ಮತ್ತು ಪ್ರವೇಶಿಸಬಹುದಾದ ಸ್ಥಳವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಇಡೀ ಜಗತ್ತಿಗೆ ಅತ್ಯಗತ್ಯ” ಎಂದು ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷರೊಂದಿಗಿನ ತಮ್ಮ ದೂರವಾಣಿ ಕರೆಯ ಹೇಳಿಕೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರು ಕಂಡೊಡನೆ ಖರೀದಿಸುವ ಮುನ್ನ ಹುಷಾರ್​!

ಮೈಸೂರು, ಮಾರ್ಚ್​ 27: ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರುಗಳ ಫೋಟೋ ನೋಡಿ ಮರುಳಾಗಬೇಡಿ. ಏಕೆಂದರೆ ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆ ಅಂತ ನಂಬಿಸಿ ಕೋಟ್ಯಂತರ ರೂ ವಂಚಿಸುತ್ತಿದ್ದ (Luxury Car Scam) ದೊಡ್ಡ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಅಸಲಿ ಮಾಲೀಕರಿಗೂ ಇಲ್ಲ, ಇತ್ತ ಖರೀದಿ ಮಾಡುವವರಿಗೂ ಇಲ್ಲ ಎನ್ನುವ ರೀತಿ ವಂಚಿಸುತ್ತಿದ್ದರು. ಈ ಖದೀಮರ ಮೋಸದ ಆಟ ಹೇಗಿತ್ತು ಅಂತಾ ಕೇಳಿದರೆ ಶಾಕ್​ ಆಗುವುದು ಗ್ಯಾರಂಟಿ.

ಅಂತಾರಾಜ್ಯ ವಂಚಕರ ಜಾಲ ಪತ್ತೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ಹೈಟೆಕ್ ವಂಚಕರದ್ದೇ ಸದ್ದು. ಫೇಸ್‌ಬುಕ್ ಎಂಬ ಮಾಯಾಲೋಕವನ್ನೇ ಬಂಡವಾಳ ಮಾಡಿಕೊಂಡಿದ್ದ ಖದೀಮರು, ಐಷಾರಾಮಿ ಕಾರುಗಳ ಖರೀದಿ ಮತ್ತು ಮಾರಾಟದ ಹೆಸರಿನಲ್ಲಿ ಭಾರೀ ದೋಖಾ ಮಾಡುತ್ತಿದ್ದರು. ಮೈಸೂರು ಮೂಲದ ಅಭಿಷೇಕ್ ಎಂಬುವವರು ನೀಡಿದ ದೂರಿನ ಬೆನ್ನತ್ತಿದ ಮೈಸೂರು ಜಿಲ್ಲಾ ಪೊಲೀಸರು, ಈಗ ಅಂತಾರಾಜ್ಯ ವಂಚಕರ ಜಾಲವನ್ನೇ ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ: ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!

ಪ್ರಕರಣದ ಪ್ರಮುಖ ಆರೋಪಿಗಳಾದ  ರುಮಾನ್ ಷರೀಫ್, ​ಮುಜಾಹಿದ್ ಫಾಷಾ, ​ಷಾಹಬುದ್ದಿನ್‌ರನ್ನು ಬಂಧಿಸಲಾಗಿದೆ. ಈ ಮೂವರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು, ಇವರಿಂದ ಬರೋಬ್ಬರಿ ಒಂದು ಕೋಟಿ, ಹತ್ತು ಲಕ್ಷ ರೂ ಮೌಲ್ಯದ 8 ಐಶಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಗ್ಯಾಂಗ್ ಬಳಸುತ್ತಿದ್ದ ಐಡಿಯಾ ಕೇಳಿದರೆ ನೀವು ಶಾಕ್ ಆಗುತ್ತೀರಾ.

ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿ ವಂಚನೆ

​ಹಳೇ ಐಷಾರಾಮಿ ಕಾರುಗಳನ್ನು ಉತ್ತಮ ಬೆಲೆಗೆ ಖರೀದಿಸುವುದಾಗಿ ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡುತ್ತಿದ್ದರು. ​ನಂಬಿದ ಮಾಲೀಕರಿಗೆ ಅಲ್ಪ ಸ್ವಲ್ಪ ಮುಂಗಡ ಹಣ ನೀಡಿ ಕಾರನ್ನು ಪಡೆಯುತ್ತಿದ್ದರು. ​ಅದೇ ಕಾರನ್ನು ಮತ್ತೆ ಯಾರಿಗೋ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ​ಹೊಸ ಮಾಲೀಕರು ಕಾರಿನ ಅಸಲಿ ದಾಖಲಾತಿ ಕೇಳಿದಾಗ ರಾತ್ರೋರಾತ್ರಿ ನಾಪತ್ತೆಯಾಗುತ್ತಿದ್ದರು.

ಇತ್ತ ಕಾರಿನ ಅಸಲಿ ಮಾಲೀಕರಿಗೂ ಹಣ ಸಿಗದೆ, ಅತ್ತ ಕಾರು ಖರೀದಿಸಿದವರಿಗೂ ದಾಖಲಾತಿ ಸಿಗದೆ ಇಬ್ಬರಿಗೂ ನಾಮ ಹಾಕುತ್ತಿದ್ದರು ಈ ಖದೀಮರು. ಮೈಸೂರು ಜಿಲ್ಲಾ ಪೊಲೀಸ್, ಎಸ್​ಪಿ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆ ಮಾಡಲಾಗಿದ್ದು, ಈ ಜಾಲದ ಹಿಂದೆ ಇನ್ನೂ ಯಾರೆಲ್ಲಾ ಇದ್ದಾರೆ ಅನ್ನೋದನ್ನ ಪತ್ತೆ ಹಚ್ಚಲು ಮುಂದಾಗಿದೆ. ಸದ್ಯ ಎಂಟು ಕಾರುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಕಾರಿನ ಮೂಲ ಮಾಲೀಕರ ಪತ್ತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹಣದ ಮಳೆ ಸುರಿಸ್ತೀವಿ ಅಂದೋರು ಮಾಡಿದ್ರು ಚೀಟಿಂಗ್; ಲಕ್ಷ ಲಕ್ಷ ಪಂಗನಾಮ

ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಕಾಣುವ ಆಕರ್ಷಕ ಡೀಲ್‌ಗಳ ಹಿಂದೆ ಇಂತಹ ದೊಡ್ಡ ವಂಚನೆ ಜಾಲ ಇರುತ್ತೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿ. ಇನ್ನಾದರೂ ಸಾರ್ವಜನಿಕರು ಆನ್‌ಲೈನ್ ವ್ಯವಹಾರ ಮಾಡುವಾಗ ಎಚ್ಚರದಿಂದಿರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ಚಿತ್ರಕ್ಕೆ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಪ್ರಭಾಸ್ ಅವರ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಹೈಪ್ ಹೆಚ್ಚಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಆ ಸಿನಿಮಾ ಮಕಾಡೆ ಮಲಗಿತು. ‘ದಿ ರಾಜಾ ಸಾಬ್’ ಸಿನಿಮಾದ ಸೋಲನ್ನು ಒಪ್ಪಿಕೊಂಡಿರುವ ನಿರ್ದೇಶಕ ಮಾರುತಿ (Director Maruthi) ಈಗ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

