‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ.
ಗಿಲ್ಲಿ ನಟ ಅವರಿಗೆ ಶಿವರಾಜ್ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್ಕುಮಾರ್ ಜಡ್ಜ್ ಸ್ಥಾನದಲ್ಲಿ ಇದ್ದರು. ಸ್ಪರ್ಧಿಯಾಗಿ ತೆರಳಿದ್ದ ಗಿಲ್ಲಿ ಅವರು ಎಲ್ಲರನ್ನೂ ರಂಜಿಸಿದ್ದರು. ಆಗಲೇ ಶಿವರಾಜ್ಕುಮಾರ್ಗೆ ಗಿಲ್ಲಿ ಇಷ್ಟ ಆಗಿದ್ದರು. ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿರುವಾಗ ಶಿವಣ್ಣ ಶುಭ ಹಾರೈಸಿದ್ದರು. ಗಿಲ್ಲಿನೇ ಗೆಲ್ಲೋದು ಎಂದು ಹೇಳಿದ್ದರು. ಹೊರ ಬಂದ ಬಳಿಕ ಗಿಲ್ಲಿಗೆ ಈ ವಿಷಯ ಗೊತ್ತಾಗಿದೆ. ಹೀಗಾಗಿ, ತಕ್ಷಣವೇ ಶಿವಣ್ಣ ಹಾಗೂ ಗೀತಕ್ಕನ ಭೇಟಿ ಮಾಡಿದ್ದಾರೆ.
ಸುದೀಪ್ ಅವರನ್ನೂ ಗಿಲ್ಲಿ ಭೇಟಿ ಮಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿರೋವಾಗ ಎಲ್ಲ ವಿಷಯಗಳನ್ನು ಸುದೀಪ್ ಮನಬಿಚ್ಚಿ ಮಾತನಾಡಲು ಸಾಧ್ಯವಿಲ್ಲ. ಈ ಕಾರಣದಿಂದ ಬಿಗ್ ಬಾಸ್ನಿಂದ ಹೊರ ಬಂದ ಬಳಿಕ ಗಿಲ್ಲಿ ಹೋಗಿ ಸುದೀಪ್ನ ಭೇಟಿ ಮಾಡಿದ್ದಾರೆ. ಗಿಲ್ಲಿ ಅಭಿಮಾನಿಗಳು ಸುದೀಪ್ ಅವರ ಬಗ್ಗೆ ಈ ಮೊದಲು ಅಸಮಾಧಾನ ಹೊರಹಾಕಿದ್ದು ಇದೆ. ಇದಕ್ಕೆ ಕಾರಣ ಆಗಿದ್ದು ಸೀಸನ್ ಚಪ್ಪಾಳೆ. ಈ ವಿಷಯದಲ್ಲಿ ಗಿಲ್ಲಿ ಅವರು ಅಭಿಮಾನಿಗಳ ಪರವಾಗಿ ಸುದೀಪ್ ಬಳಿ ಕ್ಷಮೆ ಕೇಳಿರಬಹುದು ಎಂದು ಊಹಿಸಲಾಗುತ್ತಿದೆ.
ಸುದೀಪ್ ಹಾಗೂ ಶಿವರಾಜ್ಕುಮಾರ್ ಅವರು ಗಿಲ್ಲಿಗೆ ಒಳ್ಳೆಯದಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸಿದ್ದಾರೆ. ಈ ಹಾರೈಕೆಯಿಂದ ಅವರು ತುಂಬಾನೇ ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಆಫರ್ಗಳು ಅವರನ್ನು ಹುಡುಕಿ ಬರೋ ಸಾಧ್ಯತೆ ಇದೆ.
ಬೆಂಗಳೂರು, ಜನವರಿ 21: ಸುಪ್ರೀಂ ಕೋರ್ಟ್ ಸೂಚನೆ ಬೆನ್ನನ್ನೇ ಜಿಬಿಎ (GBA) ಚುನಾವಣೆಯ ತಯಾರಿ ಬಿರುಸಿನಿಂದ ಸಾಗಿದೆ. ಜಿಬಿಎ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಆಯೋಗ ನಿರ್ಧಾರ ಮಾಡಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ನಲ್ಲೇ (Congress) ಅಪಸ್ವರ ಎದ್ದಿದೆ. ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ನಾವು ಈಗಾಗಲೇ ಒಂದು ಹೆಜ್ಜೆ ಮುಂದೆ ಹೋಗಿದ್ದೇವೆ. ಮತ್ತೆ ಬ್ಯಾಲೆಟ್ ಪೇಪರ್ ತರುವುದು ಬೇಡ ಎನಿಸುತ್ತಿದೆ ಎಂದಿದ್ದಾರೆ.
ಮತ್ತೆ ಹಿಂದಕ್ಕೆ ಹೆಜ್ಜೆ ಹಾಕೋದು ಬೇಡ: ಇವಿಎಂ ಪರ ಡಿಕೆ ಸುರೇಶ್ ಬ್ಯಾಟ್
ರಾಜ್ಯದಲ್ಲಿ ಚುನಾವಣೆಗಳನ್ನು ನಡೆಸುವುದು ನಾವೇ. ನಮ್ಮದೇ ಸರ್ಕಾರ ಇದೆ. ಹೀಗಾಗಿ ಅಕ್ರಮ ನಡೆಯುತ್ತದೆ ಎಂದು ಹೇಳಲಾಗದು. ಕೇಂದ್ರದಲ್ಲಾದರೆ ಬೇರೆ ವಿಚಾರ. ನಾವೀಗಾಗಲೇ ಒಂದು ಹೆಜ್ಜೆ ಮುಂದೆ ಹೋಗಿರುವುದರಿಂದ ಮತ್ತೆ ಹಿಂದಕ್ಕೆ ಬರುವ ಅಗತ್ಯ ಇಲ್ಲ ಎನಿಸುತ್ತದೆ. ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ಏತನ್ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಇವಿಎಂನಿಂದ ಮತಗಳ್ಳತನ ಅಗುತ್ತಿದೆ. ಹೀಗಾಗಿ ಬ್ಯಾಲೆಟ್ ಪೇಪರ್ ಒಳ್ಳೆಯದು ಎಂದು ಹೇಳಿದ್ದಾರೆ. ಮತಗಳ್ಳತನ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಬ್ಯಾಲೆಟ್ ಪೇಪರ್ ಚುನಾವಣೆ ಮಾಡಿದರೆ ಒಳ್ಳೆಯದು ಎಂದಿದ್ದಾರೆ.
ಇವಿಎಂ ತಂದಿದ್ದೇ ಕಾಂಗ್ರೆಸ್, ಈಗ ಅವರಿಗೆ ನಂಬಿಕೆ ಇಲ್ವಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್ ಆದರೂ ತರಲಿ, ಏನಾದರೂ ತರಲಿ. ಜಿಬಿಎ ಚುನಾವಣೆಯಲ್ಲಿ ಬಿಜೆಪಿನೇ ಗೆಲ್ಲೋದು ಎಂದಿದ್ದಾರೆ.
