ಗಿಲ್ಲಿನ ಗಗನಾ ಅವಾಯ್ಡ್ ಮಾಡಿದ್ದು ಯಾಕೆ? ಕಾವ್ಯಾ ಹೇಳೋದು ಕೇಳಿ.. – Kannada News | Kavya Shaiva says This is why Gagana Bhari avoided Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರ ಬಗ್ಗೆ ಎಲ್ಲ ಕಡೆ ಚರ್ಚೆ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ (Kavya Shaiva) ಅವರು ಕ್ಲೋಸ್ ಆಗಿದ್ದರು. ಅದರಿಂದ ಕಾವ್ಯಾ ಅವರಿಗೆ ಹಲವು ಬಾರಿ ಕಿರಿಕಿರಿ ಆಗಿದ್ದು ಕೂಡ ಉಂಟು. ಯಾವಾಗಲೂ ಗಿಲ್ಲಿ ತಮಾಷೆ ಮಾಡುತ್ತಾರೆ. ಆದರೆ ಅದು ಕೆಲವೊಮ್ಮೆ ಅತಿಯಾಗುತ್ತದೆ. ಇದರಿಂದಾಗಿ ಕಾವ್ಯಾ ಟ್ರೋಲ್ ಆಗುವ ಸನ್ನಿವೇಶ ಕೂಡ ಎದುರಾಗುತ್ತದೆ. ಈ ಮೊದಲು ಗಿಲ್ಲಿ ಜೊತೆ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದ ಗಗನಾ (Gagana Bhari) ಅವರನ್ನೂ ಜನರು ಟ್ರೋಲ್ ಮಾಡಿದ್ದರು. ಆ ಬಗ್ಗೆ ಈಗ ಕಾವ್ಯಾ ಶೈವ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಇದರ ಬಗ್ಗೆ ನಾನು ಮತ್ತು ಗಿಲ್ಲಿ ಬಿಗ್ ಬಾಸ್ ಮನೆಯೊಳಗೆ ಮಾತನಾಡಿದ್ದೆವು. ಅದು ಪ್ರಸಾರ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ಪ್ರಾಯಶಃ ಗಗನಾ ಈಗ ಗಿಲ್ಲಿಯನ್ನು ಯಾಕೆ ಅವಾಯ್ಡ್ ಮಾಡಿರಬಹುದು? ಒಂದು ಸ್ನೇಹ ಜನರಿಗೆ ಇಷ್ಟ ಆಗಿರುತ್ತದೆ. ಅದು ಬೇರೆ ರೀತಿ ಬಿಂಬಿತ ಆಗುತ್ತಿದೆ ಎಂದಾಗ ಹುಡುಗಿಯಾಗಿ ಗಗನಾ ತನ್ನ ನಿರ್ಧಾರ ತೆಗೆದುಕೊಂಡಿದ್ದಾಳೆ ಅಂತ ಹೇಳಲು ನಾನು ಇಷ್ಟಪಡುತ್ತೇನೆ’ ಎಂದಿದ್ದಾರೆ ಕಾವ್ಯಾ ಶೈವ.

‘ಹಾಗಂತ, ನನಗೆ ನೀವು ಪದೇಪದೇ ಏನೋ ಹೇಳಿದರೆ ನಾನು ಅವಾಯ್ಡ್ ಮಾಡುತ್ತೇನೆ ಅಂತೇನಿಲ್ಲ. ನಾನು ಗಿಲ್ಲಿ ನಂಬರ್ ಬ್ಲಾಕ್ ಮಾಡುತ್ತೇನೆ ಅಂತ ಹೇಳಿದ್ದನ್ನು ಕೂಡ ಜನರು ಸೀರಿಯಸ್ ಆಗಿ ತೆಗೆದುಕೊಂಡಿದ್ದಾರೆ. ಸ್ನೇಹದಲ್ಲಿ ನಾವು ಜಗಳ ಆಡುತ್ತಿದ್ವಿ, ಇಷ್ಟಪಡುತ್ತಿದ್ವಿ. ರೇಗಿಸಿದರೆ ಬ್ಲಾಕ್ ಮಾಡುತ್ತೇನೆ ಎಂಬುದನ್ನು ನಾನು ಯಾವ ಉದ್ದೇಶದಲ್ಲಿ ಹೇಳಿದ್ದೇನೆ ಅಂತ ನಿಮಗೆ ಗೊತ್ತಿದೆ. ಅದನ್ನು ನೀವು ಸೀರಿಯಸ್ ಆಗಿ ತೆಗೆದುಕೊಂಡರೆ, ಅದಕ್ಕೆ ನಾನು ಏನು ಹೇಳಬೇಕು ಎಂಬುದು ಗೊತ್ತಿಲ್ಲ’ ಎಂದಿದ್ದಾರೆ ಕಾವ್ಯಾ.

‘ನಮ್ಮ ಸ್ನೇಹ ಬಿಗ್ ಬಾಸ್ ಮನೆ ಒಳಗೆ ಹೇಗೆ ಇತ್ತೋ ಹೊರಗಡೆ ಕೂಡ ಹಾಗೆಯೇ ಮುಂದುವರಿಯುತ್ತದೆ. ಆ ಸ್ನೇಹ ಮುರಿಯಲು ನನಗೆ ಸೂಕ್ತ ಕಾರಣಗಳು ಇಲ್ಲ. ನಾನು ಏನು ಮಾಡಿದರೂ ತಪ್ಪಾಗಿ ಕಾಣಿಸುತ್ತಿದೆ. ನಾನು ಗರಗಸದ ರೀತಿ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡಿದ್ದೇನೆ. ಆದರೂ ಪರವಾಗಿಲ್ಲ. ನೆಗೆಟಿವ್ ಆಗುತ್ತದೆ ಎಂಬ ಕಾರಣಕ್ಕೆ ನಾನು ಏನನ್ನೂ ಬದಲಾಯಿಸಿಕೊಳ್ಳಲ್ಲ’ ಎಂದು ಕಾವ್ಯಾ ಶೈವ ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು

ಗಿಲ್ಲಿ ನಟ, ಕಾವ್ಯಾ ಶೈವ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ ಮತ್ತು ಮ್ಯೂಟೆಂಟ್ ರಘು ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿದ್ದರು. ಕಾವ್ಯಾ ಮತ್ತು ಗಿಲ್ಲಿ ಅವರು ಫಿನಾಲೆ ತನಕ ಯಾವುದೇ ಕಿರಿಕ್ ಇಲ್ಲದೇ ಸ್ನೇಹ ಮುಂದುವರಿಸಿದ್ದನ್ನು ಕಂಡು ಅವರ ಅಭಿಮಾನಿಗಳಿಗೆ ಖುಷಿ ಆಗಿತ್ತು. ನಿಜ ಜೀವನದಲ್ಲಿಯೂ ಕಾವ್ಯಾ-ಗಿಲ್ಲಿ ಜೋಡಿ ಆಗಲಿ ಎಂಬ ಆಸೆ ಅನೇಕ ಅಭಿಮಾನಿಗಳಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು – Kannada News | Bengaluru Accidental Fire: Sheds Housing Suspected Bangladeshi Migrants Gutted

ಆನೇಕಲ್​​, ಜನವರಿ 20: ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್​ಗಳಿಗೆ ಬೆಂಕಿ ಬಿದ್ದಿರುವಂತಹ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿ ಬಳಿಯ ಎಸ್​​.ಬಿಂಗೀಪುರ ಕೆರೆ ಸಮೀಪ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಶೆಡ್​ಗಳು ಹೊತ್ತಿ ಉರಿದಿವೆ. ಒಂದು ವಾರದ ಹಿಂದೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಶಂಕಿತ ಬಾಂಗ್ಲಾ ವಲಸಿಗರನ್ನು ತೆರವುಗೊಳಿಸಿದ್ದರು. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಂಕಿತ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ – Kannada News | Bengaluru Pay and Park: Malleswaram Sampige Rd Shoppers Face New Parking Fees

ಬೆಂಗಳೂರು, ಜನವರಿ 20: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೇ ಆ್ಯಂಡ್ ಪಾರ್ಕ್ (Pay and Park) ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಹಾಗಾಗಿ ಇದೀಗ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್​ ಮಲ್ಲೇಶ್ವರನ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಮಲ್ಲೇಶ್ವರನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್. ಸಂಪಿಗೆ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳು ಸದಾ ವಿವಿಧ ಚಟುವಟಿಕೆಗಳಿಂದ ಗಿಜುಗುಡುತ್ತಿರುತ್ತವೆ. ಆದರೆ ಶಾಪಿಂಗ್ ಅಂತಾ ಕಾರು, ಬೈಕ್​ಗಳಲ್ಲಿ ಬರುವ ಜನರು ಮಾತ್ರ ಶೀಘ್ರದಲ್ಲೇ ಪಾರ್ಕಿಂಗ್​​​ ಅಂತಲೇ ಹೆಚ್ಚುವರಿ ಹಣ ತೆರಬೇಕು.

ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರಿನ ಮಲ್ಲೇಶ್ವರಂ ಐಕಾನಿಕ್ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರಿಗೆ ಅಚ್ಚುಮೆಚ್ಚು. ಕಾರು, ಬೈಕ್​ಗಳಲ್ಲಿ ಶಾಪಿಂಗ್ ಅಂತಾ​ ಇಲ್ಲಿಗೆ ಬರುತ್ತಿದ್ದ ಗ್ರಾಹಕರು ಉಚಿತವಾಗಿ ವಾಹನಗಳನ್ನ ಪಾರ್ಕಿಂಗ್​ ಮಾಡಿ ಹೋಗುತ್ತಿದ್ದರು. ಆದರೆ ಈ ರಸ್ತೆಯಲ್ಲಿ ಪೇ ಆ್ಯಂಡ್​ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡುವುದಕ್ಕೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಮುಂದಾಗಿದೆ.

ಇದನ್ನೂ ಓದಿ: Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ವಾಹನ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!

ಇನ್ನು ಪಶ್ಚಿಮ ನಗರ ಪಾಲಿಕೆ ಟೆಂಡರ್ ಆಹ್ವಾನ ಮಾಡಿದ್ದು, ಸಂಪಿಗೆ ರಸ್ತೆ, 11,15 ಹಾಗೂ 18ನೇ ಅಡ್ಡರಸ್ತೆಗಳಲ್ಲಿ ಪಾರ್ಕಿಂಗ್​ಗೆ ಶುಲ್ಕ ಸಂಗ್ರಹಿಸಲಿದೆ. ವಾರ್ಷಿಕ ಪರವಾನಿಗೆ ಪಡೆಯಲು ಬಯಸುವ ಏಜೆನ್ಸಿಗಳಿಗೆ 2.20 ಕೋಟಿ ರೂಪಾಯಿಗಳ ಶುಲ್ಕವನ್ನ ನಿಗದಿ ಮಾಡಿದೆ. ಆದರೆ ಪಾಲಿಕೆ ನಿರ್ಧಾರದ ವಿರುದ್ಧ ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ವೈಟ್​ ಟ್ಯಾಪಿಂಗ್​ ರಸ್ತೆಗಳಲ್ಲೆಲ್ಲ ಶೀಘ್ರ ಪೇ ಆ್ಯಂಡ್​ ಪಾರ್ಕಿಂಗ್​? ದುಬಾರಿ ವೆಚ್ಚ ಸರಿದೂಗಿಸಲು ಜಿಬಿಎ ಹೊಸ ಪ್ಲಾನ್

ಬಟ್ಟೆ, ಚಪ್ಪಲಿ, ಅಲಂಕಾರಿಕ ವಸ್ತುಗಳು, ಆಹಾರ ಉತ್ಪನ್ನಗಳ ಖರೀದಿಗೆ ಮುಗಿಬೀಳುತ್ತಿದ್ದ ಗ್ರಾಹಕರಿಗೆ ಸಂಪಿಗೆ ರಸ್ತೆ ಮತ್ತಷ್ಟು ದುಬಾರಿಯಾಗಲಿದೆ. ಉಚಿತವಾಗಿ ಪಾರ್ಕ್ ಮಾಡಿ ಹೋಗುತ್ತಿದ್ದ ಜನರಿಗೆ ಶೀಘ್ರದಲ್ಲೇ ಈ ಹೊರೆ ಬಿಸಿಮುಟ್ಟಿಸಲಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ – Kannada News | Indian economy accelerated while world slowed down, says Pralhad Joshi

ನವದೆಹಲಿ, ಜನವರಿ 20: ಜಗತ್ತಿನ ಆರ್ಥಿಕತೆ ಹಿನ್ನಡೆ ಅನುಭವಿಸುತ್ತಿರುವ ಹೊತ್ತಿನಲ್ಲೂ ಭಾರತವು ತನ್ನ ಬೆಳವಣಿಗೆಯ ವೇಗ ಹೆಚ್ಚಿಸಿದೆ ಎಂದು ಕೇಂದ್ರ ನವೀಕರಣ ಇಂಧನ ಸಚಿವ ಪ್ರಹ್ಲಾದ್ ಜೋಷಿ (Pralhad Joshi) ಹೇಳಿದ್ದಾರೆ. ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ (WEF Summit 2026, Davos) ಪ್ರಹ್ಲಾದ್ ಜೋಷಿ ಮಾತನಾಡುತ್ತಾ, ಭಾರತದ ಆರ್ಥಿಕ ವ್ಯವಸ್ಥೆ ಸುದೃಢವಾಗಿರುವುದನ್ನು ಎತ್ತಿತೋರಿಸಿದ್ದಾರೆ.

‘ಜಾಗತಿಕ ಸರಬರಾಜು ಸರಪಳಿಗಳಿಗೆ ಧಕ್ಕೆಯಾದಾಗ ಭಾರತವು ದೂರದೃಷ್ಟಿಯೊಂದಿಗೆ ತನ್ನ ಅಡಿಪಾಯಗಳನ್ನು ಭದ್ರಗೊಳಿಸುವ ಮೂಲಕ ಮತ್ತು ತನ್ನ ಸಾಮರ್ಥ್ಯಗಳನ್ನು ಹೆಚ್ಚಿಸುವ ಮೂಲಕ ಆರ್ಥಿಕ ಕ್ಷಮತೆಯನ್ನು ನಿರ್ಮಿಸಿದೆ’ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರೂ ಆದ ಜೋಷಿ ಟ್ವೀಟ್ ಮಾಡಿದ್ದಾರೆ.

ಪ್ರಹ್ಲಾದ ಜೋಷಿ ಅವರ ಎಕ್ಸ್ ಪೋಸ್ಟ್

‘ಸರ್ಕಾರದ ಸ್ಥಿರ ನೀತಿ, ಸುಧಾರಣೆಗಳು, ಉತ್ತಮ ಇಕೋಸಿಸ್ಟಂ ನಿರ್ಮಾಣಗೊಂಡಿರುವ ಫಲವಾಗಿ ಭಾರತವು ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಸ್ಥಳವೆನಿಸಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ. ಹೂಡಿಕೆದಾರರಿಗೆ ಸ್ಥಿರ ಲಾಭ ತರುತ್ತಿರುವುದು ಮಾತ್ರವಲ್ಲ, ದೂರಗಾಮಿ ಬೆಳವಣಿಗೆಗೆ ಸಹಕಾರಿಯಾಗುವ ನಾವೀನತ್ಯೆ, ವಿಸ್ತರಣೆ ಹಾಗೂ ಸುಸ್ಥಿರ ಮೌಲ್ಯ ಸೃಷ್ಟಿ ಮಾಡುತ್ತಿದೆ’ ಎಂದು ಪ್ರಲ್ಹಾದ್ ಜೋಷಿ ವಿವರಿಸಿದ್ದಾರೆ.

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು

ಜನಸಂಖ್ಯೆ ಶೇ. 17; ಮಾಲಿನ್ಯ ಹೊರಸೂಸುವಿಕೆ ಶೇ. 4 ಮಾತ್ರ

ಡಾವೋಸ್ ಸಮಿಟ್​ನಲ್ಲಿ ಮಾತನಾಡುತ್ತಿದ್ದ ನವೀಕರಣ ಇಂಧನ ಸಚಿವ ಪ್ರಲ್ಹಾದ್ ಜೋಷಿ ಅವರು ಭಾರತ ಅಭಿವೃದ್ಧಿಶೀಲ ಆರ್ಥಿಕತೆಯಾದರೂ ಪರಿಸರ ಮಾಲಿನ್ಯಕ್ಕಾಗಿ ಪಡುತ್ತಿರುವ ಶ್ರಮ ಹಾಗೂ ಆ ನಿಟ್ಟಿನಲ್ಲಿ ಮಾಡಿದ ಸಾಧನೆಯನ್ನು ತಿಳಿಸಿದ್ದಾರೆ.

ವಿಶ್ವದ ಶೇ. 17ರಷ್ಟು ಜನಸಂಖ್ಯೆಯನ್ನು ಭಾರತ ಹೊಂದಿದೆ. ಆದರೆ, ಜಾಗತಿಕವಾಗಿ ಹೊರಸೂಸುವ ಮಾಲಿನ್ಯದಲ್ಲಿ ಭಾರತದ ಪಾಲು ಶೇ. 4 ಮಾತ್ರ ಎಂದು ಜೋಷಿ ಹೇಳಿದ್ದಾರೆ.

