ಅಬಕಾರಿ ಸುಂಕ 10 ರೂ ಇಳಿಕೆ; ಪೆಟ್ರೋಲ್, ಡೀಸಲ್ ಬೆಲೆ ಎಷ್ಟು ಇಳಿಯುತ್ತೆ?

ಅಬಕಾರಿ ಸುಂಕ 10 ರೂ ಇಳಿಕೆ; ಪೆಟ್ರೋಲ್, ಡೀಸಲ್ ಬೆಲೆ ಎಷ್ಟು ಇಳಿಯುತ್ತೆ?

ನವದೆಹಲಿ, ಮಾರ್ಚ್ 27: ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಇಳಿಸಿದೆ. ಒಂದು ಲೀಟರ್​ಗೆ ಬರೋಬ್ಬರಿ 10 ರೂಷ್ಟು ತಗ್ಗಿಸಲಾಗಿದೆ. ಇದರೊಂದಿಗೆ, ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವು (Excise Duty) 13 ರೂ ಇದ್ದದ್ದು 3 ರೂಗೆ ಇಳಿದಿದೆ. ಡೀಸಲ್ ಮೇಲಿನ ಅಬಕಾರಿ ಸುಂಕವು 10 ರೂ ಇದ್ದದ್ದು ಸೊನ್ನೆಗೆ ಇಳಿದಿದೆ. ಜಾಗತಿಕವಾಗಿ ಕಚ್ಛಾ ತೈಲ (Crude oil) ಬೆಲೆ ಸಿಕ್ಕಾಪಟ್ಟೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಪೆಟ್ರೋಲ್, ಡೀಸಲ್ ಬೆಲೆ ಕಡಿಮೆ ಆಗುವುದಿಲ್ಲವಾ?

ಜಾಗತಿಕ ಕಚ್ಛಾ ತೈಲ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. ಇಷ್ಟೊತ್ತಿಗೆ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಆಗಬೇಕಿತ್ತು. ಆದರೆ, ನಯಾರಾ ಎನರ್ಜಿ ಮಾತ್ರವೇ ಇವುಗಳ ಬೆಲೆ ಏರಿಸಿರುವುದು. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಏರಿಕೆ ಮಾಡಿಲ್ಲ. ಈ ಕಂಪನಿಗಳು ಸತತ ನಷ್ಟ ಅನುಭವಿಸುತ್ತಿವೆ. ಈ ತೈಲ ಬೆಲೆ ಹೆಚ್ಚಿನ ಮಟ್ಟದಲ್ಲೇ ಮುಂದುವರಿದರೆ ಇಂಡಿಯನ್ ಆಯಿಲ್, ಎಚ್​​ಪಿ, ಬಿಪಿ ಕೂಡ ಪೆಟ್ರೋಲ್, ಡೀಸಲ್ ಬೆಲೆ ಏರಿಸುವುದು ಅನಿವಾರ್ಯವಾಗಬಹುದು.

ಇದನ್ನೂ ಓದಿ: ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದೇಕೆ?

ಇದನ್ನು ತಪ್ಪಿಸಲು, ಅಂದರೆ, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಾಗದಿರಲು ಸರ್ಕಾರ ಅಬಕಾರಿ ಸುಂಕ ಕಡಿಮೆಗೊಳಿಸಿದೆ. ಸುಂಕ ಕಡಿಮೆ ಮಾಡಿರುವುದರಿಂದ ಪೆಟ್ರೋಲ್, ಡೀಸಲ್ ಬೆಲೆ ಇಳಿಯುವುದಿಲ್ಲ. ಒಎಂಸಿಗಳಿಗೆ ನಷ್ಟದ ಹೊರೆ ಇಳಿಸಲು ಸಹಾಯವಾಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಎಂದಿನ ಬೆಲೆಗೆ ಸಿಗುವುದು ಮುಂದುವರಿಯಲಿದೆ.

