Headlines

ಜಾಗತಿಕ ಹೂಡಿಕೆಗೆ ಭಾರತ ವಿಶ್ವಾಸಾರ್ಹ ತಾಣ: ಹೂಡಿಕೆ ಒಪ್ಪಂದಕ್ಕೆ ಜೋಶಿ ಮಾತುಕತೆ ಫಲಪ್ರದ – Kannada News | Davos WEF: India a reliable destination for global investment; Pralhad Joshi holds important discussions with national leaders

ದಾವೋಸ್​​, ಜನವರಿ 20: ಭಾರತ ಪ್ರಸ್ತುತದಲ್ಲಿ ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಮತ್ತು ಭವಿಷ್ಯದ ಸುಭದ್ರ ತಾಣವಾಗಿ ಹೊರ ಹೊಮ್ಮುತ್ತಿದ್ದು, ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (WEF) ಎರಡನೇ ದಿನದ ಶೃಂಗ ಸಭೆ ಇದಕ್ಕೆ ಸಾಕ್ಷಿಯಾಯಿತು. 2026ರ ಶುರುವಿನಲ್ಲೇ ಈ ವಿಶ್ವ ಆರ್ಥಿಕ ವೇದಿಕೆ ಮಹತ್ವದ ಸಭೆಯಲ್ಲಿ ಮಂಗಳವಾರ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ವಿವಿಧ ರಾಷ್ಟ್ರಗಳ ಪ್ರತಿನಿಧಿಗಳ ಜತೆ ಭಾರತದೊಂದಿಗೆ ಹೂಡಿಕೆ ಒಪ್ಪಂದಕ್ಕೆ ಫಲಪ್ರದ ಮಾತುಕತೆ ಮತ್ತು…

Read More

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸಿ ಹಣ ಪೀಕುತ್ತಿದ್ದ ನಾಲ್ವರು ಕಂಡಕ್ಟರ್ ಸಸ್ಪೆಂಡ್ – Kannada News | BMTC suspends four conductors for misusing UPI ticketing system In Bengaluru

ಬೆಂಗಳೂರು, (ಜನವರಿ 20): ಚಿಲ್ಲರೆ ಸಮಸ್ಯೆ ತಪ್ಪಿಸಲು ಪ್ರಯಾಣಿರಿಗೆ ಅನುಕೂಲವಾಗಲಿ ಎಂದು ಬಿಎಂಟಿಸಿ ಕೂಡ ಬಸ್​ಗಳಲ್ಲಿ (BMTC Bus)  ಕ್ಯೂರ್ ಕೋಡ್ ಅಳವಡಿಸಿದೆ. ಆದ್ರೆ, ಇದು ಪ್ರಯಾಣಿಕರಿಗೆ ಉಪಯೋಗವಾದ್ರೆ, ಕಂಡಕ್ಟರ್​ಗಳು ಮಾತ್ರ ದುರುಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಹೌದು.. ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್ ಗಳು ಬಿಎಂಟಿಸಿ ಬಸ್ ನಲ್ಲಿರುವ ಯುಪಿಐ ಸ್ಕ್ಯಾನರ್ ಗಳನ್ನು ಕಿತ್ತು ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್…

Read More

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ ಶೆಟ್ಟಿ – Kannada News | Rakshita Shetty talks about her bond with Gilli Nata in Bigg Boss Kannada Season 12 show

ಬಿಗ್ ಬಾಸ್ (BBK 12) ಮನೆಯಲ್ಲಿ ಗಿಲ್ಲಿ ನಟ ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ತುಂಬಾ ಇಷ್ಟಪಡುತ್ತಿದ್ದರು. ಅವರಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಎಷ್ಟೋ ಬಾರಿ ತಮಾಷೆಗೆ ಗಿಲ್ಲಿ ನಟ (Gilli Nata) ಅವರು ರಕ್ಷಿತಾ ಶೆಟ್ಟಿಗೆ ಹೊಡೆದಿದ್ದರು. ಒಂದು ವೇಳೆ ಆ ಜಾಗದಲ್ಲಿ ರಕ್ಷಿತಾ ಅಲ್ಲದೇ ಬೇರೆ ಯಾರಾದರೂ ಇದ್ದಿದ್ದರೆ ದೊಡ್ಡ ರಂಪಾಟ ಆಗುವ ಸಾಧ್ಯತೆ ಇರುತ್ತಿತ್ತು. ಆ ಬಗ್ಗೆ ರಕ್ಷಿತಾ ಶೆಟ್ಟಿ ಅವರು ಮಾತನಾಡಿದ್ದಾರೆ. ‘ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ…