ಹೆಚ್.ಕೆ.ಪಾಟೀಲ್, ಸಿಟಿ ರವಿ ಮಧ್ಯೆ ಇವಿಎಂ ಫೈಟ್
ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಪರಿಷತ್ ಸದಸ್ಯ ಸಿ.ಟಿ.ರವಿ, ವಿಧಾನಸಭೆ ಚುನಾವಣೆಯಲ್ಲಿ ಹೇಗೆ ಗೆದ್ದಿದ್ದು ಎಂದು ಪ್ರಶ್ನಿಸಿದ್ದಾರೆ.
ಮತ್ತೊಂದೆಡೆ, ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಿಕೊಂಡರೆ ತಪ್ಪೇನಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಇಡೀ ವಿಶ್ವದಲ್ಲಿ ಎಲ್ಲಾ ಕಡೆ ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆ ನಡೆಸುತ್ತಿದ್ದಾರೆ. ನಮ್ಮಲ್ಲಿ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದರು.
ರಾಹುಲ್ ಮೆಚ್ಚಿಸಲು ಬ್ಯಾಲೆಟ್ ಪೇಪರ್ ಬಳಕೆ: ಸದಾನಂದ ಗೌಡ
ಬ್ಯಾಲೆಟ್ ಪೇಪರ್ ಬಳಕೆಯಿಂದ ಗೊಂದಲವಾಗುತ್ತದೆ ಎಂದು ಮಾಜಿ ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ತಾಂತ್ರಿಕವಾಗಿ ಮುಂದುವರೆಯುವ ವೇಳೆ ಹೀಗೆ ಮಾಡಬಾರದು.
ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪಾಲಿಕೆ ಆಯುಕ್ತರ ಉಪಸ್ಥಿತಿಗೆ ಬಿಜೆಪಿ ಆಕ್ಷೇಪ
ರಾಜ್ಯ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಪಾಲಿಕೆ ಆಯುಕ್ತರ ಉಪಸ್ಥಿತಿಗೆ ಆಕ್ಷೇಪ ವ್ಯಕ್ತವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯೂ ಆಗಿರುವ ರಾಜೇಂದ್ರ ಚೋಳನ್ ಭಾಗಿಯಾಗಿದ್ದಕ್ಕೆ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯುಕ್ತರ ಜತೆ ಕುಳಿತುಕೊಳ್ಳುವುದೆಷ್ಟು ಸೂಕ್ತ? ಇದು ಹಿತಾಸಕ್ತಿಗಳ ಸಂಘರ್ಷ ಆಗುವುದಿಲ್ಲವೇ ಎಂದು ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು.
ವೃಷಭ ರಾಶಿ:
ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಕೇಳಬಾರದ ವಿಚಾರಗಳನ್ನು ಬಂಧುಗಳಿಂದ ಪಡೆಯುವಿರಿ. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಯಾವುದನ್ನೂ ಹೆಚ್ಚು ಕಾಲ ಉಳಿಸಿಕೊಳ್ಳುವುದು ಕಷ್ಟ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ನಿಮ್ಮ ಪರೀಕ್ಷೆಯ ದಿನವು ಇಂದಾಗಿದ್ದು ಫಲಿತಾಂಶವೂ ನಿಮ್ಮ ವರ್ತನೆಯ ಮೇಲಿರುವುದು.
ಮಿಥುನ ರಾಶಿ:
ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ಒಳ ಮನಸ್ಸು ನಿಮ್ಮ ದಾರಿಯನ್ನು ತಪ್ಪಿಸದು. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ.
ಕರ್ಕಾಟಕ ರಾಶಿ:
ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮ್ಮ ಜೀವನಕ್ಕೆ ಆಗದವರ ಬಗ್ಗೆ ತಾತ್ಸಾರ ಭಾವ ಬರಬಹುದು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ.
ಸಿಂಹ ರಾಶಿ:
ಇಂದು ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಸಾಲಕ್ಕಾಗಿ ಮತ್ತೆ ಮತ್ತೆ ದೂರವಾಣಿ ಕರೆಗಳು ಪೀಡಿಸಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು.
ಕನ್ಯಾ ರಾಶಿ:
ನೀವು ಹೇಳುವ ಸುಳ್ಳುಗಳೇ ಸತ್ಯವಾಗಬಹುದು. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದ್ದು ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಹೂಡಿಕೆಯ ನಷ್ಟದಿಂದ ವಿಚಲಿತರಾಗಬೇಕಾಗಿಲ್ಲ. ಎಲ್ಲದಕ್ಕೂ ವಿಧಿಯನ್ನು ಹೀಗಳೆಯುವುದಕ್ಕಿಂತ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ.
ತುಲಾ ರಾಶಿ:
ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಮಾರಾಟಕ್ಕೆ ಬೇಕಾದ ವ್ಯವಸ್ಥೆಯನ್ನು ರೂಪಿಸಿಕೊಳ್ಳುವಿರಿ. ಜಾಹಿರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಎಲ್ಲ ತಪ್ಪಿಗೂ ನೀವೇ ಕಾರಣಕರ್ತರಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ.
ವೃಶ್ಚಿಕ ರಾಶಿ:
ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಆಧ್ಯಾತ್ಮಿಕ ಮೇಲೆ ಪ್ರೀತಿ ಹೆಚ್ಚಾಗಿ ಲೌಕಿಕ ವಿಚಾರಕ್ಕೆ ಆಸಕ್ತಿ ಕಡಿಮೆಯಾಗಲಿದೆ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು.
ಧನು ರಾಶಿ:
ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದೇ ಕಾರ್ಯಕ್ಕೆ ಮತ್ತೆ ಮತ್ತೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಮಾಹಿತಿಯು ಪ್ರಕಟವಾಗಬಹುದು. ಸ್ವಂತ ವಾಹನ ಸಂಚಾರದಿಂದ ಭಯವಾಗಲಿದೆ.
ಮಕರ ರಾಶಿ:
ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ಎಲ್ಲದಕ್ಕೂ ಸಂಶಯಪಟ್ಟು ಗೊಂದಲವಾಗಲಿದೆ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶವನ್ನು ಪ್ರೀತಿಸಿ. ಅದೇ ಮಹತ್ತ್ವದ ಮಾರ್ಗದಲ್ಲಿ ತೋರುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ.
ಕುಂಭ ರಾಶಿ:
ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಉದ್ಯಮದ ನಿಮಿತ್ತ ದೂರ ಪ್ರಯಾಣ ಹಾಗೂ ಕಾರ್ಯ ಸಫಲವಾಗದೇ ಬೇಸರ. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು.
ಮೀನ ರಾಶಿ:
ಕಛೇರಿ ಕೆಲಸವು ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯನ್ನು ಕೊಡಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಯಾರದೋ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ನಿಮ್ಮ ಭೂವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು.