ಸರ್ಕಾರವು ಅಬಕಾರಿ ಸುಂಕ ಕಡಿಮೆ ಮಾಡಿರುವುದು ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಜನಸಾಮಾನ್ಯರು, ಈರ್ವರಿಗೂ ರಿಲೀಫ್ ಸಿಕ್ಕಂತಾಗುತ್ತದೆ. ಪೆಟ್ರೋಲಿಯಂ ಕಂಪನಿಗಳಿಗೆ ನಷ್ಟದ ಹೊರೆ ತಪ್ಪುತ್ತದೆ. ಜನಸಾಮಾನ್ಯರಿಗೆ ಬೆಲೆ ಏರಿಕೆಯಾಗುವುದು ತಪ್ಪುತ್ತದೆ.

ಇದನ್ನೂ ಓದಿ: ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

ಇರಾನ್ ಯುದ್ಧ ಶುರುವಾಗುವ ಮುನ್ನ ತೈಲ ಬೆಲೆ ಒಂದು ಬ್ಯಾರಲ್​ಗೆ 60 ಡಾಲರ್​ನಷ್ಟು ಇತ್ತು. ಈಗ ಅದು 100 ಡಾಲರ್, 120 ಡಾಲರ್ ದಾಟಿ ಹೋಗಿದೆ. ಹಾರ್ಮುಜ್ ಜಲಸಂಧಿಯಿಂದ ತೈಲ ಟ್ಯಾಂಕರ್​ಗಳು ಹೊರಬರಲು ತಡೆ ಇರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಪರಿಣಾಮವಾಗಿ ತೈಲ ಬೆಲೆ ಗಣನೀಯವಾಗಿ ಏರುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!

ಕೊಪ್ಪಳ, ಮಾರ್ಚ್​ 27: ಅಕ್ರಮ ಹಣ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆ ಅಮಾನತುಗೊಂಡಿದ್ದ ಕೊಪ್ಪಳ (Koppal) ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ ಪ್ರಕರಣದಲ್ಲಿ ಹೊಸ ತಿರುವು ಎದುರಾಗಿದೆ. ಪೌರಾಡಳಿತ ಇಲಾಖೆ ಕೇವಲ 10 ದಿನಗಳಲ್ಲೇ ಅಮಾನತು ಆದೇಶವನ್ನು ಹಿಂಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನೂರಾರು ಕಾಮಗಾರಿಗಳಲ್ಲಿ ಲೋಪ

ಸೋಮಲಿಂಗಪ್ಪ ವಿರುದ್ಧ ಸುಮಾರು 10 ಕೋಟಿ ರೂಪಾಯಿ ಅಕ್ರಮ ಆರೋಪ ಕೇಳಿಬಂದಿತ್ತು. 2023-24 ಹಾಗೂ 2024-25ನೇ ಸಾಲಿನ ಸುಮಾರು 336 ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಮಾರ್ಚ್ 16ರಂದು ಪೌರಾಡಳಿತ ಇಲಾಖೆ ಅವರನ್ನು ಅಮಾನತು ಮಾಡಿತ್ತು.

ಹೈ ಕೋರ್ಟ್​ ತಡೆಯಾಜ್ಞೆ

ಆದರೆ, ಅಮಾನತು ಆದೇಶದ ವಿರುದ್ಧ ಸೋಮಲಿಂಗಪ್ಪ ಧಾರವಾಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ನ್ಯಾಯಾಲಯದಿಂದ ತಾತ್ಕಾಲಿಕ ತಡೆ ಸಿಕ್ಕ ಹಿನ್ನೆಲೆ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದರಿಂದ ಕೇವಲ 10 ದಿನಗಳೊಳಗೆ ಅಮಾನತು ವಾಪಸ್ ಪಡೆದಿರುವ ಕ್ರಮ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಲೋಕಾಯುಕ್ತ ತನಿಖೆಯಲ್ಲಿ ಗಂಭೀರ ಅಕ್ರಮಗಳು ಬಹಿರಂಗವಾಗಿದ್ದರೂ, ತ್ವರಿತವಾಗಿ ಆದೇಶ ಹಿಂಪಡೆಯಲ್ಪಟ್ಟಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದಲ್ಲಿ ಮುಂದಿನ ನ್ಯಾಯಾಲಯದ ತೀರ್ಪು ಹಾಗೂ ತನಿಖೆಯ ಫಲಿತಾಂಶವೇ ಸತ್ಯಾಂಶವನ್ನು ಬಹಿರಂಗಪಡಿಸುವುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