ಇದನ್ನೂ ಓದಿ: ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ

ಭಾರತದಲ್ಲಿ ಸ್ವಚ್ಛ ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಇರುವ ವಿಪುಲ ಅವಕಾಶಗಳ ಬಗ್ಗೆ ಸಮಿಟ್​ನಲ್ಲಿ ಜೋಷಿ ಪ್ರಸ್ತಾಪ ಮಾಡಿದ್ದಾರೆ. ಸಚಿವರು ಈ ಸಂದರ್ಭದಲ್ಲಿ ಕೆನಡಾ ಮೂಲದ ಲಾ ಕೇಸ್ಸೆ (La Caisse) ಎನ್ನುವ ಕಂಪನಿಯ ಸಿಇಒ ಹಾಗೂ ಸಿಒಒ ಅವರುಗಳೊಂದಿಗೆ ಹೂಡಿಕೆ ವಿಚಾರವಾಗಿ ಚರ್ಚೆ ಕೂಡ ನಡೆಸಿದರು. 2030ರೊಳಗೆ ಹವಾಮಾನ ಬದಲಾವಣೆ ಎದುರಿಸಬಲ್ಲ ಕಾರ್ಯಕ್ರಮಗಳಲ್ಲಿ 400 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಈ ಕಂಪನಿ ಬದ್ಧವಾಗಿದೆ. ಈ ಕಾರ್ಯದಲ್ಲಿ ಭಾರತದೊಂದಿಗೆ ಜೊತೆಯಾಗಬೇಕೆಂದು ಜೋಷಿ ಈ ಸಂದರ್ಭದಲ್ಲಿ ಶಿಫಾರಸು ಮಾಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತ: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು – Kannada News | Koppal’s Hirebaganal: Factory Smoke Turns Crops Black, Farmers Suffer and Protest

ಕೊಪ್ಪಳ, ಜನವರಿ 20: ಕೊಪ್ಪಳ (Koppal) ಜಿಲ್ಲೆ ಕಾರ್ಖಾನೆಗಳ (Factory) ಊರು. ಈ ಜಿಲ್ಲೆಯಲ್ಲಿ ಕಾರ್ಖಾನೆ ವಿರೋಧಿಸಿ ಕಳೆದ 80 ದಿನಗಳಿಂದ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆ ಕಾರ್ಖಾನೆಗಳ ಹೊಗೆಯಿಂದ ಆ ಗ್ರಾಮದ ಜನ ರೋಸಿ ಹೋಗಿದ್ದಾರೆ. ನಿನ್ನೆ ಆ ಗ್ರಾಮದ ಜನ ಕಾರ್ಖಾನೆ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದರು. ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದ ಏನೆಲ್ಲಾ ಸಮಸ್ಯೆ ಆಗತ್ತೆ ಅನ್ನೊದನ್ನ ಬಿಚ್ಚಿಟ್ಟಿದ್ದರು. ಸಭೆಯಲ್ಲಿ ಅಧಿಕಾರಿಗಳು ಇನ್ಮುಂದೆ ಹೊಗೆ ಬಿಡಲ್ಲ ಎಂದು ಬರೆದುಕೊಟ್ಟಿದ್ದರು. ಆದರೂ ಆ ಗ್ರಾಮದಲ್ಲಿ ಹೊಗೆ ಮಾತ್ರ ಕಡಿಮೆ ಆಗಿಲ್ಲ. ಕಾರ್ಖಾನೆಗಳು ಬಿಡುವ ಹೊಗೆಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ಜಮೀನುಗಳಲ್ಲಿ ಬೆಳೆದ ಬೆಳೆಗಳು ಕಪ್ಪು ಬಣ್ಣಕ್ಕೆ ತಿರುಗಿವೆ. ಇದರಿಂದ ರೋಸಿಹೋದ ರೈತರು ಇದೀಗ ಗವಿ ಸಿದ್ದಪ್ಪನ ಮೊರೆ ಹೋಗಲು ಸಿದ್ಧರಾಗಿದ್ದಾರೆ.

ರೈತರಿಗೆ ಸಂಕಷ್ಟ ತಂದಿಟ್ಟ ಕಾರ್ಖಾನೆಗಳ ಹೊಗೆ

ಕೊಪ್ಪಳ ತಾಲೂಕಿನ ಹಿರೇಬಗನಾಳ ಗ್ರಾಮ ಕಾರ್ಖಾನೆಗಳಿಂದ ನಲುಗಿ ಹೋಗಿದೆ. ಹೀರೆಬಗನಾಳ ಗ್ರಾಮದ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಕಾರ್ಖಾನೆಗಳಿವೆ. ಕಾರ್ಖಾನೆಗಳು ಬಿಡುವ ಹೊಗೆಯಿಂದ ಇದೀಗ ರೈತರಿಗೆ ಸಂಕಷ್ಟಕ್ಕೆ ತಂದಿಟ್ಟಿದೆ. ಹೊಗೆಯಿಂದ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ, ಈರುಳ್ಳಿ ಬೆಳೆಗಳು ಕಪ್ಪು ಬಣ್ಣಕ್ಕೆ ತಿರುಗಿವೆ. ಬೆಳೆಗಳ ಮೇಲೆ ಕಪ್ಪು ಬೂದಿ ಬಂದು ಕೂತಿದೆ. ಇದರಿಂದ ಜಾನುವಾಗಳು ಸಹ ಬೆಳೆ ತಿನ್ನುವ ಪರಿಸ್ಥಿತಿಯಲ್ಲಿ ಇಲ್ಲದಂತಾಗಿದೆ.

ಇದನ್ನೂ ಓದಿ: ಮತ್ತೆ‌ ಮುನ್ನಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು

ಗ್ರಾಮದ ಬಹುತೇಕ ಜಮೀನುಗಳು ಕಪ್ಪು ಬೂದಿಯಿಂದ ನಲುಗಿವೆ. ಹಿರೇಬಗನಾಳ ಗ್ರಾಮದ ಗವಿಸಿದ್ದಪ್ಪ ಪಲ್ಲೇದ್ ಅನ್ನೋ ರೈತ ಜಾನುವಾರುಗಳಿಗಾಗಿ ಮೆಕ್ಕೆಜೋಳ ಬೆಳದಿದ್ದರು. ಆದರೆ ಇದೀಗ ಮೆಕ್ಕೆಜೋಳ ಸಂಪೂರ್ಣ ಕಪ್ಪಾಗಿದೆ. ಮೆಕ್ಕೆಜೋಳ ಎಲೆಯ ಮೇಲೆಲ್ಲಾ ಕಪ್ಪು ಧೂಳು ಬಂದು ಕೂತಿದೆ. ನಿನ್ನೆ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳ ಸಿಬ್ಬಂದಿಯನ್ನ ಕರೆದು ತರಾಟೆಗೆ ತೆಗೆದುಕೊಂಡರು. ನಾಳೆಯಿಂದಲೆ ಹೊಗೆ ಬಂದ್ ಮಾಡುವಂತೆ ಸಹಿ ಮಾಡಿಸಿಕೊಂಡಿದ್ದರು. ಅಧಿಕಾರಿಗಳ ಸಹಿ ಮಾಡಿದ ಬಳಿಕ ಇಂದು ಟಿವಿ9 ರಿಯಾಲಿಟಿ ಚೆಕ್ ಮಾಡಿದ್ದು, ಕಾರ್ಖಾನೆಗಳ ಹೊಗೆಯಿಂದಾದ ಸಮಸ್ಯೆಯನ್ನ ತೆರೆದಿಟ್ಟಿದೆ.

ಗವಿ ಸಿದ್ದೇಶ್ವರ ಸ್ವಾಮೀಜಿಗಳ ಮೊರೆ

ನಿನ್ನೆ ಹಿರೇಬಗನಾಳ ಗ್ರಾಮದ ಜನ ಗ್ರಾಮದ ಸುತ್ತಮುತ್ತ ಇರುವ ವನ್ಯ ಸ್ಟೀಲ್, ಐಎಲ್​ಸಿ, ಪಿಬಿಎಸ್, ಠಾಕೂರ್ ಸೇರಿ ಹತ್ತಕ್ಕೂ ಹೆಚ್ಚು ಕಾರ್ಖಾನೆಗಳಿವೆ. ಈ ಕಾರ್ಖಾನೆಗಳಿಂದ ಕಳೆದ ಹಲವು ವರ್ಷಗಳಿಂದ ಗ್ರಾಮದ ಜನ ನರಕ ಅನುಭವಿಸುತ್ತಿದ್ದಾರೆ. ನಿನ್ನೆ ಕಾರ್ಖಾನೆ ಅಧಿಕಾರಿಗಳನ್ನ ಕರೆದು ತರಾಟೆಗೆ ತಗೆದುಕೊಂಡಿದ್ರು, ಅದಾದ ಬಳಿಕವೂ ಕಾರ್ಖಾನೆ ಅಧಿಕಾರಿಗಳು ಹೊಗೆ ಬಿಡೋದನ್ನ ನಿಲ್ಲಿಸಿಲ್ಲ. ಇಂದಿಗೂ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳ ಹೊಗೆಯಿಂದ ನರಳುತ್ತಿದ್ದಾರೆ. ಗ್ರಾಮದ ಜಮೀನನಲ್ಲಿ ಬೆಳೆದ ಬೆಳೆಗಳು ಇದೀಗ ಕಪ್ಪು ಬಣ್ಣಕ್ಕೆ ತಿರುಗುತ್ತಿವೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಖಾನೆಗಳು ಹೊಗೆ ಕಡಿಮೆ ಮಾಡದೆ ಹೋದರೆ ನಾವು ಬದಕಲ್ಲ, ಹೋರಾಟಕ್ಕೆ ಗವಿ ಸಿದ್ದೇಶ್ವರ ಸ್ವಾಮೀಜಿಗಳನ್ನ ಕರೆಯುತ್ತೇವೆ ಅನ್ನೋದು ರೈತರ ಮಾತು.

