Headlines

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..! – Kannada News | IPL 2026 Playoffs: Each of the four qualifying teams have won the IPL only once

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 10 ತಂಡಗಳಲ್ಲಿ 4 ಟೀಮ್​ಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅದರಂತೆ ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ತಂಡಗಳು ಕಣಕ್ಕಿಳಿಯಲಿವೆ. ವಿಶೇಷ ಎಂದರೆ ಈ ಬಾರಿಯ ಪ್ಲೇಆಫ್ ಹಂತವು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅತ್ಯಂತ ಅಪರೂಪದ ಹಾಗೂ ಕುತೂಹಲಕಾರಿ ಮುಖಾಮುಖಿಗೆ ಸಾಕ್ಷಿಯಾಗಲಿದೆ. ಅಂದರೆ ಟೂರ್ನಿಯ ಇತಿಹಾಸದಲ್ಲೇ…

Read More

ವಾಯುಸೇನೆಗೆ ಭರ್ಜರಿ ಬಲ; ಫ್ರಾನ್ಸ್​ನಿಂದ ಇನ್ನೂ 114 ರಫೇಲ್ ಜೆಟ್ ಖರೀದಿಗೆ ಸಜ್ಜು; 90 ವಿಮಾನಗಳು ಭಾರತದಲ್ಲೇ ಜೋಡಣೆ – Kannada News | Massive Indian Air Force Boost: India Prepares LoR for 114 Rafale Fighter Jets, Made in India Focus

ರಫೇಲ್ ಯುದ್ಧ ವಿಮಾನImage Credit source: Indian Air Force ನವದೆಹಲಿ, ಮೇ 25: ಭಾರತೀಯ ವಾಯುಸೇನೆಯನ್ನು (IAF) ಮತ್ತಷ್ಟು ಬಲಪಡಿಸಲು ಮತ್ತು ದೇಶೀಯ ರಕ್ಷಣಾ ಉತ್ಪಾದನೆಗೆ ಭಾರಿ ಉತ್ತೇಜನ ನೀಡಲು ಭಾರತ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಫ್ರಾನ್ಸ್‌ನಿಂದ ಹೆಚ್ಚುವರಿ 114 ರಫೇಲ್ ಯುದ್ಧ ವಿಮಾನಗಳನ್ನು (Rafale fighter aircraft) ಖರೀದಿಸಲು ಭಾರತವು ಔಪಚಾರಿಕ ವಿನಂತಿ ಪತ್ರವನ್ನು (Letter of Request – LoR) ಸಿದ್ಧಪಡಿಸಿದ್ದು, ಮುಂದಿನ ಕೆಲವು ವಾರಗಳಲ್ಲಿ ಇದನ್ನು ಫ್ರಾನ್ಸ್‌ಗೆ ಕಳುಹಿಸಲಾಗುವುದು. ಈ ಬೃಹತ್…

Read More

Video: ಮನೆ ಬಾಗಿಲಿಗೆ ಬರುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ಕೊಟ್ಟು ಉಪಚರಿಸುವ ಮಹಿಳೆ – Kannada News | Bengaluru: Bengaluru woman gives tea and biscuits to civic workers cleaning the city.

ಬೆಂಗಳೂರು, ಮೇ 25: ಸ್ವಾರ್ಥಿಗಳೇ (selfish) ತುಂಬಿರುವ ಜನರ ನಡುವೆ ಬೇರೆಯವರಿಗೆ ಸಹಾಯ ಮಾಡುವ ಗುಣ, ಒಳ್ಳೆಯ ಮನಸ್ಸು ಕಾಣಸಿಗುವುದು ಕಡಿಮೆಯೇ. ಇದೆಲ್ಲದರ ನಡುವೆ ಒಳ್ಳೆಯ ಮನಸ್ಸಿನ ವ್ಯಕ್ತಿಗಳನ್ನು ಕಂಡಾಗ ಖುಷಿಯಾಗುತ್ತದೆ. ತಾವು ಮಾಡುವ ಸಣ್ಣ ಪುಟ್ಟ ಕೆಲಸಗಳಿಂದಲೇ ಹೀರೋಗಳಾಗುತ್ತಾರೆ. ಇದಕ್ಕೆ ಉದಾಹರಣೆಯಂತಿದ್ದಾರೆ ಬೆಂಗಳೂರಿನ (Bengaluru) ಈ ಮಹಿಳೆ. ನಗರವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ನೀಡಿ ಉಪಚರಿಸುತ್ತಿದ್ದಾರೆ ಈ ಮಹಿಳೆ. ಅವರ ಈ ಒಳ್ಳೆಯ ಕೆಲಸಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ. ಜಗದೀಶ್ ನಡನಳ್ಳಿ (Jagadish…