ಜನವರಿ 21, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಶತಭಿಷಾ, ಯೋಗ : ವ್ಯತಿಪಾತ್, ಕರಣ : ಗರಜ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 17 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12-36 – 15:01, ಯಮಗಂಡ ಕಾಲ 08:20 – 09:45, ಗುಳಿಕ ಕಾಲ 11:10 – 12:36
ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ ಸಂಬಂಧಪಟ್ಟವರೇ ಆಗಿದ್ದರೂ ಹೆಚ್ಚಿನ ಶ್ರಮವನ್ನು ಹಾಕಲೇಬೇಕಾಗುತ್ತದೆ. ದಂಪತಿಗಳು- ಪ್ರೀತಿ, ಪ್ರೇಮದಲ್ಲಿ ಇರುವವರು ನಿಮ್ಮ ಒಳಗಿನ ಪ್ರೀತಿಯನ್ನು ಸಾಬೀತು ಮಾಡುವುದಕ್ಕೆ ಅಂತಲೇ ಹೆಚ್ಚು ಸಮಯವನ್ನು ಮೀಸಲಿಡುತ್ತೀರಿ.
ಉದ್ಯಮಿಗಳಿಗೆ ಹಾಗೂ ಉದ್ಯೋಗಿಗಳಿಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ನಿಮ್ಮ ಯೋಜನೆಗಳು ಹಾಗೂ ಅದನ್ನು ಅನುಷ್ಠಾನಕ್ಕೆ ತರುವುದಕ್ಕೆ ಏನು ಮಾಡಬೇಕು ಎಂಬುದನ್ನು ಹೇಳುವ ರೀತಿ ಎಲ್ಲರನ್ನೂ ಆಕರ್ಷಿಸುತ್ತದೆ. ನಿಮ್ಮ ಜಡ್ಜ್ ಮೆಂಟ್ ಬಹಳ ಚೆನ್ನಾಗಿರುತ್ತದೆ. ಆದ್ದರಿಂದ ಅನಿಸಿದ್ದನ್ನು ಹೇಳುವುದಕ್ಕೆ ಹಿಂಜರಿಕೆ ಬೇಡ. ಷೇರು ಮಾರುಕಟ್ಟೆ- ಮ್ಯೂಚುವಲ್ ಫಂಡ್ ಇಂಥದ್ದರಲ್ಲಿ ಈ ಹಿಂದೆ ಯಾವಾಗಲೋ ನೀವು ಮಾಡಿದ್ದ ಸಣ್ಣ ಹೂಡಿಕೆ ಒಳ್ಳೆ ಲಾಭ ತಂದುಕೊಡಲಿದೆ.
ನಿಮ್ಮ ನಿಯಂತ್ರಣದಲ್ಲಿ ಇರುವಂಥ ವಿಷಯಗಳನ್ನು ಮಾತ್ರ ಕಾಳಜಿ ಮಾಡಿ. ಕೈ ಅಳತೆ ಮೀರಿದ ವಿಚಾರಗಳ ತಲೆ ಕೆಡಿಸಿಕೊಳ್ಳಬೇಡಿ. ನೀವು ಸಮಸ್ಯೆಗಳು ಅಂತ ಏನನ್ನು ಅಂದುಕೊಂಡಿರುತ್ತೀರೋ ವಾಸ್ತವಕ್ಕಿಂತ ಹೆಚ್ಚು ಉತ್ಪ್ರೇಕ್ಷೆ ಮಾಡಿಕೊಳ್ಳುತ್ತಿದ್ದೀರಿ ಎಂಬುದು ಗಮನಕ್ಕೆ ಬರಲಿದೆ. ಮದುವೆಗೆ ಪ್ರಯತ್ನಿಸುತ್ತಿರುವ ವಿವಾಹ ವಯಸ್ಕರಿಗೆ ಸೂಕ್ತ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ದುಡ್ಡಿನ ಖರ್ಚು ಮಾಡುವಾಗ ಯಾವ ಉದ್ದೇಶಕ್ಕೆ ಮಾಡುತ್ತಿದ್ದೀರಿ ಎಂಬ ಸ್ಪಷ್ಟತೆ ಇರಲಿ.
ನಿಮ್ಮಲ್ಲಿ ಏನೋ ಬದಲಾವಣೆ ಮಾಡಿಕೊಳ್ಳಬೇಕಿದೆ ಅಂತೇನಾದರೂ ಅನಿಸಿದಲ್ಲಿ ಮೊದಲಿಗೆ ನಿಮ್ಮ ದಿನಚರಿಯಲ್ಲಿ ಏನೇನು ಬದಲಾಗಬೇಕು ಎಂಬುದನ್ನು ತೀರ್ಮಾನ ಮಾಡಿಕೊಳ್ಳಿ. ಸಣ್ಣ- ಪುಟ್ಟ ಹೊಸ ಅಭ್ಯಾಸಗಳು ಸಹ ಅತಿ ದೊಡ್ಡ ಜಾದೂ ಮಾಡಿಬಿಡುತ್ತವೆ. ನಿಮ್ಮ ಮನಸ್ಸಿನಲ್ಲಿ ಇರುವಂಥ ನೋವನ್ನು ಮಾತಿನಲ್ಲಿ ತೋರಿಸಿಕೊಳ್ಳಬೇಡಿ. ಅದರಿಂದ ಸಮಸ್ಯೆ ಮತ್ತೂ ಹೆಚ್ಚಾಗುತ್ತದೆ. ಬೇರೆಯವರ ನಿರ್ಧಾರದ ಕಾರಣಗಳಿಗೆ ನಿಮ್ಮ ಸಂತೋಷ ಹಾಳಾಗಬಾರದು. ಆದ್ದರಿಂದ ಸಾಧ್ಯವಿಲ್ಲ ಎಂಬಂಥ ಕೆಲಸ- ಕಾರ್ಯಗಳನ್ನು ನೇರವಾಗಿ ಹೇಳಿ.
ಈ ದಿನ ನೀವು ಮಾಡುವ ಕೆಲಸದಲ್ಲಿ ಸಂಖ್ಯೆಗಿಂತ ಹೆಚ್ಚಾಗಿ ಗುಣಮಟ್ಟಕ್ಕೆ ಆದ್ಯತೆಯನ್ನು ನೀಡಿ. ಇದರಿಂದಾಗಿ ನೀವು ಇಡುವಂಥ ಚಿಕ್ಕ ಹೆಜ್ಜೆಗಳು ಸಹ ದೊಡ್ಡ ಮಟ್ಟದಲ್ಲಿ ಪರಿಣಾಮವನ್ನು. ಬೀರುತ್ತವೆ. ಉದ್ಯೋಗಸ್ಥರು ತಮ್ಮ ಜತೆಗೆ ಕೆಲಸ ಮಾಡುವವರೊಂದಿಗೆ ಸರಿಯಾದ ಸಮನ್ವಯ ಸಾಧಿಸಿದಲ್ಲಿ ಪರಿಣಾಮಕಾರಿ ಫಲಿತಾಂಶವನ್ನು ಕಾಣಬಹುದು. ನೀವು ನಿರೀಕ್ಷೆ ಮಾಡುತ್ತಿರುವುದು ಏನು ಎಂಬ ಬಗ್ಗೆ ಸ್ಪಷ್ಟವಾದ ಪದಗಳಲ್ಲಿ ವಿವರಿಸಿ. ಇನ್ನು ಕೌಟುಂಬಿಕವಾಗಿ ಸರಳವಾಗಿ ಬಗೆಹರಿಸಬಹುದಾದ ಸಮಸ್ಯೆಯನ್ನು ನೀವಾಗಿಯೇ ಕಗ್ಗಂಟು ಮಾಡಿಬಿಡುವ ಸಾಧ್ಯತೆಯಿದೆ.
