ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ – Kannada News | Action on zameer ahmed khan Like naseer ahmed And Jabbar Says BJP Leader MP Renukacharya

ದಾವಣಗೆರೆ, (ಏಪ್ರಿಲ್ 14): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಕಾಂಗ್ರೆಸ್ ಮುಸ್ಲಿಂ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಜಬ್ಬರ್ ಅವರಿಂದ ರಾಜೀನಾಮೆ ಪಡೆದುಕೊಂಡಿದೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್​ ಅವರನ್ನ ಸಹ ತಲೆದಂಡ ಮಾಡಲಾಗಿದೆ. ಇದೀಗ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ಕುತ್ತು ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ರಹಸ್ಯ ಮಾತುಕತೆ ನಡೆಸಿದ್ದು, ಯಾವಾಗ ತಲೆದಂಡವಾಗುತ್ತೋ ಗೊತ್ತಿಲ್ಲ.

ಈ ಬೆಳವಣಿಗೆಗಳ ನಡುವೆ ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್‌ ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Source link

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಅಡಗಿರುವ ಪಕ್ಷಿಯನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden bird in this picture within the 15 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಇತ್ತೀಚೆಗಿನ ದಿನಗಳಲ್ಲಿ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ (Optical Illusion) ಫೋಟೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ಚಿತ್ರಗಳು ನಮ್ಮ ಕಣ್ಣಿನ ಸೂಕ್ಷ್ಮತೆ ಮತ್ತು ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸಲು ಸಹಕಾರಿಯಾಗಿದೆ. ಆದರೆ ಇದೀಗ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ದುವ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಪಕ್ಷಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವು ಗೊಂದಲಕ್ಕೀಡು ಮಾಡುವುದು ಸಹಜ. ಮೊದಲಿಗೆ, ಈ ಒಗಟು ಭೇದಿಸುವುದು ಸುಲಭ ಎಂದು ನಿಮಗೆ ಅನಿಸಬಹುದು. ಆದರೆ ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಬೀಳುವುದೇ ಎಲೆಗಳ ನಡುವೆ ಇರುವ ಬೆಕ್ಕು. ಇಲ್ಲಿ ಹೂವು ಹಾಗೂ ಹಚ್ಚ ಹಸಿರಿನ ಎಲೆಗಳು ಹಾಗೂ ಹಲ್ಲು ಇದೆ. ಇದೆಲ್ಲದರ ನಡುವೆ ಪಕ್ಷಿಯೂ ಅಡಗಿದೆ. ಇಲ್ಲಿರುವ ಸವಾಲು ಪಕ್ಷಿ ಎಲ್ಲಿದೆ ಎಂಬುದನ್ನು ಕಂಡುಹಿಡಿಯುವುದು. ನೀವು 15 ಸೆಕೆಂಡುಗಳಲ್ಲಿ ಪಕ್ಷಿಯನ್ನು ಹುಡುಕಲು ಸಾಧ್ಯವೇ ಎಂದು ನೋಡಿ. ನೀವು ಈ ಒಗಟು ಸಿದ್ದವಿದ್ದೀರಾ ಅಂತಾದ್ರೆ ಈ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ.

ಇದನ್ನೂ ಓದಿ: ನಿಮ್ಮ ಕಣ್ಣು ಶಾರ್ಪ್ ಇದ್ರೆ ಈ ಚಿತ್ರದಲ್ಲಿರುವ ಹುಡುಗಿ ಮುಖವನ್ನು ಗುರುತಿಸಬಲ್ಲಿರಾ

ನಿಮ್ಮ ಕಣ್ಣಿಗೆ ಪಕ್ಷಿ ಕಂಡಿತೇ?

ಈ ಒಗಟನ್ನು ಬಿಡಿಸುವುದು ನಿಮಗೆ ಕಷ್ಟವಾಗಿರಬಹುದು. ಆದರೆ ನೀವು ಏಕಾಗ್ರತೆಯಿಂದ ಈ ಚಿತ್ರ ನೋಡಿದರೆ ಮಾತ್ರ ಇಲ್ಲಿರುವ ಪಕ್ಷಿ ಕಂಡು ಹಿಡಿಯಲು ಸಾಧ್ಯ. ಎಷ್ಟೇ ತಲೆ ಕೆಡಿಸಿಕೊಂಡರೂ ಈ ಒಗಟಿನ ಉತ್ತರವನ್ನು ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲವೇ. ಈ ಕೆಳಗಿನ ಚಿತ್ರ ನೋಡಿ ಪಕ್ಷಿ ಎಲ್ಲಿದೆ ಎಂದು ನಿಮ್ಮ ಕಣ್ಣಿಗೆ ಕಾಣಿಸುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ – Kannada News | Animal Blood Testing In kolar District Hospital, Doctor recommend Action Against Staff