‘ಪೆದ್ದಿ’ ಟೀಸರ್ ರಿಲೀಸ್: ಕ್ರಿಕೆಟರ್ ಬಳಿಕ ಪೈಲ್ವಾನ್ ಆದ ರಾಮ್ ಚರಣ್

ಸ್ಟಾರ್ ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ 41ನೇ ಹುಟ್ಟುಹಬ್ಬ ಇಂದು. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಯಾವ ಸಿನಿಮಾವೂ ಹಿಟ್ ಆಗಿಲ್ಲ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಇದೀಗ ಅವರು ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟೀಸರ್ ಇಂದು (ಮಾರ್ಚ್ 27)ಕ್ಕೆ ಬಿಡುಗಡೆ ಆಗಿದೆ. ಸಿನಿಮಾದ ಈ ಹಿಂದಿನ ಕೆಲ ಟೀಸರ್​​ಗಳಲ್ಲಿ ಕ್ರಿಕೆಟರ್ ಆಗಿದ್ದ ರಾಮ್ ಚರಣ್ ಈಗ ಪೈಲ್ವಾನ್ ಆಗಿದ್ದಾರೆ.

ಈಗ ಬಿಡುಗಡೆ ಆಗಿರುವ ‘ಪೆದ್ದಿ’ಯ ಟೀಸರ್​​ನಲ್ಲಿ ರಾಮ್ ಚರಣ್ ‘ಪೆದ್ದಿ ಪೆಹಲ್ವಾನ್’ ಆಗಿ ಕಾಣಿಸಿಕೊಂಡಿದ್ದಾರೆ. ಪೈಲ್ವಾನ್ ರೀತಿ ಹುರಿಗಟ್ಟಿದ ದೇಹಹೊಂದಿ ಸಖತ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿ ಅವರು ಧಾನ್ಯದ ಚೀಲಗಳನ್ನು ಎತ್ತಿ ಬಿಸಾಡುತ್ತಾ ದೈಹಿಕ ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಕುಸ್ತಿ ಅಖಾಡದಲ್ಲೂ ಮಿಂಚಿದ್ದಾರೆ. ಆಂಜನೇಯನ ಗದೆಯಂಥಹಾ ವಸ್ತುವನ್ನು ತಿರುಗಿಸುತ್ತಾ ತಮ್ಮ ಭುಜಬಲ ಸಹ ಪ್ರದರ್ಶಿಸಿದ್ದಾರೆ. ಅಖಾಡದಲ್ಲಿ ಕುಸ್ತಿ ಸಹ ಮಾಡಿದ್ದಾರೆ.

ಈ ಹಿಂದೆ ಬಿಡುಗಡೆ ಆಗಿದ್ದ ‘ಪೆದ್ದಿ’ ಸಿನಿಮಾದ ಕೆಲವು ಟೀಸರ್, ಹಾಡುಗಳಲ್ಲಿ ರಾಮ್ ಚರಣ್ ಪಾತ್ರವನ್ನು ಹಳ್ಳಿಯ ಕ್ರಿಕೆಟರ್ ಪಾತ್ರವನ್ನಾಗಿ ತೋರಿಸಲಾಗಿತ್ತು. ಸದಾ ಬ್ಯಾಟು ಹಿಡಿದುಕೊಂಡೆ ಓಡಾಡುವ ಯುವಕನ ರೀತಿ ತೋರಿಸಲಾಗಿತ್ತು. ಆದರೆ ಈಗ ಪೈಲ್ವಾನ್ ರೀತಿ ತೋರಿಸಲಾಗಿದೆ. ಇದು ಅಭಿಮಾನಿಗಳ ಅನುಮಾನಕ್ಕೆ ಕಾರಣವಾಗಿದ್ದು, ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಅವರದ್ದು ದ್ವಿಪಾತ್ರವಾ? ಅಥವಾ ತಂದೆ-ಮಗನ ಪಾತ್ರವನ್ನು ರಾಮ್ ಚರಣ್ ನಿಭಾಯಿಸಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.

