Headlines

ರಿಹ್ಯಾಬ್‌ನಿಂದ ತಪ್ಪಿಸಿಕೊಂಡ ಯುವಕರಿಂದ ಆಟೋ ಚಾಲಕನ ದರೋಡೆ; ಮದ್ಯ ಮತ್ತು ಸಿಗರೆಟ್​​ಗಾಗಿ ಕೃತ್ಯ!

ಬೆಂಗಳೂರು, ಏಪ್ರಿಲ್ 05: ನಗರದ ಹೊರವಲಯದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿದ್ದ ಇಬ್ಬರು ಯುವಕರು ಅಪರಾಧ (Crime) ಕೃತ್ಯಕ್ಕೆ ಮುಂದಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 21 ವರ್ಷದ ಯುವಕ ಹಾಗೂ 17 ವರ್ಷದ ಅಪ್ರಾಪ್ತ ಸಹಚರನು ಸುಮಾರು ಒಂದು ತಿಂಗಳ ಹಿಂದೆ ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡು, ವ್ಯಸನದ ಬೇಸರದಿಂದ ದರೋಡೆ ಮಾಡಲು ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆನ್​ಲೈನ್​ನಲ್ಲಿ ಆಟೋ ಬುಕ್ ಮಾಡಿ, ಗಂಟೆಗಳ ಕಾಲ ಅಲೆದಾಟ ಈ ಪ್ರಕರಣವು ಮಾರ್ಚ್ 5ರಂದು ಬಾಗಲೂರು ಪೊಲೀಸ್…

Read More

Toll Rate Hike: ಕರ್ನಾಟಕ ವಾಹನ ಸವಾರರಿಗೆ ಶಾಕ್, ಏಪ್ರಿಲ್ 1 ರಿಂದ ಟೋಲ್ ದರ ಹೆಚ್ಚಳ

ಬೆಂಗಳೂರು, ಮಾರ್ಚ್ 24: ಕರ್ನಾಟಕದ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯದಾದ್ಯಂತ ಟೋಲ್ ದರಗಳನ್ನು (Toll price) ಏಪ್ರಿಲ್ 1ರಿಂದ ಶೇ 3 ರಿಂದ 5 ರವರೆಗೆ ಹೆಚ್ಚಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highways Authority of India) ಮಾಹಿತಿಯ ಪ್ರಕಾರ, ಪ್ರತಿವರ್ಷದಂತೆ ಈ ಬಾರಿ ಕೂಡ ಹೋಲ್​ಸೇಲ್ ಪ್ರೈಸ್ ಇಂಡೆಕ್ಸ್ (WPI) ಆಧಾರಿತವಾಗಿ ಟೋಲ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಹೊಸ ದರಗಳನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ…

Read More

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ – Kannada News | Dead for 47 Years Iranian Protester’s Message Draws Global Attention

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ…

Read More

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

ದಾವಣಗೆರೆ, ಮಾರ್ಚ್​ 28: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ನಾಯಕರ ಅವಹೇಳನಕಾರಿ ಭಾಷಣದ ಆರೋಪ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶಾಸಕ ಪ್ರದೀಪ್ ಈಶ್ವರ್ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕಚೇರಿ ಮುಂದೆನೇ ಬಂದಿದ್ದೆ ಏನು ಮಾಡಿದರು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಸದ್ದಿಲ್ಲದೆ ಮದುವೆಯಾದರೆ ನಟಿ ಮಲೈಕಾ ವಸುಪಾಲ್? ಸತ್ಯಾಂಶವೇನು? – Kannada News | Did Malaika Vasupal got married, new video creates doubt

ಕನ್ನಡ ಕಿರುತೆರೆ (Serial) ಮತ್ತು ಹಿರಿತೆರೆ ಎರಡರಲ್ಲೂ ಮಿಂಚುತ್ತಿರುವ ನಟಿ ಮಲೈಕಾ ವಸುಪಾಲ್ (Malaika Vasupal). ಧಾರಾವಾಹಿ ಮೂಲಕ ನಟನೆ ಪ್ರವೇಶಿಸಿದ ಇದೀಗ ನಾಯಕಿಯಾಗಿಯೂ ಸಖತ್ ಆಗಿ ಮಿಂಚುತ್ತಿದ್ದಾರೆ. ಆದರೆ ಇದೀಗ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಮಲೈಕಾ ವಸುಪಾಲ್ ಅವರು ವಧುವಿನ ವೇಷ-ಭೂಷಣದಲ್ಲಿ ಕಂಗೊಳಿಸುತ್ತಿದ್ದಾರೆ. ಯೂಟ್ಯೂಬ್ ಚಾನಲ್‌ ಒಂದರಲ್ಲಿ ಮಲೈಕಾ ಅವರ ವಿಡಿಯೋ ಹಂಚಿಕೆ ಆಗಿದ್ದು, ವಿಡಿಯೋ ನೋಡಿದವರು ಇದೇನು ಮಲೈಕಾ ಮದುವೆ ಆಗಿಬಿಟ್ಟರೆ ಎಂದು ಹುಬ್ಬೇರಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ…