2026ರ ಆರಂಭದಲ್ಲಿ ಬಿಡುಗಡೆಯಾದ ‘ದಿ ರಾಜಾ ಸಾಬ್’ ಹಾರರ್ ಕಾಮಿಡಿ ಸಿನಿಮಾ ಆದ್ದರಿಂದ ಭಾರಿ ಕುತೂಹಲ ಮೂಡಿಸಿತ್ತು. ಮೊದಲ ದಿನವೇ ವಿಶ್ವದಾದ್ಯಂತ 100 ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆದರೂ, ಕಳಪೆ ವಿಮರ್ಶೆ ಮತ್ತು ಪ್ರೇಕ್ಷಕರ ನಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ಚಿತ್ರದ ಕಲೆಕ್ಷನ್ ಕುಸಿಯಿತು. ಒಟ್ಟಾರೆ 200 ಕೋಟಿ ರೂಪಾಯಿ ಗಳಿಸಿದರೂ ಸಹ, ವಿತರಕರಿಗೆ ಸುಮಾರು 160-170 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಈ ಎಲ್ಲ ಬೆಳವಣಿಗೆಗಳ ನಂತರ ಸೋಶಿಯಲ್ ಮೀಡಿಯಾದಿಂದ ದೂರವಿದ್ದ ಮಾರುತಿ, ಶ್ರೀರಾಮನವಮಿಯ ಶುಭ ಸಂದರ್ಭದಲ್ಲಿ ಅಭಿಮಾನಿಗಳಿಗೆ ಅಪ್‌ಡೇಟ್ ನೀಡಿದ್ದಾರೆ. ತಮ್ಮ ಮನೆಯ ದೇವರ ಕೋಣೆಯಲ್ಲಿ ಪೂಜೆ ಸಲ್ಲಿಸುತ್ತಿರುವ ಫೋಟೋ ಹಂಚಿಕೊಂಡಿರುವ ಅವರು, ದೇವರ ಮುಂದಿರುವ ಸ್ಕ್ರಿಪ್ಟ್ ಪುಸ್ತಕದ ಮೇಲೆ ಹೂವುಗಳನ್ನು ಇರಿಸಿ ಹೊಸ ಚಿತ್ರದ ಸುಳಿವು ನೀಡಿದ್ದಾರೆ.

‘ಪ್ರತಿಯೊಂದು ಪ್ರಯಾಣವೂ ಒಂದು ಕಲಿಕೆಯ ಅನುಭವ. ಈ ಪವಿತ್ರ ಶ್ರೀರಾಮನವಮಿಯ ಸಂದರ್ಭದಲ್ಲಿ, ದೇವರ ಆಶೀರ್ವಾದದೊಂದಿಗೆ ನನ್ನ ಮುಂದಿನ ಚಿತ್ರದ ಸ್ಕ್ರಿಪ್ಟ್‌ಗೆ ಅಂತಿಮ ಸ್ಪರ್ಶ ನೀಡುತ್ತಿರುವುದಕ್ಕೆ ನನಗೆ ಹೆಮ್ಮೆಯಿದೆ’ ಎಂದು ಮಾರುತಿ ಅವರು ಪೋಸ್ಟ್ ಮಾಡಿದ್ದಾರೆ. ಸದ್ಯಕ್ಕೆ ಈ ಚಿತ್ರದಲ್ಲಿ ಯಾರು ನಟಿಸಲಿದ್ದಾರೆ ಅಥವಾ ಇದು ಯಾವ ರೀತಿಯ ಕಥೆ ಎಂಬ ಬಗ್ಗೆ ಮಾರುತಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್