ಇದನ್ನೂ ಓದಿ:ರಾಮ್ ಚರಣ್ ವರ್ಷದ ಆದಾಯದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು

ಈ ಚಿತ್ರದಲ್ಲಿ ಜಾನ್ವಿ ಕಪೂರ್ ನಾಯಕಿ ಆಗಿದ್ದು ಅಚ್ಚಿಯಮ್ಮ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡದ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಮುಖ್ಯವಾದ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ದಿವ್ಯೇಂದು ಶರ್ಮಾ, ಜಗಪತಿ ಬಾಬು ಮತ್ತು ಬೋಮನ್ ಇರಾನಿ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬುಚ್ಚಿ ಬಾಬು ಸನಾ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಹಿಂದೆ ಅವರು ‘ಉಪ್ಪೆನ’ ಹೆಸರಿನ ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿದ್ದರು. ಆಸ್ಕರ್ ವಿಜೇತ ಎಆರ್ ರೆಹಮಾನ್ ಅವರು ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಮತ್ತು ವೃದ್ಧಿ ಸಿನಿಮಾಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ. ಈ ಚಿತ್ರವು ಏಪ್ರಿಲ್ 30, 2026 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು

ಕನ್ನಡ ಚಿತ್ರರಂಗವನ್ನು ಅನೇಕ ಕಡೆಗಳಲ್ಲಿ ಕಡೆಗಣಿಸುವ ಕೆಲಸ ಆಗುತ್ತಲೇ ಬರುತ್ತಿದೆ. ಈ ಮೊದಲು ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂದ ನಟರನ್ನು ಕಡೆಗಣಿಸಿದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಈಗ ಫಿಲ್ಮ್​​ಫೇರ್ (Filma Fare) ಅದೇ ತಪ್ಪನ್ನು ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ. ತಪ್ಪನ್ನು ತಿದ್ದುಕೊಂಡು ಅವರು ಕ್ಷಮೆ ಕೇಳಬೇಕು ಎಂಬ ಆಗ್ರಹಕೂಡ ವ್ಯಕ್ತವಾಗಿದೆ.

ಫಿಲ್ಮ್​ ಫೇರ್ ಅವಾರ್ಡ್ ಆರಂಭ ಆಗಿದ್ದು 1954ರಲ್ಲಿ. ಹಿಂದಿ ಸಿನಿಮಾ ರಂಗದ ಕಲಾವಿದರು ಹಾಗೂ ತಂತ್ರಜ್ಞರನ್ನು ಗೌರವಿಸುವ ಉದ್ದೇಶದಿಂದ ಇದನ್ನು ಮಾಡಲಾಯಿತು. ಆ ಬಳಿಕ 1964ರಲ್ಲಿ ‘ಫಿಲ್ಮ್​ ಫೇರ್ ಸೌತ್’ ಅವಾರ್ಡ್ ಕಾರ್ಯಕ್ರಮ ಆರಂಭಿಸಲಾಯಿತು. ಈಗ ಫಿಲ್ಮ್​​ ಫೇರ್ ಮ್ಯಾಗಜಿನ್ ಫೋಟೋಶೂಟ್ ಮಾಡಿಸಲಾಗಿದೆ. ಇದರಲ್ಲಿ ಕನ್ನಡ ಚಿತ್ರರಂಗದವರನ್ನು ಕಡೆಗಣಿಸಲಾಗಿದೆ.

