ಕೋರ್ಟ್​​ ಆವರಣದಲ್ಲಿ ಗಣಪತಿ ದೇಗುಲಕ್ಕೆ ವಿರೋಧ: ಚಿಕ್ಕಮಗಳೂರಿನಲ್ಲೊಂದು ಹೊಸ ವಿವಾದ – Kannada News | Dalit organizations Opposes To Build Ganapathi temple In Chikkamagaluru Court Ground

ಚಿಕ್ಕಮಗಳೂರು, (ಜನವರಿ 20): ನಗರದ ಹೊರವಲಯದ ಹೌಸಿಂಗ್ ಬೋರ್ಡ್ ಬಳಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯದ (Chikkamagaluru District Court) ಕಟ್ಟಡ ಕಾಮಗಾರಿ ನಡೆಯುತ್ತಿದೆ. ಸಂಪೂರ್ಣ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಆದ್ರೆ,ಈ ನೂತನ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಆವರಣದೊಳಗೆ ಗಣಪತಿ ದೇವಾಲಯ (Ganapathi temple) ನಿರ್ಮಾಣಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ. ದಲಿತ ಸಂಘಟನೆಗಳ ಒಕ್ಕೂಟ ( Dalit organizations) ಕೋರ್ಟ್​​ನ ಆವರಣದಲ್ಲಿ ಗಣಪತಿ ದೇಗುಲ ನಿರ್ಮಾಣಕ್ಕೆ ವಿರೋಧ ಮಾಡಿದ್ದು, ಈ ಸಂಬಂಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಮಟ್ಟಿಲೇರಿವೆ. ಇದರ ಬೆನ್ನಲ್ಲೇ ವಕೀಲರು ಹಾಗೂ ಸಂಘಟನೆ ಸದಸ್ಯರ ನಡುವೆ ಪರ ವಿರೋಧದ ಚರ್ಚೆ ತಾರಕಕ್ಕೇರಿದೆ.

ದಲಿತ ಸಂಘಟನೆಗಳ ವಿರೋಧ ಏಕೆ?

ದಲಿತ ಸಂಘಟನೆಗಳ ಒಕ್ಕೂಟವು ನ್ಯಾಯಾಲಯ ಸರ್ವಧರ್ಮಕ್ಕೆ ಸೇರಿದ್ದು, ಸರ್ವಧರ್ಮ ಸಮಾನತೆಯ ಸರ್ವ ಜಾತಿಗಳಿಗೂ ಸಂವಿಧಾನಿಕ ಸಮಾನತೆಯನ್ನ ಪ್ರತಿಪಾದಿಸುವ ನ್ಯಾಯಾಲಯದ ಮುಂದೆ ಒಂದು ಧರ್ಮದ ದೇವಾಲಯ ನಿರ್ಮಾಣದಿಂದ ಧಾರ್ಮಿಕ ಭಾವನೆಯನ್ನ ಏರಿಕೆ ಮಾಡಿದಂತೆ. ಸರ್ವಧರ್ಮ ಸಮಾನತೆಗೆ ಧಕ್ಕೆ ತಂದಂತೆ. ಆದ್ದರಿಂದ ಗಣಪತಿ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಪಟ್ಟು ಹಿಡಿದಿವೆ.

ಇದನ್ನೂ ನೋಡಿ: ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ

ಚಿಕ್ಕಮಗಳೂರು ಜಿಲ್ಲಾ ವಕೀಲರ ಸಂಘ ಆಕ್ರೋಶ

ಇನ್ನೂ ಕೋರ್ಟ್ ಆವರಣದಲ್ಲಿ ಇನ್ನೂ ನಿರ್ಮಾಣವಾಗದ ಗಣಪತಿ ದೇವಾಲಯಕ್ಕೆ ದಲಿತ‌ ಸಂಘಟನೆಗಳು ಆಕ್ರೋಶ ವಿರೋಧಿಸಿದ ಬೆನ್ನಲ್ಲೇ ಜಿಲ್ಲಾಡಳಿತವು, ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘಕ್ಕೆ ಜಾಗವನ್ನ ನೀಡಿದೆ. ವಕೀಲರ ಸಂಘಕ್ಕೆ ನೀಡಿರುವ ಜಾಗದಲ್ಲಿ ಗಣಪತಿ ದೇವಾಲಯ ನಿರ್ಮಾಣಕ್ಕೆ ಚಿಕ್ಕಮಗಳೂರು ವಕೀಲರ ಸಂಘ ನಿರ್ಧಾರ ಮಾಡಿದೆ. ನಾವು ನಮಗೆ ನೀಡಿರುವ ಜಾಗದಲ್ಲಿ ನಾವು ಹಣ ಹಾಕಿ ದೇವಾಲಯ ಮಾಡಿದ್ರೆ ತಪ್ಪಾ ಎಂದು ಪ್ರಶ್ನೆ ಮಾಡಿದ್ದಾರೆ.

ಹೊಸ ಕೋರ್ಟ್ ಆವರಣದಲ್ಲಿ ಗಣಪತಿ ದೇವಾಲಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವವರ ವಿರುದ್ಧ ಚಿಕ್ಕಮಗಳೂರು ಜಿಲ್ಲಾ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು,  ರಾಜ್ಯದ ಬಹುತೇಕ ನ್ಯಾಯಾಲಯಗಳು ಗಣಪತಿ ದೇವಸ್ಥಾನವಿದೆ. ಹಾಗೆಯೇ ಚಿಕ್ಕಮಗಳೂರಿನ ಕೋರ್ಟ್ ನಲ್ಲಿಯೂ ಗಣಪತಿ ದೇವಸ್ಥಾನ ಇದೆ.ಚಿಕ್ಕಮಗಳೂರು ಕೋರ್ಟಿನ ಆವರಣದಲ್ಲಿರುವ ಗಣಪತಿಗೆ ಅದರದ್ದೇ ಆದ ಇತಿಹಾಸವಿದೆ. ಹೊಯ್ಸಳರ ಕಾಲದಲ್ಲಿ ಕೆತ್ತನೆ ಮಾಡಿದ ಗಣಪತಿ ವಿಗ್ರಹವಿದು. ಬೇರೆ ದೇಶಕ್ಕೆ ಕೊಂಡೊಯ್ಯುವ ಸಂದರ್ಭದಲ್ಲಿ ಮದ್ರಾಸ್ ಹಾರ್ಬರ್ ವಿಗ್ರಹ ಸಿಕ್ಕಿತ್ತು ಎಂದಿದ್ದಾರೆ.