ಕೋಲಾರ, (ಏಪ್ರಿಲ್ 14): ಜನರ ಜೀವ ರಕ್ಷಣೆಗೆಂದು ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ (blood check) ನಡೆಸಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (Kolar District Hospital) ನಡೆದಿದೆ. ಹೌದು…ಅಚ್ಚರಿ ಅನ್ನಿಸಿರೂ ಸತ್ಯ. ಹೌದು…ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತ ಪರೀಕ್ಷೆ ನಡೆಸಿರುವುದು ಕಂಡುಬಂದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್​.ಹೆಚ್​.ಎಂ ಸಿಬ್ಬಂದಿ ರಾಘವೇಂದ್ರ ಎಂಬುವರು ಇಂಥ ಕೃತ್ಯ ಎಸಗಿರುವುದು ತಿಳಿದು ಬಂದಿದೆ. ಹೀಗಾಗಿ ರಾಘವೇಂದ್ರ ವಿರುದ್ದ ಕ್ರಮಕ್ಕೆ ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಜಗದೀಶ್​ ಶಿಫಾರಸ್ಸು ಮಾಡಿದ್ದಾರೆ.

ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಪ್ರಯೋಗಾಲಯದಲ್ಲಿನ ಯಂತ್ರಗಳಲ್ಲಿ ಪ್ರಾಣಿಗಳ ರಕ್ತವನ್ನು ಪರೀಕ್ಷೆಗೆ ಒಳಪಡಿಸಿರುವ ಕುರಿತು ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಇಲ್ಲಿನ ಸಿಬ್ಬಂದಿ ಹಾಗೂ ಪ್ರಯೋಗಾಲಯದಲ್ಲಿ ಯಂತ್ರಗಳ ನಿರ್ವಹಣೆ ಮಾಡುವ ಕಂಪನಿಯವರಿಗೆ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ರಕ್ತ ಪರೀಕ್ಷಾ ಪ್ರಯೋಗಾಲಯದಲ್ಲಿ ಕೆಲಸ ಮಾಡುವ ಕೆಲವು ಸಿಬ್ಬಂದಿ ಮೇಲಧಿಕಾರಿಗಳಿಗೆ ದೂರು ನಿಡಿದ್ದರು. ಈ ಬಗ್ಗೆ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಜಗದೀಶ್,​ ತನಿಖಾ ತಂಡವನ್ನು ರಚಿಸಿ ಪರಿಶೀಲನೆ ಮಾಡಿಸಿದಾಗ ಕಳೆದ ಏಳೆಂಟು ತಿಂಗಳಿಂದ ಇಲ್ಲಿನ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತಗಳ ಪರೀಕ್ಷೆ ನಡೆಸಿ ವರದಿ ಪಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೋಲಾರದಲ್ಲಿ ಕಲಬೆರಕೆ ಹಾಲು: ವರದಿಯಲ್ಲಿ ಆಘಾತಕಾರಿ ಅಂಶ; ಬೆಚ್ಚಿಬಿದ್ದ ಜನ