Read More

ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು ಕ್ಯಾಬ್ ಚಾಲಕನ ಕಿಡ್ನ್ಯಾಪ್, ದರೋಡೆ! – Kannada News | Bengaluru: Gang in Mercedes Benz Kidnaps and Robs Cab Driver Over Women Dispute

ಮರ್ಸಿಡೀಸ್ ಬೆಂಜ್ ಕಾರಿನಲ್ಲಿ ಬಂದು ಕ್ಯಾಬ್ ಚಾಲಕನ ಕಿಡ್ನ್ಯಾಪ್, ದರೋಡೆ! Image Credit source: nationworldnews.com ಬೆಂಗಳೂರು, ಮೇ 25: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್‌ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದ್ದಲ್ಲದೆ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಈ…

Read More

Video: ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ – Kannada News | Dog Runs Off With Bag Allegedly Containing Cash in Bijnor

ಬಿಜ್ನೋರ್, ಮೇ 25: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಸಾರ್ವಜನಿಕರನ್ನು ಕಂಗಾಲು ಮಾಡುವಂತಹ ವಿಲಕ್ಷಣ ಮತ್ತು ನಂಬಲಾರದ ಘಟನೆಯೊಂದು ನಡೆದಿದೆ. ಇಲ್ಲಿನ ಬೀದಿನಾಯಿಯೊಂದು ಸಾರ್ವಜನಿಕರ ಕಣ್ಣೆದುರೇ ಬರೋಬ್ಬರಿ 1 ಲಕ್ಷ ರೂಪಾಯಿ ನಗದು ಹಣವಿದ್ದ ಬ್ಯಾಗ್‌ ಅನ್ನು ಹೊತ್ತೊಯ್ದಿದೆ. ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ಮತ್ತು ಅವುಗಳ ಕಡಿತದಿಂದ ಮನುಷ್ಯರು ಹೇಗೋ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಿದ್ದಾರೆ. ಆದರೆ, ಇದೀಗ ನಾಯಿಗಳನ್ನು ಮುಂದಿಟ್ಟುಕೊಂಡು ಹಗಲು ದರೋಡೆ ಮಾಡುವ ಕೆಲವು ವಿಕೃತ ಮನಸ್ಸಿನ ಗ್ಯಾಂಗ್‌ಗಳು ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಖದೀಮರು…

Read More

ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ ಎಂ. ದೀಪನ್ – Kannada News | Bhatkal Murinkatte Row: Police Arrests Six, Files Four Cases Amidst Misinformation

ಕಾರವಾರ, ಮೇ 25: ಭಟ್ಕಳದಲ್ಲಿನ ಮೂರಿನ್ ಕಟ್ಟೆ ಮರುನಿರ್ಮಾಣದ ಕುರಿತ ವಿವಾದದಲ್ಲಿ ಆರು ಜನರನ್ನು ಬಂಧಿಸಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಾರವಾರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪನ್ ಮಾಹಿತಿ ನೀಡಿದ್ದಾರೆ. ಹೆದ್ದಾರಿ ವಿಸ್ತರಣೆ ಕಾರಣದಿಂದ ಮೂಲ ಮೂರಿನ್ ಕಟ್ಟೆಯನ್ನು ಸ್ಥಳಾಂತರಿಸಬೇಕಾಗಿತ್ತು, ರಸ್ತೆಯ ಪಕ್ಕದಲ್ಲಿ ಮರುನಿರ್ಮಾಣಕ್ಕೆ ಜಾಗ ನೀಡಲಾಗಿತ್ತು. ಆದರೆ, ಈ ನಿರ್ಮಾಣದ ವಿಡಿಯೋ ವೈರಲ್ ಆಗಿ ತಪ್ಪು ಮಾಹಿತಿ ಹರಡಿದ ಪರಿಣಾಮ ಯುವಕರು ಜಮಾಯಿಸಿ ಗೊಂದಲ ಸೃಷ್ಟಿಸಿದ್ದಾರೆ. ಮೂಲ ಮೂರಿನ್ ಕಟ್ಟೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಿಲ್ಲ,…

Read More

ಬದಲಾಗಲಿದ್ದಾರೆ ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಜಡ್ಜ್; ಕಾರಣ ಇಲ್ಲಿದೆ – Kannada News | Renukaswamy Murder Case: Darshan’s Case Trail Court and Judge Changed

