ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆಗಳೇನು? – Kannada News | CM DK Shivakumar gives Some suggestions about guarantee schemes, here Is Meeting Details
ಬೆಂಗಳೂರು, (ಜೂನ್ 19): ವಿಧಾನಸೌಧದಲ್ಲಿಂದು (ಜೂನ್ 19) ನಡೆದ ಗ್ಯಾರಂಟಿ ಯೋಜನೆಗಳ (guarantee schemes) ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮರಣ ಹೊಂದಿದ ಫಲಾನುಭವಿಗಳ ವಿವರಗಳು ಸಕಾಲದಲ್ಲಿ…