Read More

ರಾಯಚೂರಿನಲ್ಲಿ ಲಾರಿ, 2 ಗೂಡ್ಸ್ ವಾಹನಗಳ ಮಧ್ಯೆ ಸರಣಿ ಅಪಘಾತ: ಐವರು ಸಾವು

ರಾಯಚೂರು, ಜನವರಿ 20: ಲಾರಿ ಮತ್ತು ಎರಡು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ನಡೆದಿದೆ. ಮೃತರು ಹಾಗೂ ಗಾಯಾಳುಗಳ ಗುರುತು ಪತ್ತೆಯಾಗಿಲ್ಲ. ಭೀಕರ ಅಪಘಾತದಲ್ಲಿ ಕೆಲ ಕುರಿಗಳು ಕೂಡ ಸಾವನ್ನಪ್ಪಿವೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ಮಹಿಳೆಯರ ಒಳ ಉಡುಪು ಕದ್ದು ವಿಕೃತಾನಂದ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೈಕೋ ಯುವಕ – Kannada News | A Kerala based Youth Arrested For stealing women undergarments at Bengaluru

ಬೆಂಗಳೂರು, (ಜನವರಿ 20): ಇತ್ತೀಚೆಗೆ ಕರ್ನಾಟಕದಲ್ಲಿ (Karnataka) ಬ್ಯಾಂಕ್, ಎಟಿಎಂ ದರೋಡೆ ಪ್ರಕರಣಗಳು ನಡೆದಿವೆ. ಇದರ ಜೊತೆಗೆ ಮಹಿಳೆಯರ ಒಳ ಉಡುಪು ಕಳ್ಳತನ ಪ್ರಕರಣಗಳು ಸಹ ಬೆಳಕಿಗೆ ಬರುತ್ತಿವೆ. ಕಳೆದ ಸೆಪ್ಟೆಂಬರ್ ನಲ್ಲಿ ಹುಬ್ಬಳ್ಳಿಯಲ್ಲಿ (Hubballi) ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಸೈಕೋ ಕಳ್ಳ ಸಿಕ್ಕಿಬಿದ್ದಿದ್ದ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೂ ಸಹ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಹೌದು… ಮಹಿಳೆಯರು ಮತ್ತು ಯುವತಿಯರ ಒಳ ಉಡುಪುಗಳನ್ನು ಕದ್ದು ವಿಲಕ್ಷಣವಾಗಿ ವರ್ತಿಸುತ್ತಿದ್ದ ‘ಸೈಕೋ’ ಕಳ್ಳ ಇದೀಗ ಬೆಂಗಳೂರಿನ…

Read More

ಗಿಲ್ಲಿನ ಗಗನಾ ಅವಾಯ್ಡ್ ಮಾಡಿದ್ದು ಯಾಕೆ? ಕಾವ್ಯಾ ಹೇಳೋದು ಕೇಳಿ.. – Kannada News | Kavya Shaiva says This is why Gagana Bhari avoided Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರ ಬಗ್ಗೆ ಎಲ್ಲ ಕಡೆ ಚರ್ಚೆ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ (Kavya Shaiva) ಅವರು ಕ್ಲೋಸ್ ಆಗಿದ್ದರು. ಅದರಿಂದ ಕಾವ್ಯಾ ಅವರಿಗೆ ಹಲವು ಬಾರಿ ಕಿರಿಕಿರಿ ಆಗಿದ್ದು ಕೂಡ ಉಂಟು. ಯಾವಾಗಲೂ ಗಿಲ್ಲಿ ತಮಾಷೆ ಮಾಡುತ್ತಾರೆ. ಆದರೆ ಅದು ಕೆಲವೊಮ್ಮೆ ಅತಿಯಾಗುತ್ತದೆ. ಇದರಿಂದಾಗಿ ಕಾವ್ಯಾ ಟ್ರೋಲ್ ಆಗುವ ಸನ್ನಿವೇಶ ಕೂಡ ಎದುರಾಗುತ್ತದೆ. ಈ…

Read More

ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು – Kannada News | Bengaluru Accidental Fire: Sheds Housing Suspected Bangladeshi Migrants Gutted