ಗಣಪತಿ ವಿಗ್ರಹದ ಇತಿಹಾಸ ಬಿಚ್ಚಿಟ್ಟ ವಕೀಲರು

ಇನ್ನು ದಲಿತ ಸಂಘಟನೆ ವಿರೋಧ ವ್ಯಕ್ತಪಡಿಸುತ್ತಿರುವ ಗಣಪತಿ ವಿಗ್ರಹಕ್ಕೆ ಇತಿಹಾಸವಿದ್ದು, ಅದನ್ನು ವಕೀಲರ ಸಂಘ ಅಧ್ಯಕ್ಷ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹೊಯ್ಸಳರ ಕಾಲದಲ್ಲಿ ಕೆತ್ತನೆ ಮಾಡಿದ ಗಣಪತಿ ವಿಗ್ರಹ 1960ರ ದಶಕದಲ್ಲಿ ಕಳವಾಗಿತ್ತು. ಈ ಪ್ರಕರಣ 1970ರಲ್ಲಿ ನಮ್ಮ ನ್ಯಾಯಾಲಯಕ್ಕೆ ಬಂದಿತ್ತು. ಬಳಿಕ ಗಣಪತಿ ಕಳುವಾದ ಸಂಬಂಧಪಟ್ಟ ಕೇಸ್ ಇಲ್ಲೇ ಅಂತ್ಯವಾಗಿತ್ತು. ಇನ್ನು ಕೇಸ್ ಮುಕ್ತಾಯವಾದ ವಸ್ತುಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ಇದನ್ನ ಇಲ್ಲಿಯೇ ಉಳಿಸಿಕೊಳ್ಳಲಾಗಿತ್ತು.1972 ರಲ್ಲಿ ಅಂದಿನ ನ್ಯಾಯಾಧೀಶರು ವಕೀಲರು ನ್ಯಾಯಾಲಯದ ಸಿಬ್ಬಂದಿ ಸೇರಿ ಇದನ್ನ ಇಲ್ಲಿ ಪ್ರತಿಷ್ಠಾಪನೆ ಮಾಡಿದ್ದರು. ಇದೀಗ ಹೊಸ ಕೋರ್ಟ್ ಕಟ್ಟಡವಾಗಿದೆ. ಈ ಗಣಪತಿಯನ್ನ ಇಲ್ಲಿ ಅನಾಥವಾಗಿ ಬಿಟ್ಟು ಹೋಗಲ್ಲ. ಹೊಸದಾಗಿ ಕಟ್ಟಡ ನಿರ್ಮಾಣವಾಗಿದೆ. ಅದರ ಪಕ್ಕದಲ್ಲಿಯೇ ವಕೀಲರಿಗಾಗಿ ಜಾಗವನ್ನು ಮೀಸಲಿಡಲಾಗಿದೆ ಆ ಜಾಗದಲ್ಲಿ ಗಣಪತಿ ದೇವಸ್ಥಾನ ಕಟ್ಟಿದರೆ ತಪ್ಪೇನು ಎನ್ನುವುದು ವಕೀಲರ ವಾದ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೇಳಿದ್ದಿಷ್ಟು

ಇದೆ ವಿಚಾರಕ್ಕೆ ಎರಡು ಬಾರಿ ವಕೀಲರ ಸಂಘದಲ್ಲಿ ಸಭೆ ನಡೆಸಲಾಗಿದ್ದು, ಎರಡು ಸಭೆಯಲ್ಲಿಯೂ ಒಮ್ಮತದ ನಿರ್ಧಾರ ಮಾಡಲಾಗಿದೆ. ನಮ್ಮ ಹಣದಿಂದ,ಸಿಬ್ಬಂದಿ ಹಣದಿಂದ ದೇವಸ್ಥಾನ ಕಟ್ಟುತ್ತಿದ್ದೇವೆ.
ನಾವು ಕಟ್ಟಲು ಹೊರಟಿರುವುದು ನ್ಯಾಯಾಲಯದ ಒಳಗೂ ಅಲ್ಲ ಹೊರಗೂ ಅಲ್ಲ. ನಮಗೆ ನಮ್ಮ ವಕೀಲರ ಭವನಕ್ಕೆ ನೀಡಿರುವ ಜಾಗದಲ್ಲಿ ವಕೀಲರು ಧರ್ಮಾತೀತವಾಗಿ ಗಣಪತಿ ದೇವಸ್ಥಾನ ಕಟ್ಟಲು ಒಪ್ಪಿದ್ದಾರೆ.
ಗಣಪತಿ ಎಲ್ಲಾ ಧರ್ಮದವರಿಗೂ ಸೇರಿದವನು. ನಾವಿನ್ನು ದೇವಾಲಯವನ್ನ ಕಟ್ಟಿಯೇ ಇಲ್ಲ. ಆಗಲೇ ವಿವಾದ ‌ಮಾಡುತ್ತಿರುವುದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಬಹುತೇಕ ಕೋರ್ಟ್ ನಲ್ಲಿ‌ ಗಣಪತಿ ದೇವಾಲಯಗಳಿದೆ. ಆದ್ರೆ ಕಾಫಿನಾಡಿನಲ್ಲಿ ನಿರ್ಮಾಣವಾಗಿರುವ ನೂತನ ‌ಕೋರ್ಟ್ ನಲ್ಲಿ‌ ಗಣಪತಿ ದೇವಾಲಯ ‌ನಿರ್ಮಾಣಕ್ಕೂ ಮುನ್ನವೇ ವಿವಾದ ಸೃಷ್ಟಿಯಾಗಿದೆ. ಗಣಪತಿ ದೇವಾಲಯ ನಿರ್ಮಾಣ ವಿವಾದ ಇನ್ಯಾವ ಹೊಸ ಸ್ವರೂಪ ಪಡೆಯುತ್ತೋ ಗೊತ್ತಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೋಮಲ್‌ ಹೊಸ ಸಿನಿಮಾ ‘ತೆನಾಲಿ DA LLB’; ಮೊದಲ ಬಾರಿ ಲಾಯರ್ ಪಾತ್ರ – Kannada News | Komal Kumar starrer Tenali DA LLB movie poster released

ಕಾಮಿಡಿ ಸಿನಿಮಾಗಳಿಂದ ಹೆಸರಾದ ನಟ ಕೋಮಲ್ ಕುಮಾರ್ (Komal Kumar) ಅವರು ಹೊಸ ಕಥೆ ಮೂಲಕ ಅಭಿಮಾನಿಗಳನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಕಳೆದ ವರ್ಷ ಅವರು ನಟಿಸಿದ ‘ಕೋಣ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ‘ತೆನಾಲಿ DA LLB’ ಸಿನಿಮಾದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿರುವ ಕೋಮಲ್‌ ಅವರು ಬಂದ ಸಿನಿಮಾಗಳನ್ನೆಲ್ಲ ಒಪ್ಪಿಕೊಳ್ಳಲ್ಲ. ಸಾಕಷ್ಟು ಕಥೆಗಳನ್ನು ಕೇಳಿ ವಿಭಿನ್ನ ಎನಿಸುವ ಕಥೆಗೆ ಮಾತ್ರ ಸಹಿ ಮಾಡುತ್ತಿದ್ದಾರೆ. ಈಗ ಅವರಿಗೆ ‘ತೆನಾಲಿ ಡಿಎ ಎಲ್​ಎಲ್​ಬಿ’ (Tenali DA LLB) ಸಿನಿಮಾದ ಕಥೆ ಇಷ್ಟ ಆಗಿದೆ.

ಶೀರ್ಷಿಕೆಯೇ ಸೂಚಿಸುವಂತೆ ‘ತೆನಾಲಿ DA LLB’ ಸಿನಿಮಾದಲ್ಲಿ ಕೋಮಲ್ ಕುಮಾರ್ ಅವರು ಲಾಯರ್ ಪಾತ್ರ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಪೋಸ್ಟರ್​​ನಲ್ಲಿ ಕೋಮಲ್ ಅವರ ಪಾತ್ರದ ಗೆಟಪ್ ಕಾಣಿಸಿದೆ. ಕಪ್ಪು ಕೋಟು ಧರಿಸಿ, ಲಾಯರ್ ಗೆಟಪ್​​ನಲ್ಲಿ ಕೋಮಲ್ ಅವರು ಪೋಸ್ ನೀಡಿದ್ದಾರೆ.