ಇನ್ನು ರಕ್ತ ಪರೀಕ್ಷೆಯಲ್ಲಿ ಸಾಮಾನ್ಯವಾಗಿ ಪ್ರಾಣಿಗಳ ರಕ್ತ ಪರೀಕ್ಷೆ ಹಾಗೂ ಮನುಷ್ಯರ ರಕ್ತ ಪರೀಕ್ಷೆಗೆ ಒಂದೇ ರೀತಿಯ ಯಂತ್ರಗಳನ್ನು ಬಳಸಲಾಗುತ್ತದೆ. ಆದರೆ ಒಂದೇ ಯಂತ್ರದಲ್ಲಿ ಪ್ರಾಣಿ ಹಾಗೂ ಮನುಷ್ಯನ ರಕ್ತ ಪರೀಕ್ಷೆ ಮಾಡಲಾಗುವುದಿಲ್ಲ. ಅದನ್ನು ಪ್ರತ್ಯೇಕವಾಗಿಯೇ ಮಾಡಬೇಕಾಗುತ್ತದೆ. ಹಾಗೆ ಮಾಡಿದರೆ ಯಂತ್ರಗಳಲ್ಲಿನ ಕೆಲವು ದೋಷಗಳು ಕಂಡು ಬರುತ್ತವೆ. ಜೊತೆಗೆ ಯಂತ್ರಗಳು ತಮ್ಮ ಗುಣಮಟ್ಟ ಕಳೆದುಕೊಂಡು ಸರಿಯಾದ ಪರೀಕ್ಷಾ ವರದಿಯನ್ನ ಪಡೆಯಲು ಕಷ್ಟವಾಗುತ್ತದೆ. ಅದಕ್ಕಾಗಿಯೇ ಪ್ರಾಣಿಗಳಿಗೆಂದೇ ಪಶು ಆರೋಗ್ಯ ಕೇಂದ್ರದಲ್ಲಿ ಪ್ರತ್ಯೇಕ ರಕ್ತ ಪರೀಕ್ಷಾ ಘಟಕಗಳಿರುತ್ತವೆ. ಆದರೆ ಇಲ್ಲಿನ ಸಿಬ್ಬಂದಿಗಳು ರಾತ್ರಿ ಪಾಳಯದಲ್ಲಿ ಹೀಗೆ ಪ್ರಾಣಿಗಳ ರಕ್ತ ತಂದು ಪರೀಕ್ಷೆ ನಡೆಸಿರುವ ಮೂಲಕ ಅಕ್ರಮ ಎಸಗಿದ್ದಾರೆ.

ಇನ್ನು ಆರೋಪ ಹೊತ್ತಿರುವ ರಾಘವೇಂದ್ರ ಅವರನ್ನು ಮಾತನಾಡಿಸಿದಾಗ ಕೆಲವೊಂದು ವರದಿಗಳನ್ನು ಪಡೆದಿದ್ದೇನೆ. ಆದರೆ ಇಲ್ಲಿ ರಕ್ತ ಪರೀಕ್ಷೆ ಮಾಡಿಲ್ಲ. ಬದಲಾಗಿ ಇಲ್ಲಿನ ಕೆಲವು ಸಿಬ್ಬಂದಿ ಒಳಜಗಳದಿಂದ ನನ್ನ ಮೇಲೆ ಆರೋಪ ಮಾಡಲಾಗಿದೆ. ತನ್ನನ್ನು ಕೆಲಸದಿಂದ ತೆಗೆದುಹಾಕಲು ಇಂಥ ಆರೋಪ ಮಾಡಿದ್ದಾರೆ ಎಂದು ತಮ್ಮ ಮೇಲಿನ ಆರೋಪವನ್ನ ತಳ್ಳಿ ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:16 pm, Tue, 14 April 26

Source link

RCB vs LSG ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್?

Source link

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ – Kannada News | Legendary singer Asha Bhosle passes away at 92 global tributes from John Cena Brett Lee

ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಏಪ್ರಿಲ್ 12ರಂದು ವಿಧಿವಶರಾದರು. ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾಲೋಕ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಶಾ ಭೋಸ್ಲೆ ಅವರ ಅಗಲಿಕೆ ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಂಗೀತ ಪ್ರೇಮಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಸೆಲೆಬ್ರಿಟಿಗಳು ಕೂಡ ಆಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. WWE ರಸ್ಲರ್ ಜಾನ್ ಸೀನಾ (John Cena) ಮತ್ತು ಮಾಜಿ ಕ್ರಿಕೆಟಿಗ ಬ್ರೆಟ್ ಲೀ (Brett Lee) ಕೂಡ ಗೌರವ ಸಲ್ಲಿಸಿದ್ದಾರೆ.

WWE ಖ್ಯಾತಿಯ ಜಾನ್ ಸೀನಾ ಅವರು ಆಶಾ ಭೋಸ್ಲೆ ಅವರಿಗೆ ಅತ್ಯಂತ ಸರಳ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಯಾವುದೇ ಶೀರ್ಷಿಕೆ ಇಲ್ಲದೇ, ಆಶಾ ಅವರ ಭಾವಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ, ಅವರ ಸಾಧನೆಗೆ ಮೌನವಾಗಿಯೇ ನಮನ ಸಲ್ಲಿಸಿದ್ದಾರೆ. ಈ ನಡೆಯು ಭಾಷೆಗಳ ಗಡಿ ಮೀರಿ ಆಶಾ ಅವರ ಕೀರ್ತಿ ಹರಡಿದ್ದನ್ನು ತೋರಿಸಿಕೊಟ್ಟಿದೆ.

