ಕೊನೆಗೂ ದಾವಣಗೆರೆ ಬಂಡಾಯ ಶಮನ: ಅಧಿಕೃತವಾಗಿ ತಮ್ಮ ನಿಲುವು ಘೋಷಿಸಿದ ಪೈಲ್ವಾನ್
ಬೆಂಗಳೂರು/ದಾವಣಗೆರೆ, ಮಾರ್ಚ್ 27): ದಾವಣಗೆರೆ ಉಪ ಚುನಾವಣೆಯಲ್ಲಿ (Davanagere South By Election) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಹಿರಿಯ ನಾಯಕರ ಸಂಧಾನದ ಬಳಿಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಸಕ್ಸಸ್ ಆಗಿದ್ದು, ಯಾವುದೇ ಷರತ್ತುಗಳಿಲ್ಲದೆ ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಪೈಲ್ವಾನ್ ಘೋಷಿಸಿದ್ದಾರೆ. ಸಾಧಿಕ್ ಪೈಲ್ವಾನ್ ಅವರು ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹಮ್ಮದ್ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿ ಚರ್ಚಿಸಿದ್ದು, ಬಳಿಕ…