ನಿಮ್ಮ ಮಾನಸಿಕ ಶಾಂತಿಗೆ ಹೊರಗಿನ ಒತ್ತಡ- ಬೆಳವಣಿಗೆ ಕಾರಣ ಎಂಬ ಆಕ್ಷೇಪದಿಂದ ಹೊರಗೆ ಬರುವ ದಿನ ಇದಾಗಿರುತ್ತದೆ. ಪ್ರತಿ ಸಣ್ಣ ವಿಚಾರವನ್ನು ದೊಡ್ಡ ಸಮಸ್ಯೆಯಾಗಿ ನೋಡುವ ಮನೋಭಾವದಿಂದ ಹೊರಗೆ ಬರಲಿದ್ದೀರಿ. ನಿಮ್ಮ ಹಲವು ಸಮಸ್ಯೆಗಳ ಮೂಲ ಇರುವುದು ಸಿಟ್ಟಿನಲ್ಲಿ. ಕೂತು- ಮಾತನಾಡಿ ಬಗೆಹರಿಸಿಕೊಳ್ಳಬೇಕಾದ ಸಮಯದಲಿ ಮಾತೇ ಆಡದಂತೆ ಸುಮ್ಮನಾಗಿಬಿಟ್ಟರೆ ಹೇಗೆ? ಕಾಲಿನ ನೋವು ಕಾಡಲಿದೆ. ಒಂದು ವೇಳೆ ಈಗಾಗಲೇ ಆ ಸಮಸ್ಯೆಯಿಂದ ಬಳಲುತ್ತಾ ಇದ್ದೀರಿ ಅಂತಾದಲ್ಲಿ ಸೂಕ್ತ ವೈದ್ಯೋಪಚಾರ ಮಾಡಿಕೊಳ್ಳುವ ಕಡೆಗೆ ಗಮನ ನೀಡಿ.
ಈ ದಿನ ನಿಮ್ಮ ಮಾತು ಮತ್ತು ನಿರ್ಧಾರಗಳು ಉದ್ಯೋಗ ಸ್ಥಳದಲ್ಲಿ ಆಗಬೇಕಾದ ಕೆಲಸದ ಗತಿಯನ್ನೇ ಬದಲಿಸಲಿದೆ. ವ್ಯಾಪಾರ- ವ್ಯವಹಾರ ಅಂತ ಬಂದಲ್ಲಿ ಭವಿಷ್ಯವನ್ನು ಗಮನ ಇಟ್ಟುಕೊಂಡು ಜಾಣ್ಮೆಯಿಂದ ಮಾತನಾಡಿ. ಸಹೋದ್ಯೋಗಿಗಳು ಸಹ ನಿಮ್ಮ ಅಭಿಪ್ರಾಯಕ್ಕೆ ಸಮ್ಮತ ನೀಡುವ ಸಾಧ್ಯತೆಯಿದೆ. ಹಣಕಾಸಿನ ನಿರ್ಧಾರಗಳಲ್ಲಿ ಸಂಯಮದಿಂದ ವರ್ತಿಸಿದರೆ ಲಾಭ ತಂದು ಕೊಡಲಿದೆ. ಕುಟುಂಬ ಸದಸ್ಯರಿಗೆ ನೀವು ನೀಡುವ ಬೆಂಬಲ ಬಹಳ ಮುಖ್ಯವಾಗುತ್ತದೆ. ನಿಮ್ಮ ಸಂಗಾತಿಯ ಬಗ್ಗೆ ಇರುವಂಥ ಕಾಳಜಿಯನ್ನು ವ್ಯಕ್ತಿಪಡಿಸುವಾಗ ಅದು ಪೊಸೆಸಿವ್ ನೆಸ್ ಅನಿಸದಂತೆ ನೋಡಿಕೊಳ್ಳಿ.
ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ತರುವಂಥ ಹಾಗೂ ಒಳಿತು ಆಗುವಂಥ ಹೊಸ ವಿಚಾರಗಳನ್ನು ಹೊಸ ಜನರು ತೆಗೆದುಕೊಂಡು ಬರಲಿದ್ದಾರೆ. ಇಷ್ಟು ಸಮಯ ನಿಮ್ಮ ಮಾತನ್ನು ಯಾರು ಕೇಳಿಸಿಕೊಳ್ಳುತ್ತಾರೆ ಅಂತೇನಾದರೂ ನೀವು ಅಂದುಕೊಳ್ಳುತ್ತಾ ಇದ್ದಲ್ಲಿ ನಿಮ್ಮ ಮಾತಿಗೆ ಮನ್ನಣೆ ದೊರೆಯಲಿದೆ. ಇಂಥ ಸಂದರ್ಭದಲ್ಲಿ ನೀವು ಮಾತನಾಡುವ ವಿಷಯ ಹಾಗೂ ಬಳಸುವ ಪದಗಳ ಕಡೆಗೆ ಗಮನವನ್ನು ನೀಡಿ. ಕೆಲಸಗಳು ನಿಧಾನ ಗತಿಯಲ್ಲಿಯೇ ಸಾಗಿದರೂ ಫಲಗಳು ಉತ್ತಮ ರೀತಿಯಲ್ಲಿ ದೊರೆಯಲಿದೆ.
ಸಣ್ಣ- ಸಣ್ಣ ಸಂಗತಿಗಳಿಗೂ ನೀವು ನೀಡುವ ಪ್ರಾಮುಖ್ಯ, ಕೆಲಸಗಳಲ್ಲಿ ಕಾಣುವ ಅಚ್ಚುಕಟ್ಟುತನಕ್ಕೆ ಮೆಚ್ಚುಗೆ ಬರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಶಿಸ್ತು ಹಾಗೂ ಯಾವುದೇ ವಿಚಾರದಲ್ಲಿಯೂ ಇರುವ ಸ್ಪಷ್ಟತೆಗೆ ಫಲಿತಾಂಶಗಳು ನಿದರ್ಶನ ಆಗುತ್ತವೆ. ಇತರರಿಗೆ ಚಿಕ್ಕದು ಎನಿಸಿದಂಥ ಹಣಕಾಸಿನ ವಿಚಾರದ ನಿರ್ಧಾರವೊಂದು ದೊಡ್ಡ ಬದಲಾವಣೆಯನ್ನೇ ತರಲಿದೆ. ಭವಿಷ್ಯಕ್ಕೂ ಸಹಾಯಕ ಆಗಲಿದೆ. ನಿಮ್ಮ ಪ್ರೀತಿಪಾತ್ರರ ಜೊತೆಗೆ ನೀವು ಮಾತನಾಡುವುದಕ್ಕಿಂತ ಹೆಚ್ಚಾಗಿ ಅವರು ಹೇಳುವುದನ್ನು ಕೇಳಿಸಿಕೊಳ್ಳಿ.
ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಹೀಗಾಗಿ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನೇ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ರಾಜಸ್ಥಾನದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರ ಬಿಜೆಪಿ ಶಾಸಕರಾಗಿರುವ ಸಂಜಯ್ ಉಪಾಧ್ಯಾಯ್ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು (ಜನವರಿ 20) ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿ ಹಾಗೂ ಸಹುಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ.
BJP National President Shri @NitinNabin has appointed Shri Ram Madhav as the Election In-Charge and Shri Satish Poonia and Shri Sanjay Upadhyay as the Election Co-Incharges for the upcoming Greater Bengaluru Corporation election. pic.twitter.com/pIFfe77vRT
ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಭೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿವುದಾಗಿ ಘೋಷಣೆ ಮಾಡಿದ್ದಾರೆ.
ದಾವೋಸ್, ಜನವರಿ 20: ಭಾರತ ಪ್ರಸ್ತುತದಲ್ಲಿ ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಮತ್ತು ಭವಿಷ್ಯದ ಸುಭದ್ರ ತಾಣವಾಗಿ ಹೊರ ಹೊಮ್ಮುತ್ತಿದ್ದು, ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ(WEF) ಎರಡನೇ ದಿನದ ಶೃಂಗ ಸಭೆ ಇದಕ್ಕೆ ಸಾಕ್ಷಿಯಾಯಿತು. 2026ರ ಶುರುವಿನಲ್ಲೇ ಈ ವಿಶ್ವ ಆರ್ಥಿಕ ವೇದಿಕೆ ಮಹತ್ವದ ಸಭೆಯಲ್ಲಿ ಮಂಗಳವಾರ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ವಿವಿಧ ರಾಷ್ಟ್ರಗಳ ಪ್ರತಿನಿಧಿಗಳ ಜತೆ ಭಾರತದೊಂದಿಗೆ ಹೂಡಿಕೆ ಒಪ್ಪಂದಕ್ಕೆ ಫಲಪ್ರದ ಮಾತುಕತೆ ಮತ್ತು ಚರ್ಚೆ ಮಾಡಿದ್ದಾರೆ.
ಭಾರತದ ತ್ವರಿತ, ಶುದ್ಧ ಇಂಧನ ವಿಸ್ತರಣೆಯಲ್ಲಿ ಪಾಲುದಾರರಾಗಲು ಜಾಗತಿಕ ಹೂಡಿಕೆದಾರರನ್ನು ಸೆಳೆದರು. ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನವೀಕರಿಸಬಹುದಾದ ಇಂಧನ ಮಾರುಕಟ್ಟೆಗಳಲ್ಲಿ ಭಾರತ ಪ್ರಮುಖ ಪಾತ್ರದಾರಿಯಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದಿಸಿದರು.
ಸಚಿವ ಪ್ರಲ್ಹಾದ ಜೋಶಿ ಟ್ವೀಟ್
Presented Country Strategy Dialogue on India at the Congress Centre at @wef, Davos, outlining India’s clean energy transition as a driver of growth, competitiveness and social transformation under the leadership of Hon’ble Prime Minister Shri @narendramodi ji.
“ಸುಸ್ಥಿರತೆ ಮತ್ತು ಜಾಗತಿಕ ಪರಿವರ್ತನೆಗೆ ಮಾರ್ಗಗಳು” ಕುರಿತ ಸಭೆಯಲ್ಲಿ ಮುಖ್ಯ ಭಾಷಣಕಾರರಾಗಿದ್ದ ಸಚಿವ ಪ್ರಲ್ಹಾದ ಜೋಶಿ, ಸುಸ್ಥಿರತೆ ಬಾಹ್ಯ ಕಾಳಜಿ ಮಾತ್ರವಲ್ಲ, ಸ್ಪರ್ಧಾತ್ಮಕತೆ, ಸ್ಥಿತಿಸ್ಥಾಪಕತ್ವ ಮತ್ತು ದೀರ್ಘಕಾಲೀನ ಆರ್ಥಿಕ ಬೆಳವಣಿಗೆಯ ಕೇಂದ್ರ ಚಾಲಕವಾಗಿದೆ ಎಂದು ಒತ್ತಿ ಹೇಳಿದರು.
“ಜಗತ್ತು ಪರಿವರ್ತನೆಗೊಳ್ಳಬೇಕೆ ಬೇಡವೇ?” ಎಂಬುದು ಈ ದಶಕದ ನಿರ್ಣಾಯಕ ಸವಾಲು ಅಲ್ಲ, ಆದರೆ ಸುಸ್ಥಿರತೆಯನ್ನು ಅಗತ್ಯ ಪ್ರಮಾಣದಲ್ಲಿ, ವೇಗದಲ್ಲಿ ಮತ್ತು ಆರ್ಥಿಕವಾಗಿ ಬಲಪಡಿಸುವ ರೀತಿಯಲ್ಲಿ ಹೇಗೆ ತಲುಪಿಸಬಹುದು? ಎಂಬುದೇ ನಮ್ಮ ಮುಂದಿರುವ ನಿಜವಾದ ಸವಾಲು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಡಿಸೆಂಬರ್ 2025ರ ವೇಳೆಗೆ 267 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ ಸಾಧಿಸಿದೆ ಮತ್ತು 2030ರ ಗುರಿಗಳನ್ನು ಪೂರೈಸುವ ಹಾದಿಯಲ್ಲಿದೆ ಎಂದು ಇದೇ ವೇಳೆ ಜಾಗತಿಕವಾಗಿ ಗಮನ ಸೆಳೆದರು. ಶುದ್ಧ ಇಂಧನ ಮತ್ತು ಸುಸ್ಥಿರತೆಯಲ್ಲಿ ನಮ್ಮ ಬಲವಾದ ದೇಶೀಯ ಉತ್ಪಾದನೆ, ಗ್ರಿಡ್ ಆಧುನೀಕರಣ, ಇಂಧನ ಸಂಗ್ರಹ ಪರಿಹಾರಗಳು ಮತ್ತು ಪರಮಾಣು ಶಕ್ತಿಗಾಗಿ ಉದಯೋನ್ಮುಖ ಚೌಕಟ್ಟುಗಳಿಂದ ಬೆಂಬಲಿತವಾಗಿದೆ. ಸುಸ್ಥಿರ ಮತ್ತು ಅಂತರ್ಗತ ಜಾಗತಿಕ ಇಂಧನ ಪರಿವರ್ತನೆಯನ್ನು ಸಕ್ರಿಯಗೊಳಿಸಲು ಬಂಡವಾಳ ಹಾಗೂ ಸರ್ಕಾರಗಳು, ಖಾಸಗಿ ವಲಯ ಮತ್ತು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ಗಳ ಸಹಯೋಗದ ಅಗತ್ಯವಿದೆ ಎಂದು ಜೋಶಿ ಅಭಿಪ್ರಾಯಪಟ್ಟರು.
2070ರ ವೇಳೆಗೆ ನಿವ್ವಳ-ಶೂನ್ಯ ಇಂಗಾಲ ಹೊರಸೂಸುವಿಕೆ ಸಾಧಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ ಸಚಿವ ಜೋಶಿ, ಭಾರತದ ವಿಧಾನವು “ವಸುಧೈವ ಕುಟುಂಬಕಂ-ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ” ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟಿದೆ ಎಂದು ಹೇಳಿದರು.