ಆನೇಕಲ್​​, ಜನವರಿ 20: ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್​ಗಳಿಗೆ ಬೆಂಕಿ ಬಿದ್ದಿರುವಂತಹ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿ ಬಳಿಯ ಎಸ್​​.ಬಿಂಗೀಪುರ ಕೆರೆ ಸಮೀಪ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಶೆಡ್​ಗಳು ಹೊತ್ತಿ ಉರಿದಿವೆ. ಒಂದು ವಾರದ ಹಿಂದೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಶಂಕಿತ ಬಾಂಗ್ಲಾ ವಲಸಿಗರನ್ನು ತೆರವುಗೊಳಿಸಿದ್ದರು. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಂಕಿತ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತಷ್ಟು…

Read More

ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ – Kannada News | Bengaluru Pay and Park: Malleswaram Sampige Rd Shoppers Face New Parking Fees

ಬೆಂಗಳೂರು, ಜನವರಿ 20: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೇ ಆ್ಯಂಡ್ ಪಾರ್ಕ್ (Pay and Park) ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಹಾಗಾಗಿ ಇದೀಗ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್​ ಮಲ್ಲೇಶ್ವರನ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಮಲ್ಲೇಶ್ವರನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್. ಸಂಪಿಗೆ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳು ಸದಾ ವಿವಿಧ ಚಟುವಟಿಕೆಗಳಿಂದ ಗಿಜುಗುಡುತ್ತಿರುತ್ತವೆ….

Read More

ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ – Kannada News | Indian economy accelerated while world slowed down, says Pralhad Joshi

ನವದೆಹಲಿ, ಜನವರಿ 20: ಜಗತ್ತಿನ ಆರ್ಥಿಕತೆ ಹಿನ್ನಡೆ ಅನುಭವಿಸುತ್ತಿರುವ ಹೊತ್ತಿನಲ್ಲೂ ಭಾರತವು ತನ್ನ ಬೆಳವಣಿಗೆಯ ವೇಗ ಹೆಚ್ಚಿಸಿದೆ ಎಂದು ಕೇಂದ್ರ ನವೀಕರಣ ಇಂಧನ ಸಚಿವ ಪ್ರಹ್ಲಾದ್ ಜೋಷಿ (Pralhad Joshi) ಹೇಳಿದ್ದಾರೆ. ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ (WEF Summit 2026, Davos) ಪ್ರಹ್ಲಾದ್ ಜೋಷಿ ಮಾತನಾಡುತ್ತಾ, ಭಾರತದ ಆರ್ಥಿಕ ವ್ಯವಸ್ಥೆ ಸುದೃಢವಾಗಿರುವುದನ್ನು ಎತ್ತಿತೋರಿಸಿದ್ದಾರೆ. ‘ಜಾಗತಿಕ ಸರಬರಾಜು ಸರಪಳಿಗಳಿಗೆ ಧಕ್ಕೆಯಾದಾಗ ಭಾರತವು ದೂರದೃಷ್ಟಿಯೊಂದಿಗೆ ತನ್ನ ಅಡಿಪಾಯಗಳನ್ನು ಭದ್ರಗೊಳಿಸುವ ಮೂಲಕ ಮತ್ತು ತನ್ನ…

Read More

ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತ: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು – Kannada News | Koppal’s Hirebaganal: Factory Smoke Turns Crops Black, Farmers Suffer and Protest

ಕೊಪ್ಪಳ, ಜನವರಿ 20: ಕೊಪ್ಪಳ (Koppal) ಜಿಲ್ಲೆ ಕಾರ್ಖಾನೆಗಳ (Factory) ಊರು. ಈ ಜಿಲ್ಲೆಯಲ್ಲಿ ಕಾರ್ಖಾನೆ ವಿರೋಧಿಸಿ ಕಳೆದ 80 ದಿನಗಳಿಂದ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆ ಕಾರ್ಖಾನೆಗಳ ಹೊಗೆಯಿಂದ ಆ ಗ್ರಾಮದ ಜನ ರೋಸಿ ಹೋಗಿದ್ದಾರೆ. ನಿನ್ನೆ ಆ ಗ್ರಾಮದ ಜನ ಕಾರ್ಖಾನೆ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದರು. ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದ ಏನೆಲ್ಲಾ ಸಮಸ್ಯೆ ಆಗತ್ತೆ ಅನ್ನೊದನ್ನ ಬಿಚ್ಚಿಟ್ಟಿದ್ದರು. ಸಭೆಯಲ್ಲಿ ಅಧಿಕಾರಿಗಳು ಇನ್ಮುಂದೆ ಹೊಗೆ ಬಿಡಲ್ಲ ಎಂದು ಬರೆದುಕೊಟ್ಟಿದ್ದರು. ಆದರೂ ಆ ಗ್ರಾಮದಲ್ಲಿ…

Read More