‘ತೆನಾಲಿ ಡಿಎ ಎಲ್‌ಎಲ್‌ಬಿ’ ಸಿನಿಮಾವನ್ನು ಸಿದ್ದ್ರುವ್‌ ಸಿದ್ದು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ವಿಜಯ್ ರಾಘವೇಂದ್ರ ಅಭಿನಯದ ‘ಮರೀಚಿ’ ಸಿನಿಮಾಗೆ ಸಿದ್ದ್ರುವ್‌ ಸಿದ್ದು ಆ್ಯಕ್ಷನ್-ಕಟ್ ಹೇಳಿದ್ದರು. ವಿಮರ್ಶೆಯ ದೃಷ್ಟಿಯಿಂದ ಆ ಸಿನಿಮಾ ಗಮನ ಸೆಳೆದಿತ್ತು. ‘ಮರೀಚಿ’ ಬಳಿಕ ಸಿದ್ದ್ರುವ್‌ ಸಿದ್ದು ಅವರು ಕೋಮಲ್‌ ಅವರಿಗಾಗಿ ವಿಭಿನ್ನವಾದ ಕಥೆ ಬರೆದುಕೊಂಡಿದ್ದಾರೆ. ಇದು ಈಗಿನ ಕಾಲಘಟ್ಟಕ್ಕೆ ಸರಿಹೊಂದುವ ಕಥೆ ಎಂದು ಚಿತ್ರತಂಡ ಹೇಳಿದೆ.

ಸದ್ಯಕ್ಕೆ ಪೋಸ್ಟರ್‌ ಬಿಡುಗಡೆ ಮಾಡಿರೋ ‘ತೆನಾಲಿ ಡಿಎ ಎಲ್‌ಎಲ್‌ಬಿ’ ಚಿತ್ರತಂಡ ಮೇ ತಿಂಗಳಲ್ಲಿ ಶೂಟಿಂಗ್ ಆರಂಭಿಸಲಿದೆ. ವಿಶೇಷ ಏನೆಂದರೆ, ಇದೇ ಮೊದಲ ಬಾರಿಗೆ ಲಾಯರ್‌ ಆಗಿ ನಟನೆ ಮಾಡುತ್ತಿರುವ ಕೋಮಲ್‌ ಕುಮಾರ್ ಅವರು ನಿಜ ಜೀವನದಲ್ಲಿಯೂ ಎಲ್​ಎಲ್​ಬಿ ಓದಿದ್ದಾರೆ. ಈಗ ತೆರೆ ಮೇಲೆ ಲಾಯರ್‌ ಆಗಿ ಮಿಂಚಲು ಅವರು ರೆಡಿಯಾಗಿದ್ದಾರೆ.

ಇದನ್ನೂ ಓದಿ: ತುಳು ಕಲಿಯಲು ಪ್ರಯತ್ನಿಸುತ್ತಿರುವ ನಟ ಕೋಮಲ್

ಸಿದ್ದ್ರುವ್‌ ಸಿದ್ದು ಅವರು ‘ತೆನಾಲಿ ಡಿಎ ಎಲ್‌ಎಲ್‌ಬಿ’ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಸಿದ್ದ್ರುವ್‌ ಸಿದ್ದು, ಸಂತೋಷ್‌ ಮಾಯಪ್ಪ, ರೇಣುಕಾ ಪ್ರಸಾದ್‌, ಪ್ರದೀಪ್‌ ಕುಮಾರ್‌ ಮಹಾಲಿಂಗಯ್ಯ ಅವರು ಬಂಡವಾಳ ಹೂಡುತ್ತಿದ್ದಾರೆ. ರಿತ್ವಿಕ್‌ ಮುರಳಿಧರ್ ಅವರ ಸಂಗೀತ ನಿರ್ದೇಶನ, ಉದಯ್‌ ಲೀಲಾ ಅವರ ಛಾಯಾಗ್ರಹಣ ಈ ಸಿನಿಮಾಗೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ – Kannada News | Kavya talks about why she participated in Bigg Boss show

ಬಿಗ್​​ಬಾಸ್ (Bigg Boss) ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್​​ಬಾಸ್​​ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್​​ಬಾಸ್​​ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್​​ಬಾಸ್​ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ – Kannada News | BBK 12 Rakshita Shetty purchased home in Mumbai by her YouTube earnings

ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಮೂಲಕ ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಾಯಿತು. ಈ ಶೋನಲ್ಲಿ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ರಕ್ಷಿತಾ ಶೆಟ್ಟಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನವೇ ಮುಂಬೈನಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಮನೆ ಖರೀದಿ ಮಾಡಿದ್ದರು. ಅದು ಹೇಗೆ ಸಾಧ್ಯವಾಯ್ತು ಎಂಬುದನ್ನು ಅವರು ಟಿವಿ9 ಸಂದರ್ಶನದಲ್ಲಿ ವಿವರಿಸಿದ್ದಾರೆ.

‘ಯೂಟ್ಯೂಬ್ ಹಣ ತಕ್ಷಣಕ್ಕೆ ಬರಲ್ಲ. ಸಾವಿರ ವೀವ್ಸ್ ಬಂದರೆ ಅದರಿಂದ 70 ರೂಪಾಯಿ ಬರುತ್ತದೆ. ಹೆಚ್ಚು ವೀವ್ಸ್ ಬಂದರೆ ಹಣ ಆಗುತ್ತದೆ. ಎಲ್ಲ ವಿಡಿಯೋ ಓಡುತ್ತೆ ಅಂತ ಹೇಳೋಕೆ ಆಗಲ್ಲ. ಮನೆ ತೆಗೆದುಕೊಂಡಿದ್ದು ನನಗೆ ದೊಡ್ಡ ರಿಸ್ಕ್. ಯಾಕೆಂದರೆ, ಯೂಟ್ಯೂಬ್ ಹಣ ಸತತವಾಗಿ ಬರುತ್ತೆ ಅಂತ ಹೇಳೋಕೆ ಆಗಲ್ಲ. ಈ ತಿಂಗಳು ನಾನು ಒಂದು ಲಕ್ಷ ದುಡಿದರೆ, ಇನ್ನೊಂದು ದಿನಗಳು ಬರೀ 5 ಸಾವಿರ ಆಗಬಹುದು’ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ.

‘ಅದರಿಂದ ಸ್ವಲ್ಪ ಸ್ವಲ್ಪ ಹಣ ಉಳಿತಾಯ ಮಾಡಿ ನಾನು ಮನೆಗೆ ಡೌನ್​ ಪೇಮೆಂಟ್ ಮಾಡಿದ್ದೇನೆ. ಇಎಂಐ ಕಟ್ಟುತ್ತಿದ್ದೇನೆ. ನಮ್ಮಂತಹ ಕೆಳ ಮಧ್ಯಮ ವರ್ಗದ ಕುಟುಂಬದವರಿಗೆ ಉಳಿತಾಯ ಮಾಡೋದು ಕಷ್ಟ. ನಾನು ಹೆಚ್ಚು ಖರ್ಚು ಮಾಡಲ್ಲ. ಆದರೆ ತಿನ್ನಲು ಖರ್ಚು ಮಾಡುತ್ತೇನೆ. ಮನೆಯವರಿಗಾಗಿ ಖರ್ಚು ಮಾಡುತ್ತೇನೆ. ಅದರಲ್ಲಿ ನನಗೆ ನೆಮ್ಮದಿ ಸಿಗುತ್ತದೆ’ ಎಂದಿದ್ದಾರೆ ರಕ್ಷಿತಾ ಶೆಟ್ಟಿ.

‘ಹೀಗೆ ಹಣ ಉಳಿತಾಯ ಮಾಡಿ, ನಾನು ಮನೆ ಖರೀದಿಸಲು ಡೌನ್ ಪೇಮೆಂಟ್ ಮಾಡಿದ್ದು ಯೂಟ್ಯೂಬ್​​ನಿಂದಲೇ. 15 ಲಕ್ಷ ರೂಪಾಯಿ ಡೌನ್ ಪೇಮೆಂಟ್ ಅಂದುಕೊಂಡು ಹೋಗುತ್ತೇನೆ. ಇನ್ನುಳಿದ ಖರ್ಚು ಸೇರಿ 35 ಲಕ್ಷ ರೂಪಾಯಿಗೆ ಏರಿಕೆ ಆಗುತ್ತದೆ. ಆ ಸಂದರ್ಭದಲ್ಲಿ ಕೈಯಲ್ಲಿ ದುಡ್ಡು ಇರಬೇಕಾಗುತ್ತದೆ. ಅದು ಸುಲಭ ಅಲ್ಲ. ಈಗ ಸಾಲ ತೀರಿಸುತ್ತಾ ಇದ್ದೇನೆ’ ಎಂದು ರಕ್ಷಿತಾ ಶೆಟ್ಟಿ ಅವರು ಹೇಳಿದ್ದಾರೆ.