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಅವರು ಆಶಾ ಅವರೊಂದಿಗಿನ ತಮ್ಮ ಹಳೆಯ ಒಡನಾಟವನ್ನು ಸ್ಮರಿಸಿದ್ದಾರೆ. 2006ರಲ್ಲಿ ಅವರಿಬ್ಬರೂ ಸೇರಿ ಹಾಡಿದ್ದ ‘You’re the One for Me’ ಹಾಡಿನ ಫೋಟೋ ಅವರು ಹಂಚಿಕೊಂಡಿದ್ದಾರೆ. ‘ಆಶಾ ಅವರಂತಹ ದಂತಕಥೆಯೊಂದಿಗೆ ಹಾಡು ರೆಕಾರ್ಡ್ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ’ ಎಂದು ಬ್ರೆಟ್ ಲೀ ಹೇಳಿದ್ದಾರೆ.

‘ಆಶಾ ಭೋಸ್ಲೆ ಅವರ ಪ್ರತಿಭೆಗಿಂತ ಅವರಲ್ಲಿದ್ದ ವಿನಯ ಮತ್ತು ನಗುಮುಖ ನನ್ನನ್ನು ಹೆಚ್ಚು ಪ್ರಭಾವಿಸಿತ್ತು. ಇಷ್ಟು ದೊಡ್ಡ ಸಾಧನೆ ಮಾಡಿದ್ದರೂ ಅವರು ಅತ್ಯಂತ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದರು. ಅಂಥ ವ್ಯಕ್ತಿ ಜೊತೆ ಸ್ವಲ್ಪ ಸಮಯ ಕಳೆಯಲು ಸಿಕ್ಕಿದ್ದು ನನ್ನ ಪುಣ್ಯ. ಅವರ ಪರಂಪರೆ ಮುಂದುವರಿಯಲಿದೆ ಅವರ ಕುಟುಂಬದವರಿಗೆ ಮತ್ತು ಆಪ್ತರಿಗೆ ಸಂತಾಪಗಳು’ ಎಂದು ಬ್ರೆಟ್​ ಲೀ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಏಪ್ರಿಲ್ 13ರಂದು ಮುಂಬೈನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ನೆರವೇರಿತು. ಸರ್ಕಾರದ ಉನ್ನತ ಅಧಿಕಾರಿಗಳು, ರಾಜಕೀಯ ಗಣ್ಯರು, ಕ್ರೀಡಾಪಟುಗಳು ಮತ್ತು ಚಿತ್ರರಂಗದ ನೂರಾರು ಕಲಾವಿದರು ಭಾಗವಹಿಸಿ ತಮ್ಮ ನೆಚ್ಚಿನ ಗಾಯಕಿಗೆ ಅಂತಿಮ ವಿದಾಯ ಹೇಳಿದರು. ವಿಶ್ವಾದ್ಯಂತ ಇರುವ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು.

ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು. ಈ ಹಾಡನ್ನು ಕೇಳುತ್ತಾ ತಲ್ಲೀನರಾಗಿ ನಿಂತ ಮೋದಿ ಮೆಚ್ಚುಗೆ ಸೂಚಿಸಿದರು. ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಗಡಿಯಲ್ಲಿರುವ ಈ ಸುಮಾರು 200 ವರ್ಷಗಳಷ್ಟು ಹಳೆಯದಾದ ದೇವಾಲಯ ಕಾಳಿ ದೇವಿಗೆ ಅರ್ಪಿತವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು? – Kannada News | Ali Bhatt to act with Jr NTR in Telugu Pan India movie

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಆಲಿಯಾ ಭಟ್ (Alia Bhatt), ಬಾಲಿವುಡ್​​ನ ಸೂಪರ್ ಸ್ಟಾರ್ ನಟಿ. ಹಿಂದಿ ಚಿತ್ರರಂಗದ ಸ್ಟಾರ್ ನಟಿ ಆಗಿರುವ ಆಲಿಯಾ ಭಟ್, ಬಾಲಿವುಡ್​​ನ ಬಲು ದುಬಾರಿ ನಟಿ ಸಹ ಹೌದು. ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿಯೂ ಆಲಿಯಾ ಭಟ್ ನಟಿಸಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ.