ಸುಸ್ಥಿರತೆ ಭಾರತದ ಒಂದು ಕಾರ್ಯತಂತ್ರ
ಭಾರತ ಸುಸ್ಥಿರತೆಯನ್ನು ಕೇವಲ ತಾಂತ್ರಿಕ ಬದಲಾವಣೆಯಾಗಿ ನೋಡದೆ ಆರ್ಥಿಕತೆ ಮತ್ತು ಸಮಾಜದ ಕಾರ್ಯತಂತ್ರದ ರೂಪಾಂತರವಾಗಿ ನೋಡುತ್ತದೆ ಮತ್ತು ಬೆಳವಣಿಗೆಗೆ ಅತ್ಯಂತ ವಿಶ್ವಾಸಾರ್ಹ ಹಾಗೂ ಕೈಗೆಟುಕುವ ಮತ್ತು ಭವಿಷ್ಯಕ್ಕೆ ಸಿದ್ಧವಾದ ಮಾರ್ಗವಾಗಿ ದೃಢ ನಿಶ್ಚಯದಿಂದ ನವೀಕರಿಸಬಹುದಾದ ಇಂಧನ ಮೂಲಗಳನ್ನು ಅನುಸರಿಸುತ್ತಿದೆ ಎಂದು ದೃಢಪಡಿಸಿದರು.
ಇದೇ ವೇಳೆ ಸಚಿವ ಪ್ರಲ್ಹಾದ ವಿವಿಧ ರಾಷ್ಟ್ರಗಳ ಕೈಗಾರಿಕಾ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ಮತ್ತು ಸಭೆ ಸಹ ನಡೆಸಿದರು. ಓಮನ್ ಪ್ರಧಾನಿ ಕಚೇರಿ ಆರ್ಥಿಕ ಸಲಹೆಗಾರ ಡಾ. ಸೈದ್ ಮೊಹಮ್ಮದ್ ಅಹ್ಮದ್ ಅಲ್ ಸಕ್ರಿ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸೌರ, ಪವನ, ಹಸಿರು ಹೈಡ್ರೋಜನ್ ಮತ್ತು ಇಂಧನ ಸಂಗ್ರಹದಲ್ಲಿ ಭಾರತದ ಮಹತ್ತರ ಸಾಧನೆ ಬಗ್ಗೆ ತಿಳಿಯಪಡಿಸಿದರು. ಭಾರತ-ಓಮನ್ ಸಿಇಪಿಎ ಮತ್ತು ಅಂತರರಾಷ್ಟ್ರೀಯ ಸೌರ ಒಕ್ಕೂಟ ಮತ್ತು ಒನ್ ಸನ್ ಒನ್ ವರ್ಲ್ಡ್ ಒನ್ ಗ್ರಿಡ್ ಬಗ್ಗೆ ಚರ್ಚೆ ಮಾಡಿದ್ದಾರೆ.
ಬೆಲ್ಜಿಯಂ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳು, ಯುರೋಪಿಯನ್ ವ್ಯವಹಾರಗಳು ಮತ್ತು ಅಭಿವೃದ್ಧಿ ಸಹಕಾರ ಸಚಿವ ಮ್ಯಾಕ್ಸಿಮ್ ಪ್ರೆವೋಟ್ ಅವರೊಂದಿಗೆ ಸಹ ಮಹತ್ವದ ಸಭೆ ನಡೆಸಿ, ಭಾರತ-ಬೆಲ್ಜಿಯಂ ಪಾಲುದಾರಿಕೆ ಬಗ್ಗೆ ಪುನರುಚ್ಚರಿಸಿದರು.
ಕುವೈತ್ನ ವಿದ್ಯುತ್, ನೀರು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಸುಬೈಹ್ ಅಬ್ದುಲ್ ಅಜೀಜ್ ಅಲ್-ಮುಖೈಝೀಮ್ ಅವರೊಂದಿಗೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆ ಸಂಬಂದ ಚರ್ಚಿಸಿದರು.
WEF ವಾರ್ಷಿಕ ಸಭೆಯ ಹೊರತಾಗಿ ಪ್ರಲ್ಹಾದ ಜೋಶಿ ಅವರು ಅಂತಾರಾಷ್ಟ್ರೀಯ ಸಹಕಾರ ಮತ್ತು ಶುದ್ಧ ಇಂಧನದಲ್ಲಿ ಹೂಡಿಕೆಯನ್ನು ಬಲಪಡಿಸಲು ಉನ್ನತ ಮಟ್ಟದ ದ್ವಿಪಕ್ಷೀಯ ಸಂವಾದ ನಡೆಸಿದರು. ಭಾರತದಲ್ಲಿ ದೀರ್ಘಕಾಲೀನ ಹವಾಮಾನ ಮತ್ತು ಶುದ್ಧ ಇಂಧನ ಹೂಡಿಕೆ ಹೆಚ್ಚಿಸುವತ್ತ ಗಮನಹರಿಸಿದ ಜೋಶಿ, ಲಾ ಕೈಸ್ಸೆಯ ಅಧ್ಯಕ್ಷ ಮತ್ತು ಸಿಇಒ ಚಾರ್ಲ್ಸ್ ಎಮಂಡ್ ಮತ್ತು ಸಿಒಒ ಶ್ರೀಮತಿ ಸಾರಾ ಬೌಚರ್ಡ್ ಅವರೊಂದಿಗೆ ಚರ್ಚೆ ನಡೆಸಿದರು. 2030ರ ವೇಳೆಗೆ ಗುಂಪಿನ ಬದ್ಧ USD 400 ಶತಕೋಟಿ ಹವಾಮಾನ ಕ್ರಿಯಾ ಹೂಡಿಕೆಗಳನ್ನು ಬಳಸಿಕೊಳ್ಳಲು “ಭಾರತದೊಂದಿಗೆ ಪಾಲುದಾರಿಕೆ” ವೃದ್ಧಿಗೆ ಪ್ರೋತ್ಸಾಹಿಸಿದರು.
ಐಕಿಯಾ ಚಿಲ್ಲರೆ ವ್ಯವಹಾರವನ್ನು ನಿರ್ವಹಿಸುವ ಇಂಗ್ಕಾ ಗ್ರೂಪ್ನ ಸಿಇಒ ಮತ್ತು ಅಧ್ಯಕ್ಷ ಜುವೆನ್ಸಿಯೊ ಮೇಜ್ಟು ಅವರನ್ನು ಭೇಟಿಯಾದ ಪ್ರಲ್ಹಾದ ಜೋಶಿ, ಅವರಲ್ಲಿ ಇಂಗ್ಕಾ ಗ್ರೂಪ್ ಭಾರತದ ನವೀಕರಿಸಬಹುದಾದ ಇಂಧನ ವಲಯವನ್ನು ವಿಶೇಷವಾಗಿ ಸೌರ, ಪವನ ಮತ್ತು ಹೈಬ್ರಿಡ್ ಪರಿಹಾರಗಳಲ್ಲಿ ಪ್ರವೇಶಿಸಲು ಆಸಕ್ತಿ ವ್ಯಕ್ತಪಡಿಸಿದೆ.