ಇದನ್ನೂ ಓದಿ: 25 ಲಕ್ಷ ರೂಪಾಯಿ ಹಣವನ್ನು ಏನ್​​ ಮಾಡ್ತೀರಾ? ಇದನ್ನು ಖರೀದಿಸುವುದು ನನ್ನ ಆಸೆ ಎಂದ ರಕ್ಷಿತಾ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಬಂದ ಬಳಿಕ ರಕ್ಷಿತಾ ಶೆಟ್ಟಿ ಅವರ ಜನಪ್ರಿಯತೆ ಜಾಸ್ತಿ ಆಗಿದೆ. ಇದು ಅವರ ಮೊದಲ ರಿಯಾಲಿಟಿ ಶೋ. ಮೊದಲನೇ ಪ್ರಯತ್ನದಲ್ಲೇ ಅವರು ಫಿನಾಲೆ ತನಕ ಬಂದು ರನ್ನರ್ ಅಪ್ ಆದರು. ತುಳುನಾಡಿನಲ್ಲಿ ರಕ್ಷಿತಾ ಶೆಟ್ಟಿ ಅವರಿಗೆ ತುಂಬ ಬೆಂಬಲ ಸಿಕ್ಕಿತು. ಗಿಲ್ಲಿ ನಟ ಅವರು ಈ ಶೋ ವಿನ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್​​​​​ ವಂಡರ್‌ಫುಲ್‌ ಎಂದ ಜಪಾನಿನ ವ್ಯಕ್ತಿ! – Kannada News | Japanese Creator’s Viral Bangalore Food Journey: Rameswaram Cafe’s 200 South Indian Meal

ಬೆಂಗಳೂರು, ಜ.20: ಬೆಂಗಳೂರಿನ ಬಗ್ಗೆ ಕೆಲವರು ದೂರುತ್ತಾರೆ, ಇನ್ನು ಕೆಲವರು ಮೆಚ್ಚಿಕೊಳ್ಳುತ್ತಾರೆ.  ಸಿಲಿಕಾನ್​​​​​ ಸಿಟಿಯಲ್ಲಿ ಎಲ್ಲವೂ ಸಿಗುತ್ತದೆ. ಎಲ್ಲದಕ್ಕೂ ಅವಕಾಶ ಇದೆ. ಅದಕ್ಕೆ ಅನೇಕರಿಗೆ ಇಷ್ಟು, ಇನ್ನು ಕೆಲವೊಮ್ಮೆ ಕೊಲೆ, ದರೋಡೆ, ಅತ್ಯಾಚಾರ, ಕೆಲವೊಂದು ಬೆಚ್ಚಿ ಬೀಳಿಸುವ ಘಟನೆಗಳು, ಜತೆಗೆ ಹೆಚ್ಚಿನ ಜನರಿಗೆ ತೊಂದರೆ ಆಗಿರುವುದು ಇಲ್ಲಿನ ಟ್ರಾಪಿಕ್, ಈ ಕಾರಣಗಳಿಂದ ಬೆಂಗಳೂರು ಅಪಾಯ ಎಂದು ಕೆಲವರಿಗೆ ಅನ್ನಿಸುತ್ತದೆ. ಉಳಿದಂತೆ ಬೆಂಗಳೂರಿನಲ್ಲಿ ಎಲ್ಲವೂ ಉತ್ತಮವಾಗಿದೆ. ಅದರಲ್ಲೂ ಆಹಾರ ವಿಚಾರದಲ್ಲಿ (Bangalore food)  ಒಂದು ಕೈ ಹೆಚ್ಚು, ಇಲ್ಲಿ ಎಲ್ಲ ಊರಿನ, ಎಲ್ಲ ಬಗೆಯ ಆಹಾರಗಳು ಸಿಗುತ್ತದೆ. ಇದೀಗ ಜಪಾನ್​​​​​ನ ವ್ಯಕ್ತಿಗೆ ಆಹಾರದಿಂದ ಬೆಂಗಳೂರು ತುಂಬಾ ಇಷ್ಟವಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಜಪಾನಿನ ಕಂಟೆಂಟ್ ಕ್ರಿಯೇಟರ್ ಒಬ್ಬರು ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಇವರು ತಮಗೆ ಇಷ್ಟವಾದ ಆಹಾರವನ್ನು ಖರೀದಿಸುವ ಬದಲು, ತಪ್ಪಿ ದಕ್ಷಿಣ ಭಾರತದ ಆಹಾರವನ್ನು ಆರ್ಡರ್​​ ಮಾಡಿದ್ದಾರೆ. ಇದೀಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಶೋ ಟೇಕಿ ಎಂಬ ಕಂಟೆಂಟ್ ಕ್ರಿಯೇಟರ್ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಸಸ್ಯಾಹಾರಿ ಉಪಾಹಾರ ಗೃಹಕ್ಕೆ ನಾನು ಮೊದಲ ಬಾರಿಗೆ ಭೇಟಿ ನೀಡಿದ್ದೇನೆ. ಇಲ್ಲಿ ನಾನು ನನಗೆ ಇಷ್ಟವಾದ ಆಹಾರ ಆರ್ಡರ್​ ಮಾಡುವ ಬದಲು, ಹೊಸದಾಗಿ ಏನಿದೆ ಎಂದು ಅಲ್ಲಿನ ಸಿಬ್ಬಂದಿಯನ್ನು ಕೇಳಿದ್ದೇನೆ. ಅದಕ್ಕೆ ಅವರು ಕರ್ನಾಟಕ ಶೈಲಿಯ ಮುದ್ದೆ ಊಟ ಕೊಟ್ಟಿದ್ದಾರೆ. ವರ್ಣರಂಜಿತ, ಸಾಂಪ್ರದಾಯಿಕ ಖಾದ್ಯಗಳಾದ, ಸಾದಾ ಅನ್ನ, ರಾಗಿ ಮುದ್ದೆ, ಮಸಾಲೆ ವಡೆ, ಪರಿಮಳಯುಕ್ತ ಸಾಂಬಾರ್, ಮೆಣಸಿನಕಾಯಿ ರಸಂ, ಕೋಸಂಬರಿ, ಉಪ್ಪಿನಕಾಯಿ, ಮೊಸರು ಮತ್ತು ಮೆಣಸಿನಕಾಯಿ ನೀಡಿದರು. ಕೊನೆಗೆ ಒಂದು ಕಪ್ ಫಿಲ್ಟರ್ ಕಾಫಿ ಕುಡಿದು ಊಟದ ಗಮ್ಮತ್​​​ ಮುಗಿಸಿದ್ದೇನೆ ಎಂದು ಹೇಳಿದ್ದಾರೆ. ಊಟ ಎಲ್ಲ ಮುಗಿಸಿದ ನಂತರ ಬಿಲ್​ ನೋಡಿ ಅಚ್ಚರಿಗೊಂಡಿದ್ದಾರೆ. ಕೇವಲ 200 ರೂ. ಆಗಿದೆ ಎಂದು ಹೇಳಿದ್ದಾರೆ. ಪ್ರಾಮಾಣಿಕವಾಗಿ ಹೇಳುವುದಾದರೆ, ನಾನು ಸಸ್ಯಾಹಾರಿ ಆಹಾರವನ್ನು ಕಡಿಮೆ ಸೇವನೆ ಮಾಡುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್​​ ಶಾಕ್: ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್