ಇದನ್ನೂ ಓದಿ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿರೋಧಕ್ಕೆ ಸೆಡ್ಡು: ಬಲ್ಡೋಟಾ ಕಂಪನಿಗಾಗಿ ಪ್ರತಿಭಟನೆ

ಒಟ್ಟಾರೆ ಹಿರೇಬಗನಾಳ ಗ್ರಾಮದ ಜನ, ಕಾರ್ಖಾನೆಗಳಿಂದ ನರಕಕ್ಕೆ ಸಿಲುಕಿದ್ದಾರೆ. ಬೆಳೆದ ಬೆಳೆಗಳನ್ನ ಜಾನುವಾರುಗಳು ಕೂಡ ತಿನ್ನಲಾಗದಂತಹ ಸ್ಥಿತಿನಿರ್ಮಾಣವಾಗಿದೆ. ನಿನ್ನೆ ಕಾಟಾಚಾರಕ್ಕೆ ಕಾರ್ಖಾನೆ ಅಧಿಕಾರಿಗಳು ಬಂದು ಹೋಗಿದ್ದು ಬಿಟ್ಟರೆ ಯಾವ ಬದಲಾವಣೆ ಆಗಿಲ್ಲ. ಎಂದಿನಂತೆ ಕಾರ್ಖಾನೆಗಳು ಹೊಗೆಯನ್ನ ಉಗುಳುತ್ತಿವೆ. ಸರ್ಕಾರ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ದೊಡ್ಡ ಹೋರಾಟ ಆಗೋದು ಖಚಿತ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:50 pm, Tue, 20 January 26

Source link

ಹಾರರ್ ಕಥೆ ಇರುವ ‘ಸೀಟ್‌ ಎಡ್ಜ್‌’ ಸಿನಿಮಾದ ಟ್ರೇಲರ್ ನೋಡಿದ್ರಾ? – Kannada News | Siddu Moolimani Raviksha Shetty starrer Seat Edge Movie Trailer released

ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ (Seat Edge Movie) ಸಿನಿಮಾದಲ್ಲಿ ವ್ಲಾಗರ್ ಹುಡುಗನೊಬ್ಬನ ಕಥೆ ಇದೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ಕನ್ನಡದ ಪ್ರಮುಖ ವ್ಲಾಗರ್​ಗಳ ಕೈಯಿಂದಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಸಿದ್ದು ಮೂಲಿಮನಿ (Siddu Moolimani) ಅವರು ಹೀರೋ ಆಗಿ ನಟಿಸಿದ್ದು, ರವೀಕ್ಷಾ ಶೆಟ್ಟಿ ನಾಯಕಿ ಆಗಿದ್ದಾರೆ. ⁠ರಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಗಿರೀಶ್ ಶಿವಣ್ಣ, ಕಿರಣ್, ತೇಜು ಪೊನ್ನಪ್ಪ, ಪುನೀತ್ ಬಾಬು, ಮನಮೋಹನ್ ರೈ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಜನವರಿ 30ರಂದು ‘ಸೀಟ್ ಎಡ್ಜ್’ ಸಿನಿಮಾ ರಿಲೀಸ್ ಆಗಲಿದೆ.

‘ಸೀಟ್ ಎಡ್ಜ್’ ಸಿನಿಮಾದಲ್ಲಿ ಡಾರ್ಕ್‌ ಕಾಮಿಡಿ ಕಥೆಯ ಜೊತೆಗೆ ಹಾರರ್‌ ಮತ್ತು ಥ್ರಿಲ್ಲರ್‌ ಅಂಶಗಳು ಇರಲಿವೆ. ಈ ಮೊದಲು ‘ಕೆಮಿಸ್ಟ್ರೀ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾಗಳಿಗೆ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ ಚೇತನ್ ಶೆಟ್ಟಿ ಅವರು ಈಗ ‘ಸೀಟ್‌ ಎಡ್ಜ್‌’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಥೆ, ಚಿತ್ರಕಥೆ ಕೂಡ ಅವರದ್ದೇ. ‘ಎನ್‌.ಆರ್‌. ಸಿನಿಮಾ ಪ್ರೊಡಕ್ಷನ್ಸ್‌’ ಮೂಲಕ ಗಿರಿಧರ ಟಿ. ವಸಂತಪುರ ಅವರು ನಿರ್ಮಾಣ ಮಾಡಿದ್ದಾರೆ.

ಟ್ರೇಲರ್ ಬಿಡುಗಡೆ ವೇಳೆ ಸಿದ್ದು ಮೂಲಿಮನಿ ಮಾತಾಡಿದರು. ‘ಇದು ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಮೊದಲ ಬಾರಿಗೆ ನಾನು ಯೂಟ್ಯೂಬ್‌ ವ್ಲಾಗರ್‌ ಪಾತ್ರ ಮಾಡಿದ್ದೇನೆ. ಯಾರೂ ಹೋಗದ ಭಯಾನಕ್ಕೆ ಜಾಗವನ್ನು ಪ್ರೇಕ್ಷಕರಿಗೆ ಪರಿಚಯಿಸಬೇಕು ಎಂದು ಹಠಕ್ಕೆ ಬಿದ್ದ ನಾನು ಘೋಸ್ಟ್ ಟೌನ್​ಗೆ ಹೋಗಿ ಘೋಸ್ಟ್ ಹಂಟಿಂಗ್ ವೀಡಿಯೋ ಮಾಡಲು ನಿರ್ಧರಿಸುತ್ತೇನೆ’ ಎಂದು ಕಥೆಯ ಬಗ್ಗೆ ಅವರು ಮಾಹಿತಿ ನೀಡಿದರು.

Seat Edge Movie Team

ನಟಿ ರವೀಕ್ಷಾ ಶೆಟ್ಟಿ ಕೂಡ ಮಾತನಾಡಿದರು. ‘ಘೋಸ್ಟ್‌ ಹಂಟಿಂಗ್‌ಗೆ ಹೋಗುವ ಯೂಟ್ಯೂಬರ್‌ ಜೊತೆಗೆ ನಾನು ಸಹ ತೊಂದರೆಗೆ ಸಿಲುಕಿಕೊಳ್ಳುತ್ತೇನೆ. ಎರಡು ಶೇಡ್‌ಗಳಿರುವ ಪಾತ್ರ ನನ್ನದು. ಈ ಸಿನಿಮಾದಲ್ಲಿ ನಟಿಸಿದ್ದು ನನಗೆ ಒಳ್ಳೆಯ ಅನುಭವಗಳನ್ನು ನೀಡಿದೆ. ಹೆಸರಿಗೆ ತಕ್ಕಂತೆ ಇದು ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವಂತಹ ಸಿನಿಮಾ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಿದ್ದು ಮೂಲಿಮನಿ ಹೊಸ ಹಾಡು ‘ಹಂಗೋ ಹಿಂಗೋ’: ಸೀಟ್ ಎಡ್ಜ್ ಚಿತ್ರದಲ್ಲಿ ರವೀಕ್ಷಾ ಜೋಡಿ

ನಿರ್ದೇಶಕ ಚೇತನ್‌ ಶೆಟ್ಟಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ವೀವ್ಸ್‌ ಪಡೆಯಲು, ಫೇಮಸ್ ಆಗಲು ಜನರು ಏನೇನೋ ಸಾಹಸಗಳನ್ನು ಮಾಡುತ್ತಾರೆ. ಆ ಎಳೆಯನ್ನೇ ಇಟ್ಟುಕೊಂಡೆ ಸಿನಿಮಾ ಮಾಡಿದ್ದೇವೆ’ ಎಂದರು. ನಿರ್ಮಾಪಕ ಗಿರಿಧರ ಅವರು ಮಾತನಾಡಿ, ‘ಎಲ್ಲಾ ವರ್ಗದ ಪ್ರೇಕ್ಷಕರಿಗೂ ಇಷ್ಟ ಆಗುವಂತಹ, ಮನೆಮಂದಿ ಒಟ್ಟಾಗಿ ಕುಳಿತು ನೋಡುವಂತಹ ಸಿನಿಮಾ ಮಾಡಿದ್ದೇವೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಅವು ಮಧುಮೇಹ ಬರುವ ಮುನ್ಸೂಚನೆಯಾಗಿರಬಹುದು – Kannada News | Diabetes Symptoms on Skin: What You Need to Know