ಇದನ್ನೂ ಓದಿ: 15ನೇ ವಯಸ್ಸಿಗೆ ನಟಿ; 8 ಫಿಲ್ಮ್​ಫೇರ್ ಅವಾರ್ಡ್; ಜಯಾ ಬಚ್ಚನ್ ನಡೆದು ಬಂದ ಹಾದಿ

ಫಿಲ್ಮ್​​ಫೇರ್ ಮ್ಯಾಗಜಿನ್ ಮುಖಪುಟ ರಿವೀಲ್ ಮಾಡಲಾಗಿದೆ. ಇದರಲ್ಲಿ ತಮಿಳಿನಿಂದ ಶಿವಕಾರ್ತಿಕೇಯ, ಅರವಿಂದ್ ಸ್ವಾಮಿ, ಮಲಯಾಳಂನಿಂದ ಮಮ್ಮೂಟ್ಟಿ, ತೆಲುಗಿನಿಂದ ಅಲ್ಲು ಅರ್ಜುನ್ ಇದ್ದಾರೆ. ದಕ್ಷಿಣದ ನಟಿಯರಾದ ಭಾವನಾ, ಕಾಜಲ್ ಅಗರ್​​​ವಾಲ್, ಸಾಯಿ ಪಲ್ಲವಿ ಪೋಸ್ಟರ್​​​ನಲ್ಲಿದ್ದಾರೆ. ಆದರೆ ಎಲ್ಲಿಯೂ ಕನ್ನಡದ ಕಲಾವಿದರಿಲ್ಲ.

ಯಶ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕಿಚ್ಚ ಸುದೀಪ್ ಪರಿಚಯ ಇಡೀ ದೇಶದವರಿಗೆ ಇದೆ. ‘ಕಾಂತಾರ’ ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಹೆಸರು ಮಾಡಿದ್ದಾರೆ. ಶಿವರಾಜ್​​​ಕುಮಾರ್ ಅತ್ಯಂತ ಹಿರಿಯ ನಟರು. ರುಕ್ಮಿಣಿ ವಸಂತ್ ಕೂಡ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಇವರ ಪೈಕಿ ಯಾರಾದರೂ ಒಬ್ಬರಾದರೂ ಮ್ಯಾಗಜಿನ್ ಶೂಟ್​​​ನಲ್ಲಿ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಗೂಗಲ್ ಮ್ಯಾಪ್ ತಂದ ಆಪತ್ತು! ಕಬ್ಬಿಣದ ಸರಳುಗಳಿಂದ ತುಂಬಿದ್ದ ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಭೀಕರ ಅಪಘಾತಕ್ಕೀಡಾಗಿದೆ. ಆಂಧ್ರದಿಂದ ಸುಂಕದಕಟ್ಟೆ ಕಡೆಗೆ ಬರುತ್ತಿದ್ದ ಈ ಲಾರಿ ಗೂಗಲ್ ಮ್ಯಾಪ್ ದೋಷದಿಂದಾಗಿ ಇಳಿಜಾರು ರಸ್ತೆಯಲ್ಲಿ ಬಂದಿದೆ. ಅಸಲಿಗೆ ಲಾರಿ ಹೋಗಲು ಸೂಕ್ತವಲ್ಲದ ರಸ್ತೆ ಅದಾಗಿತ್ತು. ಅಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗಿದ್ದ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿ ತುಸು ದೂರ ಎಳೆದುಕೊಂಡು ಹೋಗಿದ್ದು, ಸ್ಕ್ರ್ಯಾಪ್ ಗೋಡೌನ್​ಗೆ ನುಗ್ಗಿದೆ. ಅಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ 23 ವರ್ಷದ ಅಂಬಾದಾಸ್ ಎಂಬ ಕ್ಯಾಬ್ ಚಾಲಕ ಕಾರಿನಲ್ಲಿ ಸಜೀವ ದಹನವಾಗಿದ್ದಾರೆ.

ಅಪಘಾತದಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಆತನನ್ನು ರಕ್ಷಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ್ತರ

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳಾದ ಕಾವ್ಯಾ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಾಂಧವ್ಯ ಬಿಗ್ ಬಾಸ್​ ಇಂದ ಹೊರ ಬಂದ ಬಳಿಕವೂ ಮುಂದುವರಿದಿದೆ. ಕಾವ್ಯಾ ಅವರನ್ನು ಗಿಲ್ಲಿ ಮದುವೆ ಆಗಬೇಕು ಎಂದು ಅನೇಕರು ಅಂದುಕೊಂಡಿದ್ದೂ ಇದೆ. ಆದರೆ, ಅದು ಸಾಧ್ಯವಿಲ್ಲ ಎಂಬುದು ಗಿಲ್ಲಿ ಉತ್ತರ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದು ಅವರು ಅನೇಕ ಬಾರಿ ಹೇಳಿದ್ದು ಇದೆ. ಹೀಗಿರುವಾಗಲೇ ಗಿಲ್ಲಿ ನಟ ಅವರು ವೇದಿಕೆ ಏರಿದಾಗ ‘ಕಾವ್ಯಾ ಕಾವ್ಯಾ’ ಎಂಬ ಚೀರಾಟ ಕೇಳಿದೆ. ‘ಗೌರಿ ಕಲ್ಯಾಣ’ ಸೀರಿಯಲ್ ಸಂತೆಯಲ್ಲಿ ಈ ಘಟನೆ ನಡೆಯಿತು ಮತ್ತು ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ ಎಂದು ಗಿಲ್ಲಿ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,471 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,265 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,853 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,471 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,265 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,265 ರೂ
  • ಚೆನ್ನೈ: 13,430 ರೂ
  • ಮುಂಬೈ: 13,265 ರೂ
  • ದೆಹಲಿ: 13,280 ರೂ
  • ಕೋಲ್ಕತಾ: 13,265 ರೂ
  • ಕೇರಳ: 13,265 ರೂ
  • ಅಹ್ಮದಾಬಾದ್: 13,270 ರೂ
  • ಜೈಪುರ್: 13,280 ರೂ
  • ಲಕ್ನೋ: 13,280 ರೂ
  • ಭುವನೇಶ್ವರ್: 13,265 ರೂ

ಇದನ್ನೂ ಓದಿ: Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 547 ರಿಂಗಿಟ್ (12,881 ರುಪಾಯಿ)
  • ದುಬೈ: 490 ಡಿರಾಮ್ (12,578 ರುಪಾಯಿ)
  • ಅಮೆರಿಕ: 139.50 ಡಾಲರ್ (13,157 ರುಪಾಯಿ)
  • ಸಿಂಗಾಪುರ: 177.60 ಸಿಂಗಾಪುರ್ ಡಾಲರ್ (13,031 ರುಪಾಯಿ)
  • ಕತಾರ್: 496 ಕತಾರಿ ರಿಯಾಲ್ (12,825 ರೂ)
  • ಸೌದಿ ಅರೇಬಿಯಾ: 506 ಸೌದಿ ರಿಯಾಲ್ (12,717 ರುಪಾಯಿ)
  • ಓಮನ್: 52.85 ಒಮಾನಿ ರಿಯಾಲ್ (12,845 ರುಪಾಯಿ)
  • ಕುವೇತ್: 40.24 ಕುವೇತಿ ದಿನಾರ್ (12,373 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ

ಟೆಹ್ರಾನ್, ಮಾರ್ಚ್​ 27: ಭಾರತ ಸೇರಿದಂತೆ ಇರಾನ್​ನ 5 ಸ್ನೇಹಿತ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಇರಾನ್ ಅನುಮತಿ ನೀಡಿದೆ. ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತದ ಎರಡು ಹಡಗುಗಳು ಕೆಲವು ರಾತ್ರಿಗಳ ಹಿಂದೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿವೆ.ಅಮೆರಿಕ, ಇಸ್ರೇಲ್ ಮತ್ತು ಕೆಲವು ಗಲ್ಫ್ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡಲಾಗುವುದಿಲ್ಲ. ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ಹಡಗಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Ram Navami 2026: ರಾಮ ನವಮಿ ಬಳಿಕ ಈ ಎರಡು ರಾಶಿಗಳಿಗೆ ಶುಭ ದಿನಗಳು ಆರಂಭ