ಇಲ್ಲಿದೆ ನೋಡಿ ವೈರಲ್​ ಪೋಸ್ಟ್​:

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನೀವು ಸಾಂಪ್ರದಾಯಿಕ ತಿಂಡಿ ಕೇಳಿದ್ದೀರಿ, ಅದಕ್ಕೆ ಈ ಆಹಾರವನ್ನು ನೀಡಿದ್ದಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು ತುಂಬಾ ಯೋಗ್ಯ ಸ್ಥಳದಲ್ಲಿ ಊಟ ಮಾಡಿದ್ದೀರಾ ಎಂದು ಕಮೆಂಟ್​ ಮಾಡಿದ್ದಾರೆ. ಇಲ್ಲಿ ಎಲ್ಲರೂ ಅಕ್ಷರಶಃ ಇಂಗ್ಲಿಷ್ ಮಾತನಾಡುತ್ತಾರೆ. ಅವರಿಗೆ ಏನು ಬೇಕಾದರೂ ಕೇಳಿ ನಿರಾಳರಾಗಿರಿ. ಅವರು ಕೇಳಲು ಮತ್ತು ಸಹಾಯ ಮಾಡಲು ಸಿದ್ಧ ಎಂದು ಮತ್ತೊಬ್ಬರು ಹೇಳಿದ್ದಾರೆ. ನೀವು ಇನ್ನೊಮ್ಮೆ ಮೇಘನಾ ಬಿರಿಯಾನಿ ಪ್ರಯತ್ನಿಸಿ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು? – Kannada News | What is future plans of Bigg Boss Kannada runner up Rakshita Shetty

ರಕ್ಷಿತಾ ಶೆಟ್ಟಿ (Rakshita Shetty) ಬಿಗ್​​ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಮೊದಲ ದಿನವೇ ಶೋನಿಂದ ಹೊರ ಹಾಕಲ್ಪಟ್ಟ ರಕ್ಷಿತಾ ಶೆಟ್ಟಿ ಮತ್ತೆ ರೀ ಎಂಟ್ರಿ ಆಗಿ ಕೊನೆಯ ದಿನದ ವರೆಗೆ ಇದ್ದಿದ್ದು ಸಾಮಾನ್ಯ ಸಾಧನೆಯಲ್ಲ. ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್ ಮುಂದುವರೆಸುತ್ತಾರಾ? ಮನೊರಂಜನಾ ಕ್ಷೇತ್ರಕ್ಕೆ ಕಾಲಿಡುತ್ತಾರಾ? ರಕ್ಷಿತಾ ಮುಂದಿರುವ ಆಯ್ಕೆಗಳು ಏನೇನು? ಅವರೇ ಹೇಳಿದ್ದಾರೆ ಕೇಳಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

Source link

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು – Kannada News | Dharmasthala Mass Burial Case: 7 Skeletons from Banglegudde Forest Sent to FSL for Probe

ಮಂಗಳೂರು, ಜನವರಿ 20: ಧರ್ಮಸ್ಥಳದ (Dharmasthala) ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಮಾನವನ 7 ಅಸ್ಥಿಪಂಜರಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್​​ಐಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಮಾನವನ 7 ಅಸ್ಥಿಪಂಜರ ಪತ್ತೆಯಾಗಿದ್ದವು. 2025ರ ಸೆಪ್ಟೆಂಬರ್​ 17ರಂದು 5 ಮತ್ತು ಸೆ.18ರಂದು 2 ಒಟ್ಟು ಏಳು ಅಸ್ಥಿಪಂಜರಗಳನ್ನು ಎಸ್​ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದರು.

ಇದನ್ನೂ ಓದಿ: ಬುರುಡೆ ಕೇಸ್​​ಗೆ ಎಂಟ್ರಿಕೊಟ್ಟ ಶ್ರೀಕ್ಷೇತ್ರ ಧರ್ಮಸ್ಥಳ: ಕೋರ್ಟ್​​ನಲ್ಲಿ ವಕಾಲತ್ತು ಸಲ್ಲಿಕೆ

ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಿತಿಯಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಸದ್ಯ ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿ ಎಸ್​​ಐಟಿ ಕಚೇರಿಯಿಂದ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್ ಕಚೇರಿಗೆ ಅಸ್ಥಿಪಂಜರಗಳನ್ನು ರವಾನಿಸಲಾಗಿದೆ.

ಇನ್ನು ಅಸ್ಥಿಪಂಜರದ ಜಾಡು ಹಿಡಿದು ಹೊರಟ್ಟಿದ್ದ ಎಸ್​ಐಟಿ ಮಹತ್ವದ ಮಾಹಿತಿ ಕಲೆ ಹಾಕಿತ್ತು. ಪತ್ತೆಯಾಗಿದ್ದ 7 ಬುರುಡೆಗಳ ಪೈಕಿ ಒಂದು ಬುರುಡೆ ಕೊಡಗಿನ ಯು.ಬಿ.ಅಯ್ಯಪ್ಪ ಎಂಬುದು ಬಹುತೇಕ ಖಚಿತವಾಗಿತ್ತು. ಅಸ್ಥಿಪಂಜರ ಪತ್ತೆಯಾದ ಜಾಗದಲ್ಲಿ ಹಿರಿಯ ನಾಗರಿಕರೊಬ್ಬರ ಗುರುತಿನ ಚೀಟಿ ಪತ್ತೆಯಾಗಿತ್ತು. ಜೊತೆಗೆ ತ್ರಿ ಲೆಗ್ ಬ್ಯಾಲೆನ್ಸ್ ವಾಕಿಂಗ್ ಸ್ಟಿಕ್​ ಕೂಡ ಪತ್ತೆಯಾಗಿತ್ತು.

ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಗುರುತಿನ ಚೀಟಿ ಕೊಡಗು ಮೂಲದ ಯು.ಬಿ. ಅಯ್ಯಪ್ಪ ಎಂಬುವರಿಗೆ ಸೇರಿದ್ದಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ ಅಯ್ಯಪ್ಪ ಏಳು ವರ್ಷಗಳ ಹಿಂದೆಯೇ ಕಾಣೆಯಾಗಿದ್ದರು. ಮೈಸೂರಿಗೆ ಚಿಕಿತ್ಸೆಗೆಂದು ತೆರಳಿದವರು ನಾಪತ್ತೆಯಾಗಿದ್ದರು. ಅಯ್ಯಪ್ಪ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು‌‌. ಈ ವೇಳೆ ಅವರ ಬಳಿ ತ್ರಿ ಲೆಗ್ ಬ್ಯಾಲೆನ್ಸ್ ವಾಕಿಂಗ್ ಸ್ಟಿಕ್ ಇದ್ದಿದ್ದಾಗಿ ಉಲ್ಲೇಖಿಸಲಾಗಿತ್ತು. ಹಾಗಾಗಿ ಆ ಅಸ್ಥಿಪಂಜರ ಅಯ್ಯಪ್ಪ ಅವರದ್ದೇ ಎಂದು ಎಸ್​ಐಟಿ ಶಂಕಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On – 5:49 pm, Tue, 20 January 26

Source link

ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ಕೇಸ್​​​​: ಸರ್ಕಾರದ ಮುಂದಿರುವ ಸವಾಲುಗಳೇನು? – Kannada News | DGP Ramachandra Rao Scandal: Several Challenges for the Karnataka Government During the Investigation

ಬೆಂಗಳೂರು, ಜನವರಿ 20: ತಮ್ಮ ಕಚೇರಿಯಲ್ಲಿಯೇ ಮಹಿಳೆ ಜೊತೆ ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ನಡೆಸಿರುವ ವಿಡಿಯೋ ಮತ್ತು ಆಡಿಯೋ ರಾಜ್ಯಾದ್ಯಂತ ಹಲ್​​ಚಲ್​​ ಸೃಷ್ಟಿಸಿದೆ. ವಿಚಾರ ಭಾರೀ ಮುಜುಗರ ಉಂಟುಮಾಡಿದ ಕಾರಣ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಮತ್ತೊಂದೆಡೆ ವಿಡಿಯೋ ವೈರಲ್​​ ಬೆನ್ನಲ್ಲೇ ಗೃಹ ಸಚಿವರ ಭೇಟಿಯಾಗಿದ್ದ ಡಿಜಿಪಿ 10 ದಿನಗಳ ಕಾಲ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅಧಿಕಾರಿ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತಿದ್ದರೂ ಒಂದಿಷ್ಟು ಪ್ರಶ್ನೆಗಳು ಈ ವಿಚಾರದಲ್ಲಿ ಉದ್ಭವಿಸಿವೆ.