ಇಂಡಿಯಾ ಪೆವಿಲಿಯನ್ ಉದ್ಘಾಟನೆ
ದಾವೋಸ್ನ ವಿಶ್ವ ಆರ್ಥಿಕ ವೇದಿಕೆ ಸಭೆ ವೇಳೆ ಪ್ರಮುಖವಾಗಿ “ಇಂಡಿಯಾ ಪೆವಿಲಿಯನ್” ಸಹ ಉದ್ಘಾಟನೆ ಕಂಡಿತು. ಸಚಿವ ಪ್ರಹ್ಲಾದ್ ಜೋಶಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಮತ್ತು ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ವಿವಿಧ ರಾಜ್ಯಗಳ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಸಚಿವರು ಭಾಗವಹಿಸಿದ್ದು ವಿಶೇಷವಾಗಿತ್ತು.
ಇಂಡಿಯಾ ಪೆವಿಲಿಯನ್ ಉದ್ಘಾಟನೆ ವೇಳೆ ಸಚಿವ ಪ್ರಲ್ಹಾದ ಜೋಶಿ ‘ದಿ ಇಂಡಿಯಾ ಸ್ಟೋರಿ’ ಹೆಸರಿನ ಹಸಿರು ಹೂಡಿಕೆ ಕೈಪಿಡಿ ಸಹ ಬಿಡುಗಡೆ ಮಾಡಿದರು. ಇದು ಉತ್ಪಾದನೆ, ಮೂಲಸೌಕರ್ಯ, ನವೀಕರಿಸಬಹುದಾದ ಇಂಧನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿ ಭಾರತದ ಸಾಮರ್ಥ್ಯ ಹಾಗೂ 2047ರ ವಿಕಸಿತ ಭಾರತದ ದೃಷ್ಟಿಕೋನ ಮತ್ತು ಸುಸ್ಥಿರ ಮತ್ತು ಸಮಗ್ರ ಬೆಳವಣಿಗೆಗೆ ಬದ್ಧತೆಯನ್ನು ಪ್ರಸ್ತುತಪಡಿಸುತ್ತದೆ ಎಂದು ಜೋಶಿ ಪ್ರತಿಪಾದಿಸಿದರು.
ಭಾರತ NDC ಗುರಿಗಳಿಗಿಂತ ಐದು ವರ್ಷಗಳ ಮೊದಲೇ ಶೇ.50% ಪಳೆಯುಳಿಕೆ ರಹಿತ ಸ್ಥಾಪಿತ ವಿದ್ಯುತ್ ಸಾಮರ್ಥ್ಯವನ್ನು ಸಾಧಿಸಿದೆ. ಇಂಧನ ಪರಿವರ್ತನೆಯನ್ನು ಜನ-ಕೇಂದ್ರಿತ ಚಳುವಳಿಯಾಗಿ ಪರಿವರ್ತಿಸಿದೆ ಎಂದು ಪ್ರಲ್ಹಾದ ಜೋಶಿ ವಿದೇಶಿ ನಾಯಕರ ಗಮನ ಸೆಳೆದರು.
ಶೇ.8ರಷ್ಟು ಸೌರ ಸುಂಕ ಕಡಿಮೆ
ಭಾರತದಲ್ಲಿ ಸೌರ ಸುಂಕಗಳು ಸುಮಾರು ಶೇ.80ರಷ್ಟು ಕಡಿಮೆಗೊಳಿಸಿ ನವೀಕರಿಸಬಹುದಾದ ಇಂಧನ ಮತ್ತು ಸಂಗ್ರಹಣೆಗೆ ಒಟ್ಟು ನೀಡಿದೆ. ಹಸಿರು ಹೈಡ್ರೋಜನ್ ಮತ್ತು ಅಮೋನಿಯಾ ಜಾಗತಿಕವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿದ್ದು, ದೇಶೀಯ ಉತ್ಪಾದನಾ ಸಾಮರ್ಥ್ಯವು 144 GW ಗೆ ವಿಸ್ತರಣೆ ಕಂಡಿದೆ. ಭಾರತವನ್ನು ಕೇವಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ, “ವಿಕಸಿ ಭಾರತ 2047” ಕಡೆಗೆ ಪ್ರಯಾಣದಲ್ಲಿ ವಿಶ್ವಾಸಾರ್ಹ ಉತ್ಪಾದನಾ ಮತ್ತು ಹೂಡಿಕೆ ಕೇಂದ್ರವಾಗಿ ಸ್ಥಾನ ಪಡೆದಿದೆ ಎಂದು ಸಚಿವ ಪ್ರಲ್ಹಾದ ಜೋಶಿ ವಿಶ್ವ ಆರ್ಥಿಕ ವೇದಿಕೆ ಗಮನ ಸೆಳೆದರು.
ಬೆಂಗಳೂರು, (ಜನವರಿ 20): ಚಿಲ್ಲರೆ ಸಮಸ್ಯೆ ತಪ್ಪಿಸಲು ಪ್ರಯಾಣಿರಿಗೆ ಅನುಕೂಲವಾಗಲಿ ಎಂದು ಬಿಎಂಟಿಸಿಕೂಡ ಬಸ್ಗಳಲ್ಲಿ (BMTC Bus) ಕ್ಯೂರ್ ಕೋಡ್ ಅಳವಡಿಸಿದೆ. ಆದ್ರೆ, ಇದು ಪ್ರಯಾಣಿಕರಿಗೆ ಉಪಯೋಗವಾದ್ರೆ, ಕಂಡಕ್ಟರ್ಗಳು ಮಾತ್ರ ದುರುಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಹೌದು.. ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್ ಗಳು ಬಿಎಂಟಿಸಿ ಬಸ್ ನಲ್ಲಿರುವ ಯುಪಿಐ ಸ್ಕ್ಯಾನರ್ ಗಳನ್ನು ಕಿತ್ತು ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿ ತಮ್ಮ ಬ್ಯಾಂಕ್ ಅಕೌಂಟ್ ಗೆ ಲಕ್ಷಾಂತರ ರುಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಟಿವಿ9 ವರದಿ ಬಿತ್ತರಿಸಿದ ಬೆನ್ನಲ್ಲೇ ಬಿಎಂಟಿಸಿ ನಿಗಮ ನಡೆಸಿದ ತನಿಖೆಯಲ್ಲಿ ಕಂಡಕ್ಟರ್ ಗಳ ಕಳ್ಳಾಟ ಬಯಲಿಗೆ ಬಂದಿದ್ದು, ಈ ಸಂಬಂಧ ನಾಲ್ವರು ಕಂಡಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮಂಚೇಗೌಡ, ಸುಪ್ರೀತ, ಅಶ್ವಕ್ ಖಾನ್, ಸುರೇಶ್ ಅಮಾನತುಗೊಂಡ ನಿರ್ವಾಹಕರು.
