Headlines

SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

ಬೆಂಗಳೂರು, ಮಾರ್ಚ್ 27: ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್​​ಎಸ್​ಎಲ್​ಸಿ (SSLC) ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್​​ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿದೆ ಎಚ್ಚರಿಕೆ ನೀಡಲಾಗಿದೆ….

Read More

ಮದುವೆಯಾದ ಪುರುಷ ಲಿವ್-ಇನ್ ಸಂಬಂಧ ಇಟ್ಟುಕೊಳ್ಳುವುದು ಅಪರಾಧವಲ್ಲ; ಹೈಕೋರ್ಟ್ ತೀರ್ಪು

ಅಲಹಾಬಾದ್, ಮಾರ್ಚ್ 27: ವಿವಾಹಿತ ಪುರುಷ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ (Allahabad High Court) ಹೇಳಿದೆ. ಆತನಿಗೆ ಮದುವೆಯಾಗಿದೆ ಎಂಬ ವಿಷಯ ತಿಳಿದಿದ್ದರೂ ಮಹಿಳೆ ಆತನೊಂದಿಗೆ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿದ್ದರೆ ಅದು ತಪ್ಪಲ್ಲ ಎಂದು ಕೋರ್ಟ್ ಹೇಳಿದೆ. ಆ ಮಹಿಳೆಯ ಕುಟುಂಬದಿಂದಲೇ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಪ್ರಕರಣವನ್ನು ಆಲಿಸಿದ ನ್ಯಾಯಾಲಯ ವಿವಾಹಿತ ಪುರುಷನು ಪರಸ್ಪರ ಒಪ್ಪಿಗೆಯ ಮೂಲಕ ವಯಸ್ಕ ಮಹಿಳೆಯ…

Read More

ಏಪ್ರಿಲ್​ನಲ್ಲಿ ಗುಡ್​ಫ್ರೈಡೆ, ಬಸವಜಯಂತಿ, ಅಂಬೇಡ್ಕರ್ ಜಯಂತಿ; ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ

ಬೆಂಗಳೂರು, ಮಾರ್ಚ್ 27: ಆರ್​ಬಿಐ ಕ್ಯಾಲೆಂಡರ್ ಪ್ರಕಾರ 2026ರ ಏಪ್ರಿಲ್ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ (Bank Holidays) ಇದೆ. ಕೆಲ ರಜೆಗಳು ಪ್ರಾದೇಶಿಕವಾಗಿದ್ದು, ಆಯಾ ಪ್ರದೇಶಕ್ಕೆ ಸೀಮಿತವಾಗಿರುತ್ತದೆ. ಮಾರ್ಚ್ ತಿಂಗಳಿಗೆ ಹೋಲಿಸಿದರೆ ಏಪ್ರಿಲ್​ನಲ್ಲಿ ಹಬ್ಬ ಹರಿದಿನಗಳು ಕಡಿಮೆ. ಕ್ರೈಸ್ತರ ಗುಡ್ ಫ್ರೈಡೆ, ಈಸ್ಟರ್ ಹಬ್ಬಗಳು ಎಪ್ರಿಲ್​ನಲ್ಲಿ ಇವೆ. ಈಸ್ಟರ್ ಹಬ್ಬ ಭಾನುವಾರ ಬಂದಿರುವುದರಿಂದ ಬ್ಯಾಂಕ್ ಉದ್ಯೋಗಿಗಳಿಗೆ ಹೆಚ್ಚುವರಿ ರಜೆ ಸಿಗುವುದಿಲ್ಲ. ಅಂಬೇಡ್ಕರ್ ಜಯಂತಿ, ಬಸವ ಜಯಂತಿ ಕೂಡ ಏಪ್ರಿಲ್​ನಲ್ಲೇ ಇವೆ. ನಾಲ್ಕು ಭಾನುವಾರ…

Read More

ಮಧ್ಯಪ್ರಾಚ್ಯದ ವಾರ್​​ ಎಫೆಕ್ಟ್​​: ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಪಾತಾಳಕ್ಕಿಳಿದ ಬೆಲೆ