Read More

T20 World Cup 2026: ಫೈನಲ್​ಗಾಗಿಯೇ ವಿಶೇಷವಾಗಿ ಸಿದ್ಧವಾಗಿದೆ ಅಹಮದಾಬಾದ್‌ ಪಿಚ್

2026 ರ ಟಿ20 ವಿಶ್ವಕಪ್‌ನ ಫೈನಲ್ (2026 T20 World Cup Final) ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ (Narendra Modi Stadium) ಸಜ್ಜಾಗಿದೆ. ಆತಿಥೇಯ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿರುವ ಈ ಪಂದ್ಯವೂ ಕೂಡ ಹೈಸ್ಕೋರಿಂಗ್ ಪಂದ್ಯವಾಗಲಿದೆ ಎಂಬುದು ಪರಿಣಿತರ ಅಭಿಪ್ರಾಯವಾಗಿದೆ. ಏಕಂದರೆ ಮೋದಿ ಕ್ರೀಡಾಂಗಣದ ಪಿಚ್ ಅನ್ನು ಫೈನಲ್ ಪಂದ್ಯಕ್ಕಾಗಿಯೇ ವಿಶೇಷವಾಗಿ ಸಿದ್ಧಪಡಿಸಲಾಗಿದೆ. ಹೀಗಾಗಿ ಫೈನಲ್ ಪಂದ್ಯವೂ ಕೂಡ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಸೆಮಿಫೈನಲ್‌…

Read More

Sepsis: ನಾಯಿ ನಿಮ್ಮನ್ನು ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಪ್ರಾಣವೂ ಹೋಗಬಹುದು ಎಚ್ಚರ! – Kannada News | Dog Lick Danger: Sepsis Risk, Organ Failure and Limb Loss Protect Your Health

ಸಾಮಾನ್ಯವಾಗಿ ಸಾಕು ನಾಯಿ(Dog)ಗಳನ್ನು ಮನೆ ಮಾಲೀಕರು ಮನೆಯ ಒಂದು ಸದಸ್ಯನಂತೆ ಕಾಣುತ್ತಾರೆ. ಮನೆಯ ಒಳಗೇ ನಾಯಿಯನ್ನು ಬಿಟ್ಟುಕೊಳ್ಳುತ್ತಾರೆ. ತಮ್ಮ ಜತೆ ಬೆಡ್​ರೂಮಿನಲ್ಲೇ ಮಲಗಿಸಿಕೊಳ್ಳುತ್ತಾರೆ. ಹಾಗೆಯೇ ಆ ನಾಯಿಗಳು ಕೂಡ ಮನೆ ಸದಸ್ಯರ ಕೈಕಾಲು, ಮುಖಗಳನ್ನು ನೆಕ್ಕುತ್ತಾ ತಮ್ಮ ಪ್ರೀತಿಯನ್ನು ಸಾಬೀತುಪಡಿಸುತ್ತವೆ. ಆದರೆ ಆ ಪ್ರೀತಿ ಜನರ ಜೀವಕ್ಕೆ ಕುತ್ತು ತರಬಹುದು ಎಂಬುದು ಯಾರಿಗಾದರೂ ತಿಳಿದಿದೆಯೇ?. ನಾಯಿ ನಿಮ್ಮ ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಅಂಗಾಂಗ ವೈಫಲ್ಯ ಉಂಟಾಗಬಹುದು, ಟಿಶ್ಯೂ ಡ್ಯಾಮೇಜ್ ಆಗಬಹುದು, ನಿಮ್ಮ ಜೀವಕ್ಕೇ ಇದು ಕುತ್ತು…

Read More

ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್​ಮನ್ ಗಿಲ್

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಉಪನಾಯಕ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಗಿಲ್ಲ. ಆದರೆ ಇದೆಲ್ಲದರ ನಡುವೆ ಶುಭ್​ಮನ್ ಗಿಲ್​ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಫಾರ್ಮ್​ ಕಂಡುಕೊಳ್ಳುವ ಇರಾದೆಯಲಿದ್ದಾರೆ. ವಾಸ್ತವವಾಗಿ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ಆಡಲು ಸಜ್ಜಾಗಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಗಾಗಿ ಪಂಜಾಬ್ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡಕ್ಕೆ ಶುಭ್​ಮನ್ ಗಿಲ್ ಕೂಡ ಆಯ್ಕೆಯಾಗಿದ್ದಾರೆ. ಶುಭಮನ್ ಗಿಲ್ ಜೊತೆಗೆ,…

Read More

ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಶಿಖರ್ ಧವನ್- ಸೋಫಿ ಶೈನ್

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶಿಖರ್ ಧವನ್ ಫೆಬ್ರವರಿಯಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ ಮೂರನೇ ವಾರದಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ವಿವಾಹ ನಡೆಯಲಿದ್ದು, ಕ್ರಿಕೆಟ್ ಮತ್ತು ಬಾಲಿವುಡ್ ಜಗತ್ತಿನ ಅನೇಕ ಪ್ರಮುಖ ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ ವರದಿಯಾಗಿದೆ. ಆದಾಗ್ಯೂ ಈ ಸುದ್ದಿಯ ಬಗ್ಗೆ ಇದುವರೆಗೂ ಧವನ್ ಆಗಲಿ ಅವರ…

Read More

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ; ನಾಲ್ವರು ಸಾವು? – Kannada News | 4 Feared Dead in Serial Accident Near Hosapete in Vijayanagara District

ಪಲ್ಟಿಯಾಗಿರುವ ಲಾರಿImage Credit source: Tv9 Kannada ವಿಜಯನಗರ, ಏಪ್ರಿಲ್​​ 19: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ಇದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್​​…

Read More