ಇಂದು ದೇಶಾದ್ಯಂತ ಶ್ರೀ ರಾಮ ನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದಂದು ಒಂದು ಅಪರೂಪದ ಗ್ರಹಗಳ ಸಂಯೋಗ ಸಂಭವಿಸುತ್ತಿದೆ. ಈ ಜ್ಯೋತಿಷ್ಯ ವಿದ್ಯಮಾನವು 12 ರಾಶಿಗಳ ಮೇಲೆ ಪ್ರಭಾವ ಬೀರಿದರೂ, ವಿಶೇಷವಾಗಿ ಎರಡು ರಾಶಿಚಕ್ರದವರಿಗೆ ಇದು ಸುವರ್ಣ ಕಾಲವನ್ನು ಹೊತ್ತು ತರಲಿದೆ. ಕಳೆದ ಕೆಲವು ಸಮಯದಿಂದ ಸಂಕಷ್ಟಗಳನ್ನು ಎದುರಿಸುತ್ತಿದ್ದ ಈ ರಾಶಿಗಳ ಜನರಿಗೆ ಶ್ರೀರಾಮನ ಆಶೀರ್ವಾದದಿಂದ ಇಂದಿನಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಕನ್ಯಾ ರಾಶಿ:

ಕನ್ಯಾ ರಾಶಿಯವರಿಗೆ ಈ ರಾಮ ನವಮಿಯು ಜೀವನದ ಹೊಸ ಅಧ್ಯಾಯಕ್ಕೆ ದಾರಿಯಾಗಲಿದೆ. ಎಷ್ಟೇ ಕಷ್ಟ ಬಂದರೂ ಎದೆಗುಂದದ ನಿಮ್ಮ ಸ್ವಭಾವಕ್ಕೆ ಈಗ ತಕ್ಕ ಪ್ರತಿಫಲ ಸಿಗಲಿದೆ. ದಂಪತಿಗಳ ನಡುವೆ ಇದ್ದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ದೂರವಾಗಿ, ಪ್ರೀತಿ ಮತ್ತು ವಿಶ್ವಾಸ ಚಿಗುರಲಿದೆ.ದೀರ್ಘಕಾಲದ ಆರ್ಥಿಕ ಬಿಕ್ಕಟ್ಟುಗಳು ಬಗೆಹರಿಯಲಿವೆ. ಸಾಲದ ಬಾಧೆಯಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಉದ್ಯಮಿಗಳಿಗೆ ಹೊಸ ಅವಕಾಶಗಳು ಸಿಗಲಿದ್ದು, ನಿರೀಕ್ಷೆಗೂ ಮೀರಿ ಲಾಭ ಗಳಿಸುವಿರಿ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮೇಷ ರಾಶಿ:

ಶ್ರೀರಾಮನ ಕೃಪಾಕಟಾಕ್ಷದಿಂದ ಮೇಷ ರಾಶಿಯವರ ಸ್ಥಗಿತಗೊಂಡಿದ್ದ ಕೆಲಸಗಳು ವೇಗ ಪಡೆದುಕೊಳ್ಳಲಿವೆ. ನಿಮ್ಮ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ವಿದೇಶಕ್ಕೆ ಹೋಗುವ ಹಂಬಲವಿದ್ದವರಿಗೆ ವೀಸಾ ಸಮಸ್ಯೆಗಳು ಬಗೆಹರಿದು ಶುಭ ಸುದ್ದಿ ಸಿಗಲಿದೆ. ಹಳೆಯ ಆಸ್ತಿ ಅಥವಾ ಜಮೀನಿನ ಮಾರಾಟದಿಂದ ನಿರೀಕ್ಷಿತ ಬೆಲೆ ದೊರೆತು ಹಠಾತ್ ಹಣದ ಹರಿವು ಹೆಚ್ಚಾಗಲಿದೆ. ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುವಿರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ಮನ್ನಣೆ ಸಿಗಲಿದ್ದು, ಕೀರ್ತಿ ಹೆಚ್ಚಾಗಲಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version