ಪ್ರಶ್ನೆ 1: ಪ್ರಕರಣದ ತನಿಖೆ ಯಾರಿಂದ?

ಹೇಳಿಕೇಳಿ ರಾಮಚಂದ್ರ ರಾವ್​​ ಹಿರಿಯ ಐಪಿಎಸ್​​ ಅಧಿಕಾರಿ. ಡಿಜಿಪಿ ಹುದ್ದೆಯ ಅಧಿಕಾರಿ. ಹೀಗಾಗಿ ಅವರಿಗಿಂತ ಜೂನಿಯರ್​​ ಅಧಿಕಾರಿಯಿಂದ ತನಿಖೆ ಒಪ್ಪಲಾಗದ ಮಾತು. ಹೀಗಾಗಿ ಪ್ರಕರಣದ ತನಿಖೆ ಮತ್ತೋರ್ವ ಡಿಜಿಪಿಯಿಂದಲೇ ಆಗಬೇಕಾದ ಅನಿವಾರ್ಯತೆ ಇದೆ. ತನಿಖಾ ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಕ್ಕೆ ಮುಜುಗರ ಆಗಿದ್ದಕ್ಕೆ ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​​ ಹೇಳಿದ್ದರೂ ಸಹ ಪ್ರಕರಣದ ತನಿಖೆಗೆ ಯಾರನ್ನು ಇನ್ನೂ ನೇಮಕ ಮಾಡಿಲ್ಲ ಎಂಬುದನ್ನೂ ಸ್ಪಷ್ಟವಾಗಿ ಉಲ್ಲೇಖಿಸಿರೋದಿಲ್ಲಿ ಗಮನಾರ್ಹ.

ಇದನ್ನೂ ಓದಿ: ಯಾರು ಈ ರಾಮಚಂದ್ರ ರಾವ್​​? ಕಚೇರಿಯಲ್ಲೇ ರಾಸಲೀಲೆ ಮಾಡಿ ಸಿಕ್ಕಿಬಿದ್ದ ಡಿಜಿಪಿ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ

ಪ್ರಶ್ನೆ 2: ಸಂತ್ರಸ್ತ ಮಹಿಳೆ ದೂರು ಕೊಡದಿದ್ದಲ್ಲಿ ಮುಂದೇನು?

ವೈರಲ್​​ ಆಗಿರುವ ವಿಡಿಯೋದಲ್ಲಿ ರಾಮಚಂದ್ರರಾವ್​​ ಜೊತೆಗಿರುವ ಸಂತ್ರಸ್ತ ಮಹಿಳೆ ಬೆಳಗಾವಿ ಮೂಲದ ಪ್ರಾಧ್ಯಾಪಕಿಯಾಗಿದ್ದರು ಎಂಬುದು ಗೊತ್ತಾಗಿದೆ. ಗಂಡ ಮತ್ತು ಹೆಂಡತಿ ನಡುವೆ ಗಲಾಟೆ ಹಿನ್ನೆಲೆ ಆಕೆ ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದರು. ಅಲ್ಲಿ ಸರಿಯಾದ ರೀತಿಯಲ್ಲಿ ನ್ಯಾಯ ಸಿಗದ ಕಾರಣ 6 ವರ್ಷದ ಹಿಂದೆ ಬೆಳಗಾವಿಯ ಐಜಿಯಾಗಿದ್ದ ರಾಮಚಂದ್ರರಾವ್ ಅವರನ್ನು ಸಂಪರ್ಕಿಸಿದ್ದರು. ಬಳಿಕ ಆಕೆ ಮತ್ತು ರಾಮಚಂದ್ರರಾವ್​​ ನಡುವೆ ಸಲುಗೆ ಬೆಳೆದಿತ್ತು ಎನ್ನಲಾಗಿದೆ. ಆದರೆ ಅಧಿಕಾರಿಯಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಸಂತ್ರಸ್ತೆ ಈವರೆಗೂ ದೂರು ಕೊಟ್ಟಿಲ್ಲ.

ಪ್ರಶ್ನೆ 3: ಅಧಿಕಾರಿ ಮೇಲೆ ಕ್ರಮಕ್ಕೆ ವಿಡಿಯೋ ಅಸಲೀಯತ್ತು ಸಾಕಲ್ಲವೇ?

ಒಂದೊಮ್ಮೆ ಸಂತ್ರಸ್ತೆ ದೂರು ನೀಡಲು ಹಿಂದೇಟು ಹಾಕಿದರೂ ವೈರಲ್​​ ಆಗಿರುವ ವಿಡಿಯೋ ಅಸಲೀಯತ್ತನ್ನು ಸರ್ಕಾರ ತಿಳಿದುಕೊಳ್ಳಬಹುದು. FSL ವರದಿ ಆಧರಿಸಿ ಘಟನೆ ಸತ್ಯ ಎಂಬುದು ಸಾಭೀತಾದರೂ ರಾಮಚಂದ್ರರಾವ್​​ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬಹುದು. ಸರ್ಕಾರಿ ಕಚೇರಿಯಲ್ಲಿ ಅದರಲ್ಲೂ ಸಮವಸ್ತ್ರದಲ್ಲೇ ಅಧಿಕಾರಿ ಚಕ್ಕಂದ ಆಡಿರುವುದು ಪೊಲೀಸ್​​ ಯೂನಿಫಾರಂಗೇ ಮಾಡಿರುವ ದೊಡ್ಡ ಅವಮಾನ.

ಪ್ರಶ್ನೆ 4: ಸೇವಾ ಅವಧಿ ಉಳಿದುರುವುದೇ ಕೆಲ ತಿಂಗಳು; ಕ್ರಮ ಯಾವಾಗ?

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಮಚಂದ್ರ ರಾವ್​​ ಅವರ ಸೇವಾ ಅವಧಿ ಉಳಿದಿರುವುದೇ ಇನ್ನು ಕೆಲವು ತಿಂಗಳುಗಳು ಮಾತ್ರ. ಹೀಗಿರುವಾಗ ಘಟನೆಯ ತನಿಖೆಯ ಬಗ್ಗೆ ಇನ್ನೂ ತನಿಖಾಧಿಕಾರಿಯನ್ನೇ ನೇಮಿಸದ ಸರ್ಕಾರ ಪ್ರಕರಣದ ಸತ್ಯಾಸತ್ಯತೆ ತಿಳಿಯೋದು ಯಾವಾಗ? ತನಿಖೆ ಮುಗಿದು ಅದರ ವರದಿ ಅಧಾರದಲ್ಲಿ ಕ್ರಮ ಜರುಗಿಸೋದು ಯಾವಾಗ ಎನ್ನುವ ಪ್ರಶ್ನೆ ಸದ್ಯ ಸಾರ್ವಜನಿಕರನ್ನು ಕಾಡುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ – Kannada News | Chanakya Niti: Follow these principles of Chanakya to become mentally strong

ಆಚಾರ್ಯ ಚಾಣಕ್ಯರು (Acharya Chanakya) ಮಾನಸಿಕ ಶಕ್ತಿಯನ್ನು ಯಶಸ್ಸಿನ ದೊಡ್ಡ ಕೀಲಿಕೈ ಎಂದು ಬಣ್ಣಿಸಿದ್ದಾರೆ. ಬಲವಾದ ಮನಸ್ಸು ವ್ಯಕ್ತಿಯನ್ನು ಕಠಿಣ ಸಂದರ್ಭಗಳಲ್ಲಿಯೂ ಶಾಂತವಾಗಿರಲು, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಸಬಲಗೊಳಿಸುತ್ತದೆ. ಆದ್ದರಿಂದ ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಅನುಸರಿಸಿ. ಖಂಡಿತವಾಗಿಯೂ ಇದು ನಿಮ್ಮ ಆಲೋಚನೆ, ಆತ್ಮವಿಶ್ವಾಸ ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು.