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ಸಂಬಂಧಿತ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದನ್ನು ನೀವು ನೋಡಿರಬಹುದು. ಮೊದಲೆಲ್ಲಾ ಈ ರೋಗ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿತ್ತು ಆದರೆ ಈಗ ಹಾಗಲ್ಲ, ಸಣ್ಣ ವಯಸ್ಸಿನವರಲ್ಲಿಯೇ ಈ ಸಮಸ್ಯೆ ಕಂಡುಬರುತ್ತಿದೆ. ಮಧುಮೇಹ ಸಾಮಾನ್ಯವಾಗಿ ಅನಿಯಂತ್ರಿತ ರಕ್ತದಲ್ಲಿನ ಸಕ್ಕರೆ ಮಟ್ಟಕ್ಕೆ ಸಂಬಂಧಿಸಿದೆಯಾದರೂ ಇದರ ಪರಿಣಾಮ ಚರ್ಮ ಸೇರಿದಂತೆ ದೇಹದ ಅನೇಕ ಭಾಗಗಳ ಮೇಲೆ ಪರಿಣಾಮ ಬೀರುತ್ತವೆ. ರಕ್ತದಲ್ಲಿನ ಸಕ್ಕರೆ ಮಟ್ಟ ದೀರ್ಘಕಾಲದವರೆಗೆ ಹೆಚ್ಚಾಗಿದ್ದರೆ, ಅದು ದೇಹದಲ್ಲಿನ ರಕ್ತದ ಹರಿವು ಮತ್ತು ತೇವಾಂಶದ ಸಮತೋಲನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಇದು ಚರ್ಮದ ನೈಸರ್ಗಿಕ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದರೆ ಜನ ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ರೀತಿ ಚರ್ಮದ ಮೇಲೆ ಗೋಚರಿಸುವ ಲಕ್ಷಣಗಳು ಮಧುಮೇಹದ ಆರಂಭಿಕ ಮುನ್ಸೂಚನೆಯಾಗಿರಬಹುದು. ಹಾಗಾಗಿ ಅವುಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಬಹಳ ಮುಖ್ಯವಾಗುತ್ತದೆ.

ಚರ್ಮದಲ್ಲಾಗುವ ಬದಲಾವಣೆ ಮಧುಮೇಹದ ಲಕ್ಷಣವೇ?

ಮಧುಮೇಹದ ಸಂದರ್ಭದಲ್ಲಿ ಚರ್ಮದ ಮೇಲೆ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ. ದೇಹ ಅಗತ್ಯ ತೇವಾಂಶ ಕಾಪಾಡಿಕೊಳ್ಳಲು ಕಷ್ಟವಾದಾಗ ಚರ್ಮ ಅತಿಯಾಗಿ ಒಣಗುವುದು ಸಾಮಾನ್ಯ ಸಮಸ್ಯೆ. ಆದರೆ ಕೆಲವರಲ್ಲಿ ಆಗಾಗ ತುರಿಕೆ ಅಥವಾ ಸುಡುವ ಸಂವೇದನೆಗಳು ಕಂಡುಬರುತ್ತದೆ. ಚರ್ಮದ ಮೇಲೆ, ಅದರಲ್ಲಿಯೂ ಕುತ್ತಿಗೆ ಅಥವಾ ತೊಡೆಯ ಸುತ್ತ ಕಪ್ಪು ಕಲೆಗಳು ಕಂಡು ಬರುವುದು ಸಹ ಒಂದು ಲಕ್ಷಣವಾಗಿರಬಹುದು. ಸಣ್ಣ ಕಡಿತ ಅಥವಾ ಗಾಯಗಳು ಗುಣವಾಗುವುದಕ್ಕೆ ಸಮಯ ತೆಗೆದುಕೊಳ್ಳುವುದು ಮಧುಮೇಹಕ್ಕೆ ಸಂಬಂಧಿಸಿದ ಪ್ರಮುಖ ಲಕ್ಷಣವೆಂದು ಪರಿಗಣಿಸಲಾಗುತ್ತದೆ. ಜೊತೆಗೆ, ಪುನರಾವರ್ತಿತ ಶಿಲೀಂಧ್ರ ಅಥವಾ ಬ್ಯಾಕ್ಟೀರಿಯಾದ ಸೋಂಕುಗಳು, ಹುಣ್ಣುಗಳು ಅಥವಾ ಮೊಡವೆ ಕಾಣಿಸಿಕೊಳ್ಳುವುದು ಅಥವಾ ಚರ್ಮದ ಮೇಲೆ ನಿರಂತರ ಕೆಂಪು ಬಣ್ಣ ಕಂಡುಬರುವುದು. ಹೀಗೆ ಈ ಎಲ್ಲಾ ಬದಲಾವಣೆಗಳು ದೇಹದ ಸಕ್ಕರೆ ಮಟ್ಟ ಸಮತೋಲಿತವಾಗಿಲ್ಲ ಎಂಬುದನ್ನು ಸೂಚಿಸುತ್ತದೆ.

ಇದನ್ನೂ ಓದಿ: ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ

ತಡೆಗಟ್ಟಲು ಏನು ಮಾಡಬೇಕು?

ನಿಮ್ಮ ಚರ್ಮದ ಮೇಲೆ ಇಂತಹ ಬದಲಾವಣೆಗಳನ್ನು ನಿರಂತರವಾಗಿ ಗಮನಿಸಿದರೆ, ನೀವು ಮೊದಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಿಕೊಳ್ಳಿ. ಮಧುಮೇಹವನ್ನು ನಿಯಂತ್ರಣದಲ್ಲಿಡಲು, ಸಮತೋಲಿತ ಆಹಾರ ಸೇವನೆ ಮಾಡಿ, ನಿಯಮಿತವಾಗಿ ವ್ಯಾಯಾಮ ಮಾಡಿ ಅದರ ಜೊತೆಗೆ ವೈದ್ಯರು ಸೂಚಿಸಿದಂತ ಔಷಧಿಗಳನ್ನು ಸೇವನೆ ಮಾಡಿ. ಚರ್ಮವನ್ನು ಸ್ವಚ್ಛವಾಗಿ ಮತ್ತು ತೇವಾಂಶದಿಂದ ಕೂಡಿರುವಂತೆ ನೋಡಿಕೊಳ್ಳಿ. ಹೆಚ್ಚು ರಾಸಾಯನಿಕಗಳಿರುವ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ. ಚರ್ಮ ಸ್ನೇಹಿ ಉತ್ಪನ್ನಗಳನ್ನು ಉಪಯೋಗ ಮಾಡಿ. ಯಾವುದೇ ರೀತಿಯ ಸೋಂಕು ಅಥವಾ ಗಾಯವದಲ್ಲಿ ನಿರ್ಲಕ್ಷಿಸಬೇಡಿ, ಅಗತ್ಯವಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಪ್ಪಳ ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತರು: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು – Kannada News | Koppals hirebaganal factory smoke turns crops black farmers suffer and protest

ಕೊಪ್ಪಳ, ಜನವರಿ 20: ಕೊಪ್ಪಳ (Koppal) ಜಿಲ್ಲೆ ಕಾರ್ಖಾನೆಗಳ (Factory) ಊರು. ಈ ಜಿಲ್ಲೆಯಲ್ಲಿ ಕಾರ್ಖಾನೆ ವಿರೋಧಿಸಿ ಕಳೆದ 80 ದಿನಗಳಿಂದ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆ ಕಾರ್ಖಾನೆಗಳ ಹೊಗೆಯಿಂದ ಆ ಗ್ರಾಮದ ಜನ ರೋಸಿ ಹೋಗಿದ್ದಾರೆ. ನಿನ್ನೆ ಆ ಗ್ರಾಮದ ಜನ ಕಾರ್ಖಾನೆ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದರು. ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದ ಏನೆಲ್ಲಾ ಸಮಸ್ಯೆ ಆಗತ್ತೆ ಅನ್ನೊದನ್ನ ಬಿಚ್ಚಿಟ್ಟಿದ್ದರು. ಸಭೆಯಲ್ಲಿ ಅಧಿಕಾರಿಗಳು ಇನ್ಮುಂದೆ ಹೊಗೆ ಬಿಡಲ್ಲ ಎಂದು ಬರೆದುಕೊಟ್ಟಿದ್ದರು. ಆದರೂ ಆ ಗ್ರಾಮದಲ್ಲಿ ಹೊಗೆ ಮಾತ್ರ ಕಡಿಮೆ ಆಗಿಲ್ಲ. ಕಾರ್ಖಾನೆಗಳು ಬಿಡುವ ಹೊಗೆಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ಜಮೀನುಗಳಲ್ಲಿ ಬೆಳೆದ ಬೆಳೆಗಳು ಕಪ್ಪು ಬಣ್ಣಕ್ಕೆ ತಿರುಗಿವೆ. ಇದರಿಂದ ರೋಸಿಹೋದ ರೈತರು ಇದೀಗ ಗವಿ ಸಿದ್ದಪ್ಪನ ಮೊರೆ ಹೋಗಲು ಸಿದ್ಧರಾಗಿದ್ದಾರೆ.