ದರ್ಶನ್-ರೇಣುಕಾಸ್ವಾಮಿ Image Credit source: Darshan Instagram ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ಗೆ (Darshan) ಸದ್ಯಕ್ಕೆ ಜಾಮೀನು ಸೀಗೋದಿಲ್ಲ ಎಂಬುದು ಖಾತ್ರಿಯಾಗಿದೆ. ಮುಂದಿನ ವರ್ಷ ಮೇ ಒಳಗೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳದಿದ್ದರೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿದೆ. ಈ ಬೆನ್ನಲ್ಲೇ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಕೋರ್ಟ್ ಮತ್ತು ಜಡ್ಜ್ ಬದಲಾಗಲಿದ್ದಾರೆ. ಕೆಲ ಕೋರ್ಟ್​ಗಳ ಪೊಲೀಸ್ ಠಾಣೆ ವ್ಯಾಪ್ತಿ ಮರು ನಿಗದಿ ಆಗಿದೆ, ಕಾಮಾಕ್ಷಿಪಾಳ್ಯ…

Read More

PM Modi 3.0 2nd Anniversary: ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ! ಪ್ರಧಾನಿ ಮೋದಿ ಮನವಿ

ದೆಹಲಿ, ಮೇ.25: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಲ್ಲಿ ಅತ್ಯಂತ ಮಹತ್ವದ ಅಪೀಲು ಮಾಡಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಗಿಂತ ಸ್ವದೇಶಿ ಪ್ರವಾಸೋದ್ಯಮಕ್ಕೆ (Domestic Tourism) ಮೊದಲ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ವಿಡಿಯೋವೊಂದನ್ನು ಬಿಜೆಪಿ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು…

Read More

Video: ಪೋಷಕರೆದುರೇ ಜಿಪ್ ಲೈನ್ ರೈಡ್ ವೇಳೆ ಬಿದ್ದು ಪ್ರಾಣಬಿಟ್ಟ ಬಾಲಕ – Kannada News | Teen Dies After Zipline Accident in Agra, Incident Caught on Video

ಆಗ್ರಾ, ಮೇ 25: ಮನರಂಜನೆ ಮತ್ತು ಸಾಹಸದ ಆಟ(Game)ವೊಂದು ಹದಿನೈದು ವರ್ಷದ ಬಾಲಕನ ಪಾಲಿಗೆ ಯಮಪಾಶವಾದ ಅತ್ಯಂತ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ತಾಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ‘ಆಗ್ರಾ ಚೌಪಟ್ಟಿ’ಯಲ್ಲಿ ಜಿಪ್‌ಲೈನಿಂಗ್ ಸವಾರಿಯ ವೇಳೆ ಬಾಲಕನೊಬ್ಬ ಎತ್ತರದಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ಹೃದಯವಿದ್ರಾವಕ ಘಟನೆಯ ಲೈವ್ ವೀಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ನಡೆದಿದ್ದೇನು? ವರದಿಗಳ ಪ್ರಕಾರ, 15 ವರ್ಷದ ಹದಿಹರೆಯದ…

Read More

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು – Kannada News | Uttara Kannada Drowning: Heartbreaking Stories Emerge from Bhatkal Tragedy

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗರೆ ಬಳಿ ಸಂಭವಿಸಿದ ಕಪ್ಪೆಚಿಪ್ಪು ಸಂಗ್ರಹ ದುರಂತದಲ್ಲಿ ಒಟ್ಟು 11 ಮಂದಿ ಜಲಸಮಾಧಿಯಾಗಿದ್ದಾರೆ. ಮೃತಪಟ್ಟ 11 ಮಂದಿಯ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಇಂದು (ಮೇ 24) ನೆರವೇರಿಸಲಾಯಿತು. ನಿನ್ನೆ ಮೂವರ ಅಂತ್ಯಕ್ರಿಯೆಗಳನ್ನು ನಡೆಸಲಾಗಿತ್ತು. ಕಪ್ಪೆಚಿಪ್ಪು ಹೆಕ್ಕಲು ತೆರಳಿದ್ದವರಲ್ಲಿ ಮಹಾದೇವ್ ನಾಯಕ್ ಮತ್ತು ಲಕ್ಷ್ಮಿ ನಾಯಕ್ ದಂಪತಿ ಕೂಡ ಸೇರಿದ್ದರು. ಇವರ ಅಕಾಲಿಕ ನಿಧನದಿಂದ ಮಕ್ಕಳಾದ ದರ್ಶನ್ ಮತ್ತು…

Read More