ಮಾನಸಿಕವಾಗಿ ಬಲಿಷ್ಠರಾಗಿರಲು ಏನು ಮಾಡಬೇಕು?

ಪ್ರತಿದಿನ ಯೋಚಿಸುವ ಅಭ್ಯಾಸ ಬೆಳೆಸಿಕೊಳ್ಳಿ: ಉತ್ತಮವಾಗಿ ಯೋಚಿಸುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯರು ಹೇಳುತ್ತಾರೆ.  ನಿಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸಲು ನೀವು ಬಯಸಿದರೆ, ನಿಮ್ಮ ಆಲೋಚನೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಯೋಚಿಸಬೇಕು. ಯೋಚಿಸಲು ಪ್ರತಿದಿನ ಒಂದಷ್ಟು ಸಮಯವನ್ನು ಮೀಸಲಿಡಬೇಕು. ಈ ಸಣ್ಣ ಅಭ್ಯಾಸವು ನಿಮ್ಮನ್ನು ಹೆಚ್ಚು ಸಹಿಷ್ಣು ಮತ್ತು ಬುದ್ಧಿವಂತರನ್ನಾಗಿ ಮಾಡಬಹುದು ಮತ್ತು ನೀವು ತೆಗೆದುಕೊಳ್ಳುವ ನಿರ್ಧಾರಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಸ್ವಾವಲಂಬಿಯಾಗಿ: ಆಚಾರ್ಯ ಚಾಣಕ್ಯರು ಹೇಳುವಂತೆ, ನೀವು ನಿಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬಯಸಿದರೆ, ಮೊದಲ ಹೆಜ್ಜೆ ಸ್ವಾವಲಂಬಿಗಳಾಗುವುದು. ನೀವು ನಿಮ್ಮ ಸ್ವಂತ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದಾಗ, ನಿಮ್ಮ ಮನಸ್ಸು ಬಲಗೊಳ್ಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ನೀವು ಇತರರನ್ನು ಅವಲಂಬಿಸಲು ಪ್ರಾರಂಭಿಸಿದಾಗ, ಅದು ನಿಮ್ಮನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತದೆ.  ಸಣ್ಣ ಜವಾಬ್ದಾರಿಗಳನ್ನು ಸಹ ನೀವೇ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ಇದರಿಂದ ನೀವು ಮಾನಸಿಕವಾಗಿಯೂ ಬಲಶಾಲಿಯಾಗುತ್ತೀರಿ.

ಸಮಯವನ್ನು ಸರಿಯಾದ ಬಳಸಿ:  ಸಮಯವು ಅತ್ಯಮೂಲ್ಯ ಸಂಪನ್ಮೂಲ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಮಾನಸಿಕವಾಗಿ ಬಲಿಷ್ಠರಾಗಿರುವ ಜನರು ಸಮಯವನ್ನು ಗೌರವಿಸುತ್ತಾರೆ ಮತ್ತು ಅದನ್ನು ನಿಷ್ಪ್ರಯೋಜಕ ವಿಷಯಗಳಿಗೆ ವ್ಯರ್ಥ ಮಾಡುವುದಿಲ್ಲ. ಚಾಣಕ್ಯನ ಪ್ರಕಾರ, ಸಮಯಕ್ಕೆ ಸರಿಯಾಗಿ ಎಚ್ಚರಗೊಳ್ಳುವುದು, ಕೆಲಸಗಳಿಗೆ ಆದ್ಯತೆ ನೀಡುವುದು, ಪ್ರತಿಯೊಂದು ಕೆಲಸವನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಅಭ್ಯಾಸವು ವ್ಯಕ್ತಿಯನ್ನು ಮಾನಸಿಕವಾಗಿ ಬಲಿಷ್ಠನನ್ನಾಗಿಸುತ್ತದೆ.

ಇದನ್ನೂ ಓದಿ: ಚಾಣಕ್ಯರ ಮೂರು ಸಲಹೆಗಳನ್ನು ಅನುಸರಿಸಿದರೆ ಯಶಸ್ಸು ನಿಮ್ಮದಾಗುತ್ತದೆ

ನಕಾರಾತ್ಮಕ ಚಿಂತನೆಯಿಂದ ದೂರವಿರಿ: ಚಾಣಕ್ಯರ ಪ್ರಕಾರ, ನಿಮ್ಮ ಮನಸ್ಸನ್ನು ಶಾಂತವಾಗಿಡಲು ಮತ್ತು ಮೆಂಟಲಿ ಸ್ಟ್ರಾಂಗ್‌ ಆಗಿರಲು ನೀವು ಮೊದಲು ನಕಾರಾತ್ಮಕ ಚಿಂತನೆಯಿಂದ ದೂರವಿರಬೇಕು. ಹತಾಶೆ, ಭಯ ಮತ್ತು ಕೋಪದಂತಹ ಭಾವನೆಗಳು ನಿಮ್ಮ ಮನಸ್ಸನ್ನು ಸಂಪೂರ್ಣವಾಗಿ ದುರ್ಬಲಗೊಳಿಸುತ್ತವೆ. ನೀವು ಸಕಾರಾತ್ಮಕವಾಗಿ ಯೋಚಿಸಿದರೆ, ನೀವು ಪ್ರತಿಯೊಂದು ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಜಯಿಸುತ್ತೀರಿ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಅಲ್ಲದೆ ಈ ಸಣ್ಣ ಅಭ್ಯಾಸವು ಕ್ರಮೇಣ ನಿಮ್ಮ ಮನಸ್ಸನ್ನು ಬಲಪಡಿಸುತ್ತದೆ.