ಈ ಹಿಂದೆ ‘RRR’ ಚಿತ್ರದಲ್ಲಿ ‘ಸೀತಾ’ ಪಾತ್ರದ ಮೂಲಕ ದಕ್ಷಿಣ ಭಾರತದ ಪ್ರೇಕ್ಷಕರ ಮನ ಗೆದ್ದಿದ್ದ ಆಲಿಯಾ ಭಟ್, ಈಗ ಮತ್ತೊಂದು ಭಾರಿ ಬಜೆಟ್‌ನ ಪ್ಯಾನ್ ಇಂಡಿಯಾ ಚಿತ್ರದ ಭಾಗವಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಜೂನಿಯರ್ ಎನ್​​ಟಿಆರ್ ಮತ್ತು ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಸದ್ಯ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಈ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

‘ಡ್ರ್ಯಾಗನ್’ ಸಿನಿಮಾದ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಆದರೆ ಈ ಸಿನಿಮಾನಲ್ಲಿ ಜೂ ಎನ್​​ಟಿಆರ್ ಅವರದ್ದು ದ್ವಿಪಾತ್ರ ಎನ್ನಲಾಗುತ್ತಿದ್ದು, ಜೂ ಎನ್​​ಟಿಆರ್ ಅವರ ಒಂದು ಪಾತ್ರದ ನಾಯಕಿಯಾಗಿ ಆಲಿಯಾ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ, ಆಲಿಯಾ ನಟಿಸುತ್ತಿರುವ ಪಾತ್ರ ಸಹ ಸಖತ್ ಪವರ್​​ಫುಲ್ ಆಗಿ ಇರಲಿದೆಯಂತೆ. ಆಲಿಯಾ ಅವರದ್ದು ಪರಿಪೂರ್ಣ ನಾಯಕಿ ಪಾತ್ರ ಅಲ್ಲದೆ, ಎಕ್ಸ್​​ಟೆಂಡೆಂಡ್ ಕ್ಯಾಮಿಯೋ ರೀತಿ ಇರಲಿದೆಯಂತೆ.

ಇದನ್ನೂ ಓದಿ:550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಆಲಿಯಾ ಭಟ್ ಅವರು ‘ಆರ್​​ಆರ್​​ಆರ್’ ಸಿನಿಮಾನಲ್ಲಿ ನಟ ರಾಮ್ ಚರಣ್ ಪ್ರೇಯಸಿಯಾಗಿ ನಟಿಸಿದ್ದರು. ರಾಮ್ ಚರಣ್, ಜೂ ಎನ್​​ಟಿಆರ್ ಮತ್ತು ಆಲಿಯಾ ಅವರ ಹಾಡು ಸಹ ಸಿನಿಮಾದ ಅಂತ್ಯದಲ್ಲಿ ಇತ್ತು. ಆದರೆ ಜೂ ಎನ್​​ಟಿಆರ್ ಮತ್ತು ಆಲಿಯಾ ನಡುವೆ ಕೇವಲ ಒಂದು ದೃಶ್ಯವಷ್ಟೆ ಇತ್ತು. ಇದೀಗ ಜೂ ಎನ್​​ಟಿಆರ್ ಅವರಿಗೆ ನಾಯಕಿಯಾಗಿ ಆಲಿಯಾ ಭಟ್ ನಟಿಸುತ್ತಿದ್ದಾರೆ.

‘ಡ್ರ್ಯಾಗನ್’ ಸಿನಿಮಾಕ್ಕಾಗಿ ಜೂ ಎನ್​​ಟಿಆರ್ ಸಾಕಷ್ಟು ಶ್ರಮಪಡುತ್ತಿದ್ದಾರೆ. ದೇಹವನ್ನು ಹುರಿಗೊಳಿಸಿಕೊಂಡಿದ್ದು, ಸಿನಿಮಾಕ್ಕಾಗಿ ಸಿಕ್ಸ್ ಪ್ಯಾಕ್ ಸಹ ಮಾಡಿಕೊಂಡಿದ್ದಾರೆ. ಇನ್ನು ಈ ಸಿನಿಮಾನಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ. ಬಾಲಿವುಡ್ ನಟ ವಿವೇಕ್ ಒಬೆರಾಯ್, ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡದ ನಟರೊಬ್ಬರು ಸಹ ಈ ಸಿನಿಮಾನಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು – Kannada News | Ghaziabad Bike Accident: Iqra Dies, Hashim Critically Injured in Viral Speed Crash Video

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಇಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಹಾಶಿಮ್ ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ – Kannada News | Vijayapura: Father Kills 6 Year Old Son: Pushed into Krishna River over Resemblance