ಕೇವಲ ಹೊಸ ಸಿನಿಮಾ ಮಾತ್ರವಲ್ಲದೆ, ‘ದಿ ರಾಜಾ ಸಾಬ್’ ಚಿತ್ರಕ್ಕೆ ಸಿಕ್ಕ ವಿಮರ್ಶೆಗಳ ಬಗ್ಗೆಯೂ ಮಾರುತಿ ಮೃದುವಾಗಿ ಪ್ರತಿಕ್ರಿಯಿಸಿದ್ದಾರೆ. ‘ನನ್ನನ್ನು ಸದಾ ಬೆಂಬಲಿಸುವ ಮತ್ತು ಅಮೂಲ್ಯವಾದ ಪ್ರತಿಕ್ರಿಯೆಗಳನ್ನು ನೀಡಿದ ಪ್ರೇಕ್ಷಕರಿಗೆ, ಮಾಧ್ಯಮ ಮಿತ್ರರಿಗೆ ಧನ್ಯವಾದಗಳು. ನಿಮ್ಮ ಪ್ರತಿಯೊಂದು ಟೀಕೆಯನ್ನು ನಾನು ಗೌರವಿಸುತ್ತೇನೆ. ಮುಂದಿನ ದಿನಗಳಲ್ಲಿ ನಿಮ್ಮ ಮೆಚ್ಚುಗೆ ಗಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಧುರಂಧರ್’ ಸಿನಿಮಾದಲ್ಲಿನ ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಗ್ಗೆ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಪಾಕಿಸ್ತಾನದಲ್ಲಿ ಈ ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಪಾಕ್ ಜನರು ಬೇರೆ ದೇಶಗಳಲ್ಲಿ ಹಾಗೂ ಪೈರಸಿ ಮೂಲಕ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ‘ಧುರಂಧರ್’ (Dhurandhar) ಹೇಗಿದೆ ಎಂದು ಪಾಕ್ ಪ್ರೇಕ್ಷಕರು ವಿಮರ್ಶೆ ನೀಡುತ್ತಿದ್ದಾರೆ. ಅಂಥ ವಿಡಿಯೋಗಳು ಸಖತ್ ಸದ್ದು ಮಾಡುತ್ತಿವೆ. ಈ ಸಿನಿಮಾದಲ್ಲಿ ಯಾವೆಲ್ಲ ತಪ್ಪುಗಳು ಇವೆ ಎಂಬುದರ ಬಗ್ಗೆ ಪಾಕ್ (Pakistan) ಪ್ರಜೆಗಳಿಬ್ಬರು ಮಾತನಾಡಿದ ವಿಡಿಯೋ ಈಗ ವೈರಲ್ ಆಗಿದೆ.

‘ಧುರಂಧರ್ ಒಂದು ಓವರ್​ ರೇಟೆಡ್ ಸಿನಿಮಾ. ಈ ಚಿತ್ರದಲ್ಲಿ ಒಂದು ಡೈಲಾಗ್ ಇದೆ. ಯಾರು ಲಿಯಾರಿ ನಿಯಂತ್ರಣ ಮಾಡುತ್ತಾರೋ ಅವರು ಕರಾಚಿ ನಿಯಂತ್ರಿಸುತ್ತಾರೆ. ಯಾರು ಕರಾಚಿ ನಿಯಂತ್ರಿಸುತ್ತಾರೋ ಅವರು ಪಾಕಿಸ್ತಾನವನ್ನೇ ನಿಯಂತ್ರಿಸುತ್ತಾರೆ. ನಮಗೆ ಈ ಡೈಲಾಗ್ ಸಖತ್ ಫನ್ನಿ ಎನಿಸಿತು. ಕರಾಚಿಯು ಮೂಲ ನಿವಾಸಿಗಳ ನಗರ ಅಲ್ಲ. ಅದು ಅನಾಥರ ನಗರ’ ಎಂದು ಪ್ರೇಕ್ಷಕರು ಹೇಳಿದ್ದಾರೆ.

‘ನಮ್ಮ ಕುಟುಂಬದ ಮೂಲ ಇರುವುದು ಲಿಯಾರಿಯಲ್ಲಿ. ಅಲ್ಲಿ ಗ್ಯಾಂಗ್ ವಾರ್ ಇದ್ದಿದ್ದು ಮತ್ತು ಇರುವುದು ನಿಜ. ಆದರೆ ಅದು ನೆರೆಹೊರೆಯವರ ಸಣ್ಣ ಗ್ಯಾಂಗ್ ವಾರ್ ಅಷ್ಟೇ. ಮಿನಿ ಸ್ಕರ್ಟ್ ಧರಿಸಿ ಲಿಯಾರಿಯಲ್ಲಿ ಸಿನಿಮಾದ ಹೀರೋಯಿನ್ ಓಡಾಡುತ್ತಾಳೆ. ಅದು ಲಿಯಾರಿಯಲ್ಲಿ ಸಾಧ್ಯವೇ ಇಲ್ಲ. ಹಾಗೆ ಒಬ್ಬಳೇ ಮಹಿಳೆ ಮಿನಿ ಸ್ಕರ್ಟ್ ಧರಿಸಿ ಸುತ್ತಾಡೋಕೆ ಆಗಲ್ಲ’ ಎಂದ ಕೂಡ ಅವರು ಹೇಳಿದ್ದಾರೆ.