ಹೊಸ ವಿಷಯಗಳನ್ನು ಕಲಿಯುವ ಅಭ್ಯಾಸ: ನಿಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬಯಸಿದರೆ, ನಿಮ್ಮ ಜೀವನದ ಪ್ರತಿ ಹಂತದಲ್ಲೂ ನೀವು ಹೊಸ ವಿಷಯಗಳನ್ನು ಕಲಿಯುತ್ತಲೇ ಇರಬೇಕು ಎಂದು ಆಚಾರ್ಯ ಚಾಣಕ್ಯ ಹೇಳಿದ್ದಾರೆ. ಅವರ ಪ್ರಕಾರ, ನಿರಂತರವಾಗಿ ಹೊಸ ವಿಷಯಗಳನ್ನು ಕಲಿಯುವ ಮತ್ತು ಹೊಸ ಜ್ಞಾನವನ್ನು ಹೇಗೆಪಡೆದುಕೊಳ್ಳಬೇಕು ಎಂದು ತಿಳಿದಿರುವ ವ್ಯಕ್ತಿಯು ಕ್ರಮೇಣ ಮಾನಸಿಕವಾಗಿ ಬಲಶಾಲಿಯಾಗುತ್ತಾನೆ. ಹೀಗೆ ಜ್ಞಾನವನ್ನು ಹೆಚ್ಚಿಸಲು ನೀವು ಹೊಸ ಪುಸ್ತಕಗಳನ್ನು ಓದಬೇಕು, ಹಿಂದಿನ ಅನುಭವಗಳಿಂದ ಕಲಿಯಬೇಕು ಮತ್ತು ಇತರರಿಂದ ಏನನ್ನಾದರೂ ಒಳ್ಳೆಯ ವಿಚಾರಗಳನ್ನು ಕಲಿಯಲು ಪ್ರಯತ್ನಿಸಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಹ್ಯಾಟ್ರಿಕ್ ಹೀರೋ’ ಜೊತೆ ನಟಿಸಲಿದ್ದಾರೆ ಶ್ರೀಲೀಲಾ – Kannada News | Sreeleela to act with Tamil hero Pradeep Ranganathan

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಈಗ ಪರ ಭಾಷೆಗಳಲ್ಲಿ ಹೆಚ್ಚು ಮಿಂಚುತ್ತಿದ್ದಾರೆ. ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ, 2022 ರ ಸಿನಿಮಾ ‘ಧಮಾಕ’ ಮೂಲಕ ತೆಲುಗು ಚಿತ್ರರಂಗದಲ್ಲಿ ನೆಲೆ ಕಂಡುಕೊಂಡರು. ‘ಧಮಾಕ’ ಸಿನಿಮಾದ ಬಳಿಕ ಬಲು ಬೇಗನೇ ತೆಲುಗು ಚಿತ್ರರಂಗದ ಟಾಪ್ ನಟಿಯಾದ ಶ್ರೀಲೀಲಾ, ಇದೀಗ ಬಾಲಿವುಡ್​ ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದೂ ಎರಡೂ ಕಡೆ ಒಂದರ ಹಿಂದೊಂದು ದೊಡ್ಡ ಸಿನಿಮಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಂತೂ ಅವರು ‘ಹ್ಯಾಟ್ರಿಕ್ ಹೀರೋ’ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ!

‘ಹ್ಯಾಟ್ರಿಕ್ ಹೀರೋ’ ಎಂದೊಡೆ ಶಿವರಾಜ್ ಕುಮಾರ್ ಜೊತೆಗೆ ನಟಿಸುತ್ತಿದ್ದಾರೆ ಎಂದಲ್ಲ. ಬದಲಿಗೆ ಶ್ರೀಲೀಲಾ ನಟಿಸುತ್ತಿರುವುದು ತಮಿಳಿನ ಹ್ಯಾಟ್ರಿಕ್ ಹೀರೋ ಜೊತೆಗೆ. ಅದುವೇ ಪ್ರದೀಪ್ ರಂಗನಾಥನ್. ಸ್ವಂತ ಬಲದ ಮೇಲೆ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಪ್ರದೀಪ್ ರಂಗನಾಥ್, ಹಲವು ಅಡೆ-ತಡೆ, ಕುಹುಕ, ವ್ಯಂಗ್ಯ, ಅನುಮಾನ, ಅವಮಾನಗಳನ್ನು ದಾಟಿ ಇದೀಗ ಯಶಸ್ವಿ ನಟ ಎನಿಸಿಕೊಂಡಿದ್ದಾರೆ. ಪ್ರದೀಪ್ ರಂಗನಾಥನ್ ನಾಯಕನಾಗಿ ನಟಿಸಿರುವ ಸತತ ಮೂರು ಸಿನಿಮಾಗಳು 100 ಕೋಟಿಗೂ ಹೆಚ್ಚು ಹಣ ಗಳಿಸಿದ್ದು, ಇದೀಗ ಪ್ರದೀಪ್ ಅವರ ನಾಲ್ಕನೇ ಸಿನಿಮಾಕ್ಕೆ ಕನ್ನಡತಿ ಶ್ರೀಲೀಲಾ ನಾಯಕಿ.

ಶ್ರೀಲೀಲಾ ನಟಿಸಿರುವ ಮೊದಲ ತಮಿಳು ಸಿನಿಮಾ ‘ಪರಾಶಕ್ತಿ’ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಯಶಸ್ಸು ಗಳಿಸಿದೆ. ಅದರ ಬೆನ್ನಲ್ಲೆ ಇದೀಗ ಶ್ರೀಲೀಲಾಗೆ ಎರಡನೇ ತಮಿಳು ಸಿನಿಮಾ ಆಫರ್ ಬಂದಿದ್ದು, ಸಿನಿಮಾದ ನಾಯಕ ಪ್ರದೀಪ್ ರಂಗನಾಥನ್. ವಿಶೇಷವೆಂದರೆ ಈ ಸಿನಿಮಾ ಸಾಮಾನ್ಯಾ ರಾಮ್-ಕಾಮ್ ಸಿನಿಮಾ ಅಲ್ಲ ಬದಲಿಗೆ ಇದೊಂದು ಸೈ-ಫೈ ಸಿನಿಮಾ ಆಗಿದೆ. ಭವಿಷ್ಯದ ಕತೆಯನ್ನು ಸಿನಿಮಾ ಒಳಗೊಂಡಿದೆ.

ಇದನ್ನೂ ಓದಿ:ಶ್ರೀಲೀಲಾ ಅವರು 2025 ಹೀಗಿತ್ತು: ವಿಡಿಯೋನಲ್ಲಿ ನೋಡಿ…

ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ ಆದರೆ ಈ ಸಿನಿಮಾನಲ್ಲಿ ಶ್ರೀಲೀಲಾ ಮಾತ್ರವೇ ಅಲ್ಲದೆ ಮತ್ತೊಬ್ಬ ಖ್ಯಾತ ಯುವನಟಿ ಮೀನಾಕ್ಷಿ ಚೌಧರಿ ಸಹ ನಾಯಕಿ ಆಗಿದ್ದಾರೆ. ಈ ಸಿನಿಮಾಕ್ಕೆ ಕತೆ, ಚಿತ್ರಕತೆಯನ್ನು ಪ್ರದೀಪ್ ಅವರೇ ರಚಿಸಿದ್ದು, ನಿರ್ದೇಶನವನ್ನೂ ಅವರೇ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶ್ರೀಲೀಲಾ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹಿಂದಿಯಲ್ಲಿ ಅವರ ನಟನೆಯ ‘ಆಶಿಖಿ 3’ ಸಿನಿಮಾ ಬಿಡುಗಡೆ ಆಗಬೇಕಿದೆ. ಅದರ ಜೊತೆಗೆ ಇನ್ನೂ ಎರಡು ಹೊಸ ಹಿಂದಿ ಸಿನಿಮಾಗಳನ್ನು ಶ್ರೀಲೀಲಾ ಒಪ್ಪಿಕೊಂಡಿದ್ದಾರೆ. ತೆಲುಗಿನಲ್ಲಿ ಪವನ್ ಕಲ್ಯಾಣ್ ಜೊತೆಗೆ ನಟಿಸಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ನಟಿಸಿದ್ದು, ಅದು ಶೀಘ್ರವೇ ಬಿಡುಗಡೆ ಆಗಲಿದೆ. ತೆಲುಗಿನಲ್ಲಿ ಮತ್ತೊಂದು ಹೊಸ ಸಿನಿಮಾವನ್ನು ಸಹ ಅವರು ಒಪ್ಪಿಕೊಂಡಿದ್ದಾರೆ. ಇನ್ನು ಪ್ರದೀಪ್ ನಟನೆಯ ‘ಎಲ್​​ಐಕೆ’ (ಲವ್ ಇನ್ಷುರೆನ್ಸ್ ಕಂಪೆನಿ) ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version