ಬೀದರ್​​, ಮಾರ್ಚ್​​ 27: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶ ಸೇರಿದಂತೆ ರಾಜ್ಯದ ಹಲವು ಉದ್ಯಮಗಳು ಈಗಾಗಲೇ ತತ್ತರಿಸಿ ಹೋಗಿವೆ. ಈ ನಡುವೆ ವಾರ್​​ ಎಫೆಕ್ಟ್​​ ಅನ್ನದಾತರ ಕೈಸುಡಲೂ ಆರಂಭಿಸಿದ್ದು, ಬೀದರ್​​ನಲ್ಲಿ ರೈತರು ಬೆಳೆದಿದ್ದ ಈರುಳ್ಳಿ ಬೆಳೆ ಅವರ ಕಣ್ಣಲ್ಲೇ ಈಗ ನೀರು ತರಿಸುತ್ತಿದೆ. ಯುದ್ಧದ ಹಿನ್ನೆಲೆ ಗಲ್ಫ್​​ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿ ರಫ್ತು ನಿಂತಿರುವ ಕಾರಣ ಬೆಲೆ ಪಾತಾಳಕ್ಕೆ ಕುಸಿದಿದೆ. ಪ್ರತಿ ಕೆ.ಜಿ. ಈರುಳ್ಳಿ 4ರಿಂದ 6 ರೂಪಾಯಿವರೆಗೆ ಮಾರಾಟವಾಗುತ್ತಿರುವ ಕಾರಣ ಬೆಳೆಗಾರರು ಭಾರಿ ನಷ್ಟ…

Read More

‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ

ಕನ್ನಡದ ನಟ ಪ್ರಜ್ವಲ್ ದೇವರಾಜ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದವರು. ಅವರು ಈಗ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಸಿನಿಮಾದ ಭಾಗ ಆಗುತ್ತಿದ್ದಾರೆ. ಸಾಕಷ್ಟು ಭಿನ್ನ ಶೈಲಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಪ್ರಜ್ವಲ್ ಅವರು ಗುರುಸಿದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ. ರಾಮನವಮಿ ಪ್ರಯುಕ್ತ ‘ರಾಮರಸ’ ಚಿತ್ರದಲ್ಲಿನ ಪ್ರಜ್ವಲ್ ದೇವರಾಜ್ ಲುಕ್ ಅನಾವರಣಗೊಂಡಿದೆ. ವಿನಯ್ ಗುರೂಜಿ ಅವರು ಈ ಲುಕ್ ಅನಾವರಣ ಮಾಡಿದರು. ಪೋಸ್ಟರ್​ ಅಲ್ಲಿ ಉದ್ದನೆಯ ಕೂದಲು ಬಿಟ್ಟು, ಕತ್ತಲ್ಲಿ…

Read More

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?

ಇಂಡಿಯನ್ ಪ್ರೀಮಿಯರ್ ಲೀಗ್​ನ 19 ನೇ ಸೀಸನ್​ನ (IPL 2026)  ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ನಡುವೆ ನಡೆಯಲಿದೆ. ಒಂದೆಡೆ ಆರ್​ಸಿಬಿ ಹಾಲಿ ಚಾಂಪಿಯನ್ ಆಗಿದ್ದರೆ, ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿತ್ತು. ಆದಾಗ್ಯೂ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಎಸ್‌ಆರ್‌ಎಚ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇತ್ತ ಬ್ಯಾಟಿಂಗ್‌ ಹಾಗೂ…

Read More

Video: ತಿಂಗಳಿಗೆ 75,000 ರೂ ಸಂಪಾದಿಸುವ ಮುಂಬೈ ಆಟೋ ಚಾಲಕ

ಮುಂಬೈ, ಮಾರ್ಚ್ 27: ಈಗಿನ ಕಾಲದಲ್ಲಿ ಓದಿಕೊಂಡವರು ಕಾರ್ಪೊರೇಟ್ ಉದ್ಯೋಗಗಳತ್ತ (Corporate job) ಆಸಕ್ತಿ ತೋರಿಸುತ್ತಾರೆ. ಸ್ವ ಉದ್ಯೋಗಕ್ಕೆ ಕೈ ಹಾಕುವುದು ಕಡಿಮೆಯೇ. ಆದರೆ, ಸ್ವಂತ ದುಡಿಮೆಯಿಂದಲೂ ಲಕ್ಷಾನುಗಟ್ಟಲೆ ದುಡಿಯಬಹುದು ಅನೇಕರಿಗೆ ತಿಳಿದೇ ಇಲ್ಲ. ಆದರೆ ಮುಂಬೈ (Mumbai) ಆಟೋಚಾಲಕರೊಬ್ಬರ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ. ದಿನಕ್ಕೆ 2500 ರೂ ಸಂಪಾದಿಸುವ ಈ ಆಟೋಚಾಲಕ ತಿಂಗಳಿಗೆ 75,000 ರೂ ಸಂಪಾದನೆ ಮಾಡ್ತಾರಂತೆ. ಈ ವಿಡಿಯೋ ಕಾರ್ಪೊರೇಟ್ ಸಂಬಳದ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. @uvichar_ ಹೆಸರಿನ…