ರೈತರಿಗೆ ಸಂಕಷ್ಟ ತಂದಿಟ್ಟ ಕಾರ್ಖಾನೆಗಳ ಹೊಗೆ

ಕೊಪ್ಪಳ ತಾಲೂಕಿನ ಹಿರೇಬಗನಾಳ ಗ್ರಾಮ ಕಾರ್ಖಾನೆಗಳಿಂದ ನಲುಗಿ ಹೋಗಿದೆ. ಹೀರೆಬಗನಾಳ ಗ್ರಾಮದ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಕಾರ್ಖಾನೆಗಳಿವೆ. ಕಾರ್ಖಾನೆಗಳು ಬಿಡುವ ಹೊಗೆಯಿಂದ ಇದೀಗ ರೈತರಿಗೆ ಸಂಕಷ್ಟಕ್ಕೆ ತಂದಿಟ್ಟಿದೆ. ಹೊಗೆಯಿಂದ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ, ಈರುಳ್ಳಿ ಬೆಳೆಗಳು ಕಪ್ಪು ಬಣ್ಣಕ್ಕೆ ತಿರುಗಿವೆ. ಬೆಳೆಗಳ ಮೇಲೆ ಕಪ್ಪು ಬೂದಿ ಬಂದು ಕೂತಿದೆ. ಇದರಿಂದ ಜಾನುವಾಗಳು ಸಹ ಬೆಳೆ ತಿನ್ನುವ ಪರಿಸ್ಥಿತಿಯಲ್ಲಿ ಇಲ್ಲದಂತಾಗಿದೆ.

ಇದನ್ನೂ ಓದಿ: ಮತ್ತೆ‌ ಮುನ್ನಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು

ಗ್ರಾಮದ ಬಹುತೇಕ ಜಮೀನುಗಳು ಕಪ್ಪು ಬೂದಿಯಿಂದ ನಲುಗಿವೆ. ಹಿರೇಬಗನಾಳ ಗ್ರಾಮದ ಗವಿಸಿದ್ದಪ್ಪ ಪಲ್ಲೇದ್ ಅನ್ನೋ ರೈತ ಜಾನುವಾರುಗಳಿಗಾಗಿ ಮೆಕ್ಕೆಜೋಳ ಬೆಳದಿದ್ದರು. ಆದರೆ ಇದೀಗ ಮೆಕ್ಕೆಜೋಳ ಸಂಪೂರ್ಣ ಕಪ್ಪಾಗಿದೆ. ಮೆಕ್ಕೆಜೋಳ ಎಲೆಯ ಮೇಲೆಲ್ಲಾ ಕಪ್ಪು ಧೂಳು ಬಂದು ಕೂತಿದೆ. ನಿನ್ನೆ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳ ಸಿಬ್ಬಂದಿಯನ್ನ ಕರೆದು ತರಾಟೆಗೆ ತೆಗೆದುಕೊಂಡರು. ನಾಳೆಯಿಂದಲೆ ಹೊಗೆ ಬಂದ್ ಮಾಡುವಂತೆ ಸಹಿ ಮಾಡಿಸಿಕೊಂಡಿದ್ದರು. ಅಧಿಕಾರಿಗಳ ಸಹಿ ಮಾಡಿದ ಬಳಿಕ ಇಂದು ಟಿವಿ9 ರಿಯಾಲಿಟಿ ಚೆಕ್ ಮಾಡಿದ್ದು, ಕಾರ್ಖಾನೆಗಳ ಹೊಗೆಯಿಂದಾದ ಸಮಸ್ಯೆಯನ್ನ ತೆರೆದಿಟ್ಟಿದೆ.

ಗವಿ ಸಿದ್ದೇಶ್ವರ ಸ್ವಾಮೀಜಿಗಳ ಮೊರೆ

ನಿನ್ನೆ ಹಿರೇಬಗನಾಳ ಗ್ರಾಮದ ಜನ ಗ್ರಾಮದ ಸುತ್ತಮುತ್ತ ಇರುವ ವನ್ಯ ಸ್ಟೀಲ್, ಐಎಲ್​ಸಿ, ಪಿಬಿಎಸ್, ಠಾಕೂರ್ ಸೇರಿ ಹತ್ತಕ್ಕೂ ಹೆಚ್ಚು ಕಾರ್ಖಾನೆಗಳಿವೆ. ಈ ಕಾರ್ಖಾನೆಗಳಿಂದ ಕಳೆದ ಹಲವು ವರ್ಷಗಳಿಂದ ಗ್ರಾಮದ ಜನ ನರಕ ಅನುಭವಿಸುತ್ತಿದ್ದಾರೆ. ನಿನ್ನೆ ಕಾರ್ಖಾನೆ ಅಧಿಕಾರಿಗಳನ್ನ ಕರೆದು ತರಾಟೆಗೆ ತಗೆದುಕೊಂಡಿದ್ರು, ಅದಾದ ಬಳಿಕವೂ ಕಾರ್ಖಾನೆ ಅಧಿಕಾರಿಗಳು ಹೊಗೆ ಬಿಡೋದನ್ನ ನಿಲ್ಲಿಸಿಲ್ಲ. ಇಂದಿಗೂ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳ ಹೊಗೆಯಿಂದ ನರಳುತ್ತಿದ್ದಾರೆ. ಗ್ರಾಮದ ಜಮೀನನಲ್ಲಿ ಬೆಳೆದ ಬೆಳೆಗಳು ಇದೀಗ ಕಪ್ಪು ಬಣ್ಣಕ್ಕೆ ತಿರುಗುತ್ತಿವೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಖಾನೆಗಳು ಹೊಗೆ ಕಡಿಮೆ ಮಾಡದೆ ಹೋದರೆ ನಾವು ಬದಕಲ್ಲ, ಹೋರಾಟಕ್ಕೆ ಗವಿ ಸಿದ್ದೇಶ್ವರ ಸ್ವಾಮೀಜಿಗಳನ್ನ ಕರೆಯುತ್ತೇವೆ ಅನ್ನೋದು ರೈತರ ಮಾತು.

ಇದನ್ನೂ ಓದಿ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿರೋಧಕ್ಕೆ ಸೆಡ್ಡು: ಬಲ್ಡೋಟಾ ಕಂಪನಿಗಾಗಿ ಪ್ರತಿಭಟನೆ

ಒಟ್ಟಾರೆ ಹಿರೇಬಗನಾಳ ಗ್ರಾಮದ ಜನ, ಕಾರ್ಖಾನೆಗಳಿಂದ ನರಕಕ್ಕೆ ಸಿಲುಕಿದ್ದಾರೆ. ಬೆಳೆದ ಬೆಳೆಗಳನ್ನ ಜಾನುವಾರುಗಳು ಕೂಡ ತಿನ್ನಲಾಗದಂತಹ ಸ್ಥಿತಿನಿರ್ಮಾಣವಾಗಿದೆ. ನಿನ್ನೆ ಕಾಟಾಚಾರಕ್ಕೆ ಕಾರ್ಖಾನೆ ಅಧಿಕಾರಿಗಳು ಬಂದು ಹೋಗಿದ್ದು ಬಿಟ್ಟರೆ ಯಾವ ಬದಲಾವಣೆ ಆಗಿಲ್ಲ. ಎಂದಿನಂತೆ ಕಾರ್ಖಾನೆಗಳು ಹೊಗೆಯನ್ನ ಉಗುಳುತ್ತಿವೆ. ಸರ್ಕಾರ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ದೊಡ್ಡ ಹೋರಾಟ ಆಗೋದು ಖಚಿತ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ ಬೀದಿ ಹೆಣವಾದ – Kannada News | A Youth Hacked to death Who raised Voice Against illegal finance at Mysuru

ಬೆಂಗಳೂರು, ಜನವರಿ 20): ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ (Mysuru) ನಿನ್ನೆ(ಜನವರಿ 19) ಮಧ್ಯರಾತ್ರಿ ಮತ್ತೊಂದು ಕೊಲೆಯಾಗಿದೆ (Murder). ಅಂಗಡಿ ಮುಂದೆ ಕುಳಿತಿದ್ದ ಯುವಕನನ್ನು ಚಾಕು, ಲಾಂಗುಗಳನ್ನು ಹಿಡಿದು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಉದಯಗಿರಿ ಬೀಡಿ ಕಾಲೋನಿ ಬಳಿ 26 ವರ್ಷದ ಶಹಬಾಜ ಎಂಬ ಯುವಕನನ್ನು ಅದೇ ಏರಿಯಾದ ಜುಬೇರ್ ಎಂಬಾತ ತನ್ನ ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಫೈನಾನ್ಸ್ ಹಾವಳಿ ತಡೆಯಲು ಮುಂದಾಗಿದ್ದೆ ಶಹಬಾಜ್ ಕೊಲೆ ಕಾರಣ ಎನ್ನಲಾಗಿದೆ.

ರಾತ್ರಿ‌1 ಗಂಟೆ ವೇಳೆ ಅಂಗಡಿ ಮುಚ್ಚಿ ಕುಳಿತಿದ್ದ ಶಹಬಾಜ್ ಮೇಲೆ ಏಕಾಏಕಿ ದಾಳಿ ಮಾಡಿ ತಲೆ, ಎದೆ, ಕತ್ತು, ಹೊಟ್ಟೆಗೆ ಹೀಗೆ ಸಿಕ್ಕ ಸಿಕ್ಕ ಕಡೆ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಳೆ ವೈಷಮ್ಯದಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ.