‘ಒಂದು ಹಾಡಿನಲ್ಲಿ ರೇವ್ ಪಾರ್ಟಿ ನಡೆಯೋದು ತೋರಿಸಿದ್ದಾರೆ. ಅಲ್ಲಿ ಸೂಚನಾ ಫಲಕಗಳು ಉರ್ದು ಭಾಷೆಯಲ್ಲಿ ಕಾಣಿಸಿದೆ. ಆದರೆ ನಿಜವಾಗಿಯೂ ಇಂಗ್ಲಿಷ್ ಸೂಚನಾ ಫಲಕಗಳು ಇರುತ್ತವೆ’ ಎಂದು ಈ ಪ್ರೇಕ್ಷಕರಿಬ್ಬರು ತಕರಾರು ತೆಗೆದಿದ್ದಾರೆ. ಅಲ್ಲದೇ, ರಣವೀರ್ ಸಿಂಗ್ ಧರಿಸಿ ಕಾಸ್ಟ್ಯೂಮ್ ಕೂಡ ಸೂಕ್ತವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಮಗೆ ರಸ್ತೆ ಇಲ್ಲ, 500 ಕೋಟಿ ರೂ. ಕೊಡಿ: ‘ಧುರಂಧರ್ 2’ ತಂಡಕ್ಕೆ ಪಾಕಿಸ್ತಾನಿಗಳ ಮನವಿ

‘ಪಾಕಿಸ್ತಾನದ ಮಿನಿಸ್ಟರ್ ಮಗಳ ಜೊತೆ ಹೀರೋ ಮದುವೆ ಆಗುತ್ತಾನೆ. ಪಾಕಿಸ್ತಾನದಲ್ಲಿ ಹಾಗೆಲ್ಲ ಆಗಲು ಸಾಧ್ಯವಿಲ್ಲ. ದೊಡ್ಡ ಬಂಗಲೆಯಲ್ಲಿ ಇರುವ ಆಕೆ ಮದುವೆ ಬಳಿಕ ಚಿಕ್ಕ ಮನೆಗೆ ಹೋಗೋಕೆ ಆಗಲ್ಲ’ ಎಂದು ಪ್ರೇಕ್ಷಕರಿಬ್ಬರು ಚರ್ಚೆ ಮಾಡಿದ್ದಾರೆ. ಒಟ್ಟಿನಲ್ಲಿ ಪಾಕಿಸ್ತಾನದ ಪ್ರೇಕ್ಷಕರಿಗೆ ‘ಧುರಂಧರ್’ ಸಿನಿಮಾದಲ್ಲಿ ಇಂಥ ಹಲವು ತಪ್ಪುಗಳು ಕಾಣಿಸಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತನ್ನ ಗೆಳೆಯನ ಜೊತೆ ಸಂಬಂಧದ ಅನುಮಾನ; ಮುಂಬೈ ವಿದ್ಯಾರ್ಥಿನಿಯನ್ನು ಎಳೆದು, ಕೂದಲು ಕತ್ತರಿಸಿದ ಯುವತಿ

ಮುಂಬೈ, ಮಾರ್ಚ್ 27: ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಮತ್ತೊಬ್ಬಳು ಯುವತಿ ಆಕೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು, ಆಕೆಯ ಕೂದಲು ಕತ್ತರಿಸಿದ್ದಾಳೆ. ಮುಂಬೈನ (Mumbai News) ಉಪನಗರ ಅಪಾರ್ಟ್‌ಮೆಂಟ್‌ನಲ್ಲಿ ನಿನ್ನೆ ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಬಳಿಕ ಹಿಂಸಾಚಾರಕ್ಕೆ ಕಾರಣವಾಯಿತು. ಇದು ಕಾಲೇಜು ವಿದ್ಯಾರ್ಥಿನಿಯನ್ನು ಆಘಾತಕ್ಕೀಡು ಮಾಡಿದೆ.