ವಿಜಯಪುರ, ಏಪ್ರಿಲ್​ 14: ವಿಜಯಪುರದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆ ನಡೆದಿದೆ. ನೋಡಲು ತನ್ನಂತೆ ಇಲ್ಲ ಎಂದು 6 ವರ್ಷದ ತನ್ನ ಮಗನನ್ನೇ ತಂದೆ (Father) ಕೊಲೆ (Kill) ಮಾಡಿರುವಂತಹ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಯ ಕೃಷ್ಣಾ ನದಿ ಬಳಿ ಮಗ ಸಿದ್ದಾರ್ಥನನ್ನ ಕರೆದುಕೊಂಡು ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ನದಿಗೆ ತಳ್ಳಿ ಹತ್ಯೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಮತ್ತು ಭಾಗ್ಯಶ್ರೀ ದಂಪತಿ ವಾಸವಾಗಿದ್ದಾರೆ. ಇವರ ಮಗ ಸಿದ್ದಾರ್ಥ. ಮಗನ ಹೋಲಿಕೆ ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಛೇಡಿಸಿದ್ದರು. ಇದರಿಂದಾಗಿ ರೋಸಿಹೋದ ಮಲ್ಲಿಕಾರ್ಜುನ ಇಂತಹದೊಂದು ಕೆಟ್ಟ ನಿರ್ಧಾರಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಯುವತಿಯೊಂದಿಗಿನ ಫೋಟೋ ಕಳುಹಿಸಿದ ಪ್ರೇಮಿ; ಮುಂದಾಗಿದ್ದು ದುರಂತ

ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಮಲ್ಲಿಕಾರ್ಜುನ ಕರೆದೊಯ್ದಿದ್ದಾರೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಗೆ ಕರೆದುಕೊಂಡು ಬಂದಿದ್ದ ತಂದೆ, ಕೃಷ್ಣಾ ನದಿಗೆ ತಳ್ಳಿ ಸಿದ್ದಾರ್ಥನನ್ನು ಹತ್ಯೆಗೈದ್ದಾರೆ. ಬಳಿಕ ಮನೆಯಲ್ಲಿ ಶಾಲೆಗೆ ಸೇರಿಸಿ ಹಾಸ್ಟೆಲ್​ನಲ್ಲಿ ಬಿಟ್ಟಿದ್ದಾಗಿ ಹೇಳಿದ್ದಾರೆ. ಏಪ್ರಿಲ್ 1ರಂದು ಮಗ ಸಿದ್ದಾರ್ಥ ಹುಟ್ಟುಹಬ್ಬ ಇರುವ ಹಿನ್ನೆಲೆ ಮಗನನ್ನು ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರೀ ಪಟ್ಟುಹಿಡಿದಿದ್ದಾರೆ.

ಪೊಲೀಸ್ ವಿಚಾರಣೆ ವೇಳೆ ಅಸಲಿ ಕಹಾನಿ ಬಾಯಿಬಿಟ್ಟ ತಂದೆ 

ಈ ಬಗ್ಗೆ ಹೆಚ್ಚು ವಿಚಾರಿಸಿದಾಗ ಮಲ್ಲಿಕಾರ್ಜುನ ಮನೆಯಿಂದ ಪರಾರಿ ಆಗಿದ್ದಾರೆ. ಇದರಿಂದ ಅನುಮಾನ ಬಂದು ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮಹಾರಾಷ್ಟ್ರದಲ್ಲಿ ಕೊಲೆಗೈದಿರುವುದಾಗಿ ಆರೋಪಿ ಮಲ್ಲಿಕಾರ್ಜುನ ಅಸಲಿ ಸತ್ಯ ಬಾಯಿಬಿಟ್ಟಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನ ನನ್ನು ಬಂಧಿಸಿ‌ದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ತಾಯಿಯೂ ಆತ್ಮಹತ್ಯೆ

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳು ಕಾರುಣ್ಯ ಕೊಲೆಗೈದು ತಾಯಿ ಸುವರ್ಣಾ(40) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಇಮ್ಮಡಿಹಳ್ಳಿಯ ಮನೆಯ ಕೋಣೆಯಲ್ಲಿ ಮಗಳನ್ನು ಕೊಂದು ಬಳಿಕ ತಾಯಿ ಸುವರ್ಣಾ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL vs PSL: KKR ಆಟಗಾರ 2 ವರ್ಷ ಬ್ಯಾನ್..!

Source link

Exit mobile version