ಮಂಚೇಗೌಡ, ಸುಪ್ರೀತ, ಅಶ್ವಕ್ ಖಾನ್, ಸುರೇಶ್ ಎನ್ನುವರು ಕನ್ನಡ ಬಾರದವರಿಗೆ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡಿ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿದ್ದಾರೆ. ಶಕ್ತಿ ಯೋಜನೆಯ ಫ್ರೀ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ಫ್ರೀ ಟಿಕೆಟ್ ಎಂದು ಪ್ರಿಂಟ್ ಮಾಡಲಾಗಿದೆ. ಇಂಗ್ಲಿಷ್ ನಲ್ಲಿ ಫ್ರೀ ಟಿಕೆಟ್ ಎಂದು ಪ್ರಿಂಟ್ ಮಾಡಿಲ್ಲ, ಇದನ್ನು ಬಂಡವಾಳ ಮಾಡಿಕೊಂಡು ಕನ್ನಡ ಬಾರದ ನಾರ್ಥ್ ಇಂಡಿಯನ್ಸ್, ಸೌತ್ ಇಂಡಿಯನ್ಸ್ ಗೆ ಶಕ್ತಿ ಯೋಜನೆಯ ಫ್ರೀ ಟಿಕೆಟ್ ನೀಡಿ ಹಣ ತಮ್ಮ ವೈಯಕ್ತಿಕ ಅಕೌಂಟ್ಗೆ ಹಾಕಿಸಿಕೊಂಡಿದ್ದಾರೆ. ಪ್ರತಿಯೊಬ್ಬರ ಅಕೌಂಟ್ ಪರಿಶೀಲನೆ ಮಾಡಿದಾಗ ನಾಲ್ವರು ಕಂಡಕ್ಟರ್ಗಳು ಸೇರಿ ಒಟ್ಟು 1 ಲಕ್ಷಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ತನಿಖೆಯಿಂದ ಬಯಲಿಗೆ ಬಂದಿದೆ.
ಡಿಪೋ 3ರ ಕಂಡಕ್ಟರ್ ಮಂಚೇಗೌಡ ಖಾತೆಗೆ 51 ಸಾವಿರ ಜಮಾ ಆದ್ರೆ, ಡಿಪೋ 11ರ ಕಂಡಕ್ಟರ್ ಸುಪ್ರೀತ ಖಾತೆಗೆ 30 ಸಾವಿರ ರೂ, ಡಿಪೋ 14ರ ಕಂಡಕ್ಟರ್ ಅಶ್ವಕ್ ಖಾನ್ ಖಾತೆಗೆ 3 ಸಾವಿರ ಹಾಗೂ ಡಿಪೋ 51ರ ಕಂಡಕ್ಟರ್ ಸುರೇಶ್ ಅಕೌಂಟ್ಗೆ 45 ಸಾವಿರ ರೂ ಜಮೆ ಆಗಿದೆ.
ತಮ್ಮ ಖಾತೆಗೆ ಹೇಗೆ ಹಣ ಹಾಕಿಸಿಕೊಳ್ಳುತ್ತಿದ್ರು?
ಇನ್ನೂ ಈ ಕಿಲಾಡಿ ಕಂಡಕ್ಟರ್ ಗಳು ಡಿಪೋದಿಂದ ಬಸ್ ಗಳು ಹೊರಗೆ ಬರ್ತಿದ್ದಂತೆ, ಬಸ್ ನಲ್ಲಿರುವ ಬಿಎಂಟಿಸಿ ನಿಗಮದ ಯುಪಿಐ ಸ್ಕ್ಯಾನರ್ ಗಳನ್ನು ಕಿತ್ತು ಇಟ್ಟುಕೊಳ್ಳುತ್ತಾರಂತೆ.ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕಂಡಕ್ಟರ್ ಗಳ ಬಳಿ ಕೇಳಿದಾಗ, ತಮ್ಮ ಮೊಬೈಲ್ ನಲ್ಲಿರುವ ಸ್ವಂತ ಅಕೌಂಟಿನ ಸ್ಕ್ಯಾನರ್ ಗಳನ್ನು ನೀಡಿ ಪ್ರಯಾಣಿಕರಿಂದ ತಮ್ಮ ಸ್ವಂತ ಅಕೌಂಟ್ ಗೆ ಹಣ ಹಾಕಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯುರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್ ಗಳು ಸಿಕ್ಕಿಬಿದ್ದಿದ್ದರು. ಇನ್ನೂ ಟಿವಿ9 ಈ ಬಗ್ಗೆ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಬಿಎಂಟಿಸಿ ಎಂಡಿ, ನಾಲ್ಕು ಜನ ಕಂಡಕ್ಟರ್ ಗಳನ್ನು ಮಾಡಿ ಆದೇಶ ಮಾಡಿದ್ದಾರೆ.
ಬಿಗ್ ಬಾಸ್ (BBK 12) ಮನೆಯಲ್ಲಿ ಗಿಲ್ಲಿ ನಟ ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ತುಂಬಾ ಇಷ್ಟಪಡುತ್ತಿದ್ದರು. ಅವರಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಎಷ್ಟೋ ಬಾರಿ ತಮಾಷೆಗೆ ಗಿಲ್ಲಿ ನಟ (Gilli Nata) ಅವರು ರಕ್ಷಿತಾ ಶೆಟ್ಟಿಗೆ ಹೊಡೆದಿದ್ದರು. ಒಂದು ವೇಳೆ ಆ ಜಾಗದಲ್ಲಿ ರಕ್ಷಿತಾ ಅಲ್ಲದೇ ಬೇರೆ ಯಾರಾದರೂ ಇದ್ದಿದ್ದರೆ ದೊಡ್ಡ ರಂಪಾಟ ಆಗುವ ಸಾಧ್ಯತೆ ಇರುತ್ತಿತ್ತು. ಆ ಬಗ್ಗೆ ರಕ್ಷಿತಾ ಶೆಟ್ಟಿ ಅವರು ಮಾತನಾಡಿದ್ದಾರೆ. ‘ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ ಇದ್ದೆವು. 24 ಗಂಟೆಯಲ್ಲಿ ಅವರು ಹಲವು ಬಾರಿ ನನಗೆ ಹೊಡೆಯುತ್ತಿದ್ದರು. ಅದನ್ನೆಲ್ಲ ಬಿಗ್ ಬಾಸ್ ಕಟ್ ಮಾಡುತ್ತಾರೆ ಎಂದುಕೊಂಡಿದ್ದೆ. ಈಗ ಮೊಬೈಲ್ನಲ್ಲಿ ನೋಡಿದೆ. ಅವರು ತಳ್ಳಿದಾಗ ನಾನು ಬಿದ್ದಿದ್ದಕ್ಕೆ ಎಷ್ಟು ನೋವಾಯಿತು ಗೊತ್ತಾ? ಅವರು ಹೊಡೆದಾಗ ನನಗೆ ಖುಷಿ ಆಗುತ್ತಿತ್ತು. ಬೇಜಾರು ಆಗುತ್ತಿರಲಿಲ್ಲ. ನಾನು ಎಂಜಾಯ್ ಮಾಡುತ್ತಿದ್ದೆ’ ಎಂದು ರಕ್ಷಿತಾ ಶೆಟ್ಟಿ (Rakshita Shetty) ಅವರು ಹೇಳಿದ್ದಾರೆ.