ಇದನ್ನೂ ಓದಿ: ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು

ಕೊಲೆಯಾದ ಯುವಕ ಹಾಗೂ ಕೊಲೆ ಮಾಡಿದ ಆರೋಪಿಗಳು ಒಂದೇ ಏರಿಯಾದವರು. ಶಹಬಾಜ್ ಗೌಸಿಯಾ ನಗರದಲ್ಲಿ ವೆಲ್ಡಿಂಗ್ ಶಾಪ್ ಇಟ್ಟುಕೊಂಡಿದ್ದ. ಏರಿಯಾದಲ್ಲಿ ಫೈನಾನ್ಸ್ ಹಾವಳಿ ಜಾಸ್ತಿಯಾಗಿತ್ತು. ಜುಬೇರ್ ಹಾಗೂ ಅತನ ಸ್ಮೇಹಿತರು ಫೈನ್ಯಾನ್ಸ್ ಹೆಸರಿನಲ್ಲಿ ಮೀಟರ್ ಬಡ್ಡಿ ವಸೂಲಿ ಮಾಡುತ್ತಿದ್ದರಂತೆ. ಅವರ ವಿರುದ್ಧ ಶಹಬಾನ್‌ ನಿಂತಿದ್ದ. ಪೊಲೀಸರಿಗೆ ದೂರು ಸಹ ಕೊಡಿಸಿದ್ದನಂತೆ. ಇದೇ ಕಾರಣಕ್ಕೆ ನಾಲ್ಕು ತಿಂಗಳ ಹಿಂದೆ ಶಹಬಾಜ್ ಅಂಗಡಿ ಮುಂದೆ ಇವರು ಬಂದು ಗಲಾಟೆ ಮಾಡಿದ್ದರು.

ಇನ್ನು ಒದರ ಜೊತೆಗೆ ಶಹಬಾಜ್ ಮನೆ ಪಕ್ಕ ಖಾಲಿ ಜಾಗದಲ್ಲಿ ಆಟೋಗಳನ್ನು ನಿಲ್ಲಿಸುತ್ತಿದ್ದರು. ಒಂದು ಆಟೋಕ್ಕೆ ದಿನಕ್ಕೆ 20 ರೂಪಾಯಿ ಕಲೆಕ್ಟ್ ಮಾಡಲಾಗುತಿತ್ತು. ಈ ವಿಚಾರಕ್ಕೂ ಗಲಾಟೆ ಆಗಿತ್ತಂತೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಮೈಸೂರಿನ ಉದಯಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಂತರವಷ್ಟೇ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Inspiring: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ – Kannada News | Prachi Poddar of Jagannath Stones, story of how she made new business idea from cement waste

ಕೆಲವು ಕುಟುಂಬಗಳಲ್ಲಿ, ಮನೆತನಗಳಲ್ಲಿ ಈಗಲೂ ಕೂಡ ಹೆಣ್ಮಕ್ಕಳಿಗೆ ಶಿಕ್ಷಣ ಸಿಗುವುದು ಕನಸಿನ ಮಾತೇ ಆಗಿದೆ. ಮಾರ್ವಾಡಿ ಮನೆತನಗಳಲ್ಲಿ ಹೆಣ್ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಇರುವುದು ಬಹಳ ಅಪರೂಪ. ಇಂಥ ಸಾಂಪ್ರದಾಯಿಕ ಮಾರ್ವಾಡಿ ಕುಟುಂಬವೊಂದರಲ್ಲಿ ಹುಟ್ಟಿದವರು ಪ್ರಾಚಿ ಪೊದ್ದಾರ್. 2001 ರಲ್ಲಿ ಅವರು ಬೆಂಗಳೂರಿನ ಐಐಎಂಗೆ ಆಯ್ಕೆಯಾದಾಗ, ಅದು ಸಂತೋಷಕ್ಕಿಂತ ಚರ್ಚೆಯ ವಿಷಯವಾಯಿತು. ಮೊದಲು ಮದುವೆಯಾಗು, ಆನಂತರ ಬೇಕಾದರೆ ಓದುವಿಯಂತೆ ಎಂದು ಮನೆಯವರು ಒತ್ತಡ ಹಾಕಿದರು. ಆದರೆ, ಪ್ರಾಚಿ ಅದು ಹೇಗೋ ಐಐಎಂಗೆ ಸೇರಲು ಅನುಮತಿ ಪಡೆದರು. ಆದರೆ, ಅಲ್ಲೊಂದು ಷರತ್ತು ಹಾಕಲಾಗಿತ್ತು. ಓದು ಪೂರ್ಣಗೊಂಡ ಬಳಿಕ ಮದುವೆಯಾಗಬೇಕು ಎಂಬುದು ಆ ಷರತ್ತಾಗಿತ್ತು. ಪ್ರಾಚಿ ಒಪ್ಪಿಕೊಂಡರು. ಆದರೆ, ಅವರ ಕನಸು ಬತ್ತಿಹೋಗಲು ಬಿಡಲಿಲ್ಲ. ಅವರ ಮನಸ್ಸಿನಲ್ಲಿ ಅಚ್ಚೊತ್ತಿ ಗರಿ ಕಟ್ಟಿಕೊಂಡು ಬೆಳೆಯಿತು.

ಛಲಬಿಡದ ಪ್ರಾಚಿ ಎಲ್ಲೂ ನಿಲ್ಲಲಿಲ್ಲ

ತನಗೆ ಸಣ್ಣ ವಯಸ್ಸಿನಿಂದಲೂ ಫೈನಾನ್ಸ್ ವಿಷಯದಲ್ಲಿ ಬಹಳ ಆಸಕ್ತಿ ಇತ್ತು ಎಂದು ಪ್ರಾಚಿ ಹೇಳುತ್ತಾರೆ. ಕಾಲೇಜು ದಿನಗಳಲ್ಲಿ, ಅವರು ಗಣಿತ ಮತ್ತು ಅಕೌಂಟ್ಸ್​ನತ್ತ ಆಕರ್ಷಿತರಾದರು. ಇದೇ ಕಾರಣದಿಂದ ಅವರು ಮ್ಯಾನೇಜ್ಮೆಂಟ್ ಕೋರ್ಸ್ ಸೇರಲು ಪ್ರೇರೇಪಣೆ ಸಿಕ್ಕಿತು. ಬೆಂಗಳೂರಿನ ಐಐಎಂನಲ್ಲಿ ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಅವರು ಊರಿಗೆ ಮರಳಿ, ಮನೆಯವರಿಗೆ ವಾಗ್ದಾನ ನೀಡಿದಂತೆ ವಿವಾಹವಾದರು. ಆದರೆ ಆಗಲೂ, ಅವರು ಮನೆ ನಿರ್ವಹಣೆಗೆ ಮಾತ್ರ ತಮ್ಮನ್ನು ಮಿತಿಗೊಳಿಸಲಿಲ್ಲ. ತನ್ನನ್ನು ತಾನು ಮಿತಿಗೊಳಿಸಿಕೊಳ್ಳಲಿಲ್ಲ. ಅವರು ಭಾರತ ಮತ್ತು ಅಮೆರಿಕ ದೇಶಗಳಲ್ಲಿ ಜಿಇ ಫೈನಾನ್ಷಿಯಲ್ ಮತ್ತು ಎಚ್‌ಎಸ್‌ಬಿಸಿಯಂತಹ ಪ್ರಮುಖ ಕಂಪನಿಗಳಲ್ಲಿ ಕೆಲಸ ಮಾಡಿದರು. ಫೈನಾನ್ಷಿಯಲ್ ಮ್ಯಾನೇಜ್ಮೆಂಟ್ ಮತ್ತು ಬ್ಯುಸಿನೆಸ್ ಸ್ಟ್ರಕ್ಚರ್ ಬಗ್ಗೆ ಆಳವಾದ ತಿಳಿವಳಿಕೆ ಪಡೆದರು.

ಅತ್ತೆ-ಮಾವನ ಜವಾಬ್ದಾರಿ ಮತ್ತು ಕೋಲ್ಕತ್ತಾಗೆ ಮರಳಿದ್ದು…

ಕೆಲವು ವರ್ಷಗಳ ನಂತರ ಪ್ರಾಚಿ ಪೊದ್ದಾರ್ ಅವರು ತಮ್ಮ ಅತ್ತೆ-ಮಾವನ ಜವಾಬ್ದಾರಿಗಳಿಂದಾಗಿ ಕೋಲ್ಕತ್ತಾಗೆ ಹಿಂತಿರುಗಬೇಕಾಯಿತು. ಅವರ ಅತ್ತೆ ಮತ್ತು ಮಾವನಿಗೆ ಅನಾರೋಗ್ಯವಿದ್ದರಿಂದ ಕುಟುಂಬಕ್ಕೆ ಅವರ ಅಗತ್ಯತೆ ಇತ್ತು. ಕೋಲ್ಕತ್ತಾಗೆ ಹಿಂದಿರುಗಿದ ನಂತರ, ಪ್ರಾಚಿ ತನ್ನ ಪತಿಯ ಫ್ಯಾಮಿಲಿ ಬ್ಯುಸಿನೆಸ್​ನಲ್ಲಿ ಭಾಗಿಯಾಗತೊಡಗಿದರು. ಸಿಮೆಂಟ್ ಟ್ರಾನ್ಸ್​ಪೋರ್ಟೇಶನ್ ಬ್ಯುಸಿನೆಸ್ ಅದಾಗಿತ್ತು. ಇಲ್ಲಿಂದ ಪ್ರಾಚಿಯವರ ವೃತ್ತಿಜೀವನದ ಹಾದಿಯಲ್ಲಿ ಹೊಸ ಅಧ್ಯಾಯ ಶುರುವಾಗುತ್ತದೆ.

ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ

ಪ್ರಾಚಿ ಅವರು ಫ್ಯಾಮಿಲಿ ಬ್ಯುಸಿನೆಸ್​ನಲ್ಲಿ ಭಾಗಿ ಮಾತ್ರವೇ ಆಗಿರಲಿಲ್ಲ, ತಮ್ಮ ಹಣಕಾಸು ನಿರ್ವಹಣೆಯ ಜ್ಞಾನ ಮತ್ತು ಅನುಭವ ಬಳಸಿ ಆ ಬ್ಯುಸಿನೆಸ್​ಗೆ ಹೊಸ ಸ್ವರೂಪವನ್ನೇ ತಂದರು. ಸಿಮೆಂಟ್ ತ್ಯಾಜ್ಯದಲ್ಲಿ ಇರುವ ಸುಣ್ಣದ ಕಲ್ಲನ್ನು ಪುಡಿಮಾಡಿ ಕಲ್ಲಿನ ಚಿಪ್ಸ್ ತಯಾರಿಸುವ ಒಂದು ಐಡಿಯಾ ಸುಮಾರು ಮೂರು ವರ್ಷಗಳ ಹಿಂದೆ ಅವರಿಗೆ ಬಂದಿತು. ಈ ಐಡಿಯಾ ವರ್ಕೌಟ್ ಆಯಿತು. ಬ್ಯುಸಿನೆಸ್ ಹಿಗ್ಗಿತು. ಯಶಸ್ವಿಯಾಯಿತು. ಈ ದೃಷ್ಟಿಕೋನದಿಂದ, ವ್ಯವಹಾರವು ವಿಸ್ತರಿಸಿತು. Jagannath Stones ಅಡಿಯಲ್ಲಿ ಲೈಮ್​ಸ್ಟೋನ್ಸ್ ಪುಡಿಮಾಡುವ ಆಪರೇಷನ್ಸ್ ಪ್ರಾರಂಭಿಸಲಾಯಿತು. ಪ್ರಸ್ತುತ, ಜಗನ್ನಾಥ್ ಸ್ಟೋನ್ಸ್‌ನ ಫೈನಾನ್ಸ್ ವಿಭಾಗದ ಪೂರ್ಣ ಜವಾಬ್ದಾರಿಯನ್ನು ಪ್ರಾಚಿ ಹೊತ್ತು ನಡೆಸುತ್ತಿದ್ದಾರೆ.

ಲಾಭ ಮತ್ತು ನಷ್ಟದಿಂದ ಹಿಡಿದು ಹೂಡಿಕೆಯವರೆಗೆ ಪ್ರತಿಯೊಂದು ನಿರ್ಧಾರವೂ ಪ್ರಾಚಿಯದ್ದೇ

ಇಂದು, ಪ್ರಾಚಿ ಪೊದ್ದಾರ್ ಅವರು ಬ್ಯುಸಿನೆಸ್​ನ ಲಾಭ ಮತ್ತು ನಷ್ಟದಿಂದ ಹಿಡಿದು ಕಂಪನಿಯ ಹೂಡಿಕೆ ಮತ್ತು ಪರ್ಸನಲ್ ಇನ್ವೆಸ್ಟ್​ಮೆಂಟ್​ವರೆಗೆ ಎಲ್ಲಾ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅವರ ಪಾತ್ರವು ಕೇವಲ ಅಕೌಂಟ್​ಗಳನ್ನು ನಿರ್ವಹಿಸುವುದಕ್ಕೆ ಸೀಮಿತವಾಗಿಲ್ಲ. ಸ್ಟ್ರಾಟಿಜಿ, ಪ್ಲಾನಿಂಗ್ ಮತ್ತು ಡೆವಲಪ್ಮೆಂಟ್ ಅನ್ನೂ ನೋಡಿಕೊಳ್ಳುತ್ತಾರೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಒಂದು ಜವಾಬ್ದಾರಿ ಎಂಬುದು ಅವರ ಭಾವನೆ. ಮಹಿಳೆಯರು ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಂಡಾಗ, ವ್ಯವಹಾರಗಳು ಉಳಿಯುವುದು ಮಾತ್ರವಲ್ಲದೆ ಅಭಿವೃದ್ಧಿ ಹೊಂದುತ್ತವೆ.

ಆತ್ಮವಿಶ್ವಾಸ ಕುಂದಲಿಲ್ಲ

ಓದು ಮುಗಿಸಿ ಮದುವೆಯಾಗುತ್ತೇನೆ ಎಂದು ನೀಡಿದ್ದ ವಚನವನ್ನು ಪ್ರಾಚಿ ತಪ್ಪದೇ ಉಳಿಸಿಕೊಂಡರು. ಅದರ ನಡುವೆಯೂ ಅವರು ಒಂದು ಚೌಕಟ್ಟಿಗೆ ಸೀಮಿತಗೊಳ್ಳಲಿಲ್ಲ. ಪತಿಯ ಫ್ಯಾಮಿಲಿ ಬ್ಯುಸಿನೆಸ್​ನಲ್ಲಿ ನೆರವಾಗಿದ್ದು ಮಾತ್ರವಲ್ಲ, ಅದನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಮುಖ ಕೊಡುಗೆ ನೀಡಿದರು. ಇದು ಪ್ರಾಚಿ ಪೊದ್ದಾರ್ ಎನ್ನುವ ಮಹಿಳೆಯ ಸಾಧನೆಯ ಕಥೆ.

ಪ್ರಾಚಿ ಪೊದ್ದಾರ್

ಹೂಡಿಕೆದಾರರ ಶಿಕ್ಷಣ ಮತ್ತು ಜಾಗೃತಿ ಉಪಕ್ರಮಗಳು

ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಒಂದು ಬಾರಿಯ KYC (Know Your Customer) ಪ್ರಕ್ರಿಯೆಯ ಅಗತ್ಯವಿದೆ. SEBI ವೆಬ್​ಸೈಟ್​ನಲ್ಲಿ ವಿವರ ಹೊಂದಿರುವ ಹಾಗೂ ನೊಂದಾಯಿತವಾಗಿರುವ ಮ್ಯೂಚುವಲ್ ಫಂಡ್ ಕಂಪನಿಗಳೊಂದಿಗೆ ಮಾತ್ರ ಮಾಡಬೇಕು. ಹೂಡಿಕೆದಾರರು ಯಾವುದೇ ದೂರುಗಳಿಗಾಗಿ ನೇರವಾಗಿ AMC ಅನ್ನು ಸಂಪರ್ಕಿಸಬಹುದು ಅಥವಾ SCORES ಪೋರ್ಟಲ್‌ನಲ್ಲಿ (https://scores.gov.in) ದೂರು ಸಲ್ಲಿಸಬಹುದು. ಪರಿಹಾರವು ತೃಪ್ತಿಕರವಾಗಿಲ್ಲದಿದ್ದರೆ, Smart ODR ಪೋರ್ಟಲ್ (https://smartodr.in/login) ಅನ್ನು ಬಳಸಬಹುದು.

HDFC AMC ಬಗ್ಗೆ

HDFC ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ ಭಾರತದ ಅತಿದೊಡ್ಡ ಮ್ಯೂಚುವಲ್ ಫಂಡ್ ಕಂಪನಿಗಳಲ್ಲಿ ಒಂದಾಗಿದೆ. ಇದನ್ನು 1999 ರಲ್ಲಿ ಸ್ಥಾಪಿಸಲಾಯಿತು ಮತ್ತು SEBI ಅನುಮೋದನೆ ಪಡೆದ ನಂತರ 2000 ರಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಈಕ್ವಿಟಿ, ಫಿಕ್ಸೆಡ್ ಇನ್ಕಮ್ ಮತ್ತು ಇತರ ಹೂಡಿಕೆ ಆಯ್ಕೆಗಳನ್ನು ನಿರ್ವಹಿಸುತ್ತದೆ. ಮತ್ತು ದೇಶಾದ್ಯಂತ ಶಾಖೆಗಳನ್ನು ಹೊಂದಿದೆ. ಬ್ಯಾಂಕುಗಳು, ಸ್ವತಂತ್ರ ಹಣಕಾಸು ಸಲಹೆಗಾರರು ಮತ್ತು ರಾಷ್ಟ್ರೀಯ ವಿತರಕರ ಮೂಲಕ ಸೇವೆಗಳನ್ನು ಒದಗಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version