Daily Devotional: ಶಿವಲಿಂಗಕ್ಕೆ ಅರಿಶಿಣ ಹಚ್ಚಬಾರದು ಯಾಕೆ ಗೊತ್ತಾ? – Kannada News | Why Turmeric is Not Offered to Shivalinga
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಶಿವಲಿಂಗಕ್ಕೆ ಅರಿಶಿಣ ಹಚ್ಚಬಾರದು ಯಾಕೆ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವಾರಾಧನೆಯಲ್ಲಿ ಅಭಿಷೇಕಕ್ಕೆ ವಿಶೇಷ ಮಹತ್ವವಿದೆ. ಶಿವನಿಗೆ ಹಾಲು, ಮೊಸರು, ತುಪ್ಪ, ಜೇನು, ವಿಭೂತಿ, ಬಿಲ್ವಪತ್ರೆ, ಅಕ್ಷತೆ, ಶುದ್ಧ ನೀರು, ಗಂಗಾಜಲ ಮತ್ತು ಶ್ರೀಗಂಧ ಮುಂತಾದ ಅನೇಕ ದ್ರವ್ಯಗಳಿಂದ ಅಭಿಷೇಕ ಮಾಡಲಾಗುತ್ತದೆ. ಆದರೆ, ಧಾರ್ಮಿಕ ನಂಬಿಕೆಗಳ ಪ್ರಕಾರ, ಶಿವಲಿಂಗಕ್ಕೆ ಅರಿಶಿಣ ಅಥವಾ ಅರಿಶಿಣ ಮಿಶ್ರಿತ ನೀರನ್ನು ಅರ್ಪಿಸಬಾರದು. ಹೀಗೆ ಮಾಡಿದರೆ ಪೂಜೆಯ ಸಂಪೂರ್ಣ ಫಲ ದೊರೆಯುವುದಿಲ್ಲ ಎಂದು ಹೇಳಲಾಗುತ್ತದೆ. ಅರಿಶಿಣವು ಮಹಿಳೆಯರಿಗೆ…