Read More

ನಮಗೆ ರಸ್ತೆ ಇಲ್ಲ, 500 ಕೋಟಿ ರೂ. ಕೊಡಿ: ‘ಧುರಂಧರ್ 2’ ತಂಡಕ್ಕೆ ಪಾಕಿಸ್ತಾನಿಗಳ ಮನವಿ

ಆದಿತ್ಯ ಧರ್ (Aditya Dhar) ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಭಾಗದ ರೀತಿಯೇ ಈ ಸೀಕ್ವೆಲ್ ಕೂಡ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಈಗಾಗಲೇ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಪಾಕಿಸ್ತಾನದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಅಲ್ಲಿನ ಜನರು ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಯಾಕೆಂದರೆ, ಈ ಚಿತ್ರದ ಕಥೆ ನಡೆಯುವುದೇ ಪಾಕಿಸ್ತಾನದಲ್ಲಿ. ಈಗ…

Read More

ಹೊಂಬಾಳೆ ಬಳಿಕ ರಾಜ್ ಬಿ ಶೆಟ್ಟಿಯಿಂದಲೂ ದೂರಾದರೇ ರಿಷಬ್?

ರಿಷಬ್ ಶೆಟ್ಟಿ (Rishab Shetty), ಕರ್ನಾಟಕದ ಪ್ಯಾನ್ ಇಂಡಿಯಾ ಸ್ಟಾರ್ ನಟ. ‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ ಸಿನಿಮಾದ ಬಳಿಕ ರಿಷಬ್​​ರ ಖ್ಯಾತಿ ದೇಶದೆಲ್ಲೆಡೆ ಹರಡಿದೆ. ‘ಕಾಂತಾರ ಚಾಪ್ಟರ್ 1’ ಬಳಿಕ ಅವರಿಗೆ ತೆಲುಗು, ಬಾಲಿವುಡ್​​ನಿಂದಲೂ ಆಫರ್​​ಗಳು ಬರುತ್ತಿದ್ದು, ಇದೀಗ ರಿಷಬ್ ಅವರು ತೆಲುಗಿನ ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಹೊಸ ಸಿನಿಮಾದ ತಯಾರಿಯಲ್ಲಿ ತೊಡಗಿರುವ ಸುಳಿವನ್ನೂ ಸಹ ಸಾಮಾಜಿಕ ಜಾಲತಾಣದ ಮೂಲಕ ನೀಡಿದ್ದಾರೆ. ‘ಕಾಂತಾರ: ಚಾಪ್ಟರ್ 2’ ಸಿನಿಮಾದ ಬಳಿಕ ರಿಷಬ್ ಶೆಟ್ಟಿ…

Read More

ನಿತೀಶ್ ಕುಮಾರ್ ಮಾರ್ಚ್​ 30ರಂದು ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

ಪಾಟ್ನಾ, ಮಾರ್ಚ್​ 27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಮಾರ್ಚ್​ 30ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 16 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸಿದ್ದರು.ಒಬ್ಬ ವ್ಯಕ್ತಿಯು ಏಕಕಾಲದಲ್ಲಿ ಎರಡು ಸದನಗಳ ಸದಸ್ಯತ್ವವನ್ನು ಹೊಂದಲು ಸಾಧ್ಯವಿಲ್ಲ, ಇದು 14 ದಿನಗಳಲ್ಲಿ ಒಂದು ಸ್ಥಾನವನ್ನು ತ್ಯಜಿಸುವುದು ಕಡ್ಡಾಯ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ, ಆದರೆ ಅವರು ತಮ್ಮ ಸ್ಥಾನವನ್ನು ತ್ಯಜಿಸಿಲ್ಲ. ಎರಡು…

Read More