ದಾವಣಗೆರೆ, (ಏಪ್ರಿಲ್ 14): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಕಾಂಗ್ರೆಸ್ ಮುಸ್ಲಿಂ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಜಬ್ಬರ್ ಅವರಿಂದ ರಾಜೀನಾಮೆ ಪಡೆದುಕೊಂಡಿದೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್ ಅವರನ್ನ ಸಹ ತಲೆದಂಡ ಮಾಡಲಾಗಿದೆ. ಇದೀಗ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ಕುತ್ತು ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ರಹಸ್ಯ ಮಾತುಕತೆ ನಡೆಸಿದ್ದು, ಯಾವಾಗ ತಲೆದಂಡವಾಗುತ್ತೋ ಗೊತ್ತಿಲ್ಲ.
ಈ ಬೆಳವಣಿಗೆಗಳ ನಡುವೆ ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್ ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
