SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ
ಬೆಂಗಳೂರು, ಮಾರ್ಚ್ 27: ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿದೆ ಎಚ್ಚರಿಕೆ ನೀಡಲಾಗಿದೆ….