ನಿನ್ನೆ 20 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಿಂದ ಹೊರಗೆಳೆದು ಆಕೆಯ ಕೂದಲು ಕತ್ತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಈ ವಿಡಿಯೋವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿದ್ದಾರೆ. ಸಂತ್ರಸ್ತೆಯ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: 5 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪೊಲೀಸರು 20ರಿಂದ 21 ವರ್ಷದೊಳಗಿನ ಮೂವರು ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಈ ಘಟನೆ ಸಂತ್ರಸ್ತೆ ತನ್ನ ಮನೆಯ ಸಹಾಯಕಿಯೊಂದಿಗೆ ಮನೆಯಲ್ಲಿದ್ದಾಗ ನಡೆದಿದೆ. ಆಕೆಯ ಪೋಷಕರು ಕುಟುಂಬದ ಕಾರ್ಯಕ್ರಮಕ್ಕೆ ಹೋಗಿದ್ದರು. ಆಗ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ. ಸಂತ್ರಸ್ತಳ ದೂರಿನ ಮೇರೆಗೆ ಮೂವರು ಹುಡುಗಿಯರ ವಿರುದ್ಧ ತನಿಖೆ ಆರಂಭಿಸಲಾಗಿದೆ ಎಂದು ವರ್ಸೋವಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ಆಕೆಯ ಫ್ಲಾಟ್‌ನಿಂದ ಹೊರಗೆ ಎಳೆದುಕೊಂಡು ಹೋಗಲಾಗಿದೆ. ಆಕೆ ಸಹಾಯಕ್ಕಾಗಿ ಕೂಗಿದಾಗ ಆಕೆಗೆ ಬೆದರಿಕೆ ಹಾಕಲಾಗಿದೆ. ಹಲ್ಲೆ ನಡೆಸಿದ ಯುವತಿಯ ಬಾಯ್​ಫ್ರೆಂಡ್ ಜೊತೆ ಸಂತ್ರಸ್ತೆ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸ್ ಹೇಳಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಈ ಕೃತ್ಯ ನಡೆದಿದೆ.

ಇದನ್ನೂ ಓದಿ: ಮದುವೆಯಾದ ಪುರುಷ ಲಿವ್-ಇನ್ ಸಂಬಂಧ ಇಟ್ಟುಕೊಳ್ಳುವುದು ಅಪರಾಧವಲ್ಲ; ಹೈಕೋರ್ಟ್ ತೀರ್ಪು

ಹಲ್ಲೆಗೂ ಸುಮಾರು 18 ದಿನಗಳ ಮೊದಲು ಆರೋಪಿ ಯುವತಿ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಆಕೆಯ ಫೋನ್ ಪರಿಶೀಲಿಸಿದ್ದಳು. ಆದರೆ ತನ್ನ ಬಾಯ್​ಫ್ರೆಂಡ್ ಜೊತೆಗಿನ ಆಕೆಯ ಸಂಬಂಧದ ಬಗ್ಗೆ ಏನೂ ಸಾಕ್ಷಿ ಸಿಗಲಿಲ್ಲ. ಕೊನೆಗೆ ಅವಳು ಇತರ ಇಬ್ಬರು ಯುವತಿಯರೊಂದಿಗೆ ರಾತ್ರಿ ಆಕೆಯ ಮನೆಗೆ ಬಂದು ಹಲ್ಲೆ ನಡೆಸಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version